Connect with us

ಆರೋಗ್ಯ

ವೈರಲ್ ಫೀವರ್ ಹಾಗೂ ಸುಸ್ತಿಗೆ ಮನೆ ಮದ್ದು

Published

on

ವೈರಲ್ ಫೀವರ್ ಹಾಗೂ ಸುಸ್ತಿಗೆ ಮನೆ ಮದ್ದು

ವೈರಲ್ ಫೀವರ್ ಸೂಕ್ತ ಔಷಧಿಗಳನ್ನು ತೆಗೆದುಕೊಂಡರೆ ತಕ್ಕ ಮಟ್ಟಿಗೆ ಗುಣ ಕಾಣಬಹುದು. ಕೆಲವೊಂದು ರೀತಿಯ ಜ್ವರ ಕೇವಲ ಮಾತ್ರೆ, ಇಂಜೆಕ್ಷನ್, ಆಂಟಿ – ಬಯೋಟಿಕ್ ಔಷಧಿಗಳಿಗೆ ಹೊರಟು ಹೋದರೆ ಇನ್ನು ಕೆಲವು ವೈರಲ್ ಜ್ವರ ಹೋಗುವುದೇ ಇಲ್ಲ. ಏಕೆಂದರೆ ದೇಹದಲ್ಲಿ ಸೇರಿರುವ ವೈರಸ್ ಗಳು ಯಾವುದೇ ಕಾರಣಕ್ಕೂ, ಯಾವುದೇ ರೀತಿಯ ಆಂಟಿ – ಬಯೋಟಿಕ್ ಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಜ್ವರ , ಮೈಕೈ ನೋವು, ತಲೆ ನೋವು, ವಿಪರೀತ ಸುಸ್ತು ಸಾಮಾನ್ಯವಾಗಿ ವೈರಲ್ ಜ್ವರದ ಲಕ್ಷಣಗಳು. ವೈರಲ್ ಜ್ವರ ಭಯಪಡುವಂತಹದು ಅಲ್ಲ. ಆದರೂ ನಿರ್ಲಕ್ಷ್ಯ ಮಾಡಬಾರದು.ಮಳೆ ಪ್ರಮಾಣ ಅಧಿಕವಿರುವುದರಿಂದ ಶೀತ-ಜ್ವರ, ಕೆಮ್ಮು ಶೀತ ಮುಂತಾದ ಸಮಸ್ಯೆಗಳು ಹೆಚ್ಚಾಗಿ ಕಂಡು ಬರುತ್ತಿದೆ. ಅಂತಹ ಸಮಯದಲ್ಲಿ ಕೆಲವೊಂದು ರೀತಿಯ ಮನೆ ಮದ್ದುಗಳು ಬಹಳ ಉಪಯೋಗಕ್ಕೆ ಬರುತ್ತದೆ. ಈ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳನ್ನು ತಿನ್ನುವುದರಿಂದ ಕಾಯಿಲೆ ಬೀಳುವುದರಿಂದ ತಪ್ಪಿಸಿಕೊಳ್ಳಬಹುದು.

ಶುಂಠಿ ಮತ್ತು ಜೇನು ತುಪ್ಪ:ಶುಂಠಿ ಮತ್ತು ಜೇನು ತುಪ್ಪ ಪ್ರತಿಯೊಬ್ಬರ ಮನೆಯಲ್ಲೂ ಇದ್ದೇ ಇರುತ್ತವೆ. ಶುಂಠಿಯಲ್ಲಿ ಅನಲ್ಗೆಸಿಕ್, ಆಂಟಿ – ಇನ್ಫಾಮೇಟರಿ, ಮತ್ತು ಆಂಟಿ – ಆಕ್ಸಿಡೆಂಟ್ ಗುಣ ಲಕ್ಷಣಗಳಿದ್ದು ವೈರಲ್ ಜ್ವರ ಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತವೆ. ಅದರಲ್ಲೂ ಜೇನು ತುಪ್ಪದ ಜೊತೆ ಸೇರಿದರೆ ಇದರ ಶಕ್ತಿ ಇನ್ನಷ್ಟು ಉಜ್ವಲಗೊಳ್ಳುತ್ತದೆ. ಏಕೆಂದರೆ ಜೇನು ತುಪ್ಪದಲ್ಲಿ ಸಹ ಆಂಟಿ – ಆಕ್ಸಿಡೆಂಟ್ ಗುಣ ಲಕ್ಷಣಗಳಿದ್ದು, ನಮ್ಮ ದೇಹದಲ್ಲಿ ಸೇರಿರುವ ಯಾವುದೇ ರೀತಿಯ ಕೆಟ್ಟ ಬ್ಯಾಕ್ಟೀರಿಯಾಗಳನ್ನು ದೇಹದಿಂದ ಹೊರ ಹಾಕುತ್ತವೆ. ಇದರಿಂದಲೂ ಸಹ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗಿ ಜ್ವರ ಜಾಸ್ತಿ ಆಗದಂತೆ ತಡೆಯುತ್ತದೆ.

ಚಕ್ಕೆ:ಮಸಾಲೆ ಪದಾರ್ಥಗಳಲ್ಲಿ ಬಹಳ ಹೆಸರು ಮಾಡಿರುವ ದಾಲ್ಚಿನ್ನಿ ಅಥವಾ ಚಕ್ಕೆ ಎಂದು ಕರೆಯಲ್ಪಡುವ ಈ ಮಸಾಲೆ ವಸ್ತು ವೈರಲ್ ಜ್ವರಗಳಿಗೆ ಒಳ್ಳೆಯ ಔಷಧಿ ಎಂದು ಸಾಬೀತು ಮಾಡಿದೆ. ಯಾವುದೇ ರೀತಿಯ ನೆಗಡಿ, ಶೀತ, ಕೆಮ್ಮು, ಗಂಟಲು ನೋವು, ಗಂಟಲು ಕೆರೆತ ಮತ್ತು ಗಂಟಲಿನಲ್ಲಿ ಕಫ ಇದ್ದಂತಹ ಸಂದರ್ಭದಲ್ಲಿ 1 ಟೀ ಸ್ಪೂನ್ ನಷ್ಟು ದಾಲ್ಚಿನ್ನಿ ಪುಡಿಯನ್ನು 2 ಏಲಕ್ಕಿ ಮೊಗ್ಗುಗಳ ಜೊತೆ ಚೆನ್ನಾಗಿ ನೀರಿನಲ್ಲಿ ಕುದಿಸಿ ನಂತರ ಅದನ್ನು ಸೋಸಿ ಕುಡಿದರೆ ಎಲ್ಲಾ ರೀತಿಯ ಸಮಸ್ಯೆಗಳಿಗೆ ಬಹಳ ಬೇಗನೆ ಮುಕ್ತಿ ಸಿಗುತ್ತದೆ.

ಅಮೃತಬಳ್ಳಿ:ಜ್ವರ ಮತ್ತು ನೋವನ್ನು ನಿವಾರಿಸಲು ಅಮೃತಬಳ್ಳಿ ಚೆನ್ನಾಗಿ ಕೆಲಸ ಮಾಡುತ್ತದೆ. ಇದಕ್ಕಾಗಿ, 4-6 ಮೀಟರ್ ಉದ್ದದ ಅಮೃತಬಳ್ಳಿ ಅನ್ನು ಅರ್ಧ ಲೀಟರ್ ನೀರಿನಲ್ಲಿ ಕುದಿಸಿ. ನಂತರ ಅದನ್ನು ಫಿಲ್ಟರ್ ಮಾಡಿ ಮತ್ತು 3-4 ಬಾರಿ ಸಣ್ಣ ಪ್ರಮಾಣದಲ್ಲಿ ಸೇವಿಸಿ.

ತುಳಸಿ ಗಿಡ:ತುಳಸಿ ಗಿಡ ಎಂದರೆ ಸಾಕು ನಾವು ಭಕ್ತಿ ಪರವಶರಾಗುತ್ತೇವೆ. ಏಕೆಂದರೆ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ತುಳಸಿ ಗಿಡಕ್ಕೆ ವಿಶೇಷ ಸ್ಥಾನಮಾನ ಕೊಟ್ಟು ಲಕ್ಷ್ಮಿ ದೇವತೆಗೆ ಹೋಲಿಸಲಾಗಿದೆ. ದೈವೀ ಸ್ವರೂಪವಾದ ತುಳಸಿ ಗಿಡ ಕೇವಲ ಪೂಜೆಗೆ ಅಷ್ಟೇ ಸೀಮಿತವಾಗಿಲ್ಲ ವೈರಲ್ ಜ್ವರದಿಂದ ಮುಕ್ತಿ ಪಡೆಯಲು ತುಳಸಿ ಎಲೆಗಳು ಬಹಳಷ್ಟು ಸಹಾಯ ಮಾಡುತ್ತವೆ. ಇದಕ್ಕಾಗಿ 5-7 ತುಳಸಿ ಎಲೆಗಳು ಮತ್ತು ಒಂದು ಚಮಚ ಲವಂಗದ ಪುಡಿಯನ್ನು ಒಂದು ಲೀಟರ್ ನೀರಿನಲ್ಲಿ ಚೆನ್ನಾಗಿ ಕುದಿಸಿ. ನಂತರ ಅದನ್ನು ಫಿಲ್ಟರ್ ಮಾಡಿ ಮತ್ತು ಪ್ರತಿ ಎರಡು ಗಂಟೆಗಳಿಗೊಮ್ಮೆ ಅರ್ಧ ಕಪ್ ಪ್ರಮಾಣದಲ್ಲಿ ಸೇವಿಸಿ.

ಮೆಂತ್ಯ ನೀರು:ಕೆಲವು ಮೆಂತ್ಯ ಬೀಜಗಳನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಮತ್ತು ರಾತ್ರಿಯಿಡೀ ಇರಿಸಿ. ಬೆಳಗ್ಗೆ ಈ ನೀರನ್ನು ಫಿಲ್ಟರ್ ಮಾಡಿ ಮತ್ತು ಪ್ರತಿ ಎರಡು ಗಂಟೆಗಳಿಗೊಮ್ಮೆ ಸಣ್ಣ ಪ್ರಮಾಣದಲ್ಲಿ ಕುಡಿಯಿರಿ.

ಒಣದ್ರಾಕ್ಷಿ:ಒಣದ್ರಾಕ್ಷಿವೈರಲ್ ಜ್ವರದಲ್ಲಿ ಉತ್ತಮ ಪರಿಹಾರವನ್ನು ನೀಡುತ್ತದೆ. ನೀವು ಎರಡು ಚಮಚ ಗೋಡಂಬಿಯನ್ನು ಒಂದು ಕಪ್ ನೀರಿನಲ್ಲಿ ಹಾಕಿ ಕೆಲವು ಗಂಟೆಗಳ ಕಾಲ ನೆನೆಸಿಡಿ. ನಂತರ ಒಣದ್ರಾಕ್ಷಿಗಳನ್ನು ಆ ನೀರಿನಲ್ಲಿಯೇ ಪುಡಿಮಾಡಿ. ನಂತರ ಅದರಲ್ಲಿ ಸ್ವಲ್ಪ ನಿಂಬೆಹಣ್ಣಿನ ರಸವನ್ನು ಬೆರೆಸಿ ಎರಡು ಬಾರಿ ಕುಡಿಯಿರಿ.

ಸಾಮಾನ್ಯ ಶೀತ-ಜ್ವರ ಸಮಸ್ಯೆಯಿಂದ ಬಳಲುತ್ತಿರುವವರು ಈ ಆಹಾರ ಸೇವಿಸುವುದರಿಂದ ಸುಸ್ತು ಬೇಗನೆ ನಿವಾರಣೆಯಾಗುವುದು.
⦁ ಆ್ಯಪಲ್‌, ಕ್ಯಾರೆಟ್‌ ಮತ್ತು ಆರೇಂಜ್,ಮೂರನ್ನು ಮಿಕ್ಸ್ ಮಾಡಿ ಜ್ಯೂಸ್‌ ಮಾಡಿ ಕುಡಿಯಿರಿ.
⦁ ಕಿತ್ತಳೆ ಅಥವಾ ಮೂಸಂಬಿ ಜ್ಯೂಸ್‌ನಲ್ಲಿ ವಿಟಮಿನ್‌ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು.
⦁ ಬೀಟ್‌ರೂಟ್‌,ಕ್ಯಾರೆಟ್,ಅರಿಶಿಣ,ನಿಂಬೆರಸ ಜ್ಯೂಸ್‌,ಅರಿಶಿಣ,ಶುಂಠಿ,ಕಾಳುಮೆಣಸಿನ ಪುಡಿ,ಜ್ಯೂಸ್‌ ಮಾಡಿ ಕುಡಿಯಿರಿ.
⦁ ಸ್ಟ್ರಾಬೆರಿ ಮತ್ತು ಕಿವಿ ಫ್ರೂಟ್ ಜೊತೆ ಎರಡು ಪುದೀನಾ ಎಲೆ ಹಾಕಿ ಜ್ಯೂಸ್‌ ಮಾಡಿ ಕುಡಿಯಿರಿ.
⦁ ಕಿವಿಫ್ರೂಟ್‌ ದೇಹದಲ್ಲಿ ಬಿಳಿ ರಕ್ತಕಣಗಳು ಹೆಚ್ಚಲು ಸಹಕಾರಿ.
⦁ ಹಾಲಿಗೆ ಕುಂಬಳಕಾಯಿ ಬೀಜ ಹಾಕಿ ಜ್ಯೂಸ್ ಮಾಡಿ ಕುಡಿಯುವುದರಿಂದ ನಿಶ್ಯಕ್ತಿ ಕಡಿಮೆಯಾಗುವುದು.

ಆರೋಗ್ಯ

ಮೂತ್ರಪಿಂಡದ ಕಲ್ಲು: ಮೂತ್ರಕೋಶದಲ್ಲಿ ಸಿಲುಕಿದರೆ ಏನಾಗುತ್ತದೆ?

Published

on

ಬೆಂಗಳೂರು: ಮೂತ್ರಪಿಂಡದ ಕಲ್ಲು (Kidney Stone) ಮೂತ್ರಕೋಶಕ್ಕೆ ತಲುಪಿದ ಬಳಿಕ ಸುಲಭವಾಗಿ ಹೊರಹೋಗುತ್ತದೆ ಎಂಬುದು ಸಾಮಾನ್ಯ ನಂಬಿಕೆ. ಆದರೆ ಕೆಲವೊಮ್ಮೆ ಈ ಕಲ್ಲುಗಳು ಮೂತ್ರಕೋಶದಲ್ಲೇ ಸಿಲುಕಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

ಸಾಮಾನ್ಯವಾಗಿ 4–5 ಮಿಮೀ ಗಾತ್ರದ ಕಲ್ಲುಗಳು ಸಹಜವಾಗಿ ಮೂತ್ರದ ಮೂಲಕ ಹೊರಹೋಗುತ್ತವೆ. ಆದರೆ 7 ಮಿಮೀಗಿಂತ ದೊಡ್ಡದಾದ ಅಥವಾ ಅಸಮ ಆಕಾರ ಹೊಂದಿರುವ ಕಲ್ಲುಗಳು ಮೂತ್ರನಾಳದಲ್ಲಿ ಸಿಲುಕಿಕೊಳ್ಳಬಹುದು. ಇದರಿಂದ ಕೆಳ ಹೊಟ್ಟೆ ನೋವು, ಮೂತ್ರ ವಿಸರ್ಜನೆ ವೇಳೆ ಉರಿ, ಮೂತ್ರದಲ್ಲಿ ರಕ್ತ ಹಾಗೂ ದುರ್ವಾಸನೆ ಕಾಣಿಸಬಹುದು.

ಮೂತ್ರಕೋಶ ಸರಿಯಾಗಿ ಖಾಲಿಯಾಗದಿರುವುದು ಕೂಡ ಪ್ರಮುಖ ಕಾರಣ. ಮೂತ್ರದ ಹರಿವು ಕಡಿಮೆಯಾಗುವ ಸ್ಥಿತಿ ಅಥವಾ ವೃದ್ಧರಾದ ಪುರುಷರಲ್ಲಿ ಕಾಣಿಸುವ ಪ್ರಾಸ್ಟೇಟ್ ವಿಸ್ತರಣೆ (BPH) ಸಮಸ್ಯೆಯಿಂದ ಕಲ್ಲುಗಳು ಸಿಲುಕಿಕೊಳ್ಳಬಹುದು. ಜೊತೆಗೆ ಮಧುಮೇಹ ಅಥವಾ ನರ ಸಮಸ್ಯೆಗಳೂ ಪರಿಣಾಮ ಬೀರುತ್ತವೆ.

ಕಲ್ಲುಗಳು ಹೆಚ್ಚು ಕಾಲ ಸಿಲುಕಿಕೊಂಡಿದ್ದರೆ ಸೋಂಕು (UTI), ಮೂತ್ರ ಧಾರಣ ತೊಂದರೆ ಹಾಗೂ ಮೂತ್ರಕೋಶದ ಉರಿಯೂತದಂತಹ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಜ್ವರ, ತೀವ್ರ ನೋವು, ಮೂತ್ರವಿಸರ್ಜನೆ ಅಸಾಧ್ಯತೆ ಕಂಡುಬಂದರೆ ತಕ್ಷಣ ವೈದ್ಯಕೀಯ ಚಿಕಿತ್ಸೆ ಅಗತ್ಯ.

ತಜ್ಞರ ಪ್ರಕಾರ, ಸಾಕಷ್ಟು ನೀರು ಕುಡಿಯುವುದು, ಮೂತ್ರಕೋಶವನ್ನು ಸಂಪೂರ್ಣ ಖಾಲಿ ಮಾಡುವುದು ಹಾಗೂ ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ಈ ಸಮಸ್ಯೆಯನ್ನು ತಪ್ಪಿಸಬಹುದು. “ಡಬಲ್ ವಾಯ್ಡ್” ಎಂಬ ವಿಧಾನವು ಮೂತ್ರಕೋಶ ಸಂಪೂರ್ಣ ಖಾಲಿಯಾಗಲು ಸಹಕಾರಿಯಾಗುತ್ತದೆ.

ಒಟ್ಟಿನಲ್ಲಿ, ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯನ್ನು ನಿರ್ಲಕ್ಷಿಸದೇ ಆರಂಭಿಕ ಲಕ್ಷಣಗಳಲ್ಲೇ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ.

Note: This information is provided by Dr. Venkatswamy and the Hosasuddi.in health team. Before publishing, Hosasuddi.in follows medical guidelines and expert advice.

Continue Reading

ಆರೋಗ್ಯ

ಮಧುಮೇಹ-ಬೊಜ್ಜಿಗೆ GLP-1 ಔಷಧ: ಪ್ರಯೋಜನದ ಜೊತೆ ಅಪಾಯವೂ!

Published

on

ನವದೆಹಲಿ: ಟೈಪ್ 2 ಮಧುಮೇಹ ಮತ್ತು ಸ್ಥೂಲಕಾಯತೆಗೆ ಚಿಕಿತ್ಸೆ ನೀಡಲು ಬಳಸಲಾಗುತ್ತಿರುವ GLP-1 ಔಷಧಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಎಚ್ಚರಿಕೆ ನೀಡಿದೆ. ಈ ಔಷಧಗಳು ಪರಿಣಾಮಕಾರಿ ಆಗಿದ್ದರೂ, ಅವುಗಳನ್ನು ವೈದ್ಯರ ಸಲಹೆಯಿಲ್ಲದೆ ಬಳಸುವುದು ಅಪಾಯಕಾರಿ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಆರೋಗ್ಯ ಇಲಾಖೆ ಹೇಳುವಂತೆ, GLP-1 ಔಷಧಗಳು ರಕ್ತದಲ್ಲಿನ ಸಕ್ಕರೆ ನಿಯಂತ್ರಣ ಮತ್ತು ತೂಕ ಇಳಿಕೆಗೆ ಸಹಕಾರಿ. ಆದರೆ ವಾಕರಿಕೆ, ವಾಂತಿ ಮುಂತಾದ ಸಾಮಾನ್ಯ ಅಡ್ಡಪರಿಣಾಮಗಳಿಂದ ಹಿಡಿದು ಮೂತ್ರಪಿಂಡ ಹಾನಿ, ಮೇದೋಜ್ಜೀರಕ ಗ್ರಂಥಿಯ ಉರಿಯೂತ, ಕರುಳಿನ ಅಡಚಣೆಗಳಂತಹ ಗಂಭೀರ ಸಮಸ್ಯೆಗಳಿಗೂ ಕಾರಣವಾಗಬಹುದು.

Type 2 Diabetes ಮತ್ತು Obesity ಹೊಂದಿರುವವರು ಈ ಔಷಧಗಳನ್ನು ಕಡ್ಡಾಯವಾಗಿ ನೋಂದಾಯಿತ ವೈದ್ಯರ ಮೇಲ್ವಿಚಾರಣೆಯಲ್ಲೇ ಬಳಸಬೇಕು ಎಂದು ಸೂಚಿಸಲಾಗಿದೆ. ಅನಧಿಕೃತ ಮಾರಾಟ ಮತ್ತು ಮೇಲ್ವಿಚಾರಣೆಯಿಲ್ಲದ ಬಳಕೆಯನ್ನು ತಡೆಯಲು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಗಿದೆ.

ಸಚಿವಾಲಯದ ಪ್ರಕಾರ, ಹೆಚ್ಚಿನ ತೂಕ, ವ್ಯಾಯಾಮದ ಕೊರತೆ ಮತ್ತು ಹೆಚ್ಚು ಸಕ್ಕರೆ ಸೇವನೆ ಟೈಪ್ 2 ಮಧುಮೇಹದ ಪ್ರಮುಖ ಕಾರಣಗಳಾಗಿವೆ. ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮದ ಮೂಲಕ ಈ ರೋಗವನ್ನು ತಡೆಗಟ್ಟಬಹುದು.

Continue Reading

ಆರೋಗ್ಯ

ಜಂಕ್ ಫುಡ್ ಬೇಡ! ಹಣ್ಣುಗಳಿಂದ ಆರೋಗ್ಯಕರವಾಗಿ ತೂಕ ಹೆಚ್ಚಿಸಿಕೊಳ್ಳಿ

Published

on

ಬೆಂಗಳೂರು: ಇಂದಿನ ಜೀವನಶೈಲಿಯಲ್ಲಿ ತೂಕ ಇಳಿಸುವುದು ಎಷ್ಟು ಕಷ್ಟವೋ, ಅತಿಯಾಗಿ ಸಪೂರ ಮೈಕಟ್ಟು ಹೊಂದಿರುವವರಿಗೆ ಆರೋಗ್ಯಕರವಾಗಿ ತೂಕ ಹೆಚ್ಚಿಸಿಕೊಳ್ಳುವುದು ಕೂಡ ಅಷ್ಟೇ ಸವಾಲಾಗಿದೆ. ತೂಕ ಹೆಚ್ಚಿಸುವುದು ಎಂದರೆ ಕೇವಲ ಕೊಬ್ಬು ಹೆಚ್ಚಿಸುವುದಲ್ಲ; ಬದಲಾಗಿ ದೇಹದಲ್ಲಿ ಸದೃಢ ಸ್ನಾಯುಗಳ (ಮಸಲ್ಸ್) ವೃದ್ಧಿ ಮುಖ್ಯ.

ಜಂಕ್ ಫುಡ್‌ಗಳಿಗೆ ಅವಲಂಬನೆ ಕಡಿಮೆ ಮಾಡಿ, ನೈಸರ್ಗಿಕ ಹಣ್ಣುಗಳನ್ನು ದಿನನಿತ್ಯದ ಆಹಾರದಲ್ಲಿ ಸೇರಿಸುವುದು ಉತ್ತಮ ವಿಧಾನವಾಗಿದೆ. ಕೆಲವು ಹಣ್ಣುಗಳು ದೇಹಕ್ಕೆ ಅಗತ್ಯ ಕ್ಯಾಲರಿ, ಪೋಷಕಾಂಶಗಳನ್ನು ನೀಡುವುದರ ಮೂಲಕ ತೂಕ ಹೆಚ್ಚಿಸಲು ಸಹಾಯ ಮಾಡುತ್ತವೆ.

ಬಾಳೆಹಣ್ಣು (Banana): ಕಾರ್ಬೋಹೈಡ್ರೇಟ್ ಮತ್ತು ಕ್ಯಾಲರಿಗಳಿಂದ ಸಮೃದ್ಧವಾಗಿರುವ ಬಾಳೆಹಣ್ಣು ತೂಕ ಹೆಚ್ಚಿಸಲು ಪರಿಣಾಮಕಾರಿ. ದಿನಕ್ಕೆ 2–3 ಬಾಳೆಹಣ್ಣು ತಿನ್ನುವುದು ಅಥವಾ ಹಾಲಿನೊಂದಿಗೆ ಬನಾನಾ ಶೇಕ್ ಸೇವಿಸುವುದು ವೇಗವಾಗಿ ಫಲ ನೀಡುತ್ತದೆ.

ಅವಕಾಡೋ (Avocado): ಆರೋಗ್ಯಕರ ಕೊಬ್ಬಿನ ಮೂಲವಾಗಿರುವ ಈ ಹಣ್ಣು ದೇಹಕ್ಕೆ ಅಗತ್ಯ ಪೋಷಕಾಂಶಗಳನ್ನು ಒದಗಿಸಿ, ತೂಕವನ್ನು ಸಮತೋಲನದಿಂದ ಹೆಚ್ಚಿಸುತ್ತದೆ.

ಮಾವಿನ ಹಣ್ಣು (Mango): ನೈಸರ್ಗಿಕ ಸಕ್ಕರೆ ಮತ್ತು ಹೆಚ್ಚಿನ ಕ್ಯಾಲರಿಗಳಿಂದ ಕೂಡಿದ ಮಾವಿನ ಹಣ್ಣು ತೂಕ ಹೆಚ್ಚಿಸುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನೂ ವೃದ್ಧಿಸುತ್ತದೆ.

ಒಣಹಣ್ಣುಗಳು (Dry Fruits): ಅಂಜೂರ, ಖರ್ಜೂರ, ಒಣ ದ್ರಾಕ್ಷಿ ಮುಂತಾದವು ತೂಕ ಹೆಚ್ಚಿಸಲು ಅತ್ಯುತ್ತಮ. ರಾತ್ರಿ ನೆನೆಸಿಟ್ಟು ಬೆಳಗ್ಗೆ ಸೇವಿಸಿದರೆ ಹೆಚ್ಚು ಲಾಭಕರ.

ಇದಲ್ಲದೆ ಸಪೋಟ, ಹಲಸಿನ ಹಣ್ಣುಗಳೂ ಸಹ ಸಹಾಯಕ. ಆದರೆ ಕೇವಲ ಆಹಾರ ಸೇವನೆ ಸಾಕಾಗುವುದಿಲ್ಲ; ಲಘು ವ್ಯಾಯಾಮ ಮತ್ತು ಯೋಗಾಭ್ಯಾಸದಿಂದ ಆಹಾರ ಸ್ನಾಯುವಾಗಿ ಪರಿವರ್ತನೆಗೊಳ್ಳಲು ಸಹಾಯವಾಗುತ್ತದೆ.

ನಿಯಮಿತ ಆಹಾರ ಮತ್ತು ತಾಳ್ಮೆಯೊಂದಿಗೆ ಈ ಕ್ರಮ ಪಾಲಿಸಿದರೆ ಆರೋಗ್ಯಕರ ತೂಕ ಹೆಚ್ಚಿಸಿಕೊಳ್ಳುವುದು ಸಾಧ್ಯ. ಈ ಮಾಹಿತಿಯನ್ನು ಆರೋಗ್ಯ ತಜ್ಞರು ಹಂಚಿಕೊಂಡಿದ್ದು, ಅದರ ಆಧಾರದ ಮೇಲೆ ಹೊಸ ಸುದ್ದಿ (Hosasuddi) ತಂಡವು ಈ ಲೇಖನವನ್ನು ಪ್ರಕಟಿಸಿದೆ.

Continue Reading

Trending