Connect with us

ಸಿನಿಮಾ

ರಿಲೀಸ್​ಗೂ ಮೊದಲೇ ‘ಜವಾನ್’ ಸಿನಿಮಾ ದಾಖಲೆ ಮುರಿದ ‘ಅನಿಮಲ್’ ಸಿನಿಮಾ

ರಿಲೀಸ್​ಗೂ ಮೊದಲೇ ‘ಜವಾನ್’ ಸಿನಿಮಾ ದಾಖಲೆ ಮುರಿದ ‘ಅನಿಮಲ್’ ಸಿನಿಮಾ

ಬಾಲಿವುಡ್​ಗೆ ಹಾರಿದ ನಟಿ ರಶ್ಮಿಕಾ ಮಂದಣ್ಣ, ರಣಬೀರ್ ಕಪೂರ್ ಜೊತೆ ಅನಿಮಲ್ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಇದೀಗ ಅನಿಮಲ್ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದ್ದು, ನಿರ್ದೇಶಕರೇ ಬಿಡುಗಡೆ ದಿನಾಂಕ ಘೋಷಿಸಿದ್ದಾರೆ.ಬಾಕ್ಸ್ ಆಫೀಸ್​ನಲ್ಲಿ ‘ಜವಾನ್’ ಹಾಗೂ ‘ಬ್ರಹ್ಮಾಸ್ತ್ರ’ ಸಿನಿಮಾ ಒಳ್ಳೆಯ ಗಳಿಕೆ ಮಾಡಿದ್ದವು. ಕೇವಲ ಭಾರತ ಮಾತ್ರವಲ್ಲದೆ ವಿದೇಶಿ ಮಾರುಕಟ್ಟೆಯಲ್ಲೂ ಚಿತ್ರಕ್ಕೆ ಒಳ್ಳೆಯ ಗಳಿಕೆ ಆಗಿತ್ತು. ಈಗ ‘ಅನಿಮಲ್’ ಚಿತ್ರಕ್ಕೆ ವಿದೇಶದಲ್ಲಿ ಹೆಚ್ಚು ಸ್ಕ್ರೀನ್ ಸಿಗುತ್ತಿರುವುದರಿಂದ ಸಹಜವಾಗಿಯೇ ಗಳಿಕೆ ಹೆಚ್ಚಲಿದೆ.ಡಿಸೆಂಬರ್ ತಿಂಗಳು ಬಂತೆಂದರೆ ಸಿನಿಪ್ರಿಯರಿಗೆ ಖುಷಿಯೋ ಖುಷಿ. ಕ್ರಿಸ್​ಮಸ್ ಸಮಯ ಎಂಬ ಕಾರಣಕ್ಕೆ ಸಾಕಷ್ಟು ಸಿನಿಮಾಗಳು ಈ ಸಂದರ್ಭದಲ್ಲಿ ರಿಲೀಸ್ ಆಗುತ್ತವೆ. ಬಿಗ್ ಬಜೆಟ್ ಚಿತ್ರಗಳು ಈ ಸಂದರ್ಭದಲ್ಲಿ ರಿಲೀಸ್ ಆಗಿ ಅಬ್ಬರಿಸುತ್ತವೆ. ಈ ವರ್ಷ ಡಿಸೆಂಬರ್​ನಲ್ಲೂ ಹಲವು ಚಿತ್ರಗಳು ಬಿಡುಗಡೆ ಆಗುತ್ತಿವೆ. ಆ ಪೈಕಿ ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್’ ಚಿತ್ರ ಸಾಕಷ್ಟು ಕುತೂಹಲ ಮೂಡಿಸಿದೆ. ರಿಲೀಸ್​ಗೂ ಮೊದಲೇ ಈ ಚಿತ್ರ ‘ಜವಾನ್’ ಚಿತ್ರದ ದಾಖಲೆಯನ್ನು ಉಡೀಸ್ ಮಾಡಿದೆ.
ಈ ಚಿತ್ರದಲ್ಲಿ ರಣಬೀರ್ ಕಪೂರ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರು ರಣಬೀರ್ ಕಪೂರ್​ಗೆ ಜೊತೆಯಾಗಿದ್ದಾರೆ. ಈ ಚಿತ್ರದಲ್ಲಿ ರಣಬೀರ್ ಕಪೂರ್ ಅವರು ಎರಡು ಶೇಡ್​ನ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರ ಅಮೆರಿಕದಲ್ಲಿ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ.‘ಅನಿಮಲ್’ ಸಿನಿಮಾ ಉತ್ತರ ಅಮೆರಿಕದಲ್ಲಿ 888 ಪರದೆಗಳಲ್ಲಿ ರಿಲೀಸ್ ಆಗುತ್ತಿದೆ. ಈ ಮೊದಲು ರಿಲೀಸ್ ಆದ ‘ಜವಾನ್’ ಚಿತ್ರಕ್ಕೆ ಈ ಭಾಗದಲ್ಲಿ 850 ಪರದೆಗಳು ಸಿಕ್ಕಿದ್ದವು. ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ 810 ಪರದೆಗಳು ದೊರೆತಿದ್ದವು. ಈ ದಾಖಲೆಯನ್ನು ‘ಅನಿಮಲ್’ ಸಿನಿಮಾ ಮುರಿದು ಹಾಕಿದೆ. ಅಮೆರಿಕದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿರುವ ಮೊದಲ ಹಿಂದಿ ಸಿನಿಮಾ ಎನ್ನುವ ಜನಪ್ರಿಯತೆ ಈ ಚಿತ್ರಕ್ಕೆ ಸಿಕ್ಕಿದೆ.ಬಾಕ್ಸ್ ಆಫೀಸ್​ನಲ್ಲಿ ‘ಜವಾನ್’ ಹಾಗೂ ‘ಬ್ರಹ್ಮಾಸ್ತ್ರ’ ಸಿನಿಮಾ ಒಳ್ಳೆಯ ಗಳಿಕೆ ಮಾಡಿದ್ದವು. ಕೇವಲ ಭಾರತ ಮಾತ್ರವಲ್ಲದೆ ವಿದೇಶಿ ಮಾರುಕಟ್ಟೆಯಲ್ಲೂ ಚಿತ್ರಕ್ಕೆ ಒಳ್ಳೆಯ ಗಳಿಕೆ ಆಗಿತ್ತು. ಈಗ ‘ಅನಿಮಲ್’ ಚಿತ್ರಕ್ಕೆ ವಿದೇಶದಲ್ಲಿ ಹೆಚ್ಚು ಸ್ಕ್ರೀನ್ ಸಿಗುತ್ತಿರುವುದರಿಂದ ಸಹಜವಾಗಿಯೇ ಗಳಿಕೆ ಹೆಚ್ಚಲಿದೆ. ಇದರಿಂದ ನಿರ್ಮಾಪಕರ ಮೊಗದಲ್ಲಿ ನಗು ಮೂಡಿದೆ.

ಕಥಾ ನಾಯಕನಿಗೆ ಅಲ್ಲಿ ಎರಡು ಶೇಡ್ ಇತ್ತು. ‘ಅನಿಮಲ್’ ಚಿತ್ರಕ್ಕೂ ಇದೇ ಥೀಮ್ ಇದೆ. ಸಿನಿಮಾ ರಾ ಆಗಿದೆ ಹಾಗೂ ಕಥಾ ನಾಯಕನಿಗೆ ಎರಡು ಶೇಡ್ ಇದೆ ಅನ್ನೋದು ಟೀಸರ್ ಮೂಲಕ ಗೊತ್ತಾಗಿದೆ. ಈ ಕಾರಣದಿಂದಲೇ ‘ಅನಿಮಲ್’ ನೋಡಲು ಫ್ಯಾನ್ಸ್ ಕಾದಿದ್ದಾರೆ. ಟಿ-ಸೀರಿಸ್ ಮೂಲಕ ಭೂಷಣ್​ ಕುಮಾರ್, ಮೊದಲಾದವರು ಸಿನಿಮಾ ನಿರ್ಮಾಣ ಮಾಡಿದ್ದಾರೆ. ರಣಬೀರ್, ರಶ್ಮಿಕಾ ಜೊತೆ ಬಾಬಿ ಡಿಯೋಲ್, ಅನಿಲ್ ಕಪೂರ್ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಡಿಸೆಂಬರ್ 1ರಂದು ವಿಶ್ವಾದ್ಯಂತ ಚಿತ್ರ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಟ್ರೇಲರ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

ರಾಜ್ಯ

ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ

ಬೆಂಗಳೂರು: ಭಾಷೆ ಹುಟ್ಟಿದರ ಬಗ್ಗೆ ಮಾತನಾಡುವುದಕ್ಕೆ ನೀವು ಭಾಷಾ ತಜ್ಞರೇ? ಇಲ್ಲ ಇತಿಹಾಸಕಾರರೇ ಎಂದು ಕರ್ನಾಟಕ ಹೈಕೋರ್ಟ್‌ (Karnataka High Court) ಕಮಲ್‌ ಹಾಸನ್‌ Kamal Hassan) ಅವರಿಗೆ ಖಾರವಾದ ಪ್ರಶ್ನೆ ಕೇಳಿದೆ.

ಥಗ್‌ ಲೈಫ್‌ (Thug Life) ಚಿತ್ರ ಬಿಡುಗಡೆಗೆ ಕರ್ನಾಟಕದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಕಮಲ್‌ ಹಾಸನ್‌ ಅವರು ಬಿಡುಗಡೆಗೆ ಅವಕಾಶ ನೀಡಬೇಕು ಮತ್ತು ಚಿತ್ರ ಮಂದಿರಕ್ಕೆ ಪೊಲೀಸ್‌ ಭದ್ರತೆ ಒದಗಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು.

ಇಂದು ಈ ಅರ್ಜಿಯ ವಿಚಾರಣೆ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠದಲ್ಲಿ ನಡೆಯಿತು. ಈ ವೇಳೆ ಕಮಲ್‌ ಹಾಸನ್‌ ಪರ ವಕೀಲ ಧ್ಯಾನ್ ಚಿನ್ನಪ್ಪ ವಾದ ಮಂಡನೆ ಮಾಡಿದರು. ಎರಡು ದಿನದಲ್ಲಿ ಚಲನಚಿತ್ರ ಬಿಡುಗಡೆ ಆಗಲಿದ್ದು, ಈ ಸಂದರ್ಭದಲ್ಲಿ ವಿವಾದ ಶುರುವಾಗಿದೆ. ಆಡಿಯೋ ಬಿಡುಗಡೆಯ ಸಂದರ್ಭದಲ್ಲಿ ವಿವಾದ ಆರಂಭವಾಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದರು.

ಈ ವೇಳೆ ನ್ಯಾಯಮೂರ್ತಿಗಳು, ನೆಲ, ಭಾಷೆಯ ಜೊತೆ ಜನರ ಭಾವನೆ ಇರುತ್ತದೆ. ಜನರ ಭಾವನೆಗೆ ಯಾರೂ ಧಕ್ಕೆ ತರಬಾರದು. ಜನರು ಕ್ಷಮೆ ಕೇಳುವಂತೆ ಒತ್ತಾಯಿಸುತ್ತಿದ್ದಾರೆ. ಕಮಲ್‌ ಹಾಸನ್‌ ಕ್ಷಮೆ ಕೇಳಿದ್ದಾರಾ ಎಂದು ಪ್ರಶ್ನಿಸಿದರು.

ಭಾಷೆ ಹುಟ್ಟಿದರ ಬಗ್ಗೆ ನೀವು ಮಾತನಾಡುವುದಕ್ಕೆ ನೀವು ಭಾಷಾ ತಜ್ಞರೇ ಅಥವಾ ಇತಿಹಾಸಕಾರರೇ? ಒಂದೇ ಒಂದು ಕ್ಷಮೆ ಕೇಳೋದಕ್ಕೆ ಯಾಕೆ ಇಷ್ಟೊಂದು ಹಾವ ಭಾವ? ಈ ಹಿಂದೆ ರಾಜಗೋಪಾಲಾಚಾರಿ ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಕ್ಷಮೆಯಾಚನೆ ಮಾಡಿದ್ದು ನಿಮಗೆ ಗೊತ್ತಿಲ್ವೆ ಎಂದು ಕುಟುಕಿದರು.

350 ಕೋಟಿ ರೂ. ಸಿನಿಮಾಗೆ ಹಾಕಿದ್ದೀರಿ ಎನ್ನುತ್ತೀರಿ. ಭಾವನೆಗೆ ಧಕ್ಕೆ ಮಾಡಿ ಇಲ್ಲಿ ಸಂಪಾದನೆ ಮಾಡಬೇಕಾ? ಎಲ್ಲವೂ ಸರಾಗವಾಗಿ ಆಗಬೇಕು ಅಂದರೆ ಕ್ಷಮೆಯನ್ನು ಕೋರಿ. ಅಭಿವ್ಯಕ್ತಿ ಸ್ವಾತಂತ್ರ‍್ಯದಿಂದ ಭಾವನೆ ಧಕ್ಕೆ ಆಗಬಾರದು. ಕೋಟ್ಯಂತರ ರೂ. ಹಾಕಿದ್ದೀರಿ. ಕರ್ನಾಟಕದಲ್ಲಿ ಯಾಕೆ ಸಿನಿಮಾ ರಿಲೀಸ್‌ ಮಾಡುತ್ತೀರಿ? ಕರ್ನಾಟಕವನ್ನು ಬಿಟ್ಟು ಬಿಡಿ ಎಂದು ಖಾರವಾಗಿ ತಿಳಿಸಿದರು.

ಇದಕ್ಕೆ ನಾಲಿಗೆ ತಪ್ಪಾಗಿ ಹೇಳಿದರೆ ಇಷ್ಟು ಹೊತ್ತಿಗೆ ಕ್ಷಮೆ ಕೇಳಬಹುದಿತ್ತು. ಚಿತ್ರ ಮಂದಿರಕ್ಕೆ ಭದ್ರತೆ ಬೇಕಾ? ಬೇಡ್ವಾ ಎಂದು ಆದೇಶ ಮಾಡುವ ಮೊದಲು ಕ್ಷಮೆ ಕೇಳಲಿ. ಒಂದು ವೇಳೆ ಇತಿಹಾಸಕಾರ ದಾಖಲೆ ಸಮೇತ ಹೇಳಿದರೆ ಚರ್ಚೆ ವಿಷಯ ಆಗುತ್ತಿತ್ತು. ಕ್ಷಮೆ ಕೇಳದ ಹೊರತು ಹೇಳಿಕೆ ಹಿಂಪಡೆಯಲು ಸಾಧ್ಯವಿಲ್ಲ ಎಂದು ಜಡ್ಜ್‌ ಖಡಕ್‌ ಆಗಿ ಸೂಚಿಸಿದರು.

ಕಮಲ್‌ ಪರ ವಕೀಲರಿಗೆ ಕ್ಷಮೆ ಕೇಳಲು ಸೂಚಿಸಿದ ನ್ಯಾಯಾಧೀಶರು ಇಂದು ಮಧ್ಯಾಹ್ನ 2:30ಕ್ಕೆ ವಿಚಾರಣೆಯನ್ನು ಮುಂದೂಡಿದರು.

Continue Reading

ಬೆಂಗಳೂರು

300 ಕೋಟಿಯ ಥಗ್​ ಲೈಫ್ ಚಿತ್ರ ಕರ್ನಾಟಕದಲ್ಲಿ ಬ್ಯಾನ್‌; ಕೋರ್ಟ್‌ ಮೊರೆ ಹೋದ ಕಮಲ್‌ ಹಾಸನ್‌

ಚೆನ್ನೈ: ಕನ್ನಡ ತಮಿಳಿನಿಂದ ಹುಟ್ಟಿದೆ ಎಂದು ವಿವಾದದ ಕಿಚ್ಚು ಇನ್ನೂ ನಿಂತಿಲ್ಲ. ಕಮಲ್‌ ಹಾಸನ್‌ (Kamal Haasan) ಹೇಳಿಕೆಯನ್ನು ಖಂಡಿಸಿ ಕರ್ನಾಟಕದಲ್ಲಿ ಹಲವು ಪ್ರತಿಭಟನೆ ನಡೆಯುತ್ತಿವೆ. ತಮ್ಮ ಹೇಳಿಕೆಗೆ ಕ್ಷಮೆಯಾಚಿಸದಿದ್ದರೆ, ಅವರ ‘ಥಗ್ ಲೈಫ್’ ( Thug Life) ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗುವುದಿಲ್ಲ ಎಂದು ಚಲನಚಿತ್ರ ಮಂಡಳಿ ಎಚ್ಚರಿಸಿದ ನಂತರ, ನಟ ಇದೀಗ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಬರೋಬ್ಬರಿ 300 ಕೋಟಿ ಬಜೆಟ್​​ನಲ್ಲಿ ಸೆಟ್ಟೇರಿರುವ ಈ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅನುಮತಿ ಸಿಕ್ಕಿಲ್ಲ. ಇದೀಗ ನಟ ಕಾನೂನಿನ ಮೊರೆ ಹೋಗಿದ್ದಾರೆ.

ಕಮಲ್‌ ಹಾಸನ್‌ ಕನ್ನಡಿಗರ ಬಳಿ ಕ್ಷಮೆ ಕೇಳಲೇ ಬೇಕು. ಅವರು ಕ್ಷಮೆಯಾಚಿಸದಿದ್ದರೆ, ಥಗ್ ಲೈಫ್ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅನುಮತಿ ನೀಡುವುದಿಲ್ಲ ಎಂದು ಇದು ಖಚಿತ, ಇದು ಉದ್ಯಮದ ಬಗ್ಗೆ ಅಲ್ಲ, ಇದು ರಾಜ್ಯದ ಬಗ್ಗೆ. ರಾಜಕೀಯ ಪಕ್ಷಗಳು ಸಹ ವಿರೋಧಿಸುತ್ತಿವೆ. ಅವರ ಕ್ಷಮೆಯಾಚನೆಯಿಲ್ಲದೆ ಚಿತ್ರದ ಬಿಡುಗಡೆ ಕಷ್ಟ. ನಮ್ಮ ಪ್ರದರ್ಶಕರು ಅಥವಾ ವಿತರಕರು ಅದನ್ನು ಪ್ರದರ್ಶಿಸಲು ಸಿದ್ಧರಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎಂ. ನರಸಿಂಹಲು ಹೇಳಿದರು.

ಕರ್ನಾಟಕ ಬಿಜೆಪಿ ಮುಖ್ಯಸ್ಥ ಬಿ.ವೈ. ವಿಜಯೇಂದ್ರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. “ಒಬ್ಬರು ತಮ್ಮ ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ ದುರಹಂಕಾರವನ್ನು ಪ್ರದರ್ಶಿಸುವುದು ಸಾಂಸ್ಕೃತಿಕ ದಿವಾಳಿತನದ ಸಂಕೇತವಾಗಿದೆ. ವಿಶೇಷವಾಗಿ ಕಲಾವಿದರು ಪ್ರತಿಯೊಂದು ಭಾಷೆಯನ್ನು ಗೌರವಿಸುವ ನೀತಿಯನ್ನು ಹೊಂದಿರುವುದು ಅತ್ಯಗತ್ಯ ಎಂದು ಹೇಳಿದ್ದಾರೆ. ಕನ್ನಡ ಭಾಷೆಗೆ ದೀರ್ಘ ಇತಿಹಾಸವಿದೆ ಅದು ಕಮಲ್‌ ಹಾಸನ್‌ಗೆ ತಿಳಿದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಥಗ್‌ ಲೈಫ್‌ ಸಿನಿಮಾದ ಕಾರ್ಯಕ್ರಮವೊಂದರಲ್ಲಿ ನಟ ಶಿವರಾಜ್‌ಕುಮಾರ್‌ ಎದುರೇ ಕನ್ನಡ ತಮಿಳಿನಿಂದ ಹುಟ್ಟಿದೆ. ಕನ್ನಡದ ಮೂಲ ತಮಿಳು ಎಂದು ಹೇಳಿದ್ದರು. ಇದು ಕನ್ನಡಿಗರನ್ನು ಕೆರಳಿಸಿತ್ತು. ತಮ್ಮ ಹೇಳಿಕೆಗೆ ಕ್ಷಮೆ ಕೇಳದೆ ನಟ ಮತ್ತೆ ಮೊಂಡು ಪ್ರದರ್ಶನ ಮಾಡಿದ್ದರು. ಮೆಯಾಚಿಸುವ ಯಾವುದೇ ಯೋಜನೆ ಇಲ್ಲ ಎಂದು ನಟ ಸ್ಪಷ್ಟಪಡಿಸಿದ್ದಾರೆ. “ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ಕಾರ್ಯಸೂಚಿ ಹೊಂದಿರುವವರನ್ನು ಹೊರತುಪಡಿಸಿ ಯಾರೂ ಇದನ್ನು ಅನುಮಾನಿಸುವುದಿಲ್ಲ. ನನಗೆ ಈ ಹಿಂದೆಯೂ ಬೆದರಿಕೆ ಹಾಕಲಾಗಿದೆ, ಮತ್ತು ನಾನು ತಪ್ಪಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ. ಆದರೆ ನಾನು ತಪ್ಪೇ ಮಾಡಿಲ್ಲ ಎಂದು ಹೇಳಿದ್ದರು

Continue Reading

ರಾಜ್ಯ

ಕುಲದಲ್ಲಿ ಕೀಳ್ಯಾವದೋ ಚಲನಚಿತ್ರರಂಗದಿಂದ ಮತ್ತೊಂದು ಎಡವಟ್ಟು

ಬೆಂಗಳೂರು: ಕುಲದಲ್ಲಿ ಕೀಳ್ಯಾವದೋ ಚಲನಚಿತ್ರರಂಗದ ನಟ, ನಟಿಯರು ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸಿದ್ದರು ಇದರಲ್ಲಿ ನಟ ಕರಿಸುಬ್ಬುರವರು ಮಡೆನೂರು ಮನು ಕುರಿತು ಮಾತನಾಡುವ ಸಂದರ್ಭದಲ್ಲಿ ಊರು ಎಂದರೆ ಹೊಲಗೇರಿ ಇರುತ್ತದೆ, ಹೊಲಗೇರಿ ಸೇರಿಕೊಂಡಿದೆ ಎಂಬ ಮಾತನ್ನಾಡುತ್ತಾರೆ ಇದರ ವಿವಾದತ್ಮಕ ಹೇಳಿಕೆ ಖಂಡಿಸಿ ಡಾ||ಬಿ.ಆರ್.ಅಂಬೇಡ್ಕರ್ ಮಾನವ ಹಕ್ಕುಗಳು ಕ್ರಾಂತಿ ಸೇನೆ ಸಂಘಟನೆ ರಾಜ್ಯಾಧ್ಯಕ್ಷರಾದ ಕ್ರಾಂತಿ ರಾಜುರವರು ಖಂಡನೆ ವ್ಯಕ್ತಪಡಿಸಿದ್ದರು.

ಇದೇ ಸಂದರ್ಭದಲ್ಲಿ ಕ್ರಾಂತಿ ರಾಜುರವರು ಮಾತನಾಡಿ ಹೊಲೆಯರು ಎಂದರೆ ಹೊಲದ ಒಡೆಯ ಎಂಬರ್ಥ ಇದೆ, ನಮ್ಮ ಸಮುದಾಯಕ್ಕೆ ತನ್ನದೇ ಆದ ಇತಿಹಾಸ ಹೊಂದಿದೆ.

2000 ಸಾವಿರ ವರ್ಷಗಳಿಂದ ನಮ್ಮ ಸಮುದಾಯಕ್ಕೆ ಶೋಷಣೆ ಮಾಡಿದರು, ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರು ನಮ್ಮ ಮೇಲೆ ಅಪಮಾನ ,ಶೋಷಣೆ ನಿಂತಿಲ್ಲ ಎಂಬುದು ವಿಷಾದಕರ ಸಂಗತಿ.

ನಟ ಕರಿಸುಬ್ಬು ರವರ ಅವಹೇಳನಕಾರಿ ಮಾತನಾಡುವಾಗ ನಟಿ ಮೌನ, ಹಿರಿಯ ನಟ ಉಮೇಶ್ ಮತ್ತು ಡ್ಯಾಗನ್ ಮಂಜುರವರು ಉಪಸ್ಥಿತರಿದ್ದರು ಅವರ ಸಹ ಮೌನವಹಿಸಿರುವುದು ಖಂಡನೀಯ.

ನಟ ಕರಿಸುಬ್ಬುರವರು ಕೊಡಲೆ ಕ್ಷಮಾಪಣೆ ಹೇಳಬೇಕು ಇಲ್ಲದೇ ಹೋದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Continue Reading

Trending