ರಾಜ್ಯ
Cauvery ನೀರು ಬಿಡುಗಡೆ ಆದೇಶಕ್ಕೆ ಡಿಕೆಶಿ ಮಾಸ್ಟರ್ ಪ್ಲಾನ್; ಇಂದು ದೆಹಲಿಯಲ್ಲಿ ತುರ್ತು ಸಭೆ
ನವದೆಹಲಿ: ತಮಿಳುನಾಡಿಗೆ Cauvery ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಶಿಫಾರಸಿನ ಬೆನ್ನಲ್ಲೇ, CM D K Shivkumar ಅವರು ಇಂದು (ಜುಲೈ 29) ದೆಹಲಿಯಲ್ಲಿ ರಾಜ್ಯದ ಪರ ವಕೀಲರು ಹಾಗೂ ಕಾನೂನು ತಜ್ಞರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಬೆಳಿಗ್ಗೆ 11.30 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ, ಸುಪ್ರೀಂ ಕೋರ್ಟ್ನಲ್ಲಿ ಕರ್ನಾಟಕ ಸರ್ಕಾರದ ಪರ ವಕೀಲ ಮೋಹನ್ ಕಾತರಕಿ ಸೇರಿದಂತೆ ಹಲವು ಕಾನೂನು ತಜ್ಞರು ಭಾಗವಹಿಸಲಿದ್ದು, ರಾಜ್ಯದ ಮುಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಯಲಿದೆ.
ರೈತರ ಹಿತ ರಕ್ಷಣೆಗೆ ಮುಂದಿನ ಕ್ರಮ ಚರ್ಚೆ
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ರೈತರು ಹಾಗೂ ರಾಜ್ಯದ ಹಿತಾಸಕ್ತಿ ಕಾಪಾಡಲು ಯಾವ ರೀತಿಯ ಕಾನೂನು ಮತ್ತು ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು ಎಂಬ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
3,500 ಕ್ಯೂಸೆಕ್ ನೀರು ಬಿಡುಗಡೆಗೆ CWRC ಶಿಫಾರಸು
ಮಂಗಳವಾರ ನಡೆದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC), ಕರ್ನಾಟಕವು ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕು ಎಂದು ಶಿಫಾರಸು ಮಾಡಿತ್ತು. ಈ ತೀರ್ಮಾನ ರಾಜ್ಯ ಸರ್ಕಾರಕ್ಕೆ ಆಘಾತ ಉಂಟುಮಾಡಿದ್ದು, ರೈತ ಸಂಘಟನೆಗಳಲ್ಲೂ ಅಸಮಾಧಾನ ವ್ಯಕ್ತವಾಗಿದೆ.
ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಸಜ್ಜು
ರಾಜ್ಯದಲ್ಲಿ ಮುಂಗಾರು ಆರಂಭವಾಗಿ ಎರಡು ತಿಂಗಳು ಕಳೆದರೂ ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಪ್ರಮುಖ ಜಲಾಶಯಗಳು ಅರ್ಧದಷ್ಟೂ ಭರ್ತಿಯಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ.
ಈ ಹಿನ್ನೆಲೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ CWRC ಶಿಫಾರಸಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ದೆಹಲಿಯಲ್ಲಿ ನಡೆಯುವ ಇಂದಿನ ಸಭೆಯ ಬಳಿಕ ಮುಂದಿನ ಕಾನೂನು ಹೋರಾಟದ ರೂಪುರೇಷೆ ಅಂತಿಮಗೊಳ್ಳುವ ಸಾಧ್ಯತೆ ಇದೆ.
ದೇಶ
Madurai ಮೀನಾಕ್ಷಿ ದೇವಾಲಯದ ₹60 ಕೋಟಿ ಆಸ್ತಿ ಕಬಳಿಕೆ ಸಂಚು! 19 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ
ಚೆನ್ನೈ: Madurai ನ ಪ್ರಸಿದ್ಧ ಮೀನಾಕ್ಷಿ ಸುಂದರೇಶ್ವರರ್ ದೇವಾಲಯದ ಧರ್ಮದತ್ತಿ ಟ್ರಸ್ಟ್ಗೆ ಸೇರಿದ ಅಂದಾಜು ₹60 Crores ಮೌಲ್ಯದ ಭೂಮಿಯನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮಾಜಿ ತಹಸೀಲ್ದಾರ್, ಸಬ್ ರಿಜಿಸ್ಟ್ರಾರ್ ಸೇರಿದಂತೆ ಒಟ್ಟು 19 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿರುವ ಮಧುರೈ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮಧುರೈ ಅಲಗರ್ ಕೋವಿಲ್ ರಸ್ತೆಯಲ್ಲಿರುವ ‘ಅಶೋಕ್ ವಿಲಾಸ್’ ಬಂಗ್ಲೆ ಹಾಗೂ 1.79 ಎಕರೆ ಜಾಗ ಮೀನಾಕ್ಷಿ ದೇವಾಲಯ ಮತ್ತು ಅಲಗರ್ ಕೋವಿಲ್ ಸೇವೆಗಾಗಿ ಸ್ಥಾಪಿಸಲಾದ ಟ್ರಸ್ಟ್ಗೆ ಸೇರಿದೆ. 1930ರಲ್ಲಿ ನೋಂದಾಯಿಸಲಾದ ಉಯಿಲಿನ ಪ್ರಕಾರ ಈ ಆಸ್ತಿಯನ್ನು ಬಾಡಿಗೆಗೆ ಮಾತ್ರ ನೀಡಬಹುದಾಗಿದ್ದು, ಮಾರಾಟ, ಅಡಮಾನ ಅಥವಾ ಮಾಲೀಕತ್ವ ವರ್ಗಾವಣೆ ಮಾಡುವಂತಿಲ್ಲ.
ಆದರೆ, 2016ರಲ್ಲಿ ಮಧುರೈ ಉತ್ತರ ಭಾಗದ ಅಂದಿನ ತಹಸೀಲ್ದಾರ್ ಅನ್ಬಳಗನ್ ಅವರು ಸರ್ಕಾರಿ ದಾಖಲೆಗಳಿಂದ ದೇವಾಲಯದ ಹೆಸರನ್ನು ತೆಗೆದು ಖಾಸಗಿ ವ್ಯಕ್ತಿಗಳ ಹೆಸರಿಗೆ ವರ್ಗಾಯಿಸಿದ ಆರೋಪ ಕೇಳಿಬಂದಿದೆ. ಬಳಿಕ ಈ ಅಕ್ರಮ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಆ ಆದೇಶವನ್ನು ರದ್ದುಗೊಳಿಸಿ ಆಸ್ತಿಯನ್ನು ಮರುದೇವಾಲಯದ ಹೆಸರಿಗೆ ದಾಖಲಿಸಲು ಆದೇಶಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ ಹೈಕೋರ್ಟ್ ಪೀಠವೂ ಮಧ್ಯಂತರ ತಡೆಯಾಜ್ಞೆ ನೀಡಿತ್ತು.
ಆದರೂ, 2021ರಲ್ಲಿ ಕೆಲ ಸಬ್ ರಿಜಿಸ್ಟ್ರಾರ್ಗಳ ಸಹಕಾರದಿಂದ ನಕಲಿ ಜನರಲ್ ಪವರ್ ಆಫ್ ಅಟಾರ್ನಿ (GPA) ಹಾಗೂ ಅಡಮಾನ ದಾಖಲೆಗಳನ್ನು ಸೃಷ್ಟಿಸಿ ಆಸ್ತಿಯನ್ನು ಕಬಳಿಸಲು ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.
ದೇವಾಲಯದ ಜಂಟಿ ಆಯುಕ್ತ ಚೆಲ್ಲಾದುರೈ ಹಾಗೂ ಭ್ರಷ್ಟಾಚಾರ ವಿರೋಧಿ ಸಂಘಟನೆ ‘ಅರಪ್ಪೋರ್ ಇಯಕ್ಕಮ್’ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ವಂಚನೆ, ದಾಖಲೆಗಳ ನಕಲಿ ಸೃಷ್ಟಿ ಹಾಗೂ ಕ್ರಿಮಿನಲ್ ಸಂಚು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಬೆಂಗಳೂರು
NICE ಗೆ ಹೈಕೋರ್ಟ್ನಿಂದ ಭಾರಿ ಶಾಕ್! ರೈತರ ಪರ ಐತಿಹಾಸಿಕ ತೀರ್ಪು
ಬೆಂಗಳೂರು: ನೈಸ್ (NICE) ರಸ್ತೆ ಯೋಜನೆಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (KIADB) ಮೂಲಕ ಕೈಗೊಂಡಿದ್ದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ Karnataka High Court ಮಹತ್ವದ ತೀರ್ಪು ನೀಡಿದ್ದು, ನೈಸ್ ಸಂಸ್ಥೆಗೆ ಭಾರಿ ಹಿನ್ನಡೆಯಾಗಿದೆ. ಭೂಸ್ವಾಧೀನ ರದ್ದತಿ ಆದೇಶವನ್ನು ಪ್ರಶ್ನಿಸಿ ನೈಸ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದ್ದು, ಪ್ರಕರಣದಲ್ಲಿದ್ದ ನೂರಾರು ರೈತರಿಗೆ ದೊಡ್ಡ ರಿಲೀಫ್ ಸಿಕ್ಕಿದೆ.
ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ಟಿ.ಎಂ. ನದಾಫ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ವಿಚಾರಣೆ ವೇಳೆ ನೈಸ್ ರಸ್ತೆ ನಿರ್ಮಾಣದ ಸಂದರ್ಭದಲ್ಲಿ ಸಹಜ ಕೆರೆಗಳು ಹಾಗೂ ರೈತರ ಫಲವತ್ತಾದ ಕೃಷಿಭೂಮಿಯನ್ನು ಅತಿಕ್ರಮಿಸಿರುವ ಬಗ್ಗೆ ಗಂಭೀರ ಆರೋಪಗಳಿರುವುದನ್ನು ನ್ಯಾಯಪೀಠ ಉಲ್ಲೇಖಿಸಿದೆ.
ಪ್ರಕರಣದಲ್ಲಿ ರೈತರ ಪರವಾಗಿ ಹಿರಿಯ ವಕೀಲ ಹೆಚ್.ಎನ್. ಶಶಿಧರ್ ವಾದ ಮಂಡಿಸಿದ್ದರು. ರಸ್ತೆ ಬಳಕೆದಾರರಿಂದ ಪ್ರತಿದಿನ ಕೋಟ್ಯಂತರ ರೂಪಾಯಿ ಟೋಲ್ ಸಂಗ್ರಹಿಸುತ್ತಿದ್ದರೂ, ಮೂಲ ಭೂಮಾಲೀಕರಾದ ರೈತರಿಗೆ ಸಮರ್ಪಕ ಪರಿಹಾರ ನೀಡದೆ ಜಮೀನು ವಶಪಡಿಸಿಕೊಳ್ಳಲಾಗಿದೆ ಎಂಬ ವಿಚಾರವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ.
ಇದೇ ವೇಳೆ, ನೈಸ್ ಸಂಸ್ಥೆಯ ವಿರುದ್ಧದ ಆರೋಪಗಳ ಬಗ್ಗೆ ರಾಜ್ಯ ಸರ್ಕಾರ ಸಮರ್ಪಕ ಹಾಗೂ ಕಠಿಣ ಕ್ರಮ ಕೈಗೊಂಡಿಲ್ಲ ಎಂಬ ಅಸಮಾಧಾನವನ್ನೂ ಹೈಕೋರ್ಟ್ ವ್ಯಕ್ತಪಡಿಸಿದೆ. ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ, ಆರ್ಥಿಕ ವ್ಯವಹಾರಗಳು ಹಾಗೂ ಆಡಳಿತಾತ್ಮಕ ನಿರ್ಧಾರಗಳ ಕುರಿತು ಸ್ವತಂತ್ರ ಉನ್ನತ ಮಟ್ಟದ ತನಿಖೆ ಮತ್ತು ಫೊರೆನ್ಸಿಕ್ ಆಡಿಟ್ ನಡೆಸುವ ಅಗತ್ಯವಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಹೈಕೋರ್ಟ್ನ ಈ ತೀರ್ಪು ದಶಕಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದ ರೈತರಿಗೆ ಹೊಸ ಭರವಸೆ ನೀಡಿದ್ದು, ನೈಸ್ ರಸ್ತೆ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ವಿವಾದದಲ್ಲಿ ಮಹತ್ವದ ಮೈಲಿಗಲ್ಲಾಗಿದೆ.
ರಾಜ್ಯ
Congress ದೂರಿನ ಮೇರೆಗೆ ಯಶ್ಪಾಲ್ ಸುವರ್ಣ ವಿರುದ್ಧ FIR; ದ್ವೇಷ ಭಾಷಣ ಆರೋಪ
ಉಡುಪಿ: Congress ಮತ್ತುCockroach Janata Party ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯ ವೇಳೆ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಉಡುಪಿ MLA Yashpal Suvarna ಸುವರ್ಣ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ನೀಡಿದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಪ್ರಕರಣ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಮಂಗಳವಾರ ಉಡುಪಿಯಲ್ಲಿ ನಡೆದ ಬಿಜೆಪಿ ಪ್ರತಿಭಟನೆಯ ವೇಳೆ ಶಾಸಕ ಯಶ್ಪಾಲ್ ಸುವರ್ಣ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅದು ದ್ವೇಷ ಭಾಷಣಕ್ಕೆ ಒಳಪಡುವಂತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪ್ರತಿಭಟನೆ ಸಂದರ್ಭದಲ್ಲಿ ಮಾಡಿದ ಭಾಷಣದ ವಿಡಿಯೋ ಮತ್ತು ಸಾರ್ವಜನಿಕ ಹೇಳಿಕೆಗಳ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈಗ ಪೊಲೀಸರು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಿ ತನಿಖೆ ಮುಂದುವರಿಸಿದ್ದಾರೆ.
ಈ ಬೆಳವಣಿಗೆ ಉಡುಪಿ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
-
ರಾಜ್ಯ21 hours agoDK Shivkumar-Usha ದಂಪತಿಗೆ 33ನೇ ವಿವಾಹ ವಾರ್ಷಿಕೋತ್ಸವ; ಹಳೆಯ ಆಮಂತ್ರಣ ಪತ್ರ ವೈರಲ್
-
ದೇಶ22 hours ago16 Crores ವೆಚ್ಚದ ಸಂಪರ್ಕ ರಸ್ತೆ 16 ದಿನದಲ್ಲೇ ಕುಸಿತ; ಉತ್ತರಾಖಂಡದಲ್ಲಿ ಕಾಂಗ್ರೆಸ್ ಆಕ್ರೋಶ
-
ದೇಶ21 hours agoGoogle Pay, PhonePe, Paytm ಬಳಕೆದಾರರಿಗೆ ಹೊಸ ಅಪ್ಡೇಟ್; UPIನಲ್ಲಿ ಬದಲಾಗಲಿದೆ ಈ ನಿಯಮ
-
ಬೆಂಗಳೂರು1 hour agoNICE ಗೆ ಹೈಕೋರ್ಟ್ನಿಂದ ಭಾರಿ ಶಾಕ್! ರೈತರ ಪರ ಐತಿಹಾಸಿಕ ತೀರ್ಪು
-
ರಾಜ್ಯ22 hours agoMandya ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಆಕ್ರೋಶ; ಜಿಲ್ಲಾಧ್ಯಕ್ಷರ ಬದಲಾವಣೆಗೆ ಒತ್ತಾಯ
-
ದೇಶ22 hours agoCJP ಸಂಭ್ರಮಾಚರಣೆ ಕುರಿತು ಸೋನಮ್ ವಾಂಗ್ಚುಕ್ ಪ್ರತಿಕ್ರಿಯೆ; ಹೇಳಿದ್ದೇನು?
-
ದೇಶ2 hours agoMiddle East ದಲ್ಲಿ ಮತ್ತೆ ಯುದ್ಧದ ಮೋಡ! ಇರಾನ್ ಬೆಂಬಲಿತ ನೆಲೆಗಳ ಮೇಲೆ ಭೀಕರ ವಾಯುದಾಳಿ
-
ರಾಜ್ಯ22 hours agoCongress ಹೈಕಮಾಂಡ್ಗೆ ಜಮೀರ್ ಅಹ್ಮದ್ ಕ್ಷಮೆ; ‘ನನ್ನ ವಿರುದ್ಧ ಪಿತೂರಿ ನಡೆದಿದೆ’
