ಸೋಶಿಯಲ್ ಮೀಡಿಯಾ
ಶ್ರೀಲಂಕಾದಲ್ಲಿ 6.2 ತೀವ್ರತೆಯ ಭೂಕಂಪ
ಶ್ರೀಲಂಕಾದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. 14-11-2023ರಂದು, 6.2, ತೀವ್ರತೆಯ ಭೂಕಂಪ 12:31:10 IST ಗಂಟೆಗೆ ಸಂಭವಿಸಿದೆ.
ಭೂಕಂಪದ ಲ್ಯಾಟ್: -2.96 & ಉದ್ದ: 86.54, ಆಳ: 10 ಕಿಮೀ , ಸ್ಥಳ: 1326 ಕಿಮೀ SE ಆಫ್ ಕೊಲಂಬೊ, ಶ್ರೀಲಂಕಾ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಎಕ್ಸ್ನಲ್ಲಿ ತಿಳಿಸಿದೆ. ಭೂಕಂಪದಿಂದ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಹೇಳಿದೆ.ಶ್ರೀಲಂಕಾದ ಆಗ್ನೇಯಕ್ಕೆ 800 ಕಿ.ಮೀ ದೂರದಲ್ಲಿ ಹಿಂದೂ ಮಹಾಸಾಗರದಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಶ್ರೀಲಂಕಾಕ್ಕೆ ಯಾವುದೇ ಅಪಾಯವಿಲ್ಲ ಎಂದು ಭೂವೈಜ್ಞಾನಿಕ ಸಮೀಕ್ಷೆ ಮತ್ತು ಗಣಿ ಬ್ಯೂರೋ ತಿಳಿಸಿದೆ. ಸೋಮವಾರ ದಕ್ಷಿಣ ಸುಡಾನ್ ಮತ್ತು ಉಗಾಂಡಾ ನಡುವಿನ ಗಡಿ ಭಾಗದಲ್ಲಿ 4.9 ತೀವ್ರತೆ ಭೂಕಂಪ ಸಂಭವಿಸಿದೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ.
ದೇಶ
Nepal flood ಮರಿಗಳನ್ನು ಬಿಟ್ಟು ಕದಲಲಿಲ್ಲ! ಪ್ರವಾಹದ ಮಧ್ಯೆ ಆನೆಗಳ ವಾತ್ಸಲ್ಯದ ದೃಶ್ಯ ವೈರಲ್
ಬಹ್ರೈಚ್: Nepal flood ದಲ್ಲಿ ಉಂಟಾದ ಭೀಕರ ಜಲಪ್ರಳಯದ ರಭಸಕ್ಕೆ ಸಿಲುಕಿದ್ದ 5 ಕಾಡಾನೆಗಳ ಹಿಂಡು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕಟರ್ನಿಯಾಘಾಟ್ ಬಳಿಯ ಗಿರ್ಜಾಪುರಿ ಬ್ಯಾರೇಜ್ ಸಮೀಪ ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದಿದೆ. ಆಗಸ್ಟ್ 25ರಂದು ನಡೆದ ಈ ಘಟನೆಯಲ್ಲಿ ಮೂರು ವಯಸ್ಕ ಆನೆಗಳು ಹಾಗೂ ಎರಡು ಮರಿಗಳು ಪ್ರವಾಹದ ಸುಳಿಗೆ ಸಿಲುಕಿದ್ದವು.
ಕೌಡಿಯಾಲ ನದಿಯಲ್ಲಿ ನೀರಿನ ಹರಿವು ಏಕಾಏಕಿ ಹೆಚ್ಚಾದ ಹಿನ್ನೆಲೆಯಲ್ಲಿ ಆನೆಗಳ ಹಿಂಡು ಸಂಕಷ್ಟಕ್ಕೆ ಸಿಲುಕಿತ್ತು. ನೀರಿನ ರಭಸ ಹೆಚ್ಚಿದ್ದರಿಂದ ಆನೆ ಮರಿಗಳಿಗೆ ತೇಲುವುದು ಕಷ್ಟವಾಗಿತ್ತು. ಈ ವೇಳೆ ವಯಸ್ಕ ಆನೆಗಳು ಮರಿಗಳನ್ನು ಸುತ್ತುವರಿದು ನಿಂತು, ಅವುಗಳನ್ನು ಪ್ರವಾಹದ ರಭಸದಿಂದ ರಕ್ಷಿಸಲು ಪ್ರಯತ್ನಿಸಿರುವುದು ಗಮನ ಸೆಳೆದಿದೆ.
ಮರಿಗಳನ್ನು ಬಿಟ್ಟು ಕದಲದ ದೊಡ್ಡ ಆನೆಗಳು
ಪ್ರವಾಹದ ನೀರು ಅಪಾಯಕಾರಿಯಾಗಿ ಹರಿಯುತ್ತಿದ್ದರೂ ವಯಸ್ಕ ಆನೆಗಳು ಮರಿಗಳನ್ನು ಏಕಾಂಗಿಯಾಗಿ ಬಿಡಲಿಲ್ಲ. ಅವುಗಳ ಸುತ್ತಲೂ ನಿಂತು ಮರಿಗಳಿಗೆ ರಕ್ಷಣೆ ನೀಡುವ ಮೂಲಕ ಸುರಕ್ಷಿತವಾಗಿ ದಡ ಸೇರುವಂತೆ ನೆರವಾದವು.
ಈ ದೃಶ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಗಮನಕ್ಕೂ ಬಂದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.
ಬ್ಯಾರೇಜ್ ಗೇಟ್ಗಳನ್ನು ಬಂದ್ ಮಾಡಿದ ಅಧಿಕಾರಿಗಳು
ಆನೆಗಳ ಹಿಂಡು ಅಪಾಯದಲ್ಲಿರುವುದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಬಳಿಕ ಗಿರ್ಜಾಪುರಿ ಬ್ಯಾರೇಜ್ನ ಗೇಟ್ಗಳನ್ನು ಮುಚ್ಚಲಾಗಿದ್ದು, ನೀರಿನ ಹರಿವಿನ ವೇಗವನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ನೀರಿನ ರಭಸ ಕಡಿಮೆಯಾದ ಬಳಿಕ ವಯಸ್ಕ ಆನೆಗಳು ಚೇತರಿಸಿಕೊಂಡಿವೆ. ನಂತರ ಅವು ಎರಡು ಆನೆ ಮರಿಗಳನ್ನು ಸುರಕ್ಷಿತವಾಗಿ ದಂಡೆಯತ್ತ ಕರೆದೊಯ್ದಿವೆ.
ಸುರಕ್ಷಿತವಾಗಿ ಕಾಡಿಗೆ ಮರಳಿದ ಆನೆಗಳು
ಆನೆಗಳ ಹಿಂಡು ದಡ ತಲುಪಿದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅವುಗಳನ್ನು ಬ್ಯಾರೇಜ್ ಪ್ರದೇಶದಿಂದ ದೂರಕ್ಕೆ ಕಳುಹಿಸಿ ಸುರಕ್ಷಿತವಾಗಿ ಕಾಡಿನತ್ತ ಸಾಗುವಂತೆ ಮಾಡಿದ್ದಾರೆ.
ಆಪತ್ತಿನ ಸಮಯದಲ್ಲೂ ಮರಿಗಳನ್ನು ಬಿಟ್ಟು ಹೋಗದೆ ಅವುಗಳನ್ನು ಸುತ್ತುವರಿದು ರಕ್ಷಿಸಿದ ಆನೆಗಳ ವರ್ತನೆ ಸಾರ್ವಜನಿಕರ ಗಮನ ಸೆಳೆದಿದೆ. ಮತ್ತೊಂದೆಡೆ, ಪರಿಸ್ಥಿತಿಯನ್ನು ತ್ವರಿತವಾಗಿ ಅರಿತು ನೀರಾವರಿ ಇಲಾಖೆಯ ಸಹಕಾರದೊಂದಿಗೆ ಬ್ಯಾರೇಜ್ ಗೇಟ್ಗಳನ್ನು ಬಂದ್ ಮಾಡಿ ಆನೆಗಳ ಜೀವ ಉಳಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ ಸಮಯಪ್ರಜ್ಞೆಗೂ ಮೆಚ್ಚುಗೆ ವ್ಯಕ್ತವಾಗಿದೆ.
ದೇಶ
Kriti Sanon ಉಡುಗೆ ವಿವಾದಕ್ಕೆ Kangana Ranaut ಮತ್ತೆ ಪ್ರತಿಕ್ರಿಯೆ; “ಅವರಿಗೆ ಇಷ್ಟ ಬಂದದ್ದನ್ನು ಧರಿಸಲು ಯಾರು ತಡೆದಿದ್ದಾರೆ?”
ಮುಂಬೈ: ರಕ್ಷಾಬಂಧನದ ಜಾಹೀರಾತಿನಲ್ಲಿ ನಟಿ Kriti Sanon ಧರಿಸಿದ್ದ ಉಡುಗೆ ಕುರಿತು ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ Kangana Ranaut ಮಾಡಿದ್ದ ಟೀಕೆ ಇದೀಗ ಮತ್ತೊಮ್ಮೆ ಚರ್ಚೆಗೆ ಬಂದಿದೆ. ವಿವಾದದ ಬೆನ್ನಲ್ಲೇ ಕಂಗನಾ, “ಅವರಿಗೆ ಇಷ್ಟ ಬಂದದ್ದನ್ನು ಧರಿಸಲು ಯಾರು ತಡೆದಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.
ಸುದೀರ್ ಚೌಧರಿ ಅವರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಕಂಗನಾ, ಚಿತ್ರಗಳಲ್ಲಿ ಕೃತಿ ಸನೋನ್ ಯಾವ ರೀತಿಯ ಉಡುಪು ಧರಿಸುತ್ತಾರೋ ಅದನ್ನು ಯಾರೂ ಪ್ರಶ್ನಿಸುವುದಿಲ್ಲ. ಹೀಗಿರುವಾಗ ತಮ್ಮ ಇಷ್ಟದ ಉಡುಪನ್ನು ಧರಿಸುವುದನ್ನು ಯಾರು ತಡೆಯುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಅದೇ ವೇಳೆ, “ರಕ್ಷಾ ಬಂಧನದಂದು ಮಹಿಳೆ ತಾನು ಇಷ್ಟಪಟ್ಟ ಯಾವುದೇ ಉಡುಪನ್ನು ಧರಿಸಬಹುದು” ಎಂದೂ ಕಂಗನಾ ಹೇಳಿದ್ದಾರೆ.
ಕೃತಿ ಸನೋನ್ ಉಡುಗೆ ಬಗ್ಗೆ ಕಂಗನಾ ಟೀಕೆ
ರಕ್ಷಾಬಂಧನದ ಹಿನ್ನೆಲೆಯಲ್ಲಿ ತಯಾರಿಸಲಾಗಿದ್ದ ಆಭರಣದ ಜಾಹೀರಾತಿನಲ್ಲಿ ಕೃತಿ ಸನೋನ್ ಬ್ರಾಲೆಟ್ ಮಾದರಿಯ ಬ್ಲೌಸ್, ಕೇಪ್ ಮತ್ತು ಸ್ಕರ್ಟ್ ರೀತಿಯ ಉಡುಪಿನಲ್ಲಿ ಕಾಣಿಸಿಕೊಂಡಿದ್ದರು. ಸಾಂಪ್ರದಾಯಿಕ ಹಬ್ಬದ ಸಂದರ್ಭದಲ್ಲಿ ಇಂತಹ ಆಧುನಿಕ ಉಡುಗೆ ಬಳಸಿರುವುದಕ್ಕೆ ಸಾಮಾಜಿಕ ಜಾಲತಾಣದ ಒಂದು ವರ್ಗದವರು ಆಕ್ಷೇಪ ವ್ಯಕ್ತಪಡಿಸಿದ್ದರು.
ಇದಾದ ಬಳಿಕ ಕಂಗನಾ ರಣಾವತ್ ಕೂಡ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಕೃತಿ ಸನೋನ್ ಅವರ ಉಡುಪನ್ನು ಟೀಕಿಸಿದ್ದರು. ಮಹಿಳೆಯರ ಬಳಿ ವಿವಿಧ ರೀತಿಯ ಉಡುಪುಗಳ ಆಯ್ಕೆಗಳಿರುವಾಗ, ಸಹೋದರನಿಗೆ ರಾಖಿ ಕಟ್ಟುವ ಸಂದರ್ಭದಲ್ಲಿ ಇಂತಹ ಉಡುಪು ಧರಿಸುವ ಅಗತ್ಯವೇನು ಎಂದು ಅವರು ಪ್ರಶ್ನಿಸಿದ್ದರು.
ಕಂಗನಾ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು.
ಕಂಗನಾಗೆ ಕೃತಿ ಸನೋನ್ ತಿರುಗೇಟು
ಕಂಗನಾ ಅವರ ಟೀಕೆಗೆ ಕೃತಿ ಸನೋನ್ ಕೂಡ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ್ದರು. ಹಬ್ಬದ ನಿಜವಾದ ಅರ್ಥವನ್ನು ಧರಿಸುವ ಉಡುಪಿನಿಂದ ಅಳೆಯಬಾರದು. ಬದಲಾಗಿ, ಸಂಪ್ರದಾಯದ ಬಗ್ಗೆ ವ್ಯಕ್ತಿಯಲ್ಲಿರುವ ಭಾವನೆ ಮತ್ತು ಗೌರವ ಮುಖ್ಯ ಎಂದು ಅವರು ಹೇಳಿದ್ದಾರೆ.
ಮಹಿಳೆಯರು ಯಾವ ಉಡುಪು ಧರಿಸಬೇಕು ಎಂದು ನಿರಂತರವಾಗಿ ಹೇಳುವುದನ್ನು ಸಮಾಜ ಯಾವಾಗ ನಿಲ್ಲಿಸುತ್ತದೆ ಎಂದು ಕೃತಿ ಪ್ರಶ್ನಿಸಿದ್ದರು. ಕಾಲಕ್ಕೆ ತಕ್ಕಂತೆ ಸಾಂಪ್ರದಾಯಿಕ ಉಡುಪುಗಳ ಶೈಲಿಯೂ ಬದಲಾಗುತ್ತಿದೆ. ಆದರೆ ಮಹಿಳೆಯೊಬ್ಬಳ ಸಂಸ್ಕೃತಿ ಮತ್ತು ಗೌರವವನ್ನು ಕೇವಲ ಆಕೆಯ ಉಡುಪಿನಿಂದ ಅಳೆಯುತ್ತಿರುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದರು.
ಸಂಸ್ಕೃತಿ ಮತ್ತು ಸಂಪ್ರದಾಯಗಳು ಹೃದಯದಲ್ಲಿರುತ್ತವೆ, ಕೇವಲ ಉಡುಪಿನ ಕಂಠಭಾಗದಲ್ಲಿ ಅಲ್ಲ ಎಂಬ ಅರ್ಥದಲ್ಲಿ ಕೃತಿ ಸನೋನ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದರು.
ವಿವಾದದ ಬೆನ್ನಲ್ಲೇ ಜಾಹೀರಾತು ಹಿಂಪಡೆದ ಬ್ರ್ಯಾಂಡ್
ಕೃತಿ ಸನೋನ್ ಕಾಣಿಸಿಕೊಂಡಿದ್ದ ರಕ್ಷಾಬಂಧನದ ಜಾಹೀರಾತು ಕುರಿತು ವಿವಾದ ಹೆಚ್ಚಾದ ಬೆನ್ನಲ್ಲೇ ಅದನ್ನು ಪ್ರಸಾರದಿಂದ ಹಿಂಪಡೆಯಲಾಗಿದೆ. ಜಾಹೀರಾತಿನಿಂದ ಸಮಾಜದ ಯಾವುದಾದರೂ ವರ್ಗದ ಭಾವನೆಗಳಿಗೆ ನೋವಾಗಿದ್ದರೆ ಅದು ತಮ್ಮ ಉದ್ದೇಶವಾಗಿರಲಿಲ್ಲ ಎಂದು ಆಭರಣ ಬ್ರ್ಯಾಂಡ್ ಸ್ಪಷ್ಟಪಡಿಸಿದೆ.
ಭಾರತೀಯ ಸಂಸ್ಕೃತಿ, ಸಂಪ್ರದಾಯ ಮತ್ತು ಹಬ್ಬಗಳ ಬಗ್ಗೆ ತಮಗೆ ಅಪಾರ ಗೌರವವಿದೆ ಎಂದು ತಿಳಿಸಿರುವ ಬ್ರ್ಯಾಂಡ್, ಕುಟುಂಬದೊಂದಿಗೆ ಹಬ್ಬವನ್ನು ಆಚರಿಸುವ ಉದ್ದೇಶದಿಂದ ಜಾಹೀರಾತು ರೂಪಿಸಲಾಗಿತ್ತು ಎಂದು ಹೇಳಿದೆ. ವಿವಾದದ ಹಿನ್ನೆಲೆಯಲ್ಲಿ ಜಾಹೀರಾತನ್ನು ಎಲ್ಲ ಮಾಧ್ಯಮಗಳಿಂದ ಹಿಂಪಡೆಯಲಾಗಿದೆ ಎಂದು ತಿಳಿಸಿದೆ.
ಕಂಗನಾ-ಕೃತಿ ಮಾತಿನ ಸಮರ ಮುಂದುವರಿಕೆ
ಈ ಬೆಳವಣಿಗೆಗಳ ನಡುವೆ ಕಂಗನಾ ರಣಾವತ್ ಮತ್ತು ಕೃತಿ ಸನೋನ್ ನಡುವಿನ ಹೇಳಿಕೆ-ಪ್ರತಿಹೇಳಿಕೆ ಇದೀಗ ಮತ್ತಷ್ಟು ಗಮನ ಸೆಳೆದಿದೆ. ಮಹಿಳೆಯರ ಉಡುಪು ಆಯ್ಕೆ, ಹಬ್ಬದ ಸಂದರ್ಭದ ವಸ್ತ್ರಧಾರಣೆ ಹಾಗೂ ವೈಯಕ್ತಿಕ ಸ್ವಾತಂತ್ರ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ಮುಂದುವರಿದಿದೆ.
ರಾಜ್ಯ
Social Media ದಲ್ಲಿ ಸುಳ್ಳು ಸುದ್ದಿ ಹರಡಿಸಿದ್ರೆ ಹುಷಾರ್; ಚಾಮರಾಜನಗರ ಪೊಲೀಸರಿಂದ ಖಡಕ್ ಎಚ್ಚರಿಕೆ
ಚಾಮರಾಜನಗರ:Social Media ಗಳಲ್ಲಿ ಸುಳ್ಳು ಸುದ್ದಿ ಹಾಗೂ ಪ್ರಚೋದನಕಾರಿ ಪೋಸ್ಟ್ಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ಎಚ್ಚರಿಕೆ ನೀಡಿದ್ದಾರೆ.
ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಹೊಳೆಮುರಿದಟ್ಟಿ ಹಾಗೂ ಕರಿಕಲ್ಲು ಗುಡ್ಡದಲ್ಲಿ ಆ.15ರಂದು ನಡೆದ ಶೂಟ್ಔಟ್ ಪ್ರಕರಣದ ಹಿನ್ನೆಲೆಯಲ್ಲಿ ಹನೂರಿನಲ್ಲಿ ಮಾತನಾಡಿದ ಅವರು, ಘಟನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವುದನ್ನು ಪೊಲೀಸರು ಗಮನಿಸಿದ್ದಾರೆ ಎಂದು ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಈಗಾಗಲೇ ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ಇರಿಸಿದೆ. ಸುಳ್ಳು ಸುದ್ದಿ ಹರಡುವುದು, ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಮಾಹಿತಿಯನ್ನು ಪ್ರಸಾರ ಮಾಡುವವರ ವಿರುದ್ಧ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಮುತ್ತುರಾಜ್ ಸ್ಪಷ್ಟಪಡಿಸಿದ್ದಾರೆ.
ವಾಟ್ಸಪ್ ಗ್ರೂಪ್ಗಳ ಮೇಲೂ ನಿಗಾ
‘ಟೈಗರ್ ಆಫ್ ಜಸ್ಟಿಸ್’ ಹೆಸರಿನ ವಾಟ್ಸಪ್ ಗ್ರೂಪ್ ಸೇರಿದಂತೆ ಕೆಲವು ಸಾಮಾಜಿಕ ಜಾಲತಾಣಗಳ ಗ್ರೂಪ್ಗಳಲ್ಲಿ ನಡೆಯುತ್ತಿರುವ ಚರ್ಚೆಗಳು ಪೊಲೀಸರ ಗಮನಕ್ಕೆ ಬಂದಿವೆ. ಈ ಗ್ರೂಪ್ಗಳಲ್ಲಿನ ಚರ್ಚೆಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದರ ಜೊತೆಗೆ, “ಕರ್ನಾಟಕ ಸರ್ಕಾರ ತಮಿಳರನ್ನು ನಿರ್ಲಕ್ಷ್ಯ ಮಾಡುತ್ತಿದೆ” ಎಂಬ ರೀತಿಯ ಆಡಿಯೋ ಸಂದೇಶಗಳು ಕೆಲವು ಗ್ರೂಪ್ಗಳಲ್ಲಿ ಹರಿದಾಡುತ್ತಿರುವ ಮಾಹಿತಿಯೂ ಪೊಲೀಸರ ಗಮನಕ್ಕೆ ಬಂದಿದೆ.
ಎರಡು ಸಮುದಾಯಗಳ ನಡುವೆ ದ್ವೇಷ ಹುಟ್ಟುಹಾಕುವ ಉದ್ದೇಶದಿಂದ ಯಾವುದೇ ಸಂದೇಶ, ಆಡಿಯೋ ಅಥವಾ ಪೋಸ್ಟ್ ಹಂಚಿಕೊಂಡರೂ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಇಂತಹ ಕೃತ್ಯಗಳಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.
ಗೋವಿಂದರಾಜು ಬಂಧನಕ್ಕೆ ವಿಶೇಷ ತಂಡ
ಶೂಟ್ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಅಲಿಯಾಸ್ ಗೋವಿಂದರಾಜು ಎಂಬಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ.
ಆತನ ಬಂಧನಕ್ಕಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಶೋಧ ಕಾರ್ಯವನ್ನು ಚುರುಕುಗೊಳಿಸಲಾಗಿದೆ. ಗೋವಿಂದರಾಜು ಬಂಧನದ ಬಳಿಕ ಪ್ರಕರಣದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸಿಐಡಿ ತನಿಖೆಗೆ ನಾಲ್ಕು ಪ್ರಕರಣ
ಶೂಟ್ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ಕು ಪ್ರಕರಣಗಳನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ ಅವರು ಸಿಐಡಿ ತನಿಖೆಗೆ ವಹಿಸಿದ್ದಾರೆ.
ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಸಂಗ್ರಹಿಸಿರುವ ದಾಖಲೆಗಳು ಹಾಗೂ ಮಾಹಿತಿಯನ್ನು ಸಿಐಡಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು. ಮುಂದಿನ ತನಿಖೆಯನ್ನು ಸಿಐಡಿ ಅಧಿಕಾರಿಗಳು ಕೈಗೊಳ್ಳಲಿದ್ದಾರೆ ಎಂದು ಎಸ್ಪಿ ಮುತ್ತುರಾಜ್ ತಿಳಿಸಿದ್ದಾರೆ.
ಒಟ್ಟಿನಲ್ಲಿ, ಚಾಮರಾಜನಗರ ಶೂಟ್ಔಟ್ ಪ್ರಕರಣದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಗಳ ಮೇಲೆ ಪೊಲೀಸರು ತೀವ್ರ ನಿಗಾ ವಹಿಸಿದ್ದು, ಸುಳ್ಳು ಸುದ್ದಿ, ಪ್ರಚೋದನಕಾರಿ ಪೋಸ್ಟ್ ಹಾಗೂ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಸಂದೇಶಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
-
ಬೆಂಗಳೂರು22 ಗಂಟೆಗಳು agoLiver ಚಿಕಿತ್ಸೆಗೆ ಗುಡ್ ನ್ಯೂಸ್: ಹಲವು ತಜ್ಞರು ಒಂದೇ ಕಡೆ, ರೋಗಿಗಳಿಗೆ ಸುಲಭ ಚಿಕಿತ್ಸೆ
-
ಬೆಂಗಳೂರು3 ಗಂಟೆಗಳು agoMake My Propertyz ಟೈಟಲ್ ಸ್ಪಾನ್ಸರ್; ಮೋಹನ್, ಆಂಜನಪ್ಪ, ಹರೀಶ್, ಸಂತೋಷ್, ಗೌರೀಶ್, Hosa Suddi, ಶಿವಕುಮಾರ್ರಿಂದ ಕ್ರೀಡೆಗೆ ಬೆಂಬಲ!
-
ದೇಶ2 ಗಂಟೆಗಳು agoNepal Flood Horror: ಮಹಿಳೆಯ ಮೃತದೇಹದಿಂದ ಆಭರಣ ಕಳವು; ವೈರಲ್ ವಿಡಿಯೋ ಆಧರಿಸಿ ಇಬ್ಬರ ಬಂಧನ
-
ದೇಶ5 ಗಂಟೆಗಳು agoPM Narendra Modi Foreign Visit: ಮೋದಿ 4 ದಿನಗಳ ವಿದೇಶ ಪ್ರವಾಸ, ಎಸ್ಸಿಒ ಶೃಂಗಸಭೆಯಲ್ಲಿ ಭಾಗಿ
-
ದೇಶ2 ಗಂಟೆಗಳು agoKPSC Recruitment Scam: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಗಂಭೀರ ಆರೋಪ; ನೇಮಕಾತಿ ದಂಧೆ ಬಯಲು ಎಂದ ಕೇಂದ್ರ ಸಚಿವ
-
ದೇಶ5 ಗಂಟೆಗಳು agoNepal ಭೀಕರ ಪ್ರವಾಹ: ಸಾವಿನ ಸಂಖ್ಯೆ 469ಕ್ಕೆ ಏರಿಕೆ, ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆ!
-
ಸಿನಿಮಾ4 ಗಂಟೆಗಳು ago‘Toxic’ ವಿರುದ್ಧ ಮಾತನಾಡಿದವರಿಗೆ ಕಾನೂನು ನೋಟಿಸ್? ಚಿತ್ರತಂಡದ ನಡೆಗೆ ಕಾರಣವೇನು?
-
ದೇಶ5 ಗಂಟೆಗಳು agoMantralaya ದಲ್ಲಿ ಭಕ್ತಿಯ ವೈಭವ: ರಾಯರ ಆರಾಧನೆಗೆ ಚಾಲನೆ, ಆಗಸ್ಟ್ 31ಕ್ಕೆ ಮಹಾರಥೋತ್ಸವ
