ಕ್ರೀಡೆ
ಸಚಿನ್ ರೆಕಾರ್ಡ್ ಮುರಿದು ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
ಮುಂಬಯಿ : ಆಧನಿಕ ಕ್ರಿಕೆಟ್ನ ಸರ್ವಶ್ರೇಷ್ಠ ಬ್ಯಾಟರ್ ವಿರಾಟ್ ಕೊಹ್ಲಿ ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಶತಕಗಳ ದಾಖಲೆ ಮುರಿದ್ದಾರೆ. ಅವರೀಗ ಏಕ ದಿನ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಬಾರಿಸಿದ ಏಕೈಕ ಆಟಗಾರ ಎಂಬ ವಿಶ್ವ ದಾಖಲೆ ಬರೆದಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧದ ವಿಶ್ವ ಕಪ್ ಸೆಮಿ ಫೈನಲ್ ಪಂದ್ಯದಲ್ಲಿ ಅವರು ತಮ್ಮ 50ನೇ ಶತಕ ಬಾರಿಸಿದ್ದಾರೆ. ವಿಶ್ವ ಕಪ್ ಟೂರ್ನಿಯಲ್ಲೇ ಅವರು ಸಚಿನ್ ದಾಖಲೆಯ ಮುರಿದು ಗರಿಷ್ಠ ಏಕದಿನ ಶತಕಗಳ ದಾಖಲೆ ಬರೆದ ಅವರು ಇತಿಹಾಸದ ಪುಸ್ತಕದಲ್ಲಿ ತಮ್ಮ ಹೆಸರನ್ನು ಬರೆದರು. ವಿರಾಟ್ ಕೊಹ್ಲಿ ಹಾಲಿ ಅವೃತ್ತಿಯ ಲೀಗ್ ಹಂತದಲ್ಲಿ ಸಚಿನ್ ಅವರ 49ನೇ ಶತಕದ ದಾಖಲೆಯನ್ನು ಮುರಿದಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಆ ಶತಕ ಬಾರಿಸಿದ್ದರು. ಆ ಪಂದ್ಯ ಕೋಲ್ಕೊತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಮೈದಾನದಲ್ಲಿ ಆ ಪಂದ್ಯ ನಡೆದಿತ್ತು.
ಅಂದ ಹಾಗೆ ವಿರಾಟ್ ಕೊಹ್ಲಿ ಸಚಿನ್ ಅವರ ತವರು ಮೈದಾನ ಮುಂಂಬಯಿಯ ವಾಂಖೆಡೆಯಲ್ಲೇ ರೆಕಾರ್ಡ್ ಮುರಿದಿರುವುದು ಕಾಕತಾಳಿಯ. ಅಪ್ಪಟ ಕ್ರಿಕೆಟ್ ಪ್ರೇಮಿಗಳ ನಾಡು ಮುಂಬಯಿಯಲ್ಲಿ ದಾಖಲೆ ಮುರಿದಿರುವುದು ಇನ್ನೊಂದು ವಿಶೇಷ ಸಂಗತಿ. ದಾಖಲೆ ಮುರಿದ ತಕ್ಷಣ ವಿರಾಟ್ ಗ್ಯಾಲರಿಯಲ್ಲಿದ್ದ ಸಚಿನ್ ತೆಂಡೂಲ್ಕರ್ ಅವರಿಗೆ ತಲಬಾಗಿ ನಮಿಸಿದರು. ಇಡೀ ಮೈದಾನನವೇ ಅವರಿಗೆ ಎದ್ದು ನಿಂತು ಚಪ್ಪಾಳೆ ಹೊಡೆಯಿತು. ಪತ್ನಿ ಅನುಷ್ಕಾ ಫ್ಲೈಯಿಂಗ್ ಕಿಸ್ ಕೊಟ್ಟರು. ಫುಟ್ಬಾಲ್ ದಂತಕತೆ ಡೇವಿಡ್ ಬೇಕ್ಹಮ್ ಸೇರಿದಂತೆ ಎಲ್ಲರೂ ಶಹಬ್ಬಾಸ್ಗಿರಿಕೊಟ್ಟರು. ಭಾರತ ತಂಡ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat kohli) ಕ್ರಿಕೆಟ್ ದೇವರು ಸ ಚಿನ್ ತೆಂಡೂಲ್ಕರ್ ಅವರ ವಿಶ್ವ ಕಪ್ನಲ್ಲಿ ಸೃಷ್ಟಿಸಿದ್ದ ದಾಖಲೆಯೊಂದನ್ನು ಮುರಿದಿದ್ದಾರೆ. ಅವರೀಗ ವಿಶ್ವ ಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ 50 ಪ್ಲಸ್ ಸ್ಕೋರ್ ಬಾರಿಸಿದ ಆಟಗಾರ ಎಂಬ ಖ್ಯಾತಿ ಪಡೆದಿದ್ದಾರೆ. ಈ ಹಾದಿಯಲ್ಲಿ ಅವರು ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ ಎಂಬುದೇ ವಿಶೇಷ.
ನ್ಯೂಜಿಲ್ಯಾಂಡ್ ವಿರುದ್ಧದ ಸೆಮಿ ಫೈನಲ್ ಪಂದ್ಯದಲ್ಲಿ ಅವರು ಅರ್ಧ ಶತಕ ಬಾರಿಸಿದ ತಕ್ಷಣ ಅವರು ಈ ಸಾಧನೆ ಮಾಡಿದ್ದಾರೆ. ವಿರಾಟ್ ಕೊಹ್ಲಿ 2023ರ ವಿಶ್ವ ಕಪ್ನಲ್ಲಿ ಒಟ್ಟು 8 ಬಾರಿ 50 ಪ್ಲಸ್ ಸ್ಕೋರ್ ಬಾರಿಸಿದಂತಾಗಿದೆ. ಇದರೊಂದಿಗೆ ಅವರು ಏಳು ಫಿಪ್ಟಿ ಫ್ಲಸ್ ಸ್ಕೋರ್ ಬಾರಿಸಿದ ಸಚಿನ್ ಅವರು ದಾಖಲೆಯನ್ನು ಮುರಿದಿದ್ದಾರೆ. 2019ರ ವಿಶ್ವ ಕಪ್ನಲ್ಲಿ ಏಳು ಬಾರಿ ಫಿಫ್ಟಿ ಪ್ಲಸ್ ಸ್ಕೋರ್ ಮಾಡಿದ್ದರು. 2019ರಲ್ಲಿ ಆರು ಬಾರಿ ಫಿಫ್ಟಿ ಪ್ಲಸ್ ಸ್ಕೋರ್ ಬಾರಿಸಿದ ರೋಹಿತ್ ಶರ್ಮಾ, ಡೇವಿಡ್ ವಾರ್ನರ್ ನಂತರದ ಸ್ಥಾನದಲ್ಲಿದ್ದಾರೆ.
ಅರ್ಧ ಶತಕ ಬಾರಿಸಿದ ತಕ್ಷಣ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ಮುರಿದಿದ್ದಾರೆ. ವಿರಾಟ್ ಕೊಹ್ಲಿ ಅರ್ಧ ಶತಕ ಬಾರಿಸಿದ ತಕ್ಷಣ ರಿಕಿ ಪಾಂಟಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಬಾರಿಸಿದ್ದ ಫಿಫ್ಟಿ ಪ್ಲಸ್ ಸ್ಕೋರ್ ದಾಖಲೆಯನ್ನು ಮುರಿದಿದ್ದಾರೆ. 264 ಅರ್ಧ ಶತಕ ಬಾರಿಸಿರುವ ಸಚಿನ್ ತೆಂಡೂಲ್ಕರ್ ಈ ಪಟ್ಟಿಯಲ್ಲಿ ಮುಂಚೂಣಿ ಸ್ಥಾನದಲ್ಲಿದ್ದಾರೆ. 216 ಅರ್ಧ ಶತಕಗಳನ್ನು ಬಾರಿಸಿರುವ ಲಂಕಾದ ಕುಮಾರ ಸಂಗಕ್ಕಾರ ನಾಲ್ಕನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ 211 ಅರ್ಧ ಶತಕಗಳನ್ನು ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ.
ಕ್ರೀಡೆ
ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!
ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.
ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.
ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.
ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.
ಆರ್ಸಿಬಿ ಬ್ಯಾಟಿಂಗ್ ವಿವರ:
- ವಿರಾಟ್ ಕೊಹ್ಲಿ – 28 (18)
- ಫಿಲ್ ಸಾಲ್ಟ್ – 46 (30)
- ದೇವದತ್ತ ಪಡಿಕಲ್ – 50 (29)
- ರಜತ್ ಪಾಟೀದಾರ್ – 48* (19)
- ಟಿಮ್ ಡೇವಿಡ್ – 70* (25)
ಕ್ರೀಡೆ
ಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!
ಬೆಂಗಳೂರುದಲ್ಲಿ ಐಪಿಎಲ್ ಕ್ರೇಜ್ ಗರಿಷ್ಠ ಮಟ್ಟಕ್ಕೆ ಏರಿರುವ ನಡುವೆಯೇ, ಶಾಸಕರಿಗೆ ನೀಡಲಾದ ಉಚಿತ ಟಿಕೆಟ್ ಪಾಸ್ಗಳ ದುರ್ಬಳಕೆಯ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. Indian Premier League ಪಂದ್ಯಗಳಿಗೆ ಸಂಬಂಧಿಸಿದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.
ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಕೆಲವು ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Karnataka State Cricket Association ವಿಶೇಷ ಅಕ್ರೆಡೆಷನ್ ಕಾರ್ಡ್ ಮಾದರಿಯ ಪಾಸ್ಗಳನ್ನು ವಿತರಿಸಿತ್ತು.
ಆದರೆ, ಈ ಪಾಸ್ಗಳು ಈಗ ಶಾಸಕರ ಕುಟುಂಬದವರಿಗಷ್ಟೇ ಸೀಮಿತವಾಗದೆ, ಅವರ ಮಕ್ಕಳ ಸ್ನೇಹಿತರ ಕೈಗೆ ಸೇರಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸರು ತಪಾಸಣೆ ನಡೆಸಿದ ವೇಳೆ, ಶಾಸಕರ ಕುಟುಂಬದ ಹೆಸರಿನ ಪಾಸ್ ಹಿಡಿದು ಬಂದಿದ್ದ ಕೆಲ ಯುವಕರ ಮೇಲೆ ಅನುಮಾನ ಮೂಡಿದೆ.
ಪರಿಶೀಲನೆ ವೇಳೆ ಯುವಕರು ತಡಬಡಾಯಿಸಿದ್ದು, ಕೊನೆಯಲ್ಲಿ ತಾವು ಶಾಸಕರ ಮಗನ ಸ್ನೇಹಿತರು ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಈ ಘಟನೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಜನಪ್ರತಿನಿಧಿಗಳಿಗಾಗಿ ನೀಡಲಾದ ಸೌಲಭ್ಯವನ್ನು ಅನರ್ಹರು ಬಳಸುವುದು ಸರಿಯೇ? ಎಂಬ ಪ್ರಶ್ನೆ ಕೇಳಿಬರುತ್ತಿದೆ.
ಸಾಮಾನ್ಯ ಜನರು ಟಿಕೆಟ್ಗಾಗಿ ಪರದಾಡುತ್ತಿರುವಾಗ, ಉಚಿತ ಪಾಸ್ಗಳು ದುರ್ಬಳಕೆಯಾಗುತ್ತಿರುವುದು ಜನರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ KSCA ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ.
ಕ್ರೀಡೆ
ಗ್ಯಾಸ್ಗಾಗಿ ಜನ ಸಾಲು, ಟಿಕೆಟ್ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!
ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ನಡುವೆ, ಜನಪ್ರತಿನಿಧಿಗಳ ವರ್ತನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಆಟೋ ಚಾಲಕರು ಗ್ಯಾಸ್ಗಾಗಿ ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವಾಗ, ಇನ್ನೊಂದು ಕಡೆ ಶಾಸಕರು IPL 2026 ಟಿಕೆಟ್ ಪಡೆಯಲು ತಮ್ಮ ಪಿಎಗಳನ್ನು ಕ್ಯೂನಲ್ಲಿ ನಿಲ್ಲಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮಾಹಿತಿಯ ಪ್ರಕಾರ, ಸರ್ಕಾರ ಮತ್ತು Karnataka State Cricket Association (KSCA) ನಡುವೆ ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಕುರಿತು ಒಪ್ಪಂದವಾಗಿದೆ. ಇದರ ಹಿನ್ನೆಲೆಯಲ್ಲಿ, Royal Challengers Bengaluru ಮತ್ತು Chennai Super Kings ನಡುವಿನ ಪಂದ್ಯಕ್ಕೆ ಟಿಕೆಟ್ ಪಡೆಯಲು ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಗಮನ ಸೆಳೆದಿವೆ.
ಸ್ಪೀಕರ್ ಕಚೇರಿಯಲ್ಲೇ ಟಿಕೆಟ್ ವಿತರಣೆ ನಡೆಯುತ್ತಿರುವುದರಿಂದ, ಶಾಸಕರ ಸೂಚನೆ ಮೇರೆಗೆ ಪಿಎಗಳು ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಂತಿದ್ದಾರೆ ಎಂದು ತಿಳಿದುಬಂದಿದೆ.
ಇದರಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಗ್ಯಾಸ್ ಕೊರತೆ, ದೈನಂದಿನ ಸಮಸ್ಯೆಗಳ ನಡುವೆ ಈ ರೀತಿಯ ಘಟನೆಗಳು ಸಾರ್ವಜನಿಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿವೆ.
ರಾಜಕೀಯ ವಲಯದಲ್ಲಿಯೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
-
ದೇಶ7 hours ago“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
-
ದೇಶ6 hours agoಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್ಗಳಿಗೆ ಶಾಕ್
-
ದೇಶ5 hours agoಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ
-
ದೇಶ6 hours agoIndian Railways: ರೈಲಲ್ಲೇ ಮದುವೆ ಸಂಭ್ರಮ: Indian Railwaysನಲ್ಲಿ ಹೊಸ ಟ್ರೆಂಡ್!
-
ಕ್ರೀಡೆ3 hours agoಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!
-
ದೇಶ7 hours ago‘I Love My Daughter’ ಟೀ ಶರ್ಟ್ನಲ್ಲಿ ಸಂಭ್ರಮ: ವಿಚ್ಛೇದನಕ್ಕೆ ಹೊಸ ಅರ್ಥ ನೀಡಿದ ಕುಟುಂಬ
-
ದೇಶ6 hours agoಎನ್ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್
-
ದೇಶ6 hours agoಟ್ರಂಪ್ ದೇಶದಲ್ಲಿ ಭಾರತೀಯರ ಸದ್ದು: ಮೇಯರ್ ರೇಸ್ನಲ್ಲಿ ತಮಿಳುನಾಡಿನ ಕುವರಿ
