Connect with us

ಸುತ್ತ ಮುತ್ತ

ತುಳಸಿ ಹಬ್ಬದ ಮಹತ್ವ ಹಾಗೂ ಹಿನ್ನೆಲೆ

Published

on

ತುಳಸಿ ಹಬ್ಬದ ಮಹತ್ವ ಹಾಗೂ ಹಿನ್ನೆಲೆ

ಹಿಂದುಗಳು ಮನೆಗಳಲ್ಲಿ ಆಚರಿಸುವ ವರ್ಷದ ಕೊನೆ ಹಬ್ಬ. ತುಳಸೀಪೂಜೆ ಮಾಡಲು ಒಂದು ಕಾರಣ ಇದೆ. ತುಳಸಿ ವಿವಾಹದ ದಿನದ ಉಪವಾಸಕ್ಕೆ ವಿಶೇಷ ಮಹತ್ವವಿದೆ. ಈ ದಿನದಂದು ಉಪವಾಸ ಮಾಡುವುದರಿಂದ ಜನ್ಮ ಜನ್ಮದ ಪಾಪಗಳಿಂದ ಮುಕ್ತಿ ಸಿಗುತ್ತದೆ ಎನ್ನುವ ನಂಬಿಕೆಯಿದೆ. ಕಾರ್ತಿಕ ಮಾಸದ ದ್ವಾದಶಿ ತಿಥಿಯಂದು ಆಚರಿಸಲಾಗುವ ತುಳಸಿ ವಿವಾಹ ಹಬ್ಬವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ತುಳಸಿಯನ್ನು ವಿಷ್ಣುಪ್ರಿಯಾ ಎಂಬ ಹೆಸರಿನಿಂದಲೂ ಕರೆಯಲಾಗುತ್ತದೆ.ಜಲಂಧರ ಒಬ್ಬ ರಾಕ್ಷಸ ಆತನ ಪತ್ನಿ ವೃಂದ ಪತಿವೃತೆ ವಿಷ್ಣುವಿನ ಪರಮ ಭಕ್ತೆ. ಅವಳ ವಿಷ್ಣು ಭಕ್ತಿ ಜಲಂಧರನನ್ನು ಯುದ್ಧದಲ್ಲಿ ರಕ್ಷಿಸುತ್ತಿತು. ಒಮ್ಮೆ ದೇವತೆಗಳೊಂದಿಗೆ ಯುದ್ಧ ನಡೆದಾಗ ದೇವತೆಗಳು ಸೋಲುವರು ಎಂದು ತಿಳಿದು ವಿಷ್ಣುವಿನ ಬಳಿ ಬಂದು ಸಹಾಯ ಕೇಳುತ್ತಾರೆ. ಅವಳಿಗೆ ಸಹಾಯ ಮಾಡಲು ಒಪ್ಪಿದ ವಿಷ್ಣು ಜಲಂಧರನ ರೂಪದಲ್ಲಿ ವೃಂದಳ ಬಳಿ ಬರುತ್ತಾನೆ. ಈ ಸಂದರ್ಭದಲ್ಲಿ ವೃಂದ ಜಲಂಧರನಿಗೆ ನೀಡಿದ ಜಯದ ಸಂಕಲ್ಪವನ್ನು ಅಲ್ಲೇ ಬಿಟ್ಟು ಜಲಂಧರನ ಕಾಲು ಮುಟ್ಟಲು ಬಂದಾಗ ಅದು ಜಲಂಧರನಲ್ಲ ವಿಷ್ಣುವೆಂದು ತಿಳಿದು ಸಾಲಿಗ್ರಾಮವಾಗು ಎಂದು ಶಾಪ ನೀಡುತ್ತಾಳೆ. ನಂತರ ತನ್ನ ತಪ್ಪಿನ ಅರಿವಾಗಿ ಕ್ಷಮೆ ಕೇಳಲು ವಿಷ್ಣು ಆಕೆಗೆ ತುಳಸಿಯಾಗಲು ವರನೀಡುತ್ತಾನೆ. ಹಾಗೂ ಅದೇ ಸಾಲಿಗ್ರಾಮದೊಂದಿಗೆ ವಿವಾಹವಾಗುವುದಾಗಿ ವರನೀಡುತ್ತಾನೆ.ವಿಷ್ಣು ವೃಂದಾಳಿಗೆ ಪ್ರತಿ ವರ್ಷದ ಕೃಷ್ಣ ಏಕಾದಶಿ ದಿನ ಮದುವೆ ಆಗುವುದಾಗಿ ಮಾತು ಕೊಟ್ಟಿರುತ್ತಾರೆ. ಹಾಗಾಗಿ ಪ್ರತಿವರ್ಷ ತುಳಸಿ ಹಬ್ಬದ ದಿವಸ ವಿಷ್ಣು ಸಾಲಿಗ್ರಾಮವನ್ನಿಟ್ಟು ಪೂಜೆ ಮಾಡುತ್ತಾರೆ. ಸಾಮನ್ಯವಾಗಿ ಮನೆಯಲ್ಲಿ ಬೆಳೆಸುವ ಹಸಿರು ತುಳಸಿಯನ್ನು ಪೂಜೆ ಮಾಡುವುದರಿಂದ ಮನೆಯಲ್ಲಿ ಐಶ್ವರ್ಯ ಮತ್ತು ಸಂತೋಷ ದೊರೆಯುತ್ತದೆ ಎಂದು ಹೇಳುತ್ತಾರೆ.ದೀಪಾವಳಿಯಲ್ಲಿ ಪ್ರಾರಂಭವಾದ ಪೂಜೆ ಹನ್ನೆರೆಡು ದಿನಗಳ ಕಾಲ ನಡೆಯುತ್ತದೆ. ತುಳಸಿಕಟ್ಟೆಗೆ ಬಣ್ಣಗಳನ್ನು ಹಚ್ಚಿ ತಳಿರು ತೋರಣಗಳಿಂದ ಸುಂದರಗೊಳಿಸಿ ಕಟ್ಟೆಯ ಸುತ್ತ ದೀಪಗಳನ್ನಿಟ್ಟು ನೆಲ್ಲಿಯ ಗಿಡಗಳನ್ನು ನೆಟ್ಟು ಹೂಗಳಿಂದ ಅಲಂಕಾರ ಮಾಡಿ ಪೂಜೆಗೆ ಸಿದ್ಧಮಾಡಲಾಗುತ್ತದೆ. ದಿನ ಭಜನೆಗಳ ಮೂಲಕ ತುಳಸಿಗೆ ಸುತ್ತುಹಾಕುತ್ತಾರೆ. ಗೋವಿಂದ ಗೋವಿಂದ ರಾಮ ಗೋವಿಂದ ನಾರಾಯಣ , ಗೋವಿಂದ ಗೋಪಾಲ ಕೃಷ್ಣ ಗೋವಿಂದ ನಾರಾಯಣ ಎಂದು ಹೇಳುತ್ತಾ ತಾಳ ಹಾಕುತ್ತ ತುಳಸಿಗೆ ಸುತ್ತು ಬಂದು ನಮಸ್ಕಾರ ಮಾಡುತ್ತಾರೆ. ತುಳಸಿಗೆ ನೈವೇದ್ಯವಾಗಿ ಅವಲಕ್ಕಿ, ಬೆಲ್ಲ ಇಡಲಾಗುವುದು. ಇದು ಬಹಳ ವಿಶೇಷವೆಂದು ಹೇಳುತ್ತಾರೆ. ತುಳಸಿ ಪೂಜೆಯು ವಿಜೃಂಭಣೆಯಿಂದ ಮನೆಗಳಲ್ಲಿ , ದೇವಾಲಯಗಳಲ್ಲಿ ಮಾಡುತ್ತಾರೆ. ಈ ಪೂಜೆಗೆ ಹತ್ತಿಯ ಮಾಲೆ ಬಹಳ ವಿಶೇಷ. ಪೂಜೆಯ ವಿಧಿ ವಿಧಾನಗಳು ಬೇರೆಬೇರೆ ಊರುಗಳಲ್ಲಿ ಬೇರೆಬೇರೆ ಇವೆ. ಕೆಲವರು ಮಂಟಪದ ರೀತಿ ತುಳಸಿ ಕಟ್ಟೆ ಸುತ್ತ ಕಟ್ಟಿ ಅಲಂಕಾರ ಮಾಡುತ್ತಾರೆ. ಕೊನೆಯ ದಿನವಾದ ಉತ್ಥಾನ ದ್ವಾದೇಶಿಯಂದು ವಿಜೃಂಭಣೆಯಿಂದ ಈ ಪೂಜೆ ನಡೆಯುತ್ತದೆ. ದಕ್ಷಿಣ ಭಾರತದಲ್ಲಿ ಇದು ಬಹಳ ವಿಶೇಷ. ತುಳಸಿ ಪೂಜೆ ಮಾಡುವಾಗ ಉತ್ತರ ದಿಕ್ಕು ಅಥವಾ ಈಶಾನ್ಯದಲ್ಲಿ ಇಟ್ಟು ಪೂಜೆಮಾಡಬೇಕು. ಇದು ಬಹಳ ಒಳ್ಳೆಯದು ಅಲ್ಲದೆ ಒಣಗಿದ ತುಳಸಿಗಿಡವನ್ನು ಎಂದು ಇಡಬಾರದು. ತುಳಸಿಗಿಡದ ಸುತ್ತ ಮುಳ್ಳಿನಂತ ಗಿಡಗಳು ಬೆಳೆಯಬಾರದು. ಇದು ಮನೆಗೆ ಒಳ್ಳೆಯದಲ್ಲ. ಪ್ರಭು ಧಾಮದ ಸೌನ್ಜ ಎಂಬ ಹಳ್ಳಿ ಯಲ್ಲಿ ಮೂರುದಿನ ಅಂದರೆ ಏಕಾದಶಿಯಿಂದ ತ್ರಯೋದಶಿವರೆಗೆ ತುಳಸಿಪೂಜೆಯನ್ನು ವಿಭಿನ್ನ ರೀತಿ ಮಾಡುತ್ತಾರೆ. ಮೊದಲ ದಿನ ರಾಮಾಯಣ ಓದುತ್ತಾರೆ. ಎರಡನೇ ದಿನ ಶೋಭಾಯಾತ್ರ , ಮೂರನೇದಿನ ತಿಲಕೋತ್ಸವ ಮತ್ತು ವಿಷ್ಣು ಮತ್ತು ತುಳಸಿಯ ವಿವಾಹ ಮಹೋತ್ಸವ ನಡೆಯುತ್ತದೆ. ತುಳಸಿ ಹೆಣ್ಣಿನ ಮನೋ ಅಭಿಲಾಷೆಗಳನ್ನು ಪೂರ್ಣಗೊಳಿಸುತ್ತಾಳೆ ಎಂದು ಹಿರಿಯರು ಹೇಳುತ್ತಾರೆ. ಹಾಗಾಗಿ ತುಳಸಿ ಪೂಜೆ ಮಹಿಳೆಯರು ಮಾಡಿದರೆ ಬಹಳ ಒಳ್ಳೆಯದು ಎಂಬ ನಂಬಿಕೆ ಇದೆ.

Continue Reading

ದೇಶ

X ನಲ್ಲಿ ವೈರಲ್ ಆದ CA ಕಥೆ: ನಂಬಲೇಬೇಕಾ ಅಥವಾ ಕೇವಲ ಕಥೆಯಾ?

Published

on

By

ನವದೆಹಲಿ: ದೆಹಲಿಯ ಚಾರ್ಟರ್ಡ್ ಅಕೌಂಟೆಂಟ್ Nitin Kaushik ಅವರು ಹಂಚಿಕೊಂಡ ಒಂದು ವಿಚಿತ್ರ ಅನುಭವ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುಮಾರು ₹11 ಕೋಟಿಗೂ ಹೆಚ್ಚು ಆಸ್ತಿ ಹೊಂದಿರುವ ಗ್ರಾಹಕ ₹15,000 ರಿಯಾಯಿತಿ ಕೇಳಿದ ಘಟನೆ ನೆಟ್ಟಿಗರನ್ನು ಆಶ್ಚರ್ಯಕ್ಕೆ ಗುರಿಮಾಡಿದೆ.

ಸೋಶಿಯಲ್ ಮೀಡಿಯಾ ವೇದಿಕೆ X ನಲ್ಲಿ ಈ ಕಥೆಯನ್ನು ಹಂಚಿಕೊಂಡ ಕೌಶಿಕ್, ತನ್ನ ಬಳಿ ನೆಟ್‌ವರ್ತ್ ಪ್ರಮಾಣಪತ್ರಕ್ಕಾಗಿ ಬಂದ ‘ಹೈ ನೆಟ್ ವರ್ತ್ ಇಂಡಿವಿಜುವಲ್’ (HNI) ಬಗ್ಗೆ ವಿವರಿಸಿದ್ದಾರೆ. ಈ ವ್ಯಕ್ತಿಯ ಒಟ್ಟು ಆಸ್ತಿ ಮೌಲ್ಯ ₹11.4 ಕೋಟಿ ಎಂದು ಅಂದಾಜಿಸಲಾಗಿದ್ದು, ದೇಶದ ವಿವಿಧ ಭಾಗಗಳಲ್ಲಿ ಭೂಮಿ, ಸ್ಟಾರ್ಟ್‌ಅಪ್ ಹೂಡಿಕೆಗಳು ಹಾಗೂ ಹಲವು ಕಂಪನಿಗಳ ಪಾಲುದಾರಿಕೆಗಳಿಂದ ಸಂಪಾದನೆ ಮಾಡಿದ್ದಾನೆ ಎಂದು ಹೇಳಿದ್ದಾರೆ.

ಈ ಸೇವೆಗೆ ₹1 ಲಕ್ಷ ಶುಲ್ಕ ಕೇಳಿದಾಗ, ಗ್ರಾಹಕ ಡಿಸ್ಕೌಂಟ್ ಕೇಳಿ ಕೊನೆಗೆ ₹85,000 ಪಾವತಿಸಿದ್ದಾನೆ. “ಹೌದು, ಇಂತಹ ಕ್ಲೈಂಟ್‌ಗಳೂ ಇರುತ್ತಾರೆ” ಎಂದು ಕೌಶಿಕ್ ವ್ಯಂಗ್ಯವಾಗಿ ಹೇಳಿದ್ದಾರೆ.

ಈ ಪೋಸ್ಟ್ ವೈರಲ್ ಆದ ಬಳಿಕ, ಕೆಲವರು ಇದನ್ನು ಹಾಸ್ಯವಾಗಿ ತೆಗೆದುಕೊಂಡರೆ, ಇನ್ನೂ ಕೆಲವರು ಇದರ ನಿಜಾಸ್ತಿ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಕೆಲವು ಬಳಕೆದಾರರು ಈ ಕಥೆ ಕೇವಲ ಅತಿರಂಜಿತವಾಗಿದೆ ಎಂದು ಟೀಕಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕೌಶಿಕ್, ತಮ್ಮ ಕ್ಲೈಂಟ್ ಹಿಂದಿನ ವರ್ಷ ಕಡಿಮೆ ಆಸ್ತಿ ಹೊಂದಿದ್ದರಿಂದ ಕಡಿಮೆ ಶುಲ್ಕ ಪಾವತಿಸಿದ್ದ ಎಂದು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಆಸ್ತಿ ಹೆಚ್ಚಿಸಿಕೊಂಡ ಹಿನ್ನೆಲೆಯಲ್ಲಿ ಈ ಬಾರಿ ಪ್ರಮಾಣಪತ್ರ ಅಗತ್ಯವಾಯಿತು ಎಂದು ಹೇಳಿದ್ದಾರೆ.

(ಸೂಚನೆ: ಈ ವರದಿ ಸಾಮಾಜಿಕ ಜಾಲತಾಣದ ಮಾಹಿತಿಯನ್ನು ಆಧರಿಸಿದೆ. ಮಾಹಿತಿಯ ಸ್ವತಂತ್ರ ದೃಢೀಕರಣ ನಡೆದಿಲ್ಲ.)

Continue Reading

ದೇಶ

ಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ

Published

on

By

ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಕ್ಕೂ ಜಗಳ-ಕೇಸು ಸಾಮಾನ್ಯವಾಗಿರುವ ಸಂದರ್ಭದಲ್ಲೇ, ಬಿಹಾರದ ಒಂದು ಹಳ್ಳಿ ದೇಶಕ್ಕೆ ಮಾದರಿಯಾಗಿ ಹೊರಹೊಮ್ಮಿದೆ. ಕಲಿಯಾಚಕ್ ಗ್ರಾಮ ಕಳೆದ 118 ವರ್ಷಗಳಿಂದ ಯಾವುದೇ ಅಪರಾಧ ದಾಖಲಾಗದೇ ಶಾಂತಿಯುತ ಜೀವನ ನಡೆಸುತ್ತಿರುವುದು ವಿಶೇಷ.

ನಳಂದ ಜಿಲ್ಲೆಯ ಈ ಗ್ರಾಮದಲ್ಲಿ ಸ್ಥಾಪನೆಯಾದ ದಿನದಿಂದಲೂ ಗಂಭೀರ ಅಪರಾಧಗಳೇ ನಡೆದಿಲ್ಲ. ಅಷ್ಟೇ ಅಲ್ಲ, ಇಷ್ಟು ವರ್ಷಗಳಲ್ಲಿ ಪೊಲೀಸ್ ಸೈರನ್ ಕೂಡ ಕೇಳಿಸಿಲ್ಲ ಎಂಬುದು ಆಶ್ಚರ್ಯಕರ ಸಂಗತಿ. ಗ್ರಾಮದಲ್ಲಿ ಯಾವುದೇ ಸಣ್ಣಪುಟ್ಟ ವಿವಾದಗಳು ಉಂಟಾದರೂ, ಹಿರಿಯರು ಕೂತು ಸಮಸ್ಯೆಯನ್ನು ಪರಿಹರಿಸುತ್ತಾರೆ.

ಈ ಗ್ರಾಮ ಹಿಲ್ಸಾ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ. ಆದರೆ ಪೊಲೀಸ್ ದಾಖಲೆಗಳಲ್ಲಿ ಈ ಗ್ರಾಮದಿಂದ ಒಂದೇ ಒಂದು ದೂರು ಕೂಡ ಇಲ್ಲದಿರುವುದು ಅಧಿಕಾರಿಗಳನ್ನೇ ಅಚ್ಚರಿಗೊಳಿಸಿದೆ.

ಗ್ರಾಮದಲ್ಲಿ ಸುಮಾರು 60 ಕುಟುಂಬಗಳು, 500 ಜನರು ವಾಸಿಸುತ್ತಿದ್ದು, ವಿವಿಧ ಜಾತಿ-ವರ್ಗಗಳ ಜನರು ಸಹೋದರತ್ವದಿಂದ ಬದುಕುತ್ತಿದ್ದಾರೆ. “ಗ್ರಾಮದ ಸಮಸ್ಯೆಗಳನ್ನು ಗ್ರಾಮದಲ್ಲೇ ಬಗೆಹರಿಸಬೇಕು” ಎಂಬುದು ಇವರ ಮೂಲ ತತ್ವವಾಗಿದೆ.

ಈ ಶಾಂತಿಯುತ ವಾತಾವರಣಕ್ಕೆ ಪ್ರಮುಖ ಕಾರಣ ಮಾಜಿ ಪಂಚಾಯಿತಿ ಅಧ್ಯಕ್ಷ ಸಾಧು ಶರಣ್ ಸಿಂಗ್ ಅವರ ಮಾರ್ಗದರ್ಶನ. ಅವರ ಪ್ರಯತ್ನದಿಂದ ಈ ಗ್ರಾಮ ಮಾದರಿಯಾಗಿ ರೂಪುಗೊಂಡಿದೆ.

ಇಲ್ಲಿನ ಯುವಕರು ಕೆಟ್ಟ ಅಭ್ಯಾಸಗಳಿಂದ ದೂರವಿದ್ದು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳತ್ತ ಗಮನ ಹರಿಸುತ್ತಿದ್ದಾರೆ.

ಗಮನಿಸಿ: ಮೇಲಿನ ವಿವರಗಳು ಬಿಹಾರದ ಕಲಿಯಾಚಕ್ ಗ್ರಾಮದ ಕುರಿತು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಒದಗಿಸಿದ ಮಾಹಿತಿಯನ್ನು ಆಧರಿಸಿವೆ. ಇದು ಅಪರಾಧ ಮುಕ್ತ ಗ್ರಾಮವಾಗಿ ದೇಶದಲ್ಲಿ ವಿಶೇಷ ಮನ್ನಣೆಯನ್ನು ಗಳಿಸಿದೆ.

ಒಟ್ಟಿನಲ್ಲಿ, ಕಲಿಯಾಚಕ್ ಗ್ರಾಮವು ಒಗ್ಗಟ್ಟು, ಸಹೋದರತ್ವ ಮತ್ತು ಶಾಂತಿಯುತ ಬದುಕಿನ ನಿಜವಾದ ಮಾದರಿಯಾಗಿ ಇಡೀ ದೇಶಕ್ಕೆ ಪ್ರೇರಣೆಯಾಗಿದೆ.

Continue Reading

ದೇಶ

ಎನ್‌ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್

Published

on

By

ಮುಂಬೈನಲ್ಲಿ ನಡೆದ NMACC third anniversary ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಅವರು ತಮ್ಮ ವೈಭವಶಾಲಿ ಸೀರೆ ಲುಕ್ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ಸಾಂಪ್ರದಾಯಿಕತೆಗೆ ಪ್ರತೀಕವಾಗಿರುವ ಅವರ ಶೈಲಿ ಫ್ಯಾಷನ್ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ವಿಶೇಷ ಕಾರ್ಯಕ್ರಮಕ್ಕೆ ಪತಿ ಮುಕೇಶ್ ಅಂಬಾನಿ ಅವರೊಂದಿಗೆ ಆಗಮಿಸಿದ ನೀತಾ, ಐವರಿ-ಗೋಲ್ಡ್ ಕಾಂಜೀವರಂ ರೇಷ್ಮೆ ಸೀರೆಯನ್ನು ಧರಿಸಿದ್ದರು. ಹೊನ್ನಿನ ನೂಲುಗಳಿಂದ ನೇಯ್ದ ಈ ಸೀರೆಗೆ ಮರೂನ್ ಕೆಂಪು ಅಂಚು ಹೆಚ್ಚುವರಿ ಶೋಭೆ ನೀಡಿತು.

ಈ ಸೀರೆ ಕೈಮಗ್ಗದಲ್ಲಿ ಪರಿಣಿತ ಕಲಾವಿದ ಆರ್. ವರಧನ್ ಅವರ ಕೈಚಳಕದಿಂದ ಮೂಡಿಬಂದಿದ್ದು, ಇದನ್ನು ತಯಾರಿಸಲು ಸುಮಾರು ನಾಲ್ಕು ತಿಂಗಳು ಸಮಯ ತೆಗೆದುಕೊಂಡಿದೆ. ಜರಿ ಕಸೂತಿ ಮತ್ತು ನಯವಾದ ಮೇಲ್ಮೈ ಈ ಸೀರೆಗೆ ವಿಶೇಷ ಮೌಲ್ಯ ನೀಡಿದೆ.

ಆಭರಣಗಳ ವಿಷಯದಲ್ಲಿ ನೀತಾ ಅಂಬಾನಿ ಬರ್ಮಾ ರೂಬಿ ಅಲಂಕೃತ ಚಿನ್ನದ ಮಾವಿನ ಸರ ಹಾಗೂ ಬಸ್ರಾ ಮುತ್ತಿನ ಕರ್ಣಾಭರಣ ಧರಿಸಿ ಸಾಂಪ್ರದಾಯಿಕತೆಗೆ ಆಧುನಿಕ ಸ್ಪರ್ಶ ನೀಡಿದ್ದಾರೆ.

ಕಾರ್ಯಕ್ರಮದ ವೇಳೆ ಅವರು ಭಾರತೀಯ ಕಲೆ ಮತ್ತು ಸಂಸ್ಕೃತಿಯ ಮಹತ್ವವನ್ನು ಒತ್ತಿ ಹೇಳಿ, “ಸಂಖ್ಯೆ 3”ರ ಸಾಂಸ್ಕೃತಿಕ ಅರ್ಥವನ್ನು ತ್ರಿಮೂರ್ತಿ, ತ್ರಿದೇವಿ ಮತ್ತು ತ್ರಿವೇಣಿ ಸಂಗಮದ ಉದಾಹರಣೆಗಳ ಮೂಲಕ ವಿವರಿಸಿದರು.

ಈ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಭಾರತೀಯ ಹಸ್ತಕುಶಲತೆ ಮತ್ತು ಕಾಂಜೀವರಂ ಸೀರೆಗಳಿಗೆ ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

Trending