ಬಿಬಿಎಂಪಿ
ಲೋಕಸಭಾ ಚುನಾವಣೆ ಬಳಿಕವೇ ಬಿಬಿಎಂಪಿ ಚುನಾವಣೆ? ವಾರ್ಡ್ ಸಮಿತಿಗಳ ಕಥೆ ಏನು?
ಡಿಸೆಂಬರ್ ಒಳಗೆ ಬಿಬಿಎಂಪಿ ಚುನಾವಣೆ ನಡೆಯಬಹುದು ಅನ್ನೋ ನಿರೀಕ್ಷೆ ಹುಸಿಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಜನರು 2024ರ ಲೋಕಸಭಾ ಚುನಾವಣೆ ಮುಗಿದ ಬಳಿಕವೇ ಬಿಬಿಎಂಪಿ ಚುನಾವಣೆ ನಿರೀಕ್ಷೆ ಮಾಡಬಹುದು ಎನ್ನಲಾಗುತ್ತಿದೆ. ಹೀಗಾಗಿ, ಬೆಂಗಳೂರಿನ ಜನತೆ ತಮ್ಮ ಜನಪ್ರತಿನಿಧಿಗಳ ಬಳಿ ಅಹವಾಲು ಸಲ್ಲಿಸಲು ಇನ್ನಷ್ಟು ತಿಂಗಳು ಕಾಯೋದು ಅನಿವಾರ್ಯವಾಗಲಿದೆ. ಲೋಕಸಭಾ ಚುನಾವಣೆಯು 2024ರ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯಲಿದೆ. ಈ ಚುನಾವಣೆ ಬಳಿಕ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹಾಗೆ ನೋಡಿದರೆ ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲೇ ನಡೆಯಬೇಕಿದೆ. ಆದರೆ, ಈ ವಿಚಾರದಲ್ಲಿ ಯಾವುದೇ ರಾಜಕೀಯ ಪಕ್ಷಗಳಲ್ಲೂ ರಾಜಕೀಯ ಇಚ್ಛಾ ಶಕ್ತಿಯೇ ಕಂಡು ಬರುತ್ತಿಲ್ಲ. ಎಲ್ಲರೂ ಕೂಡಾ ಲೋಕಸಭಾ ಚುನಾವಣೆವರೆಗೂ ಕಾದು ನೋಡುವ ತಂತ್ರಕ್ಕೆ ಶರಣಾಗಿರೋದು ಕಂಡು ಬರ್ತಿದೆ. ಬಿಬಿಎಂಪಿ ಕೌನ್ಸಿಲ್ ಚುನಾವಣೆ ನಡೆಯೋದು ಬೆಂಗಳೂರು ನಗರದ ಜನತೆ ಪಾಲಿಗೆ ಅತ್ಯಂತ ಪ್ರಾಮುಖ್ಯತೆ ಪಡೆದಿದೆ. ಏಕೆಂದರೆ ಚುನಾವಣೆ ನಡೆದು ಜನಪ್ರತಿನಿಧಿಗಳ ನೇಮಕವಾದರೆ, ಜನರು ತಮ್ಮ ವಾರ್ಡ್ ಸಮಿತಿಗಳ ಮುಂದೆ ತಮ್ಮ ಅಹವಾಲುಗಳನ್ನು ಸಲ್ಲಿಸಲು ನೆರವಾಗುತ್ತದೆ. ವಾರ್ಡ್ ಮಟ್ಟದ ಸಮಿತಿಗಳು ತಿಂಗಳಿಗೆ ಒಮ್ಮೆಯಾದರೂ ಸಭೆ ನಡೆಸಿ ಜನರ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು ಅನುಕೂಲವಾಗುತ್ತದೆ. ಸ್ಧಳೀಯ ಮಟ್ಟದ ಸಮಸ್ಯೆಗಳು, ನಾಗರಿಕರ ದೂರುಗಳನ್ನು ಆಲಿಸಿ ಬಗೆಹರಿಸಲು ವಾರ್ಡ್ ಮಟ್ಟದ ಸಮಿತಿ ಸಭೆಗಳು ನಡೆಯೋದು ಅತ್ಯಗತ್ಯವಾಗಿದೆ. ಆದರೆ ಬಿಬಿಎಂಪಿಯಲ್ಲಿ ಜನ ಪ್ರತಿನಿಧಿಗಳೇ ಇಲ್ಲದ ಕಾರಣ ಜನರ ಅಹವಾಲು ಆಲಿಸುವವರೇ ಇಲ್ಲದಂತಾಗಿದೆ. ಕೆಲವರು ವಾರ್ಡ್ ಸಮಿತಿ ಸಭೆಯನ್ನು ಟೈಮ್ ವೇಸ್ಟ್ ಎಂದು ಭಾವಿಸುವ ಸನ್ನಿವೇಶವೂ ಇದೆ. ಈ ಸಭೆಯಿಂದ ಯಾವುದೇ ಪ್ರಯೋಜನವಿಲ್ಲ. ಸುಮ್ಮನೆ ಟೀ, ಕಾಫಿ ಕುಡಿದು, ಬಿಸ್ಕೇಟ್ ತಿನ್ನೋದಕ್ಕೆ ಸಭೆ ಸೀಮಿತ ಆಗುತ್ತೆ ಅನ್ನೋದು ಕೆಲವರ ಅಭಿಪ್ರಾಯ.
ಆದರೆ, ಬಿಬಿಎಂಪಿ, ಬಿಡಬ್ಲ್ಯೂಎಸ್ಎಸ್ಬಿ, ಬೆಸ್ಕಾಂ ಅಧಿಕಾರಿಗಳು, ಎಂಜಿನಿಯರ್ಗಳು ಹಾಗೂ ಪೊಲೀಸ್ ಇನ್ಸ್ಪೆಕ್ಟರ್ಗಳು ಭಾಗಿಯಾಗುವ ಈ ಸಭೆಯಲ್ಲಿ ವಾರ್ಡ್ ಮಟ್ಟದ ಸಮಸ್ಯೆಗಳನ್ನು ಸೂಕ್ತವಾಗಿ ನಿಭಾಯಿಸಲು ಹಾಗೂ ಪರಿಹರಿಸಲು ನೆರವಾಗಲಿದೆ ಅನ್ನೋದು ಹಲವರ ದೃಢ ನಿಲುವಾಗಿದೆ.
ಚುನಾವಣೆ
ಪೆರಂಬೂರ್ ಕಣಕ್ಕೆ ನಟ ವಿಜಯ್ ಎಂಟ್ರಿ: ತಮಿಳುನಾಡು ರಾಜಕೀಯದಲ್ಲಿ ಸಂಚಲನ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ನಟ Vijay ನೇತೃತ್ವದ Tamilaga Vettri Kazhagam (TVK) ಪಕ್ಷದ ರಾಜಕೀಯ ಪ್ರವೇಶ ರಾಜ್ಯ ರಾಜಕೀಯ ಸಮೀಕರಣಗಳಲ್ಲಿ ಭಾರೀ ಬದಲಾವಣೆ ತಂದಿದೆ. ವಿಶೇಷವಾಗಿ, ವಿಜಯ್ ಅವರು ಪೆರಂಬೂರ್ ವಿಧಾನಸಭಾ ಕ್ಷೇತ್ರವನ್ನು ತಮ್ಮ ಚೊಚ್ಚಲ ಚುನಾವಣಾ ಕಣವಾಗಿ ಆರಿಸಿಕೊಂಡಿರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ.
Perambur ಕ್ಷೇತ್ರವು ಸಾಂಪ್ರದಾಯಿಕವಾಗಿ ದ್ರಾವಿಡ ಪಕ್ಷಗಳ ಭದ್ರಕೋಟೆಯಾಗಿದ್ದರೂ, ಈ ಬಾರಿ ವಿಜಯ್ ಪ್ರವೇಶದಿಂದಾಗಿ ಹೈ-ಪ್ರೊಫೈಲ್ ಕಣವಾಗಿ ಪರಿಣಮಿಸಿದೆ. Dravida Munnetra Kazhagam (DMK) ಮತ್ತು All India Anna Dravida Munnetra Kazhagam (AIADMK) ಪಕ್ಷಗಳಿಗೆ ಇದು ಹೊಸ ಸವಾಲಾಗಿ ಪರಿಣಮಿಸಿದೆ.
ಈ ಕ್ಷೇತ್ರದಲ್ಲಿ ಡಿಎಂಕೆ ಒಂಬತ್ತು ಬಾರಿ ಗೆಲುವು ಸಾಧಿಸಿದ್ದು, ಸತ್ಯವಾಣಿ ಮುತ್ತು ಮತ್ತು ಪರಿಥಿ ಇಲಂವಝುತಿ ಅವರಂತಹ ನಾಯಕರಿಂದ ರಾಜಕೀಯ ಇತಿಹಾಸ ರೂಪುಗೊಂಡಿದೆ. 2016ರಲ್ಲಿ ಎಐಎಡಿಎಂಕೆ ಅಲ್ಪ ಅಂತರದಲ್ಲಿ ಗೆಲುವು ಸಾಧಿಸಿದರೂ, 2019ರ ಉಪಚುನಾವಣೆ ಮತ್ತು 2021ರ ಚುನಾವಣೆಯಲ್ಲಿ ಡಿಎಂಕೆ ಮತ್ತೆ ತನ್ನ ಪ್ರಾಬಲ್ಯವನ್ನು ಸ್ಥಾಪಿಸಿತ್ತು.
ಸುಮಾರು 2.22 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಪೆರಂಬೂರ್ ಕ್ಷೇತ್ರದಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿರುವುದು ಗಮನಾರ್ಹ. ಯುವಕರು ಮತ್ತು ಕಾರ್ಮಿಕ ವರ್ಗದ ಪ್ರಭಾವ ಹೆಚ್ಚಿರುವ ಈ ಪ್ರದೇಶದಲ್ಲಿ ಉದ್ಯೋಗ, ಹಣದುಬ್ಬರ ನಿಯಂತ್ರಣ, ವಸತಿ ಮತ್ತು ಮೂಲಸೌಕರ್ಯ ಪ್ರಮುಖ ಚುನಾವಣಾ ವಿಷಯಗಳಾಗಿವೆ.
ವಿಜಯ್ ಅವರ ಯುವಜನಪ್ರಿಯತೆ ಈ ಬಾರಿ ದ್ರಾವಿಡ ಪಕ್ಷಗಳ ದೀರ್ಘಕಾಲದ ಹಿಡಿತವನ್ನು ಸವಾಲು ಮಾಡಬಹುದು ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ. ಪೆರಂಬೂರ್ ಕಣ ಇದೀಗ ಸಾಮಾನ್ಯ ಚುನಾವಣೆ ಮಾತ್ರವಲ್ಲ, ಹೊಸ ರಾಜಕೀಯ ಶಕ್ತಿಯ ಪರೀಕ್ಷೆಯಾಗಿ ಪರಿಣಮಿಸಿದೆ.
ದೇಶ
ಬೆಂಗಳೂರು ದಕ್ಷಿಣ ಪಾಲಿಕೆಯಲ್ಲಿ ಪೌರಕಾರ್ಮಿಕರ ಆರೋಗ್ಯ ತಪಾಸಣೆ: ಮಧುಮೇಹ, ರಕ್ತದೊತ್ತಡ ಪ್ರಕರಣ ಹೆಚ್ಚಳ
ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಲ್ಲಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಗಳು ಹೆಚ್ಚಾಗಿ ಕಂಡುಬಂದಿರುವುದು ಆರೋಗ್ಯ ತಪಾಸಣೆಯಲ್ಲಿ ಬೆಳಕಿಗೆ ಬಂದಿದೆ. ಸ್ವಚ್ಛತಾ ಯೋಧರೆಂದು ಗುರುತಿಸಲಾದ ಪೌರಕಾರ್ಮಿಕರ ಆರೋಗ್ಯದ ಜವಾಬ್ದಾರಿಯನ್ನು ಪಾಲಿಕೆ ವಹಿಸಿಕೊಂಡಿದ್ದು, ನಿಯಮಿತ ಆರೋಗ್ಯ ತಪಾಸಣೆಗಳನ್ನು ನಡೆಸುತ್ತಿದೆ.
ದಕ್ಷಿಣ ಕಾರ್ಪೋರೇಷನ್ ವ್ಯಾಪ್ತಿಯ 25 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ 49 ನಮ್ಮ ಕ್ಲಿನಿಕ್ಗಳಲ್ಲಿ ಬುಧವಾರ ಸಮೂಹ ಆರೋಗ್ಯ ತಪಾಸಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
1,934 ಮಂದಿಗೆ ಆರೋಗ್ಯ ತಪಾಸಣೆ
ಒಟ್ಟು 1,934 ಪೌರಕಾರ್ಮಿಕರು ತಪಾಸಣೆಗೆ ಒಳಪಟ್ಟಿದ್ದು, ಈ ಪೈಕಿ 605 ಪುರುಷರು ಮತ್ತು 1,348 ಮಹಿಳೆಯರು ಸೇರಿದ್ದಾರೆ. ತಪಾಸಣಾ ಕಾರ್ಯಕ್ಕಾಗಿ 56 ವೈದ್ಯಾಧಿಕಾರಿಗಳು ಮತ್ತು 168 ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎಂದು ದಕ್ಷಿಣ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ತಿಳಿಸಿದ್ದಾರೆ.
ತಪಾಸಣೆಯಲ್ಲಿ ಪತ್ತೆಯಾದ ಕಾಯಿಲೆಗಳು
ಆರೋಗ್ಯ ತಪಾಸಣೆಯಲ್ಲಿ ಕಂಡುಬಂದ ಪ್ರಮುಖ ಸಮಸ್ಯೆಗಳ ವಿವರ ಹೀಗಿದೆ:
- ಮಧುಮೇಹ: 256 ಪ್ರಕರಣ
- ಅಧಿಕ ರಕ್ತದೊತ್ತಡ: 254 ಪ್ರಕರಣ
- ರಕ್ತಹೀನತೆ: 67 ಪ್ರಕರಣ
- ದಂತ ಸಮಸ್ಯೆ: 57 ಪ್ರಕರಣ
- ಜ್ವರ: 43 ಪ್ರಕರಣ
- ಕಣ್ಣಿನ ಸಮಸ್ಯೆ: 39 ಪ್ರಕರಣ
- ಶ್ರವಣ ಸಮಸ್ಯೆ: 16 ಪ್ರಕರಣ
- ಹೃದಯ ಸಮಸ್ಯೆ: 4 ಪ್ರಕರಣ
- ಜನರಲ್ ಓಪಿಡಿ: 1,198
- ಪೌರಕಾರ್ಮಿಕರ ಆರೋಗ್ಯದ ಮೇಲೆ ವಿಶೇಷ ಗಮನ
- ಪೌರಕಾರ್ಮಿಕರು ನಗರ ಸ್ವಚ್ಛತೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಹಿನ್ನೆಲೆ, ಅವರ ಆರೋಗ್ಯ ರಕ್ಷಣೆಗಾಗಿ ಪಾಲಿಕೆ ನಿರಂತರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಸೌಲಭ್ಯ ಒದಗಿಸುತ್ತಿದೆ. ಮಧುಮೇಹ ಮತ್ತು ರಕ್ತದೊತ್ತಡ ಪ್ರಕರಣಗಳು ಹೆಚ್ಚುತ್ತಿರುವುದು ಗಮನಾರ್ಹವಾಗಿದ್ದು, ಮುಂದಿನ ದಿನಗಳಲ್ಲಿ ವಿಶೇಷ ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಯೋಜನೆ ರೂಪಿಸಲಾಗುತ್ತಿದೆ.
ಬಿಬಿಎಂಪಿ
ಬಿಬಿಎಂಪಿ ಘನತ್ಯಾಜ್ಯ ಆಟೋ ಟಿಪ್ಪರ್ಗಳಿಗೆ ನೂತನ ಸಮಯ: ಈಗಿನಿಂದ ಬೆಳಿಗ್ಗೆ 5:30ಕ್ಕೆ ಸ್ಕ್ಯಾನಿಂಗ್ ಆರಂಭ
ಬೆಂಗಳೂರು: ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಿರ್ಧಾರ ಕೈಗೊಂಡಿದೆ. ನಗರದ ವಿವಿಧ ವಾರ್ಡ್ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಘನತ್ಯಾಜ್ಯ ಸಂಗ್ರಹಣೆಯ ಆಟೋ ಟಿಪ್ಪರ್ ವಾಹನಗಳ ಮಸ್ಟರಿಂಗ್ (ಹಾಜರಾತಿ ಸ್ಕ್ಯಾನಿಂಗ್) ಸಮಯವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಈ ಹೊಸ ವೇಳಾಪಟ್ಟಿ ಜಾರಿಗೆ ಬಂದಿದೆ.
ಈ ಮೊದಲು ಬೆಳಿಗ್ಗೆ 6:00 ರಿಂದ 7:30 ರವರೆಗೆ ನಡೆಯುತ್ತಿದ್ದ ಮಸ್ಟರಿಂಗ್ ಸಮಯವನ್ನು ಈಗ ಬೆಳಿಗ್ಗೆ 5:30 ರಿಂದ 6:30 ರವರೆಗೆ ಮುಂಚಿತಗೊಳಿಸಲಾಗಿದೆ.

🧹 ಬದಲಾವಣೆ ಉದ್ದೇಶ ಏನು?
- ನಿವಾಸಿಗಳು ತಮ್ಮ ತ್ಯಾಜ್ಯವನ್ನು ಕೆಲಸಕ್ಕೆ ಹೊರಡುವ ಮೊದಲು ನೀಡಲು ಅನುಕೂಲ.
- ಜನರ ದೈನಂದಿನ ಕಾರ್ಯವೈಖರಿಯೊಂದಿಗೆ ತ್ಯಾಜ್ಯ ಸಂಗ್ರಹಣೆ ಜೋಡಣೆ.
- ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದು ಕಪ್ಪು ಚುಕ್ಕಿ (Black Spot) ರೂಪುಗೊಳ್ಳುವಿಕೆ ತಡೆಯುವುದು.
🤝 ಸಾರ್ವಜನಿಕರ ಸಹಕಾರಕ್ಕೆ ಕರೆ:
ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ಅವರು ಈ ಹೊಸ ಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ನಗರದ ನಾಗರಿಕರಿಂದ ಸಹಕಾರ ಕೋರಿದ್ದಾರೆ.
-
ದೇಶ10 hours agoಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?
-
ಚುನಾವಣೆ20 hours ago“ನಾಲ್ಕು ಮದುವೆಗೆ ಬ್ರೇಕ್” – ಶಾ ಘೋಷಣೆ ಸಂಚಲನ
-
ಆರೋಗ್ಯ14 hours agoಮೂತ್ರಪಿಂಡದ ಕಲ್ಲು: ಮೂತ್ರಕೋಶದಲ್ಲಿ ಸಿಲುಕಿದರೆ ಏನಾಗುತ್ತದೆ?
-
ದೇಶ17 hours agoಪ್ರಚಾರ ವೇಳೆ ಕಾರು ತಡೆದು ಹಲ್ಲೆ: ತರೂರ್ ಬೆಂಗಾವಲು ಮೇಲೆ ದಾಂಧಲೆ
-
ದೇಶ16 hours agoಜಮೀರ್ ಅಹ್ಮದ್ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!
-
ದೇಶ12 hours agoಕಾಂಗ್ರೆಸ್ ಒಳಜಗಳ ಬಯಲು: ರಾಹುಲ್ ನಿಲುವಿಗೆ ಹಿರಿಯರ ವಿರೋಧ
-
ಚುನಾವಣೆ10 hours agoTN 2026 ಟೀಸರ್ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ
-
ದೇಶ12 hours agoಇರಾನ್-ಅಮೆರಿಕಾ ಮಾತುಕತೆ ವಿಫಲ: ಪಾಕಿಸ್ತಾನಕ್ಕೆ ಮುಖಭಂಗ!
