ರಾಜ್ಯ
Sandur ಗೆ ಮತ್ತೆ ಸಚಿವ ಸ್ಥಾನ ಸಿಗುತ್ತಾ? ಅನ್ನಪೂರ್ಣಗೆ ಒಲಿಯಲಿದೆಯೇ ಕಾಂಗ್ರೆಸ್ ಮಣೆ?
ಸಂಡೂರು: ವಿಜಯನಗರ ಜಿಲ್ಲೆಯ ಏಕೈಕ ಮಹಿಳಾ Sandur MLA Annapurna ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿದೆಯೇ ಎಂಬ ಚರ್ಚೆ ಇದೀಗ ರಾಜಕೀಯ ವಲಯದಲ್ಲಿ ಮುನ್ನೆಲೆಗೆ ಬಂದಿದೆ. ಮಾಜಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ಬಳಿಕ ತೆರವಾಗಿರುವ ಸಚಿವ ಸ್ಥಾನಕ್ಕೆ ಅನ್ನಪೂರ್ಣ ಅವರ ಹೆಸರು ಕೇಳಿಬರುತ್ತಿರುವುದು ಸಂಡೂರು ಕಾಂಗ್ರೆಸ್ ವಲಯದಲ್ಲಿ ಕುತೂಹಲ ಮೂಡಿಸಿದೆ.

ಅನ್ನಪೂರ್ಣ ಅವರು ಸಂಡೂರು ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ಅವರ ಪತಿ ಹಾಗೂ ಮಾಜಿ ಶಾಸಕ ಈ. ತುಕಾರಾಂ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಲುವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಉಪಚುನಾವಣೆ ನಡೆದಿತ್ತು.
ಸಂಡೂರಿಗೆ ಸಚಿವ ಸ್ಥಾನ ಹೊಸದಲ್ಲ
ಸಂಡೂರು ಕ್ಷೇತ್ರಕ್ಕೆ ಸಚಿವ ಸ್ಥಾನ ದೊರೆಯುತ್ತಿರುವುದು ಇದೇ ಮೊದಲೇನಲ್ಲ. ಕ್ಷೇತ್ರದಿಂದ ಸತತ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ದಿ. ಎಂ.ವೈ. ಘೋರ್ಪಡೆ ಅವರು ರಾಜ್ಯದ ಹಣಕಾಸು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಮೂರು ಅವಧಿ ಕಾರ್ಯನಿರ್ವಹಿಸಿದ್ದರು.
ಇದೇ ಕ್ಷೇತ್ರದಿಂದ ಆಯ್ಕೆಯಾಗಿದ್ದ ಸಂತೋಷ್ ಲಾಡ್ ಅವರು 2006-07ರ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದರು. 2018ರ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಈ. ತುಕಾರಾಮ್ ಅವರು ಅಲ್ಪಾವಧಿಗೆ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು.
ತುಕಾರಾಮ್ಗೆ ಕೈತಪ್ಪಿದ್ದ ಸಚಿವ ಸ್ಥಾನ
ಈ. ತುಕಾರಾಮ್ ಅವರು ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು. ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಸಲುವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಂಸದರಾದರು.
ಆ ಸಂದರ್ಭದಲ್ಲಿ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳಿದ್ದರೂ, ಕಾಂಗ್ರೆಸ್ ಹೈಕಮಾಂಡ್ ಹಾಗೂ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒತ್ತಾಸೆಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದರು ಎಂಬ ಮಾತು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿದೆ.
ನಂತರ ನಡೆದ ಸಂಡೂರು ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತುಕಾರಾಮ್ ಅವರ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಿತ್ತು. ಅವರು ಗೆಲುವು ಸಾಧಿಸಿ ವಿಧಾನಸಭೆ ಪ್ರವೇಶಿಸಿದ್ದರು.
ನಾಗೇಂದ್ರ ರಾಜೀನಾಮೆ ಬಳಿಕ ಹೆಚ್ಚಿದ ಚರ್ಚೆ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಒತ್ತಡ ಹೆಚ್ಚಾದ ಬಳಿಕ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ತೆರವಾಗಿರುವ ಸಚಿವ ಸ್ಥಾನ ಯಾರಿಗೆ ಸಿಗಲಿದೆ ಎಂಬ ಚರ್ಚೆ ಮತ್ತೆ ಗರಿಗೆದರಿದೆ.
ಇದರ ನಡುವೆ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಇಲ್ಲ ಎಂಬ ಪ್ರತಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಪುಟಕ್ಕೆ ಮಹಿಳೆಯೊಬ್ಬರನ್ನು ಸೇರಿಸುವ ಸಾಧ್ಯತೆಯ ಬಗ್ಗೆ ಸುಳಿವು ನೀಡಿದ್ದರು. ಇದರಿಂದ ಜಿಲ್ಲೆಯ ಏಕೈಕ ಮಹಿಳಾ ಶಾಸಕಿ ಅನ್ನಪೂರ್ಣ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಮತ್ತಷ್ಟು ಬಲವಾಗಿದೆ.
ಪಕ್ಷ ಸಂಘಟನೆಗೂ ಅನುಕೂಲ?
ಅನ್ನಪೂರ್ಣ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ಗೆ ರಾಜಕೀಯವಾಗಿ ಅನುಕೂಲವಾಗಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಂದಿಹಳ್ಳಿ ಎನ್.ಕೆ.ಎಸ್. ಮಂಜುನಾಥ ಅವರು, ಸಂಡೂರು ಕ್ಷೇತ್ರದ ಮೊದಲ ಹಾಗೂ ಜಿಲ್ಲೆಯ ಏಕೈಕ ಮಹಿಳಾ ಶಾಸಕಿ ಅನ್ನಪೂರ್ಣ ಅವರನ್ನು ಗುರುತಿಸಿ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಸದ್ಯ ಅನ್ನಪೂರ್ಣ ಅವರಿಗೆ ಸಚಿವ ಸ್ಥಾನ ಸಿಗುತ್ತದೆಯೇ ಎಂಬುದು ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವದ ನಿರ್ಧಾರವನ್ನು ಅವಲಂಬಿಸಿದೆ. ಆದರೆ ನಾಗೇಂದ್ರ ರಾಜೀನಾಮೆ ಬಳಿಕ ಸಂಡೂರು ಕ್ಷೇತ್ರದಲ್ಲಿ ಸಚಿವ ಸ್ಥಾನದ ಚರ್ಚೆ ಮಾತ್ರ ಜೋರಾಗಿದೆ.
ರಾಜ್ಯ
CM D K Shiv Kumar ಮತ್ತೆ ದೆಹಲಿಗೆ; ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಜೊತೆ ಮಹತ್ವದ ಚರ್ಚೆ
ಬೆಂಗಳೂರು: CM D K Shiv Kumar ಅವರು ಗುರುವಾರವಷ್ಟೇ ದೆಹಲಿಗೆ ತೆರಳಿ ಬೆಂಗಳೂರಿಗೆ ವಾಪಸಾಗಿದ್ದರೂ, ಇದೀಗ ಮತ್ತೆ ಭಾನುವಾರ ದೆಹಲಿಗೆ ತೆರಳಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನ ಸೇರಿದಂತೆ ಸಂಪುಟಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತು ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಲು ಅವರು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಡಿ.ಕೆ. ಶಿವಕುಮಾರ್ ಅವರು ಭಾನುವಾರ ತಡರಾತ್ರಿ ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸಿ, ಸೋಮವಾರ ಬೆಳಗ್ಗೆ ಬೆಂಗಳೂರಿಗೆ ವಾಪಸಾಗುವ ಸಾಧ್ಯತೆ ಇದೆ.
ಅನ್ನಪೂರ್ಣ ತುಕಾರಾಂಗೆ ಸಚಿವ ಸ್ಥಾನ?
ನಾಗೇಂದ್ರ ಅವರಿಂದ ತೆರವಾಗಿರುವ ಸಚಿವ ಸ್ಥಾನವನ್ನು ಅದೇ ಜಿಲ್ಲೆಯ ಹಾಗೂ ಅದೇ ಸಮುದಾಯಕ್ಕೆ ಸೇರಿದ ಅನ್ನಪೂರ್ಣ ತುಕಾರಾಂ ಅವರಿಗೆ ನೀಡುವ ಕುರಿತು ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಈ ಹಿಂದೆ ಕೂಡ ಅನ್ನಪೂರ್ಣ ಅವರ ಹೆಸರು ಸಚಿವ ಸ್ಥಾನಕ್ಕೆ ಕೇಳಿಬಂದಿದ್ದು, ಇದೀಗ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿಯ ಹಿನ್ನೆಲೆಯಲ್ಲಿ ಈ ಚರ್ಚೆ ಮತ್ತಷ್ಟು ಬಲಗೊಂಡಿದೆ.
ಆದರೆ ಮತ್ತೊಂದು ಸಚಿವ ಸ್ಥಾನವನ್ನು ಯಾರಿಗೆ ನೀಡಬೇಕು ಎಂಬುದರ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎನ್ನಲಾಗುತ್ತಿದೆ. ಈ ಸ್ಥಾನಕ್ಕಾಗಿ ಹಲವು ಹಿರಿಯ ಶಾಸಕರು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ವಲಯದ ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಆಪ್ತರಿಗೆ ಸ್ಥಾನ ನೀಡಲು ಒತ್ತಡ?
ಎರಡನೇ ಸಚಿವ ಸ್ಥಾನಕ್ಕೆ ತಮ್ಮ ಆಪ್ತ ಬಸವರಾಜ್ ಶಿವಣ್ಣನವರ್ ಅವರ ಹೆಸರನ್ನು ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.
ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಿವಣ್ಣನವರ್ ಅವರ ಹೆಸರನ್ನು ಪರಿಗಣಿಸಿರಲಿಲ್ಲ. ಇದರಿಂದ ಅವರು ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ. ಹೀಗಾಗಿ ಈ ಬಾರಿ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
ಕಾನೂನು ತಜ್ಞರೊಂದಿಗೆ ಡಿಕೆಶಿ ಸಭೆ
ದೆಹಲಿಗೆ ತೆರಳಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಪಕ್ಷದ ರಾಜಕೀಯ ವಿಚಾರಗಳ ಬಗ್ಗೆ ಮಾತ್ರ ಚರ್ಚೆ ನಡೆಸುತ್ತಿಲ್ಲ ಎನ್ನಲಾಗಿದೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಮುನ್ನ ಅವರು ಸುಪ್ರೀಂ ಕೋರ್ಟ್ನಲ್ಲಿ ಬಾಕಿಯಿರುವ ರಾಜ್ಯದ ವಿವಿಧ ಪ್ರಕರಣಗಳ ಕುರಿತು ಕಾನೂನು ತಜ್ಞರೊಂದಿಗೆ ಸಭೆ ನಡೆಸಿದ್ದಾರೆ.
ಕರ್ನಾಟಕಕ್ಕೆ ಸಂಬಂಧಿಸಿದ ಪ್ರಕರಣಗಳ ಶೀಘ್ರ ವಿಲೇವಾರಿ ಹಾಗೂ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಗಳ ಕುರಿತು ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೀಗಾಗಿ ಡಿ.ಕೆ. ಶಿವಕುಮಾರ್ ಅವರ ದಿಢೀರ್ ದೆಹಲಿ ಪ್ರವಾಸವು ಇದೀಗ ರಾಜ್ಯ ರಾಜಕಾರಣದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನಾಗೇಂದ್ರ ಅವರಿಂದ ತೆರವಾಗಿರುವ ಸ್ಥಾನಕ್ಕೆ ಅನ್ನಪೂರ್ಣ ತುಕಾರಾಂ ಅವರೇ ಆಯ್ಕೆಯಾಗಲಿದ್ದಾರೆಯೇ ಅಥವಾ ಕಾಂಗ್ರೆಸ್ ಹೈಕಮಾಂಡ್ ಬೇರೆ ಅಭ್ಯರ್ಥಿಗೆ ಅವಕಾಶ ನೀಡಲಿದೆಯೇ ಎಂಬುದು ಕುತೂಹಲ ಮೂಡಿಸಿದೆ.
ದೇಶ
Mantralaya ದಲ್ಲಿ ಭಕ್ತ ಸಾಗರ; ಇಂದು ರಾಯರ ಮಹಾರಥೋತ್ಸವ, ವಿಶೇಷ ನವರತ್ನ ಕವಚ
ರಾಯಚೂರು: Mantralaya ದ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಇಂದು ಉತ್ತರಾರಾಧನೆ ಹಾಗೂ ಮಹಾರಥೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಮೂರು ದಿನಗಳ ಕಾಲ ನಡೆದ ಆರಾಧನಾ ಮಹೋತ್ಸವದ ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಮಂತ್ರಾಲಯಕ್ಕೆ ಆಗಮಿಸಿದ್ದಾರೆ.

ಉತ್ತರಾರಾಧನೆಯ ಶುಭ ಸಂದರ್ಭದಲ್ಲಿ ಗುರು ರಾಯರು ಪ್ರಹ್ಲಾದ ರಾಜರ ಉತ್ಸವ ಮೂರ್ತಿಯ ರೂಪದಲ್ಲಿ ಹೊರಪ್ರಾಕಾರಕ್ಕೆ ಆಗಮಿಸಿ ಭಕ್ತರಿಗೆ ದರ್ಶನ ನೀಡುತ್ತಾರೆ ಎಂಬ ನಂಬಿಕೆ ಭಕ್ತರಲ್ಲಿದೆ. ಹೀಗಾಗಿ ವಿಶೇಷ ದರ್ಶನ ಪಡೆಯಲು ಬೆಳಗ್ಗಿನಿಂದಲೇ ಭಕ್ತರು ಶ್ರೀಮಠದತ್ತ ಆಗಮಿಸುತ್ತಿದ್ದಾರೆ.
ವಸಂತೋತ್ಸವದ ಬಳಿಕ ರಾಯರ ಮೆರವಣಿಗೆ
ಮಹಾರಥೋತ್ಸವಕ್ಕೂ ಮುನ್ನ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಸನ್ನಿಧ್ಯದಲ್ಲಿ ವಸಂತೋತ್ಸವ ನಡೆಯಲಿದೆ. ಈ ವೇಳೆ ರಾಯರ ಬೃಂದಾವನಕ್ಕೆ ಗುಲಾಲ್ ಎರಚುವ ಮೂಲಕ ಬಣ್ಣಗಳ ಹಬ್ಬವನ್ನು ಆಚರಿಸಲಾಗುತ್ತದೆ.
ನಂತರ ಸಂಸ್ಕೃತ ಪಾಠಶಾಲೆಯಿಂದ ಮಠದ ಮಧ್ವದ್ವಾರದವರೆಗೆ ರಾಯರ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಲಿದ್ದು, ಬಳಿಕ ರಾಜಬೀದಿಯಲ್ಲಿ ಅದ್ಧೂರಿ ಮಹಾರಥೋತ್ಸವಕ್ಕೆ ಚಾಲನೆ ದೊರೆಯಲಿದೆ.
ರಾಯರ ಬೃಂದಾವನಕ್ಕೆ ವಿಶೇಷ ನವರತ್ನ ಕವಚ
ಈ ಬಾರಿಯ ಆರಾಧನಾ ಮಹೋತ್ಸವದಲ್ಲಿ ರಾಯರ ಬೃಂದಾವನಕ್ಕೆ ವಿಶೇಷವಾಗಿ ನವರತ್ನ ಕವಚ ಅಳವಡಿಸಿರುವುದು ಮತ್ತೊಂದು ವಿಶೇಷವಾಗಿದೆ. ಮಹಾರಥೋತ್ಸವದ ಸಂದರ್ಭದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಹೆಲಿಕಾಪ್ಟರ್ ಮೂಲಕ ಮಹಾರಥದ ಮೇಲೆ ಪುಷ್ಪವೃಷ್ಟಿ ನಡೆಯಲಿದೆ.
ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಭಜನಾ ಮಂಡಳಿಗಳು ಹಾಗೂ ಕಲಾತಂಡಗಳು ತಮ್ಮ ವೈವಿಧ್ಯಮಯ ಪ್ರದರ್ಶನದ ಮೂಲಕ ಉತ್ಸವಕ್ಕೆ ಮತ್ತಷ್ಟು ಮೆರುಗು ತಂದಿವೆ.
ಮಂತ್ರಾಲಯದಲ್ಲಿ ಭಕ್ತರ ದಂಡು
ಉತ್ತರಾರಾಧನೆಯ ದಿನ ಗುರು ರಾಘವೇಂದ್ರ ಸ್ವಾಮಿಗಳು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾರೆ ಎಂಬ ಬಲವಾದ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ರಾಯರ ಅನುಗ್ರಹ ಪಡೆಯಲು ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಿಂದ ಅಪಾರ ಸಂಖ್ಯೆಯ ಭಕ್ತರು ಮಂತ್ರಾಲಯದಲ್ಲಿ ಬೀಡುಬಿಟ್ಟಿದ್ದಾರೆ.
ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಲಿರುವ ಮಹಾರಥೋತ್ಸವದ ಹಿನ್ನೆಲೆಯಲ್ಲಿ ಶ್ರೀಮಠದ ರಾಜಬೀದಿ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಭಕ್ತರ ಸುರಕ್ಷತೆ ಹಾಗೂ ಉತ್ಸವದ ಸುಗಮ ನಿರ್ವಹಣೆಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ.
ಬೆಂಗಳೂರು
Bengaluru Traffic Rules: ಸೆ.4ರಿಂದ ಫ್ಲೈಓವರ್ಗಳಲ್ಲಿ ವಾಹನಗಳ ಸಂಚಾರಕ್ಕೆ ಹೊಸ ನಿಯಮ
ಬೆಂಗಳೂರು: ರಾಜಧಾನಿ Bengaluru ರಿನ ಪ್ರಮುಖ ಫ್ಲೈಓವರ್ಗಳು ಹಾಗೂ ಎಲಿವೇಟೆಡ್ ಕಾರಿಡಾರ್ಗಳಲ್ಲಿ ಸಂಚಾರ ಸುರಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ನಗರದ ವಿವಿಧ ಫ್ಲೈಓವರ್ಗಳಲ್ಲಿ ನಿರ್ದಿಷ್ಟ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಸೆಪ್ಟೆಂಬರ್ 4ರಿಂದ ಹಲವು ಕಡೆಗಳಲ್ಲಿ ನಿಯಮಗಳು ಜಾರಿಗೆ ಬರಲಿವೆ.

ರಸ್ತೆ ಸುರಕ್ಷತೆ ಹೆಚ್ಚಿಸುವುದು, ಸಂಚಾರ ದಟ್ಟಣೆ ನಿಯಂತ್ರಿಸುವುದು ಹಾಗೂ ಗಂಭೀರ ಅಪಘಾತಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬಿಜಿಎಸ್ ಫ್ಲೈಓವರ್ನಲ್ಲಿ ಭಾರಿ ವಾಹನಗಳಿಗೆ ನಿಷೇಧ
ಮೈಸೂರು ರಸ್ತೆಯ ಬಿಜಿಎಸ್ ಫ್ಲೈಓವರ್ನಲ್ಲಿ ಭಾರಿ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ 24 ಗಂಟೆಯೂ ನಿರ್ಬಂಧ ಇರಲಿದೆ. ಇತರೆ ಸರಕು ಸಾಗಣೆ ವಾಹನಗಳಿಗೆ ಬೆಳಗ್ಗೆ 7ರಿಂದ 11ರವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 10ರವರೆಗೆ ಸಂಚಾರ ನಿರ್ಬಂಧಿಸಲಾಗಿದೆ.
ಪೀಣ್ಯ ಎಲಿವೇಟೆಡ್ ಕಾರಿಡಾರ್ನಲ್ಲಿ ಆಟೋಗಳಿಗೆ ನೋ ಎಂಟ್ರಿ
ಪೀಣ್ಯ ಎಲಿವೇಟೆಡ್ ಕಾರಿಡಾರ್ನಲ್ಲಿ ಆಟೋ ರಿಕ್ಷಾಗಳು ಮತ್ತು ತ್ರಿಚಕ್ರದ ಗೂಡ್ಸ್ ಆಟೋಗಳಿಗೆ 24 ಗಂಟೆಯೂ ಸಂಚಾರ ನಿಷೇಧಿಸಲಾಗಿದೆ. ಭಾರಿ ಹಾಗೂ ಮಧ್ಯಮ ಸರಕು ಸಾಗಣೆ ವಾಹನಗಳಿಗೆ ಬೆಳಗ್ಗೆ 7ರಿಂದ 11ರವರೆಗೆ ಮತ್ತು ಸಂಜೆ 4ರಿಂದ ರಾತ್ರಿ 10ರವರೆಗೆ ನಿರ್ಬಂಧ ವಿಧಿಸಲಾಗಿದೆ.
ಡಬಲ್ ಡೆಕ್ಕರ್ ಫ್ಲೈಓವರ್ಗೂ ಹೊಸ ನಿಯಮ
ಸಿಲ್ಕ್ ಬೋರ್ಡ್ನಿಂದ ರಾಗಿಗುಡ್ಡವರೆಗೆ ಇರುವ ಡಬಲ್ ಡೆಕ್ಕರ್ ಫ್ಲೈಓವರ್ನಲ್ಲಿ ಭಾರಿ ಸರಕು ಸಾಗಣೆ ವಾಹನಗಳ ಸಂಚಾರವನ್ನು ದಿನದ 24 ಗಂಟೆಯೂ ನಿರ್ಬಂಧಿಸಲಾಗಿದೆ.
ಇದೇ ವೇಳೆ, ಸಂಜೀವನಗರ ಕ್ರಾಸ್ನಿಂದ ವಿದ್ಯಾಶಿಲ್ಪ ಜಂಕ್ಷನ್ವರೆಗೆ ಇರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಎಲಿವೇಟೆಡ್ ಕಾರಿಡಾರ್ನಲ್ಲಿ ದ್ವಿಚಕ್ರ ವಾಹನಗಳು ಹಾಗೂ ಆಟೋರಿಕ್ಷಾಗಳಿಗೆ 24 ಗಂಟೆಯೂ ಪ್ರವೇಶ ನಿರ್ಬಂಧಿಸಲಾಗಿದೆ. ಎಲ್ಲಾ ರೀತಿಯ ಸರಕು ಸಾಗಣೆ ವಾಹನಗಳಿಗೆ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಸಂಚಾರ ನಿರ್ಬಂಧವಿರಲಿದೆ.
ಎಲೆಕ್ಟ್ರಾನಿಕ್ ಸಿಟಿ ಕಾರಿಡಾರ್ನಲ್ಲೂ ನಿರ್ಬಂಧ
ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಕಾರಿಡಾರ್ನಲ್ಲಿ ದ್ವಿಚಕ್ರ ವಾಹನಗಳು, ಪ್ರಯಾಣಿಕರ ಆಟೋ ಹಾಗೂ ಗೂಡ್ಸ್ ಆಟೋಗಳಿಗೆ 24 ಗಂಟೆಯೂ ಸಂಚಾರ ನಿಷೇಧಿಸಲಾಗಿದೆ. ಎಲ್ಲಾ ಮಾದರಿಯ ಸರಕು ಸಾಗಣೆ ವಾಹನಗಳಿಗೆ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ನಿರ್ಬಂಧ ವಿಧಿಸಲಾಗಿದೆ.
ಯಾವ ದಿನದಿಂದ ನಿಯಮ ಜಾರಿ?
ಬಿಜಿಎಸ್ ಫ್ಲೈಓವರ್, ಪೀಣ್ಯ ಎಲಿವೇಟೆಡ್ ಕಾರಿಡಾರ್, ಡಬಲ್ ಡೆಕ್ಕರ್ ಫ್ಲೈಓವರ್ ಮತ್ತು ವಿಮಾನ ನಿಲ್ದಾಣ ರಸ್ತೆ ಎಲಿವೇಟೆಡ್ ಕಾರಿಡಾರ್ಗಳಲ್ಲಿ ಸೆಪ್ಟೆಂಬರ್ 4ರಿಂದ ಹೊಸ ನಿಯಮಗಳು ಜಾರಿಗೆ ಬರಲಿವೆ. ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಕಾರಿಡಾರ್ನಲ್ಲಿ ಸೆಪ್ಟೆಂಬರ್ 11ರಿಂದ ನಿಯಮ ಅನ್ವಯವಾಗಲಿದೆ.
ಸಾರ್ವಜನಿಕ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಜಾರಿಗೊಳಿಸಲಾಗುತ್ತಿರುವ ಹೊಸ ನಿಯಮಗಳಿಗೆ ವಾಹನ ಸವಾರರು ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಮನವಿ ಮಾಡಿದೆ.
.
-
ಅಪರಾಧ19 ಗಂಟೆಗಳು agoKPSC ನೇಮಕಾತಿ ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ಗೆ ಜೈಲು, ಕೋರ್ಟ್ನಿಂದ ಮಹತ್ವದ ಆದೇಶ
-
ಬೆಂಗಳೂರು19 ಗಂಟೆಗಳು agoಕ್ರಿಕೆಟ್ ದಿಗ್ಗಜನಾದರೂ ಇಷ್ಟೊಂದು ಸಿಂಪಲ್! Metro ದಲ್ಲಿ Javagal Srinath
-
ಬೆಂಗಳೂರು22 ಗಂಟೆಗಳು agoKPSC ಅಕ್ರಮಕ್ಕೆ ಬಿಜೆಪಿ ಸರ್ಕಾರವೇ ಕಾರಣ? ಜ್ಞಾನೇಂದ್ರ ಕುಮಾರ್ ನೇಮಕದ ಬಗ್ಗೆ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ
-
ದೇಶ21 ಗಂಟೆಗಳು agoPM Narendra Modi ಮೆಚ್ಚಿದ ಬೆಂಗಳೂರಿನ ನಿಂಗಮ್ಮ ಯಾರು? ₹50 ಸಾವಿರ ಸಾಲ ಪಡೆದು ಕಟ್ಟಿಕೊಂಡ ಸ್ವಾವಲಂಬಿ ಬದುಕಿನ ಕಥೆ
-
ರಾಜ್ಯ20 ಗಂಟೆಗಳು agoಬಿಜೆಪಿ ಪಾದಯಾತ್ರೆ ಬಗ್ಗೆ ನನಗೆ ಮಾಹಿತಿಯೇ ಇಲ್ಲ: ಕೇಂದ್ರ ಸಚಿವ V Somanna ಹೇಳಿದ್ದೇನು?
-
ಸಿನಿಮಾ20 ಗಂಟೆಗಳು agoBachchan ಕುಟುಂಬದ ಮದುವೆ ಜವಾಬ್ದಾರಿ ಸಿಕ್ಕಿದ್ದು ಹೇಗೆ? 1997ರ ನೆನಪು ಬಿಚ್ಚಿಟ್ಟ ಸಂದೀಪ್ ಖೋಸ್ಲಾ
-
ಬೆಂಗಳೂರು20 ಗಂಟೆಗಳು agoBJP ‘ಗೊಂದಲಕ್ಕೆ ಅವಕಾಶವೇ ಇಲ್ಲ’: ಸೆ.1ರ ಪಾದಯಾತ್ರೆ ಕುರಿತು ವಿಜಯೇಂದ್ರ ಮಹತ್ವದ ಹೇಳಿಕೆ
-
ಸಿನಿಮಾ22 ಗಂಟೆಗಳು ago‘Toxic’ ವಿರುದ್ಧ ನೆಗೆಟಿವ್ ರಿವ್ಯೂ: ಯಶ್ ಪರ ನಿಂತ Rakshitha Prem ಹೇಳಿದ್ದೇನು?
