Connect with us

ರಾಜಕೀಯ

ಮಹಿಳೆಯರ ವಿರುದ್ಧದ ದ್ವರ್ಥಾರ್ಥಕ ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ; ಡಿಎಂಕೆ ನಾಯಕರಿಗೆ CM Vijay ಎಚ್ಚರಿಕೆ

Published

on

ಚೆನ್ನೈ: ಮಹಿಳೆಯರ ವಿರುದ್ಧದ ವೈಯಕ್ತಿಕ ದಾಳಿ ಹಾಗೂ ದ್ವರ್ಥಾರ್ಥಕ (Double Meaning) ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ತಮಿಳುನಾಡು CM Vijay (Vijay) ಅವರು ಆಡಳಿತ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ನಟಿ ತ್ರಿಶಾ ಕೃಷ್ಣನ್ ಅವರ ಕುರಿತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ನೀಡಿರುವ ಆಕ್ಷೇಪಾರ್ಹ ಹೇಳಿಕೆಗಳ ಹಿನ್ನೆಲೆಯಲ್ಲಿ ಈ ಚರ್ಚೆ ಕಾವೇರಿದೆ. ವಿಧಾನಸಭೆಯಲ್ಲಿ ಈ ಕುರಿತು ಮಾತನಾಡಿದ ಸಿಎಂ ವಿಜಯ್, ರಾಜಕೀಯದಲ್ಲಿ ಎಷ್ಟೇ ತೀವ್ರವಾದ ಟೀಕೆ-ಟಿಪ್ಪಣಿಗಳಿದ್ದರೂ ಅದನ್ನು ಸೈದ್ಧಾಂತಿಕವಾಗಿ ಎದುರಿಸಬೇಕೇ ಹೊರತು ಮಹಿಳೆಯರ ತೇಜೋವಧೆ ಮಾಡಬಾರದು ಎಂದು ಕಟ್ಟುನಿಟ್ಟಾಗಿ ಎಚ್ಚರಿಸಿದ್ದಾರೆ.

ವಿವಾದಕ್ಕೆ ಮುಖ್ಯ ಕಾರಣವೇನು?

ಕಾವೇರಿ ನೀರು ಹಂಚಿಕೆ ಪ್ರತಿಭಟನೆಯ ವೇಳೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ನಟಿ ತ್ರಿಶಾ ಅವರ ಹೆಸರನ್ನು ಪ್ರಸ್ತಾಪಿಸಿ ಆಡಿದ ಕೆಲವು ಮಾತುಗಳು ತಮಿಳುನಾಡು ರಾಜಕಾರಣದಲ್ಲಿ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದ್ದವು. ಈ ಘಟನೆಯ ನಂತರ ವ್ಯಾಪಕ ಟೀಕೆಗಳು ವ್ಯಕ್ತವಾಗಿ, ಉದಯನಿಧಿ ಅವರ ಬಂಧನ ಮತ್ತು ಬಿಡುಗಡೆ ಪ್ರಕ್ರಿಯೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಪ್ರಸ್ತುತ ವಿಧಾನಸಭೆಯಲ್ಲಿ ಮಾತನಾಡಿರುವ ಸಿಎಂ ವಿಜಯ್, ಅಸಂಸದೀಯ ಶಬ್ದಗಳ ಬಳಕೆಯನ್ನು ಕಟುವಾಗಿ ವಿರೋಧಿಸಿದ್ದಾರೆ. “ತಮ್ಮ ರಾಜಕೀಯ ಗೆಲುವಿಗೆ ಮಹಿಳೆಯರೇ ಮುಖ್ಯ ಕಾರಣ” ಎಂದು ಬಲವಾಗಿ ಸ್ಮರಿಸಿದ ಅವರು, ಸಾರ್ವಜನಿಕ ಜೀವನದಲ್ಲಿರುವವರು ಮಾತನಾಡುವಾಗ ನಿಂದನಾತ್ಮಕ ಹಾಗೂ ಕೀಳುಮಟ್ಟದ ಭಾಷೆಯನ್ನು ಬಳಸಬಾರದು ಎಂದು ಅಗ್ರಹಿಸಿದ್ದಾರೆ.

ಸಭೆಯಲ್ಲಿ ವಿಜಯ್ ನೀಡಿದ ಸ್ಪಷ್ಟನೆ

ವಿಧಾನಸಭೆಯಲ್ಲಿ ಮಾತನಾಡುತ್ತಾ ಸಿಎಂ ವಿಜಯ್, “ನಾವು ರಾಜಕೀಯವಾಗಿ ಯಾರನ್ನು ಬೇಕಾದರೂ ಟೀಕಿಸಬಹುದು, ಅದು ಅಭಿವೃದ್ಧಿಯ ಚರ್ಚೆಯಾಗಬಹುದು. ಆದರೆ ಇದರ ಹೆಸರಿನಲ್ಲಿ ಮಹಿಳೆಯರನ್ನು ಅಥವಾ ಇವರನ್ನು ವೈಯಕ್ತಿಕವಾಗಿ ಗುರಿಯಾಗಿಸಿ ಕೀಳುಮಟ್ಟದಲ್ಲಿ ಮಾತನಾಡುವುದನ್ನು ದಯವಿಟ್ಟು ನಿಲ್ಲಿಸಿ” ಎಂದು ಮನವಿ ಮಾಡಿದರು. ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಕೆಲವರು ಮಹಿಳೆಯರ ವಿರುದ್ಧ ದ್ವರ್ಥಾರ್ಥಕ ಪದಗಳನ್ನು ಬಳಸುತ್ತಿರುವುದನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಅವರು ಎಚ್ಚರಿಸಿದರು. ಅಲ್ಲದೆ, ಹಿಂದೊಮ್ಮೆ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಇದೇ ವಿಧಾನಸಭೆಯಲ್ಲಿ ಎದುರಿಸಿದ್ದ ಅವಮಾನಗಳನ್ನು ಈ ಸಂದರ್ಭದಲ್ಲಿ ಪ್ರಸ್ತಾಪಿಸಿ, ಸದನದಲ್ಲಿ ಮಹಿಳೆಯರಿಗೆ ಎಲ್ಲ ಕಾಲದಲ್ಲೂ ಸೂಕ್ತ ಗೌರವ ಸಿಗಬೇಕು ಎಂದು ಒತ್ತಾಯಿಸಿದರು.

ವಿಜಯ್ ಅವರ ಈ ಖಡಕ್ ಎಚ್ಚರಿಕೆಯು ತಮಿಳುನಾಡು ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಡಿಎಂಕೆ ಹಾಗೂ ಟಿವಿಕೆ (TVK) ನಡುವಿನ ರಾಜಕೀಯ ಸೆಣಸಾಟವನ್ನು ಮತ್ತಷ್ಟು ತೀವ್ರಗೊಳಿಸಿದೆ. ಮಹಿಳಾ ಪರ ನಿಲುವನ್ನು ಸ್ಪಷ್ಟಪಡಿಸಿರುವ ವಿಜಯ್ ಅವರ ಮಾತುಗಳು ರಾಜ್ಯದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿವೆ.

J S Vasudev is a journalist and writer with 15 years of experience in writing and journalism. He founded Hosasuddi.in in 2023 with a vision to deliver credible and timely Kannada news. With a strong passion for journalism, he focuses on presenting news in a clear, simple and reader-friendly manner. His work covers current affairs, Karnataka news, national developments, business, technology and social issues. He believes in independent journalism and responsible reporting that puts readers first. His guiding motto is “Write on Your Own,” reflecting his commitment to original and independent content. Through Hosasuddi.in, he continues to contribute to Kannada digital journalism with dedication and integrity.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜ್ಯ

HC Mahadevappa ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ Minister Byrathi Suresh!

Published

on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಂತ್ರಿಗಳಿಗೆ, ಶಾಸಕರಿಗೆ ಹಾಗೂ ಉನ್ನತ ಮಟ್ಟದ ಅಧಿಕಾರಿಗಳಿಗೆ ಸರ್ಕಾರಿ ನಿವಾಸಗಳನ್ನು ಹಂಚಿಕೆ ಮಾಡುವುದು ಸಾಮಾನ್ಯ ಪ್ರಕ್ರಿಯೆ. ಆದರೆ, ಕೆಲವು ನಿರ್ದಿಷ್ಟ ಪ್ರತಿಷ್ಠಿತ ಬಂಗಲೆಗಳ ಮೇಲೆ ರಾಜಕೀಯ ನಾಯಕರ ಕಣ್ಣು ಸದಾ ಇರುತ್ತದೆ. ಆಯಕಟ್ಟಿನ ಜಾಗದಲ್ಲಿರುವ, ವಾಸ್ತು ಪ್ರಕಾರ ಒಳಿತಾಗಿರುವ ಅಥವಾ ಹಿಂದಿನಿಂದಲೂ ಅದೃಷ್ಟ ತಂದಿದೆ ಎಂದು ನಂಬಲಾದ ಸರ್ಕಾರಿ ಬಂಗಲೆಗಳನ್ನು ಪಡೆಯಲು ನಾಯಕರ ನಡುವೆ ಭಾರಿ ಪೈಪೋಟಿ ನಡೆಯುತ್ತಲೇ ಇರುತ್ತದೆ. ಇದೀಗ ಇಂತಹದ್ದೇ ಒಂದು ಹೈವೋಲ್ಟೇಜ್ ಜಟಾಪಟಿ ಕಾಂಗ್ರೆಸ್ (Congress) ಪಾಳಯದ ಹಾಲಿ ಹಾಗೂ ಮಾಜಿ ಸಚಿವರ ನಡುವೆ ನಡೆಯುತ್ತಿದೆ. ನಗರದ ಅತ್ಯಂತ ಪ್ರತಿಷ್ಠಿತ ಹಾಗೂ ವಿಐಪಿಗಳೇ ವಾಸವಿರುವ ಕ್ರೆಸೆಂಟ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸಕ್ಕಾಗಿ ಸಾರಿಗೆ ಸಚಿವ ಬೈರತಿ ಸುರೇಶ್ (Byrathi Suresh) ಹಾಗೂ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ (Mahadevappa) ಅವರ ನಡುವೆ ತೀವ್ರ ತಿಕ್ಕಾಟ ಶುರುವಾಗಿದೆ.

ಬೆಂಗಳೂರಿನ ಹೃದಯಭಾಗದಲ್ಲಿರುವ ಕ್ರೆಸೆಂಟ್ ರಸ್ತೆಯ ನಂ. 2 ಸರ್ಕಾರಿ ಬಂಗಲೆ ಇದೀಗ ಭಾರಿ ವಿವಾದದ ಕೇಂದ್ರಬಿಂದುವಾಗಿದೆ. ಈ ಬೃಹತ್ ಹಾಗೂ ಪ್ರತಿಷ್ಠಿತ ಬಂಗಲೆಯನ್ನು ಹೇಗಾದರೂ ಮಾಡಿ ತಮ್ಮ ವಶಕ್ಕೆ ಪಡೆಯಲು ಸಾರಿಗೆ ಸಚಿವ ಬೈರತಿ ಸುರೇಶ್ ಹಾಗೂ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ನಡುವೆ ತೆರೆಮರೆಯ ಜಟಾಪಟಿ ಆರಂಭವಾಗಿದೆ. ಇಬ್ಬರೂ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರೇ ಆಗಿದ್ದು, ಪಕ್ಷದ ಆಂತರಿಕ ವಲಯದಲ್ಲಿ ಈ ಬಂಗಲೆ ಪಾಲಿಟಿಕ್ಸ್ ಭಾರಿ ಚರ್ಚೆಗೆ ಗ್ರಾಸವಾಗಿದೆ. ಒಬ್ಬರು ಹೇಗಾದರೂ ಮಾಡಿ ಬಂಗಲೆಯಲ್ಲಿಯೇ ಮುಂದುವರಿಯಲು ಯತ್ನಿಸುತ್ತಿದ್ದರೆ, ಮತ್ತೊಬ್ಬರು ಯಾವುದೇ ಕಾರಣಕ್ಕೂ ಈ ಬಂಗಲೆಯನ್ನು ಬಿಟ್ಟುಕೊಡದಿರಲು ಪಣತೊಟ್ಟಂತೆ ವರ್ತಿಸುತ್ತಿದ್ದಾರೆ.

ಡಾ. ಎಚ್.ಸಿ. ಮಹದೇವಪ್ಪ ಅವರು ಈ ಹಿಂದೆ ಸಚಿವರಾಗಿದ್ದ ಅವಧಿಯಿಂದಲೂ ಇದೇ ಕ್ರೆಸೆಂಟ್ ರಸ್ತೆಯ ನಂ. 2 ಬಂಗಲೆಯಲ್ಲಿ (Residence) ವಾಸ್ತವ್ಯ ಹೂಡಿದ್ದಾರೆ. ಈ ಬಂಗಲೆ ಅವರ ರಾಜಕೀಯ ಚಟುವಟಿಕೆಗಳಿಗೆ, ಬೆಂಬಲಿಗರ ಭೇಟಿಗೆ ಹಾಗೂ ದೈನಂದಿನ ಕಾರ್ಯಗಳಿಗೆ ಅತ್ಯಂತ ಅನುಕೂಲಕರವಾಗಿದೆ. ಸಾಮಾನ್ಯವಾಗಿ ಸರ್ಕಾರಿ ನಿಯಮಾವಳಿಗಳ ಪ್ರಕಾರ, ಒಬ್ಬರು ಸಚಿವ ಸ್ಥಾನದಿಂದ ಕೆಳಗಿಳಿದ ಬಳಿಕ ಅಥವಾ ಹೊಸ ಸರ್ಕಾರ ಬಂದಾಗ ಹಳೆಯ ಸರ್ಕಾರಿ ನಿವಾಸವನ್ನು ತೆರವುಗೊಳಿಸಲು ನಿರ್ದಿಷ್ಟ ಸಮಯಾವಕಾಶವನ್ನು ನೀಡಲಾಗುತ್ತದೆ. ಪ್ರಸ್ತುತ ನಿಯಮಗಳ ಪ್ರಕಾರ ಸರ್ಕಾರಿ ನಿವಾಸವನ್ನು ತೆರವುಗೊಳಿಸಲು ಡಾ. ಮಹದೇವಪ್ಪ ಅವರಿಗೆ ಇನ್ನೂ ಸಾಕಷ್ಟು ಸಮಯಾವಕಾಶವಿದೆ. ಆದರೆ, ಅಷ್ಟರಲ್ಲೇ ಈ ನಿವಾಸವನ್ನು ತಮ್ಮ ಸುಪರ್ದಿಗೆ ಪಡೆಯಲು ಸಚಿವ ಬೈರತಿ ಸುರೇಶ್ ಅವರು ತೀವ್ರ ಆತುರ ತೋರುತ್ತಿದ್ದಾರೆ.

ನಿಯಮಗಳ ಪ್ರಕಾರ ಬಂಗಲೆ ಸಂಪೂರ್ಣವಾಗಿ ತೆರವಾದ ಬಳಿಕವಷ್ಟೇ ಹೊಸಬರಿಗೆ ಹಂಚಿಕೆಯಾಗಬೇಕು ಮತ್ತು ನವೀಕರಣ ಕಾರ್ಯಗಳು ಆರಂಭವಾಗಬೇಕು. ಆದರೆ, ಈ ಯಾವುದೇ ಶಿಷ್ಟಾಚಾರಗಳನ್ನು ಲೆಕ್ಕಿಸದ ಸಚಿವ ಬೈರತಿ ಸುರೇಶ್ ಅವರು, ಮಾಜಿ ಸಚಿವ ಮಹದೇವಪ್ಪ ಅವರು ಬಂಗಲೆಯಲ್ಲೇ ಇರುವಾಗಲೇ ಏಕಾಏಕಿ ನವೀಕರಣ ಕಾಮಗಾರಿ ಶುರು ಮಾಡಿಸಿದ್ದಾರೆ. ಇದು ಮಹದೇವಪ್ಪ ಅವರ ಬೆಂಬಲಿಗರನ್ನು ಮತ್ತು ಆಪ್ತರನ್ನು ಕೆರಳಿಸಿದೆ. ಹಾಲಿ ಸಚಿವರ ಈ ವರ್ತನೆ ರಾಜಕೀಯ ವಲಯದಲ್ಲಿ ಹಲವು ಹುಬ್ಬೇರಿಸುವಂತೆ ಮಾಡಿದೆ.

ಘಟನೆಯ ತೀವ್ರತೆ ಎಷ್ಟಿದೆ ಎಂದರೆ, ಡಾ. ಎಚ್.ಸಿ. ಮಹದೇವಪ್ಪ ಅವರು ಮನೆಯಲ್ಲಿ ಇರುವಾಗಲೇ ಬಂಗಲೆಯ ಆವರಣಕ್ಕೆ ಜೆಸಿಬಿ (JCB) ಯಂತ್ರಗಳನ್ನು ತರಿಸಲಾಗಿದೆ. ಜೆಸಿಬಿ ಮೂಲಕ ಬಂಗಲೆಯ ಆವರಣದಲ್ಲಿದ್ದ ಹಳೆಯ ಮೀಟಿಂಗ್ ಹಾಲ್ ಅನ್ನು ನಿರ್ದಾಕ್ಷಿಣ್ಯವಾಗಿ ನೆಲಸಮ ಮಾಡಿಸಲಾಗಿದೆ. ಏಕಾಏಕಿ ನಡೆದ ಈ ಕಾರ್ಯಾಚರಣೆಯಿಂದ ಬಂಗಲೆಯಲ್ಲಿದ್ದವರು ದಂಗಾಗಿದ್ದಾರೆ. ಅಷ್ಟೇ ಅಲ್ಲದೆ, ಬೈರತಿ ಸುರೇಶ್ ಅವರ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಇಡೀ ಬಂಗಲೆಗೆ ಹೊಸದಾಗಿ ಪೇಂಟಿಂಗ್ ಹಾಗೂ ಇತರೆ ಒಳಾಂಗಣ ನವೀಕರಣ ಕಾರ್ಯಗಳು ಭರದಿಂದ ಸಾಗುತ್ತಿವೆ.

ಒಟ್ಟಿನಲ್ಲಿ, ಒಂದೇ ಪಕ್ಷದ ಇಬ್ಬರು ಪ್ರಭಾವಿ ನಾಯಕರ ನಡುವೆ ನಡೆಯುತ್ತಿರುವ ಈ ಸರ್ಕಾರಿ ಬಂಗಲೆಯ ಹಗ್ಗಜಗ್ಗಾಟ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. ಅಧಿಕಾರದ ದರ್ಪದಿಂದ ಹೀಗೆ ಮಾಡುತ್ತಿದ್ದಾರೆಯೇ ಅಥವಾ ವಾಸ್ತವ್ಯದ ಅನಿವಾರ್ಯತೆ ಇದೆಯೇ ಎಂಬುದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಸರ್ಕಾರಿ ಆಸ್ತಿಪಾಸ್ತಿಗಳು ಹಾಗೂ ನಿವಾಸಗಳ ಹಂಚಿಕೆ ವಿಚಾರದಲ್ಲಿ ನಡೆಯುತ್ತಿರುವ ಇಂತಹ ಪ್ರತಿಷ್ಠೆಯ ಕದನಗಳು ಜನಸಾಮಾನ್ಯರ ದೃಷ್ಟಿಯಲ್ಲಿ ರಾಜಕಾರಣಿಗಳ ಮೇಲಿನ ಗೌರವವನ್ನು ಕಡಿಮೆ ಮಾಡುತ್ತವೆ ಎಂಬುದಂತೂ ಸತ್ಯ.

Continue Reading

ರಾಜ್ಯ

ಪಾವಗಡ Congress MLA HV Venkatesh ದರ್ಪ: ಪ್ರಜಾಸೇವಾ ಆಂದೋಲನದಲ್ಲಿ ಜನರ ಮೇಲೆಯೇ ಗರಂ!

Published

on

ತುಮಕೂರು: ರಾಜ್ಯದ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಶೀಘ್ರವಾಗಿ ಮತ್ತು ಪರಿಣಾಮಕಾರಿಯಾಗಿ ಸ್ಪಂದಿಸುವ ಸದುದ್ದೇಶದಿಂದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಇತ್ತೀಚೆಗಷ್ಟೇ ಅತ್ಯಂತ ಮಹತ್ವಾಕಾಂಕ್ಷೆಯ ‘ಪ್ರಜಾಸೇವೆ’ ಇಲಾಖೆಗೆ ಮತ್ತು ‘ಪ್ರಜಾಸೇವಾ ಆಂದೋಲನ’ಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಆದರೆ, ಈ ಸರ್ಕಾರದ ಜನಸ್ನೇಹಿ ಕಾರ್ಯಕ್ರಮದ ಮೂಲ ಉದ್ದೇಶಕ್ಕೇ ಮಸಿ ಬಳಿಯುವಂತಹ ಘಟನೆಯೊಂದು ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಜನರ ಅಹವಾಲು ಸ್ವೀಕರಿಸಿ ಸಾಂತ್ವನ ಹೇಳಬೇಕಾದ ಜನಪ್ರತಿನಿಧಿಯೊಬ್ಬರು, ಸಮಸ್ಯೆ ಹೇಳಿಕೊಳ್ಳಲು ಬಂದ ಸಾರ್ವಜನಿಕರ ಮೇಲೆಯೇ ದರ್ಪ ತೋರಿ, ಏಕವಚನದಲ್ಲಿ ನಿಂದಿಸಿ ಧಮ್ಕಿ ಹಾಕಿರುವ ಘಟನೆ ಭಾರಿ ವಿವಾದ ಸೃಷ್ಟಿಸಿದೆ. ಪಾವಗಡ ಕ್ಷೇತ್ರದ Congress MLA HV Venkatesh (HV Venkatesh) ಅವರೇ ಈ ರೀತಿ ಸಾರ್ವಜನಿಕವಾಗಿ ದರ್ಪ ಪ್ರದರ್ಶಿಸಿದ ಶಾಸಕ.

ಪಾವಗಡ ತಾಲೂಕಿನ ವೈ.ಎನ್ ಹೊಸಕೋಟೆಯಲ್ಲಿ ಶಾಸಕ ಹೆಚ್.ವಿ ವೆಂಕಟೇಶ್ ಅವರ ನೇತೃತ್ವದಲ್ಲಿಯೇ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜನಸಾಮಾನ್ಯರು ತಮ್ಮ ಊರಿನ, ಬಡಾವಣೆಯ ಸಮಸ್ಯೆಗಳನ್ನು ಕಚೇರಿಗಳಿಗೆ ಅಲೆಯದೆ ನೇರವಾಗಿ ಶಾಸಕರು ಮತ್ತು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಿ ಎಂಬುದು ಈ ವೇದಿಕೆಯ ಸದುದ್ದೇಶವಾಗಿತ್ತು. ಈ ಮಹತ್ವದ ಸಭೆಯಲ್ಲಿ ತಹಶೀಲ್ದಾರ್, ತಾಲೂಕು ಪಂಚಾಯಿತಿ ಇಒ ಸೇರಿದಂತೆ ತಾಲೂಕು ಮಟ್ಟದ ಹಲವು ಪ್ರಮುಖ ಅಧಿಕಾರಿಗಳು ಭಾಗಿಯಾಗಿದ್ದರು. ಆದರೆ, ಉನ್ನತ ಅಧಿಕಾರಿಗಳ ಸಮ್ಮುಖದಲ್ಲೇ ಶಾಸಕರು ದೂರುದಾರರ ಮೇಲೆ ಹರಿಹಾಯ್ದಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಸಭೆ ನಡೆಯುತ್ತಿದ್ದ ವೇಳೆ, ಆಮ್ ಆದ್ಮಿ ಪಾರ್ಟಿ (ಆಪ್) ತಾಲೂಕು ಅಧ್ಯಕ್ಷ ತಿಪ್ಪೇಸ್ವಾಮಿ ಹಾಗೂ ಕರವೇ ಮುಖಂಡ ರಾಮಾಂಜಿನಪ್ಪ ಅವರು ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಒಂದು ಪ್ರಮುಖ ಸಮಸ್ಯೆಯ ಬಗ್ಗೆ ಅರ್ಜಿ ಸಲ್ಲಿಸಲು ವೇದಿಕೆ ಬಳಿ ಬಂದಿದ್ದರು. ವೈ.ಎನ್ ಹೊಸಕೋಟೆ ಗ್ರಾಮದ ಸರ್ವೇ ನಂಬರ್ 245/2ರಲ್ಲಿ ಇರುವ ಒಟ್ಟು 3 ಎಕರೆ ವಿಸ್ತೀರ್ಣದ ಸರ್ಕಾರಿ ಸಂತೆ ಜಾಗವನ್ನು ಪ್ರಭಾವಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಕೇವಲ ಒತ್ತುವರಿ ಮಾಡಿದ್ದಲ್ಲದೆ, ಆ ಜಾಗದಲ್ಲಿ ಅಕ್ರಮವಾಗಿ ಮನೆಗಳನ್ನು ಸಹ ನಿರ್ಮಾಣ ಮಾಡಿದ್ದಾರೆ. ಈ ಸರ್ಕಾರಿ ಜಾಗದ ಒತ್ತುವರಿಯನ್ನು ತಕ್ಷಣವೇ ತೆರವು ಮಾಡಿ, ಅದನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಆಗ್ರಹಿಸಿ ಅವರು ಅಧಿಕೃತ ಮನವಿ ಪತ್ರವನ್ನು ಸಿದ್ಧಪಡಿಸಿಕೊಂಡು ಬಂದಿದ್ದರು.

ಈ ಸರ್ಕಾರಿ ಜಾಗ ಒತ್ತುವರಿ ತೆರವಿನ ಅರ್ಜಿಯನ್ನು ಕೈಗೆ ತೆಗೆದುಕೊಳ್ಳುತ್ತಿದ್ದಂತೆಯೇ ಶಾಸಕ ಹೆಚ್.ವಿ ವೆಂಕಟೇಶ್ ಅವರ ಪಿತ್ತ ನೆತ್ತಿಗೇರಿದೆ. ಅರ್ಜಿಯಲ್ಲಿದ್ದ ವಿಷಯ ಗಮನಿಸುತ್ತಿದ್ದಂತೆ ತೀವ್ರ ಆಕ್ರೋಶಗೊಂಡ ಶಾಸಕರು, ಸಾರ್ವಜನಿಕರು ಹಾಗೂ ಅಧಿಕಾರಿಗಳ ಮುಂದೆಯೇ ದೂರುದಾರರ ಮೇಲೆ ಏರುಧ್ವನಿಯಲ್ಲಿ ಕೂಗಾಡಿದ್ದಾರೆ. “ಏಯ್… ಅರ್ಜಿ ಕೊಟ್ಟು ಸುಮ್ಮನೆ ಹೋಗ್ತಿರಬೇಕು. ಆಯ್ತು ಹೋಗು, ನಾವು ಪರಿಶೀಲನೆ ಮಾಡ್ತೀವಿ ಹೋಗು. ತಿರುಗಿ ಮಾತನಾಡಿದ್ರೆ ಅಷ್ಟೇ ನೋಡು” ಎಂದು ಬೆದರಿಕೆ ಹಾಕುವ ಮಾದರಿಯಲ್ಲಿ ಧಮ್ಕಿ ಹಾಕಿದ್ದಾರೆ. ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ಬಂದವರನ್ನು ಓರ್ವ ಜವಾಬ್ದಾರಿಯುತ ಶಾಸಕ ಹೀಗೆ ಕಡೆಗಣಿಸಿ, ದರ್ಪದಿಂದ ನಡೆಸಿಕೊಂಡ ವರ್ತನೆಗೆ ಸ್ಥಳದಲ್ಲಿದ್ದವರು ಅವಾಕ್ ಆಗಿದ್ದಾರೆ.

ವೈ.ಎನ್ ಹೊಸಕೋಟೆ ಮುಂತಾದ ಗ್ರಾಮೀಣ ಭಾಗಗಳಲ್ಲಿ ಸಂತೆ ಜಾಗಗಳು ಅತ್ಯಂತ ಪ್ರಮುಖವಾದ ವಾಣಿಜ್ಯ ಮತ್ತು ಸಾರ್ವಜನಿಕ ಕೇಂದ್ರಗಳಾಗಿರುತ್ತವೆ. ಬಡ ರೈತರು, ಸ್ಥಳೀಯ ವ್ಯಾಪಾರಿಗಳು ವಾರಕ್ಕೊಮ್ಮೆ ಸೇರಿ ತಮ್ಮ ಬೆಳೆಗಳನ್ನು ಮಾರಾಟ ಮಾಡುವ ಇಂತಹ ಅಮೂಲ್ಯ ಜಾಗವನ್ನು ಉಳಿಸಿಕೊಳ್ಳುವುದು ಜನಪ್ರತಿನಿಧಿಗಳ ಹಾಗೂ ಆಡಳಿತ ವ್ಯವಸ್ಥೆಯ ಆದ್ಯ ಕರ್ತವ್ಯ. ಆದರೆ ಬರೋಬ್ಬರಿ 3 ಎಕರೆಯಷ್ಟು ಬೃಹತ್ ಸರ್ಕಾರಿ ಜಾಗ ಕಬಳಿಕೆಯಾಗಿರುವ ಬಗ್ಗೆ ದೂರು ನೀಡಲು ಬಂದಾಗ, ಅದನ್ನು ಗಂಭೀರವಾಗಿ ಪರಿಗಣಿಸಬೇಕಿದ್ದ ಶಾಸಕರು, ದೂರುದಾರರ ಬಾಯಿ ಮುಚ್ಚಿಸುವ ಪ್ರಯತ್ನ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಸಿಎಂ ಡಿಕೆ ಶಿವಕುಮಾರ್ ಅವರು ಜನಸ್ನೇಹಿ ಆಡಳಿತ ನೀಡಲು ಪ್ರಜಾಸೇವಾ ಆಂದೋಲನದಂತಹ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರೆ, ಶಾಸಕರು ಈ ರೀತಿ ವರ್ತಿಸುತ್ತಿರುವುದು ಕಾಂಗ್ರೆಸ್ ಸರ್ಕಾರಕ್ಕೆ ಮುಜುಗರ ತರಿಸುವಂತಿದೆ. ಸರ್ಕಾರಿ ಆಸ್ತಿಯನ್ನು ರಕ್ಷಣೆ ಮಾಡಿ ಎಂದು ದೂರು ನೀಡಿದರೆ, ಒತ್ತುವರಿದಾರರಿಗೆ ಪರೋಕ್ಷವಾಗಿ ಬೆಂಬಲ ನೀಡುವಂತೆ ಶಾಸಕರು ಹರಿಹಾಯ್ದಿರುವುದರ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಈ ಘಟನೆ ಇದೀಗ ಪಾವಗಡ ತಾಲೂಕಿನಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ.

Continue Reading

ರಾಜ್ಯ

‘ನನ್ನ ಕಾಲಿಗೆ ಬಿದ್ದಿದ್ದು ನೀನು!’: ಜನಾರ್ಧನ ರೆಡ್ಡಿ ವಿರುದ್ಧ ಫೇಸ್‌ಬುಕ್‌ನಲ್ಲಿ ಬೆಂಕಿ ಉಗುಳಿದ ಸಚಿವ Shivaraj Tangadagi

Published

on

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಮತ್ತು ಶಾಸಕ ಹಾಗೂ ಮಾಜಿ ಸಚಿವ ಜಿ. ಜನಾರ್ಧನ ರೆಡ್ಡಿ (Janardhana Reddy) ನಡುವಿನ ವಾಕ್ಸಮರ ತಾರಕಕ್ಕೇರಿದೆ. ತಮ್ಮ ಅಧಿಕೃತ ಫೇಸ್‌ಬುಕ್ (Facebook) ಖಾತೆಯಲ್ಲಿ ತೀವ್ರ ಆಕ್ರೋಶ ಭರಿತ ಸಂದೇಶ ಹಂಚಿಕೊಂಡಿರುವ ಸಚಿವ ಶಿವರಾಜ್ ತಂಗಡಗಿ, ಜನಾರ್ಧನ ರೆಡ್ಡಿ ವಿರುದ್ಧ ಏಕವಚನದಲ್ಲೇ ಹರಿಹಾಯ್ದಿದ್ದು ಬಹಿರಂಗವಾಗಿ ನೇರ ರಾಜಕೀಯ ಸವಾಲು ಹಾಕಿದ್ದಾರೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ ಶಿವರಾಜ್ ತಂಗಡಗಿ ವ್ಯಕ್ತಪಡಿಸಿದ ಆಕ್ರೋಶ ಹೀಗಿದೆ:

“ಲೇ…! ಜನಾರ್ದನರೆಡ್ಡಿ, ಲೇ…! ಚಂಚಲಗೂಡ ಕೈದಿ ನಂ. 697, ಅಲೆ ಲೇ… ಜೈಲಿನಲ್ಲಿ ಮುದ್ದೆ ಮುರಿದ ಗಣಿ ಲೂಟಿಕೋರ. ಹೀಗೆಲ್ಲಾ ನಾನೂ ಕೂಡ ‘ಲೇ’ ಎನ್ನಬಲ್ಲೆ. ಘನತೆ, ನಡತೆಯಲ್ಲಿ ಅಲ್ಲದಿದ್ದರೂ ವಯಸ್ಸಿನಲ್ಲಿ ನೀವು ಹಿರಿಯರು. ಜೊತೆಗೆ ನನ್ನ ಹಿರಿಯರು ಸಂಸ್ಕಾರ ಕಲಿಸಿರುವುದರಿಂದ ‘ಲೇ’ ಎನ್ನುವ ಮಟ್ಟಕ್ಕೆ ನಾ ಇಳಿಯಲಾರೆ” ಎಂದು ತಂಗಡಗಿ ವ್ಯಂಗ್ಯವಾಡಿದ್ದಾರೆ.

ತಮ್ಮ ಮೊದಲ ಚುನಾವಣಾ ಗೆಲುವನ್ನು ಸ್ಮರಿಸಿದ ತಂಗಡಗಿ, “ನಾನು ಮೊದಲ ಬಾರಿಗೆ ಪಕ್ಷೇತರನಾಗಿ ಸ್ಪರ್ಧಿಸಿ ಗೆದ್ದಾಗ ‘ತಮ್ಮುಡು, ತಮ್ಮುಡು’ ಎಂದು ಗೋಗೆರೆದು ಬೆಂಬಲ ಕೇಳಿದವನು ನೀನು. ಈಗ ಸುಳ್ಳುಗಳ ಸರಮಾಲೆಯನ್ನೇ ಹೆಣೆದು ಬೊಗಳೆ ಬಿಡುತ್ತಿದ್ದೀಯಾ? ಯಪ್ಪಾ ಬೊಗಳೆ ವೀರ, ‘ನಿನಗೆ ತಾಕತ್ತು ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಾ. ನೀನು ರಾಜೀನಾಮೆ ಕೊಟ್ಟ 24 ಗಂಟೆಯಲ್ಲಿ ನಾನೂ ರಾಜೀನಾಮೆ ಕೊಡುತ್ತೇನೆ. ಗಂಗಾವತಿಯಲ್ಲಿ ನನ್ನ ವಿರುದ್ಧ ಉಪ ಚುನಾವಣೆ ಎದುರಿಸಿ ನಿನ್ನ ಬಲಾಬಲ ತೋರಿಸು. ಪ್ರಚಾರ ಶೋಕಿಗೆ ವ್ಯರ್ಥ ಪ್ರಲಾಪ ಮಾಡಬೇಡ’” ಎಂದು ನೇರ ಸವಾಲು ಒಡ್ಡಿದ್ದಾರೆ.

‘ಜನಾದೇಶ ಲೂಟಿಕೋರನಿಗೋ? ಜನ ಸೇವಕನಿಗೋ? ನೋಡೇ ಬಿಡೋಣ’:

ಮುಂದುವರಿದು ಮಾತನಾಡಿದ ಅವರು, “ನಿನಗೆ ನೇರ ಸವಾಲು ಹಾಕಿ ಪಂಥಾಹ್ವಾನ ನೀಡುತ್ತಿದ್ದೇನೆ. ನೀನು ‘ಎಸ್’ ಎಂದರೆ ನಾಳೆಯೇ ರಾಜೀನಾಮೆ ನೀಡುತ್ತೇನೆ. ಜನಾದೇಶ ಲೂಟಿಕೋರನಿಗೋ? ಜನ ಸೇವಕನಿಗೋ? ನೋಡೇ ಬಿಡೋಣ. ಗಣಿ ಲೂಟಿಯ ಅಕ್ರಮ ಸಂಪತ್ತು ಹಾಗೂ ಅದರಿಂದ ಬಂದಿರುವ ಅಹಂಕಾರ ನಿನ್ನ ನೆತ್ತಿಗೇರಿದೆ. ಹೀಗಾಗಿ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದೀಯ. ಗಣಿ ಲೂಟಿ ಕಳ್ಳ ಅಂದ ಕೂಡಲೇ ನೀನು ಉರಿದು ಬೀಳುತ್ತಿದ್ದೀಯ. ನೀನೇನು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೈಲು ಸೇರಿದ ಮಹಾನೀಯನಾ? ಜೈಲಿನಿಂದ ಹೊರ ಬರಲೂ ಕಳ್ಳಾಟ ಮಾಡಿದ ಭೂಪ ತಾನೇ?” ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

“ಗಣಿ ಲೂಟಿ ಮಾಡಿ ಜೈಲಿಗೆ ಹೋಗಿಲ್ಲ ಎಂದರೆ ‘ಫೀಲ್ ದಿ ಜೈಲ್’ ಪ್ಯಾಕೇಜ್ ಮೇಲೆ ಹೋಗಿದ್ದ್ಯಾ? ಅಥವಾ ‘ಜಯ ಜನಾರ್ದನ ಕೃಷ್ಣ ರಾಧಿಕಾಪತೇ’ ಅಂಥ ಕೃಷ್ಣ ಜನ್ಮಾಷ್ಟಮಿ ದಿನ ಕೃಷ್ಣನ ಭಜನೆ ಮಾಡಿದ್ದಕ್ಕೆ ನಿನ್ನನ್ನು ಕೃಷ್ಣ ಜನ್ಮಸ್ಥಾನಕ್ಕೆ ಕಳಿಸಿದರಾ? ಹೇಳಪ್ಪಾ ಕೊಳಲು ತೊಟ್ಟ ಗಣಿ ಕಳಂಕಿತ. ಗಣಿ ಲೂಟಿ ಕಳ್ಳ ನೀನು. ಸುಂಕಲಮ್ಮ ದೇವಸ್ಥಾನ ಒಡೆದ ಅವಿವೇಕಿ ನೀನು. ಗಂಗಾವತಿಯಲ್ಲಿ ಗೆದ್ದರೆ ಮತದಾರರಿಗೆ ಡಬಲ್ ಬೆಡ್ ರೂಮ್ ಮನೆ ನೀಡ್ತೀನಿ, ಕ್ರಿಕೆಟ್ ಸ್ಟೇಡಿಯಂ ಮಾಡ್ತೀನಿ ಅಂದಿದ್ದೆ, ಈಡೇರಿಸಿದ್ದೀಯಾ? ಸುಳ್ಳು ಹೇಳಿಕೊಂಡು ಜೀವನ ಮಾಡೋ ನಿನಗೆ ಇಷ್ಟಿರುವಾಗ ಸ್ವಾಭಿಮಾನದಿಂದ ಬೆಳೆದವನು ನನಗೆ ಎಷ್ಟಿರಬೇಡ?” ಎಂದು ಕೆಂಡಕಾರಿದ್ದಾರೆ.

ರಾಜ್ಯಸಭಾ ಚುನಾವಣೆಯ ಕಾಲ್ ಲಿಸ್ಟ್ ಬಹಿರಂಗಕ್ಕೆ ಸವಾಲು:

“ನನ್ನ ಕಾಲಿಗೆ ಬಿದ್ದೆ ಎಂದು ಹೇಳಿಕೊಳ್ಳುತ್ತಾ ಇದ್ದೀಯಾ, ನಾಚಿಕೆ ಆಗಲ್ವಾ? ನಾನು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮಾತನಾಡಿದ್ರೆ, ನಿನ್ನ ಬಂಡವಾಳ ಬಟಾ ಬಯಲು ಆಗುತ್ತದೆ. ಕತ್ತಲೆ ಲೋಕದ ಕರಾಳ ಮುಖ ಕಳಚಿ ಬೀಳುತ್ತದೆ, ಹುಷಾರು” ಎಂದು ಎಚ್ಚರಿಸಿದ್ದಾರೆ.

“ನಾನು ಸೇರಿ ಪಕ್ಷೇತರ ಶಾಸಕರ ಬೆಂಬಲದ ಭಿಕ್ಷೆಯಿಂದ ಒಬ್ಬ ಶಾಸಕನಾಗಲೂ ಅರ್ಹತೆ ಇಲ್ಲದವನು ಅಂದು ಸಚಿವನಾದವನು ನೀನು. ನನಗೆ ಹಣ ಕೊಟ್ಟಿದ್ದೆ ಎಂದಿದ್ದೀಯ. ನಿನ್ನಂತಹ ಅಡ್ಡದಿಡ್ಡಿ ದಾರಿಯಲ್ಲಿ ಹಣ ಸಂಪಾದಿಸಿದ ಅಡ್ಡಾಡಿ ಬಳಿ ಹಣ ಪಡೆಯುವ ದುರ್ದೈವ ನನಗೆ ಬಂದಿಲ್ಲ. ಜನಾರ್ದನರೆಡ್ಡಿ, ನಾನು ಪಕ್ಷೇತರನಾಗಿ ಗೆದ್ದಾಗ ನನ್ನ ಮನೆ ಮುಂದೆ ಕಾದು ಕುಳಿತವರು ನಿನ್ನ ಪಟಾಲಂ, ಅದನ್ನು ಮರೆಯಬೇಡ” ಎಂದು ಕಿಡಿಕಾರಿದ್ದಾರೆ.

“ನಮ್ಮ ಹೆಸರಿನಲ್ಲಿ ಯಡಿಯೂರಪ್ಪ ಅವರನ್ನು ಬ್ಲಾಕ್ ಮೇಲ್ ಮಾಡಿದ ಎಡಬಿದಂಗಿ ಗಿರಾಕಿ ನೀನು. ನನಗೆ ಕರೆ ಮಾಡಿ ದಮ್ಮಯ್ಯ ಎಂದು ಬೇಡಿಕೊಂಡವನು ಈಗ ನಾನು ನಿನ್ನ ಕಾಲಿಗೆ ಬಿದ್ದೆ ಎಂದು ಬಾಲ ಬಿಚ್ಚುತ್ತಿದ್ದೀಯಾ? ನಿನಗೆ ತಾಕತ್ತಿದ್ದರೆ ಕಳೆದ ಬಾರಿ ರಾಜ್ಯಸಭಾ ಚುನಾವಣೆಯಲ್ಲಿ ನನಗೆ ಎಷ್ಟು ಕರೆ ಮಾಡಿದ್ದೀಯ? ಯಾರಿಗೆ ವೋಟ್ ಹಾಕಿದ್ಯಾ? ಕಾಲ್ ಲಿಸ್ಟ್ ತೆಗೆದು ಬಹಿರಂಗ ಪಡಿಸು. ನಿನ್ನ ಯೋಗ್ಯತೆ, ಪಕ್ಷವಿರೋಧಿ ಬೂಟಾಟಿಕೆ ರಾಜ್ಯದ ಜನತೆಗೆ ಹಾಗೂ ನಿನ್ನ ಬಿಜೆಪಿ ಪಕ್ಷದವರಿಗೆ ತಿಳಿಯಲಿ. ನಿನ್ನ ಮಿಥ್ಯಾ ಸಾಧನೆ ಜನರಿಗೆ ತಿಳಿದಿದೆ. ನಿನಗೆ ಕಿಂಚಿತ್ ಮಾನ ಮರ್ಯಾದೆ ಇದ್ದರೂ ನನ್ನ ಸವಾಲು ಸ್ವೀಕರಿಸು” ಎಂದು ಶಾಸಕ ಜನಾರ್ಧನ ರೆಡ್ಡಿಗೆ ಸಚಿವ ತಂಗಡಗಿ ಫೇಸ್‌ಬುಕ್ ಮೂಲಕ ಬಹಿರಂಗ ಸವಾಲು ಹಾಕಿದ್ದಾರೆ.

Continue Reading

Trending