Connect with us

ರಾಜ್ಯ

ಮೈಲಸಂದ್ರದಲ್ಲಿ ಸಂಕ್ರಾಂತಿ ಸಂಭ್ರಮ

Published

on

ಮೈಲಸಂದ್ರದಲ್ಲಿ ಸಂಕ್ರಾಂತಿ ಸಂಭ್ರಮ
ಮೈಲಸಂದ್ರದಲ್ಲಿ ಸಂಕ್ರಾಂತಿ ಸಂಭ್ರಮ

ಬೆಂಗಳುರು: ಸೂರ್ಯ ತನ್ನ ಪಥವನ್ನು ಬದಲಾವಣೆ ಮಾಡುವ ಹಾಗೂ ಸುಗ್ಗಿ ಸಂಭ್ರಮದ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಮೈಲಸಂದ್ರ ಗ್ರಾಮದಲ್ಲಿ ಅಚರಿಸಲಾಯಿತು, ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕೆಂಗೇರಿ ಬ್ಲಾಕ್ ಅಧ್ಯಕ್ಷ ಮಂಜುನಾಥ್ ಅವರು ಮಾತನಾಡುತ್ತ ಸೂರ್ಯ ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಘಳಿಗೆಯನ್ನು ಸಂಕ್ರಮಣದ ಮೂಲಕ ಭಕ್ತಿಭಾವ, ಸಡಗರ, ಸಂಭ್ರಮದಿಂದ ಪ್ರತಿ ವರ್ಷ ಅಚರಿಸುತ್ತೇವೆ, ಗ್ರಾಮದಲ್ಲಿ ಸಂಕ್ರಾಂತಿ ಶುಭಶಯಗಳು ಬಣ್ಣದ ರಂಗೋಲಿಗಳಲ್ಲಿ ವಿಶೇಷವಾಗಿ ಕಂಗೊಳಿಸಿದವು, ಮೈಲಸಂದ್ರ ಗ್ರಾಮದಲ್ಲಿ ಹಬ್ಬದ ಹಿನ್ನೆಲೆಯಲ್ಲಿ ಹಸು ಮತ್ತು ಎತ್ತುಗಳನ್ನು ಸಿಂಗಾರ ಮಾಡಿ ಅವುಗಳ ಕಾಲಿಗೆ ಗೆಜ್ಜೆ ಕಟ್ಟಿ ಹಬ್ಬವನ್ನು ಸಂಭ್ರಮದಿಂದ ಅಚರಿಸುತ್ತೇವೆ, ಇಂದು ಯುವ ಪೀಳಿಗೆಗೆ ಭಾರತ ದೇಶದ ಹಬ್ಬಗಳ ವಿಶೇಷತೆ ಹಾಗೂ ಅದರ ಪರಂಪರೆ ತಿಳಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು, ಸಂಕ್ರಾಂತಿ ಹಬ್ಬ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ, ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ದಿಯ ಸಂಕೇತ, ಪ್ರತಿಯೊಂದು ಹಬ್ಬದ ಆಚರಣೆಯ ಹಿಂದೆ ಯಾವುದಾದರೊಂದು ಧಾರ್ಮಿಕ, ಪೌರಾಣಿಕ ಕಾರಣಗಳು ಮತ್ತು ಯಾವುದಾದರೊಂದು ನಂಬಿಕೆ ಅಥವಾ ಕಥೆ ಇರುತ್ತದೆ, ಹಾಗಾಗಿ ಮಕರ ಸಂಕ್ರಾಂತಿಯು ಎಲ್ಲಾ ಹಬ್ಬಗಳಿಗಿಂತಲೂ ವಿಭಿನ್ನವಾದ ಹಬ್ಬವಾಗಿದೆ ಎಂದರು, ಈ ಹಬ್ಬದ ಅಚರಣೆಯಲ್ಲಿ ಕಾಂಗ್ರೆಸ್ ಪಕ್ಷದ ಕೆಂಗೇರಿ ಮಂಡಲಾ ಉಪಾಧ್ಯಕ್ಷರಾದ ಎನ್ ನಾಗರಾಜ್, ಗ್ರಾಮದ ಹಿರಿಯಾ ಮುಖಂಡರಾದ ಮುನಿಕೃಷ್ಣಪ್ಪ ಹಾಗೂ ಹಲವಾರು ಮುಖಂಡರು ಉಪಸ್ಧಿತರಿದ್ದರು,

ಬೆಂಗಳೂರು

Raghavendra Swamy Mutt Jayanagar ಆಗಸ್ಟ್ 29 ರಿಂದ ಪೂರ್ವಾರಾಧನೆ, ಮಧ್ಯಾರಾಧನೆ, ಉತ್ತರಾರಾಧನೆ; ರಾಯರ ಆರಾಧನೆಗೆ ಸಜ್ಜಾದ ಬೆಂಗಳೂರು

Published

on

ಬೆಂಗಳೂರು:Raghavendra Swamy Mutt Jayanagar ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಬೆಂಗಳೂರಿನ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಗಸ್ಟ್ 27ರಿಂದ ಸೆಪ್ಟೆಂಬರ್ 2ರವರೆಗೆ ಏಳು ದಿನಗಳ ಕಾಲ ಆರಾಧನಾ ಸಪ್ತ ರಾತ್ರೋತ್ಸವ-ಮಹೋತ್ಸವ ನಡೆಯಲಿದೆ.

ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಹಾಗೂ ಅನುಗ್ರಹದೊಂದಿಗೆ, ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಹಾಗೂ ಭಕ್ತರ ಸಹಕಾರದೊಂದಿಗೆ ಈ ಮಹೋತ್ಸವವನ್ನು ಆಯೋಜಿಸಲಾಗಿದೆ.

ಆಗಸ್ಟ್ 27ರಂದು ಸಂಜೆ 6.30ಕ್ಕೆ ಮುಳಬಾಗಲು ಶ್ರೀಪಾದರಾಜ ಮಠದ ಪರಮಪೂಜ್ಯ ಶ್ರೀ 1008 ಶ್ರೀ ಸುಜಯನಿಧಿತೀರ್ಥ ಶ್ರೀಪಾದಂಗಳವರ ಅಮೃತ ಹಸ್ತದಿಂದ ಗೋಪೂಜೆ, ಧ್ವಜಾರೋಹಣ, ಶ್ರೀಲಕ್ಷ್ಮೀಪೂಜೆ, ಧನ-ಧಾನ್ಯ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಸಾವಿರಾರು ಭಕ್ತರಿಗೆ ವಿಶೇಷ ಪ್ರಸಾದ

ಆರಾಧನಾ ಮಹೋತ್ಸವಕ್ಕೆ ಆಗಮಿಸುವ ಸಾವಿರಾರು ಭಕ್ತರಿಗಾಗಿ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. 55ಕ್ಕೂ ಹೆಚ್ಚಿನ ಅಡುಗೆ ಬಾಣಸಿಗರಿಂದ ವಿವಿಧ ರೀತಿಯ ಪ್ರಸಾದ ಹಾಗೂ ಪಂಚಭಕ್ಷ್ಯಗಳನ್ನು ಸಿದ್ಧಪಡಿಸಲಾಗುತ್ತಿದೆ.

ಶ್ರೀಮಠದ ಪ್ರಾಕಾರ, ಪೂಜಾ ಮಂದಿರ, ದ್ವಾರ, ಕಟ್ಟಡ ಹಾಗೂ ಮಠದ ಮುಂಭಾಗದ ರಾಜಬೀದಿಯನ್ನು ವಿಶೇಷ ದೀಪಗಳಿಂದ ಅಲಂಕರಿಸಲಾಗುತ್ತಿದೆ. ಭಕ್ತರಿಗೆ ಮಂತ್ರಾಕ್ಷತೆ ನೀಡಲು ವೇದಮಂತ್ರ ಹಾಗೂ ಸ್ತೋತ್ರಗಳೊಂದಿಗೆ ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪೂರ್ವಾರಾಧನೆ, ಮಧ್ಯಾರಾಧನೆ, ಉತ್ತರಾರಾಧನೆ

ಆಗಸ್ಟ್ 29ರಂದು ಪೂರ್ವಾರಾಧನೆ, ಆಗಸ್ಟ್ 30ರಂದು ಮಧ್ಯಾರಾಧನೆ ಹಾಗೂ ಆಗಸ್ಟ್ 31ರಂದು ಉತ್ತರಾರಾಧನೆ ನಡೆಯಲಿದೆ.

ಈ ಮೂರು ದಿನಗಳಂದು ಬೆಳಗ್ಗೆ 6.30ಕ್ಕೆ ಅರ್ಚಕರಾದ ಶ್ರೀ ಕೃಷ್ಣಾಚಾರ್ ಹಾಗೂ ಗೊಗ್ಗಿ ರಾಮಚಂದ್ರಾಚಾರ್ ಅವರಿಂದ ಗುರು ರಾಯರ ಬೃಂದಾವನಕ್ಕೆ ವಿಶೇಷ ಫಲ ಪಂಚಾಮೃತ ಅಭಿಷೇಕ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟೋತ್ತರ ಪಾರಾಯಣ ನಡೆಯಲಿದೆ.

ನಂತರ ನೂತನ ವಸ್ತ್ರ ಸಮರ್ಪಣೆ, ನವರತ್ನ ಕವಚ ಅಲಂಕಾರ, ವಿಶೇಷ ಹೂವಿನ ಅಲಂಕಾರ ಸೇರಿದಂತೆ ವಿವಿಧ ಉತ್ಸವಗಳು ನೆರವೇರಲಿವೆ.

ಪ್ರತಿದಿನ ಬೆಳಗ್ಗೆ 7 ಗಂಟೆಗೆ ಸೇವಾಕರ್ತರಿಗೆ ಸಂಕಲ್ಪ, ರಾಯರಿಗೆ ಫಲ ಸಮರ್ಪಣೆ ಹಾಗೂ ಸಾಮೂಹಿಕ ಪಾದಪೂಜೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಕನಕಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಹಾಗೂ 12.30ಕ್ಕೆ ಭಕ್ತರಿಗೆ ಅನ್ನಸಂತರ್ಪಣೆ ಪ್ರಸಾದ ವಿತರಣೆ ನಡೆಯಲಿದೆ.

ರಥೋತ್ಸವ, ಪಲ್ಲಕ್ಕಿ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮ

ಮಹೋತ್ಸವದ ಏಳು ದಿನಗಳಲ್ಲೂ ಸಂಜೆ ಹರಿಭಜನೆ, ವಿದ್ವಾಂಸರಿಂದ ಪ್ರವಚನ, ಸಂಗೀತ, ಭರತನಾಟ್ಯ, ಪಲ್ಲಕ್ಕಿ ಉತ್ಸವ, ಗಜವಾಹನ ಉತ್ಸವ ಹಾಗೂ ರಥೋತ್ಸವ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಆಗಸ್ಟ್ 30ರಂದು ಬೆಳಗ್ಗೆ 8.30ಕ್ಕೆ ಜಯನಗರ 5ನೇ ಬಡಾವಣೆಯ ರಾಜಬೀದಿಯಲ್ಲಿ ಚಂಡೇವಾದನ, ಗೊಂಬೆಗಳ ಕುಣಿತ ಹಾಗೂ ವಿವಿಧ ವಾದ್ಯಗಳೊಂದಿಗೆ ಮಹಾರಥೋತ್ಸವ ನಡೆಯಲಿದೆ.

ಪ್ರತಿದಿನ ಸಂಜೆ 5ರಿಂದ 6ರವರೆಗೆ ವಿವಿಧ ಭಜನಾ ಮಂಡಳಿಗಳಿಂದ ಹರಿಭಜನೆ ಆಯೋಜಿಸಲಾಗಿದೆ. ಆಗಸ್ಟ್ 27ರಂದು ಶ್ರೀಮತಿ ಗೀತಾ ಬತ್ತದ್ ಮತ್ತು ತಂಡ, ಆಗಸ್ಟ್ 28ರಂದು ಶ್ರೀಮತಿ ಗೀತಾ ಪ್ರಸಾದ್ ಹಿರಣ್ಮಯಿ ತಂಡ, ಆಗಸ್ಟ್ 29ರಂದು ಹೃಷಿಕೇಶ ಭಜನಾ ಮಂಡಳಿ, ಆಗಸ್ಟ್ 30ರಂದು ಅಕ್ಷಯ ವಿಪ್ರ ಭಜನಾ ಮಂಡಳಿ, ಆಗಸ್ಟ್ 31ರಂದು ಮಂಜುಳವಾಣಿ ಭಜನಾ ಮಂಡಳಿ, ಸೆಪ್ಟೆಂಬರ್ 1ರಂದು ಹರಿ ವಾಯು ಭಜನಾ ಮಂಡಳಿ ಹಾಗೂ ಸೆಪ್ಟೆಂಬರ್ 2ರಂದು ಅಂಭ್ರಣೀಶ ಭಜನಾ ಮಂಡಳಿಯಿಂದ ಹರಿಭಜನೆ ನಡೆಯಲಿದೆ.

ದಾಸವಾಣಿ, ವಾದ್ಯ ಸಂಗೀತ, ದಾಸ ಲಹರಿ

ಸಂಜೆ 6.30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಗಸ್ಟ್ 28ರಂದು ವಿದುಷಿ ಶ್ರೀಮತಿ ರಂಜಿತಾ ಪ್ರಸಾದ್ ಮತ್ತು ಸಂಗಡಿಗರಿಂದ ದಾಸವಾಣಿ, ಆಗಸ್ಟ್ 31ರಂದು ನಾದಸ್ವಾದ ತಂಡದಿಂದ ವಾದ್ಯ ಸಂಗೀತ, ಸೆಪ್ಟೆಂಬರ್ 1ರಂದು ಡಾ. ರಾಯಚೂರು ಶೇಷಗಿರಿದಾಸ್ ತಂಡದಿಂದ ದಾಸ ಲಹರಿ ಹಾಗೂ ಸೆಪ್ಟೆಂಬರ್ 2ರಂದು ಶ್ರೀಮತಿ ದರ್ಶಿನಿ ಮಂಜುನಾಥ್ ಅವರ ನಿರ್ದೇಶನದ ನೃತ್ಯ ದಿಶಾ ತಂಡದಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.

ಭಕ್ತರಿಗೆ ವಿಶೇಷ ವ್ಯವಸ್ಥೆ

ಮಹೋತ್ಸವದ ಸಂದರ್ಭದಲ್ಲಿ ಭಕ್ತರ ಅನುಕೂಲಕ್ಕಾಗಿ ಜಯನಗರ ಪೊಲೀಸ್ ಸಿಬ್ಬಂದಿಯ ಸಹಕಾರದೊಂದಿಗೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗುತ್ತಿದೆ. ವಯೋವೃದ್ಧರು, ವಿಕಲಚೇತನರು, ಗರ್ಭಿಣಿಯರು, ಸೇವಾಕರ್ತರು ಹಾಗೂ ಇತರ ಭಕ್ತರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ಯರು ತಿಳಿಸಿದ್ದಾರೆ.

ಆರಾಧನಾ ಮಹೋತ್ಸವದಲ್ಲಿ ಸೇವೆ ಸಲ್ಲಿಸಲು ಬಯಸುವ ಭಕ್ತರು 9449133929 ಸಂಖ್ಯೆಯ ಮೂಲಕ ಆನ್‌ಲೈನ್ ಸೇವೆಯ ಮಾಹಿತಿಯನ್ನು ಪಡೆಯಬಹುದು. ಸೇವೆ ಸಲ್ಲಿಸಿದ ಭಕ್ತರು ಶ್ರೀಮಠಕ್ಕೆ ಆಗಮಿಸಿ ರಾಯರ ಶೇಷವಸ್ತ್ರ, ಪರಿಮಳ ಪ್ರಸಾದ ಹಾಗೂ ಫಲಮಂತ್ರಾಕ್ಷತೆ ಸ್ವೀಕರಿಸಬಹುದು.

ಇದೇ ವೇಳೆ ದಾನಿಗಳಿಗಾಗಿ ವಿಶೇಷ ಮಂತ್ರಾಲಯ ಯಾತ್ರೆ ಸೇವೆಯನ್ನೂ ಆಯೋಜಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ 08022443962, 9945429129 ಹಾಗೂ 9448847586 ಸಂಖ್ಯೆಯನ್ನು ಸಂಪರ್ಕಿಸಬಹುದು.

Continue Reading

ರಾಜ್ಯ

Social Media ದಲ್ಲಿ ಸುಳ್ಳು ಸುದ್ದಿ ಹರಡಿಸಿದ್ರೆ ಹುಷಾರ್‌; ಚಾಮರಾಜನಗರ ಪೊಲೀಸರಿಂದ ಖಡಕ್‌ ಎಚ್ಚರಿಕೆ

Published

on

ಚಾಮರಾಜನಗರ:Social Media ಗಳಲ್ಲಿ ಸುಳ್ಳು ಸುದ್ದಿ ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ಎಚ್ಚರಿಕೆ ನೀಡಿದ್ದಾರೆ.

ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಹೊಳೆಮುರಿದಟ್ಟಿ ಹಾಗೂ ಕರಿಕಲ್ಲು ಗುಡ್ಡದಲ್ಲಿ ಆ.15ರಂದು ನಡೆದ ಶೂಟ್‌ಔಟ್‌ ಪ್ರಕರಣದ ಹಿನ್ನೆಲೆಯಲ್ಲಿ ಹನೂರಿನಲ್ಲಿ ಮಾತನಾಡಿದ ಅವರು, ಘಟನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವುದನ್ನು ಪೊಲೀಸರು ಗಮನಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪೊಲೀಸ್ ಇಲಾಖೆ ಈಗಾಗಲೇ ಸಾಮಾಜಿಕ ಜಾಲತಾಣಗಳ ಮೇಲೆ ನಿರಂತರ ನಿಗಾ ಇರಿಸಿದೆ. ಸುಳ್ಳು ಸುದ್ದಿ ಹರಡುವುದು, ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು ಅಥವಾ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಮಾಹಿತಿಯನ್ನು ಪ್ರಸಾರ ಮಾಡುವವರ ವಿರುದ್ಧ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಮುತ್ತುರಾಜ್ ಸ್ಪಷ್ಟಪಡಿಸಿದ್ದಾರೆ.

ವಾಟ್ಸಪ್‌ ಗ್ರೂಪ್‌ಗಳ ಮೇಲೂ ನಿಗಾ

‘ಟೈಗರ್ ಆಫ್ ಜಸ್ಟಿಸ್’ ಹೆಸರಿನ ವಾಟ್ಸಪ್‌ ಗ್ರೂಪ್‌ ಸೇರಿದಂತೆ ಕೆಲವು ಸಾಮಾಜಿಕ ಜಾಲತಾಣಗಳ ಗ್ರೂಪ್‌ಗಳಲ್ಲಿ ನಡೆಯುತ್ತಿರುವ ಚರ್ಚೆಗಳು ಪೊಲೀಸರ ಗಮನಕ್ಕೆ ಬಂದಿವೆ. ಈ ಗ್ರೂಪ್‌ಗಳಲ್ಲಿನ ಚರ್ಚೆಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದರ ಜೊತೆಗೆ, “ಕರ್ನಾಟಕ ಸರ್ಕಾರ ತಮಿಳರನ್ನು ನಿರ್ಲಕ್ಷ್ಯ ಮಾಡುತ್ತಿದೆ” ಎಂಬ ರೀತಿಯ ಆಡಿಯೋ ಸಂದೇಶಗಳು ಕೆಲವು ಗ್ರೂಪ್‌ಗಳಲ್ಲಿ ಹರಿದಾಡುತ್ತಿರುವ ಮಾಹಿತಿಯೂ ಪೊಲೀಸರ ಗಮನಕ್ಕೆ ಬಂದಿದೆ.

ಎರಡು ಸಮುದಾಯಗಳ ನಡುವೆ ದ್ವೇಷ ಹುಟ್ಟುಹಾಕುವ ಉದ್ದೇಶದಿಂದ ಯಾವುದೇ ಸಂದೇಶ, ಆಡಿಯೋ ಅಥವಾ ಪೋಸ್ಟ್‌ ಹಂಚಿಕೊಂಡರೂ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಇಂತಹ ಕೃತ್ಯಗಳಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಎಚ್ಚರಿಕೆ ನೀಡಿದ್ದಾರೆ.

ಗೋವಿಂದರಾಜು ಬಂಧನಕ್ಕೆ ವಿಶೇಷ ತಂಡ

ಶೂಟ್‌ಔಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಅಲಿಯಾಸ್ ಗೋವಿಂದರಾಜು ಎಂಬಾತ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಆತನ ಬಂಧನಕ್ಕಾಗಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಶೋಧ ಕಾರ್ಯವನ್ನು ಚುರುಕುಗೊಳಿಸಲಾಗಿದೆ. ಗೋವಿಂದರಾಜು ಬಂಧನದ ಬಳಿಕ ಪ್ರಕರಣದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಿಐಡಿ ತನಿಖೆಗೆ ನಾಲ್ಕು ಪ್ರಕರಣ

ಶೂಟ್‌ಔಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ಕು ಪ್ರಕರಣಗಳನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ ಅವರು ಸಿಐಡಿ ತನಿಖೆಗೆ ವಹಿಸಿದ್ದಾರೆ.

ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಸಂಗ್ರಹಿಸಿರುವ ದಾಖಲೆಗಳು ಹಾಗೂ ಮಾಹಿತಿಯನ್ನು ಸಿಐಡಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು. ಮುಂದಿನ ತನಿಖೆಯನ್ನು ಸಿಐಡಿ ಅಧಿಕಾರಿಗಳು ಕೈಗೊಳ್ಳಲಿದ್ದಾರೆ ಎಂದು ಎಸ್‌ಪಿ ಮುತ್ತುರಾಜ್ ತಿಳಿಸಿದ್ದಾರೆ.

ಒಟ್ಟಿನಲ್ಲಿ, ಚಾಮರಾಜನಗರ ಶೂಟ್‌ಔಟ್‌ ಪ್ರಕರಣದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಗಳ ಮೇಲೆ ಪೊಲೀಸರು ತೀವ್ರ ನಿಗಾ ವಹಿಸಿದ್ದು, ಸುಳ್ಳು ಸುದ್ದಿ, ಪ್ರಚೋದನಕಾರಿ ಪೋಸ್ಟ್‌ ಹಾಗೂ ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಸಂದೇಶಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

Continue Reading

ರಾಜ್ಯ

CM D K Shiv Kumar ಕೈ ಶಾಸಕರ ಜೊತೆ ಡಿಕೆಶಿ ಮಹತ್ವದ ಸಭೆ; ಅನುದಾನಕ್ಕೆ ಗ್ರೀನ್‌ ಸಿಗ್ನಲ್‌, SIRಗೆ ಫುಲ್‌ ಫೋಕಸ್‌

Published

on

ಬೆಂಗಳೂರು: CM D K Shiv Kumar ಅವರು ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಗ್ರೆಸ್‌ ಶಾಸಕರೊಂದಿಗೆ ದಿನಪೂರ್ತಿ ಸಭೆ ನಡೆಸಿ ಕ್ಷೇತ್ರಗಳ ಅಭಿವೃದ್ಧಿ, ಅನುದಾನ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಶಾಸಕರ ಕುಂದುಕೊರತೆ ಹಾಗೂ ಬೇಡಿಕೆಗಳನ್ನು ಆಲಿಸಿದ ಸಿಎಂ, ಸಾಧ್ಯವಾದಷ್ಟು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಸಚಿವರು ಹಾಗೂ ಶಾಸಕರು ಉಪಸ್ಥಿತರಿದ್ದರು. ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನದಿಂದ ವಂಚಿತರಾದ ಕೆಲವು ಶಾಸಕರ ಅಸಮಾಧಾನಕ್ಕೂ ಸಭೆಯಲ್ಲಿ ಗಮನ ನೀಡಲಾಗಿದೆ. ಶಾಸಕರೊಂದಿಗೆ ನೇರವಾಗಿ ಚರ್ಚಿಸಿದ ಸಿಎಂ, ಅವರ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳು ಮತ್ತು ಅನುದಾನದ ಅಗತ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಅನುದಾನಕ್ಕೆ ಶಾಸಕರ ಒತ್ತಾಯ

ಸಭೆಯಲ್ಲಿ ಬಹುತೇಕ ಕಾಂಗ್ರೆಸ್‌ ಶಾಸಕರು ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಬಜೆಟ್‌ನಲ್ಲಿ ಘೋಷಿಸಿರುವಂತೆ ಕ್ಷೇತ್ರವಾರು ಅನುದಾನ ಬಿಡುಗಡೆ ಮಾಡಬೇಕು. ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಹೆಚ್ಚುವರಿ ಅನುದಾನ ಅಗತ್ಯವಿದೆ ಎಂದು ಶಾಸಕರು ಸಿಎಂ ಗಮನಕ್ಕೆ ತಂದಿದ್ದಾರೆ.

ಶಾಸಕರ ಬೇಡಿಕೆಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಕ್ಷೇತ್ರಗಳ ಅಭಿವೃದ್ಧಿ ವಿಚಾರದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಇದೇ ವೇಳೆ ಹಲವು ಶಾಸಕರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಗಳಲ್ಲಿರುವ ಸಮಸ್ಯೆಗಳನ್ನೂ ಪ್ರಸ್ತಾಪಿಸಿದ್ದಾರೆ. ಸಚಿವರು ಶಾಸಕರ ಅಹವಾಲುಗಳಿಗೆ ಸ್ಪಂದಿಸಬೇಕು ಮತ್ತು ಶಾಸಕರ ಸಂಪರ್ಕಕ್ಕೆ ಸಿಗಬೇಕು ಎಂದು ಒತ್ತಾಯಿಸಿದ್ದಾರೆ.

SIR ಬಗ್ಗೆ ವಿಶೇಷ ಗಮನ

ಕಾಂಗ್ರೆಸ್‌ ಶಾಸಕರ ಸಭೆಯಲ್ಲಿ SIR (Special Intensive Revision) ವಿಚಾರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ಮತದಾರರನ್ನು ಗುರುತಿಸಿ, ಅವರ ಹೆಸರು ಪಟ್ಟಿಗೆ ಸೇರ್ಪಡೆಯಾಗುವಂತೆ ಸಹಕರಿಸಲು ಶಾಸಕರಿಗೆ ಸೂಚನೆ ನೀಡಲಾಗಿದೆ.

ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈತಪ್ಪದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಚುನಾವಣಾ ಆಯೋಗವು ಸುಮಾರು 43 ಲಕ್ಷ ಮತದಾರರಿಗೆ ನೋಟಿಸ್‌ ನೀಡಲು ಮುಂದಾಗಿರುವ ಹಿನ್ನೆಲೆಯಲ್ಲಿ, ನೋಟಿಸ್‌ ಪಡೆದವರಿಗೆ ಅಗತ್ಯ ದಾಖಲೆಗಳನ್ನು ಒದಗಿಸುವಲ್ಲಿ ಸಹಾಯ ಮಾಡುವಂತೆ ಶಾಸಕರಿಗೆ ಸಲಹೆ ನೀಡಲಾಗಿದೆ.

ಖಾಯಂ ನಿವಾಸ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಪಡೆಯಲು ನೋಟಿಸ್‌ ಪಡೆದ ಮತದಾರರಿಗೆ ನೆರವು ನೀಡಬೇಕು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕ್ಷೇತ್ರ ಮಟ್ಟದಲ್ಲಿ ಕೆಲಸ ಮಾಡುವಂತೆ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಗ್ಯಾರಂಟಿ ಸಮಿತಿ, ಭಾರತ್ ಜೋಡೋ ಸಂಘದ ಚರ್ಚೆ

ಸಭೆಯ ಬಳಿಕ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಅಧಿವೇಶನದ ಬಳಿಕ ಎಲ್ಲಾ ಶಾಸಕರು ಬೆಂಗಳೂರಿನಲ್ಲಿರುವ ಹಿನ್ನೆಲೆಯಲ್ಲಿ ಸಿಎಂ ಸಭೆ ಕರೆದಿದ್ದರು ಎಂದು ತಿಳಿಸಿದರು. SIR ಜೊತೆಗೆ ಗ್ರಾಮೀಣ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ಭಾರತ್ ಜೋಡೋ ಸಂಘ ರಚನೆ ಕುರಿತು ಚರ್ಚೆ ನಡೆದಿದೆ ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಗಿದೆ. 2028ರ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಪ್ರಗತಿಪರ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಿಎಂ ಸಲಹೆ ನೀಡಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.

ಸಚಿವರು 15 ದಿನಕ್ಕೊಮ್ಮೆ ತಾಲೂಕುಗಳಿಗೆ ತೆರಳಿ ಸ್ಥಳೀಯ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿಯೂ ಸಿಎಂ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

ಒಟ್ಟಿನಲ್ಲಿ, ಅನುದಾನ, SIR, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಕ್ಷೇತ್ರಾಭಿವೃದ್ಧಿ ಸೇರಿದಂತೆ ಹಲವು ವಿಚಾರಗಳ ಕುರಿತು ನಡೆದ ಕಾಂಗ್ರೆಸ್‌ ಶಾಸಕರ ಸಭೆ ರಾಜ್ಯ ರಾಜಕೀಯದಲ್ಲಿ ಮಹತ್ವ ಪಡೆದುಕೊಂಡಿದೆ.

Continue Reading
Advertisement

Trending