Connect with us

ದೇಶ

ಪರೀಕ್ಷೆಗೆ ಮುನ್ನ 10 ನಿಮಿಷ ನಕ್ಕುಬಿಡಿ, ಜೋಕ್‌ ಮಾಡಿ: ಮಕ್ಕಳಿಗೆ ಪ್ರಧಾನಿ ಮೋದಿ ಕಿವಿಮಾತು

ಪರೀಕ್ಷೆಗೆ ಮುನ್ನ 10 ನಿಮಿಷ ನಕ್ಕುಬಿಡಿ, ಜೋಕ್ ಮಾಡಿ: ಮಕ್ಕಳಿಗೆ ಪ್ರಧಾನಿ ಮೋದಿ ಕಿವಿಮಾತು
ಪರೀಕ್ಷೆಗೆ ಮುನ್ನ 10 ನಿಮಿಷ ನಕ್ಕುಬಿಡಿ, ಜೋಕ್ ಮಾಡಿ: ಮಕ್ಕಳಿಗೆ ಪ್ರಧಾನಿ ಮೋದಿ ಕಿವಿಮಾತು

ಹೊಸದಿಲ್ಲಿ: ಪರೀಕ್ಷೆಗೂ ಮುನ್ನ ಆರಾಮವಾಗಿ ಕುಳಿತುಕೊಳ್ಳಿ; 5-10 ನಿಮಿಷ ಜೋಕ್ ಮಾಡಿ, ನಕ್ಕು ಮನಸ್ಸನ್ನು ಹಗರಾಗಿಸಿಕೊಳ್ಳಿ; ಪರೀಕ್ಷೆಯ ಹಾಲ್ಗೆ ಅರ್ಧ ಗಂಟೆ ಮೊದಲೇ ತಲುಪಿಕೊಳ್ಳಿ… ಇವೇ ಮುಂತಾದ ಹಲವು ಕಿವಿಮಾತುಗಳನ್ನು ಪ್ರಧಾನಿ ನರೇಂದ್ರ ಮೋದಿ ಮಕ್ಕಳಿಗೆ ಹೇಳಿದ್ದಾರೆ.
10ನೇ ಮತ್ತು 12ನೇ ತರಗತಿಯ 2024ರ ಬೋರ್ಡ್ ಎಕ್ಸಾಮ್ಗೆ ಮುನ್ನ ವಿದ್ಯಾರ್ಥಿಗಳ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿಕೊಡುತ್ತಿರುವ ʼಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಇದೂ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಿದರು. ಸೋಮವಾರ ದಿಲ್ಲಿಯ ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ಕಾರ್ಯಕ್ರಮ ನಡೆಯಿತು. ದೇಶಾದ್ಯಂತದಿಂದ ಬಂದ ಹಲವು ನೂರಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. ನೇರವಾಗಿ ಹಾಗೂ ಆನ್ಲೈನ್ ಮೂಲಕ ಪ್ರಧಾನಿಗೆ ಪ್ರಶ್ನೆಗಳನ್ನು ಕೇಳಿದರು. ಪ್ರಧಾನಿಯವರು ನೀಡಿದ ಹಲವು ಟಿಪ್ಸ್ ಈ ಕೆಳಗಿನಂತಿದ್ದವು:
• ಪರೀಕ್ಷೆಯ ಹಾಲ್ಗೆ ಅರ್ಧ ಗಂಟೆಗೂ ಮೊದಲು ತಲುಪಿಕೊಂಡರೆ ಯಾವುದೇ ಉದ್ವೇಗ ಇರುವುದಿಲ್ಲ. ಹತ್ತು ನಿಮಿಷದಷ್ಟು ಕಾಲ ಜೋಕ್ ಮಾಡಲು, ನಗಲು ಮೀಸಲಿಡಿ. ಅದರಿಂದ ಮನಸ್ಸು ಹಗುರಾಗುತ್ತದೆ. ನಂತರ ಪ್ರಶ್ನೆ ಪತ್ರಿಕೆ ನಿಮ್ಮ ಕೈಗೆ ಬಂದಾಗ, ನೀವು ಅದನ್ನು ಆರಾಮವಾಗಿ ಮಾಡಲು ಸಾಧ್ಯವಾಗುತ್ತದೆ.
• ಪರೀಕ್ಷಾ ಹಾಲ್ನಲ್ಲಿ ನಾವು ಸಬ್ಜೆಕ್ಟ್ ಹೊರತುಪಡಿಸಿ ಇತರ ವಿಷಯಗಳ ಮೇಲೆ ಮನಸ್ಸು ಕೇಂದ್ರೀಕರಿಸುವುದರಿಂದ ನಮ್ಮ ಶಕ್ತಿ ಅನಗತ್ಯವಾಗಿ ವ್ಯರ್ಥವಾಗುತ್ತದೆ. ನಾವು ನಮ್ಮಲ್ಲೇ ಕಳೆದುಹೋಗಬೇಕು. ಮಹಾಭಾರತದ ಅರ್ಜುನ ಮತ್ತು ಪಕ್ಷಿನೋಟದ ಕಥೆಯನ್ನು ನೀವು ಕೇಳಿರಬಹುದು. ಅದನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ.
• ಆತಂಕಕ್ಕೆ ಕಾರಣವೇನೆಂದರೆ, ಪರೀಕ್ಷೆಯ ಸಮಯದಲ್ಲಿ, ಸಮಯ ಸಾಕಾಗಲಿಕ್ಕಿಲ್ಲ ಎಂದು ನೀವು ಭಾವಿಸುತ್ತೀರಿ. ಪ್ರಶ್ನೆಪತ್ರಿಕೆ ಕೈಗೆ ಬಂದ ಕೂಡಲೇ ಸಮಗ್ರವಾಗಿ ಓದಿ. ಮೊದಲು ಯಾವ ಪ್ರಶ್ನೆಗಳನ್ನು ಪ್ರಯತ್ನಿಸಿದರೆ ಉತ್ತಮ ಎಂದು ನೋಟ್ ಮಾಡಿಕೊಳ್ಳಿ. ಪ್ರತೀ ಪ್ರಶ್ನೆಗೂ ಸಮಯ ನಿಗದಿಪಡಿಸಿಕೊಳ್ಳಿ.
• ಮೊಬೈಲ್ನಲ್ಲಿ ಒಂದರ ಹಿಂದೆ ಒಂದರಂತೆ ರೀಲುಗಳನ್ನು ನೋಡುತ್ತಾ ಹೋದರೆ ಸಮಯ ವ್ಯರ್ಥವಾಗುತ್ತದೆ. ನಿದ್ದೆ ಕೆಡುತ್ತದೆ, ಓದಿದ್ದನ್ನು ನೆನಪಿಟ್ಟುಕೊಳ್ಳಲು ಸಾಧ್ಯವಾಗುವುದಿಲ್ಲ. ನಿದ್ರೆಯನ್ನು ಕೀಳಂದಾಜು ಮಾಡಬೇಡಿ. ಆಧುನಿಕ ಆರೋಗ್ಯ ವಿಜ್ಞಾನವು ನಿದ್ರೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ನಿಮಗೆ ಬೇಕಾದಷ್ಟು ನಿದ್ದೆ ಮಾಡುತ್ತೀರೋ ಇಲ್ಲವೋ ಎಂಬುದು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
• ನಿಮ್ಮ ಆಹಾರದಲ್ಲಿ ನಿಮ್ಮ ವಯಸ್ಸಿಗೆ ಅಗತ್ಯವಿರುವ ವಸ್ತುಗಳು ಇವೆಯೇ ಅಥವಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯ. ನಮ್ಮ ಆಹಾರದಲ್ಲಿ ಸಮತೋಲನವು ಆರೋಗ್ಯಕ್ಕೆ ಮುಖ್ಯವಾಗಿದೆ. ಫಿಟ್ನೆಸ್ಗಾಗಿ ವ್ಯಾಯಾಮವನ್ನು ಮಾಡಬೇಕು. ನೀವು ಪ್ರತಿದಿನ ಹಲ್ಲುಜ್ಜುವ ರೀತಿಯಲ್ಲಿ ವ್ಯಾಯಾಮ ಮಾಡಬೇಕು; ಅದರಲ್ಲಿ ಯಾವುದೇ ರಾಜಿ ಬೇಡ.
• ನಾವು ಮೊಬೈಲ್ ಫೋನ್ ಅನ್ನು ಚಾರ್ಜ್ ಮಾಡದಿದ್ದರೆ. ಅದರ ಬಳಕೆಯ ಅವಧಿ ಕಡಿಮೆಯಾಗುತ್ತದೆ. ಮೊಬೈಲ್ ಕೆಲಸ ಮಾಡಲು ಚಾರ್ಜ್ ಬೇಕಾದಂತೆ, ದೇಹವನ್ನೂ ಚಾರ್ಜ್ ಮಾಡಬೇಕು. ಮೊಬೈಲ್ ಫೋನ್ಗೆ ಚಾರ್ಜಿಂಗ್ ಅಗತ್ಯವಿರುವಂತೆ ದೇಹಕ್ಕೂ ಚಾರ್ಜ್ ಅಗತ್ಯವಿದೆ. ಅದಿಲ್ಲದೇ ಜೀವನ ನಡೆಸಲು ಸಾಧ್ಯವಿಲ್ಲ, ಹಾಗಾಗಿ ಜೀವನವನ್ನು ಸ್ವಲ್ಪ ಸಮತೋಲನಗೊಳಿಸಬೇಕು. ನಾವು ಆರೋಗ್ಯವಾಗಿಲ್ಲದಿದ್ದರೆ, ಮೂರು ಗಂಟೆಗಳ ಕಾಲ ಪರೀಕ್ಷೆಗೆ ಕುಳಿತುಕೊಳ್ಳಲು ಸಾಧ್ಯವಾಗದಿರಬಹುದು. ಆರೋಗ್ಯಕರ ಮನಸ್ಸಿಗೆ ಆರೋಗ್ಯಕರ ದೇಹ ಅಗತ್ಯ. ಇದರರ್ಥ ನೀವು ಕುಸ್ತಿ ಮಾಡಬೇಕು ಎಂದಲ್ಲ. ಒಂದು ಪುಸ್ತಕವನ್ನು ತೆಗೆದುಕೊಂಡು ಅದನ್ನು ಸೂರ್ಯನ ಬೆಳಕಿನಲ್ಲಿ ಕುಳಿತು ಓದಿ. ಏಕೆಂದರೆ ದೇಹವನ್ನು ರೀಚಾರ್ಜ್ ಮಾಡಲು ಸೂರ್ಯನ ಬೆಳಕು ಕೂಡ ಬೇಕಾಗುತ್ತದೆ.
• ಹೆತ್ತವರಿಗೆ ಕಿವಿಮಾತು: ಇಂದು ಪರೀಕ್ಷೆ ಇರುವುದರಿಂದ ಮಗುವಿಗೆ ಹೊಸ ಪೆನ್ ಬೇಕು ಎಂದು ಭಾವಿಸಬೇಡಿ. ಆದರೆ ಮಗು ದಿನನಿತ್ಯ ಬಳಸುವ ಪೆನ್ನನ್ನೇ ಬಳಸಬೇಕು. ಅದು ಅಬ್ಯಾಸವಾಗಿರುತ್ತದೆ. ಅವನ ಬಟ್ಟೆಯ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ. ಅವನಿಗೆ ಹಿತಕರವಾಗಿದ್ದನ್ನು ಅವನು ಧರಿಸಲಿ. ಪರೀಕ್ಷೆಯ ಸಮಯ ಮಕ್ಕಳಿಗೆ ಆರಾಮದಾಯಕವಾಗಿರುವಂತೆ ಮಾಡಿ.
• ಇಂದು, ಪರೀಕ್ಷೆಯಲ್ಲಿ ದೊಡ್ಡ ಸವಾಲು ಎಂದರೆ ಕೈಯಲ್ಲಿ ಬರೆಯುವುದು. ಇಂದು ಎಲ್ಲವೂ ಮೊಬೈಲ್, ಐಪ್ಯಾಡ್, ಕಂಪ್ಯೂಟರ್ನಲ್ಲಿ ನಡೆಯುತ್ತದಾದ್ದರಿಂದ ಬರೆಯುವ ಅಭ್ಯಾಸವೇ ಬಿಟ್ಟುಹೋಗಿದೆ. ಹೀಗಾಗಿ ದಿನನಿತ್ಯ ಅಧ್ಯಯನಕ್ಕಾಗಿ ಮೀಸಲಿಡುವ ಸಮಯದಲ್ಲಿ ಅರ್ಧ ಭಾಗ ಬರೆಯುವುದಕ್ಕಾಗಿಯೇ ಇಟ್ಟುಕೊಳ್ಳಿ.
• ಅಭ್ಯಾಸದ ಮೇಲೆ ನಿಮ್ಮ ಗಮನವನ್ನು ಕೇಂದ್ರೀಕರಿಸಿ. ಪರೀಕ್ಷೆಯ ಮೊದಲು, ವಿಷಯದ ಬಗ್ಗೆ ನೀವು ಓದಿದ್ದನ್ನು ಬರೆಯಿರಿ ಮತ್ತು ನಂತರ ಅದನ್ನು ನೀವೇ ಸರಿಪಡಿಸಿ. ನಿಮಗೆ ಈಜಲು ತಿಳಿದಿದ್ದರೆ ನೀರಿಗೆ ಇಳಿಯುವ ಭಯವಿಲ್ಲ. ಅಭ್ಯಾಸ ಮಾಡುವವನಿಗೆ ತಾನು ಜಯಿಸುತ್ತೇನೆ ಎಂಬ ವಿಶ್ವಾಸವಿರುತ್ತದೆ. ನೀವು ಎಷ್ಟು ಹೆಚ್ಚು ಬರೆಯುತ್ತೀರೋ ಅಷ್ಟು ತೀಕ್ಷ್ಣತೆ ನಿಮಗೆ ಸಿಗುತ್ತದೆ.
• ಪರೀಕ್ಷಾ ಹಾಲ್ನಲ್ಲಿ ನಿಮ್ಮ ಪಕ್ಕದ ವಿದ್ಯಾರ್ಥಿ ಎಷ್ಟು ವೇಗವಾಗಿ ಬರೆಯುತ್ತಿದ್ದಾರೆ ಎಂಬುದನ್ನು ಗಣನೆಗೆ ತೆಗೆದುಕೊಳ್ಳಬೇಡಿ. ಯಾರಿಗೆ ಗೊತ್ತು, ಆತ ಸಿನಿಮಾ ಕಥೆ ಬರೆಯುತ್ತಿರಬಹುದು!

ದೇಶ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರ ಅಂಜನಾದ್ರಿ ಬೆಟ್ಟ ಭೇಟಿ – ಆಂಜನೇಯ ದರ್ಶನ ಪಡೆದು ವಿಶೇಷ ಪೂಜೆ

ಕೊಪ್ಪಳ, ಆಗಸ್ಟ್ 7 – ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಧವಾರ ಕುಟುಂಬದ ಸದಸ್ಯರೊಂದಿಗೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ, ಶ್ರೀ ಆಂಜನೇಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ವಾಯುಪುತ್ರ ಹನುಮಂತನ ಜನ್ಮಸ್ಥಳವೆಂದು ಪರಿಗಣಿಸಲ್ಪಡುವ ಈ ಪವಿತ್ರ ಸ್ಥಳದಲ್ಲಿ ಅವರು 575 ಮೆಟ್ಟಿಲುಗಳನ್ನು 30 ನಿಮಿಷಗಳಲ್ಲಿ ಏರಿ ಭಕ್ತಿಯಿಂದ ದರ್ಶನ ಪಡೆದರು.


🌄 ಅಂಜನಾದ್ರಿ ಬೆಟ್ಟ – ಭಕ್ತರ ಆಸ್ಥೆಯ ಗಗನಚುಂಬಿ ಸಂಕೇತ

ಅಂಜನಾದ್ರಿ ಬೆಟ್ಟವು ಹನುಮಂತನ ಜನ್ಮಸ್ಥಳ ಎಂಬ ನಂಬಿಕೆಯಿಂದ ಹೆಸರಾಗಿದ್ದು, ಪ್ರತಿದಿನ ನೂರಾರು ಭಕ್ತರು ಇಲ್ಲಿ ಆಗಮಿಸುತ್ತಾರೆ. ಶ್ರೀ ರಾಮ, ಸೀತಾ ದೇವಿಗಳ ಮೂರ್ತಿಗಳೂ ಇಲ್ಲಿ ಪೂಜಿಸಲ್ಪಡುತ್ತವೆ. ಬೆಟ್ಟದ ಶಿಖರದಿಂದ ತುಂಗಭದ್ರಾ ನದಿಯ ನೋಟ, ಸೂರ್ಯಾಸ್ತದ ಸೌಂದರ್ಯ ಮತ್ತು ಹಂಪಿಯ ಇತಿಹಾಸದ ಅವಶೇಷಗಳು ಮನ ಮೋಹಿಸುತ್ತವೆ.


🛕 ಅಂಜನಾದ್ರಿ ಬೆಟ್ಟದ ಪ್ರಮುಖ ಅಂಶಗಳು:

  • 575 ಮೆಟ್ಟಿಲುಗಳನ್ನು ಏರಿ ಸ್ವಾಮಿದರ್ಶನ
  • ರಾಜ್ಯಪಾಲರಿಗೆ ಜಿಲ್ಲಾಡಳಿತದಿಂದ ಸನ್ಮಾನ
  • ದೇವಾಲಯದ ಆಂತರಿಕ ಶ್ರದ್ಧಾ ಭರವಸೆಯ ಸ್ಥಳ
  • ಹಂಪಿಯಿಂದ ನದಿ ದಾಟಿ ಬೋಟ್ ಮೂಲಕ ಪ್ರವೇಶದ ಅನುಕೂಲ
  • ರೈಲು ಮಾರ್ಗ: ಕೊಪ್ಪಳ ಅಥವಾ ಮುನಿರಾಬಾದ್‌ ಮೂಲಕ
  • ರಸ್ತೆ ಸಂಪರ್ಕ ಉತ್ತಮ, ವಿಮಾನ ಸಂಪರ್ಕ ಇಲ್ಲ

📜 ಅಂಜನಾದ್ರಿ ಅಭಿವೃದ್ಧಿಯ ಬಗ್ಗೆ ಸರ್ಕಾರದ ದೃಷ್ಟಿಕೋನ

ಹನುಮ ಮಾಲೆ ಸಂದರ್ಭದಲ್ಲಿ ಸಾವಿರಾರು ಭಕ್ತರು ಇಲ್ಲಿ ಆಗಮಿಸುತ್ತಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ವಾಗ್ದಾನ ನೀಡಿದ್ದರು. ರಾಜ್ಯ ಸರಕಾರ ಕೂಡ ಈ ಸ್ಥಳವೇ ಆಂಜನೇಯನ ಜನ್ಮಭೂಮಿ ಎಂದು ಧರ್ಮಗ್ರಂಥಗಳ ಆಧಾರದ ಮೇಲೆ ದೃಢಪಡಿಸಿದೆ.

Continue Reading

ದೇಶ

ಅಮೆರಿಕದ ಒತ್ತಡಕ್ಕೂ headstrong ಭಾರತದ ನಿಲುಹೊರೆ: ರೈತ ಮತ್ತು ಮೀನುಗಾರರ ಹಿತಾಸಕ್ತಿಗೆ ಪ್ರಧಾನಿಯರಿಂದ ಖಡಕ್ ಸಂದೇಶ

ನವದೆಹಲಿ, ಆಗಸ್ಟ್ 7 – ರೈತರು ಹಾಗೂ ಮೀನುಗಾರರ (Farmers & Fishermen) ಹಿತಾಸಕ್ತಿಗೆ ವಿರುದ್ಧವಾಗುವ ಯಾವುದೇ ಒಪ್ಪಂದವನ್ನು ಭಾರತ ಎಂದಿಗೂ ಮಾಡದು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಸ್ಪಷ್ಟಪಡಿಸಿದ್ದಾರೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ಆಮದು ಆಗುವ ವಸ್ತುಗಳ ಮೇಲೆ 25% ಸುಂಕ ವಿಧಿಸಿದ ಬೆನ್ನಲ್ಲೇ ಮೋದಿ ಈ ಹೇಳಿಕೆಯಿಂದ ಅಮೆರಿಕಕ್ಕೆ ತೀಕ್ಷ್ಣ ಸಂದೇಶ ನೀಡಿದ್ದಾರೆ.

ರೈತರಿಗೆ ಬೆಂಬಲವೇ ಪ್ರಮುಖ ಆದ್ಯತೆ
ದೆಹಲಿಯಲ್ಲಿ ನಡೆದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, “ರೈತರು, ಮೀನುಗಾರರು, ಹೈನುಗಾರರು ನಮ್ಮ ಆರ್ಥಿಕ ವ್ಯವಸ್ಥೆಯ ಪ್ರಮುಖ ಅಂಶಗಳು. ಅವರ ಹಿತಾಸಕ್ತಿಗೆ ಭಾರತ ಯಾವತ್ತೂ ರಾಜಿ ಆಗುವುದಿಲ್ಲ” ಎಂದರು.

ಸಾಂಸ್ಕೃತಿಕ ನಂಬಿಕೆಗೆ ಧಕ್ಕೆಯಾಗದಂತೆ ನಿರ್ಧಾರ
ಅಮೆರಿಕ ಭಾರತ ಮಾರುಕಟ್ಟೆಗೆ ಡೈರಿ ಉತ್ಪನ್ನ ಪ್ರವೇಶಕ್ಕೆ ಒತ್ತಡ ಹಾಕುತ್ತಿದ್ದರೂ ಭಾರತ ಅದನ್ನು ನಿರಾಕರಿಸಿದೆ. ಕಾರಣ, ಅಮೆರಿಕದಲ್ಲಿ ಜಾನುವಾರುಗಳಿಗೆ ಮಾಂಸಾಂಶ ಆಹಾರ ನೀಡಲಾಗುತ್ತದೆ. ಹೀಗೆ ಪಶು ಉತ್ಪನ್ನಗಳಿಂದ ಉತ್ಪತ್ತಿಯಾದ ಹಾಲು ಭಾರತದ ಸಾಂಸ್ಕೃತಿಕ ಮತ್ತು ಧಾರ್ಮಿಕ ನಂಬಿಕೆಗಳ ವಿರುದ್ಧವಾಗಿರುತ್ತದೆ ಎಂದು ಮೋದಿ ಅಭಿಪ್ರಾಯಪಟ್ಟರು.

ಅಮೆರಿಕದ ಸುಂಕ ಸಮರ – ಭಾರತದ ತೀವ್ರ ಪ್ರತಿಕ್ರಿಯೆ
ಟ್ರಂಪ್ ಸರಕಾರ ಭಾರತ ಸೇರಿದಂತೆ ಹಲವು ರಾಷ್ಟ್ರಗಳ ವಿರುದ್ಧ ಸುಂಕ ಸಮರ ಘೋಷಿಸಿದ್ದು, ಭಾರತದಿಂದ ಆಮದಾಗುವ ಉತ್ಪನ್ನಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಿದೆ. ಆದರೆ ಭಾರತ ಕೃಷಿ, ಹೈನು ಉತ್ಪನ್ನ, ಮೀನುಗಾರಿಕೆ ಕ್ಷೇತ್ರಗಳ ಮೇಲೆ ಸಂಬಂಧಿತ ಮೌಲ್ಯಗಳನ್ನು ಬಲಪಡಿಸಿ ಅಮೆರಿಕದ ಒತ್ತಡಕ್ಕೆ ಕೀಳ್ಮಣೆ ನೀಡಿಲ್ಲ.

ಪ್ರಧಾನಿಯ ಮಾತುಗಳಲ್ಲಿ ಸ್ಪಷ್ಟ ಸಂದೇಶ:

“ಭಾರತದ ರೈತ, ಮೀನುಗಾರ ಮತ್ತು ಹೈನುಗಾರರು ನಮ್ಮ ಅಸ್ಥಿ-ಮಜ್ಜೆಯಂತಹವರು. ಅವರ ಹಿತದೃಷ್ಟಿಗೆ ಯಾವುದೇ ಬೆಲೆ ಕಟ್ಟಲು ನಾನು ಸಿದ್ಧ” ಎಂದು ಮೋದಿ ಹೇಳಿದ್ದಾರೆ.

Continue Reading

ದೇಶ

ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.

ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.

🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್‌ಸ್ಟ್ರಿಪ್‌ಗಳು, ಹೆಲಿಪ್ಯಾಡ್‌ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:

  • ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
  • ಸಿಸಿಟಿವಿ ಕಣ್ಗಾವಲು ಬಿಗಿತ
  • ಸರಕು, ಪಾರ್ಸೆಲ್ ಮತ್ತು ಮೇಲ್‌ಗಳ ತಪಾಸಣೆ
  • ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ

🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:

ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.

Continue Reading

Trending