Connect with us

ಚುನಾವಣೆ

ಪಕ್ಷ ಯಾವುದೇ ಕಾರಣಕ್ಕೂ ದ್ರೋಹ ಮಾಡಿಲ್ಲ ರ.ಅಂಜನಪ್ಪ

Published

on

ಬೆಂಗಳೂರು: ರಾಜ್ಯದಲ್ಲಿ 25 ಸೀಟ್‌ನ್ನು ಗೆಲ್ಲುತ್ತೇವೆ ಎಂದು ಕೆಂಗೇರಿ ಮಾಜಿ ಪಾಲಿಕೆ ಸದಸ್ಯ ರ.ಅಂಜನಪ್ಪ ಹೇಳಿದರು, ಹೊಸ ಸುದ್ದಿಯ ವಿಶೇಷ ಸಂದರ್ಶನದಲ್ಲಿ ಅವರು ಮಾತನಾಡುತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ರಾಜ್ಯದ ಅಭಿವೃದ್ಧಿ ಕುಂಟಿತವಾಗಿದೆ, ಕೇಂದ್ರದಲ್ಲಿ ಸಧೃಡ ಹಾಗೂ ಜನಪರ ಸರ್ಕಾರ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರೇ ಸರ್ಕಾರ ರಚಿಸುವುದು ಖಚಿತ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ನಿರ್ಣಾಮ ಮಾಡಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಗುರಿಯನ್ನು ಹೊಂದಿದೆ, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜಿ ಅವರು ಸುಮಾರು 3 ಲಕ್ಷ ಮತಗಳ ಅಂತರದಿAದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಸೋಲಿಸುತ್ತಾರೆ,

ನನ್ನ 36 ವರ್ಷದ ರಾಜಕೀಯ ಜೀವನದಲ್ಲಿ ಎಸ್ ಟಿ ಸೋಮಶೇಖರ ಅವರ ತರಹ ಬಂಡತನ ಇರುವ ರಾಜಕೀಯ ವ್ಯಕ್ತಿ ಹಾಗೂ ಶಾಸಕನ್ನು ನೋಡಿಲ್ಲ, ಯಾವ ಕಾರಣಕ್ಕೆ ಅವರು ಬಿಜೆಪಿಗೆ ಬಂದರು ಇಂದು ಯಾವ ಕಾರಣಕ್ಕೆ ಬಿಜೆಪಿಯನ್ನು ಬಿಟ್ಟರೂ, ಪಕ್ಷ ಅವರಿಗೆ ಎಲ್ಲವನ್ನು ನೀಡಿತು, ಅವರಿಗೆ ಕೊಟ್ಟ ಕೆಲಸವನ್ನು ಕೂಡ ಬಹಳ ಚನ್ನಾಗಿ ನಿರ್ವಹಸಿ ಒಳ್ಳೆಯ ಹೆಸರನ್ನು ಪಕ್ಷದಲ್ಲಿ ಗಳಿಸಿದರು ನಂತರ ಅವರಿಗೆ ಏನು ಆಯ್ತು ಗೊತ್ತಿಲ್ಲ, ಅಧಿಕಾರ ಎನ್ನುವುದು ಶಾಶ್ವತ ಅಲ್ಲ, ನಮ್ಮ ಬಿಜೆಪಿ ಪಕ್ಷ ಅವರಿಗೆ ಯಾವುದೇ ಕಾರಣಕ್ಕೂ ದ್ರೋಹ ಮಾಡಿಲ್ಲ, ನಾಯಕರಗಳ ಜೊತೆ ಅವರು ಏನು ಮಾಡಿಕೊಂಡಿದ್ದರೊ ನಮಗೆ ಗೊತ್ತಿಲ್ಲ, ಕೆಲ ವ್ಯವಹಾರಗಳನ್ನು ಮುಚ್ಚಿಡಲು ಇಂದು ಅವರು ಕಾಂಗ್ರೆಸ್ ಬಾಗಿಲುನಲ್ಲಿ ನಿಂತಿದ್ದಾರೆ ಎಂಬ ಅನುಮಾನ ಇದೇ, ಚುನಾವಣೆ ಸಂದರ್ಭದಲ್ಲಿ ಪಕ್ಷದ ಕೆಲ ಕಾರ್ಯಕರ್ತರು ಅವರ ವಿರುದ್ಧ ಕೆಲಸ ಮಾಡಿದ್ದಾರೆ ಅವರಿಗೆ ಎಸ್ ಟಿ ಸೋಮಶೇಖರ್ ಅವರು ವೈಯಕ್ತಿಕವಾಗಿ ಏನು ದ್ರೋಹ ಮಾಡಿದರೂ ನಮಗೆ ಗೊತ್ತಿಲ್ಲ, ಈ ತರಹ ಚುಟುವಟಿಕೆ ಮಾಡಿದ ಕಾರ್ಯಕರ್ತರಿಗೆ ಪಕ್ಷ ಶಿಸ್ತಿನ ಕ್ರಮ ತೆಗೆದುಕೊಳ್ಳುತ್ತದೆ ಎಂದರು.

ಮಾಜಿ ಅಧ್ಯಕ್ಷ ಸಿ ಎಂ ಮಾರೇಗೌಡ ಪಕ್ಷ ವಿರುದ್ಧ ಚಟುವಟಿಕೆ ಮಾಡಿಲ್ಲ, ಅದನ್ನು ಮಾಡಿರುವುದು ಧನಂಜಯ. ಮಾರೇಗೌಡರು ಪಕ್ಷ ವಿರುದ್ಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ರೀತಿಯ ಅಧಾರ ಇಲ್ಲ, ಪಕ್ಷದ ಮಾಜಿ ಅಧ್ಯಕ್ಷನ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆಗಳ ದಾಖಲೆ ನೀಡಲ್ಲಿ ನಾವು ಕೂಡ ಚರ್ಚೆಗೆ ಸಿದ್ದ ಎಂದರು,

ಯಶವಂತಪುರ ಕ್ಷೇತ್ರದಲ್ಲಿ ಶಾಸಕ ಎಸ್ ಟಿ ಸೋಮಶೇಖರ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿದರೂ ಬಿಜೆಪಿ ಪಕ್ಷದ ಅಭ್ಯರ್ಥಿಗೆ ಲೀಡ್ ಬರುತ್ತದೆ ಎಂಬ ವಿಶ್ವಾಸ ಇದೇ, ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಕೆಂಗೇರಿ ವಾರ್ಡ್ಗೆ ನಾನು ಕೂಡ ಅಕಾಂಕ್ಷಿ ಕೆಂಗೇರಿ ವಾರ್ಡ್ ಅಭಿವೃದ್ಧಿ ಮಾಡಲು ಸಾಕಷ್ಟು ಯೋಜನೆಗಳು ಇರುವುದು, ಚುನಾವಣೆಯಲ್ಲಿ ಕೂಡ ನಾವು ಗೆಲ್ಲುತ್ತೇವೆ ಎಂದರು,

ಕಾಂಗ್ರೆಸ್ ಸರ್ಕಾರ ಕಾವೇರಿ ನೀರಿನ ಸಮಸ್ಯೆಯನ್ನು ಬಗೆಹರಿಸಲು ವಿಫಲವಾದ ಕಾರಣ ಇಂದು ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇದೇ, ಸರ್ಕಾರ ದೂರದೃಷ್ಟಿಯನ್ನು ಇಟ್ಟಿಕೊಂಡು ಕಾವೇರಿ ನೀರಿನ ಸಮಸ್ಯೆ ಬಗೆಹರಿಸದೆ ಇಂದು ಸಾಕಷ್ಟು ತೊಂದರೆಗಳನ್ನು ಎದುರುಸುತ್ತಿದ್ದೇವೆ ಎಂದರು,

ಕಾಂಗ್ರೆಸ್ ಅಭ್ಯರ್ಥಿ ಪ್ರೊ ರಾಜೀವ್ ಗೌಡ ಅವರ ಗೆಲ್ಲುತ್ತೇನೆ ಎಂಬ ಕನಸು ಕಾಣುತ್ತಿದ್ದಾರೆ, ಪ್ರಧಾನಿ ಮೋದಿ ಅವರಿಗೆ ಎಲ್ಲಾ ಪಕ್ಷಗಳಲ್ಲೂ ಅಭಿಮಾನಿಗಳು ಇದ್ದಾರೆ, ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಲಾಭ ಬಿಜೆಪಿ ಪಕ್ಷಕ್ಕೆ ಸಿಗುವುದು, ಶೋಭಾ ಅವರಿಗೆ ಗೋ ಬ್ಯಾಕ್ ಎಂದು ಬಿಜೆಪಿ ನಿಷ್ಟವಂತ ಕಾರ್ಯಕರ್ತರು ಯಾರು ಹೇಳಿಲ್ಲ ನಮ್ಮ ಪಕ್ಷದವರು ಟಿಕೆಟ್ ಬೇಕು ಎಂಬ ಆಸೆಗೆ ಮಾಡಿರುವ ಕೆಲಸ ಎಂದರು.

2028ರ ವಿಧಾನಸಭಾ ಚುನಾವಣೆಗೆ ನಮ್ಮಲ್ಲಿ ಇರುವ ಕೆಲ ಕಾರಣಗಳಿಂದ ಯಶವಂತಪುರ ಕ್ಷೇತ್ರಕ್ಕೆ ಮೂಲ ಬಿಜೆಪಿ ಅಭ್ಯರ್ಥಿ ಇಲ್ಲ, ಅದರೆ ಇನ್ನೂ ಸಮಯ ಇರುವ ಕಾರಣ ಪಕ್ಷ ಅಭ್ಯರ್ಥಿಯನ್ನು ಗುರುತಿಸಿ ಪಕ್ಷ ಕಟ್ಟಿರುವ ಕಾರ್ಯಕರ್ತರನ್ನೇ ಅಭ್ಯರ್ಥಿಯಾಗಿ ಘೋಷಿಸುವುದು ಕ್ಷೇತ್ರದಲ್ಲಿ ನಾವೇ ಬೆಳಿಸಿರುವ ನಾಯಕರುಗಳು ನಮ್ಮನ್ನು ತುಳಿಯುತ್ತಿದ್ದಾರೆ ಎಂದರು,

ದೇಶ

ಪಂಜಾಬ್ ಚುನಾವಣೆಗೆ Waris Punjab De ಮೊದಲ ಅಭ್ಯರ್ಥಿ; ಸತ್ವಂತ್ ಸಿಂಗ್ ಕಣಕ್ಕೆ

Published

on

ಚಂಡೀಗಢ: 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿರುವ ಬೆನ್ನಲ್ಲೇ, ಅಕಾಲಿ ದಳ್ Waris Punjab De ತನ್ನ ಮೊದಲ ಅಭ್ಯರ್ಥಿಯನ್ನು ಘೋಷಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಶಿಕ್ಷೆಗೆ ಗುರಿಯಾಗಿದ್ದ ಕೆಹರ್ ಸಿಂಗ್ ಅವರ ಪುತ್ರ ಸತ್ವಂತ್ ಸಿಂಗ್ ಅವರನ್ನು ಬಸ್ಸಿ ಪಠಾನಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.

ಈ ಘೋಷಣೆ ಪಂಜಾಬ್‌ನ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇಂದಿರಾ ಗಾಂಧಿ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಕೆಹರ್ ಸಿಂಗ್ ದೋಷಿಯಾಗಿದ್ದರು. ಪ್ರಕರಣದಲ್ಲಿ ಅವರಿಗೆ ಮರಣದಂಡನೆ ವಿಧಿಸಲಾಗಿತ್ತು. ಇದೀಗ ಅವರ ಪುತ್ರನಿಗೆ 2027 Punjab Assembly Election ಟಿಕೆಟ್ ನೀಡಿರುವುದು ಪಂಥಿಕ್ ರಾಜಕೀಯದಲ್ಲಿ ಗಮನ ಸೆಳೆದಿದೆ.

ತ್ಯಾಗ ಮಾಡಿದ ಕುಟುಂಬಗಳಿಗೆ ಗೌರವ: ತರ್ಸೆಮ್ ಸಿಂಗ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತರ್ಸೆಮ್ ಸಿಂಗ್, ಪಕ್ಷದ ರಾಜಕೀಯ ಕೇವಲ ಅಧಿಕಾರ ಹಿಡಿಯುವುದಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದ್ದಾರೆ. ಪಂಥಿಕ್ ತತ್ವಗಳು, ಪಂಜಾಬ್‌ನ ಹಕ್ಕುಗಳು ಹಾಗೂ ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳ ಗೌರವವನ್ನು ಎತ್ತಿಹಿಡಿಯುವುದು ಪಕ್ಷದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಪಂಥ್ ಮತ್ತು ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳನ್ನು ಪಕ್ಷ ಕಡೆಗಣಿಸುತ್ತಿದೆ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ಆದರೆ, ಮೊದಲ ಅಭ್ಯರ್ಥಿಯಾಗಿಯೇ ಅಂತಹ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸುವ ಮೂಲಕ ಪಕ್ಷ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ತರ್ಸೆಮ್ ಸಿಂಗ್ ಹೇಳಿದ್ದಾರೆ.

ಬಸ್ಸಿ ಪಠಾನಾದಲ್ಲಿ ಪಂಥಿಕ್ ಮತಗಳ ಲೆಕ್ಕಾಚಾರ

ಸತ್ವಂತ್ ಸಿಂಗ್ ಅವರ ಅಭ್ಯರ್ಥಿತನವು ಬಸ್ಸಿ ಪಠಾನಾ ಕ್ಷೇತ್ರದಲ್ಲಿ Panthic Politics in Punjab ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಅವರ ಕುಟುಂಬದ ಹಿನ್ನೆಲೆ ಮತದಾರರ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಕುತೂಹಲ ಮೂಡಿಸಿದೆ.

2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 117 ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತ ಪಡೆದಿತ್ತು. ಕಾಂಗ್ರೆಸ್ 18 ಸ್ಥಾನಗಳಿಗೆ ಸೀಮಿತವಾಗಿತ್ತು. ಇದೀಗ 2027ರ ಚುನಾವಣೆಯಲ್ಲಿ ಪಂಥಿಕ್ ರಾಜಕೀಯದ ಪ್ರಭಾವ ಎಷ್ಟಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ಬೆಂಗಳೂರು

SIR ಸಮೀಕ್ಷೆ ವೇಳೆ ಸರ್ಕಾರಿ ಅಧಿಕಾರಿಗೆ ಹಲ್ಲೆ: ಡಿ.ಜೆ.ಹಳ್ಳಿಯಲ್ಲಿ ಇಬ್ಬರು ಆರೋಪಿಗಳ ಬಂಧನ

Published

on

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಕಾರ್ಯಾಚರಣೆ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಜೀವನಹಳ್ಳಿ (D J Halli) ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಯಾರಬ್ ಮತ್ತು ದಸ್ತಗೀರ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಸ್ಲಂ ಡೆವಲಪ್‌ಮೆಂಟ್ ಬೋರ್ಡ್ ಅಧಿಕಾರಿಗಳ ತಂಡವು ಡಿ.ಜೆ.ಹಳ್ಳಿಯ ರೋಶನ್ ನಗರದಲ್ಲಿರುವ ಕೌಸರ್ ಮಸೀದಿ ಸಮೀಪ SIR ಸಮೀಕ್ಷೆ ನಡೆಸುತ್ತಿತ್ತು.

ಈ ವೇಳೆ ಸ್ಥಳಕ್ಕೆ ಬಂದ ದಸ್ತಗೀರ್, ತನಗೂ SIR ಫಾರ್ಮ್ ನೀಡುವಂತೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾನೆ. ಆದರೆ ಆತ ಈಗಾಗಲೇ ಜಯನಗರಕ್ಕೆ ವಾಸ್ತವ್ಯ ಬದಲಾಯಿಸಿರುವುದರಿಂದ ಆ ಪ್ರದೇಶದಲ್ಲಿ ಫಾರ್ಮ್ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು.

ಈ ಉತ್ತರದಿಂದ ಆಕ್ರೋಶಗೊಂಡ ದಸ್ತಗೀರ್ ಹಾಗೂ ಆತನಿಗೆ ಬೆಂಬಲ ನೀಡಿದ ಯಾರಬ್, ಕರ್ತವ್ಯದಲ್ಲಿದ್ದ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಅಧಿಕಾರಿಗೆ ಗಾಯ

ಹಲ್ಲೆಯಲ್ಲಿ ಸ್ಲಂ ಡೆವಲಪ್‌ಮೆಂಟ್ ಬೋರ್ಡ್‌ನ ಸೂಪರಿಂಟೆಂಡೆಂಟ್ ಫಕೀರಪ್ಪ ಗಾಯಗೊಂಡಿದ್ದಾರೆ. ಆರೋಪಿಗಳು ಮುಖ ಹಾಗೂ ಕಟಿ ಭಾಗಕ್ಕೆ ಹೊಡೆದಿದ್ದು, ಬೆನ್ನಿನ ಮೇಲೂ ಹಲ್ಲೆ ನಡೆಸಿದ ಪರಿಣಾಮ ಅವರ ತುಟಿಗೆ ಗಾಯವಾಗಿ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿದ್ದ ಸಾರ್ವಜನಿಕರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದು, ಗಾಯಗೊಂಡ ಅಧಿಕಾರಿಯನ್ನು ತಕ್ಷಣ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪ್ರಕರಣ ದಾಖಲು, ಇಬ್ಬರ ಬಂಧನ

ಚಿಕಿತ್ಸೆಯ ಬಳಿಕ ಫಕೀರಪ್ಪ ಅವರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸರು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Continue Reading

ಬೆಂಗಳೂರು

GBA ಸೇರಿ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ಡಿಸೆಂಬರ್ ಒಳಗೆ; ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

Published

on

ನವದೆಹಲಿ: ಬೆಂಗಳೂರು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಚುನಾವಣೆ ಸೇರಿದಂತೆ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು (Local Body Elections) ನಿಗದಿತ ಅವಧಿಯೊಳಗೆ ನಡೆಸಲು ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳು ಹಾಗೂ ಚುನಾವಣಾ ಸಿದ್ಧತೆಗಳ ಕುರಿತು ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಚುನಾವಣೆಗಳನ್ನು ಅನಗತ್ಯವಾಗಿ ಮುಂದೂಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರಕಾರ, ಬೆಂಗಳೂರು ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮೊದಲಿಗೆ ಆಗಸ್ಟ್ 31ರೊಳಗೆ ನಡೆಸುವ ಉದ್ದೇಶ ಹೊಂದಲಾಗಿತ್ತು. ಆದರೆ ಎಸ್‌ಐಆರ್ (SIR) ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಹಾಗೂ ಕೆಲವು ತಾಂತ್ರಿಕ ಕಾರಣಗಳಿಂದಾಗಿ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ನಲ್ಲಿ ಹೆಚ್ಚಿನ ಕಾಲಾವಕಾಶ ಕೋರಿತ್ತು.

ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದಂತೆ ಮುಂದಿನ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ ಸಿಎಂ, ಚುನಾವಣೆ ಪ್ರಕ್ರಿಯೆಯನ್ನು ವಿಳಂಬ ಮಾಡುವುದು ಸರ್ಕಾರದ ಉದ್ದೇಶವಲ್ಲ ಎಂದು ಪುನರುಚ್ಚರಿಸಿದರು.

ಬೆಂಗಳೂರು ಮಾತ್ರವಲ್ಲದೆ, ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ಚುನಾವಣೆಗಳನ್ನು ಈ ವರ್ಷದ ಡಿಸೆಂಬರ್ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಸಂವಿಧಾನದ 73ನೇ ಮತ್ತು 74ನೇ ತಿದ್ದುಪಡಿ ಆಶಯಕ್ಕೆ ಅನುಗುಣವಾಗಿ ಗ್ರಾಮ ಪಂಚಾಯತ್‌ನಿಂದ ಮಹಾನಗರ ಪಾಲಿಕೆವರೆಗೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಯುವ ನಾಯಕತ್ವ ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಗಡುವಿನ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಅಗತ್ಯ ಸಿದ್ಧತೆಗಳನ್ನು ವೇಗಗೊಳಿಸುವ ಸಾಧ್ಯತೆ ಇದ್ದು, ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಂಡ ಬಳಿಕ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ. ಇದರಿಂದ GBA ಚುನಾವಣೆ ಸೇರಿದಂತೆ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.

Continue Reading

Trending