Connect with us

ಬೆಂಗಳೂರು

ನೀವು ಊಟಿಗೆ ಭೇಟಿ ನೀಡಿದಾಗ ಈ ಸುಂದರವಾದ ಸರೋವರಗಳಿಗೆ ಭೇಟಿ ನೀಡಲು ಮರೆಯಬೇಡಿ..

7,440 ಅಡಿ ಎತ್ತರದಲ್ಲಿರುವ ಊಟಿ ದಕ್ಷಿಣ ಭಾರತದ ಅತ್ಯುತ್ತಮ ಗಿರಿಧಾಮಗಳಲ್ಲಿ ಒಂದಾಗಿದೆ. ಬೆಟ್ಟಗಳ ರಾಣಿ ಮತ್ತು ಪ್ರಕೃತಿ ಪ್ರೇಮಿಗಳ ಸ್ವರ್ಗ ಈ ಊಟಿ. ಊಟಿಯಲ್ಲಿ ಅನೇಕ ರಮಣೀಯ ತಾಣಗಳಿದ್ದರೂ, ಕಣ್ಮನ ಸೆಳೆಯುವ ಸರೋವರಗಳು ಮತ್ತು ಅವುಗಳ ಸುತ್ತಲಿನ ನೋಟಗಳನ್ನು ನಾವು ನೋಡುವುದರಿಂದ ತಪ್ಪಿಸಿಕೊಳ್ಳಬಾರದು. ಹಾಗಾದರೆ ಊಟಿಯಲ್ಲಿರುವ ಆ ಸರೋವರಗಳ ಬಗ್ಗೆ ತಿಳಿಯೋಣ. ನೀವೇನಾದ್ರು ಊಟಿಗೆ ವೀಕೆಂಟ್ ಟ್ರಿಪ್ ಹೋಗ್ತಾಯಿದ್ದರೆ ಈ ಸರೋವರಗಳನ್ನು ಮಿಸ್ ಮಾಡದೆ ನೋಡಿ.

ಊಟಿ ಸರೋವರ 1823 ರಲ್ಲಿ 65 ಎಕರೆ ಜಾಗದಲ್ಲಿ ವಿಸ್ತೀರ್ಣದಲ್ಲಿ ಮಾನವ ನಿರ್ಮಿತ ಊಟಿ ಸರೋವರ ಪ್ರಕೃತಿ ಪ್ರಿಯರಿಗೆ ಮತ್ತು ಛಾಯಾಗ್ರಾಹಕರಿಗೆ ಸಮ್ಮೋಹನಗೊಳಿಸುವ ನೋಟಗಳನ್ನು ನೀಡುತ್ತದೆ. ಊಟಿ ಸರೋವರದ ವಿಸ್ಮಯಕಾರಿ ನೋಟಗಳನ್ನು ನೀಲಗಿರಿ ಬೆಟ್ಟದ ರೈಲ್ವೆಯಿಂದ ಆನಂದಿಸಬಹುದು

ಊಟಿ ಸರೋವರದ ಬಳಿ ತಮಿಳುನಾಡು ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಟಿಟಿಡಿಸಿ) ಬೋಟ್ ಹೌಸ್ ಅನ್ನು ಸಹ ನಿರ್ವಹಿಸಿದೆ. ಇಲ್ಲಿ ಪ್ರವಾಸಿಗರು ಪ್ಯಾಡಲ್ ಬೋಟಿಂಗ್, ರೋಯಿಂಗ್ ಬೋಟಿಂಗ್ ಮತ್ತು ಮೋಟಾರ್ ಬೋಟಿಂಗ್ ಮಾಡಬಹುದು.

ಬೈಕಾರ ಸರೋವರ ಬೈಕಾರ ಸರೋವರ ಊಟಿಯಲ್ಲಿ ಪ್ರಕೃತಿ ಪ್ರಿಯರಿಗೆ, ದಂಪತಿಗಳಿಗೆ ಮತ್ತು ಹನಿಮೂನ್‌ಗೆ ಸೂಕ್ತವಾದ ತಾಣವಾಗಿದೆ. ದಟ್ಟವಾದ ಕಾಡುಗಳಿಂದ ಸುತ್ತುವರಿದ ಊಟಿಯ ಅತ್ಯಂತ ಸುಂದರವಾದ ಸರೋವರಗಳಲ್ಲಿ ಬೈಕಾರಾ ಒಂದಾಗಿದೆ. ಇಲ್ಲಿನ ನೈಸರ್ಗಿಕ ಸೌಂದರ್ಯವು ಪ್ರವಾಸಿಗರನ್ನು ಮಂತ್ರಮುಗ್ಧಗೊಳಿಸುತ್ತದೆ. ಹೀಗಾಗಿ ಊಟಿಗೆ ಹೋದರೆ ಸರೋವರದ ಸಮೀಪವಿರುವ ಬೈಕಾರಾ ಜಲಪಾತಕ್ಕೆ ಭೇಟಿ ನೀಡಲು ಮರೆಯಬೇಡಿ.

ಅವಲಾಂಚೆ ಸರೋವರ ವಿಶೇಷವಾಗಿ ಪ್ರಕೃತಿ ಪ್ರಿಯರು ಮತ್ತು ಛಾಯಾಗ್ರಾಹಕರಲ್ಲಿ ಜನಪ್ರಿಯವಾಗಿರುವ ಅವಲಾಂಚೆ ಸರೋವರವು ಊಟಿಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಸುಂದರವಾದ ಹೂವುಗಳಿಂದ ತುಂಬಿದ ಸಮ್ಮೋಹನಗೊಳಿಸುವ ಭೂದೃಶ್ಯದ ನಡುವೆ ಈ ಸರೋವರವಿದೆ. ಸಮೀಪದ ಬೆಟ್ಟಗಳಿಂದ ಬೀಳುವ ಜಲಪಾತಗಳು ಈ ಸ್ಥಳದ ಸೌಂದರ್ಯವನ್ನು ಹೆಚ್ಚಿಸುತ್ತವೆ. ಶಾಂತವಾದ ಅವಲಾಂಚೆ ಸರೋವರ ಹಲವಾರು ರೆಸಾರ್ಟ್‌ಗಳನ್ನು ಹೊಂದಿದೆ. ನೀವು ಈ ಸರೋವರದ ಬಳಿ ಕ್ಯಾಂಪ್ ಮಾಡಿ ಉಳಿಯಬಹುದು.

ಪೆಲ್ಲಿಕಲ್ ಕೆರೆ ಊಟಿಯ ಸುಂದರವಾದ ಗುಡ್ಡಗಾಡು ಪ್ರದೇಶದಲ್ಲಿ ನೆಲೆಗೊಂಡಿರುವ ಪೆಲ್ಲಿಕಲ್ ಸರೋವರ ತನ್ನ ಸುಂದರವಾದ ರಚನೆಗಳು ಮತ್ತು ಪ್ರಾಚೀನ ಪರಿಸರದಿಂದ ಜನರನ್ನು ಆಕರ್ಷಿಸುತ್ತದೆ. ಇದು ವಿವಿಧ ಕಾಡು ಪ್ರಾಣಿಗಳಿಗೆ ನೆಲೆಯಾಗಿದೆ. ಆನೆಗಳು, ಹುಲಿಗಳು, ಕರಡಿಗಳು, ಕಾಡೆಮ್ಮೆ ಮತ್ತು ಜಿಂಕೆಗಳಂತಹ ವನ್ಯಜೀವಿಗಳನ್ನು ನೋಡಲು ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಪ್ರಕೃತಿಯ ಮಡಿಲಲ್ಲಿ ವಿಶ್ರಾಂತಿ ಪಡೆಯಲು ಊಟಿಯ ಪೆಲ್ಲಿಕಲ್ ಸರೋವರಕ್ಕೆ ಭೇಟಿ ನೀಡುವುದಕ್ಕಿಂತ ಉತ್ತಮವಾದ ಸ್ಥಳವಿಲ್ಲ.

ಭವಾನಿ ಸರೋವರ ಊಟಿಯಲ್ಲಿರುವ ಅತ್ಯಂತ ಹಳೆಯ ಕೆರೆಗಳಲ್ಲಿ ಒಂದಾದ ಭವಾನಿ ಸರೋವರವು ಪ್ರವಾಸಿಗರಿಗೆ ಹೆಚ್ಚು ತಿಳಿದಿಲ್ಲ. ಇದು ಪ್ರಕೃತಿ ಪ್ರಿಯರಿಗೆ ಆಸಕ್ತಿದಾಯಕ ಸ್ಥಳವಾಗಿದೆ. ಹಿಮಪಾತ ಪ್ರದೇಶದ ಮೇಲಿರುವ ಈ ಪ್ರದೇಶಕ್ಕೆ ಭೇಟಿ ನೀಡಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆದ ನಂತರವೇ ಹೋಗಲು ಸಾಧ್ಯ. ಸಾಹಸ ಉತ್ಸಾಹಿಗಳು ಮುಕುರ್ತಿ ರಾಷ್ಟ್ರೀಯ ಉದ್ಯಾನವನದಲ್ಲಿರುವ ಈ ಸರೋವರವನ್ನು ತಲುಪಲು ದಟ್ಟವಾದ ಕಾಡುಗಳ ಮೂಲಕ ಪಾದಯಾತ್ರೆ ಮತ್ತು ಚಾರಣ ಕೈಗೊಳ್ಳಬಹುದು. ಹಾಗಾದರೆ ಊಟಿಗೆ ಭೇಟಿ ನೀಡುವಾಗ ಈ ಸುಂದರ ಸರೋವರಗಳನ್ನು ತಪ್ಪದೇ ನೋಡಿ!

ಬೆಂಗಳೂರು

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನ ಆಕರ್ಷಕ ಪ್ರತಿಕೃತಿಗಳು

ಬೆಂಗಳೂರು: ಲಾಲ್‌ಬಾಗ್ ಉದ್ಯಾನದಲ್ಲಿ ನಾಳೆ ಆಗಸ್ಟ್ 7ರಿಂದ 18ರವರೆಗೆ ನಡೆಯಲಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ವರ್ಷದ ಪ್ರಮುಖ ಆಕರ್ಷಣೆ ಎಂದರೆ ಗಾಜಿನ ಮನೆಯಲ್ಲಿ ಸ್ಥಾಪಿಸಿರುವ ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನವರ ಐಕ್ಯ ಮಂಟಪದ ಪ್ರತಿಕೃತಿಗಳು.

ತೋಟಗಾರಿಕೆ ಇಲಾಖೆ ವಿವಿಧ ರೀತಿಯ ಆಕರ್ಷಕ ಹೂವುಗಳಿಂದ ಗಾಜಿನ ಮನೆಯನ್ನು ಅಲಂಕಾರಗೊಳಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳು ಬಣ್ಣ ಬಣ್ಣದ ಹೂಸಸಿಗಳೊಂದಿಗೆ ಶೃಂಗಾರಗೊಂಡಿವೆ. ಈ ಪ್ರದರ್ಶನದಲ್ಲಿ ಆಂಥೋರಿಯಂ, ಗುಲಾಬಿ, ಆರ್ಕಿಡ್, ಜರ್ಬೇರಾ ಮತ್ತು ಸುಗಂಧ ರಾಜ ಸೇರಿದಂತೆ ಹಲವಾರು ಶೀತ ವಲಯದ ಹೂಗಳು ನೋಡುಗರ ಕಣ್ಮನ ಸೆಳೆಯಲಿವೆ.

ಬೋನ್ಸಾಯ್ ವನವನ್ನು ನವೀಕರಿಸಿ ವಿಭಿನ್ನ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ವಿಶೇಷ ಬೋನ್ಸಾಯ್ ಸಸಿಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ. ಜೊತೆಗೆ ಇಕೆಬಾನಾ, ತರಕಾರಿ ಕೆತ್ತನೆ ಪ್ರದರ್ಶನ, ತೋಟಗಳ ಸ್ಪರ್ಧೆ ಮತ್ತು ನಾನಾ ಹೂವಿನ ಜೋಡಣೆ ಕಲೆಯ ಪ್ರದರ್ಶನವೂ ಈ ಶೋನಲ್ಲಿ ಒಳಗೊಂಡಿವೆ.

ಸುಮಾರು 2.5 ಲಕ್ಷದಿಂದ 3 ಲಕ್ಷ ಹೂವುಗಳಿಂದ ನಿರ್ಮಿತವಾಗಿರುವ ಗಾಜಿನ ಮನೆಯಲ್ಲಿ, 18 ಅಡಿ ಎತ್ತರ ಮತ್ತು 32 ಅಡಿ ಅಗಲದ ಕಿತ್ತೂರಿನ ಕೋಟೆ ಪ್ರತಿಕೃತಿ ಸ್ಥಾಪಿಸಲಾಗಿದೆ. ಇದರ ಮುಂಭಾಗದಲ್ಲಿ ಅಶ್ವಾರೂಢ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳು ಹಾಗೂ ಹಿಂಭಾಗದಲ್ಲಿ ಐಕ್ಯ ಮಂಟಪದ ಪ್ರತಿಕೃತಿ ಇದೆ.

ಪ್ರವೇಶ ಶುಲ್ಕ:

  • ಸಾಮಾನ್ಯ ದಿನ: ₹80
  • ರಜಾದಿನಗಳು ಮತ್ತು ವಾರಾಂತ್ಯ: ₹100

ಈ ಪ್ರದರ್ಶನವು ನೈಸರ್ಗಿಕ ಸೌಂದರ್ಯ ಹಾಗೂ ಐತಿಹಾಸಿಕ ಮಹತ್ವವನ್ನು ಒಗ್ಗೂಡಿಸುವ ಅತ್ಯುತ್ತಮ ವೇದಿಕೆಯಾಗಿದ್ದು, ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸುವ ನಿರೀಕ್ಷೆಯಿದೆ.

Continue Reading

ಬೆಂಗಳೂರು

ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್‌ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್‌ಟಾಪ್ ವಿತರಣೆ ನಡೆಸಲಾಗಿದೆ.

ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.

2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.

Continue Reading

ಬೆಂಗಳೂರು

ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.

ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.

Continue Reading

Trending