Connect with us

ಬೆಂಗಳೂರು

ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ಬಿಬಿಎಂಪಿ, ಜಿಪಂ,ತಾಪಂ ಚುನಾವಣೆ ಸಿಎಂ ಸಿದ್ದು

Published

on

ಮೈಸೂರು: ಲೋಕಸಭೆಯ ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರ ಸ್ಧಳೀಯ ಸಂಸ್ಧೆಗಳು ಬಿಬಿಎಂಪಿ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು,
ಇಂದು ಮೈಸೂರಿನಲ್ಲಿ ಮಾತನಾಡಿದ ಅವರು ಕಾನೂನು ಪ್ರಕಾರ ಏನೇನು ಮಾಡಬೇಕೆಂದು ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸುತ್ತೇವೆ ಎಂದರು, ಈ ಎಲ್ಲಾ ಚುನಾವಣೆ ನಡೆಸಲು ತಯಾರಿದ್ದೇವೆ, ಚುನಾವಣೆಗಾಗಿ ಅಗತ್ಯವಾದ ಕ್ರಮಗಳನ್ನು ಸರ್ಕಾರದಿಂದ ಕೈಗೊಳ್ಳಲಾಗುವುದು ಎಂದು ಹೇಳಿದರು,
ಇನ್ನೂ ಲೈಂಗಿಕ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬರೆದ ಪತ್ರದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ದೇವೇಗೌಡರಿಗೆ ಅವರ ಮನೆಯವರಿಗೆ ಗೊತ್ತಿಲ್ಲದಂತೆ ಪ್ರಜ್ವಲ್ ವಿದೇಶಕ್ಕೆ ಹೋದ್ನಾ? ಅವರ ಕುಟುಂಬದ ಸಂಪರ್ಕದಲ್ಲಿ ಪ್ರಜ್ವಲ್ ಇಲ್ವಾ ಎಂದು ಪ್ರಶ್ನಿಸಿದರು, ಅವರ ಕುಟುಂಬಕ್ಕೆ ಪ್ರಜ್ವಲ್ ವಿಚಾರವೆಲ್ಲಾ ಗೊತ್ತಿದೆ ಎಂದರು

ಬೆಂಗಳೂರು

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು; ರಾಜ್ಯಪಾಲರಿಂದ ರಾಷ್ಟ್ರಪತಿಗೆ ತನಿಖೆ ಶಿಫಾರಸು

Published

on

ಬೆಂಗಳೂರು: KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಮಾನತುಗೊಳಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಅವರ ವಿರುದ್ಧ ಕೇಳಿಬಂದಿರುವ ನೇಮಕಾತಿ ಅಕ್ರಮ, ಸ್ವಜನಪಕ್ಷಪಾತ ಹಾಗೂ ಅಧಿಕಾರ ದುರುಪಯೋಗದ ಆರೋಪಗಳ ಕುರಿತು ತನಿಖೆ ನಡೆಸಲು ಭಾರತದ ಸಂವಿಧಾನದ 317(1)ನೇ ವಿಧಿ ಅಡಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ.

ರಾಜ್ಯಪಾಲರ ಆದೇಶದಂತೆ, ತನಿಖೆ ಪೂರ್ಣಗೊಂಡು ರಾಷ್ಟ್ರಪತಿಗಳಿಂದ ಮುಂದಿನ ಆದೇಶ ಬರುವವರೆಗೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ. ಅಲ್ಲಿಯವರೆಗೆ ಆಯೋಗದ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿಯರು ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಹಿತಾಸಕ್ತಿ ಸಂಘರ್ಷವನ್ನು ಘೋಷಿಸದೇ ಇದ್ದಿರುವುದು, ನೇಮಕಾತಿ ಪ್ರಕ್ರಿಯೆಯಿಂದ ದೂರ ಉಳಿಯದಿರುವುದು ಹಾಗೂ ಮೀಸಲಾತಿ ಸೌಲಭ್ಯ ಪಡೆಯಲು ತಪ್ಪು ಮಾಹಿತಿ ನೀಡಿರುವ ಆರೋಪಗಳು ತನಿಖೆಗೆ ಕಾರಣವಾಗಿವೆ. ಪ್ರಕರಣದಲ್ಲಿ ಅವರ ಪುತ್ರಿಯೊಬ್ಬರು ವಾರ್ಷಿಕ ಆದಾಯವನ್ನು ಕೇವಲ ₹40,000 ಎಂದು ನಮೂದಿಸಿದ ಆದಾಯ ಪ್ರಮಾಣಪತ್ರ ಸಲ್ಲಿಸಿ ಹಿಂದುಳಿದ ವರ್ಗಗಳ ಮೀಸಲಾತಿ ಹಾಗೂ ‘ಕ್ರೀಮಿ ಲೇಯರ್’ ವಿನಾಯಿತಿ ಪಡೆಯಲು ಯತ್ನಿಸಿದ್ದರೆಂಬ ಗಂಭೀರ ಆರೋಪ ಕೇಳಿಬಂದಿದೆ.

ಈ ಸಂಬಂಧ ಕೆಪಿಎಸ್‌ಸಿ ಕಾರ್ಯದರ್ಶಿ ಶೋಭಾ ಅವರ ದೂರಿನ ಮೇರೆಗೆ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಆದಾಯ ಪ್ರಮಾಣಪತ್ರ ನೀಡಿದ ಕಂದಾಯ ಇಲಾಖೆಯ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಧಿಕಾರ ದುರುಪಯೋಗ ನಡೆದಿದೆಯೇ ಎಂಬುದರ ಕುರಿತು ಪೊಲೀಸರು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಈ ಬೆಳವಣಿಗೆಯಿಂದ ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆ ಮತ್ತು ಆಡಳಿತ ವ್ಯವಸ್ಥೆಯ ಪಾರದರ್ಶಕತೆ ಕುರಿತು ಹೊಸ ಚರ್ಚೆ ಆರಂಭವಾಗಿದ್ದು, ತನಿಖೆಯ ಅಂತಿಮ ವರದಿಯತ್ತ ರಾಜ್ಯದ ಗಮನ ಕೇಂದ್ರೀಕೃತವಾಗಿದೆ.

Continue Reading

ಬೆಂಗಳೂರು

₹13 Crores ವೆಚ್ಚ, 2 ವರ್ಷ ಕಾಯುವಿಕೆ! ವಿಜಯನಗರ ಅಂಡರ್‌ಗ್ರೌಂಡ್ ಮಾರುಕಟ್ಟೆ ಇನ್ನೂ ಬಂದ್; 80ಕ್ಕೂ ಹೆಚ್ಚು ಮಳಿಗೆಗಳು ಖಾಲಿ

Published

on

ಬೆಂಗಳೂರು: ₹13 Crores ರೂಪಾಯಿ ಸಾರ್ವಜನಿಕರ ತೆರಿಗೆ ಹಣ ವೆಚ್ಚ ಮಾಡಿ ವಿಜಯನಗರದಲ್ಲಿ ನಿರ್ಮಿಸಲಾಗಿರುವ ಅಂಡರ್‌ಗ್ರೌಂಡ್ ಮಾರುಕಟ್ಟೆ (Underground Market) ಉದ್ಘಾಟನೆಯಾಗಿ ಎರಡು ವರ್ಷ ಕಳೆದರೂ ವ್ಯಾಪಾರಿಗಳ ಬಳಕೆಗೆ ಇನ್ನೂ ಲಭ್ಯವಾಗಿಲ್ಲ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ 80ಕ್ಕೂ ಹೆಚ್ಚು ಸುಸಜ್ಜಿತ ಮಳಿಗೆಗಳು ಖಾಲಿಯಾಗಿ ಪಾಳುಬಿದ್ದಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೆಹಲಿ ಪಾಲಿಕಾ ಬಜಾರ್ ಮಾದರಿಯಲ್ಲಿ ಆಧುನಿಕ ಸೌಲಭ್ಯಗಳೊಂದಿಗೆ ಸುಮಾರು ₹13 ಕೋಟಿ ವೆಚ್ಚದಲ್ಲಿ ಈ ಮಾರುಕಟ್ಟೆಯನ್ನು ನಿರ್ಮಿಸಲಾಗಿದೆ. ಉದ್ಘಾಟನೆ ನಡೆದಿದ್ದರೂ ಇಂದಿಗೂ ವ್ಯಾಪಾರ ಆರಂಭವಾಗದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸ್ಥಳೀಯರ ಆರೋಪದ ಪ್ರಕಾರ, ಟೆಂಡರ್ ಪ್ರಕ್ರಿಯೆಯ ವಿಳಂಬ ಮತ್ತು ಆಡಳಿತಾತ್ಮಕ ನಿರಾಸಕ್ತಿಯಿಂದ ಈ ಯೋಜನೆ ಸಾರ್ವಜನಿಕರಿಗೆ ಯಾವುದೇ ಪ್ರಯೋಜನ ನೀಡದಂತಾಗಿದೆ.

ಇದೇ ವೇಳೆ ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸಣ್ಣ ವ್ಯಾಪಾರಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ ಅವರಿಗೆ ಪರ್ಯಾಯವಾಗಿ ಬಳಸಬೇಕಿದ್ದ ವಿಜಯನಗರ ಅಂಡರ್‌ಗ್ರೌಂಡ್ ಮಾರುಕಟ್ಟೆ ಇನ್ನೂ ಕಾರ್ಯಾರಂಭ ಮಾಡದಿರುವುದು ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಮಾರುಕಟ್ಟೆಯೊಳಗಿನ ಲಿಫ್ಟ್, ಎಸ್ಕಲೇಟರ್ ಸೇರಿದಂತೆ ಹಲವು ಸೌಲಭ್ಯಗಳು ಉದ್ಘಾಟನೆಯಾದ ದಿನದಿಂದಲೇ ಬಂದ್ ಆಗಿದ್ದು, ನಿರ್ವಹಣೆಯ ಕೊರತೆಯಿಂದ ಕಟ್ಟಡವು ಪಾಳು ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯೇ ನಿರುಪಯುಕ್ತವಾಗುತ್ತಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ.

ವ್ಯಾಪಾರಿಗಳು ಮತ್ತು ಸ್ಥಳೀಯರು ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಮಳಿಗೆಗಳನ್ನು ಹಂಚಿಕೆ ಮಾಡಿ ವ್ಯಾಪಾರ ಆರಂಭಿಸಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

“ಸರ್ಕಾರ ಸಾರ್ವಜನಿಕರ ತೆರಿಗೆ ಹಣದಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಿದೆ. ಆದರೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದೇ ಅದು ಉಪಯೋಗಕ್ಕೆ ಬರುತ್ತಿಲ್ಲ. ಸಚಿವರು ಮತ್ತು ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ವ್ಯಾಪಾರಿಗಳಿಗೆ ಮಳಿಗೆಗಳನ್ನು ನೀಡಬೇಕು.”
– ರಮೇಶ್, ವ್ಯಾಪಾರಸ್ಥ

Continue Reading

ರಾಜ್ಯ

Karnataka SIR ಅಭಿಯಾನಕ್ಕೆ ಭರ್ಜರಿ ವೇಗ; ಶೇ.92.95 ಕೆಲಸ ಪೂರ್ಣ

Published

on

ಬೆಂಗಳೂರು: Karnataka SIR ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವೇಗವಾಗಿ ಸಾಗುತ್ತಿದ್ದು, ರಾಜ್ಯವು ಮಹತ್ವದ ಮೈಲಿಗಲ್ಲು ತಲುಪಿದೆ. ಚುನಾವಣಾ ಆಯೋಗದ ಅಧಿಕೃತ ಮಾಹಿತಿಯ ಪ್ರಕಾರ, ರಾಜ್ಯಾದ್ಯಂತ SIR ಗಣತಿ ಕಾರ್ಯವು ಈಗಾಗಲೇ ಶೇ.92.95ರಷ್ಟು ಪೂರ್ಣಗೊಂಡಿದ್ದು, 5.15 ಕೋಟಿಗೂ ಅಧಿಕ ಗಣತಿ ಅರ್ಜಿಗಳನ್ನು ಯಶಸ್ವಿಯಾಗಿ ವಿತರಿಸಲಾಗಿದೆ.

ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳನ್ನು ಸರಿಪಡಿಸುವುದು, ನಕಲಿ ಹೆಸರುಗಳನ್ನು ತೆಗೆದುಹಾಕುವುದು ಹಾಗೂ ಅರ್ಹ ಮತದಾರರ ಮಾಹಿತಿಯನ್ನು ಮರುಪರಿಶೀಲಿಸುವ ಉದ್ದೇಶದಿಂದ ಈ ವಿಶೇಷ ಅಭಿಯಾನ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ನಮೂನೆಗಳನ್ನು ವಿತರಿಸಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದ್ದು, ವಿತರಿಸಲಾದ 5.15 ಕೋಟಿ ಅರ್ಜಿಗಳ ಪೈಕಿ ಹೆಚ್ಚಿನ ಸಂಖ್ಯೆಯ ನಮೂನೆಗಳನ್ನು ಮತದಾರರು ಭರ್ತಿ ಮಾಡಿ ಸಹಿಯೊಂದಿಗೆ ಅಧಿಕಾರಿಗಳಿಗೆ ವಾಪಸ್ ಸಲ್ಲಿಸಿದ್ದಾರೆ. ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಶೇ.100ರಷ್ಟು ಅರ್ಜಿ ವಿತರಣೆ ಪೂರ್ಣಗೊಂಡಿದ್ದು, ಉಳಿದ ಪ್ರದೇಶಗಳಲ್ಲಿಯೂ ಶೀಘ್ರದಲ್ಲೇ ಗುರಿ ತಲುಪುವ ವಿಶ್ವಾಸವನ್ನು ಚುನಾವಣಾ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗದ ಪ್ರಕಾರ, ಮತದಾರರ ಪಟ್ಟಿಯಲ್ಲಿ ಹೆಸರು ಸುರಕ್ಷಿತವಾಗಿರಲು SIR ನಮೂನೆಯನ್ನು ನಿಗದಿತ ಅವಧಿಯಲ್ಲಿ ಭರ್ತಿ ಮಾಡಿ ಸಲ್ಲಿಸುವುದು ಅತ್ಯಂತ ಮಹತ್ವದ್ದಾಗಿದೆ. ಅರ್ಜಿಯನ್ನು ಭರ್ತಿ ಮಾಡಿ ವಾಪಸ್ ನೀಡದಿದ್ದರೆ ಕರಡು ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ನಿರ್ಲಕ್ಷ್ಯ ವಹಿಸಬಾರದು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಭೌತಿಕವಾಗಿ ಅರ್ಜಿ ಸಲ್ಲಿಸುವುದರ ಜೊತೆಗೆ ಆನ್‌ಲೈನ್ ಮೂಲಕವೂ ನಮೂನೆ ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ದಾಖಲಾಗಿರುವ ಶೇ.92.95ರಷ್ಟು ಪ್ರಗತಿಯು ದೇಶದ ಅತ್ಯುತ್ತಮ ಸಾಧನೆಗಳಲ್ಲಿ ಒಂದಾಗಿದ್ದು, ಉಳಿದ ಕಾರ್ಯವನ್ನು ಮುಂದಿನ ಕೆಲವೇ ದಿನಗಳಲ್ಲಿ ಪೂರ್ಣಗೊಳಿಸಲು ಚುನಾವಣಾ ಇಲಾಖೆ ಸಜ್ಜಾಗಿದೆ.

Continue Reading

Trending