Connect with us

ದೇಶ

3ನೇ ಬಾರಿ ಮೋದಿ ಪ್ರಧಾನಿಯಾದರೆ ತಲೆ ಬೋಳಿಸುವುದಾಗಿ ಸವಾಲು ಹಾಕಿದ ಎಎಪಿ ನಾಯಕ

Published

on

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಗೆದ್ದು ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾದರೆ ತಲೆ ಬೋಳಿಸುವುದಾಗಿ ಎಎಪಿ ನಾಯಕ ಸೋಮನಾಥ ಭಾರ್ತಿ ಸವಾಲು ಹಾಕಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬಹಿರಂಗ ಪೋಸ್ಟ್ ಹಾಕಿದ್ದಾರೆ,
ನನ್ನ ಮಾತನ್ನು ನೆನಪಿಸನಲ್ಲಿಟ್ಟುಕೊಳ್ಳಿ, ಜೂನ್ 4 ರಂದು ಮತಗಟ್ಟೆ ಸಮೀಕ್ಷೆ ತಪ್ಪು ಎಂದು ಸಬೀತಾಗಲಿದೆ, ಅಲ್ಲದೆ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದಿಲ್ಲ ಎಂದು ಹೇಳಿದ್ದಾರೆ,
ದೆಹಲಿಯಲ್ಲಿ ಎಲ್ಲ ಏಳು ಸ್ಧಾನಗಳಲ್ಲಿ ಇಂಡಿಯಾ ಮೈತ್ರಿಕೂಟ ಜಯ ಗಳಿಸಲಿದೆ, ಮೋದಿ ಭಯದಿಂದಾಗಿ ಅವರು ಸೋಲುವುದನ್ನು ಎಕ್ಸಿಟ್ ಪೋಲ್ ತೋರಿಸಲಿಲ್ಲ, ಹಾಗಾಗಿ ನಾವೆಲ್ಲರೂ ನಿಜವಾದ ಫಲಿತಾಂಶಕ್ಕಾಗಿ ಜೂನ್ 4 ರವರೆಗೆ ಕಾಯಬೇಕಿದೆ, ಜನರು ಬಿಜೆಪಿ ವಿರುದ್ಧ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ
ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಕೂಡ ಆಗಿರುವ ಸೋಮನಾಥ ಭರ್ತಿ ನವದೆಹಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ,

ಚುನಾವಣೆ

“ಟ್ರಂಪ್ ಅನುಮತಿ ಇಲ್ಲದೆ ತೈಲ ಖರೀದಿ ಸಾಧ್ಯವಿಲ್ಲ”: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Published

on

By

ಅಸ್ಸಾಂ ರಾಜ್ಯದ ಗೋಲಾಘಾಟ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಉಲ್ಲೇಖಿಸಿದ ಅವರು, “ಟ್ರಂಪ್ ಅನುಮತಿ ಇಲ್ಲದೆ ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದರು.

ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಟ್ರಂಪ್ ಬಹಿರಂಗವಾಗಿ ಮೋದಿ ಬಗ್ಗೆ ಹೇಳಿಕೆ ನೀಡಿದ್ದಾರೆ. ನರೇಂದ್ರ ಮೋದಿ ಭಾರತದ ಇಂಧನ ಭದ್ರತೆ ಮತ್ತು ಪ್ರಮುಖ ಮಾಹಿತಿಯನ್ನು ಅಮೆರಿಕದ ಕೈಗೆ ಒಪ್ಪಿಸಿದ್ದಾರೆ,” ಎಂದು ಗಂಭೀರ ಆರೋಪ ಮಾಡಿದರು.

ಇದೇ ವೇಳೆ ಅವರು ಎಪ್ಸ್ಟೀನ್ ಫೈಲ್ ಕುರಿತು ಉಲ್ಲೇಖಿಸಿ, ಟ್ರಂಪ್ ಬಳಿ ಮೋದಿ ಬಗ್ಗೆ ಮಾಹಿತಿಯಿದೆ ಎಂದು ಹೇಳಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಜೊತೆಗೆ, ಉದ್ಯಮಿ ಅದಾನಿ ವಿರುದ್ಧ ಅಮೆರಿಕದಲ್ಲಿ ಪ್ರಕರಣ ದಾಖಲಾಗಿರುವುದನ್ನೂ ಅವರು ಪ್ರಸ್ತಾಪಿಸಿದರು.

ಈ ನಡುವೆ ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆ ಸನ್ನಾಹಗಳು ಜೋರಾಗಿದ್ದು, ಅಸ್ಸಾಂ ಸೇರಿದಂತೆ ಹಲವೆಡೆ ರಾಜಕೀಯ ತಾಪಮಾನ ಏರಿಕೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಟಿಎಂಸಿ ಪ್ರಚಾರ ತೀವ್ರಗೊಳಿಸಿದ್ದು, ಬಿಜೆಪಿ ಕೂಡ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ತೀವ್ರ ಪ್ರಚಾರ ನಡೆಸುತ್ತಿದೆ.

ಒಟ್ಟಿನಲ್ಲಿ, ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ಮಾತಿನ ಸಮರ ಮತ್ತಷ್ಟು ತೀವ್ರಗೊಳ್ಳುವ ಸೂಚನೆ ನೀಡಿದೆ.

Continue Reading

ಕ್ರೀಡೆ

ಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!

Published

on

By

ಬೆಂಗಳೂರುದಲ್ಲಿ ಐಪಿಎಲ್ ಕ್ರೇಜ್ ಗರಿಷ್ಠ ಮಟ್ಟಕ್ಕೆ ಏರಿರುವ ನಡುವೆಯೇ, ಶಾಸಕರಿಗೆ ನೀಡಲಾದ ಉಚಿತ ಟಿಕೆಟ್ ಪಾಸ್‌ಗಳ ದುರ್ಬಳಕೆಯ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. Indian Premier League ಪಂದ್ಯಗಳಿಗೆ ಸಂಬಂಧಿಸಿದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಕೆಲವು ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Karnataka State Cricket Association ವಿಶೇಷ ಅಕ್ರೆಡೆಷನ್ ಕಾರ್ಡ್ ಮಾದರಿಯ ಪಾಸ್‌ಗಳನ್ನು ವಿತರಿಸಿತ್ತು.

ಆದರೆ, ಈ ಪಾಸ್‌ಗಳು ಈಗ ಶಾಸಕರ ಕುಟುಂಬದವರಿಗಷ್ಟೇ ಸೀಮಿತವಾಗದೆ, ಅವರ ಮಕ್ಕಳ ಸ್ನೇಹಿತರ ಕೈಗೆ ಸೇರಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸರು ತಪಾಸಣೆ ನಡೆಸಿದ ವೇಳೆ, ಶಾಸಕರ ಕುಟುಂಬದ ಹೆಸರಿನ ಪಾಸ್ ಹಿಡಿದು ಬಂದಿದ್ದ ಕೆಲ ಯುವಕರ ಮೇಲೆ ಅನುಮಾನ ಮೂಡಿದೆ.

ಪರಿಶೀಲನೆ ವೇಳೆ ಯುವಕರು ತಡಬಡಾಯಿಸಿದ್ದು, ಕೊನೆಯಲ್ಲಿ ತಾವು ಶಾಸಕರ ಮಗನ ಸ್ನೇಹಿತರು ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಈ ಘಟನೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಜನಪ್ರತಿನಿಧಿಗಳಿಗಾಗಿ ನೀಡಲಾದ ಸೌಲಭ್ಯವನ್ನು ಅನರ್ಹರು ಬಳಸುವುದು ಸರಿಯೇ? ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಸಾಮಾನ್ಯ ಜನರು ಟಿಕೆಟ್‌ಗಾಗಿ ಪರದಾಡುತ್ತಿರುವಾಗ, ಉಚಿತ ಪಾಸ್‌ಗಳು ದುರ್ಬಳಕೆಯಾಗುತ್ತಿರುವುದು ಜನರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ KSCA ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ.

Continue Reading

ದೇಶ

ಎನ್‌ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್

Published

on

By

ಮುಂಬೈನಲ್ಲಿ ನಡೆದ NMACC third anniversary ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಅವರು ತಮ್ಮ ವೈಭವಶಾಲಿ ಸೀರೆ ಲುಕ್ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ಸಾಂಪ್ರದಾಯಿಕತೆಗೆ ಪ್ರತೀಕವಾಗಿರುವ ಅವರ ಶೈಲಿ ಫ್ಯಾಷನ್ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ವಿಶೇಷ ಕಾರ್ಯಕ್ರಮಕ್ಕೆ ಪತಿ ಮುಕೇಶ್ ಅಂಬಾನಿ ಅವರೊಂದಿಗೆ ಆಗಮಿಸಿದ ನೀತಾ, ಐವರಿ-ಗೋಲ್ಡ್ ಕಾಂಜೀವರಂ ರೇಷ್ಮೆ ಸೀರೆಯನ್ನು ಧರಿಸಿದ್ದರು. ಹೊನ್ನಿನ ನೂಲುಗಳಿಂದ ನೇಯ್ದ ಈ ಸೀರೆಗೆ ಮರೂನ್ ಕೆಂಪು ಅಂಚು ಹೆಚ್ಚುವರಿ ಶೋಭೆ ನೀಡಿತು.

ಈ ಸೀರೆ ಕೈಮಗ್ಗದಲ್ಲಿ ಪರಿಣಿತ ಕಲಾವಿದ ಆರ್. ವರಧನ್ ಅವರ ಕೈಚಳಕದಿಂದ ಮೂಡಿಬಂದಿದ್ದು, ಇದನ್ನು ತಯಾರಿಸಲು ಸುಮಾರು ನಾಲ್ಕು ತಿಂಗಳು ಸಮಯ ತೆಗೆದುಕೊಂಡಿದೆ. ಜರಿ ಕಸೂತಿ ಮತ್ತು ನಯವಾದ ಮೇಲ್ಮೈ ಈ ಸೀರೆಗೆ ವಿಶೇಷ ಮೌಲ್ಯ ನೀಡಿದೆ.

ಆಭರಣಗಳ ವಿಷಯದಲ್ಲಿ ನೀತಾ ಅಂಬಾನಿ ಬರ್ಮಾ ರೂಬಿ ಅಲಂಕೃತ ಚಿನ್ನದ ಮಾವಿನ ಸರ ಹಾಗೂ ಬಸ್ರಾ ಮುತ್ತಿನ ಕರ್ಣಾಭರಣ ಧರಿಸಿ ಸಾಂಪ್ರದಾಯಿಕತೆಗೆ ಆಧುನಿಕ ಸ್ಪರ್ಶ ನೀಡಿದ್ದಾರೆ.

ಕಾರ್ಯಕ್ರಮದ ವೇಳೆ ಅವರು ಭಾರತೀಯ ಕಲೆ ಮತ್ತು ಸಂಸ್ಕೃತಿಯ ಮಹತ್ವವನ್ನು ಒತ್ತಿ ಹೇಳಿ, “ಸಂಖ್ಯೆ 3”ರ ಸಾಂಸ್ಕೃತಿಕ ಅರ್ಥವನ್ನು ತ್ರಿಮೂರ್ತಿ, ತ್ರಿದೇವಿ ಮತ್ತು ತ್ರಿವೇಣಿ ಸಂಗಮದ ಉದಾಹರಣೆಗಳ ಮೂಲಕ ವಿವರಿಸಿದರು.

ಈ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಭಾರತೀಯ ಹಸ್ತಕುಶಲತೆ ಮತ್ತು ಕಾಂಜೀವರಂ ಸೀರೆಗಳಿಗೆ ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

Trending