Connect with us

ದೇಶ

ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ – ಜೂ.8 ಕ್ಕೆ ದಿನಾಂಕ ನಿಗದಿ?

ನವದೆಹಲಿ: ಇತ್ತ ಸರ್ಕಾರ ರಚಿಸಲು ಐಎನ್‍ಡಿಎ ಒಕ್ಕೂಟ ಇನ್ನೂ ಸಭೆಯಲ್ಲಿ ನಿರತರಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರಮಾಣ ವಚನಕ್ಕೆ ಸಿದ್ದತೆ ನಡೆಸಿದೆ, ಜೂ 8 ರಂದು ದಿನಾಂಕ ನಿಗದಿಯಾಗಿದ್ದು, ಹಕ್ಕು ಮಂಡನೆಗೆ ಆಹ್ವಾನಿಸುವಂತೆ ರಾಷ್ಟ್ರಪತಿಯವರಲ್ಲಿ ಬಿಜೆಪಿ ಮನವಿ ಸಲ್ಲಿಸಿದೆ,
ಇಂದು ಎನ್‍ಡಿಎ ನಾಯಕರು ಸಭೆ ಸೇರಿದ್ದು ಅಲ್ಲಿ ಈ ವಿವರವನ್ನು ಕೂಲಂಕಷವಾಗಿ ಚರ್ಚಿಸಲಿದ್ದಾರೆ, ಪ್ರಮಾಣವಚನದ ದಿನಾಂಕವೂ ಸಹ ಸಭೆಯಲ್ಲಿ ನಿಗದಿಯಾಗಿದ್ದು, ಇಂಡಿಯಾ ಬ್ಲಾಕ್ ವತಿಯಿಂದ ಸರ್ಕಾರ ರಚಿಸುವ ಸಾಧ್ಯತೆಗಳಿಗೆ ತೆರೆ ಎಳೆಯಲಾಗಿದೆ, ಶನಿವಾರ ಪ್ರಮಾಣವಚನ ಸಮಾರಂಭ ನಡೆಯಲಿದ್ದು ಸಚಿವರ ಪ್ರಮಾಣ ವಚನದ ಬಗ್ಗೆ ಇನ್ನಷೇ ನಿರ್ಧಾರವಾಗಬೇಕಿದೆ,
ಎನ್‍ಡಿಎ ಒಕ್ಕೂಟ ಅಗತ್ಯ ಬಹುಮತ ಗಳಿಸಿದ್ದರೂ ಸಹ ಬಿಜೆಪಿಗೆ ಬಹುಮತಕ್ಕೆ ಸುಮಾರು 30 ಸ್ಧಾನಗಳು ಕಡಿಮೆಯಿದೆ, ಹೀಗಾಗಿ ಮುಖ್ಯ ಪಕ್ಷಗಳನ್ನು ತಮ್ಮೆಡೆಗೆ ಸೆಳೆದುಕೊಂಡು ಸರ್ಕಾರವನ್ನು ಅಸ್ತಿರಗೊಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಮೈತ್ರಿಕೂಟದ ನಾಯಕರು ನಿರತರಾಗಿದ್ದಾರೆ,

ದೇಶ

ಅಂಟಾಕ್ರ್ಟಿಕಾ ಧ್ರುವ ಪ್ರದೇಶದಲ್ಲಿ ನಿಗೂಢ ರೇಡಿಯೋ ತರಂಗಗಳು ಪತ್ತೆ..!

ಮನುಷ್ಯರು ಒಂದು ಕ್ಷಣವೂ ಇರಲಾಗದ ನಿರ್ಜನ ಪ್ರದೇಶವಾದ ಅಂಟಾಕ್ರ್ಟಿಕಾದ ಧ್ರುವ ಪ್ರದೇಶದಲ್ಲಿ ಮಂಜುಗಡ್ಡೆಯ ಮೇಲ್ಮೈಯಿಂದ ಹೊರಹೊಮ್ಮುತ್ತಿರುವ ನಿಗೂಢ ರೇಡಿಯೋ ತರಂಗಗಳನ್ನು ಸಂಶೋಧಕರು ಪತ್ತೆಹಚ್ಚಿದ್ದಾರೆ,
ಮಂಜುಗಡ್ಡೆಯ ಆಳದಿಂದ ರೇಡಿಯೋ ಸಂಕೇತಗಳು ಹೊರಸೂಸುತ್ತಿವೆ, ಈ ತರಂಗಗಳು ಸಾವಿರಾರು ಕಿಲೋಮೀಟರ್ ಬಂಡೆಗಳ ಮೂಲಕ ಹಾದು ಹೋಗೇಕಾಗಿತ್ತು ಅದರೆ ಇವು ಬಂಡೆಗಳಲ್ಲಿ ಹೀರಲ್ಪಡುತ್ತಿವೆ, ಇದು ಭೌತಶಾಸ್ತ್ರದ ನಿಯಮದ ವಿರುದ್ಧವಾಗಿದೆ, ಭೂವಿಯನ್ನು ತಲುಪುವ ಸಂಕೇತಗಳನ್ನು ವಿಶ್ಲೇಷಿಸುವ ಮೂಲಕ ಸಂಶೋಧಕರು ಈ ನಿಗೂಢ ರೇಡಿಯೋ ತರಂಗಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ,
ಸದ್ಯ ಈ ನಿಗೂಢ ರೇಡಿಯೋ ತರಂಗಗಳು ವಿಜ್ಞಾನದ ಎಲ್ಲಾ ಪ್ರಯೋಗಗಳಿಗೂ ವಿರುದ್ಧ ವಾಗಿರುವುದು ಸಂಶೋಧಕರಲ್ಲಿ ಕುತೂಹಲ ಹೆಚ್ಚಿಸಿದೆ, ಈ ಹಿನ್ನೆಲೆಯಲ್ಲಿ ಕೆಲ ಮಾದರಿಗಳನ್ನು ಸಂಗ್ರಹಿಸಿರುವ ಸಂಶೋಧಕರು ಈ ನಿಗೂಢತೆಯನ್ನು ಭೇದಿಸಲು ತಮ್ಮ ಪ್ರಯತ್ನಗಳನ್ನು ಆರಂಭಿಸಿದ್ದಾರೆ,

Continue Reading

ಅಪರಾಧ

ನಕಲಿ ವೈದ್ಯನ ಚಿಕಿತ್ಸೆಯಿಂದ ಮಗು ಬಲಿ

ರಾಮನಗರ: ರಾಮನಗರದಲ್ಲಿ (Ramanagara news) ನಕಲಿ ವೈದ್ಯನ ಚಿಕಿತ್ಸೆಯಿಂದಾಗಿ (treatment) ಶಿವರಾಜ್ ಎಂಬವರ ಆರು ತಿಂಗಳ ಕಂದಮ್ಮ (child death) ಸಾವನ್ನಪ್ಪಿದೆ. 6 ತಿಂಗಳ ಮಗುವಿನ ಸಾವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ‌ ಕ್ರಮಕ್ಕೂ ಸೂಚನೆ ನೀಡಿದೆ. ಶಿವರಾಜ್ ಎಂಬವರ ಆರು ತಿಂಗಳ ಪ್ರಾಯದ ಮಗು ಶರಣ್ಯ ಮೃತಪಟ್ಟವಳು. ನಕಲಿ ವೈದ್ಯ (Fake Doctor) ಮಹಮ್ಮದ್ ಸೈಫುಲ್ಲ ಎಂಬಾತ ಎಂದು ಗುರುತಿಸಲಾಗಿದೆ.

ಮಹಮ್ಮದ್ ಸೈಫುಲ್ಲ ಎಂಬವನು ವೈದ್ಯಕೀಯ ಕೋರ್ಸ್ ಮಾಡದೇ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೇ ಸಣ್ಣ ಕೋಣೆಯೊಂದರಲ್ಲಿ ಚಿಕಿತ್ಸೆ ನೀಡುತ್ತಿದ್ದ. ಈತನಿಂದಾಗಿ ಮಗು ಮರಳಿ ಬಾರದ ಲೋಕಕ್ಕೆ ತೆರಳಿದೆ. ಇದು ಜಿಲ್ಲೆಯ ಜನರನ್ನು ಸಾಕಷ್ಟು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ರಾಮನಗರದಲ್ಲಿ ಸಾಕಷ್ಟು ನಕಲಿ ಕ್ಲಿನಿಕ್​ಗಳು ತಲೆ ಎತ್ತಿದ್ದು ಅವುಗಳ ವಿರುದ್ಧ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಬೆಂಗಳೂರು ದಕ್ಷಿಣ ‌ಜಿಲ್ಲೆಯಾದ್ಯಂತ ಒಟ್ಟು 193 ಕ್ಲಿನಿಕ್ ಹಾಗೂ ಆಸ್ಪತ್ರೆಗಳಿಗೆ ಮಾತ್ರ ಆರೋಗ್ಯ ಇಲಾಖೆಯಿಂದ ಅನುಮತಿ ಸಿಕ್ಕಿದೆ. ಆದರೆ ಕೆಲವರು ಹಣದಾಸೆಗೆ ನಕಲಿ ಕ್ಲಿನಿಕ್ ನಡೆಸುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ ನಾಲ್ಕು ತಿಂಗಳಲ್ಲಿ ಆರು ನಕಲಿ ವೈದ್ಯರನ್ನು ಪತ್ತೆ ಮಾಡಿದೆ. ಇಬ್ಬರ ವಿರುದ್ಧ ಕ್ರಮ ತೆಗೆದುಕೊಂಡಿದ್ದರೂ ಇನ್ನೂ ಕೆಲವರು ಹಣದಾಸೆಗೆ ನಕಲಿ‌ ಕ್ಲಿನಿಕ್ ನಡೆಸುತ್ತಿದ್ದಾರೆ. ನಕಲಿ ಕ್ಲಿನಿಕ್​ಗಳ ಬಗ್ಗೆ ಜನರು ಎಚ್ಚರಿದಿಂದ ಇರಬೇಕು. ಗಮನಕ್ಕೆ ಬಂದ ಕೂಡಲೇ ಅವುಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ಮನವಿ ಮಾಡಿದ್ದಾರೆ

Continue Reading

ದೇಶ

ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ ಕಾಂಗ್ರೆಸ್ ಶಾಸಕ ವಿನಯ್!

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ, ಅದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೋಟ್ ವಿಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿಯವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು, ಇತ್ತೀಚಿಗೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸಿತು, ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು,
ಇವರ ಬೆಂಬಲಿಗರು ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಮಾಯಿಸಿದ್ರು, ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಕರೆದೊಯ್ದಿದ್ದಾರೆ, ಈ ವೇಳೆ ತಮ್ಮ ನಾಯಕ ಜೈಲು ಸೇರುತ್ತಿರೋದನ್ನು ಕಂಡು ಕೋರ್ಟ್ ಮುಂಭಾಗ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ,

ಏನಿದು ಪ್ರಕರಣ?
9 ವರ್ಷಗಳ ಹಿಂದೆ ಅಂದರೆ 2016 ರ ಜೂನ್ 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್ ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು, ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಕೈವಾಡ ಇದೆ ಎಂಬ ಆರೋಪವಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ 2020 ನವೆಂಬರ್ 5 ರಂದು ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು, ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು,

Continue Reading

Trending