ಚುನಾವಣೆ
ಶ್ರೀರಾಮನ ನೆಲೆವೀಡು ಅಯೋಧ್ಯೆಯಲ್ಲಿ ಬಿಜೆಪಿ ಸೋತಿದ್ದೇಕೆ? ಇಲ್ಲಿವೆ ಕಾರಣಗಳು!
ಉತ್ತರ ಪ್ರದೇಶ : 2024ರ ಲೋಕಸಭಾ ಚುನಾವಣೆಯಲ್ಲಿ ಹಲವೆಡೆ ಅಚ್ಚರಿಯ ಫಲಿತಾಂಶಗಳು ಬಂದಿವೆ. ಈ ಪೈಕಿ ಉತ್ತರ ಪ್ರದೇಶದ ಫೈಜಾಬಾದ್ ಲೋಕಸಭಾ ಕ್ಷೇತ್ರವೂ ಒಂದು. ಬಿಜೆಪಿ ಗೆಲ್ಲಲೇಬೇಕಿದ್ದ ಈ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಹೊರಬಂದಿದೆ. ಈ ಮೂಲಕ ಬಿಜೆಪಿಗೆ ಹಿನ್ನಡೆಯಾಗಿದೆ.
ರಾಮನಗರಿ ಅಯೋಧ್ಯೆಯಿಂದ ಬಿಜೆಪಿ ಸೋಲು ಕಂಡಿದ್ದೇಕೆ ಎಂಬುದು ಈಗ ಎಲ್ಲೆಡೆ ಚರ್ಚೆಯ ವಿಷಯ. ಬಿಜೆಪಿಯ ಈ ಸೋಲಿಗೆ ಹಲವು ವಿಚಾರಗಳನ್ನು ಪಟ್ಟಿ ಮಾಡಲಾಗುತ್ತಿದೆ. ಈ ಪೈಕಿ ಒಬಿಸಿ, ದಲಿತರು, ಮುಸ್ಲಿಮರ ಒಳಏಟು ಪ್ರಮುಖವು.
ಲೋಕಸಭೆಯ ಒಟ್ಟು 543 ಕ್ಷೇತ್ರಗಳಲ್ಲಿ ಉತ್ತರ ಪ್ರದೇಶ ಅತೀ ಹೆಚ್ಚು ಅಂದರೆ 80 ಕ್ಷೇತ್ರಗಳನ್ನು ಹೊಂದಿರುವ ರಾಜ್ಯ. ಈ ರಾಜ್ಯದಿಂದ ಹೆಚ್ಚು ಕ್ಷೇತ್ರಗಳನ್ನು ಗೆದ್ದರೆ ಕೇಂದ್ರದಲ್ಲಿ ಸರ್ಕಾರ ರಚನೆಯ ಕಸರತ್ತು ಸುಲಭ. ಹಾಗಾಗಿ ರಾಜಕೀಯ ಪಕ್ಷಗಳು ಉತ್ತರ ಪ್ರದೇಶದಿಂದ ಹೆಚ್ಚು ಸ್ಥಾನಗಳನ್ನು ಪಡೆಯುವಲ್ಲಿ ಪ್ರಯತ್ನ ನಡೆಸುತ್ತಿರುತ್ತವೆ. ಅದರ ಭಾಗವಾಗಿ 2014 ಮತ್ತು 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 80 ಕ್ಷೇತ್ರಗಳ ಪೈಕಿ ಕ್ರಮವಾಗಿ 71 ಮತ್ತು 62 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದರ ಪರಿಣಾಮ, ಅಂದುಕೊಂಡಂತೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆಗೇರಿತ್ತು.
ಆದರೆ, ಪ್ರಸ್ತುತ ಚುನಾವಣೆಯಲ್ಲಿ ಶ್ರೀರಾಮನ ನೆಲೆವೀಡು ಅಯೋಧ್ಯೆ ಇರುವ ಫೈಜಾಬಾದ್ ಲೋಕಸಭಾ ಕ್ಷೇತ್ರವೂ ಸೇರಿದಂತೆ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಬಿಜೆಪಿಗೆ ಆಘಾತಕಾರಿ ಸೋಲಾಗಿದೆ. ರಾಮ ಮಂದಿರ ನಿರ್ಮಾಣವಾದ ಕೇವಲ ನಾಲ್ಕು ತಿಂಗಳಲ್ಲೇ ಈ ಕ್ಷೇತ್ರದಲ್ಲಿ ಬಿಜೆಪಿ ಸೋತಿದೆ. ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಲಲ್ಲು ಸಿಂಗ್ ಅವರನ್ನು ಸಮಾಜವಾದಿ ಪಕ್ಷದ ಅವಧೇಶ್ ಪ್ರಸಾದ್ 54,567 ಮತಗಳಿಂದ ಸೋಲಿಸಿದ್ದಾರೆ. ಅವಧೇಶ್ 554,289 ಮತಗಳನ್ನು ಪಡೆದರೆ ಲಲ್ಲು 4,99,722 ಮತಗಳನ್ನು ಪಡೆದರು. ಲಲ್ಲು ಸಿಂಗ್ 2014 ಮತ್ತು 2019ರಲ್ಲಿ ಸತತ ಎರಡು ಬಾರಿ ಈ ಕ್ಷೇತ್ರ ಗೆದ್ದಿದ್ದರು.
ಆದರೆ, ಈ ಬಾರಿ ಬಿಜೆಪಿ ಅತಿಯಾದ ಆತ್ಮವಿಶ್ವಾಸ, ಬೇಡದ ಹೇಳಿಕೆಗಳು ಹಾಗು ಅಭಿವೃದ್ಧಿ ಹೆಸರಲ್ಲಿ ಮಾಡಿದ ಯಡವಟ್ಟುಗಳು ಸೋಲಿಗೆ ಕಾರಣವಾಗಿವೆ ಎಂದು ವಿಶ್ಲೇಷಿಸಲಾಗುತ್ತಿದೆ.
ಇದಷ್ಟೇ ಅಲ್ಲದೇ, ಫೈಜಾಬಾದ್ನಲ್ಲಿನ ಜಾತಿ ಸಮೀಕರಣ ಬಿಜೆಪಿ ಸೋಲಿಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಅಯೋಧ್ಯೆ ಅತೀ ಹೆಚ್ಚು ಒಬಿಸಿ ಮತದಾರರನ್ನು ಹೊಂದಿದೆ. ಯಾದವರು, ದಲಿತ ಮತ್ತು ಮುಸ್ಲಿಂ ಸಮುದಾಯ ಇಲ್ಲಿ ನಿರ್ಣಾಯಕ. ದಲಿತರ ಪೈಕಿ ಪಾಸಿ ಸಮುದಾಯ ಗರಿಷ್ಠ ಮತದಾರರನ್ನು ಹೊಂದಿದೆ. ಗೆದ್ದ ಅಭ್ಯರ್ಥಿ ಅವಧೇಶ್ ಪ್ರಸಾದ್ ಪಾಸಿ ಸಮುದಾಯದಿಂದ ಬಂದವರು. ಈ ಸಮುದಾಯಗಳು ತಮ್ಮನ್ನು ಕೈ ಹಿಡಿಯುತ್ತವೆ ಎಂಬ ಲೆಕ್ಕಾಚಾರದಿಂದ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ತಮ್ಮ ಆಪ್ತ ಅವಧೇಶ್ ಪ್ರಸಾದ್ ಅವರನ್ನೇ ಈ ಕ್ಷೇತ್ರದಿಂದ ಕಣಕ್ಕಿಳಿಸಿದ್ದರು. ಫೈಜಾಬಾದ್ ಅಷ್ಟೇ ಅಲ್ಲದೇ, ಸುತ್ತಮುತ್ತಲಿನ ಒಂಭತ್ತು ಕ್ಷೇತ್ರಗಳಲ್ಲೂ ಅಖಿಲೇಶ್ ಯಾದವ್ ಆಪ್ತರೇ ಸ್ಪರ್ಧಿಸಿದ್ದು ಅವರಿಗೆ ಇನ್ನೂ ವರದಾನವಾಗಿದೆ. ಈ ಪೈಕಿ ನಾಲ್ವರು ಮುಸ್ಲಿಮ್ ಮತ್ತು ಐದು ಯಾದವ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆದರೆ, ಯಾದವೇತರ ಮತದಾರರನ್ನು ಗೆಲ್ಲಲು ಅಮಿತ್ ಶಾ ಹಾಕಿಕೊಂಡ ಯೋಜನೆ ಕೈ ಹಿಡಿಯದೇ ಇರುವುದು ಮತ್ತು ಅತಿಯಾದ ಆತ್ಮವಿಶ್ವಾಸ ಬಿಜೆಪಿಯ ಸೋಲಿಗೆ ಪ್ರಮುಖ ಕಾರಣ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.
ಮೀಸಲಾತಿರಹಿತ ಸ್ಥಾನದಲ್ಲಿ ದಲಿತ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಸಮಾಜವಾದಿ ಪಕ್ಷದ ನಿರ್ಧಾರ ಕೆಲಸ ಮಾಡಿದೆ ಎನ್ನುತ್ತಾರೆ ಗಿರಿ ಇನ್ಸ್ಟಿಟ್ಯೂಟ್ ಆಫ್ ಡೆವಲಪ್ಮೆಂಟ್ ಸ್ಟಡೀಸ್ನ ಅಸೋಸಿಯೇಟ್ ಪ್ರೊಫೆಸರ್ ಪ್ರಶಾಂತ್ ತ್ರಿವೇದಿ.
ಬಿಜೆಪಿಗೆ 400ಕ್ಕೂ ಹೆಚ್ಚು ಸ್ಥಾನಗಳು ಬಂದರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಹೇಳಿದ್ದರು. ಈ ವಿಚಾರವನ್ನು ಅವಧೇಶ್ ಪ್ರಸಾದ್ ತಮ್ಮ ಚುನಾವಣಾ ಪ್ರಚಾರದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಬಳಸಿಕೊಂಡರು.
ಇದಲ್ಲದೇ, ಅಯೋಧ್ಯೆಯ ಅಭಿವೃದ್ಧಿಗಾಗಿ ಜಮೀನು ಒತ್ತುವರಿ, ಮನೆಗಳನ್ನು ಕೆಡವಿದ್ದು, ನಾಗರಿಕರು ಮತ್ತು ವ್ಯಾಪಾರಿಗಳ ಸ್ಥಳಾಂತರ, ಪ್ರಶ್ನೆ ಪತ್ರಿಕೆಗಳ ಸೋರಿಕೆ, ನಿರುದ್ಯೋಗ, ಅಯೋಧ್ಯೆಗೆ ಭೇಟಿ ನೀಡಿದವರಿಗೆ ವಿಶೇಷ ಸವಲತ್ತುಗಳನ್ನು ನೀಡದಿರುವುದು, ಹೊರಗಿನಿಂದ ಬರುವ ಉದ್ಯಮಿಗಳು ಲಾಭ ಪಡೆಯುತ್ತಿದ್ದಾರೆಂಬ ಚರ್ಚೆಗಳು ಸ್ಥಳೀಯರನ್ನು ಚಿಂತೆಗೀಡು ಮಾಡಿದ್ದವು. ಬಹುಪಾಲು ಯುವ ಮತದಾರರು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸೋರಿಕೆಯಾದ ಪ್ರಶ್ನೆಪತ್ರಿಕೆಯಿಂದ ಬೇಸತ್ತು ಹೋಗಿದ್ದರು. ದೇವಸ್ಥಾನ ಮತ್ತು ವಿಮಾನ ನಿಲ್ದಾಣದ ಸುತ್ತಮುತ್ತ ನಡೆಯುತ್ತಿರುವ ಭೂಸ್ವಾಧೀನದ ವಿರುದ್ಧ ಅಯೋಧ್ಯೆಯ ಸುತ್ತಮುತ್ತಲಿನ ಹಲವು ಗ್ರಾಮಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ಇವೆಲ್ಲವೂ ಬಿಜೆಪಿ ಸೋಲಿಗೆ ಕಾರಣಗಳೆಂದು ವಿಶ್ಲೇಷಿಸಲಾಗುತ್ತಿದೆ.
ದೇಶ
ಪಂಜಾಬ್ ಚುನಾವಣೆಗೆ Waris Punjab De ಮೊದಲ ಅಭ್ಯರ್ಥಿ; ಸತ್ವಂತ್ ಸಿಂಗ್ ಕಣಕ್ಕೆ
ಚಂಡೀಗಢ: 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿರುವ ಬೆನ್ನಲ್ಲೇ, ಅಕಾಲಿ ದಳ್ Waris Punjab De ತನ್ನ ಮೊದಲ ಅಭ್ಯರ್ಥಿಯನ್ನು ಘೋಷಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಶಿಕ್ಷೆಗೆ ಗುರಿಯಾಗಿದ್ದ ಕೆಹರ್ ಸಿಂಗ್ ಅವರ ಪುತ್ರ ಸತ್ವಂತ್ ಸಿಂಗ್ ಅವರನ್ನು ಬಸ್ಸಿ ಪಠಾನಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.
ಈ ಘೋಷಣೆ ಪಂಜಾಬ್ನ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇಂದಿರಾ ಗಾಂಧಿ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಕೆಹರ್ ಸಿಂಗ್ ದೋಷಿಯಾಗಿದ್ದರು. ಪ್ರಕರಣದಲ್ಲಿ ಅವರಿಗೆ ಮರಣದಂಡನೆ ವಿಧಿಸಲಾಗಿತ್ತು. ಇದೀಗ ಅವರ ಪುತ್ರನಿಗೆ 2027 Punjab Assembly Election ಟಿಕೆಟ್ ನೀಡಿರುವುದು ಪಂಥಿಕ್ ರಾಜಕೀಯದಲ್ಲಿ ಗಮನ ಸೆಳೆದಿದೆ.
ತ್ಯಾಗ ಮಾಡಿದ ಕುಟುಂಬಗಳಿಗೆ ಗೌರವ: ತರ್ಸೆಮ್ ಸಿಂಗ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತರ್ಸೆಮ್ ಸಿಂಗ್, ಪಕ್ಷದ ರಾಜಕೀಯ ಕೇವಲ ಅಧಿಕಾರ ಹಿಡಿಯುವುದಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದ್ದಾರೆ. ಪಂಥಿಕ್ ತತ್ವಗಳು, ಪಂಜಾಬ್ನ ಹಕ್ಕುಗಳು ಹಾಗೂ ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳ ಗೌರವವನ್ನು ಎತ್ತಿಹಿಡಿಯುವುದು ಪಕ್ಷದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ಪಂಥ್ ಮತ್ತು ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳನ್ನು ಪಕ್ಷ ಕಡೆಗಣಿಸುತ್ತಿದೆ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ಆದರೆ, ಮೊದಲ ಅಭ್ಯರ್ಥಿಯಾಗಿಯೇ ಅಂತಹ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸುವ ಮೂಲಕ ಪಕ್ಷ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ತರ್ಸೆಮ್ ಸಿಂಗ್ ಹೇಳಿದ್ದಾರೆ.
ಬಸ್ಸಿ ಪಠಾನಾದಲ್ಲಿ ಪಂಥಿಕ್ ಮತಗಳ ಲೆಕ್ಕಾಚಾರ
ಸತ್ವಂತ್ ಸಿಂಗ್ ಅವರ ಅಭ್ಯರ್ಥಿತನವು ಬಸ್ಸಿ ಪಠಾನಾ ಕ್ಷೇತ್ರದಲ್ಲಿ Panthic Politics in Punjab ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಅವರ ಕುಟುಂಬದ ಹಿನ್ನೆಲೆ ಮತದಾರರ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಕುತೂಹಲ ಮೂಡಿಸಿದೆ.
2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 117 ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತ ಪಡೆದಿತ್ತು. ಕಾಂಗ್ರೆಸ್ 18 ಸ್ಥಾನಗಳಿಗೆ ಸೀಮಿತವಾಗಿತ್ತು. ಇದೀಗ 2027ರ ಚುನಾವಣೆಯಲ್ಲಿ ಪಂಥಿಕ್ ರಾಜಕೀಯದ ಪ್ರಭಾವ ಎಷ್ಟಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು
SIR ಸಮೀಕ್ಷೆ ವೇಳೆ ಸರ್ಕಾರಿ ಅಧಿಕಾರಿಗೆ ಹಲ್ಲೆ: ಡಿ.ಜೆ.ಹಳ್ಳಿಯಲ್ಲಿ ಇಬ್ಬರು ಆರೋಪಿಗಳ ಬಂಧನ
ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಕಾರ್ಯಾಚರಣೆ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಜೀವನಹಳ್ಳಿ (D J Halli) ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಯಾರಬ್ ಮತ್ತು ದಸ್ತಗೀರ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಸ್ಲಂ ಡೆವಲಪ್ಮೆಂಟ್ ಬೋರ್ಡ್ ಅಧಿಕಾರಿಗಳ ತಂಡವು ಡಿ.ಜೆ.ಹಳ್ಳಿಯ ರೋಶನ್ ನಗರದಲ್ಲಿರುವ ಕೌಸರ್ ಮಸೀದಿ ಸಮೀಪ SIR ಸಮೀಕ್ಷೆ ನಡೆಸುತ್ತಿತ್ತು.
ಈ ವೇಳೆ ಸ್ಥಳಕ್ಕೆ ಬಂದ ದಸ್ತಗೀರ್, ತನಗೂ SIR ಫಾರ್ಮ್ ನೀಡುವಂತೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾನೆ. ಆದರೆ ಆತ ಈಗಾಗಲೇ ಜಯನಗರಕ್ಕೆ ವಾಸ್ತವ್ಯ ಬದಲಾಯಿಸಿರುವುದರಿಂದ ಆ ಪ್ರದೇಶದಲ್ಲಿ ಫಾರ್ಮ್ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು.
ಈ ಉತ್ತರದಿಂದ ಆಕ್ರೋಶಗೊಂಡ ದಸ್ತಗೀರ್ ಹಾಗೂ ಆತನಿಗೆ ಬೆಂಬಲ ನೀಡಿದ ಯಾರಬ್, ಕರ್ತವ್ಯದಲ್ಲಿದ್ದ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಅಧಿಕಾರಿಗೆ ಗಾಯ
ಹಲ್ಲೆಯಲ್ಲಿ ಸ್ಲಂ ಡೆವಲಪ್ಮೆಂಟ್ ಬೋರ್ಡ್ನ ಸೂಪರಿಂಟೆಂಡೆಂಟ್ ಫಕೀರಪ್ಪ ಗಾಯಗೊಂಡಿದ್ದಾರೆ. ಆರೋಪಿಗಳು ಮುಖ ಹಾಗೂ ಕಟಿ ಭಾಗಕ್ಕೆ ಹೊಡೆದಿದ್ದು, ಬೆನ್ನಿನ ಮೇಲೂ ಹಲ್ಲೆ ನಡೆಸಿದ ಪರಿಣಾಮ ಅವರ ತುಟಿಗೆ ಗಾಯವಾಗಿ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿದ್ದ ಸಾರ್ವಜನಿಕರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದು, ಗಾಯಗೊಂಡ ಅಧಿಕಾರಿಯನ್ನು ತಕ್ಷಣ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಪ್ರಕರಣ ದಾಖಲು, ಇಬ್ಬರ ಬಂಧನ
ಚಿಕಿತ್ಸೆಯ ಬಳಿಕ ಫಕೀರಪ್ಪ ಅವರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸರು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಬೆಂಗಳೂರು
GBA ಸೇರಿ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ಡಿಸೆಂಬರ್ ಒಳಗೆ; ಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನವದೆಹಲಿ: ಬೆಂಗಳೂರು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಚುನಾವಣೆ ಸೇರಿದಂತೆ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು (Local Body Elections) ನಿಗದಿತ ಅವಧಿಯೊಳಗೆ ನಡೆಸಲು ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳು ಹಾಗೂ ಚುನಾವಣಾ ಸಿದ್ಧತೆಗಳ ಕುರಿತು ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಚುನಾವಣೆಗಳನ್ನು ಅನಗತ್ಯವಾಗಿ ಮುಂದೂಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.
ಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರಕಾರ, ಬೆಂಗಳೂರು ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮೊದಲಿಗೆ ಆಗಸ್ಟ್ 31ರೊಳಗೆ ನಡೆಸುವ ಉದ್ದೇಶ ಹೊಂದಲಾಗಿತ್ತು. ಆದರೆ ಎಸ್ಐಆರ್ (SIR) ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಹಾಗೂ ಕೆಲವು ತಾಂತ್ರಿಕ ಕಾರಣಗಳಿಂದಾಗಿ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ನಲ್ಲಿ ಹೆಚ್ಚಿನ ಕಾಲಾವಕಾಶ ಕೋರಿತ್ತು.
ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದಂತೆ ಮುಂದಿನ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ ಸಿಎಂ, ಚುನಾವಣೆ ಪ್ರಕ್ರಿಯೆಯನ್ನು ವಿಳಂಬ ಮಾಡುವುದು ಸರ್ಕಾರದ ಉದ್ದೇಶವಲ್ಲ ಎಂದು ಪುನರುಚ್ಚರಿಸಿದರು.
ಬೆಂಗಳೂರು ಮಾತ್ರವಲ್ಲದೆ, ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ಚುನಾವಣೆಗಳನ್ನು ಈ ವರ್ಷದ ಡಿಸೆಂಬರ್ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಸಂವಿಧಾನದ 73ನೇ ಮತ್ತು 74ನೇ ತಿದ್ದುಪಡಿ ಆಶಯಕ್ಕೆ ಅನುಗುಣವಾಗಿ ಗ್ರಾಮ ಪಂಚಾಯತ್ನಿಂದ ಮಹಾನಗರ ಪಾಲಿಕೆವರೆಗೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಯುವ ನಾಯಕತ್ವ ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಗಡುವಿನ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಅಗತ್ಯ ಸಿದ್ಧತೆಗಳನ್ನು ವೇಗಗೊಳಿಸುವ ಸಾಧ್ಯತೆ ಇದ್ದು, ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಂಡ ಬಳಿಕ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ. ಇದರಿಂದ GBA ಚುನಾವಣೆ ಸೇರಿದಂತೆ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.
-
ಬೆಂಗಳೂರು16 ಗಂಟೆಗಳು agoVande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?
-
ರಾಜಕೀಯ17 ಗಂಟೆಗಳು agoValmiki ನಿಗಮದ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಹೇಳಿದ್ದೇನು?
-
ರಾಜಕೀಯ17 ಗಂಟೆಗಳು agoValmiki Corporation Scam: ‘ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಸಿಎಂ ಮಾಡಿಕೊಳ್ಳಿ’ ಎಂದ ವಿಜಯೇಂದ್ರ
-
ರಾಜ್ಯ21 ಗಂಟೆಗಳು agoಸಚಿವ B Nagendra ರಾಜೀನಾಮೆ ನೀಡ್ತಾರಾ?CM D.K.Shiv Kumar ಗೆ ಕರೆ, ‘ಸರ್ಕಾರಕ್ಕೆ ಮುಜುಗರ ಬೇಡ’ ಎಂದ ಸಚಿವ!
-
ದೇಶ18 ಗಂಟೆಗಳು agoONAM ಸದ್ಯ ಸವಿಯಲು ಸಾಲಿನಲ್ಲಿ ಕುಳಿತ ಕೋತಿಗಳು! 53 ವರ್ಷಗಳ ಅಪರೂಪದ ಸಂಪ್ರದಾಯ
-
ರಾಜ್ಯ17 ಗಂಟೆಗಳು agoOnline ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ? ಸಚಿವ ಖಾದರ್ ಸ್ಫೋಟಕ ಹೇಳಿಕೆ, ಶೀಘ್ರದಲ್ಲೇ ಕ್ರಮ
-
ದೇಶ15 ಗಂಟೆಗಳು agoBJP ಶಾಸಕರ ಖಾಸಗಿ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ? ವಿಡಿಯೋ ವೈರಲ್, ಭಾರೀ ಆಕ್ರೋಶ
-
ರಾಜ್ಯ20 ಗಂಟೆಗಳು agoB Nagendra Resignation: ರಾಜೀನಾಮೆ ವದಂತಿಗೆ ನಾಗೇಂದ್ರ ಫುಲ್ಸ್ಟಾಪ್; ಕಾಂಗ್ರೆಸ್ನಿಂದಲೂ ಅಧಿಕೃತ ಹೇಳಿಕೆ ಇಲ್ಲ
