ರಾಜಕೀಯ
ನೈಸ್ ವಿಚಾರದಲ್ಲಿ ಸಣ್ಣ ಸಾಕ್ಷಿ ತೋರಿಸಿದರೂ ದೇವೇಗೌಡರ ಕುಟುಂಬವೇ ರಾಜಕೀಯ ನಿವೃತ್ತಿ : ಕುಮಾರಸ್ವಾಮಿ ಸವಾಲು

HD Kumaraswamy reaction on NICE: ನೈಸ್ ರಸ್ತೆ ವಿಚಾರದ ಬಗ್ಗೆ ಸಂಸದ ಡಿ ಕೆ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ರಾಜಕೀಯ ನಿವೃತ್ತಿಯ ಸವಾಲು ಹಾಕಿದ್ದಾರೆ.
ಬೆಂಗಳೂರು : ನಮ್ಮ ಕುಟುಂಬದ ಯಾವೊಬ್ಬ ವ್ಯಕ್ತಿ ಹೆಸರಲ್ಲಿ ನೈಸ್ ಆಸ್ತಿ ಇಲ್ಲ. ಒಂದು ವೇಳೆ ನಮ್ಮ ಕುಟುಂಬದ ಒಬ್ಬರ ಹೆಸರಲ್ಲಿ ಜಮೀನು ಇದ್ದರೂ ಇಡೀ ಕುಟುಂಬ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಇಂದು ನಡೆಯುತ್ತಿರುವ ಕೋರ್ ಕಮಿಟಿ ಸಭೆಗೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನೈಸ್ ವಿಚಾರವಾಗಿ ಸಂಸದ ಡಿ ಕೆ ಸುರೇಶ್ ಹೇಳಿಕೆ ವಿಚಾರಕ್ಕೆ ಗರಂ ಆದರು. ನೈಸ್ ಕಂಪನಿಗೆ ಸಹಿ ಹಾಕಿದ್ದು ಯಾರು?. ಅವನ (ಒನರ್) ಜೊತೆ ಶಾಮೀಲಾಗಿ ಜಮೀನು ಹೊಡೀಲಿ ಅಂತ ದೇವೇಗೌಡರು ಸಹಿ ಹಾಕಿದರಾ?. ಒಂದು ಸಣ್ಣ ಸಾಕ್ಷಿ ಇದ್ದರೆ ತೋರಿಸಲಿ ದೇವೇಗೌಡರ ಕುಟುಂಬವೇ ರಾಜಕೀಯ ನಿವೃತ್ತಿ ಹೊಂದುತ್ತೇವೆ. ಸಹಿ ಯಾರು ಹಾಕಿದ್ದು ಗೊತ್ತಿದೆಯಾ ಅವನಿಗೆ. ಅವತ್ತಿನ ಯುಡಿ ಮಿನಿಸ್ಟರ್ ಯಾರು ಇದ್ದಿದ್ದು, ಇವನ ಅಣ್ಣನೇ ಅಲ್ವಾ, ಅವನೇ ತಾನೆ ಸಹಿ ಹಾಕಿದ್ದು. ಯಾರ ಹೆಸರಿಗೆ ಮಾಡಲು ಹೊರಟಿದ್ದೀರಾ, ನಿಮ್ಮ ಕುಟುಂಬಕ್ಕೆ ಮಾಡಲು ಹೊರಟಿದ್ದೀರಾ?. ನಮ್ಮ ಬಗ್ಗೆ ಮಾತಾಡ್ತೀರಾ ನೀವು ಎಂದು ಏಕವಚನದಲ್ಲೇ ಡಿಕೆ ಬ್ರದರ್ಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ರಾಜ್ಯವನ್ನು ಮಾರಾಟ ಮಾಡುತ್ತಿದ್ದಾರೆ: ಶಿಕ್ಷಣ ಇಲಾಖೆಯಲ್ಲಿ ಡಿಕೆಶಿ ಸಭೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜ್ಯವನ್ನು ಮಾರಾಟ ಮಾಡಲು ಹೊರಟಿದ್ದಾರೆ. ಬಡ ಮಕ್ಕಳಿಗೆ ಶಿಕ್ಷಣ ಕೊಡಲು ಹೊರಟಿದ್ದಾರಾ ಇವರು?. ನನಗೆ ಜನ ವಿರಾಮ ಕೊಟ್ಟಿದ್ದಾರಂತೆ ಅಂತ ಇವರು ಹೇಳುತ್ತಿದ್ದಾರೆ. ನೀವು ಬೆದರಿಕೆ ಹಾಕಲು ಬರಬೇಡಿ, ಗುತ್ತಿಗೆದಾರರಿಗೆ ಬೆದರಿಕೆ ಹಾಕಿದಂತೆ ನನಗೆ ಹಾಕಲು ಆಗಲ್ಲ. ನೀವು, ನಿಮ್ಮಣ್ಣ ನಮಗೆ ಬೆದರಿಕೆ ಹಾಕಲು ಆಗಲ್ಲ ಎಂದು ಕಿಡಿಕಾರಿದರು.
40 ಪರ್ಸೆಂಟ್ ಸರ್ಕಾರ ಅನ್ನುವ ಆರೋಪ ತನಿಖೆಗೆ ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್ಡಿಕೆ, 2016 -17ರಲ್ಲಿ ಜಾಬ್ ಕಾರ್ಡ್ದು ನಾಗಮೋಹನ್ ಅವರ ಬಳಿ ತನಿಖೆ ಮಾಡಿಸಿದ್ದರು. ಅದು ಎಲ್ಲಿದೆ, ಹಾಗಾದರೆ ವರದಿ ಏನು?. ವೀರಪ್ಪ ನೇತೃತ್ವದಲ್ಲಿ ಅಂದರು, ಆದರೆ ಬಹುಶಃ ಒಪ್ಪಿಲ್ಲ ಅನಿಸುತ್ತದೆ. ಹಾಗಾಗಿ ಇವರಿಗೆ ವಹಿಸಿದ್ದಾರೆ ಅನಿಸುತ್ತದೆ. ನಾಗಮೋಹನ್ ದಾಸ್ ಅವರ ಕೈಯಲ್ಲಿ ತನಿಖೆ ಮಾಡಿಸಿ, ಆ ವರದಿ ಹಾಗೆ ಇಟ್ಟುಕೊಳ್ತೀರಾ ಅಷ್ಟೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾವೇರಿ ನೀರು ಹರಿಸುವ ವಿಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
ಲೂಟಿ ಹೊಡೆಯುವ ಕೆಲಸಕ್ಕೆ ಪ್ರಕೃತಿ ಸಹಕಾರ ಇಲ್ಲ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅವರ ಕಾಲದಲ್ಲಿ ನೀರು ಬಿಟ್ಟಿಲ್ವಾ ಅಂತ ಪ್ರಶ್ನೆ ಮಾಡ್ತಾ ಇದ್ದಾರಲ್ಲಾ?. ನಾನು ಇದ್ದಾಗ ಯಥೇಚ್ಛವಾಗಿ ನೀರು ಹರಿಸಲಾಗಿದೆ. ಅವರ ಪಾಪದ ಕೆಲಸ, ಲೂಟಿ ಹೊಡೆಯುವ ಕೆಲಸಕ್ಕೆ ಪ್ರಕೃತಿ ಸಹಕಾರ ಇಲ್ಲ ಎಂದರು.
ನೈತಿಕತೆ ಇಲ್ಲ : ಕೋರ್ಟ್ ಆದೇಶ ಕೊಟ್ಟಾಗ ದೇವೇಗೌಡರು ನೀರು ಬಿಟ್ಟಿದ್ದರು. ನಮ್ಮ ರಾಜ್ಯದ ರೈತರ ಹಿತಾಸಕ್ತಿ ಕಡೆಗಣಿಸಿ ದೇವೇಗೌಡರು ನೀರು ಬಿಟ್ಟಿಲ್ಲ. ಕಾವೇರಿ ವಿಚಾರದಲ್ಲಿ ರೈತರ ಹಿತಾಸಕ್ತಿ ನೋಡಿದ್ದರೆ ಅದು ದೇವೇಗೌಡರು ಮಾತ್ರ. ಅವರ ಬಗ್ಗೆ ಮಾತನಾಡುವುದಕ್ಕೆ ಯಾರಿಗೂ ನೈತಿಕತೆ ಇಲ್ಲ. ಸುಪ್ರೀಂಕೋರ್ಟ್ಗೆ ಹೋಗಿ ತಕರಾರು ತೆಗೆದಾಗ ದೇವೇಗೌಡರು ಒಂದಿಷ್ಟು ಸಲಹೆ ಕೊಟ್ಟಿದ್ದರು ಎಂದು ಕುಮಾರಸ್ವಾಮಿ ಹೇಳಿದರು.
ಮೇಕೆದಾಟು ಪಾದಯಾತ್ರೆ ಏನಾಯ್ತು? : ಮೇಕೆದಾಟು ಪಾದಯಾತ್ರೆ ಮಾಡಿದ್ದು ಏನಾಯ್ತು?. ಕೇವಲ ಚಿಕನ್, ಮಟನ್ ತಿಂದು ಹೋರಾಟ ಮಾಡಿದ್ದಷ್ಟೆ. ಬಂದ ನಾಯಕರಿಗೆ ಚಿಕನ್ ಲೆಗ್ ಕೊಟ್ಟಿದ್ದಷ್ಟೆ. ಇವರ ಸ್ನೇಹಿತ ಅಲ್ವೇ ಸ್ಟಾಲಿನ್, ಅವರ ಜೊತೆ ಮಾತಾಡಲಿ. ನಮ್ಮಲ್ಲಿ ಇನ್ನೂ ಮೊದಲ ಬೆಳೆ ಕೂಡ ಬೆಳೆಯಲಾಗಿಲ್ಲ. ಅಲ್ಲಿ ನಾಲ್ಕು ಲಕ್ಷ ಎಕರೆಗೆ ಸೌಲಭ್ಯ ಪಡೆದುಕೊಂಡಿದ್ದಾರೆ. ಈಗ ನಮ್ಮ ರೈತರಿಗೆ ಸಮಸ್ಯೆ ಆಗಿದೆ. ರೆಡ್ ಕಾರ್ಪೆಟ್ ಹಾಕಿ ಸ್ಟಾಲಿನ್ ಅವರಿಗೆ ಸ್ವಾಗತ ಮಾಡಿದ್ದಾರೆ. ನನಗೂ ಒಮ್ಮೆ ಪೆನ್ ಕೊಡಿ ಅಂತಿದ್ದಾರೆ. ಪೆನ್ ಯಾಕೆ ಇಂತಹ ಕೆಲಸ ಮಾಡಲಿಕ್ಕಾ? ಎಂದು ಡಿಕೆಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ಹೆಚ್ಡಿಕೆ, ನಾವು ವಿಪಕ್ಷದಲ್ಲಿ ಇರುವುದೇ ರಾಜಕೀಯ ಮಾಡುವುದಕ್ಕೆ, ಅವರು ಮಾಡುತ್ತಿರುವುದು ಏನು?. ಇವರಿಗೆ ನಮ್ಮ ರೈತರ ಮೇಲೆ ಔದಾರ್ಯ ಇಲ್ಲ. ಪೆನ್ ಕೊಡಿ ಅಂದ್ರಲಾ ಇದಕ್ಕಾ?. ನಮ್ಮ ರಾಜ್ಯವನ್ನು ತಮಿಳುನಾಡಿಗೆ ಅಡಮಾನ ಇಡಲು ಹೊರಟಿದ್ದಾರೆ. ಇದಕ್ಕೇನಾ ನೀವು ಪೆನ್ ಕೇಳಿದ್ದು? ಎಂದು ಪ್ರಶ್ನಿಸಿದರು.
ಇಂಡಿಯಾ ಮೈತ್ರಿ ಕೂಡ ಸಂಬಂಧ ಓಲೈಕೆ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ನೀಡಿದ ಕುಮಾರಸ್ವಾಮಿ, ಯಾವುದಕ್ಕೆ ಓಲೈಕೆ ಮಾಡುತ್ತಿದ್ದಾರೋ ಗೊತ್ತಿಲ್ಲ. ಸುಪ್ರೀಂ ಮುಂದೆ ತಮಿಳುನಾಡಿನವರು ಮತ್ತೊಂದು ಅರ್ಜಿ ಹಾಕುತ್ತಾರೆ. ಆಗ ಏನು ಮಾಡ್ತೀರಾ? ಎಂದು ಪ್ರಶ್ನಿಸಿದರು.
ರಾಜಕೀಯ
DK Shivakumar ಸಿಎಂ ಆಗಬೇಕು: ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಪರೋಕ್ಷ ಆಗ್ರಹ

ರಾಮನಗರ:
ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಸಿಎಂ ಸ್ಥಾನ ಸಿಗಬೇಕು ಎಂಬ ಆಗ್ರಹವನ್ನು ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “DK Shivakumar ನಮ್ಮ ನಾಯಕರು. ಅವರ ಶ್ರಮ ಹಾಗೂ ಹೋರಾಟಕ್ಕೆ ಪ್ರತಿಫಲ ಸಿಗಬೇಕು. ನಾನು ಈ ಜಿಲ್ಲೆಯಲ್ಲಿ ಹುಟ್ಟಿದ್ದು, ಅವರು ಕೂಡ ನಮ್ಮ ಜನರು. ಅವರಿಗೆ ಗೌರವ ಸಿಗಬೇಕು ಎಂದು ಹೇಳುವುದು ನನ್ನ ಹಕ್ಕು,” ಎಂದು ಸ್ಪಷ್ಟಪಡಿಸಿದರು.
“ನಾನು ಈಗಲೂ ನನ್ನ ಹಿಂದಿನ ಹೇಳಿಕೆಗೆ ಬದ್ಧನಾಗಿದ್ದೇನೆ. DK Shivakumar ಸಿಎಂ ಆಗಬೇಕು ಎಂಬ ಮಾತು ಹಿಂದೆ ಹೇಳಿದ್ದೆ, ಈಗಲೂ ನಿಂತಿದ್ದೇನೆ,” ಎಂದರು.
ಆ.8ರಂದು ಕಾಂಗ್ರೆಸ್ ಹೋರಾಟ:
ಆಗಸ್ಟ್ 8ರಂದು ನಡೆಯಲಿರುವ ಚುನಾವಣಾ ಅಕ್ರಮದ ವಿರುದ್ಧದ ಕಾಂಗ್ರೆಸ್ ಹೋರಾಟ ಕುರಿತು ಮಾತನಾಡಿದ ಅವರು, “ಈ ಹೋರಾಟಕ್ಕೆ ಹೈಕಮಾಂಡ್ ರೂಪುರೇಷೆ ನೀಡಿದೆ. ರಾಷ್ಟ್ರೀಯ ನಾಯಕರು ನೇತೃತ್ವ ವಹಿಸುತ್ತಿದ್ದಾರೆ. ನಮ್ಮ ಜಿಲ್ಲೆಯಿಂದ 20,000 ಮಂದಿ ಪಾಲ್ಗೊಳ್ಳುತ್ತಾರೆ,” ಎಂದು ಹೇಳಿದರು.
ಇವಿಎಂ ಅಕ್ರಮ ಕುರಿತು ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲವಾದರೂ, “ನಮ್ಮ ರಾಷ್ಟ್ರ ನಾಯಕರು ಎಲ್ಲಾ ವಿವರಗಳನ್ನು ಬಹಿರಂಗಪಡಿಸುತ್ತಾರೆ,” ಎಂದು ತಿಳಿಸಿದರು.
ಬೆಂಗಳೂರು
ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್ಟಾಪ್ ವಿತರಣೆ ನಡೆಸಲಾಗಿದೆ.
ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.
2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.
ಬೆಂಗಳೂರು
ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.
2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.
ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.
ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ