ರಾಜ್ಯ
Mysuru Dasara: ಮೈಸೂರು ದಸರಾ ಆಚರಣೆಗೆ ಗಜಪಯಣಕ್ಕೂ ಮುನ್ನವೇ ಈ ಬಾರಿ ಸಿದ್ಧತೆ ಶುರುವಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೇ, ಅದ್ಧೂರಿ ಆಚರಣೆಗೆ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ 16 ಉಪ ಸಮಿತಿಗಳಿಗೆ ಜಿಲ್ಲೆಯ ಅಧಿಕಾರಿಗಳನ್ನು ನೇಮಿಸಲಾಗಿದೆ.
ಈ ಮೂಲಕ ಭರದ ಸಿದ್ಧತೆ ಆರಂಭಿಸಲಾಗಿದೆ. ಈ ಬಾರಿ ಗಜಪಯಣಕ್ಕೂ ಮುನ್ನವೇ ಅಧಿಕಾರಿಗಳ ನೇತೃತ್ವದ ಉಪಸಮಿತಿಗಳನ್ನು ನೇಮಕ ಮಾಡಿರುವುದು ವಿಶೇಷವಾಗಿದೆ.
ದಸರಾವನ್ನು ಸಾಂಪ್ರದಾಯಿಕ ಹಾಗೂ ಅದ್ಧೂರಿಯಾಗಿ ನಾಡಪರಂಪರೆಯನ್ನು ಬಿಂಬಿಸುವ ಕಾರ್ಯಕ್ರಮವನ್ನಾಗಿ ಮಾಡಲು ಸ್ವತಃ ಮೈಸೂರಿನವರೇ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ನಂತರ ಮೈಸೂರಿನಲ್ಲಿ ಸಚಿವ ಡಾ.ಎಚ್.ಸಿ ಮಹಾದೇವಪ್ಪ ನೇತೃತ್ವದಲ್ಲಿ ಸಭೆ ನಡೆದಿದ್ದು ಉಪ ಸಮಿತಿಗಳನ್ನು ರಚಿಸಿ, ಅದಕ್ಕೆ ಉಪ ವಿಶೇಷಾಧಿಕಾರಿಗಳು, ಕಾರ್ಯಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಅಧಿಕಾರಿಗಳಿಗೆ ಸಿದ್ಧತೆ ಆರಂಭಿಸುವಂತೆ ಸಚಿವರು ಸೂಚಿಸಿದ್ದಾರೆ. ಯಾವುದೇ ಗೊಂದಲ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆಯೂ ತಿಳಿಸಲಾಗಿದೆ.
ಸೆಪ್ಟೆಂಬರ್ 1ಕ್ಕೆ ಗಜಪಯಣ: ಸೆಪ್ಟೆಂಬರ್ 1ಕ್ಕೆ ಹುಣಸೂರು ತಾಲೂಕಿನ ವೀರನಹೊಸಳ್ಳಿಯಿಂದ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಮೈಸೂರಿಗೆ ಕರೆತರುವ ಮೂಲಕ ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ ದೊರೆಯಲಿದೆ. ಆ ನಂತರ ಅರಮನೆಗೆ ಸೆಪ್ಟೆಂಬರ್ 4ರಂದು ಆಗಮಿಸುವ ಗಜಪಡೆ ಅರಮನೆಯಲ್ಲೇ ವಾಸ್ತವ್ಯ ಹೂಡಲಿದೆ. ಸುಮಾರು ಎರಡು ತಿಂಗಳ ಕಾಲ ಅರಮನೆಯಲ್ಲಿರುವ ಗಜಪಡೆಗೆ ಪ್ರತಿನಿತ್ಯ ತಾಲೀಮು ಹಾಗೂ ವಿಶೇಷ ಆಹಾರಗಳ ಮೂಲಕ ಜಂಬೂ ಸವಾರಿಗೆ ತಯಾರಿ ಮಾಡಲಾಗುತ್ತದೆ. ಪ್ರತಿ ವರ್ಷ ಗಜಪಯಣದ ನಂತರ ದಸರಾ ಚಟುವಟಿಕೆಗಳು ಆರಂಭವಾಗುತ್ತಿದ್ದವು. ಈ ಬಾರಿ ಗಜಪಯಣಕ್ಕೂ ಮುನ್ನವೇ ಸಿದ್ಧತೆಗಾಗಿ ಉಪ ಸಮಿತಿಗಳನ್ನು ನೇಮಕ ಮಾಡಲಾಗಿದೆ. ಉಪ ಸಮಿತಿಗಳ ವಿವರ ಹೀಗಿದೆ:
ಸ್ವಾಗತ, ಆಮಂತ್ರಣ ಸ್ಥಳಾವಕಾಶ ಸಮಿತಿ – ಕವಿತಾ ರಾಜರಾಂ, ಎಂ.ಜೆ.ರೂಪಾ, ಕೆ.ಆರ್.ರಕ್ಷಿತ್, ಮಂಜುನಾಥ್ ರೆಡ್ಡಿ, ಗಿರೀಶ್, ಶಿವಕುಮಾರ್.
ಮೆರವಣಿಗೆ ಮತ್ತು ಪಂಜಿನ ಕವಾಯಿತು ಸಮಿತಿ – ಬಿ.ರಮೇಶ್, ಎಸ್.ಜಾಹ್ನವಿ, ಮಾರುತಿ ಶಾಂತಮಲ್ಲಪ್ಪ, ಡಾ.ಎಂ.ಡಿ.ಸುದರ್ಶನ್, ಸಿ.ಕೆ.ಅಶ್ವತ್ ನಾರಾಯಣ್.
ಸ್ತಬ್ಧ ಚಿತ್ರ ಸಮಿತಿ– ಸೌಮಿತ್ರಾ, ರಂಗೇಗೌಡ, ಮೇಘಲಾ.
ಕ್ರೀಡಾ ಸಮಿತಿ– ಸೀಮಾ ಲಾಟ್ಕರ್, ಎಂ.ಸಿ.ರಮೇಶ್, ಭಾಸ್ಕರ್ ನಾಯಕ್.
ಸಾಂಸ್ಕೃತಿಕ ದಸರಾ ಸಮಿತಿ– ಕೆ.ಎಂ.ಗಾಯತ್ರಿ, ನಿರ್ಮಲ ಮಠಪತಿ, ಟಿ.ಎಸ್. ಸುಬ್ರಹ್ಮಣ್ಯ, ಡಾ.ಎಂ ಡಿ.ಸುದರ್ಶನ್.
ಲಲಿತ ಕಲೆ ಸಮಿತಿ– ಮಂಜುನಾಥ್ ಸಿಂಗ್, ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ರಶ್ಮಿ.
ದೀಪಾಲಂಕಾರ ಸಮಿತಿ– ಸಿ.ಎನ್. ಶ್ರೀಧರ್, ಸುನೀಲ್, ಪೂರ್ಣ ಚಂದ್ರ ತೇಜಸ್ವಿ.
ಕವಿಗೋಷ್ಠಿ ಸಮಿತಿಗ– ಡಾ.ದಾಸೇಗೌಡ, ವಿಜಯಕುಮಾರಿ ಎಸ್.ಕರಿಕಲ್, ಗಿರೀಶ್.
ಯೋಗ ದಸರಾ ಸಮಿತಿಗ– ಸೀಮಂತಿನಿ, ಬಿ.ಎಂ.ರಾಣಿ, ಡಾ.ಪುಷ್ಪಾ.
ಯುವ ದಸರಾ ಮತ್ತು ಯುವ ಸಂಭ್ರಮ ಸಮಿತಿ– ಸೀಮಾ ಲಾಟ್ಕರ್, ಕುಸುಮ ಕುಮಾರಿ, ಶುಭ, ಡಾ.ಆರ್.ನಿಂಗರಾಜು.
ಮಹಿಳಾ ಮತ್ತು ಮಕ್ಕಳ ದಸರಾ ಸಮಿತಿ– ಕೃಷ್ಣ ರಾಜು, ಬಸವರಾಜು, ಸಿದ್ಧರಾಜು.
ಆಹಾರ ಮೇಳ ಸಮಿತಿ– ಜಿ.ಟಿ.ದಿನೇಶ್ ಕುಮಾರ್, ಕುಮುದಾ ಶರತ್, ಯು.ಆರ್. ರಮೇಶ್.
ಸ್ವಚ್ಚತೆ ಮತ್ತು ವ್ಯವಸ್ಥೆ ಸಮಿತಿ– ಅಶಾದ್ ಉರ್ ರೆಹಮನ್ ಷರೀಫ್, ಯೋಗಾನಂದ, ಡಾ.ನಾಗರಾಜು.
ದಸರಾ ಚಲನಚಿತ್ರ ಸಮಿತಿ– ಶೇಷು, ಮಂಜುನಾಥ್, ಹರೀಶ್ ಹಾಗೂ ದಸರಾ ಕುಸ್ತಿ ಸಮಿತಿಗೆ ನಂದಿನಿ, ಗೊವಿಂದರಾಜು, ಎಚ್.ಎನ್.ಶಿವೇಗೌಡ ಅವರನ್ನು ನಿಯೋಜನೆ ಮಾಡಲಾಗಿದೆ.
ದೇಶ
ಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್ಗಳಿಗೆ ಶಾಕ್
ಗದಗ ಜಿಲ್ಲೆಯ ಮುದ್ರಣ ಉದ್ಯಮದ ಮೇಲೆ ಜಾಗತಿಕ ಬೆಳವಣಿಗೆಗಳ ಪರಿಣಾಮ ಸ್ಪಷ್ಟವಾಗಿ ಕಾಣಿಸುತ್ತಿದ್ದು, Iran War ಕರಿನೆರಳು ಮುದ್ರಣಕಾಶಿಯ ಮೇಲೂ ಆವರಿಸಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದ ಪ್ರಿಂಟಿಂಗ್ ಪ್ರೆಸ್ಗಳು ಹಾಗೂ ಪ್ರಕಾಶಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
ಜಿಲ್ಲೆಯಲ್ಲಿ ನೂರಾರು ಪ್ರಿಂಟಿಂಗ್ ಪ್ರೆಸ್ಗಳು ಕಾರ್ಯನಿರ್ವಹಿಸುತ್ತಿದ್ದು, ಕಾಗದ, ಇಂಕ್, ಪ್ಲೇಟ್ ಸೇರಿದಂತೆ ಅನೇಕ Petroleum Products ಆಧಾರಿತ ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರ ಪರಿಣಾಮವಾಗಿ ಉತ್ಪಾದನಾ ವೆಚ್ಚ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ.
ಈಗಾಗಲೇ ಕಚ್ಚಾ ವಸ್ತುಗಳ ಮೇಲೆ GST ಶೇ.18ರಷ್ಟು ವಿಧಿಸಿರುವುದರಿಂದ ಸಂಕಷ್ಟದಲ್ಲಿದ್ದ ಮುದ್ರಣ ಕ್ಷೇತ್ರಕ್ಕೆ ಯುದ್ಧದ ಪರಿಣಾಮ ಮತ್ತಷ್ಟು ಹೊಡೆತ ನೀಡಿದೆ. ಒಂದು ಕ್ವಿಂಟಾಲ್ ಕಾಗದಕ್ಕೆ 8ರಿಂದ 10 ಸಾವಿರ ರೂಪಾಯಿ ಹೆಚ್ಚಳವಾಗಿದ್ದು, ಮುಂಗಡ ಬುಕ್ಕಿಂಗ್ ಮಾಡಿದರೂ ಸರಕು ವಿತರಣೆಯಲ್ಲಿ ವಿಳಂಬ ಉಂಟಾಗಿದೆ.
ಪಂಚಾಂಗ, ಕ್ಯಾಲೆಂಡರ್ ಹಾಗೂ ಪಠ್ಯಪುಸ್ತಕ ಮುದ್ರಣ ಮಾಡುವ ಪ್ರೆಸ್ಗಳಿಗೆ ಬೆಲೆ ಏರಿಕೆ ಅನಿವಾರ್ಯವಾಗಿದ್ದು, ಕಚ್ಚಾವಸ್ತುಗಳ ಬೆಲೆ ಶೇ.20ರಿಂದ 40ರ ವರೆಗೆ ಏರಿಕೆಯಾಗಿದೆ.
ಮುದ್ರಣ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿನಿತ್ ಕುಮಾರ್ ಅವರ ಪ್ರಕಾರ, “ಸರ್ಕಾರ ಜಿಎಸ್ಟಿ ಕಡಿಮೆ ಮಾಡಿದರೆ ಮಾತ್ರ ಉದ್ಯಮ ಉಳಿಯುತ್ತದೆ, ಇಲ್ಲವಾದರೆ ಬಂದ್ ಭೀತಿ ಎದುರಿಸಬೇಕಾಗುತ್ತದೆ” ಎಂದಿದ್ದಾರೆ.
ಮಧ್ಯಪ್ರಾಚ್ಯದಿಂದ ಆಮದಾಗುವ ಕಚ್ಚಾ ವಸ್ತುಗಳ ಕೊರತೆಯೊಂದಿಗೆ, ಕೂಲಿ ಕಾರ್ಮಿಕರಿಗೆ ಕೆಲಸವೂ ಕಡಿಮೆಯಾಗಿದ್ದು, ಮುದ್ರಣ ಉದ್ಯಮದಲ್ಲಿ ಭಾರೀ ಅನಿಶ್ಚಿತತೆ ಮೂಡಿದೆ.
ದೇಶ
“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
ದಾವಣಗೆರೆ ದಕ್ಷಿಣ ಉಪಚುನಾವಣೆ ರಾಜಕೀಯ ಕಣ ದಿನೇದಿನೇ ರಂಗೇರುತ್ತಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಗಮನದಿಂದ ಹೊಸ ತಿರುವು ಪಡೆದುಕೊಂಡಿದೆ. ಹಲವು ದಿನಗಳಿಂದ ಮುಂದುವರಿದಿದ್ದ ಭಿನ್ನಾಭಿಪ್ರಾಯಗಳ ನಡುವೆಯೇ ಅವರು ಕೊನೆಗೂ ದಾವಣಗೆರೆಗೆ ಭೇಟಿ ನೀಡಿ ಪ್ರಚಾರ ಆರಂಭಿಸಿದ್ದಾರೆ.
ಟಿಕೆಟ್ ಹಂಚಿಕೆ ವೇಳೆ ಉಂಟಾದ ಗಲಾಟೆ ಸಂದರ್ಭದಲ್ಲಿ ಎಸ್ಎಸ್ ಮಲ್ಲಿಕಾರ್ಜುನ್ ಅವರು “ಯಾರ್ರಿ ಜಮೀರ್ ದಾವಣಗೆರೆ ಬಗ್ಗೆ ಮಾತನಾಡಲು” ಎಂದು ಹೇಳಿದ್ದರಿಂದ ವಿವಾದ ಸೃಷ್ಟಿಯಾಗಿತ್ತು. ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೂ ಜಮೀರ್ ಅಸಮಾಧಾನಗೊಂಡಿದ್ದರು.
ಆದರೆ ಇದೀಗ ರಾಜಕೀಯ ವಾತಾವರಣ ಬದಲಾಗಿದ್ದು, ಜಮೀರ್ ಅವರನ್ನು ಸ್ವತಃ ಮಲ್ಲಿಕಾರ್ಜುನ್ ಅವರು ಸ್ವಾಗತಿಸಿ ಪ್ರಚಾರಕ್ಕೆ ಕರೆಸಿಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್, “ನಾವಿಬ್ಬರೂ ಸ್ನೇಹಿತರು. ಯಾವುದೇ ಬೇಸರ ಇಲ್ಲ. ಸಿಟ್ಟಿನಲ್ಲಿ ಹೇಳಿದ ಮಾತು ಅಷ್ಟೇ,” ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಅವರು ಪರೋಕ್ಷವಾಗಿ ಟಾಂಗ್ ಕೊಡುತ್ತಾ, “ನನ್ನ ಕ್ಷೇತ್ರ ಚಾಮರಾಜಪೇಟೆಗೆ ಬಂದು ಯಾರಾದರೂ ಮಾತನಾಡಿದರೆ ನಾನು ಸುಮ್ಮನೆ ಇರ್ತಿನಾ?” ಎಂದು ಪ್ರತಿಕ್ರಿಯೆ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್, “ಈಗ ಎಲ್ಲವೂ ಬಗೆಹರಿದಿದೆ. ನಾವು ಬಹಳ ವರ್ಷಗಳಿಂದ ಸ್ನೇಹಿತರು,” ಎಂದು ಹೇಳಿದರು.
ಈ ಬೆಳವಣಿಗೆ ದಾವಣಗೆರೆ ರಾಜಕೀಯದಲ್ಲಿ ಹೊಸ ಚೈತನ್ಯ ಮೂಡಿಸಿದ್ದು, ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್ ಬಲ ಹೆಚ್ಚಿದಂತೆ ಕಾಣುತ್ತಿದೆ.
ದೇಶ
K. Govindraj ಸೇರಿ ಗಣ್ಯರಿಗೆ ಗೌರವ ಡಾಕ್ಟರೇಟ್ – ಬಿಸಿಯು ಘಟಿಕೋತ್ಸವ ಸಂಭ್ರಮ
ಬೆಂಗಳೂರು: Bengaluru City University (ಬಿಸಿಯು) 5ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಕುಲಾಧಿಪತಿಗಳಾದ Thawar Chand Gehlot ಚಾಲನೆ ನೀಡಿದರು.
ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ Dr. Binay Kumar Das, Defence Research and Development Organisation (ಡಿಆರ್ಡಿಒ) ಮಹಾ ನಿರ್ದೇಶಕರು (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಸಿಸ್ಟಮ್ಸ್) ಭಾಗವಹಿಸಿದ್ದರು.
ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 6 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಂಗೀತ ನಿರ್ದೇಶಕ Arjun Janya, ಕ್ರಿಕೆಟರ್ Venkatesh Prasad, ಶಿಕ್ಷಣ ತಜ್ಞ T. K. Narayanappa, ಎಂಎಲ್ಸಿ K. Govindaraj, ಶಿಕ್ಷಣ ಕ್ಷೇತ್ರದ Mohan Alva ಹಾಗೂ ಕೈಗಾರಿಕೋದ್ಯಮಿ Bava Mohammed Farooq ಅವರಿಗೆ ರಾಜ್ಯಪಾಲರು ಗೌರವಿಸಿದರು.
ಉಪ ಚುನಾವಣೆ ಪ್ರಚಾರದ ಹಿನ್ನೆಲೆ, ಉನ್ನತ ಶಿಕ್ಷಣ ಸಚಿವ Dr. C. N. Ashwath Narayan ಗೈರಾಗಿದ್ದರು.
ಘಟಿಕೋತ್ಸವದಲ್ಲಿ 73 ಪ್ರಥಮ ರ್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಪ್ರಮಾಣಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಒಟ್ಟು 37,370 ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರದಾನವಾಗಿದ್ದು, 23 ವಿದ್ಯಾರ್ಥಿಗಳಿಗೆ ಪಿಎಚ್ಡಿ ಪದವಿ ನೀಡಲಾಯಿತು.
ವಿಶೇಷವಾಗಿ, ಸ್ನೇಹಾ ಟಿ (ಎಂಎಸ್ಸಿ ರಸಾಯನಶಾಸ್ತ್ರ) 4 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮಾಡಿದ್ದು, ಅಭಿಷೇಕ್ ಶ್ರೀರಾಮ್ (ಬಿಕಾಂ) 3 ಚಿನ್ನದ ಪದಕ, ದಿವ್ಯಶ್ರೀ ಎಸ್ (ಬಿಬಿಎ) 3 ಚಿನ್ನದ ಪದಕ ಪಡೆದು ಗಮನಸೆಳೆದಿದ್ದಾರೆ.
ಗೌರವ ಡಾಕ್ಟರೇಟ್ ಪಡೆದ ಬಳಿಕ Arjun Janya ಅವರು ಮಾತನಾಡಿ, ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದರು.
-
ದೇಶ6 hours ago“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
-
ದೇಶ6 hours agoಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್ಗಳಿಗೆ ಶಾಕ್
-
ದೇಶ5 hours agoಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ
-
ದೇಶ6 hours agoIndian Railways: ರೈಲಲ್ಲೇ ಮದುವೆ ಸಂಭ್ರಮ: Indian Railwaysನಲ್ಲಿ ಹೊಸ ಟ್ರೆಂಡ್!
-
ಕ್ರೀಡೆ3 hours agoಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!
-
ದೇಶ6 hours ago‘I Love My Daughter’ ಟೀ ಶರ್ಟ್ನಲ್ಲಿ ಸಂಭ್ರಮ: ವಿಚ್ಛೇದನಕ್ಕೆ ಹೊಸ ಅರ್ಥ ನೀಡಿದ ಕುಟುಂಬ
-
ದೇಶ6 hours agoಎನ್ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್
-
ದೇಶ6 hours agoಟ್ರಂಪ್ ದೇಶದಲ್ಲಿ ಭಾರತೀಯರ ಸದ್ದು: ಮೇಯರ್ ರೇಸ್ನಲ್ಲಿ ತಮಿಳುನಾಡಿನ ಕುವರಿ
