Connect with us

ಅಪರಾಧ

ಕೊಲೆ ಪ್ರಕರಣದಲ್ಲಿ ನಟ ದರ್ಶನ್​ಗೆ ಸಂಕಷ್ಟ ಫಿಕ್ಸ್..! ಜೀವಾವಧಿ ಸೇರಿ ಯಾವ್ಯಾವ ಶಿಕ್ಷೆ..?

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ನಟ ದರ್ಶನ್​​ ಮುಳುವಾಗಿ ಪರಿಣಮಿಸುತ್ತಿದೆ. ಪೊಲೀಸರ ಕಸ್ಟಡಿಯಲ್ಲಿರುವ ದರ್ಶನ್​​ಗೆ ನರಕದರ್ಶನ ಆಗ್ತಿದೆ. ಈಗಾಗ್ಲೇ ಹತ್ಯೆ ಮಾಡಿದ ಆರೋಪ ಸುತ್ಕೊಂಡ ಪಾಪಕ್ಕೆ ಜೀವಾವಧಿ ನೀಡಬಹುದಾದ IPC 302 ಸೆಕ್ಷನ್ ದಾಖಲಾಗಿದೆ. ಪ್ರಾಥಮಿಕವಾಗಿ 302 ಅಂಡ್ 201 ಅಡಿ ಕೇಸ್ ದಾಖಲಾಗಿದೆ. ಮುಂದೆ 364, 120ಬಿ ಸೆಕ್ಷನ್​​ಗಳು ಸೇರಿಸೋ ಸಾಧ್ಯತೆಯೂ ಇದೆ..

ಯಾವ್ಯಾವ ಶಿಕ್ಷೆ?

  • ಶಿಕ್ಷೆ 01 : IPC 201 ಅಡಿ ಸಾಕ್ಷಿ ತಿರುಚುವುದು ಅಥವಾ ನಾಶ ಯತ್ನಕ್ಕೆ ಜೀವಾವಧಿ
  • ಶಿಕ್ಷೆ 02 : IPC 364 ಅಡಿ ಜೀವಾವಧಿ ಅಥವಾ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ
  • ಶಿಕ್ಷೆ 03 : IPC 120ಬಿ ಸೇರಿಸಿದ್ರೆ ಜೀವಾವಧಿ ಅಥವಾ 10 ವರ್ಷ ಕಠಿಣ ಸೆರೆಯ ಸಜೆ.
  • IPC 201 ಅಡಿ ಸಾಕ್ಷಿ ತಿರುಚುವುದು, ಸಾಕ್ಷ್ಯ ನಾಶಕ್ಕೆ ಯತ್ನಿಸಿರೋದು ಜೀವಾವಧಿ ಸಜೆ ಆಗಬಹುದು.. IPC 364 ಅಡಿ ಜೀವಾವಧಿ ಅಥವಾ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆಗೂ ಅವಕಾಶ ಇದೆ.. IPC 120ಬಿ ಸೇರಿಸಿದ್ರೆ ಜೀವಾವಧಿ ಅಥವಾ10 ವರ್ಷ ಕಠಿಣ ಸೆರೆವಾಸ ಆಗಲಿದೆ. ಇದು ಸದ್ಯ ದರ್ಶನ್​​ ಆ್ಯಂಡ್​ ಗ್ಯಾಂಗ್​ ವಿರುದ್ಧ ದಾಖಲಾದ ಮತ್ತು ದಾಖಲಾಗಲಿರುವ ಸೆಕ್ಷನ್​​ಗಳು.. ಹಾಗಾದ್ರೆ, ದರ್ಶನ್​ ವಿರುದ್ಧ ಅಷ್ಟು ಬಲವಾದ ಸಾಕ್ಷ್ಯಗಳು ಸಿಕ್ಕಿ ಬಿಟ್ವಾ?
  • ದರ್ಶನ್ ಬಗ್ಗೆ ಇರುವ ಸಾಕ್ಷಿ
  • ಸಾಕ್ಷಿ 1 : ಶೆಡ್​ಗೆ ದರ್ಶನ್ ಬಂದು ಹೋಗಿರುವ ಸಿಸಿಟಿವಿ ದೃಶ್ಯಗಳು
  • ಸಾಕ್ಷಿ 2 : ದರ್ಶನ್​ನ CDR ರಿಪೋರ್ಟ್ ಸಹ ಸ್ಪಷ್ಟವಾಗಿ ಹೋಲಿಕೆ
  • ಸಾಕ್ಷಿ 3 : ದರ್ಶನ್​ಗೆ ರೇಣುಕಾಸ್ವಾಮಿ ಕರೆತಂದ ಬಗ್ಗೆ ಫೋನ್​​​ ಕಾಲ್
  • ಸಾಕ್ಷಿ 4 : ಆರೋಪಿ ವಿನಯ್​ ಕಾಲ್ ಮಾಡಿ ಮಾಹಿತಿ ಕೊಟ್ಟ ಡಿಟೇಲ್ಸ್
  • ಸಾಕ್ಷಿ 5 : ಆದಾದ ಬಳಿಕ ಪವಿತ್ರಗೌಡಗೆ ಕರೆ ಮಾಡಿರೋದು ಸಹ ಪತ್ತೆ
  • ಸಾಕ್ಷಿ 6 : ಪವಿತ್ರಾ ಮನೆ ಬಳಿ ಹೋಗಿ ದರ್ಶನ್​ ಕರೆತಂದ ಸಾಕ್ಷಿ ಲಭ್ಯ
  • ಸಾಕ್ಷಿ 7 : ಈ ಬಗ್ಗೆ ಸಿಡಿಆರ್ ಮತ್ತು ಸಿಸಿಟಿವಿ ಸಾಕ್ಷಿಗಳು ಪತ್ತೆಯಾಗಿವೆ
  • ಸಾಕ್ಷಿ 8 : ಮಹಜರ್ ವೇಳೆ ಪಂಚರ ಮುಂದೆ ದರ್ಶನ್ ಒಪ್ಪಿದ ಹೇಳಿಕೆ
  • ಇವು ಟೆಕ್ನಿಕಲ್​ ಎವಿಡೆನ್ಸ್​.. ಇದಷ್ಟೇ ಅಲ್ಲ.. ಕೊಲೆಯಲ್ಲಿ ಭಾಗಿಯಾದ ಬಗ್ಗೆಯೂ ಸಾಕ್ಷಿಗಳು ಸಿಕ್ಕಿವೆ.. ಅವು ಕೂಡ ದರ್ಶನ್​​ ವಿರುದ್ಧವೇ ಸಾಕ್ಷಿ ನುಡಿತಿವೆ.
  • ದರ್ಶನ್ ಕೊಲೆಯಲ್ಲಿ ಭಾಗಿಗೆ ಸಾಕ್ಷಿ
    ಸ್ವತಃ ದರ್ಶನ್ ಬಗ್ಗೆ ಆತನ ಅಪ್ತ ವಿನಯ್ ಕೊಟ್ಟ ಹೇಳಿಕೆ ಮುಳುವಾಗಿದೆ. ದರ್ಶನ್ ಹೊಡೆದಾಗಲೇ ರೇಣುಕಾ ಸತ್ತಿದ್ದು ಅಂತ ವಿನಯ್​ ಹೇಳಿಕೆ ನೀಡಿದ್ದಾನೆ. ಅಲ್ಲದೆ, ದರ್ಶನ್ ಹಲ್ಲೆ ಮಾಡಿರೋ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೇ ಆರೋಪಿ ದೀಪಕ್​​ ಹಲ್ಲೆ ಮಾಡಿದ ವಿಡಿಯೋ ರೆಕಾರ್ಡ್ ಮಾಡ್ಕೊಂಡಿದ್ದಾನೆ. ಸದ್ಯ ಇದೇ ದೀಪಕ್​​ನಿಂದ 164 ಹೇಳಿಕೆ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ.. ಮಹಜರ್ ವೇಳೆ ಆತನ ಎತ್ತಿ ಎಸೆದ ಬಗ್ಗೆ ಹತ್ಯೆ ಆರೋಪಿ ದರ್ಶನ್ ಒಪ್ಪಿದ್ದು, ಟೆಂಪೋ ಟ್ರಾವೆಲ್ಲರ್​ಗೆ ರೇಣುಕಾ ತಲೆ ಬಡಿದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.. ಅಲ್ಲದೇ ಶೆಡ್​ನಲ್ಲಿ ಮೃತನ ಬಯೋಲಾಜಿಕಲ್ ಎವಿಡೆನ್ಸ್ ಸಿಕ್ಕಿವೆ.. ಮೃತನ ರಕ್ತ, ಫಿಂಗರ್ ಪ್ರಿಂಟ್, ಕೂದಲು ಮತ್ತು ಚರ್ಮದ ತುಂಡು ಲಭ್ಯ ಆಗಿವೆ.ಈ ಮೂಲಕ ರೇಣುಕಾಸ್ವಾಮಿ ಶೆಡ್​ನಲ್ಲೇ ಸತ್ತಿದ್ದು ಕನ್ಫರ್ಮ್ ಆಗಿದೆ.. ಜತೆಗೆ ಹಲ್ಲೆ ಮಾಡಿದ ವೆಪನ್ಸ್​ಗಳು ಸೀಜ್​​ ಮಾಡ್ಲಾಗಿದೆ.
  • ಹಲ್ಲೆ ಮಾಡಿದ ವೆಫನ್ಸ್ ಸೀಜ್
  • ರಿಪೀಸ್, ಸ್ಟಿಕ್ ಮತ್ತು ಹಗ್ಗದಿಂದ ಹಲ್ಲೆ ಮಾಡಲಾಗಿತ್ತು.. ಸದ್ಯ ಆ ರಿಪೀಸ್, ಸ್ಟಿಕ್ ಮತ್ತು ಹಗ್ಗವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.. ರೇಣುಕಾ ಮೃತದೇಹದಲ್ಲಿ ದರ್ಶನ್ ಪಿಂಗರ್ ಪ್ರಿಂಟ್ ಸಹ ಪತ್ತೆ ಆಗಿದೆ.. ಅಲ್ಲದೇ ವೆಪನ್​ ಮೇಲೂ ದರ್ಶನ್ ಪಿಂಗರ್ ಪ್ರಿಂಟ್ ಇದೆ.. ಇನ್ನು, ಟೆಂಪೋ ಟ್ರಾವೆಲ್ಲರ್, ಕೃತ್ಯಕ್ಕೆ ಬಳಸಿದ ವಾಹನಗಳನ್ನ ಸೀಜ್ ಮಾಡ್ಲಾಗಿದೆ. ಈ ಪ್ರಕರಣದಲ್ಲಿ ತುಂಬಾ ಇಂಪಾರ್ಟೆಂಟ್​​ ಅಂದ್ರೆ ಮರಣೊತ್ತರ ಪರೀಕ್ಷೆ.. ಈ ಪರೀಕ್ಷೆಯಲ್ಲಿ ಅತ್ಯಂತ ಕ್ರೂರವಾಗಿ ಹತ್ಯೆ ಮಾಡ್ಲಾಗಿದೆ ಅಂತ ವರದಿ​​ ನೀಡ್ಲಾಗಿದೆ. ಕುತ್ತಿಗೆ, ಮೂಗು ಕಟ್ ಆಗಿದೆ, ತಲೆ ಒಡೆದಿದೆ. ದೇಹಕ್ಕೆ ಬರೆ ಹಾಕಿರೋ ಬಗ್ಗೆಯೂ ಗೊತ್ತಾಗಿದೆ. ಪೋಸ್ಟ್​​​ಮಾರ್ಟ್​ಂ ರಿಪೋರ್ಟ್​​ನಲ್ಲಿ 15ಕ್ಕೂ ಹೆಚ್ಚು ಕಡೆ ಗಾಯಗಳು ಪತ್ತೆ ಆಗಿವೆ. ಸದ್ಯ ದರ್ಶನ್​​​ನ ಅಟ್ಟಹಾಸ, ಜೈಲು ದರ್ಶನವಾಗಿದೆ.

ಅಪರಾಧ

ಧರ್ಮಸ್ಥಳ ಶವ ಹೂತು ಪ್ರಕರಣ: ಮೂರು ಅಸ್ಥಿಪಂಜರ ಪತ್ತೆ, ಎಸ್‌ಐಟಿ ತನಿಖೆಗೆ ಹೊಸ ತಿರುವು!

ದಕ್ಷಿಣ ಕನ್ನಡ, ಆಗಸ್ಟ್ 5 – ಧರ್ಮಸ್ಥಳದ ಸುತ್ತಮುತ್ತಲ ಶವ ಹೂತು ಪ್ರಕರಣಕ್ಕೆ ದಿನೇ ದಿನೆ ನ್ಯೂ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಮೂರು ಅಸ್ಥಿಪಂಜರಗಳು ಪತ್ತೆಯಾಗಿವೆ ಎಂಬ ಸುದ್ದಿ ಚಕ್ಕರಿಗೊಳ್ಳುತ್ತಿದೆ. ಈ ಕುರಿತು ದೂರುದಾರ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಎಸ್‌ಐಟಿ ತಂಡದ ಶೋಧ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಡೆದ ಉತ್ಖನನದ ವೇಳೆ:

  • ಸ್ಟಾಟ್ ನಂಬರ್ 12ರ ಬಳಿ ಕಾರ್ಮಿಕರಿಂದ ಅಗೆಸಿದಾಗ, ಮೂರು ಅಸ್ಥಿಪಂಜರಗಳು ಹಾಗೂ ಮಹಿಳೆಯ ಸೀರೆ ಪತ್ತೆಯಾಗಿವೆ.
  • ಸುಮಾರು 140 ಮೂಳೆಗಳ ತುಂಡುಗಳು ಪತ್ತೆಯಾದ ಕುರಿತು ವರದಿ ಇದೆ.
  • ಅಸ್ಥಿಪಂಜರಗಳನ್ನು ತಕ್ಷಣವೇ ಕೆಎಂಸಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇಂದಿನ ಉತ್ಖನನ:

  • ನೇತ್ರಾವತಿ ನದಿಯ ದಡದ ಬಳಿ 11ನೇ ಪಾಯಿಂಟ್‌ನಲ್ಲಿ ಅಗೆತ ಕೆಲಸ ನಡೆಯುತ್ತಿದೆ.
  • 6 ಅಡಿಯವರೆಗೆ ಶೋಧ ನಡೆದ ಬಳಿಕ ಸಾಕ್ಷ್ಯ ಸಿಕ್ಕದರೆ ಮುಂದಿನ ಪಾಯಿಂಟ್‌ಗೆ ಹೋಗುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಪೂರ್ವ ಘಟನೆ:

  • ಜುಲೈ 31ರಂದು 6ನೇ ಗುರುತುಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ, ಎಸ್‌ಐಟಿ ಅಧಿಕಾರಿಗಳಾದ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಆಧಾರದ ಮೇಲೆ UDR ಪ್ರಕರಣ ದಾಖಲಾಗಿದೆ.
Continue Reading

ಅಪರಾಧ

ಕೆಂಗೇರಿಯಲ್ಲಿ ಮಹಿಳೆಯ ಮೇಲೆ ಅಸಭ್ಯ ವರ್ತನೆ ಮತ್ತು ಹಲ್ಲೆ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕೆಂಗೇರಿ ಉಪನಗರದಲ್ಲಿ ಮತ್ತೊಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳ ಮುಂದೆ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾಳೆ. ಇದೇ ಸಮಯದಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಿದ ಆರೋಪಿಯು ಪೊಲೀಸರು ಬಂದಾಗ ಪರಾರಿಯಾಗಲು ಯತ್ನಿಸಿದರೂ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಸೂತ್ರಗಳ ಪ್ರಕಾರ, ಕೆಂಗೇರಿಯಲ್ಲಿರುವ ಮಾಲ್‌ನಲ್ಲಿ ವಾಚ್‌ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಾಹಸನ್ ಎಂಬಾತ, ಅಲ್ಲಿಗೆ ಬರುವ ಹೆಣ್ಣುಮಕ್ಕಳಿಗೆ ತೊಂದರೆ ಕೊಡುತ್ತಿದ್ದ. ಸಂತ್ರಸ್ತೆಯು ಈ ಬಗ್ಗೆ ಮ್ಯಾನೇಜರ್‌ಗೆ ದೂರು ನೀಡಲು ಹೋಗುತ್ತಿದ್ದಾಗ, ತನ್ನ ಪ್ಯಾಂಟ್‌ನ ಜಿಪ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ. ನಂತರ ಆಕೆಯ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ಈ ಘಟನೆಗೆ ತಕ್ಷಣ ಪ್ರತಿಕ್ರಿಯಿಸಿದ ಸಾರ್ವಜನಿಕರು ಮತ್ತು ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸದ್ಯ ಈ ಕುರಿತು ಕೆಂಗೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಆಕೆಗಾಗಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ.

ಇದೇ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದೆ ಯುವತಿಯರ ಮುಂದೆ ಅಸಭ್ಯವಾಗಿ ವರ್ತಿಸಿದ್ದ ಆಯುಬ್ ಎಂಬ ಕಾಮುಕನನ್ನು ಕೂಡ ಪೊಲೀಸರು ಬಂಧಿಸಿದ್ದರು. ಈತನ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಡಿದ್ದು, ಸಾರ್ವಜನಿಕ ಆಕ್ರೋಶ ಹೆಚ್ಚಿತ್ತು.

Continue Reading

ಅಪರಾಧ

ರೇಣುಕಾಸ್ವಾಮಿ ಪ್ರಕರಣ: ರಮ್ಯಾ ಪೋಸ್ಟ್‌ಗೆ ಅಸಭ್ಯ ಪ್ರತಿಕ್ರಿಯೆ – ಆರೋಪಿಗಳ ಬಂಧನ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ವಿರುದ್ಧ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌ನ ಅಭಿಪ್ರಾಯವನ್ನು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಸಂಬಂಧ ಅವರು ತಮ್ಮ ಅಭಿಪ್ರಾಯವನ್ನು ಇನ್‌ಸ್ಟಾಗ್ರಾಂ ಹಾಗೂ ಇತರ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಕಟಿಸಿದ್ದರು.

ಈ ಪೋಸ್ಟ್ ನಂತರ, ಕೆಲ ಕಿಡಿಗೇಡಿಗಳು ರಮ್ಯಾ ವಿರುದ್ಧ ಅಶ್ಲೀಲ ಹಾಗೂ ಅಪಮಾನಕಾರಕ ಸಂದೇಶಗಳನ್ನು ಕಮೆಂಟ್‌ಗಳ ರೂಪದಲ್ಲಿ ಹಾಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಉಂಟಾಗಿದೆ. ಮಹಿಳಾ ವಿರುದ್ಧದ ಈ ರೀತಿಯ ಆನ್‌ಲೈನ್ ದೌರ್ಜನ್ಯಕ್ಕೆ ವಿರೋಧ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆ ಇಲ್ಲದ ಸ್ಥಿತಿಯ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ. ಈ ನಡುವೆ, ನಟಿ ರಮ್ಯಾ ಬೆಂಬಲಿಗರು ಹಾಗೂ ಮಹಿಳಾ ಹಕ್ಕು ಕಾರ್ಯಕರ್ತರು solchen ಅಭಿವ್ಯಕ್ತಿಗಳನ್ನು ಖಂಡಿಸಿದ್ದಾರೆ.

ಅಧಿಕೃತರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ವ್ಯಕ್ತವಾಗಿದೆ.

Continue Reading

Trending