Connect with us

ಅಪರಾಧ

ಕೊಲೆ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡ ದರ್ಶನ್- ರಿಮ್ಯಾಂಡ್ ಕಾಪಿಯಲ್ಲಿ ರಹಸ್ಯ ಬಯಲು!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಹತ್ಯೆಯಲ್ಲಿ ತನ್ನ ಪಾತ್ರದ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.
ಪೊಲೀಸರು ನ್ಯಾಯಾಲಯಕ್ಕೆ ಆರೋಪಿಗಳ ವಶಕ್ಕೆ ನೀಡಿರುವ ರಿಮ್ಯಾಂಡ್ ಕಾಪಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ಉಲ್ಲೇಖಿಸಲಾಗಿದೆ,
ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದನೆಂಬ ಆರೋಪದ ಮೇಲೆ ದರ್ಶನ್ ಮತ್ತು ಅತನ ಗ್ಯಾಂಗ್ ಚಿತ್ರಹಿಂಸೆ ನೀಡಿ ಬರ್ಬರವಾಗಿ ಹತ್ಯೆಗೈದಿತ್ತು, ಈ ಪ್ರಕರಣದಲ್ಲಿ ನಟ ದರ್ಶನ್ ನೀಡಿರುವ ಸ್ವಿಚ್ಛಾ ಹೇಳಿಕೆ ಬಹಿರಂಗಗೊಂಡಿದೆ,
ಕೊಲೆ ನಡೆದ ಬಳಿಕ ಪ್ರಕರಣದಲ್ಲಿ ಎಲ್ಲಿಯೂ ತನ್ನ ಹೆಸರು ಬರದಂತೆ ಮಾಡಲು ನಾನು ಎ 14 ಆರೋಪಿ ಪ್ರದೋಶ್ ಗೆ 30 ಲಕ್ಷ ರೂ ಕೊಟ್ಟಿದೆ, ಈ ಹಣದಲ್ಲಿ ಪೊಲೀಸರು, ಲಾಯರ್ ಮತ್ತು ಶವ ವಿಲೇವಾರಿಯ ಖರ್ಚು ವೆಚ್ಚವನ್ನು ನೋಡಿಕೊಳ್ಳಲು ಹೇಳಿದ್ದೆ ಎಂದು ನಟ ಸ್ವಇಚ್ಛಾ ಹೇಳಿಕೆ ದಾಖಲಿಸಿದ್ದಾರೆ.
ದರ್ಶನ್ ಹೇಳಿಕೆ ಪಡೆದ ಬಳಿಕ ಪೊಲೀಸರು ಪ್ರದೋಶ್ ಮನೆಯಿಂದ ದರ್ಶನ್ ನೀಡಿದ್ದ ಹಣವನ್ನು ವಶಪಡಿಸಿಕೊಂಡಿದ್ದರು,

ಅಪರಾಧ

ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಹೆಡ್ ಕಾನ್ಸ್‍ಟೇಬಲ್!

ಬೆಂಗಳೂರು: ಪೊಲೀಸ್ ಠಾಣೆಯೊಂದರಲ್ಲೇ ಸಿಬ್ಬಂದಿಗಳು ಹೊಡೆದಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ, ಠಾಣೆಯ ಹೆಡ್ ಕಾನ್ಸ್‍ಟೇಬಲ್ ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಆರೋಪ ಹೊರಿಸಲಾಗಿದ್ದು ಈ ಬಗ್ಗೆ ದೂರು ದಾಖಲಾಗಿದೆ,
ಠಾಣೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳಾ ಪೇದೆಗೆ ಅಲ್ಲೇ ಹೆಡ್ ಕಾನ್ಸ್‍ಟೇಬಲ್ ಆಗಿರುವ ಬಿಜಿ ಗೋವಿಂದರಾಜು ಎಂಬುವವರು ಬೂಟುಗಾಲಿನಲ್ಲಿ ಒದ್ದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ, ಜೂನ್ 10 ರಂದು ಈ ಘಟನೆ ನಡೆದಿದೆ, ರಾತ್ರಿ ಕಂಪ್ಯೂಟರ್ ವಿಭಾಗದಲ್ಲಿ ಮಹಿಳಾ ಪೇದೆ ರೇಣುಕಾ ಕರ್ತವ್ಯ ನಿರ್ವಹಿಸುತ್ತಿದ್ದರು,
ಈ ವೇಳೆ ರೇಣುಕಾ ಮನೆ ಬಿಟ್ಟು ಹೋಗಿ ಠಾಣೆ ಸೇರಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಊಟ ಮಾಡಿಸುತ್ತಿದ್ದರು, ಆಗ ಹೆಡ್ ಕಾನ್ಸ್‍ಟೇಬಲ್ ಗೋವಿಂದರಾಜು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಮಾತ್ರವಲ್ಲದೇ ಮೂರ್ನಾಲ್ಕು ಬಾರಿ ಬೂಟುಗಾಲಿನಿಂದ ಒದ್ದಿದ್ದಾರೆ ಎಂದು ಆರೋಪಸಲಾಗಿದೆ,
ಕಾನ್ಸ್‍ಟೇಬಲ್ ರೇಣುಕಾ ದೂರು ಆಧರಿಸಿ ಹೆಡ್ ಕಾನ್ಸಟೇಬಲ್ ಗೋವಿಂದರಾಜು ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

Continue Reading

ಅಪರಾಧ

 ವಿರಾಟ್​ ಕೊಹ್ಲಿ ಮಾಲೀಕತ್ವದ ‘One8 Commune’ ಪಬ್ ವಿರುದ್ಧ FIR ದಾಖಲು

ಬೆಂಗಳೂರು: ಪ್ರತ್ಯೇಕ ಸ್ಥಳವಿಲ್ಲದೆ ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಪಬ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ 2024ರ ಜುಲೈನಲ್ಲಿ ಇದೇ ಬಾರ್ ಮೇಲೆ ಅವಧಿ ಮೀರಿ ಪಬ್ ನಡೆಸುತ್ತಿದ್ದರು ಎಂದು ದೂರು ದಾಖಲಾಗಿತ್ತು. ಜು.6 ರಂದು ರಾತ್ರಿ 1:20ರವರೆಗೆ ಪಬ್ ತೆರೆದಿತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರುವುದಾಗಿ ಮಾಹಿತಿ ಇತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರು ಇದ್ದರು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಇದೀಗ ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

Continue Reading

ಅಪರಾಧ

ಬೆಂಗಳೂರಿನಲ್ಲೊಬ್ಬ ಭಯಂಕರ ಕುಡುಕ!

ಬೆಂಗಳೂರು: ಇತ್ತೀಚೆಗೆ ಬೆಂಗಳೂರಲ್ಲಿ ಎಣ್ಣೆ ಹೊಡೆದು ಗಾಡಿ ಓಡಿಸೋರ ಸಂಖ್ಯೆ ಹೆಚ್ಚಾಗಿದ್ದು, ಆಸಾಮಿಗಳು ದೊಡ್ಡ ಅನಾಹುತಕ್ಕೆ ಕಾರಣವಾಗ್ತಿದ್ದಾರೆ,
ಬೆಂಗಳೂರಿನ ಕೋರಮಂಗಲದಲ್ಲಿ ಮದ್ಯಪಾನ ಮಾಡಿದ ವ್ಯಕ್ತಿಯೊಬ್ಬ ಒನ್ ವೇಯಲ್ಲಿ ಕಾರು ಚಾಲನೆ ಮಾಡಿ ಹಲವು ವಾಹನಗಳಿಗೆ ಹಾನಿ ಮಾಡಿದ್ದಋಎ, ಪೊಲೀಸರು ತಡೆಯಲು ಯತ್ನಿಸಿದಾಗ ಅವರ ಮೇಲೆಯೇ ಕಾರು ಹೊತ್ತಿಸಲು ಯತ್ನಿಸಿದ್ದಾನೆ, ನಂತರ ಪೊಲೀಸರು ಕಾರಿನ ಗಾಜು ಒಡೆದು ಆತನನ್ನು ಹಿಡಿದಿದ್ದಾರೆ, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ
ಶನಿವಾರ ತಡರಾತ್ರಿ ಘಟನೆ ಸಂಭವಿಸಿದೆ, ಆರೋಪಿ ನಂದಕೃಷ್ಣ ಎಂಬಾತ ಪೊಲೀಸ್ ಬ್ಯಾರಿಕೇಡ್ ಗೆ ಕಾರು ಗುದ್ದಿಸಿದ್ದಾನೆ, ಇದರಿಂದಾಗಿ ಪೊಲೀಸರೊಬ್ಬರ ಕಾಲಿಗೆ ಗಾಯವಾಗಿದೆ, ನಂತರ ಕಾರಿನ ಬಾಗಿಲ ತೆರೆಯುವಂತೆ ಪೊಲೀಸರು ಸೂಚನೆ ನೀಡಿರೂ ನಂದಕೃಷ್ಣ ಪ್ರತಿಕ್ರಿಯಿಸುತ್ತಲೇ ಇರಲಿಲ್ಲ, ಹೀಗಾಗಿ ಕಾರಿನ ಗಾಜು ಒಡೆದು ಆತನನ್ನು ಹೊರಗೆ ಎಳೆದು ತೆಗೆದಿದ್ದಾರೆ,
ಚಾಲಕ ವಿಪರೀತ ಮದ್ಯಪಾನ ಮಾಡಿದ್ದ ಮತ್ತು ಅವನಿಗೆ ಸುತ್ತಮುತ್ತಲಿನ ಪ್ರಜ್ಞೆಯೇ ಇರಲಿಲ್ಲ ಎಂದು ಹಲವರು ಹೇಳಿದ್ದಾರೆ,

Continue Reading

Trending