Connect with us

ಅಪರಾಧ

ಕೇಸ್​ಗೆ ಹೊಸದಾಗಿ 8 IPC ಸೆಕ್ಷನ್ ಸೇರ್ಪಡೆ, ಮತ್ತಷ್ಟು ಬಿಗಿಯಾಯ್ತು ಕಾನೂನು ಕುಣಿಕೆ

ದರ್ಶನ್ (Darshan) ಹಾಗೂ ಟೀಮ್​ನ ಪೊಲೀಸ್ (Police) ಕಸ್ಟಡಿ ಜೂನ್ 20ರಂದು ಇಂದು ಕೊನೆಯಾಗಲಿದೆ. ದರ್ಶನ್ ಆಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಷ್ಟು ಐಪಿಸಿ ಸೆಕ್ಷನ್ (IPC Section) ಗಳನ್ನ ಪೊಲೀಸರು ಸೇರಿಸಿದ್ದು ಕಾನೂನಿನ ಕುಣಿಕೆ ಈಗ ಮತ್ತಷ್ಟು ಬಿಗಿಯಾಗಿದೆ. ಹೆಚ್ಚುವರಿಯಾಗಿ ಎಂಟು ಸೆಕ್ಷನ್ ಗಳನ್ನು ಈ ಕೇಸ್​ನಲ್ಲಿ ಸೇರ್ಪಡೆ ಮಾಡಲಾಗಿದೆ. ಹೊಸದಾಗಿ 120ಬಿ, 364, 355, 384, 143,147,148, R/W 149 ರಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನದ ನಂತರ ಮತ್ತಷ್ಟು ಸೆಕ್ಷನ್ಸ್ ಸೇರ್ಪಡೆಯಾಗಿವೆ.

364- ಕಿಡ್ನಾಪ್, 384- ಸುಲಿಗೆ, 355- ಕ್ರಿಮಿನಲ್ ಬಲ ಪ್ರಯೋಗ, 148- ಮಾರಕ ಆಯುಧಗಳ ಬಳಕೆ, 120(B), ಅಪರಾಧಿಕ ಒಳಸಂಚು, 143- ಕಾನೂನು ಬಾಹಿರ ಸಭೆ,147-ಗಲಭೆ, 148- ಮಾರಣಾಂತಿಕ ಆಯುಧಗಳಿಂದ ಹಲ್ಲೆ. r/w 149 ಸೆಕ್ಷನ್ಸ್ ಸೇರಿಸಲಾಗಿದೆ. ಈ ಮೊದಲು ಪೊಲೀಸರು 302- ಕೊಲೆ, 201-ಸಾಕ್ಷ್ಯನಾಶ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈಗ ಹೊಸದಾಗಿ 8 ಐಪಿಸಿ ಸೆಕ್ಷನ್ ಗಳು ಸೇರ್ಪಡೆಯಾಗಿದ್ದು ಹೊಸ ಸೆಕ್ಷನ್ಸ್ ಸೇರ್ಪಡೆಯಿಂದ ಕಾನೂನು ಕುಣಿಕೆ ಬಿಗಿಯಾಗಿದೆ.

ಸೇರ್ಪಡೆಯಾಗಿರುವ ಹೊಸ ಸೆಕ್ಷನ್​ಗಳಿಗೆ ಏನೇನು ಶಿಕ್ಷೆ?

302 – ವ್ಯಕ್ತಿ ಹತ್ಯೆ – ಜೀವಾವಧಿ ಶಿಕ್ಷೆ, 364 – ವ್ಯಕ್ತಿ ಅಪಹರಣ – ಜೀವಾವಧಿ ಶಿಕ್ಷೆ, 201 – ಸಾಕ್ಷಿ ನಾಶ – ಜೀವಾವಧಿ ಶಿಕ್ಷೆ, 120ಬಿ – ಒಳಸಂಚು – 2 ವರ್ಷ, ಅದಕ್ಕಿಂತ ಮೇಲ್ಪಟ್ಟು, 355 – ಕ್ರಿಮಿನಲ್ ಬಲಪ್ರಯೋಗ – 2 ವರ್ಷ ಶಿಕ್ಷೆ, 384 – ಸುಲಿಗೆ – 3 ವರ್ಷ ಶಿಕ್ಷೆ, 143 – ಅಕ್ರಮಕೂಟ – 6 ತಿಂಗಳು ಶಿಕ್ಷೆ, 147 – ಗಲಭೆ – 2 ವರ್ಷ ಶಿಕ್ಷೆ, 148 – ಮಾರಕ ಆಯುಧಗಳ ಬಳಕೆ – 3 ವರ್ಷ ಶಿಕ್ಷೆ, 149 – ಗುಂಪು ಸೇರಿ ಹಲ್ಲೆ – 2 ವರ್ಷ ಶಿಕ್ಷೆ ಎನ್ನಲಾಗಿದೆ.

ಇಂದು ಜೈಲು ಸೇರುತ್ತಾರಾ ಡಿ ಗ್ಯಾಂಗ್?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಗೆಳತಿ ಪವಿತ್ರಾ ಗೌಡ ಸೇರಿ 17 ಆರೋಪಿಗಳ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ. ಹೀಗಾಗಿ ಇವತ್ತು ಮತ್ತೆ ಕೋರ್ಟ್​ಗೆ ಆರೋಪಿಗಳನ್ನ ಹಾಜರುಪಡಿಸಲಾಗುತ್ತೆ. ಬಹುತೇಕ ದರ್ಶನ್​ ಮತ್ತು ಇತರ ಆರೋಪಿಗಳು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಹೋಗೋದು ಫಿಕ್ಸ್ ಅಂತಾ ಹೇಳಲಾಗುತ್ತಿದೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಬಹುತೇಕ ಅಂತಿಮ ಹಂತಕ್ಕೆ ಬಂದಿದೆ.

ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳ, ಕಿಡ್ನ್ಯಾಪ್ ಸ್ಥಳ, ಮೃತದೇಹ ಸಿಕ್ಕ ಸ್ಥಳ ಸೇರಿ ಆರೋಪಿಗಳ ಮನೆಯಲ್ಲಿ ಪೊಲೀಸರು ಮಹಜರು ಪೂರ್ಣ ಮಾಡಿದ್ದಾರೆ. ಜೊತೆಗೆ ಕೃತ್ಯಕ್ಕೆ ಬಳಸಿದ ಹಲವು ವಸ್ತುಗಳನ್ನ ಸೀಜ್ ಮಾಡಲಾಗಿದೆ. ಹೀಗಾಗಿ ಇಂದು ಕೋರ್ಟ್​ ಹಾಜರುಪಡಿಸಿ ದರ್ಶನ್​ನನ್ನ ಮತ್ತೆ ಕಸ್ಟಡಿಗೆ ಕೇಳೋದು ಡೌಟ್​ ಅಂತಾ ಹೇಳಲಾಗುತ್ತಿದೆ. ಇನ್ನು, ಇಂದು ದರ್ಶನ್ ಆ್ಯಂಡ್ ಗ್ಯಾಂಗ್‌ನ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ನಿನ್ನೆಯೇ 17 ಆರೋಪಿಗಳಿಗೆ ಮೆಡಿಕಲ್ ಚೆಕಪ್ ನಡೆಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದರ್ಶನ್, ಪವಿತ್ರಾಗೌಡ ಸೇರಿ 17 ಮಂದಿಗೆ ಮೆಡಿಕಲ್ ಚೆಕಪ್ ಮಾಡಿಸಲಾಗಿದೆ. ಪವಿತ್ರಾಗೌಡಗೆ ಇಸಿಜಿ ಹಾಗೂ ಬಿಪಿ ಪಲ್ಸ್ ಚೆಕಪ್ ಮಾಡಲಾಗಿದೆ.

ಅಪರಾಧ

Breaking News ಚಾಲಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖ!

ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೋಕಾಂತರವಾಗಿದೆ.

ಡೆತ್ ನೋಟ್‌ನಲ್ಲಿ ಸಂಸದ ಡಾ. ಕೆ. ಸುಧಾಕರ್ ಹೆಸರು:
8 ವರ್ಷಗಳಿಂದ ಲೆಕ್ಕಪರಿಶೋಧನೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಾಬು, ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆತ್ಮಹತ್ಯೆಗೆ ಕಾರಣವೆನಿಸಿದ ಹಣಕಾಸು ವಂಚನೆ:
ಬಾಬು ಅವರು ಡೆತ್ ನೋಟ್‌ನಲ್ಲಿ, ಸರ್ಕಾರಿ ಕೆಲಸ ಕೊಡಿಸುತ್ತೇವೆಂದು ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಾಬು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು:
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ FIR ದಾಖಲಾತಿ ನಡೆಯುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.

Continue Reading

ಅಪರಾಧ

ಧರ್ಮಸ್ಥಳ ಶವ ಹೂತು ಪ್ರಕರಣ: ಮೂರು ಅಸ್ಥಿಪಂಜರ ಪತ್ತೆ, ಎಸ್‌ಐಟಿ ತನಿಖೆಗೆ ಹೊಸ ತಿರುವು!

ದಕ್ಷಿಣ ಕನ್ನಡ, ಆಗಸ್ಟ್ 5 – ಧರ್ಮಸ್ಥಳದ ಸುತ್ತಮುತ್ತಲ ಶವ ಹೂತು ಪ್ರಕರಣಕ್ಕೆ ದಿನೇ ದಿನೆ ನ್ಯೂ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಮೂರು ಅಸ್ಥಿಪಂಜರಗಳು ಪತ್ತೆಯಾಗಿವೆ ಎಂಬ ಸುದ್ದಿ ಚಕ್ಕರಿಗೊಳ್ಳುತ್ತಿದೆ. ಈ ಕುರಿತು ದೂರುದಾರ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಎಸ್‌ಐಟಿ ತಂಡದ ಶೋಧ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಡೆದ ಉತ್ಖನನದ ವೇಳೆ:

  • ಸ್ಟಾಟ್ ನಂಬರ್ 12ರ ಬಳಿ ಕಾರ್ಮಿಕರಿಂದ ಅಗೆಸಿದಾಗ, ಮೂರು ಅಸ್ಥಿಪಂಜರಗಳು ಹಾಗೂ ಮಹಿಳೆಯ ಸೀರೆ ಪತ್ತೆಯಾಗಿವೆ.
  • ಸುಮಾರು 140 ಮೂಳೆಗಳ ತುಂಡುಗಳು ಪತ್ತೆಯಾದ ಕುರಿತು ವರದಿ ಇದೆ.
  • ಅಸ್ಥಿಪಂಜರಗಳನ್ನು ತಕ್ಷಣವೇ ಕೆಎಂಸಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇಂದಿನ ಉತ್ಖನನ:

  • ನೇತ್ರಾವತಿ ನದಿಯ ದಡದ ಬಳಿ 11ನೇ ಪಾಯಿಂಟ್‌ನಲ್ಲಿ ಅಗೆತ ಕೆಲಸ ನಡೆಯುತ್ತಿದೆ.
  • 6 ಅಡಿಯವರೆಗೆ ಶೋಧ ನಡೆದ ಬಳಿಕ ಸಾಕ್ಷ್ಯ ಸಿಕ್ಕದರೆ ಮುಂದಿನ ಪಾಯಿಂಟ್‌ಗೆ ಹೋಗುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಪೂರ್ವ ಘಟನೆ:

  • ಜುಲೈ 31ರಂದು 6ನೇ ಗುರುತುಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ, ಎಸ್‌ಐಟಿ ಅಧಿಕಾರಿಗಳಾದ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಆಧಾರದ ಮೇಲೆ UDR ಪ್ರಕರಣ ದಾಖಲಾಗಿದೆ.
Continue Reading

ಅಪರಾಧ

ಕೆಂಗೇರಿಯಲ್ಲಿ ಮಹಿಳೆಯ ಮೇಲೆ ಅಸಭ್ಯ ವರ್ತನೆ ಮತ್ತು ಹಲ್ಲೆ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕೆಂಗೇರಿ ಉಪನಗರದಲ್ಲಿ ಮತ್ತೊಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳ ಮುಂದೆ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾಳೆ. ಇದೇ ಸಮಯದಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಿದ ಆರೋಪಿಯು ಪೊಲೀಸರು ಬಂದಾಗ ಪರಾರಿಯಾಗಲು ಯತ್ನಿಸಿದರೂ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಸೂತ್ರಗಳ ಪ್ರಕಾರ, ಕೆಂಗೇರಿಯಲ್ಲಿರುವ ಮಾಲ್‌ನಲ್ಲಿ ವಾಚ್‌ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಾಹಸನ್ ಎಂಬಾತ, ಅಲ್ಲಿಗೆ ಬರುವ ಹೆಣ್ಣುಮಕ್ಕಳಿಗೆ ತೊಂದರೆ ಕೊಡುತ್ತಿದ್ದ. ಸಂತ್ರಸ್ತೆಯು ಈ ಬಗ್ಗೆ ಮ್ಯಾನೇಜರ್‌ಗೆ ದೂರು ನೀಡಲು ಹೋಗುತ್ತಿದ್ದಾಗ, ತನ್ನ ಪ್ಯಾಂಟ್‌ನ ಜಿಪ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ. ನಂತರ ಆಕೆಯ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ಈ ಘಟನೆಗೆ ತಕ್ಷಣ ಪ್ರತಿಕ್ರಿಯಿಸಿದ ಸಾರ್ವಜನಿಕರು ಮತ್ತು ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸದ್ಯ ಈ ಕುರಿತು ಕೆಂಗೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಆಕೆಗಾಗಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ.

ಇದೇ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದೆ ಯುವತಿಯರ ಮುಂದೆ ಅಸಭ್ಯವಾಗಿ ವರ್ತಿಸಿದ್ದ ಆಯುಬ್ ಎಂಬ ಕಾಮುಕನನ್ನು ಕೂಡ ಪೊಲೀಸರು ಬಂಧಿಸಿದ್ದರು. ಈತನ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಡಿದ್ದು, ಸಾರ್ವಜನಿಕ ಆಕ್ರೋಶ ಹೆಚ್ಚಿತ್ತು.

Continue Reading

Trending