ಆರೋಗ್ಯ
ಕೋಪ ಹೆಚ್ಚುತ್ತಿದೆಯೇ?; ಹಾಗಾದ್ರೆ ಈ ಆಹಾರಗಳನ್ನು ದಯವಿಟ್ಟು ನಿಯಂತ್ರಿಸಿ, ಸಿಟ್ಟು ಕಡಿಮೆ ಮಾಡಿಕೊಳ್ಳಿ!
ನಾವು ದಿನನಿತ್ಯ ಸೇವಿಸುವ ಆಹಾರ ದೈಹಿಕವಾಗಿ ಮಾತ್ರವಲ್ಲದೇ ಮಾನಸಿಕವಾಗಿಯೂ ನಮ್ಮ ಮೇಲೆ ಪರಿಣಾಮ ಬೀರುತ್ತದೆ. ಸಂತೋಷ, ಕೋಪ ಸೇರಿ ವಿವಿಧ ಭಾವನೆಗಳ ಸೃಷ್ಟಿಯಲ್ಲಿ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ. ಕೆಲ ಆಹಾರಗಳು, ಮೆದುಳಿನಿಂದ ನಕಾರಾತ್ಮಕ ಸಂಕೇತಗಳನ್ನು ಕಳುಹಿಸುತ್ತವೆ. ಅವು ಕೋಪಕ್ಕೆ ಕಾರಣವಾಗುತ್ತದೆ. ಹಾಗಾಗಿ, ನಿತ್ಯ ನಿಮಗೆ ಕೋಪ ಹೆಚ್ಚುತ್ತಿದೆ ಎಂದೆನಿಸಿದರೆ ಅಂತಹ ಆಹಾರಗಳನ್ನು ತಿಳಿದುಕೊಂಡು, ಅವುಗಳನ್ನು ನಿಯಂತ್ರಿಸೋ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ.
ಸಂಸ್ಕರಿಸಿದ ಆಹಾರ (Processed food): ಸಂಸ್ಕರಿಸಿದ ಆಹಾರಗಳು ನಮಗೆ ತ್ವರಿತ ಶಕ್ತಿಯನ್ನು ನೀಡುತ್ತದೆ. ಎನರ್ಜಿ ಬೂಸ್ಟರ್ ಆಗಿಯೂ ಕೆಲಸ ಮಾಡುತ್ತದೆ. ಅದಾಗ್ಯೂ, ಹೆಚ್ಚು ಪಾಲಿಶ್ ಮಾಡಿದ ಆಹಾರಗಳು ಮತ್ತು ಸಂಸ್ಕರಿಸಿದ ಆಹಾರ ಸೇವನೆಯು (ವಿಶೇಷವಾಗಿ ಸಕ್ಕರೆ ಅಂಶವಿರುವ ಆಹಾರ) ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು. ಪರಿಣಾಮ, ಮೂಡ್ ಸ್ವಿಂಗ್ನಂತಹ ಸಮಸ್ಯೆಗಳು ನಿಮಗೆ ಕಿರಿಕಿರಿಯನ್ನುಂಟು ಮಾಡುತ್ತದೆ. ಹಾಗಾಗಿ ಇಂತಹ ಆಹಾರವನ್ನು ಕಡಿಮೆ ಮಾಡಿದಷ್ಟೂ ಒಳ್ಳೆಯದು.
ಕೆಫಿನ್: ಅನೇಕರು ದಿನನಿತ್ಯ ಕೆಫಿನ್ (ಕಾಫಿ) ಸೇವಿಸುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಪ್ರಮಾಣ ಹೆಚ್ಚಾದರೆ ಅದು ನಿಮ್ಮ ಭಾವನೆಗಳ ಮೇಲೆ ಪರಿಣಾಮ ಬೀರುತ್ತದೆ. ಹೆಚ್ಚಿನ ಕೆಫಿನ್ ನಿದ್ರೆ ಮೇಲೂ ಪರಿಣಾಮ ಬೀರುತ್ತದೆ. ಇದು ಕಿರಿಕಿರಿ, ಕೋಪದಂತಹ ಭಾವನೆಗಳಿಗೆ ಕಾರಣವಾಗುತ್ತದೆ. ಕೆಫಿನ್ ಸೇವನೆಯನ್ನು ನಿಯಂತ್ರಿಸಬೇಕೆಂದುಕೊಂಡರೆ, ಗಿಡಮೂಲಿಕೆಯ ಅಂಶಗಳನ್ನೊಳಗೊಂಡ ಚಹಾಗಳನ್ನು ಬಳಸುವುದು ಸೂಕ್ತ.
ಆಲ್ಕೋಹಾಲ್: ಮದ್ಯ ಸೇವನೆ ಒಂದು ಕ್ಷಣಕ್ಕೆ ನಿಮಗೆ ಖುಷಿ ಕೊಡಬಹುದು, ವಿಶ್ರಾಂತಿಯ ಅನುಭವವಾಗಬಹುದು. ಆದರೆ, ಪ್ರಮಾಣ ಹೆಚ್ಚಾದರೆ ಕಿರಿಕಿರಿ, ಮೂಡ್ ಸ್ವಿಂಗ್ಗೆ ಕಾರಣವಾಗಬಹುದು. ಆಲ್ಕೋಹಾಲ್ ಮೆದುಳಿನಲ್ಲಿರುವ ನರಗಳ ಮೇಲೆ ಪರಿಣಾಮ ಬೀರುತ್ತದೆ. ಇದು ಭಾವನೆಗಳು ಅಸಮತೋಲನಕ್ಕೆ ಕಾರಣವಾಗುತ್ತದೆ. ಹಾಗಾಗಿ ಇದನ್ನು ನಿಯಂತ್ರಣದಲ್ಲಿಡಿ.
ಸಂಸ್ಕರಿಸಿದ ಕೊಬ್ಬಿನಾಂಶ: ಸಂಸ್ಕರಿತ ಆಹಾರಗಳನ್ನು ಅಧಿಕವಾಗಿ ಸೇವಿಸಿದರೆ, ಅವುಗಳಲ್ಲಿ ಇರುವ ಟ್ರಾನ್ಸ್ ಫ್ಯಾಟ್ ಮತ್ತು ಸ್ಯಾಚುರೇಟೆಡ್ ಫ್ಯಾಟ್ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಈ ಕೊಬ್ಬಿನಾಂಶ ದೇಹದ ಉಷ್ಣತೆ ಹೆಚ್ಚಿಸುತ್ತದೆ. ಪರಿಣಾಮವಾಗಿ, ಮೆದುಳಿನ ಮೇಲೆ ಪರಿಣಾಮ ಬೀರುತ್ತದೆ. ನಿಮಗೆ ಕಿರಿಕಿರಿಯನ್ನುಂಟುಮಾಡುತ್ತದೆ. ಇವುಗಳ ಬದಲಿಗೆ ಅವಕಾಡೊ, ನಟ್ಸ್ ಮತ್ತು ಆಲಿವ್ ಎಣ್ಣೆಯಂತಹ ಉತ್ತಮ ಕೊಬ್ಬಿನಾಂಶ ಇರುವ ಆಹಾರಗಳನ್ನು ತೆಗೆದುಕೊಳ್ಳಬಹುದು.
ಸ್ನ್ಯಾಕ್ಸ್: ಚಿಪ್ಸ್ ಮತ್ತು ಕ್ರ್ಯಾಕರ್ಸ್ನಂತಹ ಹೆಚ್ಚು ಸಂಸ್ಕರಿಸಿದ ಆಹಾರವನ್ನು ಸೇವಿಸುವುದರಿಂದ ನಿರ್ಜಲೀಕರಣ ಮತ್ತು ಮೂಡ್ ಸ್ವಿಂಗ್ ಸಮಸ್ಯೆ ಕಾಡುತ್ತದೆ. ಹೆಚ್ಚಿನ ಸೋಡಿಯಂ ಸೇವನೆಯು ಅಧಿಕ ರಕ್ತದೊತ್ತಡ, ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಸೈಡ್ ಎಫೆಕ್ಟ್ಸ್ಗೆ ಕಾರಣವಾಗಬಹುದು. ಬದಲಿಗೆ ತಾಜಾ ಹಣ್ಣುಗಳು ಮತ್ತು ಕಾಳುಗಳನ್ನು ತೆಗೆದುಕೊಳ್ಳುವುದು ಉತ್ತಮ.
ಬೆಳಗಿನ ಉಪಾಹಾರದಲ್ಲಿ ಸಕ್ಕರೆ ನಿಯಂತ್ರಿಸಿ: ಹೆಚ್ಚಿನ ಸಕ್ಕರೆಯಂಶವುಳ್ಳ ಉಪಾಹಾರ ನಿಮ್ಮ ಶಕ್ತಿಯನ್ನು ಹೆಚ್ಚಿಸಲು ಉಪಯುಕ್ತವಾಗಿದೆ. ಆದರೆ, ಇದು ನಿಮ್ಮ ನೈಜ ಶಕ್ತಿಯನ್ನು ಕುಗ್ಗಿಸುತ್ತದೆ. ಶಕ್ತಿಯ ಹಠಾತ್ ಹೆಚ್ಚಳ ನಿಮ್ಮ ಸಕ್ಕರೆ ಮಟ್ಟದಲ್ಲಿನ ಬದಲಾವಣೆಗೆ ಕಾರಣವಾಗಬಹುದು. ಹಾಗಾಗಿ ಸಕ್ಕರೆ ಕಡಿಮೆ ಇರುವ ಆಹಾರವನ್ನು ಸೇವಿಸುವುದು ಉತ್ತಮ.
ಗಮನದಲ್ಲಿಡಿ: ಇಲ್ಲಿ ಒದಗಿಸಲಾದ ಎಲ್ಲ ಆರೋಗ್ಯ ಮಾಹಿತಿ, ವೈದ್ಯಕೀಯ ಸಲಹೆಗಳ ನಿಮ್ಮ ತಿಳಿವಳಿಕೆಗಾಗಿ ಮಾತ್ರ. ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ – ಆರೋಗ್ಯ ವೃತ್ತಿಪರ ಸಲಹೆಯನ್ನು ಆಧರಿಸಿ ನಾವು ಈ ಮಾಹಿತಿಯನ್ನು ಒದಗಿಸುತ್ತಿದ್ದೇವೆ. ಆದರೆ ಇವುಗಳನ್ನು ಅನುಸರಿಸುವ ಮೊದಲು ನೀವು ವೈದ್ಯರ ಸಲಹೆ ತೆಗೆದುಕೊಳ್ಳುವುದು ಉತ್ತಮ.
ಆರೋಗ್ಯ
ಮೂತ್ರಪಿಂಡದ ಕಲ್ಲು: ಮೂತ್ರಕೋಶದಲ್ಲಿ ಸಿಲುಕಿದರೆ ಏನಾಗುತ್ತದೆ?
ಬೆಂಗಳೂರು: ಮೂತ್ರಪಿಂಡದ ಕಲ್ಲು (Kidney Stone) ಮೂತ್ರಕೋಶಕ್ಕೆ ತಲುಪಿದ ಬಳಿಕ ಸುಲಭವಾಗಿ ಹೊರಹೋಗುತ್ತದೆ ಎಂಬುದು ಸಾಮಾನ್ಯ ನಂಬಿಕೆ. ಆದರೆ ಕೆಲವೊಮ್ಮೆ ಈ ಕಲ್ಲುಗಳು ಮೂತ್ರಕೋಶದಲ್ಲೇ ಸಿಲುಕಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.
ಸಾಮಾನ್ಯವಾಗಿ 4–5 ಮಿಮೀ ಗಾತ್ರದ ಕಲ್ಲುಗಳು ಸಹಜವಾಗಿ ಮೂತ್ರದ ಮೂಲಕ ಹೊರಹೋಗುತ್ತವೆ. ಆದರೆ 7 ಮಿಮೀಗಿಂತ ದೊಡ್ಡದಾದ ಅಥವಾ ಅಸಮ ಆಕಾರ ಹೊಂದಿರುವ ಕಲ್ಲುಗಳು ಮೂತ್ರನಾಳದಲ್ಲಿ ಸಿಲುಕಿಕೊಳ್ಳಬಹುದು. ಇದರಿಂದ ಕೆಳ ಹೊಟ್ಟೆ ನೋವು, ಮೂತ್ರ ವಿಸರ್ಜನೆ ವೇಳೆ ಉರಿ, ಮೂತ್ರದಲ್ಲಿ ರಕ್ತ ಹಾಗೂ ದುರ್ವಾಸನೆ ಕಾಣಿಸಬಹುದು.
ಮೂತ್ರಕೋಶ ಸರಿಯಾಗಿ ಖಾಲಿಯಾಗದಿರುವುದು ಕೂಡ ಪ್ರಮುಖ ಕಾರಣ. ಮೂತ್ರದ ಹರಿವು ಕಡಿಮೆಯಾಗುವ ಸ್ಥಿತಿ ಅಥವಾ ವೃದ್ಧರಾದ ಪುರುಷರಲ್ಲಿ ಕಾಣಿಸುವ ಪ್ರಾಸ್ಟೇಟ್ ವಿಸ್ತರಣೆ (BPH) ಸಮಸ್ಯೆಯಿಂದ ಕಲ್ಲುಗಳು ಸಿಲುಕಿಕೊಳ್ಳಬಹುದು. ಜೊತೆಗೆ ಮಧುಮೇಹ ಅಥವಾ ನರ ಸಮಸ್ಯೆಗಳೂ ಪರಿಣಾಮ ಬೀರುತ್ತವೆ.
ಕಲ್ಲುಗಳು ಹೆಚ್ಚು ಕಾಲ ಸಿಲುಕಿಕೊಂಡಿದ್ದರೆ ಸೋಂಕು (UTI), ಮೂತ್ರ ಧಾರಣ ತೊಂದರೆ ಹಾಗೂ ಮೂತ್ರಕೋಶದ ಉರಿಯೂತದಂತಹ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಜ್ವರ, ತೀವ್ರ ನೋವು, ಮೂತ್ರವಿಸರ್ಜನೆ ಅಸಾಧ್ಯತೆ ಕಂಡುಬಂದರೆ ತಕ್ಷಣ ವೈದ್ಯಕೀಯ ಚಿಕಿತ್ಸೆ ಅಗತ್ಯ.
ತಜ್ಞರ ಪ್ರಕಾರ, ಸಾಕಷ್ಟು ನೀರು ಕುಡಿಯುವುದು, ಮೂತ್ರಕೋಶವನ್ನು ಸಂಪೂರ್ಣ ಖಾಲಿ ಮಾಡುವುದು ಹಾಗೂ ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ಈ ಸಮಸ್ಯೆಯನ್ನು ತಪ್ಪಿಸಬಹುದು. “ಡಬಲ್ ವಾಯ್ಡ್” ಎಂಬ ವಿಧಾನವು ಮೂತ್ರಕೋಶ ಸಂಪೂರ್ಣ ಖಾಲಿಯಾಗಲು ಸಹಕಾರಿಯಾಗುತ್ತದೆ.
ಒಟ್ಟಿನಲ್ಲಿ, ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯನ್ನು ನಿರ್ಲಕ್ಷಿಸದೇ ಆರಂಭಿಕ ಲಕ್ಷಣಗಳಲ್ಲೇ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ.
Note: This information is provided by Dr. Venkatswamy and the Hosasuddi.in health team. Before publishing, Hosasuddi.in follows medical guidelines and expert advice.
ಆರೋಗ್ಯ
ಮಧುಮೇಹ-ಬೊಜ್ಜಿಗೆ GLP-1 ಔಷಧ: ಪ್ರಯೋಜನದ ಜೊತೆ ಅಪಾಯವೂ!
ನವದೆಹಲಿ: ಟೈಪ್ 2 ಮಧುಮೇಹ ಮತ್ತು ಸ್ಥೂಲಕಾಯತೆಗೆ ಚಿಕಿತ್ಸೆ ನೀಡಲು ಬಳಸಲಾಗುತ್ತಿರುವ GLP-1 ಔಷಧಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಎಚ್ಚರಿಕೆ ನೀಡಿದೆ. ಈ ಔಷಧಗಳು ಪರಿಣಾಮಕಾರಿ ಆಗಿದ್ದರೂ, ಅವುಗಳನ್ನು ವೈದ್ಯರ ಸಲಹೆಯಿಲ್ಲದೆ ಬಳಸುವುದು ಅಪಾಯಕಾರಿ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ಆರೋಗ್ಯ ಇಲಾಖೆ ಹೇಳುವಂತೆ, GLP-1 ಔಷಧಗಳು ರಕ್ತದಲ್ಲಿನ ಸಕ್ಕರೆ ನಿಯಂತ್ರಣ ಮತ್ತು ತೂಕ ಇಳಿಕೆಗೆ ಸಹಕಾರಿ. ಆದರೆ ವಾಕರಿಕೆ, ವಾಂತಿ ಮುಂತಾದ ಸಾಮಾನ್ಯ ಅಡ್ಡಪರಿಣಾಮಗಳಿಂದ ಹಿಡಿದು ಮೂತ್ರಪಿಂಡ ಹಾನಿ, ಮೇದೋಜ್ಜೀರಕ ಗ್ರಂಥಿಯ ಉರಿಯೂತ, ಕರುಳಿನ ಅಡಚಣೆಗಳಂತಹ ಗಂಭೀರ ಸಮಸ್ಯೆಗಳಿಗೂ ಕಾರಣವಾಗಬಹುದು.
Type 2 Diabetes ಮತ್ತು Obesity ಹೊಂದಿರುವವರು ಈ ಔಷಧಗಳನ್ನು ಕಡ್ಡಾಯವಾಗಿ ನೋಂದಾಯಿತ ವೈದ್ಯರ ಮೇಲ್ವಿಚಾರಣೆಯಲ್ಲೇ ಬಳಸಬೇಕು ಎಂದು ಸೂಚಿಸಲಾಗಿದೆ. ಅನಧಿಕೃತ ಮಾರಾಟ ಮತ್ತು ಮೇಲ್ವಿಚಾರಣೆಯಿಲ್ಲದ ಬಳಕೆಯನ್ನು ತಡೆಯಲು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಗಿದೆ.
ಸಚಿವಾಲಯದ ಪ್ರಕಾರ, ಹೆಚ್ಚಿನ ತೂಕ, ವ್ಯಾಯಾಮದ ಕೊರತೆ ಮತ್ತು ಹೆಚ್ಚು ಸಕ್ಕರೆ ಸೇವನೆ ಟೈಪ್ 2 ಮಧುಮೇಹದ ಪ್ರಮುಖ ಕಾರಣಗಳಾಗಿವೆ. ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮದ ಮೂಲಕ ಈ ರೋಗವನ್ನು ತಡೆಗಟ್ಟಬಹುದು.
ಆರೋಗ್ಯ
ಜಂಕ್ ಫುಡ್ ಬೇಡ! ಹಣ್ಣುಗಳಿಂದ ಆರೋಗ್ಯಕರವಾಗಿ ತೂಕ ಹೆಚ್ಚಿಸಿಕೊಳ್ಳಿ
ಬೆಂಗಳೂರು: ಇಂದಿನ ಜೀವನಶೈಲಿಯಲ್ಲಿ ತೂಕ ಇಳಿಸುವುದು ಎಷ್ಟು ಕಷ್ಟವೋ, ಅತಿಯಾಗಿ ಸಪೂರ ಮೈಕಟ್ಟು ಹೊಂದಿರುವವರಿಗೆ ಆರೋಗ್ಯಕರವಾಗಿ ತೂಕ ಹೆಚ್ಚಿಸಿಕೊಳ್ಳುವುದು ಕೂಡ ಅಷ್ಟೇ ಸವಾಲಾಗಿದೆ. ತೂಕ ಹೆಚ್ಚಿಸುವುದು ಎಂದರೆ ಕೇವಲ ಕೊಬ್ಬು ಹೆಚ್ಚಿಸುವುದಲ್ಲ; ಬದಲಾಗಿ ದೇಹದಲ್ಲಿ ಸದೃಢ ಸ್ನಾಯುಗಳ (ಮಸಲ್ಸ್) ವೃದ್ಧಿ ಮುಖ್ಯ.
ಜಂಕ್ ಫುಡ್ಗಳಿಗೆ ಅವಲಂಬನೆ ಕಡಿಮೆ ಮಾಡಿ, ನೈಸರ್ಗಿಕ ಹಣ್ಣುಗಳನ್ನು ದಿನನಿತ್ಯದ ಆಹಾರದಲ್ಲಿ ಸೇರಿಸುವುದು ಉತ್ತಮ ವಿಧಾನವಾಗಿದೆ. ಕೆಲವು ಹಣ್ಣುಗಳು ದೇಹಕ್ಕೆ ಅಗತ್ಯ ಕ್ಯಾಲರಿ, ಪೋಷಕಾಂಶಗಳನ್ನು ನೀಡುವುದರ ಮೂಲಕ ತೂಕ ಹೆಚ್ಚಿಸಲು ಸಹಾಯ ಮಾಡುತ್ತವೆ.
ಬಾಳೆಹಣ್ಣು (Banana): ಕಾರ್ಬೋಹೈಡ್ರೇಟ್ ಮತ್ತು ಕ್ಯಾಲರಿಗಳಿಂದ ಸಮೃದ್ಧವಾಗಿರುವ ಬಾಳೆಹಣ್ಣು ತೂಕ ಹೆಚ್ಚಿಸಲು ಪರಿಣಾಮಕಾರಿ. ದಿನಕ್ಕೆ 2–3 ಬಾಳೆಹಣ್ಣು ತಿನ್ನುವುದು ಅಥವಾ ಹಾಲಿನೊಂದಿಗೆ ಬನಾನಾ ಶೇಕ್ ಸೇವಿಸುವುದು ವೇಗವಾಗಿ ಫಲ ನೀಡುತ್ತದೆ.
ಅವಕಾಡೋ (Avocado): ಆರೋಗ್ಯಕರ ಕೊಬ್ಬಿನ ಮೂಲವಾಗಿರುವ ಈ ಹಣ್ಣು ದೇಹಕ್ಕೆ ಅಗತ್ಯ ಪೋಷಕಾಂಶಗಳನ್ನು ಒದಗಿಸಿ, ತೂಕವನ್ನು ಸಮತೋಲನದಿಂದ ಹೆಚ್ಚಿಸುತ್ತದೆ.
ಮಾವಿನ ಹಣ್ಣು (Mango): ನೈಸರ್ಗಿಕ ಸಕ್ಕರೆ ಮತ್ತು ಹೆಚ್ಚಿನ ಕ್ಯಾಲರಿಗಳಿಂದ ಕೂಡಿದ ಮಾವಿನ ಹಣ್ಣು ತೂಕ ಹೆಚ್ಚಿಸುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನೂ ವೃದ್ಧಿಸುತ್ತದೆ.
ಒಣಹಣ್ಣುಗಳು (Dry Fruits): ಅಂಜೂರ, ಖರ್ಜೂರ, ಒಣ ದ್ರಾಕ್ಷಿ ಮುಂತಾದವು ತೂಕ ಹೆಚ್ಚಿಸಲು ಅತ್ಯುತ್ತಮ. ರಾತ್ರಿ ನೆನೆಸಿಟ್ಟು ಬೆಳಗ್ಗೆ ಸೇವಿಸಿದರೆ ಹೆಚ್ಚು ಲಾಭಕರ.
ಇದಲ್ಲದೆ ಸಪೋಟ, ಹಲಸಿನ ಹಣ್ಣುಗಳೂ ಸಹ ಸಹಾಯಕ. ಆದರೆ ಕೇವಲ ಆಹಾರ ಸೇವನೆ ಸಾಕಾಗುವುದಿಲ್ಲ; ಲಘು ವ್ಯಾಯಾಮ ಮತ್ತು ಯೋಗಾಭ್ಯಾಸದಿಂದ ಆಹಾರ ಸ್ನಾಯುವಾಗಿ ಪರಿವರ್ತನೆಗೊಳ್ಳಲು ಸಹಾಯವಾಗುತ್ತದೆ.
ನಿಯಮಿತ ಆಹಾರ ಮತ್ತು ತಾಳ್ಮೆಯೊಂದಿಗೆ ಈ ಕ್ರಮ ಪಾಲಿಸಿದರೆ ಆರೋಗ್ಯಕರ ತೂಕ ಹೆಚ್ಚಿಸಿಕೊಳ್ಳುವುದು ಸಾಧ್ಯ. ಈ ಮಾಹಿತಿಯನ್ನು ಆರೋಗ್ಯ ತಜ್ಞರು ಹಂಚಿಕೊಂಡಿದ್ದು, ಅದರ ಆಧಾರದ ಮೇಲೆ ಹೊಸ ಸುದ್ದಿ (Hosasuddi) ತಂಡವು ಈ ಲೇಖನವನ್ನು ಪ್ರಕಟಿಸಿದೆ.
-
ದೇಶ16 hours agoಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?
-
ದೇಶ23 hours agoಪ್ರಚಾರ ವೇಳೆ ಕಾರು ತಡೆದು ಹಲ್ಲೆ: ತರೂರ್ ಬೆಂಗಾವಲು ಮೇಲೆ ದಾಂಧಲೆ
-
ಆರೋಗ್ಯ21 hours agoಮೂತ್ರಪಿಂಡದ ಕಲ್ಲು: ಮೂತ್ರಕೋಶದಲ್ಲಿ ಸಿಲುಕಿದರೆ ಏನಾಗುತ್ತದೆ?
-
ದೇಶ18 hours agoಕಾಂಗ್ರೆಸ್ ಒಳಜಗಳ ಬಯಲು: ರಾಹುಲ್ ನಿಲುವಿಗೆ ಹಿರಿಯರ ವಿರೋಧ
-
ದೇಶ22 hours agoಜಮೀರ್ ಅಹ್ಮದ್ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!
-
ಚುನಾವಣೆ16 hours agoTN 2026 ಟೀಸರ್ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ
-
ದೇಶ18 hours agoಇರಾನ್-ಅಮೆರಿಕಾ ಮಾತುಕತೆ ವಿಫಲ: ಪಾಕಿಸ್ತಾನಕ್ಕೆ ಮುಖಭಂಗ!
-
ಅಪರಾಧ18 hours agoಐಪಿಎಲ್ ಟಿಕೆಟ್ ಕ್ರೇಜ್ ನಡುವೆ ದೊಡ್ಡ ಮೋಸ: ಟೆಕ್ಕಿಗೆ ₹1.46 ಲಕ್ಷ ನಷ್ಟ!
