ಕ್ರೀಡೆ
ನಿವೃತ್ತಿ ಬೆನ್ನಲ್ಲೇ ಕೊಹ್ಲಿಗೆ ಹೊಸ ಜವಾಬ್ದಾರಿ ಹೊರಿಸಿದ ರಾಹುಲ್ ದ್ರಾವಿಡ್.. ಆ ಕನಸು ನನಸು ಮಾಡ್ತಾರಾ ಕಿಂಗ್!

ಕಿಂಗ್ಕೊಹ್ಲಿಯ ಬಹುಕಾಲದ ಕನಸು ಈ ವರ್ಷ ನನಸಾಗಿದೆ. ಕರಿಯರ್ ಆರಂಭ ಕನಸನ್ನ ಬೆನ್ನತ್ತಿ, ಅದಕ್ಕಾಗಿ ದಣಿವರಿಯದೇ ದುಡಿದ್ರೂ ಚುಟುಕು ಚಾಂಪಿಯನ್ ಪಟ್ಟ ಕೊಹ್ಲಿಗೆ ದಕ್ಕಿರಲಿಲ್ಲ. ಕೊನೆಗೂ ಟಿ20 ವಿಶ್ವಕಪ್ ಗೆದ್ದಾಗಿದೆ. ಇದ್ರ ಬೆನ್ನಲ್ಲೇ ನಿರ್ಗಮಿತ ಕೋಚ್ ರಾಹುಲ್ ದ್ರಾವಿಡ್, ಕಿಂಗ್ ಕೊಹ್ಲಿ ಹೊಸ ಟಾಸ್ಕ್ ಕೊಟ್ಟಿದ್ದಾರೆ. ದ್ರಾವಿಡ್ ನೀಡಿರೋ ಟಾಸ್ಕ್, ಕೊಹ್ಲಿಯ ಕಿಚ್ಚನ್ನ ಹೆಚ್ಚಿಸಿದೆ. ಆ ಟಾಸ್ಕ್ ಏನು.? ಇಲ್ಲಿದೆ ಓದಿ.
ಸತತ ಸೋಲು, ವೈಫಲ್ಯ, ಬ್ಯಾಡ್ ಲಕ್. ಒಂದಾ..? ಎರಡಾ..? ಕಳೆದ 11 ವರ್ಷಗಳಿಂದ ಟೀಮ್ ಇಂಡಿಯಾ ಐಸಿಸಿ ಟೂರ್ನಿಯಲ್ಲಿ ಅನುಭವಿಸಿದ್ದು ನಿರಾಸೆಯನ್ನ. ಪರಿಣಾಮ ಸಿಕ್ಕಿದ್ದು ಚೋಕರ್ಸ್ ಪಟ್ಟ. ಇದೀಗ ತಂಡಕ್ಕಂಟಿದ್ದ ಎಲ್ಲಾ ಕಳಂಕಗಳಿಗೂ ಫುಲ್ ಸ್ಟಾಫ್ ಬಿದ್ದಿದೆ. ಬಾರ್ಬಡೋಸ್ ಭಾರತದ ಝಂಡಾ ಹಾರಿಸಿರೋ ರೋಹಿತ್ ಶರ್ಮಾ ಪಡೆ, ಟೀಮ್ ಇಂಡಿಯಾವನ್ನ ಚುಟುಕು ಚಾಂಪಿಯನ್ ಪಟ್ಟಕ್ಕೇರಿಸಿದೆ.
ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ದಿಗ್ಗಜರು ಟಿ20 ಫಾರ್ಮೆಟ್ಗೆ ಗುಡ್ ಬೈ ಹೇಳಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಟಿ20 ಇಂಟರ್ನ್ಯಾಷನಲ್ಸ್ಗೆ ವಿದಾಯ ಹೇಳಿದ್ರು. ರಾಹುಲ್ ದ್ರಾವಿಡ್ ಗೆಲುವಿನೊಂದಿಗೆ ಟೀಮ್ ಇಂಡಿಯಾದ ಕೋಚ್ ಹುದ್ದೆಯನ್ನ ತೊರೆದಿದ್ದಾರೆ. ಕೋಚ್ ಹುದ್ದೆಯನ್ನ ತೊರೆದ ರಾಹುಲ್ ದ್ರಾವಿಡ್ ಸುಮ್ಮನೇ ಜಾಗ ಖಾಲಿ ಮಾಡಿಲ್ಲ. ಕಿಂಗ್ ಕೊಹ್ಲಿಗೆ ಹೊಸ ಟಾಸ್ಕ್ ನೀಡಿ ನಿರ್ಗಮಿಸಿದ್ದಾರೆ.
ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟಿ20 ಇಂಟರ್ನ್ಯಾಷನಲ್ಸ್ಗೆ ಗುಡ್ ಬೈ ಹೇಳಿದ ಕೊಹ್ಲಿ ಬಳಿಕ ಸಂಭ್ರಮಾಚರಣೆಯಲ್ಲಿ ಮಗ್ನರಾಗಿದ್ರು. ಭಾವುಕರಾಗಿದ್ದ ಟ್ರೋಫಿ ಹಿಡಿದುಕೊಂಡು ಮೈದಾನದ ತುಂಬೆಲ್ಲಾ ಸುತ್ತಾಡಿ ಸಂಭ್ರಮಿಸಿದ್ರು. ಈ ಸಂಭ್ರಮಾಚರಣೆ ಮೈದಾನದ ಉದ್ದಗಲದಿಂದ ಹಿಡಿದು ಡ್ರೆಸ್ಸಿಂಗ್ರೂಮ್ನವರೆಗೂ ನಡೀತು. ಡ್ರೆಸ್ಸಿಂಗ್ ರೂಮ್ ಸಂಭ್ರಮಿಸ್ತಾ ಇದ್ದ ವೇಳೆಯೇ ನೋಡಿ, ಟೀಮ್ ಇಂಡಿಯಾದ ನಿರ್ಗಮಿತ ಕೋಚ್ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿಗೆ ಒಂದು ಸ್ಪೆಷಲ್ ಟಾಸ್ಕ್ ನೀಡಿದ್ದು.
2008ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ಕಾಲಿಟ್ಟ ವಿರಾಟ್ ಕೊಹ್ಲಿ, 2011ರಲ್ಲೇ ಏಕದಿನ ವಿಶ್ವಕಪ್ ಗೆದ್ರು. 2013ರಲ್ಲಿ ಚಾಂಪಿಯನ್ಸ್ ಟ್ರೋಫಿ ಜಯಿಸಿದ್ರು. ಆದ್ರೆ, ಟಿ20 ವಿಶ್ವಕಪ್ ಗೆಲ್ಲಲಾಗದ ಕೊರಗು ವಿರಾಟ್ ಕೊಹ್ಲಿಯನ್ನ ಬಿಡದೇ ಕಾಡಿತ್ತು. ಟಿ20 ವಿಶ್ವಕಪ್ ಟೂರ್ನಿಯ ಇತಿಹಾಸದ ಸಾಮ್ರಾಟನಾಗಿ ಮೆರೆದ್ರೂ, ರನ್ಗಳಿಕೆಯಲ್ಲಿ ದಾಖಲೆ ಬರೆದ್ರೂ, ಕಪ್ ಕನಸಾಗೇ ಉಳಿದಿತ್ತು. ಕೊನೆಗೂ ಆ ನಿರಾಸೆ, ಹತಾಶೆಗೆ ಈ ಬಾರಿ ಬ್ರೇಕ್ ಬಿದ್ದಿದೆ. ಚುಟುಕು ವಿಶ್ವಕಪ್ ಗೆದ್ದ ವಿರಾಟ್, ವೈಟ್ಬಾಲ್ ಫಾರ್ಮೆಟ್ನ ಪ್ರತಿಷ್ಟಿತ ಮೂರು ICC ಟ್ರೋಫಿಗಳನ್ನ ಗೆದ್ದ ಸಾಧನೆ ಮಾಡಿದ್ದಾರೆ. ಇದನ್ನ ದ್ರಾವಿಡ್ ಹೇಳಿದ್ದು ALL THREE WHITES TICKED OFF ಅಂತಾ..!
ವೈಟ್ಬಾಲ್ ಫಾರ್ಮೆಟ್ನಲ್ಲಿ ಮೂರೂ ಐಸಿಸಿ ಟ್ರೋಫಿಗಳನ್ನ ಗೆದ್ದ ಸಾಧನೆಯನ್ನ ವಿರಾಟ್ ಕೊಹ್ಲಿ ಇದೀಗ ಮಾಡಿದ್ದಾಗಿದೆ. ಈಗ ಬ್ಯಾಲೆನ್ಸ್ ಇರೋದು ಒಂದೇ ಅದೇ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಮೆಸ್.! ONE RED TO GO. TICK IT ಅಂತಾ ದ್ರಾವಿಡ್ ಹೇಳಿರೋದು ಇದ್ರ ಬಗ್ಗೇನೆ. ಎರಡು ಬಾರಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಟೀಮ್ ಇಂಡಿಯಾ ಪ್ರವೇಶಿಸಿದೆ. ಆದ್ರೆ, ಫೈನಲ್ನಲ್ಲಿ ಕಪ್ ಗೆಲ್ಲುವಲ್ಲಿ ಎಡವಿದೆ. ನಾಯಕನಾಗಿ ಒಮ್ಮೆ, ಬ್ಯಾಟ್ಸ್ಮನ್ ಆಗಿ ಮತ್ತೊಮ್ಮೆ ಕೊಹ್ಲಿ ಕೂಡ ಫೇಲ್ ಆಗಿದ್ದಾರೆ.
ವಿಶ್ವ ಕ್ರಿಕೆಟ್ ಲೋಕದಲ್ಲಿ ಆಟಗಾರನಾಗಿ, ನಾಯಕನಾಗಿ ವಿರಾಟ್ ಕೊಹ್ಲಿ ಅಸಾಧ್ಯ ಅಂದಿದ್ದನೆಲ್ಲಾ ಸಾಧಿಸಿ ತೋರಿಸಿದ್ದಾರೆ. ದೇಶ-ವಿದೇಶಗಳಲ್ಲಿ ರನ್ ಕೊಳ್ಳೆ ಶತಕಗಳ ಮೇಲೆ ಶತಕ ಸಿಡಿಸಿದ್ದಾರೆ. ಅದ್ರಲ್ಲೂ, ಟೆಸ್ಟ್ ಫಾರ್ಮೆಟ್ ವಿರಾಟ್ ಕೊಹ್ಲಿಯ ಫೇವರಿಟ್ ಫಾರ್ಮೆಟ್.! ಈ ಫಾರ್ಮೆಟ್ನಲ್ಲಿ ಕಪ್ ಗೆಲ್ಲಲೇಬೇಕು ಅನ್ನೋ ಹಂಬಲ ಕೊಹ್ಲಿಗೂ ಇದೆ. ಇದೀಗ ದ್ರಾವಿಡ್ ಟಾಸ್ಕ್ ಬೇರೆ ನೀಡಿದ್ದಾರೆ. ಇದು ಕೊಹ್ಲಿಯಲ್ಲಿ ಟೆಸ್ಟ್ ಚಾಂಪಿಯನ್ಶಿಪ್ ಮೆಸ್ ಗೆಲ್ಲೋ ಕನಸಿಗೆ ಕಿಚ್ಚು ಹಚ್ಚಿರೋದ್ರಲ್ಲಿ ಅನುಮಾನವೇ ಇಲ್ಲ.
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
ಕ್ರೀಡೆ
ಭಾರತೀಯ ತಂಡದ ಕೋಚ್ ಗೌತಮ್ ಗಂಭೀರ್ ವಿರುದ್ಧ ಟೀಕೆ, ಬಿಸಿಸಿಐ ಸಹಾಯಕ ಕೋಚ್ ಮಾರ್ನೆ ಮಾರ್ಕೆಲ್-ಟೆನ್ ಡೊಶ್ಕಾಟೆ ಬದಲಾವಣೆ ಸಾಧ್ಯತೆ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಅವರ ಕೋಚಿಂಗ್ ಶೈಲಿಯನ್ನು ಮಾಜಿ ಕ್ರಿಕೆಟಿಗರು ಸೇರಿದಂತೆ ಸುನಿಲ್ ಗವಾಸ್ಕರ್, ರಿಕಿ ಪಾಂಟಿಂಗ್ ಸೇರಿದಂತೆ ಹಲವು ಹಿರಿಯರು ಭಾರೀ ಟೀಕೆ ಮಾಡಿದ್ದಾರೆ. ಈ ಟೀಕೆಗಳಿಗೆ ಸಂಬಂಧಿಸಿ, ಗಂಭೀರ್ ಮನವಿ ಮಾಡಿಕೊಂಡ ಸಹಾಯಕ ಕೋಚ್ಗಳಾದ ಮಾರ್ನೆ ಮಾರ್ಕೆಲ್ (ಬೌಲಿಂಗ್ ಕೋಚ್) ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಶೀಘ್ರದಲ್ಲೇ ತಮ್ಮ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ಸೂಚಿಸುತ್ತಿವೆ.
ಕಳೆದ ವರ್ಷ ಜುಲೈನಲ್ಲಿ ಗಂಭೀರ್ ಭಾರತದ ಕೋಚ್ ಆಗಿ ನೇಮಕಗೊಂಡಿದ್ದರು. ಅವರ ಮನವಿ ಮೇರೆಗೆ ಐಪಿಎಲ್ ತಂಡಗಳಲ್ಲಿ ಕಾರ್ಯನಿರ್ವಹಿಸಿದ್ದ ಅಭಿಷೇಕ್ ನಾಯರ್, ಮಾರ್ಕೆಲ್ ಮತ್ತು ಡೊಶ್ಕಾಟೆ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದರು. ಆದರೆ, ನ್ಯೂಜಿಲೆಂಡ್ ವಿರುದ್ಧ ವೈಟ್ ವಾಷ್ ಹಾಗೂ ಆಸ್ಟ್ರೇಲಿಯಾ ತಂಡದ ಸೋಲುಗಳು ಬಿಸಿಸಿಐನಲ್ಲಿ ಅಸಮಾಧಾನ ಮೂಡಿಸಿದ ಕಾರಣ, ಮೊದಲನೆಯದಾಗಿ ಸಹಾಯಕ ಕೋಚ್ ಅಭಿಷೇಕ್ ನಾಯರ್ ಹುದ್ದೆಯಿಂದ ವಜಾಗೊಂಡಿದ್ದರು.
ಇದೇ ಹಿನ್ನೆಲೆಯಲ್ಲಿ, ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಸಹ ಇನ್ನೂ ಸಹ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತಂಡದ ಆಯ್ಕೆ ಪ್ರಕ್ರಿಯೆ, ಆಟಗಾರರ ಕಾರ್ಯದೊತ್ತಡ, ಪಿಚ್ ಅನ್ವಯ 11 ಆಟಗಾರರ ಆಯ್ಕೆ ಮತ್ತು ಸಮತೋಲನ ಕಾಯ್ದುಕೊಳ್ಳುವ ವಿಚಾರದಲ್ಲಿ ಕೋಚ್ಗಳ ಕಾರ್ಯವೈಖರಿಗೆ ಬಿಸಿಸಿಐ ಅತೃಪ್ತಿ ವ್ಯಕ್ತಪಡಿಸಿದೆ.
ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಥಾನಕ್ಕೂ ಸವಾಲು ಎದುರಾಗಿದೆ. 2023ರ ಜುಲೈನಲ್ಲಿ ನೇಮಕಗೊಂಡ ಈ ಸಮಿತಿ ಮುಖ್ಯಸ್ಥರ ನೇತೃತ್ವದಲ್ಲಿ ಭಾರತ ತಂಡದ ಪ್ರದರ್ಶನ ಕಳೆದ ಒಂದು ವರ್ಷದಿಂದ ತೀರಾ ಕಳಪೆಯಾಗಿದ್ದು, ಸಮರ್ಥ ಆಟಗಾರರ ಆಯ್ಕೆಯಲ್ಲಿ ನಿರಂತರ ಎಡವಾಟಗಳು ನಡೆದಿವೆ ಎಂದು ವಿಶ್ಲೇಷಣೆಗಳು ತಿಳಿಸುತ್ತಿವೆ.
ಕ್ರೀಡೆ
ಕನ್ನಡಿಗ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಅತಿ ಹೆಚ್ಚು ಬೆಲೆಗೆ ಮಾರಾಟ

ಕರ್ನಾಟಕದ ಪ್ರತಿಭಾವಂತ ಕ್ರಿಕೆಟಿಗ ದೇವದತ್ ಪಡಿಕ್ಕಲ್ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಅವರು ‘ಹುಬ್ಬಳ್ಳಿ ಟೈಗರ್ಸ್’ ತಂಡಕ್ಕೆ 13.20 ಲಕ್ಷ ರೂಪಾಯಿಗೆ ಮಾರಾಟ ಆಗಿದ್ದು, ಈ ಮೊತ್ತವು ಮಹಾರಾಜ ಟ್ರೋಫಿಯ ಇತಿಹಾಸದಲ್ಲಿ ಅತಿ ಹೆಚ್ಚು ಬೆಲೆಯಾಗಿದೆ. ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಪರ ಉತ್ತಮ ಪ್ರದರ್ಶನ ನೀಡಿ, ಅವರು ಈ ಯಶಸ್ಸಿಗೆ ಪಾತ್ರರಾಗಿದ್ದಾರೆ.
ಕಳೆದ ಐಪಿಎಲ್ ಪಂದ್ಯಾವಳಿಯಲ್ಲಿ ಗಾಯದಿಂದ ಕೆಲವು ಪಂದ್ಯಗಳಿಂದ ದೂರ ಉಳಿದರೂ, ದೇವದತ್ ಪಡಿಕ್ಕಲ್ ಅವರ ಸಾಮರ್ಥ್ಯ ಎಲ್ಲರ ಮನಸ್ಸಿಗೆ ತಲುಪಿತ್ತು. 2024ರ ಐಪಿಎಲ್ನಲ್ಲಿ ರಾಜಸ್ಥಾನ ರಾಯಲ್ಸ್ನಿಂದ ಹೊರಬಂದ ಬಳಿಕ ಆರ್ಸಿಬಿ ತಂಡವು ಅವರನ್ನು 3.20 ಕೋಟಿ ರೂಪಾಯಿಗೆ ಖರೀದಿಸಿದೆ. ಇದೀಗ ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವು 13.20 ಲಕ್ಷ ರೂಪಾಯಿಗೆ ದೇವದತ್ ಪಡಿಕ್ಕಲ್ ಅವರನ್ನು ಪಡೆದಿದ್ದು, ಇದು ಟೂರ್ನಿಯ ದಾಖಲೆಯ ಬೆಲೆಯಾಗಿದೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಜುಲೈ 15ರಂದು ಬೆಂಗಳೂರಿನಲ್ಲಿ ಆಯೋಜಿಸಿದ ಈ ಹರಾಜಿನಲ್ಲಿ ದೇವದತ್ ಪಡಿಕ್ಕಲ್ ಅತಿ ಹೆಚ್ಚು ಬೆಲೆಗೆ ಮಾರಾಟವಾದ ಕನ್ನಡಿಗ ಕ್ರಿಕೆಟಿಗರಾಗಿದ್ದಾರೆ. ಮಹಾರಾಜ ಟ್ರೋಫಿಯಲ್ಲಿ ಪ್ರತಿ ಫ್ರಾಂಚೈಸಿಯು ಕನಿಷ್ಠ ಇಬ್ಬರು ಸ್ಥಳೀಯ ಆಟಗಾರರನ್ನು ತಂಡದಲ್ಲಿ ಇರಿಸಬೇಕು ಎಂಬ ನಿಯಮವಿದ್ದು, ಇದರಿಂದ ಸ್ಥಳೀಯ ಪ್ರತಿಭೆಗಳ ಪ್ರೋತ್ಸಾಹಕ್ಕೆ ದೊಡ್ಡ ಅವಕಾಶ ಸಿಗುತ್ತದೆ.
ಈ ವರ್ಷದ ಪಂದ್ಯಗಳು ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಭಿಮಾನಿಗಳಿಗೆ ಮೈದಾನದಲ್ಲಿ ವೀಕ್ಷಣೆಗೆ ಅವಕಾಶ ಇಲ್ಲ. ಆದರೂ ದೇವದತ್ ಪಡಿಕ್ಕಲ್ ಅವರ ಸಾಧನೆ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಯುವ ಕ್ರಿಕೆಟಿಗರಿಗೆ ಪ್ರೇರಣೆಯಾಗಿದೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ