Connect with us

ದೇಶ

ಶಾರುಖ್​ಗೆ ಛೀಮಾರಿ ಹಾಕ್ತಿರೋ ಜನ, ದುಡ್ಡಿನ ಆಸೆಗೆ ಇದೆಂಥ ಕೆಲ್ಸ  ಪ್ರತಿಭಟನಾಕಾರರು

ಶಾರುಖ್ಗೆ ಛೀಮಾರಿ ಹಾಕ್ತಿರೋ ಜನ, ದುಡ್ಡಿನ ಆಸೆಗೆ ಇದೆಂಥ ಕೆಲ್ಸ ಪ್ರತಿಭಟನಾಕಾರರು
ಶಾರುಖ್ಗೆ ಛೀಮಾರಿ ಹಾಕ್ತಿರೋ ಜನ, ದುಡ್ಡಿನ ಆಸೆಗೆ ಇದೆಂಥ ಕೆಲ್ಸ ಪ್ರತಿಭಟನಾಕಾರರು

ಶಾರುಖ್​ ಖಾನ್​ ಪಠಾಣ್​ ಯಶಸ್ಸಿನ ಬಳಕಿ ಈಗ ಜವಾನ್​ ಖುಷಿಯಲ್ಲಿದ್ದಾರೆ. ಇವರ ಜವಾನ್​ ಚಿತ್ರಕ್ಕಾಗಿ ಫ್ಯಾನ್ಸ್​ ಕಾತರದಿಂದ ಕಾಯುತ್ತಿದ್ದಾರೆ. ಇದರ ನಡುವೆಯೇ ಈಗ ಮುಂಬೈನಲ್ಲಿರುವ ಶಾರುಖ್​ ಮನೆಯ ಮುಂದೆ ಮುಂಬೈ ಪೊಲೀಸರ ದೊಡ್ಡ ದಂಡೇ ಹರಿದುಬಂದಿದೆ. ಶಾರುಖ್​ ಮನೆಯ ಮುಂದೆ ಬಂದು ಒಂದಿಷ್ಟು ಜನ ಪ್ರತಿಭಟನೆ ಮಾಡುತ್ತಿದ್ದಾರೆ. ಅವರನ್ನು  ಚದುರಿಸಲು ಪೊಲೀಸರ ಕಣ್ಗಾವಲು ಹಾಕಲಾಗಿದೆ. ಇದಾಗಲೇ ಕೆಲವು ಮಂದಿಯನ್ನು ಅರೆಸ್ಟ್​  ಕೂಡ ಮಾಡಲಾಗಿದೆ. ಶಾರುಖ್​ ಮನೆ ಮನ್ನತ್​ ಮುಂದೆ ಪ್ರತಿಭಟನೆ ಮಾಡಲು ಬಂದವರನ್ನು ಪೊಲೀಸರು ಅರೆಸ್ಟ್​ ಮಾಡಿರುವ ಸುದ್ದಿ ವೈರಲ್​ ಆಗುತ್ತಲೇ ಶಾರುಖ್​ ಖಾನ್​ಗೇ ಅಭಿಮಾನಿಗಳು ಸೇರಿ ಜನರು ಬಯ್ಯುತ್ತಿದ್ದಾರೆ, ಚಿತ್ರ  ಮಾಡಿ ಸಹಸ್ರಾರು ಕೋಟಿ ರೂಪಾಯಿ ದುಡಿದದ್ದು ಸಾಲದು ಎಂದು ಇವೆಲ್ಲಾ ಕೆಟ್ಟ ಕೆಲಸ ಬೇಕಿತ್ತಾ ಅಂತಿದ್ದಾರೆ. ಪ್ರತಿಭಟನೆ ಮಾಡುತ್ತಿರುವುದೂ ಸರಿಯಾಗಿಯೇ ಇದೆ ಎನ್ನುತ್ತಿದ್ದಾರೆ.

ಅಷ್ಟಕ್ಕೂ ಈ ಪ್ರತಿಭಟನೆ ಯಾಕೆ? ಪೊಲೀಸರು ಬಂದಿದ್ದೇಕೆ ಎನ್ನುವುದಾದರೆ ವರದಿಗಳ ಪ್ರಕಾರ, ಶಾರುಖ್​ ಖಾನ್​ ಆನ್‌ಲೈನ್ ಗೇಮಿಂಗ್ ಅಪ್ಲಿಕೇಶನ್‌ ಪ್ರಚಾರ ಮಾಡುತ್ತಿರುವುದಕ್ಕೆ! ಕೆಲವೊಂದು ಆನ್​ಲೈನ್​ ಗೇಮ್ಸ್​ ರಾಯಭಾರಿಯಾಗಿ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ. ಬಹುತೇಕರಿಗೆ ತಿಳಿದಿರುವಂತೆ  ಆನ್​ಲೈನ್​ ಗೇಮ್​ ಆಡಿ ಇದ್ದದ್ದನ್ನೆಲ್ಲಾ ಕಳೆದುಕೊಂಡು ಹುಚ್ಚರಾದವರೂ ಇದ್ದಾರೆ, ಪ್ರಾಣ ಕಳೆದುಕೊಂಡವರೂ ಇದ್ದಾರೆ. ಇದರ ಚಟಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡವರಲ್ಲಿ ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದೇ ಕಾರಣಕ್ಕೆ ಕೋರ್ಟ್​ ಕೂಡ ಈ ಹಿಂದೆ  ಆನ್​ಲೈನ್​ ಗೇಮಿಂಗ್​ ಬ್ಯಾನ್​ಗೆ ಆದೇಶಿಸಿತ್ತು. ಆದರೆ ಅದ್ಯಾವುದೋ ಕಾರಣಕ್ಕೆ ಕೋರ್ಟ್​ ಕೂಡ ಇದಕ್ಕೆ ಸಮ್ಮತಿ ಸೂಚಿಸಿದಾಗಿನಿಂದಲೂ ಮತ್ತೆ ಆನ್​ಲೈನ್​ ಗೇಮ್​ ಎಂಬ ರಾಕ್ಷಸನ ತೆಕ್ಕೆಗೆ ಯುವ ಪೀಳಿಗೆ ಸಾಗುತ್ತಿದೆ. 

ಯಾವುದೇ ಜಾಹೀರಾತು ಮಾಡುವುದಿದ್ದರೂ ಜಾಹೀರಾತು ಕಂಪೆನಿಗಳು ನಟರನ್ನು ಇಲ್ಲವೇ ಕ್ರಿಕೆಟ್​ ತಾರೆಯರನ್ನು  ತಮ್ಮ ಮೊದಲ ಆಯ್ಕೆ ಮಾಡಿಕೊಳ್ಳುವುದು ಸಹಜ. ಅದರಲ್ಲಿಯೂ ವಿಷಕಾರಿ ಪಾನೀಯವೇ ಇರಲಿ, ಯುವ ಸಮುದಾಯವನ್ನು ಹಾಳು ಮಾಡುವ ಯಾವುದೇ ವಸ್ತುವಿರಲಿ, ಆಟವಿರಲಿ… ಇವುಗಳಿಗೆ ನಟರು ಹಾಗೂ ಕ್ರಿಕೆಟಿಗರನ್ನು ಹಾಕಿಕೊಂಡರೆ ಸುಲಭದಲ್ಲಿ ಯುವಕರು ಮರುಳಾಗುತ್ತಾರೆ ಎನ್ನುವ ಅರಿವು ಜಾಹೀರಾತು ಕಂಪೆನಿಗಳಿಗೆ ಇದೆ. ಅವರು ನೀಡುವ ಕೋಟಿ ಕೋಟಿ ಆಸೆಗೆ ಬಿದ್ದು ನಟರು ಕೂಡ ಇವುಗಳಿಗೆ ರಾಯಭಾರಿಗಳಾಗಿ ಹೋಗುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಇದೀಗ ಜನರೇ ಶಾರುಖ್​ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಆನ್​ಲೈನ್​ ಗೇಮಿಂಗ್​  ಆ್ಯಪ್‌ಗಳು ಯುವಕರನ್ನು ದಾರಿ ತಪ್ಪಿಸುತ್ತವೆ ಮತ್ತು ಭ್ರಷ್ಟಗೊಳಿಸುತ್ತವೆ ಮತ್ತು ಸೆಲೆಬ್ರಿಟಿಗಳು ಅವುಗಳನ್ನು ಸಮರ್ಥಿಸಬಾರದು ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಘಟನೆಯ ಅಧಿಕೃತ ಹೇಳಿಕೆಯಲ್ಲಿ, ‘ಪ್ರಸಿದ್ಧ ನಟರು ಮತ್ತು ನಟಿಯರು ಈ ಜಾಹೀರಾತುಗಳಲ್ಲಿ ಕೆಲಸ ಮಾಡುತ್ತಾರೆ ಮತ್ತು ಅವರು ಸಮಾಜವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಶಾರುಖ್ ಖಾನ್ ಅವರ ಮನ್ನತ್ ಬಂಗಲೆಯ ಹೊರಗೆ ಅನ್‌ಟಚ್ ಇಂಡಿಯಾ ಫೌಂಡೇಶನ್ ಪರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಲಾಗಿದೆ.  ಹೊಸ ತಲೆಮಾರು ಜಂಗ್ಲಿ ರಮ್ಮಿ ಆಡುವುದರಲ್ಲಿ ತೊಡಗಿಸಿಕೊಂಡಿದೆ. ಯಾರಾದರೂ ಜಂಗ್ಲೀ ರಮ್ಮಿ ಆಡುತ್ತಿದ್ದರೆ ಅಥವಾ ಹೊರಗೆ ಜೂಜಾಡುತ್ತಿದ್ದರೆ, ಪೊಲೀಸರು ಅವರನ್ನು ಬಂಧಿಸುತ್ತಾರೆ, ಆದರೆ ಆನ್‌ಲೈನ್ ಆಟಗಳನ್ನು ಉತ್ತೇಜಿಸುವ ದೊಡ್ಡ ಬಾಲಿವುಡ್ ತಾರೆಗಳು ಯುವ ಪೀಳಿಗೆಯನ್ನು ದಾರಿ ತಪ್ಪಿಸುತ್ತಿದ್ದಾರೆ. ಇದು ತಪ್ಪು ಎಂದು ಬಾಲಿವುಡ್ ತಾರೆಯರಿಗೂ ಗೊತ್ತಿದೆ, ಆದರೆ ಅವರು ಹಣ ಪಡೆಯುತ್ತಿದ್ದಾರೆ. ಆದ್ದರಿಂದ ಅವರು ಪ್ರಚಾರ ಮಾಡುತ್ತಿದ್ದಾರೆ. ನಾವು ಈ ಸ್ಟಾರ್‌ಗಳನ್ನು ಅವರ ಚಲನಚಿತ್ರಗಳನ್ನು ನೋಡಿ ನಮ್ಮ ಹಣವನ್ನು ಖರ್ಚು ಮಾಡುವ ಮೂಲಕ ಪ್ರಸಿದ್ಧರಾಗುತ್ತೇವೆ. ಈ ಜಾಹೀರಾತುಗಳನ್ನು ನಿಲ್ಲಿಸಲು ನಾವು ಒತ್ತಾಯಿಸುತ್ತೇವೆ. ಈ ಅಪ್ಲಿಕೇಶನ್‌ಗಳು ಕಾನೂನುಬಾಹಿರ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ನಾವು ಅಜಯ್ ದೇವಗನ್, ರಾಕುಲ್ ಪ್ರೀತ್ ಸಿಂಗ್, ಪ್ರಕಾಶ್ ರಾಜ್, ಅಣ್ಣು ಕಪೂರ್, ರಾಣಾ ದಗ್ಗುಬಾಟಿ ಮತ್ತು ಆನ್‌ಲೈನ್ ಆಟವನ್ನು ಉತ್ತೇಜಿಸುವ ಕ್ರಿಕೆಟಿಗರನ್ನು ವಿರೋಧಿಸುತ್ತೇವೆ. ಈ ತಾರೆಯರ ಮನೆಗಳ ಹೊರಗೆ ನಾವು ಪ್ರತಿಭಟನೆ ಮಾಡಲು ಬಯಸಿದ್ದೇವೆ, ಆದರೆ ಪೊಲೀಸರು ನಮ್ಮನ್ನು ಬಂಧಿಸಿದ್ದಾರೆ ಎಂದು ಜನ ಆಕ್ರೋಶ ಹೊರಹಾಕುತ್ತಿದ್ದಾರೆ. ಇದರ ನಡುವೆಯೇ ಪೊಲೀಸ್​ ಭದ್ರತೆ ಇಷ್ಟೆಲ್ಲಾ ನೀಡುತ್ತಿರುವುದಕ್ಕೆ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮುಂಬೈನಲ್ಲಿ ಮೊದಲೇ ಪೊಲೀಸರ ಕೊರತೆ ಇದೆ. ಇರೋ ಪೊಲೀಸರನ್ನು ಇಂಥವರ ರಕ್ಷಣೆಗೆ ಇಟ್ಟರೆ ದೆಹಲಿಯ ಕಥೆಯೇನು ಕೇಳುತ್ತಿದ್ದಾರೆ

ದೇಶ

ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.

ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.

🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್‌ಸ್ಟ್ರಿಪ್‌ಗಳು, ಹೆಲಿಪ್ಯಾಡ್‌ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:

  • ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
  • ಸಿಸಿಟಿವಿ ಕಣ್ಗಾವಲು ಬಿಗಿತ
  • ಸರಕು, ಪಾರ್ಸೆಲ್ ಮತ್ತು ಮೇಲ್‌ಗಳ ತಪಾಸಣೆ
  • ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ

🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:

ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.

Continue Reading

ದೇಶ

ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್‌ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್‌ ಮೌಲ್ಯದ ಪಲ್ಲಾಡಿಯಮ್‌ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್‌ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್‌ಎನ್‌ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.

ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.

ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Continue Reading

ಕ್ರೀಡೆ

ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.

ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.

Continue Reading

Trending