ರಾಜಕೀಯ
ಮುಡಾ ಹಗರಣ ಗಂಭೀರವಾದದ್ದು, ಸಿಬಿಐ ತನಿಖೆಗೆ ವಹಿಸಿ: ಸಂಸದ ಯದುವೀರ್ ಒಡೆಯರ್ – MP Yaduveer Wadiyar
ಮೈಸೂರು : ಮುಡಾ ಹಗರಣ ಗಂಭೀರ ಪ್ರಕರಣ. ಆದ್ದರಿಂದ ಓಪನ್ ಅಥವಾ ಮುಕ್ತವಾಗಿ ತನಿಖೆ ಮಾಡಬೇಕಾಗಿದೆ ಹಾಗೂ ಈ ಹಗರಣದಲ್ಲಿ ಸಿಎಂ ಹೆಸರು ಕೇಳಿ ಬಂದಿದ್ದರಿಂದ ಮುಡಾ ಹಗರಣ ಸಿಬಿಐಗೆ ತನಿಖೆಗೆ ವಹಿಸಬೇಕು ಎಂದು ಮೈಸೂರಿನಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದ್ದಾರೆ.
ಇಂದು ತಮ್ಮ ಮೈಸೂರಿನ ಕಚೇರಿಯಲ್ಲಿ ಈಟಿವಿ ಭಾರತ್ ಜತೆ ಮಾತನಾಡಿದ ಅವರು, ಮುಡಾ ಹಗರಣ ಗಂಭೀರವಾದ ಪ್ರಕರಣ, ಇದನ್ನ ಮುಕ್ತ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಬೇಕು. ಬಿಜೆಪಿ ವರಿಷ್ಠರು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ ಎಂದು ತಿಳಿಸಿದರು.
ಅಭಿವೃದ್ಧಿಗೆ ಸಭೆ ಮಾಡುತ್ತೇನೆ : ಮೈಸೂರು – ಕೊಡಗು ಅಭಿವೃದ್ಧಿಗೆ ಈಗಾಗಲೇ ಕೊಡಗಿನಲ್ಲಿ ಸಭೆ ನಡೆಸಲಾಗಿದೆ. ಮೈಸೂರಿನಲ್ಲಿ ಹೊಸ ಜಿಲ್ಲಾಧಿಕಾರಿ ಬಂದಿದ್ದಾರೆ. ಹೀಗಾಗಿ ಅವರು ಸಭೆ ನಡೆಸಲು ಸ್ವಲ್ಪ ಕಾಲಾವಕಾಶ ಕೇಳಿದ್ದಾರೆ. ಇದರ ಜತೆಗೆ ರೈಲ್ವೆ ಯೋಜನೆಗಳು ಹಾಗೂ ಏರ್ಪೋರ್ಟ್ ವಿಸ್ತೀರ್ಣದ ಬಗ್ಗೆ ಸಭೆ ನಡೆಸಲಾಗಿದೆ. ಇದರ ಜತೆಗೆ ಮೈಸೂರು ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನ ತರುವ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಎರಡು ಜಿಲ್ಲೆಯಲ್ಲಿ ಕಚೇರಿ ತೆರೆಯುತ್ತೇನೆ : ಮುಂದಿನ ತಿಂಗಳು ಮುಡಾದಲ್ಲಿ ಸಂಸದರ ನೂತನ ಕಚೇರಿ ತೆರೆಯಲಾಗುವುದು ಹಾಗೂ ಈಗಾಗಲೇ ಕುವೆಂಪು ನಗರದಲ್ಲಿ ಕಚೇರಿಯಿದ್ದು, ಇದರ ಜತೆಗೆ ಮಡಿಕೇರಿಯಲ್ಲೂ ಸಹ ಕಚೇರಿ ತೆರೆಯುತ್ತೇನೆ. ಜನರಿಗೆ ಅನುಕೂಲವಾಗುವಂತೆ ಈ ಕಚೇರಿಗಳು ಕೆಲಸ ಮಾಡಲಿದ್ದು, ಯಾವುದೇ ಆದರೂ ಕಚೇರಿಯಲ್ಲಿ ನೇರವಾಗಿ ನನ್ನನ್ನ ಅಥವಾ ನಮ್ಮ ಕಚೇರಿಯ ಸಹಾಯಕರನ್ನ ಸಂಪರ್ಕಿಸಬಹುದು ಎಂದು ಹೇಳಿದ ಅವರು, ಮೈಸೂರು -ಕೊಡಗಿನ ಜನತೆಗೆ ಬಹಳಷ್ಟು ನಿರೀಕ್ಷೆಗಳಿದ್ದು, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿದ್ದೇನೆ ಎಂದರು.
ಮೊದಲ ಬಾರಿಗೆ ಸಂಸದನಾಗಿ ಪಾರ್ಲಿಮೆಂಟ್ಗೆ ಪ್ರವೇಶ ಮಾಡಿದ್ದು ಹೊಸ ಅನುಭವ ತಂದಿದೆ ಎಂದು ತಮ್ಮ ಹೊಸ ಅನುಭವದ ಬಗ್ಗೆ ಹೇಳಿಕೊಂಡರು.
ದೇಶ
“ನ್ಯಾಯ ಸಿಗುವವರೆಗೂ ಕೂದಲು ಬಾಚಲ್ಲ!” – ತಾಯಿಯ ಶಪಥ ರಾಜಕೀಯಕ್ಕೆ
ಕೋಲ್ಕತ: RG Kar Medical College and Hospital ನಲ್ಲಿ ನಡೆದ ಅತ್ಯಾಚಾರ-ಕೊಲೆ ಪ್ರಕರಣ ಮತ್ತೆ ರಾಜಕೀಯ ಕಾವು ಪಡೆದಿದೆ. ಮೃತ ಟ್ರೈನಿ ವೈದ್ಯೆಯ ತಾಯಿ ರತ್ನ ದೇಬ್ನಾಥ್, ನ್ಯಾಯಕ್ಕಾಗಿ ಹೋರಾಟ ಮುಂದುವರೆಸುತ್ತಾ ಇದೀಗ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿರುವುದು ಸಂಚಲನ ಮೂಡಿಸಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ Mamata Banerjee ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, ಪ್ರಕರಣದ ದಿಕ್ಕು ತಪ್ಪಿಸಲು ಸರ್ಕಾರವೇ ಪ್ರಯತ್ನಿಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. “ನನ್ನ ಮಗಳಿಗೆ ನ್ಯಾಯ ಸಿಗುವವರೆಗೆ ನಾನು ಕೂದಲು ಬಾಚಿಕೊಳ್ಳುವುದಿಲ್ಲ” ಎಂದು ಅವರು ಶಪಥ ಮಾಡಿದ್ದಾರೆ.
2024ರ ಆಗಸ್ಟ್ 9ರಂದು ಕೋಲ್ಕತದ ವೈದ್ಯಕೀಯ ಕಾಲೇಜಿನಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಸಾವಿರಾರು ವೈದ್ಯರು ಮತ್ತು ವಿದ್ಯಾರ್ಥಿಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದರು.
ಈ ಪ್ರಕರಣದ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, ತನಿಖೆಯನ್ನು Central Bureau of Investigation (CBI) ಗೆ ವರ್ಗಾಯಿಸಿತ್ತು. ಸದ್ಯ ಪ್ರಕರಣ ವಿಚಾರಣೆ ಹಂತದಲ್ಲಿದ್ದು, ಹಲವರನ್ನು ಬಂಧಿಸಲಾಗಿದೆ.
ಇದೀಗ ರತ್ನ ದೇಬ್ನಾಥ್ ಅವರು Bharatiya Janata Party ಪರವಾಗಿ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದು, ಮಮತಾ ಬ್ಯಾನರ್ಜಿ ವಿರುದ್ಧ ನೇರ ಪೈಪೋಟಿಗೆ ಇಳಿದಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆಯ 294 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಫಲಿತಾಂಶ ಮೇ 4ರಂದು ಹೊರಬೀಳಲಿದೆ. ಈ ನಡುವೆ, ನ್ಯಾಯಕ್ಕಾಗಿ ತಾಯಿಯ ಹೋರಾಟ ರಾಜಕೀಯ ಅಂಗಳಕ್ಕೂ ವಿಸ್ತರಿಸಿದ್ದು, ಇದು ಮತದಾರರ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದು ಕುತೂಹಲ ಮೂಡಿಸಿದೆ.
ದೇಶ
ಜನತಾ ದರ್ಶನದಲ್ಲಿ ಹೈಡ್ರಾಮಾ: ಕೆಆರ್ಎಸ್ ಮುಖಂಡರನ್ನು ಎಳೆದೊಯ್ದ ಪೊಲೀಸರು
ತುಮಕೂರು: ಜನತಾ ದರ್ಶನ ಕಾರ್ಯಕ್ರಮದ ವೇಳೆ ಗೃಹ ಸಚಿವ G. Parameshwara ಅವರಿಗೆ ಮನವಿ ಸಲ್ಲಿಸಲು ಬಂದಿದ್ದ Karnataka Rashtra Samithi (ಕೆಆರ್ಎಸ್) ಮುಖಂಡರನ್ನು ಪೊಲೀಸರು ಎಳೆದೊಯ್ದ ಘಟನೆ ಹೈಡ್ರಾಮಾಗೆ ಕಾರಣವಾಯಿತು.
ಕಾರ್ಯಕ್ರಮಕ್ಕೆ ಮುಂಚಿತವಾಗಿ ನೋಂದಣಿ ಮಾಡಿಕೊಂಡಿದ್ದರೂ ಮನವಿ ಸಲ್ಲಿಸಲು ಅವಕಾಶ ಸಿಕ್ಕಿರಲಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಈ ನಡುವೆ ಸಭೆ ಮುಗಿಸಿ ಹೊರಟ ಗೃಹ ಸಚಿವರಿಗೆ ಕೆಆರ್ಎಸ್ ಮುಖಂಡ ಮಲ್ಲಿಕಾರ್ಜುನ್ ಮನವಿ ನೀಡಲು ಮುಂದಾದರು.
ಈ ವೇಳೆ ಪಕ್ಷದ ರಾಜ್ಯ ಉಪಾಧ್ಯಕ್ಷ ಸೋಮಸುಂದರ್ ಫೇಸ್ಬುಕ್ ಲೈವ್ ಮಾಡುತ್ತಿದ್ದರು. ಲೈವ್ ನಿಲ್ಲಿಸುವಂತೆ ಸೂಚನೆ ನೀಡಿದರೂ ಅದನ್ನು ನಿಲ್ಲಿಸಲಾಗಲಿಲ್ಲ. ಇದರಿಂದ ಅಸಮಾಧಾನಗೊಂಡ ಪೊಲೀಸರು ಸೋಮಸುಂದರ್ ಅವರನ್ನು ಸ್ಥಳದಲ್ಲೇ ಹಿಡಿದು ಎಳೆದೊಯ್ದು ವಶಕ್ಕೆ ಪಡೆದಿದ್ದಾರೆ.
ಘಟನೆ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಯಿತು.
ಡಿಸಿ Shubha Kalyan ಹಾಗೂ ಎಸ್ಪಿ Ashok ಕಳೆದ ಎರಡು ವರ್ಷಗಳಿಂದ ವರ್ಗಾವಣೆ ಆಗದೇ ಜಿಲ್ಲೆಯಲ್ಲೇ ಮುಂದುವರಿದಿರುವುದನ್ನು ವಿರೋಧಿಸಿ ಈ ಮನವಿ ನೀಡಲಾಗಿತ್ತು ಎಂದು ತಿಳಿದುಬಂದಿದೆ.
ಈ ಘಟನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಜನತಾ ದರ್ಶನದಲ್ಲಿ ಸುರಕ್ಷತೆ ಮತ್ತು ಸ್ವಾತಂತ್ರ್ಯದ ಬಗ್ಗೆ ಪ್ರಶ್ನೆಗಳು ಎದ್ದಿವೆ.
ಚುನಾವಣೆ
ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ? ಆಂತರಿಕ ವರದಿ ಏನು ಹೇಳುತ್ತದೆ
ದಾವಣಗೆರೆ: ದಾವಣಗೆರೆ ದಕ್ಷಿಣ ಹಾಗೂ Bagalkote ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಅನಿವಾರ್ಯ ಎಂಬ ವಿಶ್ವಾಸ ವ್ಯಕ್ತವಾಗಿದೆ. ತಮ್ಮದೇ ಸರ್ಕಾರ ಇರುವುದರಿಂದ ಹಾಗೂ ಕಳೆದ ಚುನಾವಣೆಯಲ್ಲಿ ಗೆದ್ದ ಕ್ಷೇತ್ರಗಳಾಗಿರುವ ಹಿನ್ನೆಲೆ ಕಾಂಗ್ರೆಸ್ ಪಕ್ಷ ಭಾರೀ ಪ್ರಚಾರ ನಡೆಸಿದೆ.
ಮುಖ್ಯಮಂತ್ರಿ Siddaramaiah ಸೇರಿದಂತೆ ಇಡೀ ಸಚಿವ ಸಂಪುಟವೇ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಗ್ರಾಮಗ್ರಾಮಗಳಲ್ಲಿ ಮತಯಾಚನೆ ನಡೆಸಲಾಗಿದೆ. ಆದರೆ, ಬಿಜೆಪಿ ಕೂಡ ತೀವ್ರ ಪೈಪೋಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ಸೂಚಿಸುತ್ತಿವೆ.
ಉಪಮುಖ್ಯಮಂತ್ರಿ D. K. Shivakumar ಬಹಿರಂಗಪಡಿಸಿದ ಆಂತರಿಕ ಸಮೀಕ್ಷೆಯ ಪ್ರಕಾರ, ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಶೇ.70 ಕ್ಕಿಂತ ಹೆಚ್ಚು ಮತ ಸಿಗುವ ನಿರೀಕ್ಷೆ ಇದೆ. ಸುಮಾರು 1 ಲಕ್ಷ ಜನರನ್ನು ಸಂಪರ್ಕಿಸಿ ನಡೆಸಿದ ಸಮೀಕ್ಷೆಯಲ್ಲಿ ಈ ಅಂಕಿಅಂಶಗಳು ಹೊರಬಂದಿವೆ.
ಶಾಮನೂರು ಶಿವಶಂಕರಪ್ಪ ಅವರ ಸೇವಾ ಮನೋಭಾವ ಮತ್ತು ಎಲ್ಲಾ ಧರ್ಮಗಳ ನಡುವೆ ಸಮಾನತೆ ಕಾಪಾಡಿದ ಆಡಳಿತ ಜನರಲ್ಲಿ ಒಳ್ಳೆಯ ಅಭಿಪ್ರಾಯ ಮೂಡಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಹೊಸ ಪೀಳಿಗೆಯ ಯುವಕರಿಗೆ ಅವಕಾಶ ನೀಡುವ ಮೂಲಕ ಅಭಿವೃದ್ಧಿಗೆ ಉತ್ತೇಜನ ಸಿಗಲಿದೆ ಎಂಬ ವಿಶ್ವಾಸವೂ ವ್ಯಕ್ತವಾಗಿದೆ.
ಇದೇ ವೇಳೆ, ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂಬ ವದಂತಿಯನ್ನು ತಳ್ಳಿ ಹಾಕಿದ ಡಿಕೆ ಶಿವಕುಮಾರ್, ಚುನಾವಣೆಯ ಬಳಿಕ ಬಾಕಿ ಹಣ ಬಿಡುಗಡೆ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ಮಹಿಳೆಯರು ಹಾಗೂ ಯುವಕರಿಗೆ ನೀಡಿರುವ ಯೋಜನೆಗಳು ಮುಂದುವರೆಯಲಿವೆ ಎಂದು ಅವರು ತಿಳಿಸಿದ್ದಾರೆ.
ಎರಡೂ ಕ್ಷೇತ್ರಗಳಲ್ಲಿ ಶಾಂತಿಯುತ ಪ್ರಚಾರ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಲಾಗಿದೆ. ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.
-
ದೇಶ11 hours agoಇಸ್ಲಾಮಾಬಾದ್ನಲ್ಲಿ ಅಮೆರಿಕಾ-ಇರಾನ್ ಶಾಂತಿ ಮಾತುಕತೆ: 2 ದಿನ ಸಾರ್ವಜನಿಕ ರಜೆ ಘೋಷಣೆ
-
ಚುನಾವಣೆ15 hours agoತಮಿಳುನಾಡು ರಾಜಕೀಯಕ್ಕೆ ವಿಜಯ್ ಎಂಟ್ರಿ: ‘ಟಿವಿಕೆ’ ಭವಿಷ್ಯ ಏನು?
-
ದೇಶ19 hours agoBeauty Tips : ಟ್ಯಾನಿಂಗ್ ಸಮಸ್ಯೆಗೆ ಮನೆಮದ್ದು: ಅರಿಶಿನದ ಅದ್ಭುತ ಪ್ರಯೋಜನ
-
ದೇಶ15 hours agoAAP ಒಳಗಲ್ಲಾಟ: ರಾಘವ್ ಚಡ್ಡಾ sidelined ಆಗಿರುವ ಹಿನ್ನಲೆ ಏನು?
-
ಕ್ರೀಡೆ11 hours agoಕೊಹ್ಲಿ ಹೋಲಿಕೆಗೆ ಬಾಬರ್ ಅಜಮ್ ಕಿಡಿ: ಪತ್ರಿಕಾಗೋಷ್ಠಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ
-
ದೇಶ19 hours agoಬಿಕಿನಿ ಬ್ಲೌಸ್ ಜೊತೆ ಸೀರೆ: ಆಕಾಂಕ್ಷಾ ಪುರಿಗೆ ಟ್ರೋಲ್ ಮಳೆ!
-
ದೇಶ11 hours agoಪಾಕಿಸ್ತಾನ ಮಧ್ಯಸ್ಥಿಕೆ ವಿರುದ್ಧ ಇಸ್ರೇಲ್ ಆಕ್ಷೇಪ: ಅಮೆರಿಕಾ-ಇರಾನ್ ಮಾತುಕತೆಗೆ ಹೊಸ ತಿರುವು
-
ದೇಶ10 hours ago“ನ್ಯಾಯ ಸಿಗುವವರೆಗೂ ಕೂದಲು ಬಾಚಲ್ಲ!” – ತಾಯಿಯ ಶಪಥ ರಾಜಕೀಯಕ್ಕೆ
