chandrayan 3
ಇಸ್ರೋ ವಿಜ್ಞಾನಿ ತೌಜಮ್ ರಘು ಸಿಂಗ್ ಎಂಬುವರು ಕೆಲಸದೊತ್ತಡದಿಂದ ಸುಮಾರು ೨ ವರ್ಷ ತಮ್ಮ ಮನೆಗೇ ಭೇಟಿ ನೀಡಿಲ್ಲ : ಚಂದ್ರಯಾನ ೩
ಬೆಂಗಳೂರು: ಚಂದ್ರಯಾನ ೩ರ ಯಶಸ್ಸಿನ ಹಿಂದೆ ಹಲವರ ಪರಿಶ್ರಮವಿದೆ, ಚಂದ್ರಯಾನ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಇಸ್ರೋ ವಿಜ್ಞಾನಿ ತೌಜಮ್ ರಘು ಸಿಂಗ್ ಎಂಬುವರು ಕೆಲಸದೊತ್ತಡದಿಂದ ಸುಮಾರು ೨ ವರ್ಷ ತಮ್ಮ ಮನೆಗೇ ಭೇಟಿ ನೀಡಿಲ್ಲ, ಚಂದ್ರಯಾನ ೩ ಯಶಸ್ವಿಯಾಗಬೇಕೆಂದು ಮನೆಗೆ ಹೋಗದೇ ಕೆಲಸದಲ್ಲಿ ಮುಳುಗಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ, ಚಂದ್ರಯಾನ ೩ ಯಶಸ್ವಿಯಾದ ಬಳಿಕ ಇವರು ಮಾತನಾಡಿ ನಾನು ಮನೆಯನ್ನು ಮಿಸ್ ಮಾಡಿಕೊಂಡೆ, ನನ್ನ ಪೋಷಕರೊಂದಿಗೆ ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದೆ, ಕೆಲಸದ ಕಾರಣ ೨ ವರ್ಷ ಮನೆಗೆ ಹೋಗಿಲ್ಲ ಎಂದು ಅವರು ಹೇಳಿದ್ದಾರೆ, ನಾವು ಈಗ ಗಗನಯಾನ ಮೇಲೆ ಗಮನವನ್ನು ಇಟ್ಟಿದ್ದೇವೆ,
chandrayaan 3
ಚಂದಿರನ ಮೇಲೆ ಸಲ್ಫರ್ ಪತ್ತೆ ಹಚ್ಚಿದ ಪ್ರಗ್ಯಾನ್ ರೋವರ್
ಬೆಂಗಳೂರು: ಚಂದ್ರನ ದಕ್ಷಿಣ ಧ್ರವದ ಮೇಲೆ ಅಧ್ಯಯನ ನಡೆಸುತ್ತಿರುವ ಪ್ರಗ್ಯಾನ್ ರೋವರ್ ಒಂದೊಂದು ಹೊಸ ಮಾಹಿತಿಯನ್ನು ರವಾನಿಸುತ್ತಿದೆ, ಇಸ್ರೋ ಚಂದ್ರನ ಮೇಲೆ ಸಲ್ಫರ್ ಇರುವುದನ್ನು ಪತ್ತೆ ಹೆಚ್ಚಿರುವುದಾಗಿ ತಿಳಿಸಿದೆ, ಪ್ರಗ್ಯಾನ್ ರೋವರ್ ಚಂದ್ರನ ಮೇಲೆ ಸಲ್ಫರ್ ಇರುವುದನ್ನು ಖಚಿತಪಡಿಸಿದೆ, ಜೊತೆಗೆ ವಿಜ್ಞಾನಿಗಳ ನಿರೀಕ್ಷೆಯಂತೆ ಅಲ್ಯೂಮಿನಿಯಂ, ಐರನ್, ಟೈಟಾನಿಯಂ, ಮ್ಯಾಂಗನೀಸ್, ಸಿಲಿಕಾನ್ ಹಾಗೂ ಆಕ್ಸಿಜನ ಕೂಡ ಇರುವುದನ್ನು ರೋವರ್ ಖಚಿತಪಡಿಸಿದೆ, ಹೈಡ್ರೋಜನ್ ಇರುವಿಕೆ ಬಗ್ಗೆ ಹುಡುಕಾಟ ನಡೆಸುತ್ತಿದೆ ಎಂದು ಇಸ್ರೋ ತಿಳಿಸಿದೆ,
chandrayaan 3
ಆ.23ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ವಾಗಿ ಘೋಷಣೆ, ಪ್ರತಿವರ್ಷ ಆಚರಣೆ
ನವದೆಹಲಿ : ಆಗಸ್ಟ್ 23ನ್ನ ‘ರಾಷ್ಟ್ರೀಯ ಬಾಹ್ಯಾಕಾಶ ದಿನ‘ ಎಂದು ಕೇಂದ್ರ ಸಚಿವ ಸಂಪುಟ ಮಂಗಳವಾರ ಘೋಷಿಸಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಇಳಿದಿದೆ.
ಚಂದ್ರಯಾನ -3 ಮಿಷನ್ ಗಾಗಿ ಕೆಲಸ ಮಾಡಿದ ಇಸ್ರೋ ವಿಜ್ಞಾನಿಗಳ ಐತಿಹಾಸಿಕ ಯಶಸ್ಸನ್ನ ಕ್ಯಾಬಿನೆಟ್ ಶ್ಲಾಘಿಸಿತು.
ಇದು ಜಾಗತಿಕ ವೇದಿಕೆಯಲ್ಲಿ ನಮ್ಮ ಶಕ್ತಿಯ ಸಂಕೇತವಾಗಿದೆ. ಆಗಸ್ಟ್ 23ನ್ನ ‘ರಾಷ್ಟ್ರೀಯ ವಿಜ್ಞಾನ ದಿನ’ ಎಂದು ಆಚರಿಸುವ ಕ್ರಮವನ್ನ ಕ್ಯಾಬಿನೆಟ್ ಸ್ವಾಗತಿಸುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಕ್ಯಾಬಿನೆಟ್ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಆಗಸ್ಟ್ 26 ರಂದು ಬೆಂಗಳೂರಿನ ಇಸ್ರೋ ಕಮಾಂಡ್ ಸೆಂಟರ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದರು. “ಇಂದಿನ ಯುಗದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದುವರಿಯುತ್ತಿರುವ ದೇಶವು ಇತಿಹಾಸವನ್ನ ಪಟ್ಟಿ ಮಾಡುತ್ತದೆ. ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ನಮ್ಮ ಯುವ ಪೀಳಿಗೆಯನ್ನ ಪ್ರೋತ್ಸಾಹಿಸಲು, ನಮ್ಮ ಚಂದ್ರಯಾನ -3 ಲ್ಯಾಂಡರ್ ಚಂದ್ರನನ್ನ ಸ್ಪರ್ಶಿಸಿದ ದಿನವಾದ ಆಗಸ್ಟ್ 23ನ್ನ ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲು ನಾವು ನಿರ್ಧರಿಸಿದ್ದೇವೆ” ಎಂದು ಪ್ರಧಾನಿ ಹೇಳಿದರು.
-
ಕ್ರೀಡೆ11 hours ago15ರ ಹರೆಯದಲ್ಲೇ ಐಪಿಎಲ್ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ! 5 ಪ್ರಶಸ್ತಿಗಳೊಂದಿಗೆ ಭರ್ಜರಿ ದಾಖಲೆ
-
ಕ್ರೀಡೆ12 hours agoಸತತ 2ನೇ ಕಿರೀಟ ಗೆದ್ದ ಆರ್ಸಿಬಿ; ಫೈನಲ್ ಬಳಿಕ ಗುಜರಾತ್ ಬಸ್ನಲ್ಲಿ ಬೆಂಕಿ
-
ಕ್ರೀಡೆ11 hours agoವಿರಾಟ್ ಕೊಹ್ಲಿ ಮಾಸ್ಟರ್ ಕ್ಲಾಸ್; ಆರ್ಸಿಬಿ ಐತಿಹಾಸಿಕ ಗೆಲುವಿಗೆ MLA S T Somashekhar ಮೆಚ್ಚುಗೆ
-
ದೇಶ9 hours ago3.2 ಕೋಟಿ ಸೊಳ್ಳೆಗಳನ್ನು ಬಿಡುಗಡೆ ಮಾಡಲು ಗೂಗಲ್ ಯೋಜನೆ! ಕಾರಣ ತಿಳಿದರೆ ಅಚ್ಚರಿ
-
ಕ್ರೀಡೆ8 hours ago‘We Did It Twice’ ಟೀ-ಶರ್ಟ್ ವೈರಲ್! ಆರ್ಸಿಬಿ ಗೆಲುವಿನ ಅಪರೂಪದ ಫೋಟೋ ಹಂಚಿಕೊಂಡ ಅನುಷ್ಕಾ ಶರ್ಮಾ
-
ದೇಶ9 hours agoಅಮಾನತು ಬಳಿಕ ಜಮೀರ್ ಸರದಿ? ಕಾಂಗ್ರೆಸ್ನಲ್ಲಿ ಶಿಸ್ತು ಕ್ರಮದ ಚರ್ಚೆ
-
ದೇಶ5 hours agoಬಿಜೆಪಿ ಹೈಕಮಾಂಡ್ನ ದೊಡ್ಡ ಪ್ಲಾನ್! ಕರ್ನಾಟಕದಲ್ಲಿ ಹೊಸ ನಾಯಕತ್ವಕ್ಕೆ ವೇದಿಕೆ?