chandrayan 3
ಇಸ್ರೋ ವಿಜ್ಞಾನಿ ತೌಜಮ್ ರಘು ಸಿಂಗ್ ಎಂಬುವರು ಕೆಲಸದೊತ್ತಡದಿಂದ ಸುಮಾರು ೨ ವರ್ಷ ತಮ್ಮ ಮನೆಗೇ ಭೇಟಿ ನೀಡಿಲ್ಲ : ಚಂದ್ರಯಾನ ೩
ಬೆಂಗಳೂರು: ಚಂದ್ರಯಾನ ೩ರ ಯಶಸ್ಸಿನ ಹಿಂದೆ ಹಲವರ ಪರಿಶ್ರಮವಿದೆ, ಚಂದ್ರಯಾನ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಇಸ್ರೋ ವಿಜ್ಞಾನಿ ತೌಜಮ್ ರಘು ಸಿಂಗ್ ಎಂಬುವರು ಕೆಲಸದೊತ್ತಡದಿಂದ ಸುಮಾರು ೨ ವರ್ಷ ತಮ್ಮ ಮನೆಗೇ ಭೇಟಿ ನೀಡಿಲ್ಲ, ಚಂದ್ರಯಾನ ೩ ಯಶಸ್ವಿಯಾಗಬೇಕೆಂದು ಮನೆಗೆ ಹೋಗದೇ ಕೆಲಸದಲ್ಲಿ ಮುಳುಗಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ, ಚಂದ್ರಯಾನ ೩ ಯಶಸ್ವಿಯಾದ ಬಳಿಕ ಇವರು ಮಾತನಾಡಿ ನಾನು ಮನೆಯನ್ನು ಮಿಸ್ ಮಾಡಿಕೊಂಡೆ, ನನ್ನ ಪೋಷಕರೊಂದಿಗೆ ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದೆ, ಕೆಲಸದ ಕಾರಣ ೨ ವರ್ಷ ಮನೆಗೆ ಹೋಗಿಲ್ಲ ಎಂದು ಅವರು ಹೇಳಿದ್ದಾರೆ, ನಾವು ಈಗ ಗಗನಯಾನ ಮೇಲೆ ಗಮನವನ್ನು ಇಟ್ಟಿದ್ದೇವೆ,
chandrayaan 3
ಚಂದಿರನ ಮೇಲೆ ಸಲ್ಫರ್ ಪತ್ತೆ ಹಚ್ಚಿದ ಪ್ರಗ್ಯಾನ್ ರೋವರ್
ಬೆಂಗಳೂರು: ಚಂದ್ರನ ದಕ್ಷಿಣ ಧ್ರವದ ಮೇಲೆ ಅಧ್ಯಯನ ನಡೆಸುತ್ತಿರುವ ಪ್ರಗ್ಯಾನ್ ರೋವರ್ ಒಂದೊಂದು ಹೊಸ ಮಾಹಿತಿಯನ್ನು ರವಾನಿಸುತ್ತಿದೆ, ಇಸ್ರೋ ಚಂದ್ರನ ಮೇಲೆ ಸಲ್ಫರ್ ಇರುವುದನ್ನು ಪತ್ತೆ ಹೆಚ್ಚಿರುವುದಾಗಿ ತಿಳಿಸಿದೆ, ಪ್ರಗ್ಯಾನ್ ರೋವರ್ ಚಂದ್ರನ ಮೇಲೆ ಸಲ್ಫರ್ ಇರುವುದನ್ನು ಖಚಿತಪಡಿಸಿದೆ, ಜೊತೆಗೆ ವಿಜ್ಞಾನಿಗಳ ನಿರೀಕ್ಷೆಯಂತೆ ಅಲ್ಯೂಮಿನಿಯಂ, ಐರನ್, ಟೈಟಾನಿಯಂ, ಮ್ಯಾಂಗನೀಸ್, ಸಿಲಿಕಾನ್ ಹಾಗೂ ಆಕ್ಸಿಜನ ಕೂಡ ಇರುವುದನ್ನು ರೋವರ್ ಖಚಿತಪಡಿಸಿದೆ, ಹೈಡ್ರೋಜನ್ ಇರುವಿಕೆ ಬಗ್ಗೆ ಹುಡುಕಾಟ ನಡೆಸುತ್ತಿದೆ ಎಂದು ಇಸ್ರೋ ತಿಳಿಸಿದೆ,
chandrayaan 3
ಆ.23ರಂದು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ವಾಗಿ ಘೋಷಣೆ, ಪ್ರತಿವರ್ಷ ಆಚರಣೆ
ನವದೆಹಲಿ : ಆಗಸ್ಟ್ 23ನ್ನ ‘ರಾಷ್ಟ್ರೀಯ ಬಾಹ್ಯಾಕಾಶ ದಿನ‘ ಎಂದು ಕೇಂದ್ರ ಸಚಿವ ಸಂಪುಟ ಮಂಗಳವಾರ ಘೋಷಿಸಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಇಳಿದಿದೆ.
ಚಂದ್ರಯಾನ -3 ಮಿಷನ್ ಗಾಗಿ ಕೆಲಸ ಮಾಡಿದ ಇಸ್ರೋ ವಿಜ್ಞಾನಿಗಳ ಐತಿಹಾಸಿಕ ಯಶಸ್ಸನ್ನ ಕ್ಯಾಬಿನೆಟ್ ಶ್ಲಾಘಿಸಿತು.
ಇದು ಜಾಗತಿಕ ವೇದಿಕೆಯಲ್ಲಿ ನಮ್ಮ ಶಕ್ತಿಯ ಸಂಕೇತವಾಗಿದೆ. ಆಗಸ್ಟ್ 23ನ್ನ ‘ರಾಷ್ಟ್ರೀಯ ವಿಜ್ಞಾನ ದಿನ’ ಎಂದು ಆಚರಿಸುವ ಕ್ರಮವನ್ನ ಕ್ಯಾಬಿನೆಟ್ ಸ್ವಾಗತಿಸುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಕ್ಯಾಬಿನೆಟ್ ಸಭೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಆಗಸ್ಟ್ 26 ರಂದು ಬೆಂಗಳೂರಿನ ಇಸ್ರೋ ಕಮಾಂಡ್ ಸೆಂಟರ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದರು. “ಇಂದಿನ ಯುಗದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದುವರಿಯುತ್ತಿರುವ ದೇಶವು ಇತಿಹಾಸವನ್ನ ಪಟ್ಟಿ ಮಾಡುತ್ತದೆ. ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ನಮ್ಮ ಯುವ ಪೀಳಿಗೆಯನ್ನ ಪ್ರೋತ್ಸಾಹಿಸಲು, ನಮ್ಮ ಚಂದ್ರಯಾನ -3 ಲ್ಯಾಂಡರ್ ಚಂದ್ರನನ್ನ ಸ್ಪರ್ಶಿಸಿದ ದಿನವಾದ ಆಗಸ್ಟ್ 23ನ್ನ ರಾಷ್ಟ್ರೀಯ ಬಾಹ್ಯಾಕಾಶ ದಿನವಾಗಿ ಆಚರಿಸಲು ನಾವು ನಿರ್ಧರಿಸಿದ್ದೇವೆ” ಎಂದು ಪ್ರಧಾನಿ ಹೇಳಿದರು.
-
ಬೆಂಗಳೂರು22 ಗಂಟೆಗಳು agoLiver ಚಿಕಿತ್ಸೆಗೆ ಗುಡ್ ನ್ಯೂಸ್: ಹಲವು ತಜ್ಞರು ಒಂದೇ ಕಡೆ, ರೋಗಿಗಳಿಗೆ ಸುಲಭ ಚಿಕಿತ್ಸೆ
-
ಬೆಂಗಳೂರು3 ಗಂಟೆಗಳು agoMake My Propertyz ಟೈಟಲ್ ಸ್ಪಾನ್ಸರ್; ಮೋಹನ್, ಆಂಜನಪ್ಪ, ಹರೀಶ್, ಸಂತೋಷ್, ಗೌರೀಶ್, Hosa Suddi, ಶಿವಕುಮಾರ್ರಿಂದ ಕ್ರೀಡೆಗೆ ಬೆಂಬಲ!
-
ದೇಶ2 ಗಂಟೆಗಳು agoNepal Flood Horror: ಮಹಿಳೆಯ ಮೃತದೇಹದಿಂದ ಆಭರಣ ಕಳವು; ವೈರಲ್ ವಿಡಿಯೋ ಆಧರಿಸಿ ಇಬ್ಬರ ಬಂಧನ
-
ದೇಶ5 ಗಂಟೆಗಳು agoPM Narendra Modi Foreign Visit: ಮೋದಿ 4 ದಿನಗಳ ವಿದೇಶ ಪ್ರವಾಸ, ಎಸ್ಸಿಒ ಶೃಂಗಸಭೆಯಲ್ಲಿ ಭಾಗಿ
-
ದೇಶ2 ಗಂಟೆಗಳು agoKPSC Recruitment Scam: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಗಂಭೀರ ಆರೋಪ; ನೇಮಕಾತಿ ದಂಧೆ ಬಯಲು ಎಂದ ಕೇಂದ್ರ ಸಚಿವ
-
ದೇಶ5 ಗಂಟೆಗಳು agoNepal ಭೀಕರ ಪ್ರವಾಹ: ಸಾವಿನ ಸಂಖ್ಯೆ 469ಕ್ಕೆ ಏರಿಕೆ, ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆ!
-
ಸಿನಿಮಾ4 ಗಂಟೆಗಳು ago‘Toxic’ ವಿರುದ್ಧ ಮಾತನಾಡಿದವರಿಗೆ ಕಾನೂನು ನೋಟಿಸ್? ಚಿತ್ರತಂಡದ ನಡೆಗೆ ಕಾರಣವೇನು?
-
ದೇಶ5 ಗಂಟೆಗಳು agoMantralaya ದಲ್ಲಿ ಭಕ್ತಿಯ ವೈಭವ: ರಾಯರ ಆರಾಧನೆಗೆ ಚಾಲನೆ, ಆಗಸ್ಟ್ 31ಕ್ಕೆ ಮಹಾರಥೋತ್ಸವ