Connect with us

ರಾಜಕೀಯ

ಪ್ರತಿಭಟನೆ ವೇಳೆ ನಿಖಿಲ್ ಕುಮಾರಸ್ವಾಮಿಯನ್ನು ಎಳೆದಾಡಿದ ಪೊಲೀಸರು

ರಾಮನಗರ: ಜೆಡಿಎಸ್‍ಗೆ ಅಧಿಕಾರ ತಪ್ಪಿಸಲು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ (JDS) ಹಾಗೂ ಬಿಜೆಪಿ (BJP) ವತಿಯಿಂದ ರಾಮನಗರದಲ್ಲಿ (Ramanagara) ಪ್ರತಿಭಟನೆ ನಡೆದಿದೆ. ಈ ವೇಳೆ ಜೆಡಿಎಸ್ ಯುವಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರನ್ನು (Nikhil Kumaraswamy) ಪೊಲೀಸರು ಎಳೆದಾಡಿದ್ದು, ಪೊಲೀಸರ ವಿರುದ್ಧ ನಿಖಿಲ್ ಗರಂ ಆಗಿದ್ದಾರೆ.

ರಾಮನಗರ ತಾಲೂಕಿನ ಹಳ್ಳಿಮಾಳ ವ್ಯವಸಾಯೋತ್ಪನ್ನ ಮಾರುಕಟ್ಟೆ ಚುನಾವಣೆಯನ್ನು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಮುಂದೂಡಿಕೆ ಮಾಡಿದ್ದಾರೆ. ಎರಡು ಬಾರಿ ಚುನಾವಣೆ ನಿಗಧಿಯಾಗಿದ್ರೂ ಅಧಿಕಾರಿಗಳು ಚುನಾವಣೆ ನಡೆಸಿಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್ ಆರೋಪಿಸಿದೆ. ಈ ವಿಚಾರವಾಗಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು ಸಹಕಾರ ಸಂಘಗಳ ನಿಬಂಧಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಕಂದಾಯ ಭವನಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದಾರೆ. ಬಳಿಕ ಸಹಕಾರ ಸಂಘಗಳ ನಿಬಂಧಕರ ಕಚೇರಿಗೆ ಬೀಗ ಜಡಿಯಲು ಯತ್ನಿಸಿದ್ದಾರೆ. ಅಲ್ಲದೇ ಕಂದಾಯ ಭವನದ ಗ್ಲಾಸ್ ಪುಡಿಪುಡಿ ಮಾಡಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನ ಪೊಲೀಸರು ತಡೆದಿದ್ದು, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ.

ಬೆಂಗಳೂರು

ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಹೆಸರು-ಡಿಸಿಎಂ ಡಿಕೆಶಿ

ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರಿಡುವ ಬಗ್ಗೆ ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ, ಕಾರ್ಯಪ್ಪ ಹೆಸರಿಡುವುದು ನಮ್ಮ ಭಾಗ್ಯ ಎಂದು ಡಿಸಿಎಂ ಡಿಕೆ ಶಿಮಕುಮಾರ್ ಅವರು ಹೇಳಿದರು,
ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಏಳು ಎಕರೆ ಭೂಮಿ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಕೊಡವ ಸಮಾಜದವರು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಉದ್ದೇಶಿಸಿ ಡಿಸಿಎಂ ಡಿಕೆಶಿ ಅವರು ಮಾತನಾಡಿದರು,
ಈ ವಿಚಾರವಾಗಿ ನಾವು ಮುಕ್ತ ಮನಸ್ಸು ಹೊಂದಿದ್ದೇವೆ, ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಾಗೂ ಈ ಡಿಕೆ ಶಿವಕುಮಾರ್ ಸೇರಿ ಕಾರ್ಯಪ್ಪ ಅವರ ಹೆಸರನ್ನು ಉಳಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು,
ಇಡೀ ದೇಶಕ್ಕೆ ಕೊಡಗು ಹಾಗೂ ಕೊಡವರು ಆಭರಣವಿದ್ದಂತೆ, ಇತಿಹಾಸ ನೋಡಿದಾಗ ನಿಮಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸಿದ್ದೀರಿ, ರಾಜಕೀಯ ಮಾತ್ರವಲ್ಲ ಕ್ರೀಡೆ, ಕಾನೂನು ವ್ಯವಸ್ಧೆ ಸೇನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕೊಡವರ ಕೊಡುಗೆ ಅಪಾರ, ದೇಶದ ಸ್ವಾತಂತ್ರ್ಯ ಹೋರಾಟಕ್ಕೂ ನಿಮ್ಮ ಕೊಡುಗೆ ಇದೆ, ಎಂದು ಬಣ್ಣೀಸಿದರು,

Continue Reading

ದೇಶ

ಪರಪ್ಪನ ಅಗ್ರಹಾರ ಜೈಲಿಗೆ ಸೇರಿದ ಕಾಂಗ್ರೆಸ್ ಶಾಸಕ ವಿನಯ್!

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ, ಅದ್ದರಿಂದ ಕೋರ್ಟ್ ಆದೇಶದಂತೆ ಇಂದು ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೋಟ್ ವಿಚಾರಣೆ ಮುಗಿದ ಬಳಿಕ ಶಾಸಕ ವಿನಯ್ ಕುಲಕರ್ಣಿಯವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುವುದು, ಇತ್ತೀಚಿಗೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸಿತು, ಒಂದು ವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು,
ಇವರ ಬೆಂಬಲಿಗರು ಸಿಟಿ ಸಿವಿಲ್ ಕೋರ್ಟ್ ಮುಂಭಾಗ ಜಮಾಯಿಸಿದ್ರು, ಪರಪ್ಪನ ಅಗ್ರಹಾರ ಜೈಲಿಗೆ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಕರೆದೊಯ್ದಿದ್ದಾರೆ, ಈ ವೇಳೆ ತಮ್ಮ ನಾಯಕ ಜೈಲು ಸೇರುತ್ತಿರೋದನ್ನು ಕಂಡು ಕೋರ್ಟ್ ಮುಂಭಾಗ ಬೆಂಬಲಿಗರು ಕಣ್ಣೀರು ಹಾಕಿದ್ದಾರೆ,

ಏನಿದು ಪ್ರಕರಣ?
9 ವರ್ಷಗಳ ಹಿಂದೆ ಅಂದರೆ 2016 ರ ಜೂನ್ 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡನನ್ನು ಅವರದ್ದೇ ಮಾಲೀಕತ್ವದ ಜಿಮ್ ನಲ್ಲಿ ಭೀಕರವಾಗಿ ಹತ್ಯೆಗೈಯ್ಯಲಾಗಿತ್ತು, ಇದರಲ್ಲಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಕೈವಾಡ ಇದೆ ಎಂಬ ಆರೋಪವಿದೆ, ಪ್ರಕರಣಕ್ಕೆ ಸಂಬಂಧಿಸಿದಂತೆ 2020 ನವೆಂಬರ್ 5 ರಂದು ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು, ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿ ಆದೇಶಿಸಿತ್ತು,

Continue Reading

ರಾಜಕೀಯ

ನಾಯಕತ್ವದಿಂದ ಸಿದ್ದರಾಮಯ್ಯ ಕಲಿಯಬೇಕು: ಕೇಂದ್ರ ಸಚಿವ ವಿ.ಸೋಮಣ್ಣ

ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಬದಲು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 8 ದಿನಗಳ ಕಾಲ ನವದೆಹಲಿಗೆ ಭೇಟಿ ನೀಡಿ ಪ್ರಧಾನಿಮಂತ್ರಿಗಳ ಆಡಳಿತ ಶೈಲಿಯನ್ನು ವೀಕ್ಷಿಸಿ, ಕರ್ನಾಟಕದಲ್ಲಿ “ಜನಪರ ವಿಧಾನ” ಅಳವಡಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ 11 ವರ್ಷಗಳ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತಕ್ಕೆ ಸಿದ್ದರಾಮಯ್ಯ ಶೂನ್ಯ ಅಂಕ ನೀಡಿದ್ದರ ಕುರಿತು ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರ ಹೇಳಿಕೆಗಳು ಅಪ್ರಬುದ್ಧವಾಗಿವೆ. ರಾಜ್ಯದ ಜನರು ಸಿಎಂ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಸಿದ್ದರಾಮಯ್ಯ ಅಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ ಪ್ರಧಾನಿ ಮೋದಿ ಅವರ ನಾಯಕತ್ವ ನೋಡಿ ಕಲಿಯಬೇಕಿದೆ ಎಂದು ಹೇಳಿದರು.

ನಾನು ಕೂಡ ಮೊದಲು ಕಾಂಗ್ರೆಸ್ ಜೊತೆಗಿದ್ದೆ. ಅಂದಿನ ಸಿದ್ದರಾಮಯ್ಯ ಮತ್ತು ಇಂದಿನ ಸಿದ್ದರಾಮಯ್ಯ ನಡುವೆ ಅಗಾಧ ವ್ಯತ್ಯಾಸವಿದೆ. ಕಾಂಗ್ರೆಸ್ ನಾಯಕರಿಗೆ ನೈತಿಕ ಸಮಗ್ರತೆಯ ಕೊರತೆಯಿದೆ. ಮೋದಿಯವರ ಜನಪರ ಆಡಳಿತವನ್ನು ನೋಡಿ, ಅವರು ತಮ್ಮದೇ ಆದ ನ್ಯೂನತೆಗಳ ಬಗ್ಗೆ ಅರಿತುಕೊಳ್ಳುತ್ತಿದ್ದಾರೆ.

ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ ಮಾಡುವ ಬಗ್ಗೆ ನಡೆಯುತ್ತಿರುವ ಚರ್ಚೆ ಕುರಿತು ಮಾತನಾಡಿ, ಇದು ನರಿ ಮತ್ತು ಕುರಿಮರಿಯ ಕಥೆಯಂತೆ ಎಂದು ವ್ಯಂಗ್ಯವಾಡಿದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ ಈ ವಿಷಯದಲ್ಲಿ ಆತುರದಿಂದ ವರ್ತಿಸುವುದಿಲ್ಲ ಎಂದು ನಾನು ನಂಬುತ್ತೇನೆ. ನಾನು ಇನ್ನೂ ಯಾವುದೇ ನಿಲುವನ್ನು ತೆಗೆದುಕೊಂಡಿಲ್ಲ. ಅದು ಪ್ರಯೋಜನಕಾರಿ ಎಂದು ತೋರಿದರೆ, ನಾನು ಅದನ್ನು ಬೆಂಬಲಿಸುತ್ತೇನೆ

Continue Reading

Trending