Connect with us

ಬೆಂಗಳೂರು

ರಾಮನಗರ ಜಿಲ್ಲೆ ಹೆಸರು ಬದಲಾವಣೆ.. ಡಿ.ಕೆ ಶಿವಕುಮಾರ್‌ ಕನಸಿಗೆ ಹೆಚ್‌ಡಿಕೆ ಖಡಕ್ ಸವಾಲು; ಏನಂದ್ರು?

Published

on

ನವದೆಹಲಿ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದು, ತೀವ್ರ ಸಂಚಲನಕ್ಕೆ ಕಾರಣವಾಗಿದೆ.

ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಡಿ.ಕೆ ಶಿವಕುಮಾರ್ ಪ್ರಸ್ತಾಪಕ್ಕೆ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ಹೊಸ ಸರ್ಕಾರ ರಚನೆ ಮಾಡಿದ ಮೇಲೆ ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿದ್ದಾರೆ. ರಾಮನಗರ ಜಿಲ್ಲೆ ಮಾಡಿದ್ದರ ಉದ್ದೇಶ ಆ ವ್ಯಕ್ತಿಗೆ ಏನು ಗೊತ್ತಿದೆ. ರಾಮನ ಹೆಸರಿರುವ ರಾಮನಗರಕ್ಕೆ ಅದರದೇ ಆದ ಇತಿಹಾಸ ಇದೆ. ಅಲ್ಲಿ ಯಾವ್ಯಾವ ಬೆಲೆ ಏರಿಕೆ ಮಾಡಿದ್ದಾರೆ ನೋಡಿದ್ದೇವೆ. ಭೂಮಿ ಲಪಾಟಿಸಿ ಯಾವುದರ ಬೆಲೆ ಏರಿಕೆ ಮಾಡಿದ್ದಾರೆ ಗೊತ್ತಿದೆ. ಇದೆಲ್ಲ ಬಿಟ್ಟು ಅಭಿವೃದ್ಧಿ ಮಾಡುವುದು ಕಲಿಯಲಿ ಎಂದು ಹೆಚ್‌ಡಿಕೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು ವಂಶಸ್ಥರು ನಾವು, ಅಲ್ಲಿಗೆ ಸೇರಬೇಕು. ಬೆಂಗಳೂರಿಗೆ ಸೇರ್ಪಡೆಯಾದರೆ ಮೂಟೆಗಟ್ಟಲೇ ತುಂಬಬಹುದು. ನಾನು ಬೆಂಗಳೂರಿಗೆ ನಾಲ್ಕು ತಾಲೂಕುಗಳನ್ನು ಸೇರಿಸುತ್ತೇನೆ. ಭೂಮಿ ಮಾರಾಟ ಮಾಡಬೇಡಿ ಎಂದು ಹೇಳಿದ್ದರು. ರಾಮನಗರ ನಾವು ಮಾಡಿದ್ದು ತೆಗೆಯಬೇಕು ಎನ್ನುವುದು ಅವರ ಉದ್ದೇಶ. ದೇವೇಗೌಡರು, ನಾನು ಏನು ಅಭಿವೃದ್ಧಿ ಮಾಡಿದ್ದೇವೆ ಅನ್ನೋದು ಜನರಿಗೆ ಗೊತ್ತಿದೆ. ಅದಕ್ಕೆ ಇವರ ಸರ್ಟಿಫಿಕೇಟ್ ಬೇಕಿಲ್ಲ.

ಈ ಹಿಂದೆ ಕನಕಪುರ ಸಾತನೂರು ಹೇಗಿತ್ತು. ಆಗ ಇವರು ಯಾರದೋ ಸೇವೆ ಮಾಡಿಕೊಂಡಿದ್ದರು. ಈಗ ರಾಮನಗರ ಹೆಸರು ಬದಲಾಯಿಸಿದರೂ ನಾನು ಮತ್ತೆ ಬಂದೇ ಬರ್ತಿನಿ ಆ ವಿಶ್ವಾಸ ಇದ್ದೇ ಇದೆ. ನಾಲ್ಕು ತಾಲೂಕು ಸೇರಿ ಬೆಂಗಳೂರು ದಕ್ಷಿಣ ಮಾಡಲು ಹೊರಟಿದ್ದಾರೆ. ಈಗಾಗಲೇ ಬೆಂಗಳೂರು ದಕ್ಷಿಣ ಕ್ಷೇತ್ರ ಅಂತಾ ಇದೆಯಲ್ಲ. ಬೇರೆ ಹೆಸರು ಇಟ್ಟಿದ್ದರೆ ಆಗಿರೋದು ಆದರೆ ಅದು ಮಾಡ್ತಿಲ್ಲ.

ಅವರು ಮಾತ್ರ ಬೆಂಗಳೂರಿನವರು ಅವರ ಸಾಧನೆ ಚಿರಾಯುವಾಗಿ ಉಳಿಯಬೇಕು. ಹೆಸರು ಬದಲಾವಣೆ ಮಾಡಿದರೆ ಏನು ಸಿಗುತ್ತೆ ಅವರು ಹೇಳಬೇಕು. ಹೆಸರು ಬದಲಾವಣೆ ಮಾಡಿದರೆ ಎಲ್ಲ ಸರ್ಕಾರಿ ದಾಖಲೆಗಳಿಗೆ ತೊಂದರೆಯಾಗಲಿದೆ. ಹೊಸ ಪ್ರಕ್ರಿಯೆ ಶುರುವಾಗಲಿದೆ. ರಾಮನಗರ ಅವಳಿ ನಗರ ಮಾಡಿದ್ದರೆ ಒಂದು ಹೆಸರು ಬಂದಿರೋದು. ನೋಡೋಣ ಮುಂದೇನಾಗುತ್ತೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ದೇಶ

ಕಾಂಗ್ರೆಸ್‌ನಲ್ಲಿ ಭಾರಿ ಶಿಸ್ತು ಕ್ರಮ: ನಟಿ ಭಾವನಾ ರಾಮಣ್ಣ ಸೇರಿ ಹಲವರಿಗೆ ಶಾಕ್

Published

on

ಬೆಂಗಳೂರು: Karnataka Pradesh Congress Committee ಪ್ರಮುಖ ಸಭೆಗೆ ಗೈರಾಗಿದ್ದ ಪದಾಧಿಕಾರಿಗಳ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ D. K. Shivakumar ಭಾರೀ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SSR) ಕುರಿತ ಮಹತ್ವದ ಸಭೆಯನ್ನು ನಿರ್ಲಕ್ಷ್ಯ ಮಾಡಿದ ಆರೋಪದ ಮೇಲೆ ಹಲವು ಹಿರಿಯ ನಾಯಕರನ್ನು ಪಕ್ಷದ ಹುದ್ದೆಗಳಿಂದ ತಕ್ಷಣದಿಂದಲೇ ವಜಾಗೊಳಿಸಲಾಗಿದೆ.

ಈ ಕ್ರಮದಡಿ ಕೆಪಿಸಿಸಿ ವಕ್ತಾರರಾದ Niketh Raj Maurya, Bhavana Ramanna ಸೇರಿದಂತೆ ಶಿವಮೂರ್ತಿ ನಾಯಕ್, ಎಂ.ಸಿ. ವೇಣುಗೋಪಾಲ್, ಷಣ್ಮುಖ ಶಿವಳ್ಳಿ ಹಾಗೂ ಸಿ.ಆರ್. ಮನೋಹರ್ ಅವರಿಗೆ ಪಕ್ಷದಿಂದ “ಗೇಟ್ ಪಾಸ್” ನೀಡಲಾಗಿದೆ. ಇವರ ಜೊತೆಗೆ ಮೂವರು ಉಪಾಧ್ಯಕ್ಷರು ಮತ್ತು 29 ಪ್ರಧಾನ ಕಾರ್ಯದರ್ಶಿಗಳನ್ನೂ ಹುದ್ದೆಗಳಿಂದ ಕೈಬಿಡಲಾಗಿದೆ.

ಬೆಂಗಳೂರಿನಲ್ಲಿ ನಡೆದ ಈ ಮಹತ್ವದ ಸಭೆಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ Randeep Singh Surjewala ಕೂಡ ಭಾಗವಹಿಸಿದ್ದರು. ಪಕ್ಷದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದ ಸಭೆಗೆ ಇಷ್ಟೊಂದು ಪ್ರಮಾಣದಲ್ಲಿ ನಾಯಕರು ಗೈರಾಗಿರುವುದನ್ನು ಅವರು ಗಂಭೀರವಾಗಿ ಪರಿಗಣಿಸಿದ್ದರು ಎನ್ನಲಾಗಿದೆ.

ಸಭೆಯನ್ನು ಲಘುವಾಗಿ ತೆಗೆದುಕೊಂಡವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಸುರ್ಜೇವಾಲಾ ಸೂಚನೆ ನೀಡಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಆಕ್ಷನ್ ಮೋಡ್‌ಗೆ ಇಳಿದಿದ್ದಾರೆ. ಈ ಮೂಲಕ ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಇದೇ ವೇಳೆ ರಾಜ್ಯ ರಾಜಕೀಯದಲ್ಲಿ Siddaramaiah ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲಿ ಈ ಕ್ರಮ ಕಾಂಗ್ರೆಸ್ ಪಾಳಯದಲ್ಲಿ ಮತ್ತಷ್ಟು ಸಂಚಲನ ಸೃಷ್ಟಿಸಿದೆ.

ಪಕ್ಷದಲ್ಲಿ ಹಿರಿಯರಾಗಿರಲಿ ಅಥವಾ ಪ್ರಮುಖ ಹುದ್ದೆಯಲ್ಲಿರಲಿ, ಜವಾಬ್ದಾರಿ ಮತ್ತು ಶಿಸ್ತು ಪಾಲನೆ ಕಡ್ಡಾಯ ಎಂಬುದನ್ನು ಡಿಕೆ ಶಿವಕುಮಾರ್ ಈ ನಿರ್ಧಾರದ ಮೂಲಕ ಸ್ಪಷ್ಟಪಡಿಸಿದ್ದಾರೆ.

Continue Reading

ದೇಶ

“ಭಗವಂತ ನನ್ನ ಆಸೆ ಈಡೇರಿಸಿದ್ದಾನೆ”: ಇಕ್ಬಾಲ್ ಹುಸೇನ್ ಭಾವನಾತ್ಮಕ ಮಾತು

Published

on

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ Iqbal Hussain ನೀಡಿರುವ ಹೇಳಿಕೆ ಹೊಸ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿ D. K. Shivakumar ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಗುವ ವಿಚಾರವಾಗಿ ಮಾತನಾಡಿದ ಅವರು, “ಭಗವಂತ ನನ್ನ ಆಸೆ ಈಡೇರಿಸಿದ್ದಾನೆ” ಎಂದು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, “ಭಗವಂತನ ದಯೆಯಿಂದ ಒಳ್ಳೆ ಕಾಲ ಬಂದಿದೆ. ನಮ್ಮ ನಾಯಕರಿಗೆ ರಾಜ್ಯದ ಜನರು ಬಯಸಿದ್ದನ್ನು ಭಗವಂತ ನೆರವೇರಿಸಿದ್ದಾನೆ. ಅವನಿಗೆ ಕೋಟಿ ಕೋಟಿ ನಮಸ್ಕಾರಗಳು” ಎಂದು ಹೇಳಿದ್ದಾರೆ.

“ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಪಕ್ಷದ ವರಿಷ್ಠರು ಶಿಸ್ತಿನಿಂದ ಇರಲು ಸೂಚಿಸಿದ್ದರು. ಕಾಲ ಬಂದಾಗ ಮಾತನಾಡಿ ಎಂದಿದ್ದರು. ಈಗ ಆ ಸಮಯ ಬಂದಿದೆ” ಎಂದು ಹೇಳುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಸುಳಿವನ್ನೂ ನೀಡಿದ್ದಾರೆ.

ಇನ್ನೂ ನಾಯಕರು ಬೆಂಗಳೂರಿಗೆ ಬಂದ ಬಳಿಕ ಅವರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದ ಅವರು, ಕಾರ್ಯಕರ್ತರು ಹಾಗೂ ನಾಯಕರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಇಕ್ಬಾಲ್ ಹುಸೇನ್, “ರಾತ್ರಿ ನನಗೆ ನಿದ್ದೆ ಬರಲಿಲ್ಲ. ದೆಹಲಿಯಲ್ಲಿ ಮಾತನಾಡಬೇಕಾದವರ ಜೊತೆ ಮಾತನಾಡುತ್ತಿದ್ದೆ. ಕ್ಷಣಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದೆ” ಎಂದು ಹೇಳಿದ್ದಾರೆ.

ಈ ಹೇಳಿಕೆ ಇದೀಗ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿದೆ.

Continue Reading

ಬೆಂಗಳೂರು

“ನಾಳೆ ಎಲ್ಲ ಹೇಳುತ್ತೇನೆ”: ರಾಜಕೀಯ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಸಸ್ಪೆನ್ಸ್ ಉತ್ತರ!

Published

on

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ತೀವ್ರವಾಗಿರುವ ನಡುವೆಯೇ Siddaramaiah ಅವರು “ನಾಳೆ ಮಾತನಾಡುತ್ತೇನೆ” ಎನ್ನುವ ಮೂಲಕ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.

ಮಾಜಿ ಪ್ರಧಾನಿ Jawaharlal Nehru ಅವರ 62ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ನೆಹರು ಅವರು ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.

ಕಾರ್ಯಕ್ರಮದ ವೇಳೆ ಮಾಧ್ಯಮ ಪ್ರತಿನಿಧಿಗಳು ದೆಹಲಿ ಪ್ರವಾಸ, ಕಾಂಗ್ರೆಸ್ ಹೈಕಮಾಂಡ್ ಸಭೆ ಹಾಗೂ ಸಿಎಂ ಬದಲಾವಣೆ ಕುರಿತ ಪ್ರಶ್ನೆಗಳನ್ನು ಕೇಳಿದಾಗ ಸಿದ್ದರಾಮಯ್ಯ ಯಾವುದೇ ವಿವರವಾದ ಪ್ರತಿಕ್ರಿಯೆ ನೀಡಲಿಲ್ಲ. “ಏನೇ ಇದ್ದರೂ ನಾಳೆ ಮಾತನಾಡುತ್ತೇನೆ” ಎಂದು ಒಂದೇ ಸಾಲಿನಲ್ಲಿ ಉತ್ತರಿಸಿ ಅಲ್ಲಿಂದ ತೆರಳಿದರು.

ಸಾಮಾನ್ಯವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಗಟ್ಟಿಯಾಗಿ ಪ್ರತಿಕ್ರಿಯಿಸುವ ಸಿದ್ದರಾಮಯ್ಯ, ಇಂದು ಮಾತ್ರ ಮೌನವಾಗಿದ್ದದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಅವರ ಮುಖಭಾವದಲ್ಲೂ ಬೇಸರ ಸ್ಪಷ್ಟವಾಗಿ ಕಾಣಿಸುತ್ತಿತ್ತು ಎಂದು ಕಾರ್ಯಕ್ರಮದಲ್ಲಿ ಭಾಗಿಯಾದವರು ಹೇಳುತ್ತಿದ್ದಾರೆ.

ಇಂದು ಮುಖ್ಯಮಂತ್ರಿ ಅವರಿಗೆ ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಿರಲಿಲ್ಲ. ಹೀಗಾಗಿ ವಿಧಾನಸೌಧದಿಂದ ನೇರವಾಗಿ ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಗೆ ತೆರಳಿದ್ದಾರೆ.

ಇದೀಗ ನಾಳೆ ಬೆಳಗ್ಗೆ ತಮ್ಮ ಆಪ್ತ ಸಚಿವರು ಹಾಗೂ ಶಾಸಕರೊಂದಿಗೆ ಬ್ರೇಕ್‌ಫಾಸ್ಟ್ ಸಭೆ ನಡೆಸಲಿರುವ ಸಿದ್ದರಾಮಯ್ಯ, ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಎಲ್ಲಾ ರಾಜಕೀಯ ಬೆಳವಣಿಗೆಗಳ ಬಗ್ಗೆ ಸ್ಪಷ್ಟನೆ ನೀಡುವ ನಿರೀಕ್ಷೆಯಿದೆ.

Continue Reading

Trending