Connect with us

ಬೆಂಗಳೂರು

ರಾಮನಗರ ಜಿಲ್ಲೆ ಹೆಸರು ಬದಲಾವಣೆ.. ಡಿ.ಕೆ ಶಿವಕುಮಾರ್‌ ಕನಸಿಗೆ ಹೆಚ್‌ಡಿಕೆ ಖಡಕ್ ಸವಾಲು; ಏನಂದ್ರು?

Published

on

ನವದೆಹಲಿ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದು, ತೀವ್ರ ಸಂಚಲನಕ್ಕೆ ಕಾರಣವಾಗಿದೆ.

ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಡಿ.ಕೆ ಶಿವಕುಮಾರ್ ಪ್ರಸ್ತಾಪಕ್ಕೆ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ಹೊಸ ಸರ್ಕಾರ ರಚನೆ ಮಾಡಿದ ಮೇಲೆ ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿದ್ದಾರೆ. ರಾಮನಗರ ಜಿಲ್ಲೆ ಮಾಡಿದ್ದರ ಉದ್ದೇಶ ಆ ವ್ಯಕ್ತಿಗೆ ಏನು ಗೊತ್ತಿದೆ. ರಾಮನ ಹೆಸರಿರುವ ರಾಮನಗರಕ್ಕೆ ಅದರದೇ ಆದ ಇತಿಹಾಸ ಇದೆ. ಅಲ್ಲಿ ಯಾವ್ಯಾವ ಬೆಲೆ ಏರಿಕೆ ಮಾಡಿದ್ದಾರೆ ನೋಡಿದ್ದೇವೆ. ಭೂಮಿ ಲಪಾಟಿಸಿ ಯಾವುದರ ಬೆಲೆ ಏರಿಕೆ ಮಾಡಿದ್ದಾರೆ ಗೊತ್ತಿದೆ. ಇದೆಲ್ಲ ಬಿಟ್ಟು ಅಭಿವೃದ್ಧಿ ಮಾಡುವುದು ಕಲಿಯಲಿ ಎಂದು ಹೆಚ್‌ಡಿಕೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು ವಂಶಸ್ಥರು ನಾವು, ಅಲ್ಲಿಗೆ ಸೇರಬೇಕು. ಬೆಂಗಳೂರಿಗೆ ಸೇರ್ಪಡೆಯಾದರೆ ಮೂಟೆಗಟ್ಟಲೇ ತುಂಬಬಹುದು. ನಾನು ಬೆಂಗಳೂರಿಗೆ ನಾಲ್ಕು ತಾಲೂಕುಗಳನ್ನು ಸೇರಿಸುತ್ತೇನೆ. ಭೂಮಿ ಮಾರಾಟ ಮಾಡಬೇಡಿ ಎಂದು ಹೇಳಿದ್ದರು. ರಾಮನಗರ ನಾವು ಮಾಡಿದ್ದು ತೆಗೆಯಬೇಕು ಎನ್ನುವುದು ಅವರ ಉದ್ದೇಶ. ದೇವೇಗೌಡರು, ನಾನು ಏನು ಅಭಿವೃದ್ಧಿ ಮಾಡಿದ್ದೇವೆ ಅನ್ನೋದು ಜನರಿಗೆ ಗೊತ್ತಿದೆ. ಅದಕ್ಕೆ ಇವರ ಸರ್ಟಿಫಿಕೇಟ್ ಬೇಕಿಲ್ಲ.

ಈ ಹಿಂದೆ ಕನಕಪುರ ಸಾತನೂರು ಹೇಗಿತ್ತು. ಆಗ ಇವರು ಯಾರದೋ ಸೇವೆ ಮಾಡಿಕೊಂಡಿದ್ದರು. ಈಗ ರಾಮನಗರ ಹೆಸರು ಬದಲಾಯಿಸಿದರೂ ನಾನು ಮತ್ತೆ ಬಂದೇ ಬರ್ತಿನಿ ಆ ವಿಶ್ವಾಸ ಇದ್ದೇ ಇದೆ. ನಾಲ್ಕು ತಾಲೂಕು ಸೇರಿ ಬೆಂಗಳೂರು ದಕ್ಷಿಣ ಮಾಡಲು ಹೊರಟಿದ್ದಾರೆ. ಈಗಾಗಲೇ ಬೆಂಗಳೂರು ದಕ್ಷಿಣ ಕ್ಷೇತ್ರ ಅಂತಾ ಇದೆಯಲ್ಲ. ಬೇರೆ ಹೆಸರು ಇಟ್ಟಿದ್ದರೆ ಆಗಿರೋದು ಆದರೆ ಅದು ಮಾಡ್ತಿಲ್ಲ.

ಅವರು ಮಾತ್ರ ಬೆಂಗಳೂರಿನವರು ಅವರ ಸಾಧನೆ ಚಿರಾಯುವಾಗಿ ಉಳಿಯಬೇಕು. ಹೆಸರು ಬದಲಾವಣೆ ಮಾಡಿದರೆ ಏನು ಸಿಗುತ್ತೆ ಅವರು ಹೇಳಬೇಕು. ಹೆಸರು ಬದಲಾವಣೆ ಮಾಡಿದರೆ ಎಲ್ಲ ಸರ್ಕಾರಿ ದಾಖಲೆಗಳಿಗೆ ತೊಂದರೆಯಾಗಲಿದೆ. ಹೊಸ ಪ್ರಕ್ರಿಯೆ ಶುರುವಾಗಲಿದೆ. ರಾಮನಗರ ಅವಳಿ ನಗರ ಮಾಡಿದ್ದರೆ ಒಂದು ಹೆಸರು ಬಂದಿರೋದು. ನೋಡೋಣ ಮುಂದೇನಾಗುತ್ತೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ದೇಶ

ಬೆಂಗಳೂರಿನಲ್ಲಿ ಎಲ್‌ಪಿಜಿ ಸಂಕಷ್ಟ: ಆಟೊ ಚಾಲಕರ ಬದುಕು ಸಂಕಷ್ಟಕ್ಕೆ

Published

on

By

ಬೆಂಗಳೂರು: ನಗರದಲ್ಲಿ ಉಂಟಾಗಿರುವ ಎಲ್‌ಪಿಜಿ ಕೊರತೆಯಿಂದ ಆಟೊ ಚಾಲಕರ ಸಮಸ್ಯೆಗಳು ದಿನೇ ದಿನೇ ಗಂಭೀರವಾಗುತ್ತಿವೆ. ಗ್ಯಾಸ್‌ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದಾಗಿ ಲಭ್ಯವಿರುವ ಬಂಕ್‌ಗಳ ಬಳಿ ಆಟೊ ಚಾಲಕರು ಗಂಟೆಗಟ್ಟಲೆ ಕಾದು ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವಾರು ಬಂಕ್‌ಗಳು ತಾತ್ಕಾಲಿಕವಾಗಿ ಬಾಗಿಲು ಮುಚ್ಚಿದ್ದು, ಉಳಿದ ಬಂಕ್‌ಗಳಲ್ಲೂ ‘ನೋ ಸ್ಟಾಕ್’ ಫಲಕಗಳು ಸಾಮಾನ್ಯ ದೃಶ್ಯವಾಗಿವೆ.

ರಾಜಾಜಿನಗರ, ಮತ್ತೀಕೆರೆ, ದಾಸರಹಳ್ಳಿ, ಗುಟ್ಟಹಳ್ಳಿ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸಮಸ್ಯೆ ತೀವ್ರಗೊಂಡಿದೆ. ಬಂಕ್‌ಗಳ ಬಳಿ ಆಟೊಗಳು ಸಾಲುಗಟ್ಟಿ ನಿಲ್ಲುವುದರಿಂದ ಸಂಚಾರ ದಟ್ಟಣೆಗೂ ಕಾರಣವಾಗುತ್ತಿದೆ. ಎಲ್‌ಪಿಜಿ ಕೊರತೆಯಿಂದ ಸಾವಿರಾರು ಆಟೊಗಳು ರಸ್ತೆಗಿಳಿಯಲು ಸಾಧ್ಯವಾಗದೇ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೂ ಒತ್ತಡ ಹೆಚ್ಚಾಗಿದೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗ್ಯಾಸ್‌ ಪೂರೈಕೆಗೆ ತೀವ್ರ ಹೊಡೆತ ಬಿದ್ದಿದ್ದು, ಆಟೊ ಚಾಲಕರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಗ್ಯಾಸ್‌ ಬೆಲೆ ಏರಿಕೆಯಿಂದಾಗಿ ಚಾಲಕರು ಕಡಿಮೆ ದೂರಕ್ಕೂ ಪ್ರಯಾಣಿಕರಿಂದ ಹೆಚ್ಚು ಬಾಡಿಗೆ ವಸೂಲು ಮಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರಿಗೂ ಹೆಚ್ಚುವರಿ ಹೊರೆ ಬೀಳುತ್ತಿದೆ.

ಗ್ಯಾಸ್‌ ಲಭ್ಯವಿರುವ ಮಾಹಿತಿ ಸಿಕ್ಕ ತಕ್ಷಣ ನೂರಾರು ಆಟೊಗಳು ಬಂಕ್‌ಗಳತ್ತ ಧಾವಿಸುತ್ತಿವೆ. ಪರಿಣಾಮ, ಕೆಲವೇ ಗಂಟೆಗಳಲ್ಲಿ ಸ್ಟಾಕ್‌ ಖಾಲಿಯಾಗುತ್ತಿದೆ. ಸಿಎನ್‌ಜಿ ಕೊರತೆಯೂ ಕಾಣಿಸಿಕೊಂಡಿರುವುದರಿಂದ ಸಮಸ್ಯೆ ಇನ್ನಷ್ಟು ಸಂಕೀರ್ಣವಾಗಿದೆ.

ಇದರಿಂದಾಗಿ ವಿದ್ಯುತ್‌ ಚಾಲಿತ ಆಟೊಗಳ ಬಳಕೆ ಹೆಚ್ಚಾಗುತ್ತಿದ್ದು, ಪ್ರಯಾಣಿಕರು ಇವುಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಪರಿಸ್ಥಿತಿ ಮುಂದುವರಿದರೆ ಅನೇಕ ಆಟೊ ಚಾಲಕರು ವೃತ್ತಿ ತೊರೆಯುವ ಸ್ಥಿತಿ ಎದುರಾಗುವ ಸಾಧ್ಯತೆ ಇದೆ.

Continue Reading

ದೇಶ

ಸುಪ್ರೀಂ ಕೋರ್ಟ್ ಆದೇಶ ಬಳಿಕ ಬೀದಿ ನಾಯಿಗಳ ಲೆಕ್ಕಾಚಾರ: ನಗರದಲ್ಲಿ ಆತಂಕ

Published

on

By

ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ಬೀದಿ ನಾಯಿಗಳ ಸಮಸ್ಯೆ ಗಂಭೀರವಾಗುತ್ತಿರುವ ಹಿನ್ನೆಲೆ, Bruhat Bengaluru Mahanagara Palike ಸರ್ವೆ ಕಾರ್ಯ ಆರಂಭಿಸಿದೆ. Supreme Court of India ನೀಡಿದ ನಿರ್ದೇಶನದಂತೆ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಶಾಲೆ, ಕಾಲೇಜು, ಆಸ್ಪತ್ರೆ, ಬಸ್ ನಿಲ್ದಾಣ, ಕ್ರೀಡಾಂಗಣ ಹಾಗೂ ಆಟದ ಮೈದಾನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 2,670 ಬೀದಿ ನಾಯಿಗಳು ಪತ್ತೆಯಾಗಿವೆ. ಕೇಂದ್ರ ವಲಯದಲ್ಲಿ 504, ಉತ್ತರ ವಲಯದಲ್ಲಿ 875, ಪಶ್ಚಿಮ ವಲಯದಲ್ಲಿ 591, ದಕ್ಷಿಣ ವಲಯದಲ್ಲಿ 331 ಹಾಗೂ ಪೂರ್ವ ವಲಯದಲ್ಲಿ 369 ನಾಯಿಗಳಿವೆ ಎಂದು ಮಾಹಿತಿ ನೀಡಲಾಗಿದೆ.

ಆದರೆ, ಈ ಅಂಕಿ-ಅಂಶಗಳ ನಿಖರತೆ ಬಗ್ಗೆ ಪ್ರಶ್ನೆಗಳು ಮೂಡಿವೆ. ಕೆಲವು ವಲಯಗಳಲ್ಲಿ ಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದ್ದು, ಕೆಲವು ಸಂಸ್ಥೆಗಳು ತಮ್ಮ ವ್ಯಾಪ್ತಿಯ ಲೆಕ್ಕ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಬೀದಿ ನಾಯಿಗಳ ಸ್ಥಳಾಂತರಕ್ಕಾಗಿ ಆನೇಕಲ್ ವ್ಯಾಪ್ತಿಯ ಬಿಂಗೀಪುರದಲ್ಲಿ 5 ಎಕರೆ ಜಾಗ ಗುರುತಿಸಲಾಗಿದ್ದು, ಸುಮಾರು 500 ನಾಯಿಗಳಿಗೆ ಆಶ್ರಯ ನೀಡುವ ಸಾಮರ್ಥ್ಯದ ಶೆಲ್ಟರ್ ನಿರ್ಮಾಣಕ್ಕೆ 2 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ.

ಇದೇ ವೇಳೆ, ಉತ್ತರ ಹಾಗೂ ಪಶ್ಚಿಮ ವಲಯಗಳಲ್ಲಿ ಹೆಚ್ಚುವರಿ ಆಶ್ರಯ ತಾಣ ನಿರ್ಮಾಣದ ಕಾರ್ಯ ಕೂಡ ಪ್ರಗತಿಯಲ್ಲಿದೆ.

ಒಟ್ಟಿನಲ್ಲಿ, ಬೀದಿ ನಾಯಿಗಳ ಸಮಸ್ಯೆ ನಿಯಂತ್ರಣಕ್ಕೆ ಈ ಕ್ರಮ ಕೈಗೊಳ್ಳಲಾಗುತ್ತಿದ್ದರೂ, ಅಂಕಿ-ಅಂಶಗಳ ಸ್ಪಷ್ಟತೆ ಹಾಗೂ ಅನುಷ್ಠಾನದ ಪರಿಣಾಮಕಾರಿತ್ವ ಬಗ್ಗೆ ಇನ್ನೂ ಅನುಮಾನಗಳು ಉಳಿದಿವೆ.

Continue Reading

ಕ್ರೀಡೆ

ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!

Published

on

By

ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.

ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.

ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.

ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.

ಆರ್ಸಿಬಿ ಬ್ಯಾಟಿಂಗ್ ವಿವರ:

  • ವಿರಾಟ್ ಕೊಹ್ಲಿ – 28 (18)
  • ಫಿಲ್ ಸಾಲ್ಟ್ – 46 (30)
  • ದೇವದತ್ತ ಪಡಿಕಲ್ – 50 (29)
  • ರಜತ್ ಪಾಟೀದಾರ್ – 48* (19)
  • ಟಿಮ್ ಡೇವಿಡ್ – 70* (25)
Continue Reading

Trending