ದೇಶ
ಭಾರತ ಜಗತ್ತಿಗೆ ಬುದ್ದನನ್ನು ನೀಡಿದೆ, ಯುದ್ಧ ಅಲ್ಲ: ಮೋದಿ
ನವದೆಹಲಿ: ಪ್ರಧಾನಿ ಮೋದಿ ಅವರು ಕೆಲ ದಿನಗಳಿಂದ ರಷ್ಯಾ ಮತ್ತು ಆಸ್ಟ್ರಿಯಾ ದೇಶಗಳ ಪ್ರವಾಸದಲ್ಲಿದ್ದು ಎರಡು ದೇಶಗಳ ಭೇಟಿಯನ್ನು ಮುಗಿಸಿಕೊಂಡು ಇದೀಗ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಿದ್ದಾರೆ,
ರಷ್ಯಾ ಭೇಟಿಯ ಬಳಿಕ ಮೋದಿ ಆಸ್ಟ್ರಿಯಾ ಪ್ರವಾಸ ಕೈಗೊಂಡ ಮೋದಿ ಮಹತ್ವದ ಸಭೆಯನ್ನು ಕೈಗೊಂಡಿದ್ದಾರೆ, ಬುಧವಾರ ವಿಯೆನ್ನಾದಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಭಾರತವು ಅತ್ಯುತ್ತಮ ಮತ್ತು ಅತ್ಯುನ್ನತ ಮೈಲಿಗಲ್ಲುಗಳನ್ನು ಸಾಧಿಸುವತ್ತ ಕೆಲಸ ಮಾಡುತ್ತಿದೆ ಎಂದು ಹೇಳಿದರು,
ಭಾರತವು ಜಗತ್ತಿಗೆ ಬುದ್ಧ ನನ್ನು ನೀಡಿದೆ ಯುದ್ಧ ಅಲ್ಲ, ಭಾರತ ಯಾವಾಗಲೂ ಶಾಂತಿ ಮತ್ತು ಸಮೃದ್ಧಿಯನ್ನು ನೀಡಿದೆ, ಅದರಿಂದ 21 ನೇ ಶತಮಾನದಲ್ಲಿಯೂ ದೇಶ ತನ್ನ ಇದೇ ಪಾತ್ರವನ್ನು ಬಲಪಡಿಸಲಿದೆ ಎಂದು ಮೋದಿ ಹೇಳಿದ್ದಾರೆ,
ತಮ್ಮ ಮೊದಲ ಆಸ್ಟ್ರಿಯಾ ಭೇಟಿಯನ್ನು ಅರ್ಥಪೂರ್ಣ ಎಂದು ಬಣ್ಣಿಸಿದ ಮೋದಿ 41 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಇಲ್ಲಿಗೆ ಭೇಟಿ ನೀಡಿದ್ದಾರೆ ಎಂದು ಹೇಳಿದರು, ಈ ಸುದೀರ್ಘ ಕಾಯುವಿಕೆ ಐತಿಹಾಸಿದ ಸಂದರ್ಭದಲ್ಲಿ ಅಂತ್ಯಗೊಂಡಿದೆ, ಭಾರತ ಮತ್ತು ಆಸ್ಟ್ರಿಯಾ ತಮ್ಮ 75 ವರ್ಷಗಳ ಸ್ನೇಹವನ್ನು ಆಚರಿಸುತ್ತಿವೆ ಎಂದು ಅವರು ಹೇಳಿದ್ದರೆ..
ದೇಶ
ಪ್ರಿಯಾಂಕ ಖರ್ಗೆಗೆ ಡಿಸಿಎಂ ಸ್ಥಾನ ನೀಡುವಂತೆ ಕಲಬುರಗಿಯಲ್ಲಿ ವಿಶೇಷ ಪೂಜೆ, 101 ತೆಂಗಿನಕಾಯಿ ಒಡೆದು ಪ್ರಾರ್ಥನೆ
ಕಲಬುರಗಿ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತೀವ್ರಗೊಂಡಿರುವ ನಡುವೆಯೇ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಬೇಕು ಎಂಬ ಒತ್ತಾಯ ಕಲಬುರಗಿಯಲ್ಲಿ ಜೋರಾಗಿದೆ. ಪ್ರಿಯಾಂಕ ಖರ್ಗೆ ಅಭಿಮಾನಿಗಳ ಬಳಗ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಸಮಿತಿಯ ನೇತೃತ್ವದಲ್ಲಿ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ 101 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು.
ಸಮಿತಿಯ ಜಿಲ್ಲಾಧ್ಯಕ್ಷ ಶಿವಾನಂದ ಹೊನಗುಂಟಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ವಿವಿಧ ಸಮುದಾಯಗಳ ಮುಖಂಡರು ಭಾಗವಹಿಸಿದರು. ರಾಜ್ಯ ಸರ್ಕಾರದಲ್ಲಿ ನಡೆಯಬಹುದಾದ ನಾಯಕತ್ವ ಬದಲಾವಣೆಯ ಸಂದರ್ಭದಲ್ಲಿ ಪ್ರಿಯಾಂಕ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಅವರು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ಮುಖಂಡ ಶಿವಾನಂದ ಹೊನಗುಂಟಿ, “2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಿಯಾಂಕ ಖರ್ಗೆ ಮಹತ್ವದ ಪಾತ್ರವಹಿಸಿದ್ದರು. ಬಿಜೆಪಿ ಸರ್ಕಾರದ ಅವಧಿಯ ಪಿಎಸ್ಐ ನೇಮಕಾತಿ ಅಕ್ರಮ ಹಾಗೂ ಕೆಕೆಆರ್ಡಿಬಿ ಹಗರಣಗಳನ್ನು ಬಹಿರಂಗಪಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು” ಎಂದು ಹೇಳಿದರು.
ಐಟಿ-ಬಿಟಿ ಸಚಿವರಾಗಿ ಪ್ರಿಯಾಂಕ ಖರ್ಗೆ ರಾಜ್ಯದ ತಂತ್ರಜ್ಞಾನ ಕ್ಷೇತ್ರಕ್ಕೆ ಹೊಸ ದಿಕ್ಕು ನೀಡಿದ್ದರು. ಕೈಗಾರಿಕಾ ಮತ್ತು ಐಟಿ ವಲಯದ ಬೆಳವಣಿಗೆಗೆ ಅವರ ಕೊಡುಗೆ ಮಹತ್ವದ್ದಾಗಿದ್ದು, ಮತ್ತೆ ಅವರಿಗೆ ಅದೇ ಖಾತೆ ನೀಡಬೇಕು ಎಂಬ ಬೇಡಿಕೆಯೂ ಕೇಳಿಬಂದಿದೆ ಎಂದು ಅವರು ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ದೂರದೃಷ್ಟಿಯ ನಾಯಕತ್ವ ಅಗತ್ಯವಿದ್ದು, ಪ್ರಿಯಾಂಕ ಖರ್ಗೆ ಅವರಿಗೆ ಡಿಸಿಎಂ ಸ್ಥಾನ ನೀಡಿದರೆ ಈ ಭಾಗಕ್ಕೆ ಮತ್ತಷ್ಟು ಶಕ್ತಿ ಸಿಗಲಿದೆ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟರು.
ಕೋಲಿ, ಕಬ್ಬಲಿಗ, ಬೆಸ್ತ, ಮೊಗವೀರ ಮತ್ತು ಅಂಬಿಗ ಸಮುದಾಯಗಳಿಗೆ ಎಸ್ಟಿ ಮಾನ್ಯತೆ ವಿಚಾರದಲ್ಲಿ ಪ್ರಿಯಾಂಕ ಖರ್ಗೆ ಸ್ಪಂದಿಸುತ್ತಿದ್ದಾರೆ ಎಂದು ಸಮುದಾಯದ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದರು.
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿರುವ ಸಂದರ್ಭದಲ್ಲಿ ಈ ಬೆಳವಣಿಗೆ ರಾಜಕೀಯವಾಗಿ ಸಾಕಷ್ಟು ಕುತೂಹಲ ಮೂಡಿಸಿದೆ.
ದೇಶ
ಹೈಕಮಾಂಡ್ ಸೂಚನೆಯಂತೆ ರಾಜೀನಾಮೆ ನೀಡಿದ್ದೇನೆ: ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಲೋಕಭವನದಲ್ಲಿ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹೈಕಮಾಂಡ್ ಹೇಳಿದ ತಕ್ಷಣ ನಾನು ರಾಜೀನಾಮೆ ನೀಡುವುದಾಗಿ ಮೊದಲೇ ಹೇಳಿದ್ದೆ. ಅದರಂತೆಯೇ ಇಂದು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದೇನೆ” ಎಂದರು.
ರಾಜೀನಾಮೆ ಪ್ರಕ್ರಿಯೆ ಕುರಿತು ವಿವರಿಸಿದ ಸಿದ್ದರಾಮಯ್ಯ, “ನಾನು ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ನೀಡಲು ಹೋದೆ. ಆದರೆ ರಾಜ್ಯಪಾಲರು ಸದ್ಯ ನಗರದಲ್ಲಿ ಇರಲಿಲ್ಲ. ಅವರು ಇಂದು ರಾತ್ರಿ ವಾಪಸ್ ಬರುತ್ತಾರೆ ಎಂದು ಕಚೇರಿಯಲ್ಲಿ ತಿಳಿಸಿದರು. ಹೀಗಾಗಿ ಅವರ ಕಾರ್ಯದರ್ಶಿಗೆ ಪತ್ರ ಸಲ್ಲಿಸಿದ್ದೇನೆ. ರಾಜ್ಯಪಾಲರು ಬಂದ ಬಳಿಕ ಸಂವಿಧಾನಾತ್ಮಕವಾಗಿ ಅದನ್ನು ಅಂಗೀಕರಿಸಲಿದ್ದಾರೆ ಎಂಬ ವಿಶ್ವಾಸವಿದೆ” ಎಂದು ಹೇಳಿದರು.
ರಾಜ್ಯದ ರಾಜಕೀಯ ಸ್ಥಿತಿಗತಿ ಬಗ್ಗೆ ಮಾತನಾಡಿದ ಅವರು, “ನಮ್ಮ ಪಕ್ಷಕ್ಕೆ 135ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ. ಇಬ್ಬರು ಪಕ್ಷೇತರ ಶಾಸಕರೂ ನಮ್ಮೊಂದಿಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತ ಹೊಂದಿದ್ದು ಯಾವುದೇ ಗೊಂದಲವಿಲ್ಲದೆ ಮುಂದಿನ ಮುಖ್ಯಮಂತ್ರಿಗೆ ಅವಕಾಶ ಕಲ್ಪಿಸಬೇಕು” ಎಂದು ಮನವಿ ಮಾಡಿದರು.
ತಮ್ಮ ರಾಜಕೀಯ ಬದುಕಿನ ಕುರಿತು ಭಾವುಕರಾಗಿ ಮಾತನಾಡಿದ ಸಿದ್ದರಾಮಯ್ಯ, “ಡಾ. ರಾಜ್ಕುಮಾರ್ ಜನರನ್ನು ‘ಅಭಿಮಾನಿ ದೇವರುಗಳು’ ಎಂದು ಕರೆಯುತ್ತಿದ್ದರು. ನನ್ನ ಪಾಲಿಗೂ ರಾಜ್ಯದ ಮತದಾರರೇ ಅಭಿಮಾನಿ ದೇವರುಗಳು. ಸಂವಿಧಾನವೇ ನನ್ನ ಧರ್ಮ ಎಂದು ನಂಬಿ ರಾಜಕೀಯ ಜೀವನ ನಡೆಸಿದ್ದೇನೆ” ಎಂದು ಹೇಳಿದರು.
“ರಾಜ್ಯದ ಜನತೆ ನನಗೆ ಎರಡು ಬಾರಿ ಮುಖ್ಯಮಂತ್ರಿ ಆಗುವ ಅವಕಾಶ ನೀಡಿದ್ದಾರೆ. ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಿಯೂ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದೆ. ಅದಕ್ಕಾಗಿ ನಾನು ಜನರಿಗೆ ಸದಾ ಋಣಿ” ಎಂದು ಕೃತಜ್ಞತೆ ವ್ಯಕ್ತಪಡಿಸಿದರು.
ಇದೇ ವೇಳೆ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿದ್ದರಾಮಯ್ಯ ಧನ್ಯವಾದ ಸಲ್ಲಿಸಿದರು.
ಅಪರಾಧ
“ನನ್ನ ಸಾವಿಗೆ ಹೈಕಮಾಂಡ್ ಕಾರಣ”: ಪ್ರತಿಭಟನೆಯಲ್ಲಿ ಆಕ್ರೋಶ
ಯಾದಗಿರಿ: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಅಭಿಮಾನಿಗಳ ಆಕ್ರೋಶ ವ್ಯಕ್ತವಾಗುತ್ತಿದೆ. ಅದರ ನಡುವೆಯೇ ಯಾದಗಿರಿಯಲ್ಲಿ ನಡೆದ ಪ್ರತಿಭಟನೆ ವೇಳೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆತಂಕ ಮೂಡಿಸಿದೆ.
ನಗರದ ಸುಭಾಷ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಸಿದ್ದರಾಮಯ್ಯ ಬೆಂಬಲಿಗರು, “ಸಿದ್ದರಾಮಯ್ಯ ಬೇಕು” ಎಂದು ಘೋಷಣೆ ಕೂಗುತ್ತಾ ಬೃಹತ್ ಪ್ರತಿಭಟನೆ ನಡೆಸಿದರು. ಈ ವೇಳೆ ಭೀಮು ಪೂಜಾರಿ ಎಂಬ ಅಭಿಮಾನಿಯೊಬ್ಬರು ಸಾರ್ವಜನಿಕರ ಎದುರೇ ಕ್ರಿಮಿನಾಶಕದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿದರು.
“ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ಕಾರಣ. ನನ್ನ ಸಾವಿಗೂ ಅವರೇ ಹೊಣೆ” ಎಂದು ಆಕ್ರೋಶ ವ್ಯಕ್ತಪಡಿಸಿದ ಭೀಮು ಪೂಜಾರಿ, ವಿಷ ಸೇವಿಸಲು ಮುಂದಾದರು ಎನ್ನಲಾಗಿದೆ.
ಘಟನೆ ಗಮನಿಸಿದ ಪ್ರತಿಭಟನಾಕಾರರು ಹಾಗೂ ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ಮಧ್ಯಪ್ರವೇಶಿಸಿ, ಅವರ ಕೈಯಲ್ಲಿದ್ದ ಕ್ರಿಮಿನಾಶಕದ ಬಾಟಲಿಯನ್ನು ಕಸಿದುಕೊಂಡು ಅನಾಹುತ ತಪ್ಪಿಸಿದ್ದಾರೆ. ಬಳಿಕ ಅವರನ್ನು ಸಮಾಧಾನಪಡಿಸಿ ಸ್ಥಳದಿಂದ ಕರೆದೊಯ್ಯಲಾಗಿದೆ.
ಸಿದ್ದರಾಮಯ್ಯ ಅವರ ರಾಜೀನಾಮೆ ಹಿನ್ನೆಲೆ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿದ್ದು, ಅವರ ಬೆಂಬಲಿಗರು ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ವಿಶೇಷವಾಗಿ ಹಿಂದುಳಿದ ವರ್ಗ ಹಾಗೂ ಅಹಿಂದ ಸಮುದಾಯದ ಕಾರ್ಯಕರ್ತರು ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ.
ಇದೀಗ ಯಾದಗಿರಿಯಲ್ಲಿ ನಡೆದ ಈ ಘಟನೆ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದ್ದು, ಅಭಿಮಾನಿಗಳ ಭಾವನಾತ್ಮಕ ಪ್ರತಿಕ್ರಿಯೆಗಳು ಗಮನ ಸೆಳೆಯುತ್ತಿವೆ.
-
ದೇಶ6 hours agoಸಿಎಂ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್
-
ದೇಶ6 hours ago‘ಸಿದ್ದರಾಮಯ್ಯ ಹಳೇ ಹುಲಿ’: ಶೋಭಾ ಕರಂದ್ಲಾಜೆ ಕುತೂಹಲಕಾರಿ ಹೇಳಿಕೆ
-
ದೇಶ5 hours ago‘ಅಪ್ಪಾಜಿ ಹೋಗಬೇಡಿ’: ಸಿದ್ದರಾಮಯ್ಯ ನೋಡಿ ಸಿಬ್ಬಂದಿ ಕಣ್ಣೀರು
-
ದೇಶ3 hours agoಸಚಿವರ ಮುಂದೆ ಕಣ್ಣೀರು ಹಾಕಿದ ಸಿದ್ದರಾಮಯ್ಯ: ‘ನಿಮ್ಮ ಸಹಕಾರ ಮರೆಯಲಾರೆ’
-
ದೇಶ6 hours agoBreaking News : “ಮತ್ತೆ ದಾಳಿ ಮಾಡಿದರೆ ಸರ್ವನಾಶ”: ಅಮೆರಿಕಕ್ಕೆ ಇರಾನ್ ಖಡಕ್ ಎಚ್ಚರಿಕೆ
-
ದೇಶ3 hours ago“ಒಗ್ಗಟ್ಟೇ ನಮ್ಮ ಶಕ್ತಿ”: ಸಿದ್ದು-ಡಿಕೆಶಿ ಫೋಟೋ ಹಂಚಿಕೊಂಡ ಕಾಂಗ್ರೆಸ್, ವೈರಲ್ ಆದ ಪೋಸ್ಟ್
-
ದೇಶ3 hours ago“ನಮ್ಮ ಸಾಹೇಬ್ರು” ಸಿಎಂ ಸ್ಥಾನ ತೊರೆದ ದಿನ: ಸಿದ್ದರಾಮನಹುಂಡಿಯಲ್ಲಿ ಆವರಿಸಿದ ಮೌನ
-
ದೇಶ5 hours ago“ನನಗೆ ಯಾವುದೇ ನೋವಿಲ್ಲ”: ರಾಜೀನಾಮೆ ಬಗ್ಗೆ ಸಿದ್ದರಾಮಯ್ಯ ಭಾವುಕ ಮಾತು
