Connect with us

ಬೆಂಗಳೂರು

ಆದಾಯ ಮೀರಿ ಆಸ್ತಿ ಗಳಿಕೆ ಕೇಸ್| ಸಿಬಿಐ ಎಫ್‌ಐಆರ್ ರದ್ದು ಮಾಡಲ್ಲ: ಸುಪ್ರೀಂ ಹೇಳಿದ್ದೇನು?

ನವದೆಹಲಿ: ತನ್ನ ವಿರುದ್ಧ ಸಿಬಿಐ (CBI) ದಾಖಲಿಸಿರುವ ಅದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು(Disproportionate Assets Case) ರದ್ದುಗೊಳಿಸುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ (Supreme Court) ಸೋಮವಾರ ವಜಾಗೊಳಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಬೇಲಾ ಎಂ ತ್ರಿವೇದಿ ಮತ್ತು ನ್ಯಾ. ಎಸ್‌ಸಿ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿ ವಜಾ ಮಾಡಿದೆ.

ಶಿವಕುಮಾರ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ, ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿರುವ ಅನುಮತಿಯನ್ನು ಈಗಾಗಲೇ ರಾಜ್ಯ ಸರ್ಕಾರ ಹಿಂಪಡೆದಿದೆ. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ನಮ್ಮ ಕಕ್ಷಿದಾರರನ್ನು ತನಿಖೆ ನಡೆಸುತ್ತಿದ್ದಾರೆ. ಇಡಿ ಪ್ರಕರಣವನ್ನು ಈಗಾಗಲೇ ರದ್ದು ಮಾಡಿದೆ. ಒಂದೇ ಕೇಸ್ ಅನ್ನು ಎರಡು ಸಂಸ್ಥೆಗಳು ತನಿಖೆ ಮಾಡುತ್ತಿರುವುದು ಸರಿಯಲ್ಲ ಎಂದು ವಾದಿಸಿದರು.

ಈ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ನ್ಯಾ.ಬೇಲಾ ಎಂ ತ್ರಿವೇದಿ, ಸರ್ಕಾರದ ಮಂಜೂರಾತಿ ಆದೇಶಕ್ಕೆ ಹೈಕೋರ್ಟ್ ತಡೆ ನೀಡುವುದು ಹೇಗೆ? ಇದು ಕೇಳರಿಯದ ಸಂಗತಿ. ಹೈಕೋರ್ಟ್ (High Court) ಸರಿಯಾದ ನಿರ್ಧಾರವನ್ನೇ ತೆಗೆದುಕೊಂಡಿದೆ. ಆದರೆ ನಿಮ್ಮ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯ (PC Act) ಅಡಿಯನ್ನು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪಿಸಿ ಆಕ್ಟ್ ಅಡಿಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಸಿಬಿಐ ತನಿಖೆ ಮಾಡಬಹುದು, ನಾವು ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ, ಕ್ಷಮಿಸಿ ಎಂದು ಅರ್ಜಿ ವಜಾಗೊಳಿಸಿದರು.

ಡಿಕೆ ಶಿವಕುಮಾರ್ ವಿರುದ್ಧ 2020 ರ ಅಕ್ಟೋಬರ್ 3 ರಂದು ಎಫ್‌ಐಆರ್ ದಾಖಲಾಗಿತ್ತು. ಡಿಕೆಶಿ ಆಸ್ತಿ 2013 ರಿಂದ 2018 ರವರೆಗೆ ತೀವ್ರ ಹೆಚ್ಚಾಗಿದೆ ಎಂದು ಸಿಬಿಐ ಆರೋಪಿಸಿದೆ. ಏಪ್ರಿಲ್ 2013 ರಲ್ಲಿ 33.92 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದ್ದ ಡಿ.ಕೆ ಶಿವಕುಮಾರ್ 2018 ರ ವೇಳೆಗೆ 128.6 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ್ದಾರೆ. ಏಪ್ರಿಲ್ 30, 2018ರ ವೇಳೆಗೆ ಅವರ ಒಟ್ಟು ಆಸ್ತಿ ಮೌಲ್ಯ 162.53 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಸಿಬಿಐ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದೆ.

2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.  ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್‌ 3 ರಂದು ಡಿಕೆ ಶಿವಕುಮಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಅಕ್ಟೋಬರ್ 2023 ರಲ್ಲಿ ಸಿಬಿಐ ತನಿಖೆಯನ್ನು ರದ್ದುಗೊಳಿಸುವಂತೆ ಶಿವಕುಮಾರ್ ಅವರ ಮನವಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು. ಇದೇ ವೇಳೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹಿಂದಿನ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿತ್ತು.

ರಾಜ್ಯ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಶ್ನಿಸಿದ್ದಾರೆ. ಸಿಬಿಐ ಕೂಡಾ ಒಂದು ಅರ್ಜಿ ಸಲ್ಲಿಸಿದೆ. ಇದಕ್ಕೆ ಸಂಬಂಧಿಸಿದಂತೆ ವಾದ ಪ್ರತಿವಾದ ಅಂತ್ಯವಾಗಿದ್ದು ಆದೇಶ ಕಾಯ್ದಿರಿಸಲಾಗಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದರೆ ಡಿ.ಕೆ ಶಿವಕುಮಾರ್ ಅವರಿಗೆ ಸಿಬಿಐ ಸಂಕಷ್ಟ ಹೆಚ್ಚಾಗಲಿದೆ. ಸದ್ಯ ಹೈಕೋರ್ಟ್‌ ಆದೇಶದ ಮೇಲೆ ಡಿಕೆ ಶಿವಕುಮಾರ್‌ ಭವಿಷ್ಯ ನಿಂತಿದೆ.

ಬೆಂಗಳೂರು

ಅಗಸ್ಟ್ 10 ರಂದು ಬೆಂಗಳೂರು ಮೆಟ್ರೋ ಫೇಸ್-3 ಶಂಕುಸ್ಥಾಪನೆ: ಪ್ರಧಾನಿ ಮೋದಿ ಉದ್ಘಾಟನೆ ನೆರವೇರಿಸಲಿದ್ದಾರೆ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಮತ್ತೊಂದು ಸಿಹಿ ಸುದ್ದಿ. ಬೆಂಗಳೂರು ಮೆಟ್ರೋ ಫೇಸ್-3 ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 10ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಪ್ರಕಟಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 10ರಂದು ಪ್ರಧಾನಿ ಮೋದಿ ಮೆಟ್ರೋ ಯೆಲ್ಲೋ ಲೈನ್ ಅನ್ನು ಉದ್ಘಾಟಿಸುವುದರ ಜೊತೆಗೆ ಜೆಪಿ ನಗರ ವೆಗಾಸಿಟಿ ಮಾಲ್‌ನಿಂದ ಕಡಬಗೆರೆವರೆಗೆ ವಿಸ್ತರಿಸಲಾಗಿರುವ ಮೆಟ್ರೋ ಮಾರ್ಗದ ಶಂಕುಸ್ಥಾಪನೆ ಕಾರ್ಯವನ್ನು ಸಹ ನೆರವೇರಿಸಲಿದ್ದಾರೆ,” ಎಂದು ಹೇಳಿದರು.

ಈ ಯೋಜನೆಯು ಸುಮಾರು ₹17,000 ಕೋಟಿ ವೆಚ್ಚದ ಫೇಸ್-3 ಯೋಜನೆಯ ಭಾಗವಾಗಿದೆ. ಮೊದಲೇ ಯೆಲ್ಲೋ ಲೈನ್ ಶಂಕುಸ್ಥಾಪನೆಗೆ ಮೋದಿ ಅವರೇ ಆಗಿದ್ದರೆ, ಈಗ ಉದ್ಘಾಟನೆಯ ಗೌರವವೂ ಅವರಿಗೇ ಸಲ್ಲಲಿದೆ.

ಡಿಸಿಎಂ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ:
ಡಿಸಿಎಂ ಡಿ.ಕೆ. ಶಿವಕುಮಾರ್ ಮೆಟ್ರೋ ಯೋಜನೆಯಲ್ಲಿ ರಾಜ್ಯದ ಪಾತ್ರವಿದೆ ಎಂದು ಹೇಳಿರುವುದರ ಬಗ್ಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸುತ್ತಾ, “ಇದುವರೆಗೆ ಈ ಯೋಜನೆಯ ಬಗ್ಗೆ ಯಾವ ರಾಜ್ಯ ಸಚಿವರೂ ಚಿಂತೆ ಮಾಡಿಲ್ಲ. ಪ್ರಧಾನಿ ಬರುವ ಸುದ್ದಿ ತಿಳಿಯುತ್ತಿದ್ದಂತೆ ಕ್ರೆಡಿಟ್ ಕಳಿಸಲು ಮುಂದಾಗಿದ್ದಾರೆ,” ಎಂದು ಟೀಕಿಸಿದರು.

ಫ್ಲೈಓವರ್ ಪ್ರಗತಿಯ ಮೇಲೂ ಟೀಕೆ:
“ಈಜಿಪುರದ 2.5 ಕಿ.ಮೀ ಫ್ಲೈಓವರ್‌ನ್ನು ಎಂಟು ವರ್ಷಗಳಿಂದ ಪೂರ್ಣಗೊಳಿಸಲಾಗಿಲ್ಲ. ಅದರೆ ಇದೀಗ 100 ಕಿ.ಮೀ ರಸ್ತೆಗಳ ಯೋಜನೆ ಪ್ರಾರಂಭಿಸಿದ್ದಾರೆ,” ಎಂದು ಹೇಳಿದ್ದಾರೆ.

ಮೆಟ್ರೋ ಯೋಜನೆಗೆ ಹಿಂದೆ ಸರ್ಕಾರದ ಕೊಡುಗೆ:
ಕೊರೋನಾ ಸಮಯದಲ್ಲೂ ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರಗಳು ಅನುದಾನ ಒದಗಿಸಿ ಕೆಲಸ ಮುಂದುವರೆದಿದ್ದವು. ಆದರೆ ಇದೀಗ ಎಂಡಿ ನೇಮಕ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

Continue Reading

ಅಪರಾಧ

Breaking News ಚಾಲಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖ!

ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೋಕಾಂತರವಾಗಿದೆ.

ಡೆತ್ ನೋಟ್‌ನಲ್ಲಿ ಸಂಸದ ಡಾ. ಕೆ. ಸುಧಾಕರ್ ಹೆಸರು:
8 ವರ್ಷಗಳಿಂದ ಲೆಕ್ಕಪರಿಶೋಧನೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಾಬು, ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆತ್ಮಹತ್ಯೆಗೆ ಕಾರಣವೆನಿಸಿದ ಹಣಕಾಸು ವಂಚನೆ:
ಬಾಬು ಅವರು ಡೆತ್ ನೋಟ್‌ನಲ್ಲಿ, ಸರ್ಕಾರಿ ಕೆಲಸ ಕೊಡಿಸುತ್ತೇವೆಂದು ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಾಬು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು:
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ FIR ದಾಖಲಾತಿ ನಡೆಯುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.

Continue Reading

ಬೆಂಗಳೂರು

ಬೆಂಗಳೂರಿನಲ್ಲಿ ವಸತಿ ಯೋಜನೆಗಳ ಅವ್ಯವಸ್ಥೆ: ಹೊಸ ಯೋಜನೆಗಳ ಬಗ್ಗೆ ಶಾಸಕ ಎಸ್.ಟಿ. ಸೋಮಶೇಖರ್ ಅಸಮಾಧಾನ

ಬೆಂಗಳೂರು, ಆಗಸ್ಟ್ 7 – ನಗರದಲ್ಲಿ ಈಗಿನ ವಸತಿ ಯೋಜನೆಗಳು ಪೂರ್ಣವಾಗಿಲ್ಲದಿರುವಾಗ ಹೊಸ ಭೂಸ್ವಾಧೀನ ಅಧಿಸೂಚನೆಗಳನ್ನು ನೀಡುವುದು ಅರ್ಥವಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಕಿಡಿಕಾರಿದರು.

ಯಶವಂತಪುರ ಕ್ಷೇತ್ರದ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಬ್ಬರಾಯನಪಾಳ್ಯ ಎ ಹಾಗೂ ಬಿ ಗ್ರಾಮಗಳಲ್ಲಿ ಹೊಸ ಅಂಗನವಾಡಿ ಕಟ್ಟಡ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ವೇಳೆ ಅವರು ಮಾತನಾಡಿದರು.

ಅವರು ಅಭಿಪ್ರಾಯಪಟ್ಟ ಪ್ರಮುಖ ವಿಷಯಗಳು:

  • ಬೆಂಗಳೂರಿನ ಜನಸಂಖ್ಯೆ ಈಗಾಗಲೇ 1.5 ಕೋಟಿಗೂ ಮೀರುತ್ತಿದೆ.
  • ವಸತಿ ಸಮುಚ್ಛಯಗಳಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳು ಬಾಕಿಯಿವೆ.
  • ಕುಡಿಯುವ ನೀರಿನ ಕೊರತೆ, ಒಳಚರಂಡಿ ಸಮಸ್ಯೆ, ರಾಜಕಾಲುವೆಗಳ ಉಕ್ಕಿಹರಿವು ನಗರದ ಮುಖ್ಯ ಸಮಸ್ಯೆಗಳಾಗಿವೆ.
  • ಕೆಲ ಕಟ್ಟಡಗಳು ಕಳಪೆ ಗುಣಮಟ್ಟದಿಂದ ನಿರ್ಮಾಣವಾಗಿದ್ದು, ಸೋರಿಕೆ ಸಮಸ್ಯೆ ಜನರನ್ನು ಕಾಡುತ್ತಿದೆ.
  • “ಕಟ್ಟಡ ಕುಸಿದು ಅನಾಹುತವಾದರೆ ಹೊಣೆ ಯಾರು?” ಎಂದು ಅವರು ಪ್ರಶ್ನಿಸಿದರು.

ಬೇರೆ ಪ್ರಮುಖ ಅಂಶಗಳು:
ನಗರದ ವಾಹನ ಸಂಚಾರ ದಟ್ಟಣೆ, ನಿಯಂತ್ರಣ ತಪ್ಪಿದ ನಗರ ವಿಸ್ತರಣೆ, ಮೂಲಸೌಕರ್ಯದ ಕೊರತೆ ಇವುಗಳಿಂದ ನಾಗರಿಕರು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿನಿಂದ ಹೊರಗೆ ಹೊಸ ವಸತಿ ಯೋಜನೆಗಳನ್ನು ರೂಪಿಸಿ ಮೂಲಸೌಕರ್ಯ ಒದಗಿಸಿದರೆ ಜನಸಂದಣಿ ನಿಯಂತ್ರಣ ಸಾಧ್ಯವೆಂದು ಶಾಸಕ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಾಜರಿದ್ದವರು:
ಪಂಚಾಯತ್ ಅಧ್ಯಕ್ಷೆ ಹೇಮಾ ನಾರಾಯಣ್, ಸದಸ್ಯರು ಸದಾನಂದ.ಡಿ, ಎನ್.ಕುಮಾರ್, ರೇವಣಸಿದ್ದಯ್ಯ, ಅಶ್ವತ್, ವೆಂಕಟಾಚಲ, ಸುನಿಲ್, ಪುಟ್ಟಮಲ್ಲು, ತಾತಪ್ಪ, ಶಿವಣ್ಣ, ಹನುಮಂತ ಹಾಗೂ ಗ್ರಾಮಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

Trending