Connect with us

ರಾಜ್ಯ

ಅವಮಾನಿತರಿಂದಲೇ ಸನ್ಮಾನ: ರೈತನಿಗೆ ಕ್ಷಮೆ ಕೇಳಿ ಸನ್ಮಾನಿಸಿದ ಬೆಂಗಳೂರಿನ ಜಿ ಟಿ ಮಾಲ್!ನ್ಅವಮಾನಿತರಿಂದಲೇ ಸಮ್ಮಾನ: ರೈತನಿಗೆ ಕ್ಷಮೆ ಕೇಳಿ ಸನ್ಮಾನಿಸಿದ ಬೆಂಗಳೂರಿನ ಜಿ ಟಿ ಮಾಲ್!

ಬೆಂಗಳೂರು: ಧರಿಸಿದ ಬಟ್ಟೆ ನೋಡಿ ಮನುಷ್ಯನಿಗೆ ಮಣೆ ಹಾಕಬಾರದು ಎಂಬ ಮಾತಿಗೆ ಈ ಘಟನೆ ಉದಾಹರಣೆ.

ಬೆಂಗಳೂರಿನ ಜಿಟಿ ಮಾಲ್‌ಗೆ 60 ವರ್ಷ ವಯಸ್ಸಿನ ಫಕೀರಪ್ಪ ಎಂಬ ರೈತರು ಸಾಂಪ್ರದಾಯಿಕ ಧೋತಿ ಮತ್ತು ಶರ್ಟ್ ಧರಿಸಿದ ಬಂದಿದ್ದರು ಎಂಬ ಕಾರಣಕ್ಕೆ ಒಳಗೆ ಬಿಡಲಿಲ್ಲ. ನಿನ್ನೆ ಅವರು ತಮ್ಮ ಮಗ ಮತ್ತು ಇಡೀ ಕುಟುಂಬದೊಂದಿಗೆ ಕಲ್ಕಿ ಸಿನಿಮಾ ವೀಕ್ಷಣೆಗೆ ಬಂದಿದ್ದರು. ರೈತ ಮತ್ತು ಅವರ ಮಗ ಮಂಗಳವಾರ ಚಲನಚಿತ್ರವನ್ನು ವೀಕ್ಷಿಸಲು ಮಾಲ್‌ಗೆ ಹೋಗಿದ್ದಾರೆ, ಆದರೆ ಭದ್ರತಾ ಸಿಬ್ಬಂದಿ ಅವರ ಪ್ರವೇಶಕ್ಕೆ ಸೂಕ್ತವಲ್ಲ ಎಂದು ಪರಿಗಣಿಸಿದ್ದಾರೆ.

ನಡೆದ ಘಟನೆಯೇನು?: ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಹಾವೇರಿಯ ನಾಗರಾಜ್ ತನ್ನ ತಂದೆಯೊಂದಿಗೆ ಮಾಗಡಿ ರಸ್ತೆಯ ಜಿಟಿ ಮಾಲ್‌ಗೆ ಸಿನಿಮಾ ವೀಕ್ಷಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಇವರು ಹಾವೇರಿ ಮೂಲದವರಾಗಿದ್ದು, ರೈತ ನಾಗರಾಜ್ ಅವರ ತಂದೆ ಸಾಂಪ್ರದಾಯಿಕ ರೈತ ಉಡುಗೆ ತೊಟ್ಟಿದ್ದ ಕಾರಣ ಮಾಲ್ ಸಿಬ್ಬಂದಿ ಇಬ್ಬರನ್ನು ಮುಖ್ಯ ಪ್ರವೇಶಕ್ಕೆ ತಡೆದಿದ್ದಾರೆ. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಸಿಬ್ಬಂದಿಗೆ ಮನವಿ ಮಾಡಿದರೂ ಪ್ರವೇಶ ನಿರಾಕರಿಸಲಾಯಿತು. ನಾಗರಾಜ್ ಮೇಲ್ವಿಚಾರಕರನ್ನು ಪ್ರಶ್ನಿಸಿದಾಗ, ಉನ್ನತ ಅಧಿಕಾರಿಗಳು ಇಂತಹ ಬಟ್ಟೆ ಧರಿಸಿದವರನ್ನು ಒಳಗೆ ಬಿಡಬಾರದು ಎಂದು ಆದೇಶ ನೀಡಿದ್ದಾರೆ ಎಂದಿದ್ದಾರೆ.

ಇದಕ್ಕೆ ಬೇಸರದಿಂದ ನಾಗರಾಜ್ ತಮ್ಮ ಮೊಬೈಲ್ ನಲ್ಲಿ ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದರು. ಅದು ವೈರಲ್ ಆಗಿ ರೈತಪರ ಸಂಘಟನೆಗಳು ಮತ್ತು ಕನ್ನಡ ಪರ ಸಂಘಟನೆಗಳ ಸದಸ್ಯರ ಕಣ್ಣಿಗೆ ಬಿದ್ದಿದೆ. ಅವರು ಇಂದು ಬೆಳಗ್ಗೆ ಮಾಲ್ ನ ಮುಂದೆ ಬಂದು ಪ್ರತಿಭಟನೆ ನಡೆಸಿದ್ದರು.

ಸುದ್ದಿ ಮಾಧ್ಯಮಗಳಲ್ಲಿ ಇಂದು ವ್ಯಾಪಕವಾಗಿ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತ ಮಾಲ್ ಮಾಲೀಕರು ಒಳಗೆ ಬಿಡದ ವಾಚ್ ಮೆನ್ ನ್ನು ಕೆಲಸದಿಂದ ವಜಾ ಮಾಡಿದ್ದಲ್ಲದೆ ರೈತ ಫಕೀರಪ್ಪನನ್ನು ಕರೆದು ಮಾಲ್ ನಲ್ಲಿ ಇಂದು ಸನ್ಮಾನಿಸಿದ್ದಾರೆ. ಮಾಲ್​ ಇನ್​​ಚಾರ್ಜ್ ಸುರೇಶ್​​​ ಅವರು ಫಕೀರಪ್ಪಗೆ ಕ್ಷಮೆಯಾಚಿಸಿದ್ದಾರೆ.

ರೈತ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಈ ಬಗ್ಗೆ ಮಾತನಾಡಿದ, ಜಿ.ಟಿ.ಮಾಲ್ ನಲ್ಲಿ ವೇಷಭೂಷಣದ ಕಾರಣಕ್ಕೆ ರೈತರೊಬ್ಬರಿಗೆ ಪ್ರವೇಶ ನಿರಾಕರಿಸಿರುವ ಘಟನೆ ನಾಚಿಕೆಗೇಡಿನ ಸಂಗತಿ. ಬೆಂಗಳೂರು ಪೊಲೀಸರು ಕೂಡಲೇ ಮಾಲ್ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಾಲ್ ಮಾಲೀಕರು ರೈತನ ಕ್ಷಮೆ ಕೇಳಬೇಕು; ಇಲ್ಲದಿದ್ದರೆ ರಾಜ್ಯದ ನೂರಾರು ರೈತರು ಮಾಲ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ರೈತರಿಲ್ಲದೆ ಮಾಲ್ ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಮಾಲ್ ಮಾಲೀಕರು ಆಹಾರ ಸೇವಿಸುತ್ತಿದ್ದರೆ, ಅವರು ಈ ರೀತಿ ವರ್ತಿಸುತ್ತಿರಲಿಲ್ಲ. ರೈತರು ದೇಶದ ಬೆನ್ನೆಲುಬು ಎಂದು ಹೇಳಿದ್ದರು.

ಕೃಷ್ಣ ಭೈರೇಗೌಡ ಪ್ರತಿಕ್ರಿಯೆ

ಈ ಘಟನೆ ಸಂಬಂಧ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಮುಖ ನೋಡಿ, ಬಟ್ಟೆ ನೋಡಿ ಒಬ್ಬ ವ್ಯಕ್ತಿಯನ್ನು ಅಳೆಯಬಾರದು. ಇದೊಂದು ಬ್ರಿಟಿಷರ‌ ಮನಸ್ಥಿತಿ, ನಮ್ಮನ್ನು ಆಳಿದವರ ಮೈಂಡ್​ಸೆಟ್. ಜಿ.ಟಿ.ಮಾಲ್​ ಅಷ್ಟೇ ಅಲ್ಲ, ಬೇರೆ ಕಡೆಯೂ ಇಂತಹ ರೀತಿ ನಡೆದಿವೆ. ಅರಿವಿನ ಕೊರತೆ ಇದೆಯೋ, ದುರಹಂಕಾರದಿಂದ ಮಾಡುತ್ತಿದ್ದಾರೋ? ಜಿ.ಟಿ.ಮಾಲ್​ನವರು ಹಾಗೇ ನಡೆದುಕೊಂಡಿದ್ದು ತಪ್ಪು, ಖಂಡನೀಯ. ಮುಖ ನೋಡಿ ಗೌರವ ಕೊಡುವುದು ಖಂಡನೀಯ ಎಂದರು.

ಇತ್ತೀಚಿಗೆ ರೈತನೊಬ್ಬನಿಗೆ ನಮ್ಮ ಮೆಟ್ರೋದಲ್ಲಿ ಪ್ರವೇಶ ನಿರಾಕರಿಸಲಾಗಿತ್ತು. ಭದ್ರತಾ ಸಿಬ್ಬಂದಿ ಅವರ ಉಡುಪು ಕಂಡು ಪ್ರಯಾಣಕ್ಕೆ ಅನುಚಿತ ಎಂದು ಬಿಟ್ಟಿರಲಿಲ್ಲ. ಈ ಘಟನೆಯ ನಂತರ ಭದ್ರತಾ ಮೇಲ್ವಿಚಾರಕನನ್ನು ವಜಾಗೊಳಿಸಲಾಗಿತ್ತು.

ದೇಶ

GBA ELECTION : 5 ಪಾಲಿಕೆಗಳಿಗೆ ವಾರ್ಡ್ ಗಡಿ ಪಾಲನೆ ಕಡ್ಡಾಯ – ಮುಖ್ಯ ಆಯುಕ್ತ ಸೂಚನೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿ ಅಧಿಸೂಚನೆಯಲ್ಲಿ ನಮೂದಿಸಿರುವ ವಾರ್ಡ್ ಗಡಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಜಿಬಿಎ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕರಡು ಮತದಾರರ ಪಟ್ಟಿಯ ಪರಿಶೀಲನೆಗೆ ಸಂಬಂಧಿಸಿದ ಪ್ರಮಾಣಿತ ಕಾರ್ಯವಿಧಾನ (SOP) ಕುರಿತು ಚರ್ಚೆ ನಡೆಯಿತು. ಅಧಿಸೂಚನಾ ವಿವರಣೆಗಳಿಗೆ ಅನುಗುಣವಾಗಿ ವಾರ್ಡ್ ಮ್ಯಾಪ್ ಗಡಿಗಳನ್ನು ಸರಿಪಡಿಸಿ ನವೀಕರಿಸಲು ಐಟಿ ವಿಭಾಗಕ್ಕೆ ನಿರ್ದೇಶನ ನೀಡಲಾಗಿದೆ. ದೀರ್ಘಾವಧಿಯಲ್ಲಿ ವ್ಯವಸ್ಥಿತ ಸರ್ವೇ ನಡೆಸುವಂತೆ ಸೂಚಿಸಲಾಗಿದೆ.

ಚುನಾವಣಾ ವಿಭಾಗ ರಚನೆ

ಪ್ರತಿ ಪಾಲಿಕೆಯಲ್ಲಿ ತಹಸೀಲ್ದಾರ್, ವ್ಯವಸ್ಥಾಪಕ, ಎಫ್‌ಡಿ, ಎಸ್‌ಡಿಎ ಹಾಗೂ ಡೇಟಾ ಎಂಟ್ರಿ ಆಪರೇಟರ್ ಒಳಗೊಂಡ ವಿಶೇಷ ಚುನಾವಣಾ ವಿಭಾಗ ರಚಿಸಲು ಸೂಚಿಸಲಾಗಿದೆ.

ವಿಭಜಿತ ವಾರ್ಡ್‌ಗಳ ವಿಶೇಷ ಪರಿಶೀಲನೆ

ವಿಭಜಿತ ವಾರ್ಡ್‌ಗಳ ಮಾಹಿತಿಯನ್ನು ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಅಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸಬೇಕು. ಪಾಲಿಕೆ ಆಯುಕ್ತರು ಸ್ವತಂತ್ರವಾಗಿ ಮಾಹಿತಿ ದೃಢೀಕರಿಸಬೇಕು ಎಂದು ಮಹೇಶ್ವರ್ ರಾವ್ ತಿಳಿಸಿದ್ದಾರೆ.

ನೋಡಲ್ ಅಧಿಕಾರಿಗಳ ನೇಮಕ

ಡೇಟಾ ಸಮಸ್ಯೆಗಳ ಪರಿಹಾರ ಹಾಗೂ ಜಿಬಿಎ ಚುನಾವಣಾ ವಿಭಾಗದೊಂದಿಗೆ ಸಮನ್ವಯಕ್ಕಾಗಿ ಕಂದಾಯ ವಿಭಾಗದ ಅಪರ ಆಯುಕ್ತರನ್ನು ಐದು ಪಾಲಿಕೆಗಳಲ್ಲೂ ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲು ಸೂಚಿಸಲಾಗಿದೆ.

“ಕರಡು ಮತದಾರರ ಪಟ್ಟಿಯ ಪರಿಶೀಲನೆಯಲ್ಲಿ ಪಾರದರ್ಶಕತೆ, ನಿಖರತೆ ಹಾಗೂ ವಿಶ್ವಾಸಾರ್ಹತೆ ಖಚಿತಪಡಿಸಲು SOP ಕಟ್ಟುನಿಟ್ಟಾಗಿ ಅನುಸರಿಸಬೇಕು” ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ಸಭೆಯಲ್ಲಿ ವಿವಿಧ ಪಾಲಿಕೆಗಳ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ದೇಶ

ಬೇಸಿಗೆಗೆ ಮುನ್ನ ಬೆಂಗಳೂರು ಜಲಮಂಡಳಿ ಎಚ್ಚರಿಕೆ: ಕಾವೇರಿ ನೀರಿಗೆ ಪರ್ಯಾಯ ಯೋಜನೆ

ಬೆಂಗಳೂರು: ಶಿವರಾತ್ರಿ ಮುಗಿಯುತ್ತಿದ್ದಂತೆ ನಗರದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಮಾರ್ಚ್‌ನಿಂದ ಅಧಿಕೃತವಾಗಿ ಬೇಸಿಗೆ (Summer) ಆರಂಭವಾಗಲಿದ್ದು, ನೀರಿನ ಅಭಾವದ ಆತಂಕ ಸಹಜ. ಆದರೆ ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ (Drinking Water) ಕೊರತೆ ಆಗದಂತೆ ಬೆಂಗಳೂರು ಜಲಮಂಡಳಿ (Bengaluru Water Board) ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

54 ಟಿಎಂಸಿ ನೀರು ಲಭ್ಯ

ಸದ್ಯ ಕೆಆರ್‌ಎಸ್ ಜಲಾಶಯದಲ್ಲಿ 54 ಟಿಎಂಸಿ ನೀರು ಲಭ್ಯವಿದ್ದು, ಜುಲೈವರೆಗೆ ಬೆಂಗಳೂರಿಗೆ ಅಗತ್ಯವಿರುವ 14 ಟಿಎಂಸಿ ನೀರು ಸಾಕಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ಯಾಂಕರ್ ವ್ಯವಸ್ಥೆ ಸಿದ್ಧ

ನೀರಿನ ಕೊರತೆ ಕಾಣಿಸಬಹುದಾದ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಜಲಮಂಡಳಿ ಯೋಜನೆ ರೂಪಿಸಿದೆ. ಬೋರ್‌ವೆಲ್‌ ನೀರು ಬೇಸಿಗೆಯಲ್ಲಿ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ, ಕಳೆದ ವರ್ಷದಿಂದಲೇ ಬೋರ್‌ವೆಲ್ ನಿರ್ವಹಣೆಯನ್ನು ಜಲಮಂಡಳಿ ವಹಿಸಿಕೊಂಡಿದೆ. ಅಂತರ್ಜಲ ಕುಸಿತ ತಡೆಯಲು ಕ್ರಮ ಕೈಗೊಳ್ಳಲಾಗಿದೆ.

ನೀರು ವ್ಯರ್ಥ ಮಾಡಿದ್ರೆ ದಂಡ

ಕಾವೇರಿ ನೀರನ್ನು ಬೈಕ್, ಕಾರು ತೊಳೆಯಲು ಬಳಸುವುದು ಅಥವಾ ಅನಗತ್ಯವಾಗಿ ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಜಲಮಂಡಳಿ ಸಿದ್ಧವಾಗಿದೆ. ವೀಕ್ಷಕರು ಹಾಗೂ ಬ್ಲೂಫೋರ್ಸ್ ತಂಡಗಳು ಪರಿಶೀಲನೆ ನಡೆಸಲಿದ್ದು, ನಿಯಮ ಉಲ್ಲಂಘನೆಗೆ ದಂಡ ವಿಧಿಸಲಾಗುತ್ತದೆ.

ಜನರು ನೀರನ್ನು ಜಾಗರೂಕತೆಯಿಂದ ಬಳಕೆ ಮಾಡಿದರೆ ಬೇಸಿಗೆಯಲ್ಲಿ ಜಲಕ್ಷಾಮ ಸಮಸ್ಯೆ ತಗ್ಗಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

Continue Reading

ಬೆಂಗಳೂರು

BENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ

ಬೆಂಗಳೂರು: ವಸಂತಪುರದಲ್ಲಿ ಅನಾದಿಕಾಲದಿಂದ ನೆಲಸಿರುವ ಸ್ವಯಂವ್ಯಕ್ತ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ಮಹೋತ್ಸವ ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ನೆರವೇರಿತು. ಕಳೆದ ಒಂಬತ್ತು ದಿನಗಳಿಂದ ನಡೆದ ಶ್ರೀಸ್ವಾಮಿಯ ಬ್ರಹ್ಮ ರಥೋತ್ಸವವು ವೈಭವಯುತವಾಗಿ ಸಾಗಿದ್ದು, ಅದರ ಅಂತಿಮ ಘಟ್ಟವಾಗಿ ಸ್ವಾಮಿಗೆ ವಿಶ್ರಾಂತಿ ನೀಡುವ ಶಯನೋತ್ಸವ ಸುಗಂಧ ಪರಿಮಳಯುಕ್ತ ಮಂಟಪದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಈ ಶಯನೋತ್ಸವವನ್ನು ತಲಘಟ್ಟಪುರದ ಮಾಜಿ ಶ್ಯಾನಭೋಗ ಟಿ.ವಿ. ನಾರಾಯಣಮೂರ್ತಿ ಅವರ ಕುಟುಂಬವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದು, ಈ ಬಾರಿ ತ.ನಾ. ಶಾಂತಕುಮಾರ್ ಅವರ ನೇತೃತ್ವದಲ್ಲಿ ಕುಟುಂಬ ಸದಸ್ಯರೊಂದಿಗೆ ಉತ್ಸವ ಜರುಗಿತು. ಪ್ರಧಾನ ಅರ್ಚಕ ರಘುರಾಮ್ ಭಟ್ ಅವರು ಸಕಲ ವಿಧಿವಿಧಾನಗಳೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು.

ಉತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ಸಾವಿರಾರು ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದು ತೀರ್ಥ-ಪ್ರಸಾದ ಸ್ವೀಕರಿಸಿದರು. ಭಕ್ತರ ಜಯಘೋಷಗಳಿಂದ ದೇವಾಲಯ ಪ್ರದೇಶ ಭಕ್ತಿಮಯ ವಾತಾವರಣಕ್ಕೆ ಸಾಕ್ಷಿಯಾಯಿತು.

ಈ ಸಂದರ್ಭದಲ್ಲಿ ಅಕ್ಷಯ ವಿಪ್ರ ಮಹಾಸಭಾದ ಕಾರ್ಯದರ್ಶಿ ಎನ್.ಎಸ್. ಸುಧೀಂದ್ರ ರಾವ್, ಕಿರಣ್ ಕುಮಾರ್, ಎಸ್. ರಾಮರಾವ್, ಸುಧಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

Trending