ದೇಶ
ಸಿದ್ದರಾಮಯ್ಯ – ಅಶ್ವಥ್ ನಾರಾಯಣ್ ನಡುವೆ ಏಕವಚನ, ಮಾತಿನ ಚಕಮಕಿ; ಸದನದಲ್ಲಿ ಕೋಲಾಹಲ!
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಗುರುವಾರವಾದ ಇಂದು ಸಹ ವಾಲ್ಮೀಕಿ ನಿಗಮದ ಹಗರಣ ಕೇಸ್ ಸದ್ದು ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಅವರ ನಡುವೆ ಜಟಾಪಟಿ ನಡೆಯಿತು. ಈ ವೇಳೆ ಇಬ್ಬರೂ ಏಕವಚನ ಪ್ರಯೋಗಿಸಿ ವಾಗ್ದಾಳಿ ನಡೆಸಿದರು.
ಕಲಾಪ ಆರಂಭದಲ್ಲೇ ವಾಲ್ಮೀಕಿ ಹಗರಣದ ವಿಚಾರದಲ್ಲಿ ಕಾಂಗ್ರೆಸ್ – ಬಿಜೆಪಿ ನಾಯಕರ ನಡುವೆ ತೀವ್ರ ಗದ್ದಲ ಏರ್ಪಟ್ಟಿತು. ಬಿಜೆಪಿ ಅವರಿಂದ ಸಾಮಾಜಿಕ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದು ಕಿಡಿ ಕಾರಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಅಶ್ವಥ್ ನಾರಾಯಣ್ ಏರುಧ್ವನಿಯಲ್ಲಿ ವಾಗ್ದಾಳಿ ನಡೆಸಿದರು. ಪೇ ಸಿಎಂ, 100% ಸಿಎಂ ಅಂತ ಕೂಗಿದರು, ಇದಕ್ಕೆ ಬಿಜೆಪಿಯ ಎಲ್ಲ ಶಾಸಕರು ದನಿಗೂಡಿಸಿದರು. ನಂತರ ಗರಂ ಆದ ಸಿಎಂ, ನಿಮಗೆ ಮಾನ ಮಾರ್ಯಾದೆ ಇಲ್ಲ, ನಿಮ್ಮ ಹಗರಣಗಳನ್ನೆಲ್ಲ ಈಗ ಬಲಿಗೆ ಎಳೆಯುತ್ತೇನೆ ಎನ್ನುತ್ತಿದ್ದಂತೆ ʻಭ್ರಷ್ಟ ಮುಖ್ಯಮಂತ್ರಿʼ ಎಂದು ಅಶ್ವಥ್ ನಾರಾಯಣ್ ಕೂಗಿದರು. ಇದಕ್ಕೆ ಆಕ್ರೋಶ ಹೊರಹಾಕಿದ ಕೈ ಸಚಿವರಾದ ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ, ಅಶ್ವಥ್ ನಾರಾಯಣ ಅವರನ್ನ ಹೊರಗೆ ಹಾಕಿ ಎಂದ ಸ್ಪೀಕರ್ ಎದುರು ಪಟ್ಟು ಹಿಡಿದರು. ಈ ವೇಳೆ ಉಭಯ ನಾಯಕರ ನಡುವೆ ಗದ್ದಲ ಏರ್ಪಟ್ಟಿತು.
ನಿಮ್ಮ ಡಿಸಿಎಂ ಜೈಲಿಗೆ ಹೋಗಿದ್ದವರು:
ಅಶ್ವಥ್ ನಾರಾಯಣ್ – ಭೈರತಿ ಸುರೇಶ್ ನಡುವೆಯೂ ಸದನದಲ್ಲಿ ವಾಕ್ಸಮರ ಏರ್ಪಟ್ಟಿತು. ನೀವು ಭ್ರಷ್ಟರಾಗಿದ್ದರಿಂದಲೇ 87 ಕೋಟಿ ರೂ. ಲೂಟಿಯಾಗಿದ್ದು, ನೀವೊಬ್ಬ ಲೂಟಿಕೋರ ಎಂದು ಅಶ್ವಥ್ ನಾರಾಯಣ್ ಗದರಿದರು. ಇದಕ್ಕೆ ನೀನು ಲೂಟಿಕೋರ ನಿಮ್ಮ ಅವಧಿಯಲ್ಲಿ ಏನಾಗಿದೆ ಎಲ್ಲ ಗೊತ್ತಿದೆ ಎಂದು ಬೈರತಿ ಸುರೇಶ್ ತಿರುಗೇಟು ನೀಡಿದರು. ಈ ವೇಳೆ ಮಧ್ಯಪ್ರವೇಶಿಸಿದ ಶಾಸಕ ಸುನೀಲ್ ಕುಮಾರ್, ನಿಮ್ಮ ಉಪಮುಖ್ಯಮಂತ್ರಿ ಜೈಲಿಗೆ ಹೋಗಿದ್ದವರು, ಡಿ.ಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಿದರು. ಬಳಿಕ ಗುಡುಗಿದ ಸಚಿವ ದಿನೇಶ್ ಗುಂಡೂರಾವ್, ಎಲ್ಲವೂ ಸರಿಯಾಗಿ ಚರ್ಚೆಯಾಗ್ತಿತ್ತು, ಇವರು ಮಧ್ಯೆ ಎದ್ದುಬಿಟ್ಟರು. ಅವರು ಯಾವ ಡಾಕ್ಟ್ರೋ ಗೊತ್ತಾಗ್ತಿಲ್ಲ? ಎಂದು ಅಶ್ವಥ್ ನಾರಾಯಣ್ ವಿರುದ್ಧ ಲೇವಡಿ ಮಾಡಿದರು. ಈ ವೇಳೆ ಮೊದಲು ನಿಮ್ಮದು ನೋಡಿಕೊಳ್ಳಿ, ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಾಗ್ತಿದೆ, ಆರೋಗ್ಯ ಇಲಾಖೆ ಏನಾಗಿದೆ? ನೋಡ್ಕೊಳ್ಳಿ ಎಂದು ಗುಂಡೂರಾವ್ ಆರೋಪಕ್ಕೆ ಅಶ್ವಥ್ ನಾರಾಯಣ್ ಟಾಂಗ್ ಕೊಟ್ಟರು. ಇದರಿಂದ ಸದನದಲ್ಲಿ ಎರಡೂ ಕಡೆ ಪರಸ್ಪರ ವಾಕ್ಸಮರ ಉಂಟಾಯಿತು.
ಸಿಎಂ ವಿರುದ್ಧ ಏರುಧ್ವನಿ ಎತ್ತಿದ ಅಶ್ವಥ್ ನಾರಾಯಣ್:
ಸದನದಲ್ಲಿ ಗದ್ದಲದ ನಡುವೆ ಸಿಎಂ ವಿರುದ್ಧ ಅಶ್ವಥ್ ನಾರಾಯಣ್ ಏರು ಧ್ವನಿಯಲ್ಲಿ ಮಾತನಾಡಿದರು. ಭ್ರಷ್ಟಾಚಾರ ನಡೆಸಿದವರು ನೀವು ಎಂದು ವಾಗ್ದಾಳಿ ನಡೆಸಿದರು. ಈ ವೇಳೆ ಅಶ್ವಥ್ ನಾರಾಯಣ್ಗೆ ಸಿಎಂ ಎಚ್ಚರಿಕೆ ನೀಡಿದರು. ನಿಮ್ಮ ಭ್ರಷ್ಟಾಚಾರಗಳನ್ನೆಲ್ಲ ತೆಗೆಯುತ್ತೇವೆ, ಕೆಲವರದ್ದನ್ನೆಲ್ಲ ಈಗ ತೆಗೆಯುತ್ತೇವೆ. ನಿಮಗಿಂತ ಜಾಸ್ತಿ ಕೂಗೋಕೆ ನಮಗೂ ಬರುತ್ತೆ. ಭ್ರಷ್ಟಾಚಾರ ಮಾಡಿದವನು ನೀನು, ಭ್ರಷ್ಟಾಚಾರದ ಬಗ್ಗೆ ನನಗೆ ಹೇಳಿ ಕೊಡ್ತೀರಾ? 42 ವರ್ಷಗಳಿಂದ ಅಧಿಕಾರದಲ್ಲಿ ಇರುವವನು ನಾನು. ನೀವು 40% ಕಮೀಷನ್ ಹೊಡೆದಿದ್ದು ಬಯಲಾಗಿದೆ. ಹೇಡಿಗಳು, ಭಂಡರು ಅಂತ ಅಶ್ವಥ್ ನಾರಾಯಣ್ ವಿರುದ್ಧ ಸಿಎಂ ಕೆಂಡಾಮಂಡಲವಾದರು.
ಸಿಎಂ ವಿರುದ್ಧ ಏಕವಚನ ಪ್ರಯೋಗ:
ಸಿಎಂ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಂತೆ ಗರಂ ಆದ ಅಶ್ವಥ್ ನಾರಾಯಣ್ ಸಿಎಂ ವಿರುದ್ಧ ಏಕವಚನ ಪ್ರಯೋಗಿಸಿದರು. ನೀನು ಭ್ರಷ್ಟಾಚಾರದ ಪಿತಾಮಹ ಎಂದು ವಾಗ್ದಾಳಿ ನಡೆಯಿತು. ಇದರಿಂದ ಸದನದಲ್ಲಿ ಕೋಲಾಹಲ ಏರ್ಪಟ್ಟಿತು. ಬಿಜೆಪಿ ಶಾಸಕರು, ಕಾಂಗ್ರೆಸ್ ಸಚಿವರು ಪರಸ್ಪರ ವೈಯಕ್ತಿಕ ಟೀಕೆ ನಡೆಸಿದ ಪ್ರಸಂಗ ಕಂಡುಬಂದಿತು.
ದೇಶ
“ಯತೀಂದ್ರಗೆ ಮಿನಿಮಮ್ ಕಾಮನ್ ಸೆನ್ಸ್ ಇಲ್ಲ” – ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಮಾಗಡಿ ಶಾಸಕ ಬಾಲಕೃಷ್ಣ ಕಿಡಿಕಾರಿದ್ದಾರೆ. “ಯತೀಂದ್ರ ಅವರಿಗೆ ಮಿನಿಮಮ್ ಕಾಮನ್ ಸೆನ್ಸ್ ಕೂಡ ಇಲ್ಲ” ಎಂದು ಅವರು ನೇರ ವಾಗ್ದಾಳಿ ನಡೆಸಿದರು.
ಹೈಕಮಾಂಡ್ನಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಯತೀಂದ್ರ ನೀಡಿದ್ದ ಹೇಳಿಕೆಗೆ ಸುವರ್ಣ ಸೌಧದಲ್ಲಿ ಪ್ರತಿಕ್ರಿಯಿಸಿದ ಬಾಲಕೃಷ್ಣ, “ದೊಡ್ಡವರಿಗೆ ಒಂದು ನ್ಯಾಯ, ಚಿಕ್ಕವರಿಗೆ ಒಂದು ನ್ಯಾಯ ಆಗುತ್ತಿದೆ. ಯತೀಂದ್ರಗೆ ನೋಟಿಸ್ ನೀಡದೇ ಇದ್ದದ್ದು ಅಸಮಾಧಾನಕಾರಿ” ಎಂದರು.
“ಈ ರೀತಿ ನಡೆಯುತ್ತಿರುವುದಕ್ಕೆ ನಮ್ಮ ಇಕ್ಬಾಲ್ ಹುಸೇನ್ ಮಾತಾಡಿದ್ರೆ ಬಲಾತ್ಕಾರ, ಯತೀಂದ್ರ ಮಾತಾಡಿದ್ರೆ ಚಮತ್ಕಾರ… ಅದನ್ನು ಅದ್ಭುತವಾಗಿ ಹೇಳಿದ್ದಾರೆ” ಎಂದು ಬಾಲಕೃಷ್ಣ ಮತ್ತಷ್ಟು ತಿರುಗೇಟು ನೀಡಿದರು.
ಇದಕ್ಕೂ ಮುಂಚೆ ಸಚಿವ ಡಿ.ಕೆ. ಶಿವಕುಮಾರ್ ಪರವಾಗಿ ಕೆಲವು ಶಾಸಕರು ನೀಡಿದ ಹೇಳಿಕೆಗಳಿಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿತ್ತು. ಆದರೆ ಈಗ ಸಿಎಂ ಪುತ್ರ ಯತೀಂದ್ರ ನೇರವಾಗಿ ತಂದೆಯ ಪರ ಬ್ಯಾಟ್ ಬೀಸಿದರೂ ಇನ್ನೂ ನೋಟಿಸ್ ನೀಡಿಲ್ಲ ಎಂಬ ಪ್ರಶ್ನೆಯನ್ನು ಡಿಕೆ ಬೆಂಬಲಿಗ ಶಾಸಕರು ಎತ್ತಿದ್ದಾರೆ.
ಬೆಳಗಾವಿ ಅಧಿವೇಶನದ ರಾಜಕೀಯ ವಾತಾವರಣ ಈ ಆರೋಪ-ಪ್ರತ್ಯಾರೋಪಗಳಿಂದ ಮತ್ತಷ್ಟು ಕಾವು ಪಡೆದಿದೆ.
ದೇಶ
ರಜನಿಕಾಂತ್ 75ನೇ ಜನ್ಮದಿನ: ಜೈಲರ್ 2 ಸೆಟ್ನಲ್ಲಿ ಭವ್ಯ ಸಂಭ್ರಮ
ಮುಂಬೈ/ಚೆನ್ನೈ: ಭಾರತೀಯ ಸಿನಿರಂಗದ ಸೂಪರ್ಸ್ಟಾರ್ ರಜನಿಕಾಂತ್ (Rajinikanth) ಇಂದು 75ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಜೈಲರ್-2 (Jailer 2) ಚಿತ್ರದ ಶೂಟಿಂಗ್ ನಡುವೆ ಸೆಟ್ನಲ್ಲೇ ತಲೈವ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಚಿತ್ರದ ಸಂಪೂರ್ಣ ತಂಡ ವಿಶೇಷ ಕೇಕ್ ಕತ್ತರಿಸಿ ರಜನಿಕಾಂತ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿತು.
ಸದ್ಯ ರಜನಿಕಾಂತ್ ಸನ್ ಪಿಕ್ಚರ್ಸ್ ನಿರ್ಮಾಣದ ಜೈಲರ್ ಚಿತ್ರದ ಸೀಕ್ವೆಲ್ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ 170ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ತಲೈವ, 50 ವರ್ಷಗಳ ಸಿನಿಮಾ ಜೀವನ ಮುಗಿಸಿರುವ ಸಂದರ್ಭದಲ್ಲಿ ಈ ಹುಟ್ಟುಹಬ್ಬ ಅಭಿಮಾನಿಗಳಿಗಾಗಿ ಹೆಚ್ಚಿನ ಸಂಭ್ರಮವನ್ನು ತಂದಿದೆ.
1975ರಲ್ಲಿ ಕೆ.ಬಳಚಂದರ್ ನಿರ್ದೇಶನದ ‘ಅಪೂರ್ವ ರಾಗಂಗಳ್’ ತಮಿಳು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದ ರಜನಿಕಾಂತ್, ಅಂದಿನಿಂದಲೂ ದಕ್ಷಿಣ ಭಾರತದಷ್ಟೇ ಅಲ್ಲ ಭಾರತದೆಲ್ಲೆಡೆ ಅಸಂಖ್ಯಾತ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಕನ್ನಡ, ತಮಿಳು, ತೆಲುಗು, ಹಿಂದಿ, ಮರಾಠಿ, ಮಲಯಾಳಂ ಸೇರಿದಂತೆ ವಿವಿಧ ಭಾಷೆಗಳಲ್ಲಿ ಮಿಂಚಿದ ರಜನಿಕಾಂತ್ ಅವರ ಅಭಿನಯಕ್ಕೆ ಮಾಯೆ, ಶೈಲಿ ಮತ್ತು ವಿಭಿನ್ನ ಹಾವಭಾವಗಳು ಎಂದಿಗೂ ವಿಶೇಷ.
ರಜನಿಕಾಂತ್ ಹುಟ್ಟುಹಬ್ಬದ ಸಂಭ್ರಮಕ್ಕೆ ವಿಶೇಷ ಉಡುಗೊರೆಯಾಗಿ, ಅವರು ಅಭಿನಯಿಸಿ ನಿರ್ಮಿಸಿದ್ದ ‘ಪಡೆಯಪ್ಪ’ ಚಿತ್ರ ಇಂದು ರೀ-ರಿಲೀಸ್ ಆಗಿದ್ದು ಅಭಿಮಾನಿಗಳು ಸಂಭ್ರಮದಿಂದ ಥಿಯೇಟರ್ಗಳಿಗೆ ಧಾವಿಸಿದ್ದಾರೆ. ರಜನಿಕಾಂತ್ ಅವರ 75ನೇ ಹುಟ್ಟುಹಬ್ಬ, 50 ವರ್ಷಗಳ ಸಿನಿಮಾ ಪ್ರಯಾಣ ಮತ್ತು ಜೈಲರ್-2 ಶೂಟಿಂಗ್—all combine ಆಗಿ ಅಭಿಮಾನಿಗಳ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿವೆ.
ದೇಶ
ಅಧಿವೇಶನದ ನಂತರ ಡಿಕೆಶಿ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಬೆಳಗಾವಿ: “ಸಂಕ್ರಾಂತಿಯಲ್ಲ, ಅಧಿವೇಶನ ಮುಗಿದ ಕೂಡಲೇ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ” ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಬೆಳಗಾವಿ ಸುವರ್ಣಸೌಧದಲ್ಲಿ ಸ್ಪಷ್ಟಪಡಿಸಿದ್ದಾರೆ.
“ನನ್ನ ಹಣೆಯಲ್ಲಿ ಬರೆದಿದ್ದಕ್ಕೆ ನಾನು ಶಾಸಕನಾಗಿದ್ದೇನೆ. ಹಾಗೆಯೇ ಡಿ.ಕೆ. ಶಿವಕುಮಾರ್ ಅವರ ಹಣೆಯಲ್ಲಿ ಸಿಎಂ ಸ್ಥಾನ ಬರೆದಿದೆ. ಅವರು ಖಚಿತವಾಗಿ ಸಿಎಂ ಆಗುತ್ತಾರೆ” ಎಂದು ಇಕ್ಬಾಲ್ ಹುಸೇನ್ ಹೇಳಿದರು. “ನಿನ್ನೆ 55 ಜನ ಶಾಸಕರು ಒಟ್ಟಿಗೆ ಊಟ ಮಾಡಿದ್ದೇವೆ. ಅದರಲ್ಲಿ ಯಾವ ರಾಜಕೀಯ ಚರ್ಚೆಯೂ ನಡೆಯಲಿಲ್ಲ. ನಮಗೆ ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು, ಆಗಲೇಬೇಕು” ಎಂದರು.
“ಡಿ.ಕೆ. ಶಿವಕುಮಾರ್ ಕಷ್ಟಪಟ್ಟಿದ್ದಾರೆ, ಅದರ ಫಲ ಅವರು ಪಡೆಯಲೇಬೇಕು. ಅಧಿವೇಶನ ಮುಗಿದ ತಕ್ಷಣ ಬದಲಾವಣೆ ಸಾಧ್ಯ. ಸಂಖ್ಯಾಬಲ ಮುಖ್ಯವಲ್ಲ, ಹೈಕಮಾಂಡ್ ನಿರ್ದೇಶನೆಯೇ ಅಂತಿಮ” ಎಂದು ಅವರು ಹೇಳಿದರು.
ಡಿನ್ನರ್ ಸಭೆಯಲ್ಲಿ 50–60 ಮಂದಿ ಸೇರಿದ್ದರೂ, ಇದು ರಾಜಕೀಯ ಚರ್ಚೆಗೆ ವೇದಿಕೆ ಆಗಲಿಲ್ಲ ಎಂದು ಸ್ಪಷ್ಟಪಡಿಸಿದರು. “ಡಿ.ಕೆ. ಶಿವಕುಮಾರ್ ಕರೆದರೆ ಯಾವ ಪಕ್ಷದವರಾದರೂ ಬರುತ್ತಾರೆ. ವಿಶ್ವಾಸ, ಪ್ರೀತಿ, ಬಾಂಧವ್ಯ – ಪಕ್ಷವೇನೂ matter ಆಗೋದಿಲ್ಲ. ಕಾಂಗ್ರೆಸ್ ಶಿಸ್ತಿನ ಪಕ್ಷ” ಎಂದರು.
ಮುಖ್ಯಮಂತ್ರಿಯ ಪರವಾಗಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೀಡಿರುವ ಮಾರ್ಗದರ್ಶನವೇ ನಮಗೆ ಅಂತಿಮ. ನಾಯಕತ್ವ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ; ನಾನು ಡಿನ್ನರ್ಗೆ ಹೋಗಿರಲಿಲ್ಲ” ಎಂದು ಹೇಳಿದರು.
-
ಬಿಬಿಎಂಪಿ7 months agoತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years agoವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years agoಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years agoಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years agoGruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು2 years agoನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು1 year agoಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years agoದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ
