Connect with us

ಬೆಂಗಳೂರು

ಸಿದ್ದರಾಮಯ್ಯ ಅಂತಾ ಪಠಿಸಿ… ನಿಮಗೆ ಮೋಕ್ಷ ಸಿಗುತ್ತೆ-ವಿಪಕ್ಷಕ್ಕೆ ಸಿಎಂ ಟಾಂಗ್

ಬೆಂಗಳೂರು; ಸರ್ಕಾರದ ಮೇಲೆ ವಿಪಕ್ಷಗಳು ಮಾಡಿರುವ ಹಗರಣಗಳ ಆರೋಪ ಕುರಿತು ಸಿಎಂ ಅವರು ಕಾಲಪದಲ್ಲಿ ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ 21 ಕ್ಕೂ ಹೆಚ್ಚು ಹಗರಣಗಳ ಪಟ್ಟಿಯನ್ನು ಓದುವ ಮೂಲಕ ಪ್ರತಿಪಕ್ಷಗಳಿಗೆ ಉತ್ತರ ನೀಡಿದರು,
ಸಿಎಂ ಭಾಷನ ಮುಂದುವರಿಸಿದ್ದರೆ, ಅತ್ತ ವಿಪಕ್ಷ ನಾಯಕರು ಸಿದ್ರಾಮಣ್ಣ ಉತ್ತರಗಳು ಸುಳ್ಳು..ಸುಳ್ಳು ಎಂದು ಅಡ್ಡಿಪಡಿಸಿದರು, ಪದೇ ಪದೇ ಸಿದ್ದರಾಮಯ್ಯ ಅಂತಾ ಪಠಿಸಿ ನಿಮಗೆ ಮೋಕ್ಷ ಸಿಗುತ್ತದೆ ಎಂದು ಸಿಎಂ ವಿಪಕ್ಷನಾಯಕರಿಗೆ ಮಾತಿನಲ್ಲೇ ಡಿಚ್ಚಿ ಕೊಟ್ಟ ಪ್ರಸಂಗ ನಡೆದಿದೆ, ನನ್ನ ಹೆಸರು ಹೇಳದಿದ್ದರೆ ಅವರಿಗೆ ಊಟ ಜೀಣಘ ಆಗಲ್ಲ ಎಂದು ಗುಟುರು ಹಾಕಿದರು,
ಬಿ.ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಆಡಳಿತದ ಅವಧಿಯಲ್ಲಿ ಎಪಿಎಂಸಿ ಹಗರಣದಲ್ಲಿ 47 ಕೋಟಿ 16 ಲಕ್ಷ ಲೂಟಿ, ಭೋವಿ ನಿಗಮದಲ್ಲಿ 87 ಕೋಟಿ ಹಗರಣ ಅರಸ್ ಟ್ರಕ್ ಟರ್ಮಿನಲ್, ಗಂಗಾ ಕಲ್ಯಾಣ ಯೋಜನೆಯಲ್ಲಿ ಭ್ರಷ್ಟಾಚಾರ, ಆದಿ ಜಾಂಬವ ನಿಗಮ, ಅಂಬೇಡ್ಕರ್ ನಿಗಮ 430 ಕ್ಕೂ ಹೆಚ್ಚು ಕೋಟಿ ಹಗರಣ ನಡೆದಿದೆ ಎಂದರು,
ಮುಂದಿವರಿದು ಪ್ರವಾಸೋದ್ಯ ಇಲಾಖೆಯಲ್ಲಿ 2 ಕೋಟಿಗೂ ಹೆಚ್ಚು ಹಗರಣ, ಕಿಯೋನಿಕ್ಸ್ ನಲ್ಲಿ 500 ಕೋಟಿ, ಕೋವಿಡ್ ಸಮಯದಲ್ಲಿ ಹಗರಣ, ಪಿಎಸ್‍ಐ ಹಗರಣ, ಕೆಕೆಆರ್ ಡಿಬಿ, ಕಂದಾಯ ಇಲಾಖೆ ಹಗರಣ, ಬಿಟ್ ಕಾಯಿನ್ ಯಡಿಯೂರಪ್ಪ ಅವರ ಅಪ್ತರ ಮನೆಯಲ್ಲಿ 750 ಕ್ಕೂ ಹೆಚ್ಚು ಕೋಟಿ ರೂಪಾಯಿ ಸಿಕ್ಕಿತ್ತು ಆಗ ಸಿಬಿಐ, ಇಡಿ ಯಾರು ಬರಲಿಲ್ಲ, ತನಿಖೆಯಾಗಿಲ್ಲ, ಯಾರಾದರೂ ರಾಜೀನಾಮೆ ಕೊಟ್ಟರಾ ಎಂದು ಸಿಎಂ ಪ್ರತಿಪಕ್ಷಗಳಿಗೆ ಪ್ರಶ್ನಿಸಿದರು, ನಿಮಗೆ ತಾಕತ್ತಿದ್ದರೆರ ವಾಲ್ಮೀಕಿ ಅಭಿವೃದ್ಧಿ ನಿಗಮದ ತನಿಖೆಯನ್ನು ಸಿಬಿಐಗೆ ಕೊಡಿ ಎಂದು ಆರ್ ಅಶೋಕ್ ಮತ್ತೊಮ್ಮೆ ಸವಾಲ್ ಹಾಕಿದರು.

ದೇಶ

ರೇಷನ್ ಕಾರ್ಡ್​​ನಿಂದ ಏನೆಲ್ಲಾ ಪ್ರಯೋಜನ?: ನೀವು ಪಡೆದುಕೊಂಡಿದ್ದೀರಾ?

ಬೆಂಗಳೂರು: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಅದರಲ್ಲಿ ಪ್ರಮುಖವಾಗಿ ಪಡಿತರ ಚೀಟಿಯೂ ಒಂದು.

ರೇಷನ್ ಕಾರ್ಡ್ ಇದ್ದರೆ ಆಯಾ ಕಾರ್ಡ್​​ಗಳನ್ನು ಅನುಸರಿಸಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಅಕ್ಕಿ, ಬೇಳೆ, ಗೋಧಿ, ಸಕ್ಕರೆ ಸೇರಿ ಹಲವು ಆಹಾರ ಪದಾರ್ಥಗಳು ದೊರೆಯುತ್ತದೆ. ಬಿಪಿಎಲ್ ಕಾರ್ಡ್​ದಾರರ ಕುಟುಂಬಕ್ಕೆ ಅಕ್ಕಿ, ಗೋಧಿ, ಸಕ್ಕರೆ ಮತ್ತಿತರ ಆಹಾರ ಪದಾರ್ಥಿಗಳು ಉಚಿತವಾಗಿ ದೊರೆತರೆ, ಎಪಿಎಲ್ ಕಾರ್ಡ್​ದಾರರಿಗೆ ಸರ್ಕಾರ ನಿಗದಿಪಡಿಸಿದ ಕಡಿಮೆ ದರದಲ್ಲಿ ಪಡಿತರ ಸಿಗುತ್ತದೆ. ಇದರಿಂದ ಹಲವಾರು ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸಬಹುದಾಗಿದೆ. ಇಷ್ಟೇ ಅಲ್ಲದೆ, ರೇಷನ್ ಕಾರ್ಡ್ ಇದ್ದರೆ ಇನ್ನೂ ಹಲವು ಸೌಲಭ್ಯಗಳು ಸರ್ಕಾರದಿಂದ ಉಚಿತವಾಗಿ ಸಿಗುತ್ತವೆ. ಅದೆಷ್ಟೋ ಜನರಿಗೆ ಇದರ ಸರಿಯಾದ ಮಾಹಿತಿ ಇರುವುದಿಲ್ಲ.

ಕಾರ್ಡ್ ಇದ್ದರೆ ಗ್ಯಾಸ್ ಸಿಲಿಂಡರ್, ಆರೋಗ್ಯ ವಿಮೆ, ಶಿಕ್ಷಣಕ್ಕೆ ಆರ್ಥಿಕ ನೆರವು, ಉಚಿತ ಹೊಲಿಗೆ ಯಂತ್ರ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಸರ್ಕಾರದಿಂದ ಯಾವೆಲ್ಲಾ ಸೌಲಭ್ಯಗಳು ಸಿಗುತ್ತವೆ ಎಂಬುದರ ಮಾಹಿತಿ ಇಲ್ಲಿದೆ.

ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು: ಒಂದು ಕುಟುಂಬದ ಆರ್ಥಿಕ ಸ್ಥಿತಿಗತಿಯನ್ನು ರೇಷನ್ ಕಾರ್ಡ್ ತೋರಿಸುತ್ತಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶಿಕ್ಷಣ ನೆರವು ಯೋಜನೆಗಳಲ್ಲಿ ಅರ್ಹತೆ ರೂಪದಲ್ಲಿ ರೇಷನ್ ಕಾರ್ಡ್​ ಬಳಕೆ ಮಾಡಬಹುದು. ಶುಲ್ಕ ಮನ್ನಾ ಹಾಗೂ ವಿದ್ಯಾರ್ಥಿ ವೇತನ ಮತ್ತಿತರ ಸೌಲಭ್ಯ ದೊರೆಯುತ್ತದೆ. ಅಷ್ಟೇ ಅಲ್ಲದೆ, ವ್ಯಕ್ತಿಯ ಹೆಸರು, ವಯಸ್ಸು ಮತ್ತು ವಿಳಾಸ, ಕುಟುಂಬದ ವಿವರಗಳನ್ನು ಒಳಗೊಂಡಿರುವ ಕಾರಣ ರೇಷನ್ ಕಾರ್ಡ್​​ ಅನ್ನು ಪ್ರಮುಖ ಗುರುತಿನ ಚೀಟಿಯಾಗಿಯೂ ಬಳಸಬಹುದು. ಮತದಾನ ಮತ್ತಿತರ ಕಡೆ ಐಡಿ ಪ್ರೂಪ್ ಆಗಿ ಈ ಕಾರ್ಡ್ ಬಳಕೆ ಮಾಡಬಹುದು. ಕೆಲವು ಪಿಂಚಣಿ ಯೋಜನೆಗಳಿಗೆ ಅಥವಾ ಬ್ಯಾಂಕ್​ನಲ್ಲಿ ಖಾತೆ ತೆರೆಯಲು ಸಹ ಪಡಿತರ ಚೀಟಿ ಬಳಸಬಹುದಾಗಿದೆ.

ಉಜ್ವಲ ಗ್ಯಾಸ್ ಸಿಲಿಂಡರ್ : ಅಡುಗೆ ಗ್ಯಾಸ್ ಇಲ್ಲದವರಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಸಿಗುತ್ತದೆ. ರೇಷನ್ ಕಾರ್ಡ್ ಬಳಸಿಕೊಂಡು ಈ ಯೋಜನೆ ಪಡೆಯುಬಹುದಾಗಿದೆ.

ಶ್ರಮಿಕ್ ಕಾರ್ಡ್ : ಅಸಂಘಟಿತ ವಲಯದ ಕಾರ್ಮಿಕರಿಗೆ ಶ್ರಮಿಕ್ ಕಾರ್ಡ್ ಯೋಜನೆಯಡಿ ರೇಷನ್ ಕಾರ್ಡ್ ಆಧಾರವಾಗಿ ಕೆಲಸದ ಲಾಭ, ಉದ್ಯೋಗ ಅವಕಾಶ ಸೇರಿದಂತೆ ಹಲವು ನೆರವು ದೊರೆಯುತ್ತದೆ. ಆ ಮೂಲಕ ಕಾರ್ಮಿಕರು ಕಾನೂನುಬದ್ಧವಾಗಿ ಸರ್ಕಾರದ ಸವಲತ್ತುಗಳನ್ನು ಪಡೆಯಬಹುದು ಎನ್ನುತ್ತಾರೆ ಅಧಿಕಾರಿಗಳು.

ರೈತರ ಬೆಳೆ ವಿಮೆಗೆ ಕಾರ್ಡ್ ಬಳಕೆ : ರೈತರ ಬೆಳೆ ವಿಮೆಗೂ ಈ ಕಾರ್ಡ್ ಬಳಕೆಯಾಗುತ್ತದೆ. ಕೃಷಿಯಲ್ಲಿ ನಷ್ಟ ಸಂಭವಿಸಿದರೆ ರೈತರು ರೇಷನ್ ಕಾರ್ಡ್ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಿ ಬೆಳೆ ನಷ್ಟ ಪರಿಹಾರ ಪಡೆಯಬಹುದು. ವಿಶೇಷವಾಗಿ ಬರ, ಪ್ರವಾಹ, ಮಳೆಹಾನಿ ವೇಳೆ ಗುರುತಿಗಾಗಿ ರೇಷನ್ ಕಾರ್ಡ್ ನೀಡಬಹುದು.

ಮನೆ ನಿರ್ಮಾಣಕ್ಕೂ ನೆರವು : ಎಷ್ಟೋ ಜನರಿಗೆ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂಬುದೇ ಗೊತ್ತಿರುವುದಿಲ್ಲ. ರೇಷನ್ ಕಾರ್ಡ್​​ದಾರರು ಮನೆಗೆ ಅರ್ಜಿ ಸಲ್ಲಿಸಿ ಹಣದ ಸಹಾಯ ಪಡೆದು ತಮ್ಮ ಸ್ವಂತ ಮನೆ ಕಟ್ಟಿಕೊಳ್ಳಬಹುದು. ಪ್ರಧಾನ ಮಂತ್ರಿ ಅವಾಜ್ ಯೋಜನೆ (ರಾಜ್ಯ ಸರ್ಕಾರದಲ್ಲೂ ಈ ಯೋಜನೆ ಇದೆ) ಬಳಕೆ ಆಗುತ್ತದೆ. ಜೊತೆಗೆ ಕಾರ್ಡ್ ಇದ್ದರೆ ಮನೆ ಸಾಲದ ಮೇಲಿನ ಸಬ್ಸಿಡಿ ಸಹ ಸಿಗುತ್ತದೆ.

ಮಹಿಳೆಯರಿಗೆ ಹೊಲಿಗೆ ಯಂತ್ರ : ಮಹಿಳೆಯರು ಸ್ವಾವಲಂಬಿ ಆಗಲು ರಾಜ್ಯ ಸರ್ಕಾರ ನೀಡುತ್ತಿರುವ ಮತ್ತೊಂದು ಯೋಜನೆ ಎಂದರೆ ಅದು ಉಚಿತ ಹೊಲಿಗೆ ಯಂತ್ರ ವಿತರಣೆ. ಪಡಿತರ ಚೀಟಿ ಹೊಂದಿರುವ ಮಹಿಳೆಯರು ಹೊಲಿಗೆ ಯಂತ್ರವನ್ನು ಉಚಿತವಾಗಿ ಪಡೆದು ಸ್ವಂತ ಉದ್ಯೋಗ ಪ್ರಾರಂಭಿಸಬಹುದು. ಮಹಿಳೆಯರ ಸ್ವಾವಲಂಬಿ ಬದುಕಿಗೆ ಈ ಯೋಜನೆ ಪ್ರಮುಖವಾಗಿದೆ.

Continue Reading

ಬೆಂಗಳೂರು

ಪತ್ನಿ ಬಳಿಯೂ ರಾಜಕೀಯ ಮಾತಾಡಲ್ಲ, ಪರಂ ಗರಂ!

ಬೆಂಗಳೂರು: ಮಂಗಳೂರಲ್ಲಿ ನಡೆದ ಸರಣಿ ಕೊಲೆ ಪ್ರಕರಣಗಳ ಬಳಿಕ ಇತ್ತೀಚಿಗೆ ಆರ್‍ಸಿಬಿ ತಂಡ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಘಟನೆಯಲ್ಲಿ 11 ಜನ ಉಸಿರು ಚೆಲ್ಲಿದ್ದಾರೆ,
ನಿರಂತರವಾಗಿ ಕಾನೂನು ವ್ಯವಸ್ಧೆ ಹದಗೆಡುತ್ತಿದೆ, ಗೃಹ ಸಚಿವ ಜಿ.ಪರಮೇಶ್ವರ್ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳ ಆಗ್ರಹ ಬೆನ್ನಲ್ಲೇ ತಮಗಿರುವ ಗೃಹ ಇಲಾಖೆ ಖಾತೆ ಬದಲಾಯಿಸಿ ಎಂದು ಪರಮೇಶ್ವರ್ ಅವರು ಕೇಳಿಕೊಂಡಿದ್ದಾರೆ ಎಂಬ ವದಂತಿಗೆ ಅವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ,
ಏನೇ ಇದ್ದರೂ ನನ್ನ ಬಳಿಯೇ ಸ್ಪಷ್ಟನೇ ಕೇಳಿ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ನಾನು ನನ್ನ ಪತ್ನಿ ಬಳಿಯೂ ಯಾವತ್ತೂ ರಾಜಕೀಯ ಮಾತನಾಡಲ್ಲ, ಹೀಗಿರವಾಗ ಈ ವದಂತಿ ಏಕೆ? ಖಾತೆ ಬದಲಾವಣೆ ಅಂತಾ ನಿಮಗೆ ಯಾರು ಹೇಳಿದ್ದಾರೆ? ಏನೇ ಇದ್ದರೂ ನನ್ನ ಬಳಿ ಮಾಹಿತಿ ಪಡೆಯಿರಿ ಎಂದಿದ್ದಾರೆ,
ನಾನು ಸಾಫ್ಟ್ ಆಗಿಯೇ ನಡೆದುಕೊಂಡಿದ್ದೇನೆ, ಏನೇ ಕೇಳಿ ನಾನೇ ಉತ್ತರ ಕೊಡುತ್ತೇನೆ, ಸುಮ್ಮನೇ ಒಬ್ಬರ ವ್ಯಕ್ತಿತ್ವದ ಕೊಲೆ ಮಾಡಬಾರದು, ಅದು ಯಾರಿಗೂ ಶೋಭೆ ತರಲ್ಲ, ಖಾತೆ ಬದಲಾಯಿಸಿ ಎಂದು ಸಿಎಂ ಹೇಳಿದ್ದಾರೆ ಎಂಬ ಸುದ್ದಿ ಸುಳ್ಳು, ಈ ರೀತಿ ಹೇಳಬೇಡಿ, ಇಂತಹ ವದಂತಿಯಿಂದ ನಮ್ಮ ಮತದಾರರು ಅಭಿಮಾನಿಗಳಿಗೆ ತಪ್ಪಾಗಿ ಸಂದೇಶ ಹೋಗುತ್ತದೆ, ಇದೇ ಖಾತೆಯನ್ನೇ ನೀಡಿ ಎಂದು ನಾನು ಯಾರಿಗೂ ಕೇಳಿಲ್ಲ, ಕಾಲ್ತುಳಿತ ದುರಂತದಿಂದ ಎಲ್ಲರಿಗೂ ನೋವಾಗಿದೆ, ಇದರ ಮಧ್ಯೆ ಖಾತೆ ಬದಲಾವಣೆ ಎಂಬ ಸಂಗತಿ ಸತ್ಯಕ್ಕೆ ದೂರವಾದದ್ದು ಎಂದು ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.

Continue Reading

ಬೆಂಗಳೂರು

ಚಿನ್ನಸ್ವಾಮಿ ಸ್ಟೇಡಿಯಂ ಸೇನೆ ಜಾಗ, ವಶಕ್ಕೆ ಪಡೆಯಿರಿ! ಪ್ರಧಾನಿಗೆ ಪತ್ರ ಬರೆಯಲು ಮುಂದಾದ ಸಂಘಟನೆ!

ಬೆಂಗಳೂರು: ಆರ್‍ಸಿಬಿ ತಂಡದ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದ ಘಟನೆಯಲ್ಲಿ 11 ಜನರ ಸಾವಿನ ದುರಂತ ಇಡೀ ಸರ್ಕಾರಕ್ಕೆ ಮುಜುಗರವುಂಟು ಮಾಡಿದೆ, ಇನ್ನೊಂದೆಡೆ ಪ್ರತಿಪ್ಕಷಗಳು ಮಾತ್ರವಲ್ಲ ಹೈಕೋರ್ಟ್ ಸಹ ಘಟನೆ ಟೀಕಿಸಿ ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದೆ,
ರಾಜ್ಯಕ್ಕೆ ಈ ಘಟನೆ ಕಪ್ಪು ಚುಕ್ಕೆಯಾಗಿರುವ ಬೆನ್ನಲ್ಲೇ ಇದೀಗ ಚಿನ್ನಸ್ವಾಮಿ ಸ್ಟೇಡಿಯಂ ಸ್ಧಳಾಂತರದ ಬಗ್ಗೆ ಚರ್ಚೆಗಳೂ ಆರಂಭವಾಗಿದೆ, ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರು ಕಡಿಮೆ ಸಾರ್ಮಥ್ಯವಿರುವ ಕ್ರಿಕೆಟ್ ಕ್ರೀಡಾಂಗಣವನ್ನು ಬೇರೆಡೆಗೆ ಸ್ಧಳಾಂತರಿಸುವ ಬಗ್ಗೆ ಸರ್ಕಾರ ಗಮನಹರಿಸಿದೆಯೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಈ ವಿಷಯ ಸರ್ಕಾರ ಪರಿಶೀಲಿಸಲಿದೆ, ಯಾವ ಸರ್ಕಾರದ ಅವಧಿಯಲ್ಲಿಯೂ ಇಂತಹ ಅಹಿತಕರ ಘಟನೆ ನಡೆಯಬಾರದು, ವೈಯಕ್ತಿಕವಾಗಿ ಈ ಘಟನೆ ಸರ್ಕಾರಕ್ಕೆ ನೋವು ತಂದಿದೆ ಎನ್ನುತಲೇ ಸ್ಧಳಾಂತರದ ಸುಳಿವು ನೀಡಿದ್ದರು,
ಇದೀಗ ಮಹತ್ವದ ಬೆಳವಣಿಗೆ ಎಂಬಂತೆ ಚಿನ್ನಸ್ವಾಮಿ ಸ್ಟೇಡಿಯಂ ಸ್ಧಳಾಂತರಿಸುವಂತೆ ಕೋರಿ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲು ನಿರ್ಧರಿಸಿದೆ, ಕ್ರೀಡಾಂಗಣವಿರುವ ಜಾಗ ಭಾರತೀಯ ಸೇನೆಗೆ ಸೇರಿದ್ದು, ಈ ಸ್ಧಳ ವಶಕ್ಕೆ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಿಸಿದ್ದೇವೆ ಎಂದು ಸಂಘಟನೆ ತಿಳಿಸಿದೆ, ಈ ಕುರಿತು ಮಾತನಾಡಿರುವ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಅಧ್ಯಕ್ಷ ಉಮೇಶ್ ಶೆಟ್ಟಿ ಚಿನ್ನಸ್ವಾಮಿ ಸ್ಟೇಡಿಯಂ ಸೇನೆಗೆ ಸೇರಿದ ಜಾಗ, 18.50 ಎಕರೆ ಈ ಜಾಗವಾಗಿದೆ, ಇದು ಆರ್ಮಿಗೆ ಸೇರಿದ್ದು, ನಗರದಿಂದ ಇದನ್ನು ಸ್ಧಳಾಂತರಿಸಲಿ, ಸ್ಟೇಡಿಯಂ ನಿಂದಲೇ ಟ್ರಾಫಿಕ್ ಸಮಸ್ಯೆಯೂ ಆಗುತ್ತಿದೆ, ಹೀಗಾಗಿ ಪ್ರಧಾನಿ ಮೋದಿ ಹಾಗೂ ರಕ್ಷಣಾ ಸಚಿವರಿಗೆ ಪತ್ರ ಬರೆದು ಈ ಕುರಿತು ಮನವಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ,

Continue Reading

Trending