ದೇಶ
ವಿಂಡೋಸ್ 10 ಬಳಕೆದಾರರಿಗೆ ಬಿಗ್ ಶಾಕ್; ಜಾಗತಿಕವಾಗಿ ಸ್ಥಗಿತಗೊಂಡು ಆತಂಕ ಸೃಷ್ಟಿಸಿದ ಸಾಫ್ಟ್ವೇರ್!
ವಿಂಡೋಸ್ 10, ಮೈಕ್ರೋಸಾಫ್ಟ್ ಅಭಿವೃದ್ಧಿ ಪಡಿಸಿರುವ ಹೊಸ ಸಾಫ್ಟ್ವೇರ್ ಈಗ ಜಾಗತಿಕವಾಗಿ ದೊಡ್ಡ ಸಮಸ್ಯೆಯಾಗಿ ಕಾಡಲು ಆರಂಭಿಸಿದೆ. ವಿಂಡೋಸ್ 10 ಬಳಕೆದಾರರು ಅದು ನೀಡುತ್ತಿರುವ ಹೊಸ ಸಮಸ್ಯೆಗೆ ಹೈರಾಣಾಗಿ ಹೋಗಿದ್ದಾರೆ. ವಿಶ್ವದ ಹಲವು ಕಡೆ ಬಿಎಸ್ಒಡಿ ಅಂದ್ರೆ ಬ್ಲೂ ಸ್ಕ್ರೀನ್ ಆಪ್ ಡೆತ್ ಅನ್ನೋ ಸಮಸ್ಯೆಯೊಂದು ಸೃಷ್ಟಿಯಾಗಿದೆ.
ವಿಂಡೋಸ್ 10 ಸಾಫ್ಟ್ವೇರ್ ಅಳವಡಿಸಿಕೊಂಡ ಜಗತ್ತಿನ ಅನೇಕ ಕಂಪ್ಯೂಟರ್ಗಳಲ್ಲಿ ಈ ಸಮಸ್ಯೆಯೊಂದು ಕಾಡುತ್ತಿದೆ. ವಿಶ್ವಾದ್ಯಂತ ಲಕ್ಷ, ಲಕ್ಷ ಜನರು ಈ ಸಮಸ್ಯೆಯಿಂದಾಗಿ ಹೈರಾಣಾಗಿದ್ದಾರೆ.. ಅಸಲಿಗೆ ಏನಿದು ಬಿಎಸ್ಓಡಿ ಅಂತ ನೋಡಿದ್ರೆ, ವಿಂಡೋಸ್ 10 ಅಳವಡಿಸಿಕೊಂಡ ಕಂಪ್ಯೂಟರ್ಗಳು ಸಾಮೂಹಿಕವಾಗಿ ಸ್ಟ್ರೈಕ್ ಆಗುತ್ತಿವೆ. ನೀಲಿ ತೆರೆಯೊಂದು ಕಂಪ್ಯೂಟರ್ ಸ್ಕ್ರೀನ್ ಮೇಲೆ ಪ್ರತ್ಯಕ್ಷವಾಗಿ ಹಲವು ಗಂಟೆಗಳ ಕಾಲ ಕಂಪ್ಯೂಟರ್ ಬಳಕೆದಾರರನ್ನು ಪೀಡಿಸುತ್ತಿದೆ. ಇದು ಕೇವಲ ಜನರಿಗೆ ಮಾತ್ರವಲ್ಲ ವಿಶ್ವಾದ್ಯಂತ ಹಲವು ಕಂಪನಿಗಳಲ್ಲೂ ಈ ಸಮಸ್ಯೆ ಶುರುವಾಗಿದೆ.
ಏರ್ಪೋರ್ಟ್ಗಳಲ್ಲಿ ಈ ಬಿಎಸ್ಓಡಿ ಯಿಂದಾಗಿ ವಿಮಾನ ಹಾರಾಟಗಳ ನಿರ್ವಹಣೆಗೆ ತೊಂದರೆಯಾಗಿ ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳು ಯಾವೆಲ್ಲಾ ವಿಂಡೋಸ್ 10 ಅಳವಡಿಸಿಕೊಂಡಿವೆಯೋ ಅವೆಲ್ಲವೂ ಸಾಮೂಹಿಕವಾಗಿ ಇಂತಹದೊಂದು ತೊಂದರೆಯನ್ನು ಅನುಭವಿಸುತ್ತಿವೆ. ಈ ಒಂದು ಸಮಸ್ಯೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದ್ದು, ಸಾಫ್ಟ್ವೇರ್ನಿಂದ ತೊಂದರೆ ಅನುಭವಿಸಿದವರೆಲ್ಲಾ, ಕಂಪ್ಯೂಟರ್ ಡಿಸ್ಪ್ಲೇಗಳ ಫೋಟೋ ತೆಗೆದು ಪೋಸ್ಟ್ ಮಾಡಿ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ದೆಹಲಿ ಏರ್ಪೋರ್ಟ್ನಲ್ಲೂ ವಿಮಾನ ಸಂಚಾರ ಸ್ಥಗಿತವಾಗಿದ್ದು, ವಿಸ್ತಾರ, ಇಂಡಿಗೋ ಏರ್ಲೈನ್ಸ್ ಸಿಬ್ಬಂದಿ ಕೈಯಲ್ಲಿ ಬರೆದ ಬೋರ್ಡಿಂಗ್ ಪಾಸ್ಗಳನ್ನು ನೀಡುತ್ತಿದ್ದಾರೆ.
ವಿಂಡೋಸ್ 10 ಸರಿಯಾಗಿ ಲೋಡ್ ಆಗುತ್ತಿಲ್ಲ. ಪದೇ ಪದೇ ಕಂಪ್ಯೂಟರ್ಗಳನ್ನ ರಿಸ್ಟಾರ್ಟ್ ಹಾಗೂ ಶಟ್ ಡೌನ್ ಮಾಡಿ ಮತ್ತೆ ಆನ್ ಮಾಡುವ ಅನಿವಾರ್ಯತೆಗಳು ಸೃಷ್ಟಿಯಾಗಿವೆ. ಬ್ಯಾಕ್ ಬಗ್, ಬ್ಲ್ಯೂ ಸ್ಕ್ರೀನ್ನಂತಹ ಎರರ್ ಸಮಸ್ಯೆಗಳು ಫಾಲ್ಕಾನ್ ಸೆನ್ಸಾರ್ಗೆ ಸಂಬಂಧಿಸಿದ ಸಮಸ್ಯೆಗಳಾಗಿವೆ, ಸದ್ಯದಲ್ಲಿಯೇ ನಮ್ಮ ಎಂಜನೀಯರಿಂಗ್ ಟೀಮ್ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಿದೆ ಎಂದು ಮೈಕ್ರೋಸಾಫ್ಟ್ ಕಂಪನಿ ಹೇಳಿದೆ.
ಈ ಹಿಂದೆಯೂ ಹೀಗೆ ಸಮಸ್ಯೆ ಸೃಷ್ಟಿಸಿತ್ತು ವಿಂಡೋಸ್ 10
ಕಳೆದ ನಾಲ್ಕೈದು ವರ್ಷಗಳ ಹಿಂದೆಯೂ ಕೂಡ ಇಂತಹದೊಂದು ಸಮಸ್ಯೆಯು ವಿಂಡೋ 10ನಲ್ಲಿ ಕಂಡು ಬಂದಿತ್ತು. ಇದಕ್ಕೆ ಅಸಲಿ ಕಾರಣ ಏನು ಅನ್ನೋದು ಇನ್ನೂ ಕೂಡ ತಿಳಿದು ಬಂದಿಲ್ಲ. ಅದನ್ನು ಪರಿಣಿತರು ಸದ್ಯದಲ್ಲಿಯೇ ಕಂಡು ಹಿಡಿದು, ಆಗಿರುವ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲಿದ್ದಾರೆ ಅಂತ ಎಐ ಹಾಗೂ ಟೆಕ್ ಎಕ್ಸಪರ್ಟ್ ಅಂಕುಶ್ ಸಬ್ಹರ್ವಾಲಾ ಹೇಳಿದ್ದಾರೆ.
ಭಾರತೀಯ ವಿಮಾನಯಾನ ಕಂಪನಿಗಳಿಗೂ ತೊಂದರೆ
ಆದರೂ ಕೂಡ ವಿಶ್ವದ ಅನೇಕ ಸಂಸ್ಥೆಗಳು ಅದರಲ್ಲಿಯೂ ಪ್ರಮುಖವಾಗಿ ವಿಮಾನ ಕಂಪನಿಗಳಿಗೆ ಈ ಬ್ಲ್ಯೂ ಸ್ಕ್ರೀನ್ ಆಫ್ ಡೆತ್ ಅನೇಕ ಸಂಕಷ್ಟಗಳನ್ನು ತಂದಿಟ್ಟಿದೆ. ಭಾರತದ ಪ್ರಮುಖ ಏರ್ಲೈನ್ಸ್ ಕಂಪನಿಗಳಲ್ಲೊಂದಾದ ಸ್ಪೈಸ್ ಜೆಟ್ ಸಂಸ್ಥೆಯೂ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು ವಿಂಡೋಸ್ 10 ಕ್ರೌಡ್ಸ್ಟ್ರೈಕ್ ಬಗ್ಗೆ ಹೇಳಿಕೊಂಡಿದೆ. ಸದ್ಯ ನಾವು ಅನೇಕ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ವಿಮಾನಗಳ ಹಾರಾಟದ ಬಗ್ಗೆ ತಿಳಿಸಲು ಅನೇಕ ತೊಂದರೆಗಳು ಉಂಟಾಗುತ್ತಿದೆ, ಈ ಬಗ್ಗೆ ನಮ್ಮ ಟೆಕ್ನಿಕಲ್ ಟೀಮ್ ಕಾರ್ಯಪ್ರವೃತ್ತವಾಗಿದ್ದು, ಶೀಘ್ರದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಲಿದೆ ಎಂದು ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ತನ್ನ ಎಕ್ಸ್ ಖಾತೆಯಲ್ಲಿ ಹೇಳಿಕೊಂಡಿದೆ. ಅಕಾಸಾ ಏರ್ ಕೂಡ ಇದೇ ಮಾದರಿಯಲ್ಲಿಯೇ ತನ್ನ ಸಮಸ್ಯೆಗಳನ್ನು ಹೇಳಿಕೊಂಡಿದೆ, ತಾಂತ್ರಿಕ ಸಮಸ್ಯೆಗಳ ಕಾರಣದಿಂದಾಗಿ ಆನ್ಲೈನ್ ಸೇವೆಗಳಲ್ಲಿ ಕೊಂಚ ಸಮಸ್ಯೆಯುಂಟಾಗಿದೆ, ಹೀಗಾಗಿ ಪ್ರಯಾಣಿಕರು ದಯವಿಟ್ಟು ಸಹಕರಿಸಬೇಕು ಎಂದು ಹೇಳಿದೆ.
ಆರಂಭಿಕ ಮಾಹಿತಿಯ ಪ್ರಕಾರ, ವಿಂಡೋಸ್ 10 ಸಾಫ್ಟ್ವೇರ್ ಸದ್ಯ ಅಪ್ಡೇಟ್ ಮಾಡಲಾಗುತ್ತಿದೆ. ಹೀಗಾಗಿಯೇ ಇಂತಹದೊಂದು ತಾಂತ್ರಿಕ ಸಮಸ್ಯೆಗಳು ಸೃಷ್ಟಿಯಾಗಿವೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸಮಸ್ಯೆಯ ಗಂಭೀರತೆಯನ್ನು ಅರಿತಿರುವ ಮೈಕ್ರೋಸಾಫ್ಟ್ ಸಂಸ್ಥೆ ಶೀಘ್ರ ಪರಿಹಾರಕ್ಕೆ ಮುಂದಾಗಿದೆ. ಆಗಿರುವ ಸಮಸ್ಯೆಯನ್ನು ಸಾಧ್ಯವಾದಷ್ಟು ಬೇಗ ಪರಿಹರಿಸುವುದಾಗಿ ಸಂಸ್ಥೆ ಭರವಸೆಯನ್ನು ಕೊಟ್ಟಿದೆ. ಅದು ಅಲ್ಲದೇ ಈ ಜಾಗತಿಕ ಸಮಸ್ಯೆಗೆ ಕಾರಣವಾಗಿದ್ದು ಒಂದು ಬಗ್ ಹೀಗಾಗಿ ಅದನ್ನು ನಿವಾರಿಸುವತ್ತ ನಮ್ಮ ತಾಂತ್ರಿಕಪಡೆ ನಿರತವಾಗಿದೆ ಎಂದೂ ಕೂಡ ಭರವಸೆಯನ್ನು ನೀಡಲಾಗಿದೆ.
ಆಮೇಲೆ ಈ ರೀತಿಯ ಸಮಸ್ಯೆಗಳು ಆಗಾಗ ಮರುಕಳಿಸುತ್ತಲೇ ಇರುತ್ತವೆ ಅದು ಮೈಕ್ರೋಸಾಫ್ಟ್ಗೆ ಸಂಬಂಧಿಸಿದ ಸಾಫ್ಟ್ವೇರ್ಗಳೇ ಇರಲಿ ಅಥವಾ ಬೇರೆಯದ್ದೇ ಸಾಫ್ಟ್ವೇರ್ಗಳಿರಲಿ, ವರ್ಷದಲ್ಲಿ ಒಂದೆರೆಡು ಬಾರಿ ಈ ರೀತಿಯ ಸಮಸ್ಯೆಗಳನ್ನು ಎದುರಿಸುವ ಅನಿವಾರ್ಯತೆ ಎಲ್ಲ ಸಾಫ್ಟ್ವೇರ್ ಕಂಪನಿಗಳಿಗೂ ಒದಗಿ ಬರುತ್ತದೆ. ಜಾಗತಿಕವಾಗಿ ಇಂತಹದೊಂದು ಸಮಸ್ಯೆಗಳು ಆಗಾಗ ಎದುರುಗಾತ್ತವೆ. ಹೀಗಾಗಿ ಅಂತಹ ಟೆಕ್ ಕಂಪನಿಗಳು ಆಗಿರುವ ಸಮಸ್ಯೆಯನ್ನು ಬಗೆಹರಿಸಲು ಕೆಲವೊಂದಿಷ್ಟು ಸಮಯಗಳನ್ನು ತೆಗೆದುಕೊಳ್ಳುತ್ತವೆ. ಕನಿಷ್ಠ ಮೂರರಿಂದ ನಾಲ್ಕು ತಾಸುಗಳ ಮಟ್ಟಿಗೆ ಈ ಬ್ಲ್ಯೂ ಸ್ಕ್ರೀನ್ ಆಫ್ ಡೆತ್ ಅನ್ನೋ ಸಮಸ್ಯೆಯನ್ನು ಎದುರಿಸುವುದು ಅನಿವಾರ್ಯ ಎಂದೇ ಹೇಳಲಾಗುತ್ತಿದೆ.
ಬೆಂಗಳೂರು
Kannada Sahitya Parishat ನ ಗೌರವ ದತ್ತಿ ಪ್ರಶಸ್ತಿ ಪ್ರಕಟ: 2025, 2026ನೇ ಸಾಲಿನ ಪುರಸ್ಕೃತರು ಇವರೇ!
ಬೆಂಗಳೂರು: Kannada Sahitya Parishat ನ ಪ್ರತಿಷ್ಠಿತ **‘ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ದತ್ತಿ ಪ್ರಶಸ್ತಿ’**ಗೆ 2025 ಹಾಗೂ 2026ನೇ ಸಾಲಿನ ಪ್ರಶಸ್ತಿ ಪುರಸ್ಕೃತರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ್ ಅವರು ತಮ್ಮ ಮಾಸಿಕ ಗೌರವ ಸಂಭಾವನೆಯನ್ನು ಕನ್ನಡ ನಾಡು, ನುಡಿ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿರುವ ಹಿರಿಯ ಸಾಹಿತಿಗಳನ್ನು ಗೌರವಿಸಲು ಬಳಸುವ ಉದ್ದೇಶದಿಂದ ಈ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ.
60 ವರ್ಷ ಪೂರ್ಣಗೊಳಿಸಿರುವ ಒಬ್ಬ ಲೇಖಕ ಹಾಗೂ ಒಬ್ಬ ಲೇಖಕಿಯನ್ನು ಪ್ರತಿ ವರ್ಷ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಪ್ರಶಸ್ತಿಯು ತಲಾ 30 ಸಾವಿರ ರೂ. ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. 2021ರಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದೆ.

2025ನೇ ಸಾಲಿನ ಪ್ರಶಸ್ತಿ ಪುರಸ್ಕೃತರು
2025ನೇ ಸಾಲಿಗೆ ಬೆಂಗಳೂರಿನ ಹಿರಿಯ ವಿಮರ್ಶಕ ಎಸ್.ಆರ್. ವಿಜಯಶಂಕರ ಹಾಗೂ ಹಿರಿಯ ಸಾಹಿತಿ ಡಾ. ಲತಾ ಗುತ್ತಿ ಅವರನ್ನು ಆಯ್ಕೆ ಮಾಡಲಾಗಿದೆ.
2026ನೇ ಸಾಲಿನ ಪ್ರಶಸ್ತಿ ಪುರಸ್ಕೃತರು
2026ನೇ ಸಾಲಿಗೆ ಬಾಗಲಕೋಟೆಯ ಹಿರಿಯ ಸಾಹಿತಿ ಡಾ. ಶ್ರೀರಾಮ ಇಟ್ಟಣ್ಣವರ ಹಾಗೂ ಬೆಂಗಳೂರಿನ ಹಿರಿಯ ಲೇಖಕಿ ಡಾ. ಪದ್ಮಿನಿ ನಾಗರಾಜು ಅವರನ್ನು ಆಯ್ಕೆ ಮಾಡಲಾಗಿದೆ.
ಆಯ್ಕೆ ಸಮಿತಿಯಲ್ಲಿ ಯಾರೆಲ್ಲ ಇದ್ದರು?
ಆಗಸ್ಟ್ 25, 2026ರಂದು ಆಡಳಿತಾಧಿಕಾರಿ ಕೆ.ಎ. ದಯಾನಂದ, ಭಾ.ಆ.ಸೇ. ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ್ ಹಾನಗಲ್ಲ, ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಮಲ್ಲಿಕಾ ಘಂಟಿ ಹಾಗೂ ದತ್ತಿ ದಾನಿಗಳಾದ ನಾಡೋಜ ಡಾ. ಮನು ಬಳಿಗಾರ್ ಉಪಸ್ಥಿತರಿದ್ದರು.
ಎರಡು ವರ್ಷಗಳ ಪ್ರಶಸ್ತಿ ಪುರಸ್ಕೃತರನ್ನು ಸಮಿತಿಯು ಸರ್ವಾನುಮತದಿಂದ ಆಯ್ಕೆ ಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿ ಕೆ.ಎ. ದಯಾನಂದ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪರಾಧ
Mandya ಜೈಲಲ್ಲೂ ‘ರಾಜಾತಿಥ್ಯ’ ಆರೋಪ: ವಿಚಾರಣಾಧೀನ ಖೈದಿಗೆ ವಿಶೇಷ ವಾರ್ಡ್, ಗೆಳತಿಗೂ ಪ್ರವೇಶ!
ಮಂಡ್ಯ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ವಿಶೇಷ ಸೌಲಭ್ಯ ನೀಡಿದ ಆರೋಪದ ಬೆನ್ನಲ್ಲೇ ಇದೀಗ Mandya ಜಿಲ್ಲಾ ಕಾರಾಗೃಹದಲ್ಲೂ ಇದೇ ರೀತಿಯ ಆರೋಪ ಕೇಳಿಬಂದಿದೆ. ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲದ ವಿಚಾರಣಾಧೀನ ಖೈದಿಯೊಬ್ಬನನ್ನು ಮಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್ನಲ್ಲಿ ಇರಿಸಿರುವುದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (DLSA) ಅಧಿಕಾರಿಗಳ ದಿಢೀರ್ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.
ಲೋಕಾಯುಕ್ತ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಹಮದ್ ಹುಸೇನ್ ಎಂಬ ವಿಚಾರಣಾಧೀನ ಖೈದಿ ಮಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ಆತನಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದು ಆಸ್ಪತ್ರೆ ಅಧೀಕ್ಷಕರೇ ಮಾಹಿತಿ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇದರ ನಡುವೆ ಮತ್ತೊಂದು ಅಚ್ಚರಿಯ ವಿಚಾರವೂ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಖೈದಿ ಇದ್ದ ವಿಶೇಷ ವಾರ್ಡ್ನಲ್ಲಿ ಮಹಿಳೆಯೊಬ್ಬರು ಪತ್ತೆಯಾಗಿದ್ದು, ವಿಚಾರಣೆ ವೇಳೆ ಆಕೆ ಖೈದಿಯ ಗೆಳತಿ ಎಂದು ತಿಳಿದುಬಂದಿದೆ ಎನ್ನಲಾಗಿದೆ. ನ್ಯಾಯಾಲಯದ ಅನುಮತಿ ಪಡೆಯದೆ ಆಕೆಗೆ ಖೈದಿಯನ್ನು ಭೇಟಿಯಾಗಲು ಅವಕಾಶ ನೀಡಲಾಗಿತ್ತೇ ಎಂಬ ಪ್ರಶ್ನೆ ಇದೀಗ ಎದುರಾಗಿದೆ.
ಲೋಕಾಯುಕ್ತ ಪ್ರಕರಣದಲ್ಲಿ ಜೈಲು ಸೇರಿದ್ದ ಖೈದಿ
ಶ್ರೀರಂಗಪಟ್ಟಣ ತಾಲೂಕು ಭೂ ದಾಖಲೆಗಳ ಕಚೇರಿಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಮಹಮದ್ ಹುಸೇನ್ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಜುಲೈ 2ರಂದು ದಾಳಿ ನಡೆಸಿದ್ದ ಅಧಿಕಾರಿಗಳು ಸರ್ಕಾರಿ ತಂತ್ರಾಂಶದಲ್ಲಿ ದಾಖಲೆಗಳ ಡಿಜಿಟಲೀಕರಣ, ಆಕಾರ್ಬಂಧ್ ದಾಖಲೆ ಹಾಗೂ ನಕಲಿ ದಾಖಲೆ ಸೃಷ್ಟಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿದ್ದರು. ಜುಲೈ 3ರಂದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಆರೋಪಿಯ ವಿರುದ್ಧ ಬಿಎನ್ಎಸ್ನ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಜೈಲು ವೈದ್ಯಾಧಿಕಾರಿಯ ಸಲಹೆಯ ಮೇರೆಗೆ ಮಹಮದ್ ಹುಸೇನ್ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದ ಆಸ್ಪತ್ರೆ ಅಧೀಕ್ಷಕ
ಆದರೆ ಮಿಮ್ಸ್ ಆಸ್ಪತ್ರೆ ಅಧೀಕ್ಷಕ ಡಾ. ಶಿವಕುಮಾರ್ ಅವರು ಖೈದಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ, ಆತನನ್ನು ಒತ್ತಾಯಪೂರ್ವಕವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ.
ಸೋಮವಾರ ಸಂಜೆ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ KSLSA ಹಾಗೂ DLSA ಅಧಿಕಾರಿಗಳ ತಂಡ ಆಸ್ಪತ್ರೆ ಮತ್ತು ಜೈಲಿನಲ್ಲಿನ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿತು. ವಿಶೇಷ ವಾರ್ಡ್ನಲ್ಲಿ ಖೈದಿಯನ್ನು ಇರಿಸಿರುವುದು, ಮಹಿಳೆಗೆ ಪ್ರವೇಶ ನೀಡಿರುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ.
ಜಿಲ್ಲಾ ಸತ್ರ ನ್ಯಾಯಾಧೀಶ ಹಾಗೂ DLSA ಅಧ್ಯಕ್ಷ ಚಂದ್ರಶೇಖರ ಸಿ., KSLSA ಸದಸ್ಯ ಕಾರ್ಯದರ್ಶಿ ಶಶಿಧರ ಶೆಟ್ಟಿ ಸೇರಿದಂತೆ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ.
ಖೈದಿಗೆ ವಿಶೇಷ ವಾರ್ಡ್ ಸೌಲಭ್ಯ ನೀಡಲು ಹಾಗೂ ಮಹಿಳೆಗೆ ಪ್ರವೇಶ ಕಲ್ಪಿಸಲು ಅಗತ್ಯ ಅನುಮತಿ ಪಡೆಯಲಾಗಿತ್ತೇ ಎಂಬುದು ಇದೀಗ ಪ್ರಮುಖ ಪ್ರಶ್ನೆಯಾಗಿದೆ. ಪರಿಶೀಲನಾ ವರದಿ ಮತ್ತು ಅಧಿಕಾರಿಗಳಿಂದ ಪಡೆಯುವ ಮಾಹಿತಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ದೇಶ
Women Police Marriage ಮದುವೆಗೆ ದಿನಾಂಕ ಫಿಕ್ಸ್, ಆಮಂತ್ರಣ ಪತ್ರಿಕೆಯೂ ಸಿದ್ಧ; ಕೊನೆ ಕ್ಷಣದಲ್ಲಿ ಇಬ್ಬರು ಮಹಿಳಾ ಪೊಲೀಸರ ಮದುವೆ ರದ್ದು!
ಪುಣೆ: ಮಹಾರಾಷ್ಟ್ರದ ಪಿಂಪ್ರಿ-ಚಿಂಚ್ವಾಡ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಮಹಿಳಾ ಪೊಲೀಸ್ ಕಾನ್ಸ್ಸ್ಟೇಬಲ್ಗಳು ಆಗಸ್ಟ್ 30ರಂದು ಆಳಂದಿಯಲ್ಲಿ ವೈದಿಕ ಪದ್ಧತಿಯಂತೆ ವಿವಾಹವಾಗಲು ನಿರ್ಧರಿಸಿದ್ದರು. ಆದರೆ, ಮದುವೆ ಸಮಾರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ವಿವಾಹ ರದ್ದಾಗಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.
ಇಬ್ಬರೂ ಕಾನ್ಸ್ಸ್ಟೇಬಲ್ಗಳು ಮದುವೆಗಾಗಿ ಪೊಲೀಸ್ ಇಲಾಖೆಯಿಂದ ಅಧಿಕೃತ ರಜೆ ಕೋರಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯೊಂದಿಗೆ ಮದುವೆಯ ಆಮಂತ್ರಣ ಪತ್ರಿಕೆಯನ್ನೂ ಲಗತ್ತಿಸಿದ್ದರು ಎನ್ನಲಾಗಿದೆ. ಆದರೆ, ಕೊನೆಯ ಕ್ಷಣದಲ್ಲಿ ಮದುವೆ ರದ್ದಾಗಲು ನಿಖರವಾದ ಕಾರಣವೇನು ಎಂಬುದು ಇದುವರೆಗೆ ಅಧಿಕೃತವಾಗಿ ಬಹಿರಂಗವಾಗಿಲ್ಲ.
ನೇಮಕಾತಿ ವೇಳೆ ಪರಿಚಯ, ಬಳಿಕ ಆತ್ಮೀಯತೆ
ಇಬ್ಬರು ಮಹಿಳಾ ಕಾನ್ಸ್ಸ್ಟೇಬಲ್ಗಳು ಪೊಲೀಸ್ ನೇಮಕಾತಿ ಪ್ರಕ್ರಿಯೆಯ ಸಂದರ್ಭದಲ್ಲಿ ಪರಸ್ಪರ ಪರಿಚಯವಾಗಿದ್ದರು. ನೇಮಕಾತಿಯಲ್ಲಿ ಯಶಸ್ವಿಯಾದ ಬಳಿಕ ಇಬ್ಬರೂ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿ ತರಬೇತಿ ಪೂರ್ಣಗೊಳಿಸಿದ್ದರು. ಆರಂಭದಲ್ಲಿ ಪೊಲೀಸ್ ಮುಖ್ಯ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಇವರಿಬ್ಬರನ್ನು ಬಳಿಕ ಒಂದೇ ಕೇಂದ್ರ ಪೊಲೀಸ್ ಠಾಣೆಗೆ ನಿಯೋಜಿಸಲಾಗಿತ್ತು.
ಒಟ್ಟಿಗೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಇಬ್ಬರ ನಡುವೆ ಆತ್ಮೀಯತೆ ಬೆಳೆದಿದ್ದು, ನಂತರ ಜೀವನವನ್ನು ಒಟ್ಟಾಗಿ ಸಾಗಿಸಲು ನಿರ್ಧರಿಸಿದ್ದರು ಎನ್ನಲಾಗಿದೆ. ಇದೇ ಹಿನ್ನೆಲೆಯಲ್ಲಿ ವಿವಾಹವಾಗಲು ಸಿದ್ಧತೆ ನಡೆಸಿದ್ದರು.
ಕುಟುಂಬದ ವಿರೋಧವೇ ಕಾರಣವೇ?
ಇಬ್ಬರಲ್ಲಿ ಒಬ್ಬರ ಕುಟುಂಬವು ಈ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿತ್ತು ಎಂಬ ವರದಿಗಳು ಈ ಹಿಂದೆ ಕೇಳಿಬಂದಿದ್ದವು. ಕುಟುಂಬ ಸದಸ್ಯರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಈ ಕುರಿತು ಮನವಿ ಮಾಡಿದ್ದರು ಎನ್ನಲಾಗಿದೆ. ಆದರೆ, ಕುಟುಂಬದ ವಿರೋಧವೇ ಮದುವೆ ರದ್ದಾಗಲು ಕಾರಣ ಎಂಬುದನ್ನು ಪೊಲೀಸ್ ಅಧಿಕಾರಿಗಳು ದೃಢಪಡಿಸಿಲ್ಲ.
ವೈಯಕ್ತಿಕ ಕಾರಣಗಳಿಂದ ಮದುವೆ ರದ್ದಾಗಿದೆಯೇ ಅಥವಾ ಬೇರೆ ಯಾವುದಾದರೂ ಪರಿಸ್ಥಿತಿ ಕಾರಣವೇ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.
ಲಿಂಗ ಪರಿವರ್ತನೆ ಚಿಕಿತ್ಸೆಯ ಬಗ್ಗೆಯೂ ಚರ್ಚೆ
ಇಬ್ಬರಲ್ಲಿ ಒಬ್ಬರು ಲಿಂಗ ಪರಿವರ್ತನೆಗೆ ಸಂಬಂಧಿಸಿದ ವೈದ್ಯಕೀಯ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ ಎಂಬ ವರದಿಗಳೂ ಈ ಹಿಂದೆ ಹರಿದಾಡಿದ್ದವು. ಈ ವಿಚಾರವೂ ಪ್ರಕರಣದ ಕುರಿತು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಆದರೆ, ಈ ಮಾಹಿತಿಯನ್ನು ಸಂಬಂಧಪಟ್ಟ ಪೊಲೀಸ್ ಆಡಳಿತ ಅಧಿಕೃತವಾಗಿ ದೃಢಪಡಿಸಿಲ್ಲ.
ಈ ಪ್ರಕರಣವು ಭಾರತದಲ್ಲಿ ಸಲಿಂಗ ಸಂಬಂಧಗಳು ಮತ್ತು ವಿವಾಹದ ಕಾನೂನು ಸ್ಥಿತಿಯ ಕುರಿತ ಚರ್ಚೆಯನ್ನೂ ಮುನ್ನೆಲೆಗೆ ತಂದಿದೆ. ವಯಸ್ಕರ ನಡುವಿನ ಪರಸ್ಪರ ಒಪ್ಪಿಗೆಯ ಸಲಿಂಗ ಸಂಬಂಧಗಳು ಅಪರಾಧವಲ್ಲ. ಆದರೆ, ಪ್ರಸ್ತುತ ಭಾರತದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಇಲ್ಲ.
ಪಿಂಪ್ರಿ-ಚಿಂಚ್ವಾಡ ಪೊಲೀಸ್ ಆಡಳಿತವು ಮದುವೆ ರದ್ದಾಗಿರುವ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಾಗಿ ಕುಟುಂಬದ ವಿರೋಧ, ವೈಯಕ್ತಿಕ ಕಾರಣ ಅಥವಾ ಬೇರೆ ಯಾವುದೇ ಪರಿಸ್ಥಿತಿಯಿಂದ ವಿವಾಹ ರದ್ದಾಗಿದೆಯೇ ಎಂಬುದು ಇನ್ನೂ ನಿಗೂಢವಾಗಿದೆ. ಸಂಬಂಧಪಟ್ಟವರು ಅಥವಾ ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಿದ ಬಳಿಕವೇ ನಿಜವಾದ ಕಾರಣ ಸ್ಪಷ್ಟವಾಗಲಿದೆ.
-
ಬೆಂಗಳೂರು17 ಗಂಟೆಗಳು agoKannada Sahitya Parishat ನ ಗೌರವ ದತ್ತಿ ಪ್ರಶಸ್ತಿ ಪ್ರಕಟ: 2025, 2026ನೇ ಸಾಲಿನ ಪುರಸ್ಕೃತರು ಇವರೇ!
-
ಬೆಂಗಳೂರು24 ಗಂಟೆಗಳು agoB Nagendra ವಿರುದ್ಧ ಬಿಜೆಪಿ-ಜೆಡಿಎಸ್ ದೂರು: ರಾಜ್ಯಪಾಲರಿಗೆ ಮನವಿ ಸಲ್ಲಿಕೆ
-
ದೇಶ22 ಗಂಟೆಗಳು agoIran ಮೇಲೆ America ದ ಹೊಸ ನಿರ್ಬಂಧ! ಭಾರತದ ಅಕ್ಕಿ, ಚಹಾ, ಔಷಧ ರಫ್ತಿಗೆ ಎದುರಾಯ್ತಾ ದೊಡ್ಡ ಹೊಡೆತ?
-
ದೇಶ21 ಗಂಟೆಗಳು agoChina Robot Revolution ರೋಬೋಟ್ ಗಳಿಗೆ ತರಬೇತಿ, ಯುವಕರಿಗೆ ಹೊಸ ಪಾಠ! ಚೀನಾ ಭವಿಷ್ಯದ ಉದ್ಯೋಗಕ್ಕಾಗಿ ಮಾಡುತ್ತಿರುವುದೇನು?
-
ಬೆಂಗಳೂರು23 ಗಂಟೆಗಳು agoUrvashi ಚಿತ್ರಮಂದಿರ ನೆಲಸಮಕ್ಕೆ ದಿಢೀರ್ ಬ್ರೇಕ್! Karnataka High Court ಆದೇಶದ ಹಿಂದಿರುವ ಕಾರಣವೇನು?
-
ಬೆಂಗಳೂರು23 ಗಂಟೆಗಳು agoSignal ನಲ್ಲಿ ನಿಂತಿದ್ದ ಬೈಕ್ ಸವಾರನಿಗೆ ಹಿಂಬದಿಯಿಂದ ಕಾರು ಡಿಕ್ಕಿ! 50 ಅಡಿ ದೂರಕ್ಕೆ ಹಾರಿ ಯುವಕ ಸಾವು
-
ದೇಶ24 ಗಂಟೆಗಳು agoCentre Government ವಿರುದ್ಧ ಮತ್ತೆ ಸಿಡಿದೆದ್ದ CJP! ಸೆ.5ರಂದು ನಡೆಯಲಿದೆ ಬೃಹತ್ ಪ್ರತಿಭಟನಾ ಮೆರವಣಿಗೆ
-
ಅಪರಾಧ17 ಗಂಟೆಗಳು agoRenukaswamy Murder Case ನಲ್ಲಿ ಮಹತ್ವದ ಬೆಳವಣಿಗೆ: ಮಾಫಿ ಸಾಕ್ಷಿಯಾದ ಪ್ರದೋಷ್, ಮುಂದೆ ಏನಾಗಲಿದೆ?
