ದೇಶ
ವಿಂಡೋಸ್ 10 ಬಳಕೆದಾರರಿಗೆ ಬಿಗ್ ಶಾಕ್; ಜಾಗತಿಕವಾಗಿ ಸ್ಥಗಿತಗೊಂಡು ಆತಂಕ ಸೃಷ್ಟಿಸಿದ ಸಾಫ್ಟ್ವೇರ್!

ವಿಂಡೋಸ್ 10, ಮೈಕ್ರೋಸಾಫ್ಟ್ ಅಭಿವೃದ್ಧಿ ಪಡಿಸಿರುವ ಹೊಸ ಸಾಫ್ಟ್ವೇರ್ ಈಗ ಜಾಗತಿಕವಾಗಿ ದೊಡ್ಡ ಸಮಸ್ಯೆಯಾಗಿ ಕಾಡಲು ಆರಂಭಿಸಿದೆ. ವಿಂಡೋಸ್ 10 ಬಳಕೆದಾರರು ಅದು ನೀಡುತ್ತಿರುವ ಹೊಸ ಸಮಸ್ಯೆಗೆ ಹೈರಾಣಾಗಿ ಹೋಗಿದ್ದಾರೆ. ವಿಶ್ವದ ಹಲವು ಕಡೆ ಬಿಎಸ್ಒಡಿ ಅಂದ್ರೆ ಬ್ಲೂ ಸ್ಕ್ರೀನ್ ಆಪ್ ಡೆತ್ ಅನ್ನೋ ಸಮಸ್ಯೆಯೊಂದು ಸೃಷ್ಟಿಯಾಗಿದೆ.
ವಿಂಡೋಸ್ 10 ಸಾಫ್ಟ್ವೇರ್ ಅಳವಡಿಸಿಕೊಂಡ ಜಗತ್ತಿನ ಅನೇಕ ಕಂಪ್ಯೂಟರ್ಗಳಲ್ಲಿ ಈ ಸಮಸ್ಯೆಯೊಂದು ಕಾಡುತ್ತಿದೆ. ವಿಶ್ವಾದ್ಯಂತ ಲಕ್ಷ, ಲಕ್ಷ ಜನರು ಈ ಸಮಸ್ಯೆಯಿಂದಾಗಿ ಹೈರಾಣಾಗಿದ್ದಾರೆ.. ಅಸಲಿಗೆ ಏನಿದು ಬಿಎಸ್ಓಡಿ ಅಂತ ನೋಡಿದ್ರೆ, ವಿಂಡೋಸ್ 10 ಅಳವಡಿಸಿಕೊಂಡ ಕಂಪ್ಯೂಟರ್ಗಳು ಸಾಮೂಹಿಕವಾಗಿ ಸ್ಟ್ರೈಕ್ ಆಗುತ್ತಿವೆ. ನೀಲಿ ತೆರೆಯೊಂದು ಕಂಪ್ಯೂಟರ್ ಸ್ಕ್ರೀನ್ ಮೇಲೆ ಪ್ರತ್ಯಕ್ಷವಾಗಿ ಹಲವು ಗಂಟೆಗಳ ಕಾಲ ಕಂಪ್ಯೂಟರ್ ಬಳಕೆದಾರರನ್ನು ಪೀಡಿಸುತ್ತಿದೆ. ಇದು ಕೇವಲ ಜನರಿಗೆ ಮಾತ್ರವಲ್ಲ ವಿಶ್ವಾದ್ಯಂತ ಹಲವು ಕಂಪನಿಗಳಲ್ಲೂ ಈ ಸಮಸ್ಯೆ ಶುರುವಾಗಿದೆ.
ಏರ್ಪೋರ್ಟ್ಗಳಲ್ಲಿ ಈ ಬಿಎಸ್ಓಡಿ ಯಿಂದಾಗಿ ವಿಮಾನ ಹಾರಾಟಗಳ ನಿರ್ವಹಣೆಗೆ ತೊಂದರೆಯಾಗಿ ಸರ್ಕಾರಿ ಕಚೇರಿಗಳು, ಖಾಸಗಿ ಕಂಪನಿಗಳು ಯಾವೆಲ್ಲಾ ವಿಂಡೋಸ್ 10 ಅಳವಡಿಸಿಕೊಂಡಿವೆಯೋ ಅವೆಲ್ಲವೂ ಸಾಮೂಹಿಕವಾಗಿ ಇಂತಹದೊಂದು ತೊಂದರೆಯನ್ನು ಅನುಭವಿಸುತ್ತಿವೆ. ಈ ಒಂದು ಸಮಸ್ಯೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದ್ದು, ಸಾಫ್ಟ್ವೇರ್ನಿಂದ ತೊಂದರೆ ಅನುಭವಿಸಿದವರೆಲ್ಲಾ, ಕಂಪ್ಯೂಟರ್ ಡಿಸ್ಪ್ಲೇಗಳ ಫೋಟೋ ತೆಗೆದು ಪೋಸ್ಟ್ ಮಾಡಿ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ದೆಹಲಿ ಏರ್ಪೋರ್ಟ್ನಲ್ಲೂ ವಿಮಾನ ಸಂಚಾರ ಸ್ಥಗಿತವಾಗಿದ್ದು, ವಿಸ್ತಾರ, ಇಂಡಿಗೋ ಏರ್ಲೈನ್ಸ್ ಸಿಬ್ಬಂದಿ ಕೈಯಲ್ಲಿ ಬರೆದ ಬೋರ್ಡಿಂಗ್ ಪಾಸ್ಗಳನ್ನು ನೀಡುತ್ತಿದ್ದಾರೆ.
ವಿಂಡೋಸ್ 10 ಸರಿಯಾಗಿ ಲೋಡ್ ಆಗುತ್ತಿಲ್ಲ. ಪದೇ ಪದೇ ಕಂಪ್ಯೂಟರ್ಗಳನ್ನ ರಿಸ್ಟಾರ್ಟ್ ಹಾಗೂ ಶಟ್ ಡೌನ್ ಮಾಡಿ ಮತ್ತೆ ಆನ್ ಮಾಡುವ ಅನಿವಾರ್ಯತೆಗಳು ಸೃಷ್ಟಿಯಾಗಿವೆ. ಬ್ಯಾಕ್ ಬಗ್, ಬ್ಲ್ಯೂ ಸ್ಕ್ರೀನ್ನಂತಹ ಎರರ್ ಸಮಸ್ಯೆಗಳು ಫಾಲ್ಕಾನ್ ಸೆನ್ಸಾರ್ಗೆ ಸಂಬಂಧಿಸಿದ ಸಮಸ್ಯೆಗಳಾಗಿವೆ, ಸದ್ಯದಲ್ಲಿಯೇ ನಮ್ಮ ಎಂಜನೀಯರಿಂಗ್ ಟೀಮ್ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಿದೆ ಎಂದು ಮೈಕ್ರೋಸಾಫ್ಟ್ ಕಂಪನಿ ಹೇಳಿದೆ.
ಈ ಹಿಂದೆಯೂ ಹೀಗೆ ಸಮಸ್ಯೆ ಸೃಷ್ಟಿಸಿತ್ತು ವಿಂಡೋಸ್ 10
ಕಳೆದ ನಾಲ್ಕೈದು ವರ್ಷಗಳ ಹಿಂದೆಯೂ ಕೂಡ ಇಂತಹದೊಂದು ಸಮಸ್ಯೆಯು ವಿಂಡೋ 10ನಲ್ಲಿ ಕಂಡು ಬಂದಿತ್ತು. ಇದಕ್ಕೆ ಅಸಲಿ ಕಾರಣ ಏನು ಅನ್ನೋದು ಇನ್ನೂ ಕೂಡ ತಿಳಿದು ಬಂದಿಲ್ಲ. ಅದನ್ನು ಪರಿಣಿತರು ಸದ್ಯದಲ್ಲಿಯೇ ಕಂಡು ಹಿಡಿದು, ಆಗಿರುವ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲಿದ್ದಾರೆ ಅಂತ ಎಐ ಹಾಗೂ ಟೆಕ್ ಎಕ್ಸಪರ್ಟ್ ಅಂಕುಶ್ ಸಬ್ಹರ್ವಾಲಾ ಹೇಳಿದ್ದಾರೆ.
ಭಾರತೀಯ ವಿಮಾನಯಾನ ಕಂಪನಿಗಳಿಗೂ ತೊಂದರೆ
ಆದರೂ ಕೂಡ ವಿಶ್ವದ ಅನೇಕ ಸಂಸ್ಥೆಗಳು ಅದರಲ್ಲಿಯೂ ಪ್ರಮುಖವಾಗಿ ವಿಮಾನ ಕಂಪನಿಗಳಿಗೆ ಈ ಬ್ಲ್ಯೂ ಸ್ಕ್ರೀನ್ ಆಫ್ ಡೆತ್ ಅನೇಕ ಸಂಕಷ್ಟಗಳನ್ನು ತಂದಿಟ್ಟಿದೆ. ಭಾರತದ ಪ್ರಮುಖ ಏರ್ಲೈನ್ಸ್ ಕಂಪನಿಗಳಲ್ಲೊಂದಾದ ಸ್ಪೈಸ್ ಜೆಟ್ ಸಂಸ್ಥೆಯೂ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು ವಿಂಡೋಸ್ 10 ಕ್ರೌಡ್ಸ್ಟ್ರೈಕ್ ಬಗ್ಗೆ ಹೇಳಿಕೊಂಡಿದೆ. ಸದ್ಯ ನಾವು ಅನೇಕ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ವಿಮಾನಗಳ ಹಾರಾಟದ ಬಗ್ಗೆ ತಿಳಿಸಲು ಅನೇಕ ತೊಂದರೆಗಳು ಉಂಟಾಗುತ್ತಿದೆ, ಈ ಬಗ್ಗೆ ನಮ್ಮ ಟೆಕ್ನಿಕಲ್ ಟೀಮ್ ಕಾರ್ಯಪ್ರವೃತ್ತವಾಗಿದ್ದು, ಶೀಘ್ರದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಲಿದೆ ಎಂದು ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ತನ್ನ ಎಕ್ಸ್ ಖಾತೆಯಲ್ಲಿ ಹೇಳಿಕೊಂಡಿದೆ. ಅಕಾಸಾ ಏರ್ ಕೂಡ ಇದೇ ಮಾದರಿಯಲ್ಲಿಯೇ ತನ್ನ ಸಮಸ್ಯೆಗಳನ್ನು ಹೇಳಿಕೊಂಡಿದೆ, ತಾಂತ್ರಿಕ ಸಮಸ್ಯೆಗಳ ಕಾರಣದಿಂದಾಗಿ ಆನ್ಲೈನ್ ಸೇವೆಗಳಲ್ಲಿ ಕೊಂಚ ಸಮಸ್ಯೆಯುಂಟಾಗಿದೆ, ಹೀಗಾಗಿ ಪ್ರಯಾಣಿಕರು ದಯವಿಟ್ಟು ಸಹಕರಿಸಬೇಕು ಎಂದು ಹೇಳಿದೆ.
ಆರಂಭಿಕ ಮಾಹಿತಿಯ ಪ್ರಕಾರ, ವಿಂಡೋಸ್ 10 ಸಾಫ್ಟ್ವೇರ್ ಸದ್ಯ ಅಪ್ಡೇಟ್ ಮಾಡಲಾಗುತ್ತಿದೆ. ಹೀಗಾಗಿಯೇ ಇಂತಹದೊಂದು ತಾಂತ್ರಿಕ ಸಮಸ್ಯೆಗಳು ಸೃಷ್ಟಿಯಾಗಿವೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸಮಸ್ಯೆಯ ಗಂಭೀರತೆಯನ್ನು ಅರಿತಿರುವ ಮೈಕ್ರೋಸಾಫ್ಟ್ ಸಂಸ್ಥೆ ಶೀಘ್ರ ಪರಿಹಾರಕ್ಕೆ ಮುಂದಾಗಿದೆ. ಆಗಿರುವ ಸಮಸ್ಯೆಯನ್ನು ಸಾಧ್ಯವಾದಷ್ಟು ಬೇಗ ಪರಿಹರಿಸುವುದಾಗಿ ಸಂಸ್ಥೆ ಭರವಸೆಯನ್ನು ಕೊಟ್ಟಿದೆ. ಅದು ಅಲ್ಲದೇ ಈ ಜಾಗತಿಕ ಸಮಸ್ಯೆಗೆ ಕಾರಣವಾಗಿದ್ದು ಒಂದು ಬಗ್ ಹೀಗಾಗಿ ಅದನ್ನು ನಿವಾರಿಸುವತ್ತ ನಮ್ಮ ತಾಂತ್ರಿಕಪಡೆ ನಿರತವಾಗಿದೆ ಎಂದೂ ಕೂಡ ಭರವಸೆಯನ್ನು ನೀಡಲಾಗಿದೆ.
ಆಮೇಲೆ ಈ ರೀತಿಯ ಸಮಸ್ಯೆಗಳು ಆಗಾಗ ಮರುಕಳಿಸುತ್ತಲೇ ಇರುತ್ತವೆ ಅದು ಮೈಕ್ರೋಸಾಫ್ಟ್ಗೆ ಸಂಬಂಧಿಸಿದ ಸಾಫ್ಟ್ವೇರ್ಗಳೇ ಇರಲಿ ಅಥವಾ ಬೇರೆಯದ್ದೇ ಸಾಫ್ಟ್ವೇರ್ಗಳಿರಲಿ, ವರ್ಷದಲ್ಲಿ ಒಂದೆರೆಡು ಬಾರಿ ಈ ರೀತಿಯ ಸಮಸ್ಯೆಗಳನ್ನು ಎದುರಿಸುವ ಅನಿವಾರ್ಯತೆ ಎಲ್ಲ ಸಾಫ್ಟ್ವೇರ್ ಕಂಪನಿಗಳಿಗೂ ಒದಗಿ ಬರುತ್ತದೆ. ಜಾಗತಿಕವಾಗಿ ಇಂತಹದೊಂದು ಸಮಸ್ಯೆಗಳು ಆಗಾಗ ಎದುರುಗಾತ್ತವೆ. ಹೀಗಾಗಿ ಅಂತಹ ಟೆಕ್ ಕಂಪನಿಗಳು ಆಗಿರುವ ಸಮಸ್ಯೆಯನ್ನು ಬಗೆಹರಿಸಲು ಕೆಲವೊಂದಿಷ್ಟು ಸಮಯಗಳನ್ನು ತೆಗೆದುಕೊಳ್ಳುತ್ತವೆ. ಕನಿಷ್ಠ ಮೂರರಿಂದ ನಾಲ್ಕು ತಾಸುಗಳ ಮಟ್ಟಿಗೆ ಈ ಬ್ಲ್ಯೂ ಸ್ಕ್ರೀನ್ ಆಫ್ ಡೆತ್ ಅನ್ನೋ ಸಮಸ್ಯೆಯನ್ನು ಎದುರಿಸುವುದು ಅನಿವಾರ್ಯ ಎಂದೇ ಹೇಳಲಾಗುತ್ತಿದೆ.
ದೇಶ
ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.
ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.
🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:
ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್ಸ್ಟ್ರಿಪ್ಗಳು, ಹೆಲಿಪ್ಯಾಡ್ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:
- ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
- ಸಿಸಿಟಿವಿ ಕಣ್ಗಾವಲು ಬಿಗಿತ
- ಸರಕು, ಪಾರ್ಸೆಲ್ ಮತ್ತು ಮೇಲ್ಗಳ ತಪಾಸಣೆ
- ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ
🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:
ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.
ದೇಶ
ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.
ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್ ಮೌಲ್ಯದ ಪಲ್ಲಾಡಿಯಮ್ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.
ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್ಎನ್ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.
ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.
ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕ್ರೀಡೆ
ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.
ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.
ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.
ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ