Connect with us

ಕ್ರೀಡೆ

ಕೊಹ್ಲಿ ಮೇಲಿನ ಸಿಟ್ಟಿಗೆ ರಾಹುಲ್​ ವಿರುದ್ಧ ದ್ವೇಷ ಸಾಧಿಸಿದ ಗಂಭೀರ್​​.. ಕನ್ನಡಿಗನಿಗೆ ಭಾರೀ ಅನ್ಯಾಯ!

Published

on

ಕಳೆದ ವರ್ಷ ಟೀಮ್​ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಕನ್ನಡಿಗ ಕೆಎಲ್ ರಾಹುಲ್ ಸೌತ್​ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು 2-1 ರಿಂದ ಗೆದ್ದು ಸಂಭ್ರಮಿಸಿದ್ರು. ಈ ಮೂಲಕ ಬರೋಬ್ಬರಿ 21 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಬಳಿಕ ಹರಿಣಿಗಳ ನಾಡಿನಲ್ಲಿ ಸೌತ್​ ಆಫ್ರಿಕಾ ತಂಡವನ್ನು ಮಣಿಸಿದ 2ನೇ ಟೀಮ್ ಇಂಡಿಯಾ ನಾಯಕ ಎಂಬ ದಾಖಲೆ ನಿರ್ಮಿಸಿದ್ರು. ಹಾಗಾಗಿ ರೋಹಿತ್​ ಶರ್ಮಾ ಉಪಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ದ ಕೆ.ಎಲ್​ ರಾಹುಲ್​ ಅವರೇ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದ್ದವು.

ಶ್ರೀಲಂಕಾ ವಿರುದ್ಧ ಜೂನ್​​ 27ನೇ ತಾರೀಕಿನಿಂದ 3 ಟಿ20 ಪಂದ್ಯ ಮತ್ತು 3 ಏಕದಿನ ಪಂದ್ಯಗಳ ಸರಣಿ ಶುರುವಾಗಲಿದೆ. ಈಗಾಗಲೇ ಶ್ರೀಲಂಕಾ ವಿರುದ್ಧದ ಸರಣಿಗೆ ಬಲಿಷ್ಠ ಟೀಮ್​ ಇಂಡಿಯಾ ಅನೌನ್ಸ್ ಆಗಿದೆ. ಟೀಮ್​ ಇಂಡಿಯಾ ವಿಶ್ವಕಪ್​ ಗೆದ್ದ ಬೆನ್ನಲ್ಲೇ ವಿರಾಟ್​ ಕೊಹ್ಲಿ, ರೋಹಿತ್​ 20 ಅಂತರಾಷ್ಟ್ರೀಯ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ರು. ಅಷ್ಟೇ ಅಲ್ಲದೇ ಶ್ರೀಲಂಕಾ ಪ್ರವಾಸದಿಂದ ರೆಸ್ಟ್​ ಕೂಡ ಕೇಳಿದ್ದರು. ಬಿಸಿಸಿಐ ಕೊಹ್ಲಿ, ರೋಹಿತ್​​ ಮತ್ತು ಬುಮ್ರಾಗೆ ರೆಸ್ಟ್​ ನೀಡಿತ್ತು. ಗಂಭೀರ್​ ಕೋಚ್​ ಆದ ಬಳಿಕ ಇದು ಮೊದಲ ಸರಣಿ ಆಗಿದ್ದು, ಮೂವರು ಸ್ಟಾರ್​ ಆಟಗಾರರು ಶ್ರೀಲಂಕಾ ವಿರುದ್ಧ ಏಕದಿನ ಸೀರೀಸ್​ ಆಡಲೇಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ವಿರಾಟ್​ ಕೊಹ್ಲಿ, ರೋಹಿತ್​​ ಸಮ್ಮತಿಸಿದ್ದು, ಈಗ ತಂಡಕ್ಕೆ ವಾಪಸ್ಸಾಗಿದ್ದಾರೆ. ಇನ್ನು, ಟಿ20 ವಿಶ್ವಕಪ್​ನಿಂದ ದೂರ ಉಳಿದಿದ್ದ ಕೆ.ಎಲ್​ ರಾಹುಲ್​ ಮತ್ತು ಶ್ರೇಯಸ್​ ಅಯ್ಯರ್​ ಕೂಡ ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ. ಬುಮ್ರಾ ಮಾತ್ರ ರೆಸ್ಟ್​ನಲ್ಲಿದ್ದಾರೆ.

ರಾಹುಲ್​ ಭಾರೀ ಮೋಸ!

ರೋಹಿತ್​ ಶರ್ಮಾ ಏಕದಿನ ಸೀರೀಸ್​ನಿಂದ ರೆಸ್ಟ್​ ತೆಗೆದುಕೊಂಡಿದ್ದಾರೆ ಎನ್ನಲಾಗಿತ್ತು. ಹಾಗಾಗಿ ಏಕದಿನ ಮಾದರಿಯಲ್ಲಿ ಭಾರತ ತಂಡವನ್ನು ರಾಹುಲ್​ ಅವರೇ ಮುನ್ನಡೆಸಲಿದ್ದಾರೆ. ಕೋಚ್​​ ಗೌತಮ್​​ ಗಂಭೀರ್​​ ಕೂಡ ಕೆ.ಎಲ್​ ರಾಹುಲ್​ ಭಾರತ ಏಕದಿನ ತಂಡದ ಕ್ಯಾಪ್ಟನ್​ ಆಗಲಿ ಎಂಬ ಅಭಿಪ್ರಾಯ ಕೂಡ ವ್ಯಕ್ತಪಡಿಸಿದ್ದಾರೆ ಅನ್ನೋ ವಿಚಾರ ತಿಳಿದು ಬಂದಿತ್ತು. ಆದರೀಗ, ರೋಹಿತ್​​ ವಾಪಸ್​ ಬಂದಿದ್ದು, ಅವರೇ ಮುನ್ನಡೆಸುತ್ತಿದ್ದಾರೆ. ವಿಚಿತ್ರ ಎಂದರೆ ಶುಭ್ಮನ್​ ಗಿಲ್​​ ಉಪನಾಯಕನ ಪಟ್ಟ ಕಟ್ಟಲಾಗಿದೆ. ಈ ಮೂಲಕ ಟೀಮ್​ ಇಂಡಿಯಾ ಮುಂದಿನ ಕ್ಯಾಪ್ಟನ್​ ಆಗಬೇಕಿದ್ದ ಕೆ.ಎಲ್​ ರಾಹುಲ್​ಗೆ ಬಿಗ್​ ಶಾಕ್​ ನೀಡಲಾಗಿದೆ.

ವಿರಾಟ್​​ ಕೊಹ್ಲಿ ಮೇಲೆ ಸಿಟ್ಟಿಗೆ ಹೀಗೆ ಮಾಡಿದ್ರಾ ಗಂಭೀರ್​​..?

ಸದ್ಯ ಗಂಭೀರ್​ ಮಾತಾಡಿರೋ ಹಳೆ  ವಿಡಿಯೋ ಒಂದು ವೈರಲ್​ ಆಗಿದೆ. ನಾನು ಉಪನಾಯಕ ಆಗಿದ್ದೆ, ಧೋನಿ ಕ್ಯಾಪ್ಟನ್​ ಇದ್ದರು. ಬಾಂಗ್ಲಾದೇಶ ವಿರುದ್ಧ ಸರಣಿಗೆ ಟೀಮ್​ ಇಂಡಿಯಾ ಪ್ರಕಟ ಆಯ್ತು. ಆಗ ಒಂದೇ ಒಂದು ಚೇಂಜಸ್​ ಆಗಿದ್ದು, ನನ್ನನ್ನು ಉಪನಾಯಕನ ಸ್ಥಾನದಿಂದ ತೆಗೆದು ಹಾಕಲಾಯ್ತು. ವಿರಾಟ್​​ ಕೊಹ್ಲಿಗೆ ವೈಎಸ್​ ಕ್ಯಾಪ್ಟನ್ಸಿ ನೀಡಲಾಗಿತ್ತು. ಕ್ಯಾಪ್ಟನ್​​ ಇರುವಾಗ ಉಪನಾಯಕನನ್ನು ಬದಲಿಸಿದ್ದು ಕ್ರಿಕೆಟ್​​ ಇತಿಹಾಸದಲ್ಲೇ ಅದೇ ಮೊದಲು ಎಂದಿದ್ದರು. ಹಾಗಾಗಿ ಕೊಹ್ಲಿ, ಧೋನಿ ಮೇಲಿನ ಸಿಟ್ಟಿಗಾಗಿ ಗಂಭೀರ್​ ಕೆ.ಎಲ್​ ರಾಹುಲ್​ ಅವರ ಉಪನಾಯಕನ ಪಟ್ಟ ಕಿತ್ತುಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿವೆ.

ಇದನ್ನೂ ಓದಿ: ಗಂಭೀರ್​​ ಆಡಿದ ಗೇಮ್​ಗೆ ಬೆಂಡ್​ ಆದ ಕೊಹ್ಲಿ.. ಆರಂಭದಲ್ಲೇ ಜುಟ್ಟು ಹಿಡಿದು ಬಿಗಿಗೊಳಿಸಿದ ಗೌತಿ..!

ಕ್ರೀಡೆ

ಜರ್ಮನಿಯ ಗೋಲುಗಳ ಮಳೆ: ಕುರಾಕಾವೊ ವಿರುದ್ಧ 7-1 ಭರ್ಜರಿ ಜಯ

Published

on

ಡಲ್ಲಾಸ್: 2026ರ ಫಿಫಾ ವಿಶ್ವಕಪ್‌ನಲ್ಲಿ ನಾಲ್ಕು ಬಾರಿಯ ಚಾಂಪಿಯನ್ Germany national football team ಭರ್ಜರಿ ಗೆಲುವಿನೊಂದಿಗೆ ತನ್ನ ಅಭಿಯಾನ ಆರಂಭಿಸಿದೆ. ಸೋಮವಾರ ನಡೆದ ಪಂದ್ಯದಲ್ಲಿ ಕುರಾಕಾವೊ ತಂಡವನ್ನು 7-1 ಅಂತರದಿಂದ ಮಣಿಸಿದ ಜರ್ಮನಿ, ಕಳೆದ ಎರಡು ವಿಶ್ವಕಪ್ ಆವೃತ್ತಿಗಳ ಆರಂಭಿಕ ಸೋಲಿನ ಕಹಿ ನೆನಪನ್ನು ಮರೆಮಾಡಿತು.

ಜರ್ಮನಿ ಪರ Kai Havertz ಎರಡು ಗೋಲುಗಳನ್ನು ಬಾರಿಸಿ ಮಿಂಚಿದರು. ಉಳಿದಂತೆ Felix Nmecha, Nico Schlotterbeck, Jamal Musiala, Nathaniel Brown ಹಾಗೂ Deniz Undav ತಲಾ ಒಂದು ಗೋಲು ದಾಖಲಿಸಿದರು.

ಪಂದ್ಯದ ಮೊದಲಾರ್ಧದಲ್ಲಿ ಕುರಾಕಾವೊ ಉತ್ತಮ ಪೈಪೋಟಿ ನೀಡಿತು. Livano Comenencia ಗಳಿಸಿದ ಗೋಲಿನಿಂದ ಕುರಾಕಾವೊ ಸಮಬಲ ಸಾಧಿಸಿತ್ತು. ಆದರೆ ದ್ವಿತಿಯಾರ್ಧದಲ್ಲಿ ಜರ್ಮನಿಯ ದಾಳಿಗೆ ತಡೆಯೊಡ್ಡಲು ವಿಫಲವಾದ ಕುರಾಕಾವೊ ಭಾರೀ ಸೋಲು ಅನುಭವಿಸಿತು.

ಕೇವಲ 1.58 ಲಕ್ಷ ಜನಸಂಖ್ಯೆ ಹೊಂದಿರುವ ಕುರಾಕಾವೊ ವಿಶ್ವಕಪ್‌ಗೆ ಅರ್ಹತೆ ಪಡೆದಿರುವುದೇ ಮಹತ್ವದ ಸಾಧನೆ ಎನಿಸಿಕೊಂಡಿದೆ. 2018ರಲ್ಲಿ ಮೆಕ್ಸಿಕೊ ಹಾಗೂ 2022ರಲ್ಲಿ ಜಪಾನ್ ವಿರುದ್ಧ ಆರಂಭಿಕ ಪಂದ್ಯದಲ್ಲಿ ಸೋತಿದ್ದ ಜರ್ಮನಿ, ಈ ಬಾರಿ ಆತ್ಮವಿಶ್ವಾಸದ ಗೆಲುವಿನೊಂದಿಗೆ ಶುಭಾರಂಭ ಕಂಡಿದೆ.

ಇದೇ ವೇಳೆ ದಿನದ ಮತ್ತೊಂದು ಪಂದ್ಯದಲ್ಲಿ Japan national football team ಮತ್ತು Netherlands national football team ತಂಡಗಳು 2-2 ಗೋಲುಗಳ ಸಮಬಲ ಸಾಧಿಸಿದವು. ನೆದರ್‌ಲೆಂಡ್ಸ್ ಪರ Virgil van Dijk ಮತ್ತು Crysencio Summerville ಗೋಲು ಗಳಿಸಿದರೆ, ಜಪಾನ್ ಪರ Keito Nakamura ಹಾಗೂ Daichi Kamada ಗೋಲು ಬಾರಿಸಿ ತಂಡವನ್ನು ಸೋಲಿನಿಂದ ಪಾರು ಮಾಡಿದರು.

Continue Reading

ಕ್ರೀಡೆ

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಇಂದು ಚಾಲನೆ: ಟ್ರೋಫಿಗಾಗಿ 12 ತಂಡಗಳ ಮಹಾಸಂಗ್ರಾಮ

Published

on

ಬರ್ಮಿಂಗ್‌ಹ್ಯಾಮ್: ವಿಶ್ವದ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಎದುರು ನೋಡುತ್ತಿದ್ದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಇಂದು ಭವ್ಯ ಚಾಲನೆ ದೊರೆಯಲಿದೆ. ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ 12 ತಂಡಗಳು ಟ್ರೋಫಿಗಾಗಿ ಸೆಣಸಾಡಲಿದ್ದು, ಟೂರ್ನಿಯು ಹೊಸ ದಾಖಲೆಗೆ ಸಾಕ್ಷಿಯಾಗುತ್ತಿದೆ.

ಇಂಗ್ಲೆಂಡ್ ಮತ್ತು ವೇಲ್ಸ್ ಜಂಟಿ ಆತಿಥ್ಯದಲ್ಲಿ ನಡೆಯುತ್ತಿರುವ ಈ ಪ್ರತಿಷ್ಠಿತ ಟೂರ್ನಿಯು ಎರಡು ವರ್ಷಗಳಿಗೊಮ್ಮೆ ಆಯೋಜನೆಯಾಗುತ್ತದೆ. ಈ ಬಾರಿ ಒಟ್ಟು 33 ಪಂದ್ಯಗಳು ನಡೆಯಲಿದ್ದು, ಎರಡು ದೇಶಗಳ ಏಳು ಪ್ರಮುಖ ಕ್ರೀಡಾಂಗಣಗಳು ಪಂದ್ಯಗಳಿಗೆ ವೇದಿಕೆಯಾಗಲಿವೆ.

ಉದ್ಘಾಟನಾ ಪಂದ್ಯವು ಇಂದು ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಆತಿಥೇಯ ಇಂಗ್ಲೆಂಡ್ ಮಹಿಳಾ ತಂಡ ಮತ್ತು ಶ್ರೀಲಂಕಾ ಮಹಿಳಾ ತಂಡ ಮುಖಾಮುಖಿಯಾಗಲಿವೆ. ಟೂರ್ನಿಯ ಆರಂಭಿಕ ಪಂದ್ಯವೇ ರೋಚಕ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ.

ವಿಶ್ವಕಪ್‌ನಲ್ಲಿ ಭಾಗವಹಿಸಿರುವ 12 ತಂಡಗಳು ಪ್ರಶಸ್ತಿಗಾಗಿ ತಮ್ಮ ಶಕ್ತಿಯನ್ನು ಪ್ರದರ್ಶಿಸಲು ಸಜ್ಜಾಗಿವೆ. ಆಸ್ಟ್ರೇಲಿಯಾ, ಭಾರತ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಹಾಗೂ ಶ್ರೀಲಂಕಾ ಸೇರಿದಂತೆ ಹಲವು ಬಲಿಷ್ಠ ತಂಡಗಳು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಾಗಿ ಗುರುತಿಸಿಕೊಂಡಿವೆ.

ಟೂರ್ನಿಯ ಫೈನಲ್ ಪಂದ್ಯವು ಜುಲೈ 5ರಂದು ವಿಶ್ವದ ಐತಿಹಾಸಿಕ ಕ್ರಿಕೆಟ್ ಮೈದಾನಗಳಲ್ಲಿ ಒಂದಾದ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಹಿಳಾ ಕ್ರಿಕೆಟ್‌ನ ಜನಪ್ರಿಯತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ವಿಶ್ವಕಪ್‌ಗೆ ಜಾಗತಿಕ ಮಟ್ಟದಲ್ಲಿ ಭಾರೀ ಕುತೂಹಲ ವ್ಯಕ್ತವಾಗಿದೆ.

ಕ್ರಿಕೆಟ್ ಅಭಿಮಾನಿಗಳಿಗೆ ಮುಂದಿನ ಕೆಲವು ವಾರಗಳು ರೋಚಕ ಪಂದ್ಯಗಳ ಹಬ್ಬವಾಗಲಿದ್ದು, ಹೊಸ ಚಾಂಪಿಯನ್ ಪಟ್ಟಕ್ಕಾಗಿ ತಂಡಗಳ ನಡುವೆ ತೀವ್ರ ಪೈಪೋಟಿ ನಡೆಯಲಿದೆ.

Continue Reading

ಕ್ರೀಡೆ

ಬ್ಯಾಕ್ ಟು ಬ್ಯಾಕ್ ಫೋರ್‌ಗಳ ಮಳೆ: ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಮಿಂಚು ಪ್ರದರ್ಶನ

Published

on

ದಂಬುಲ್ಲಾ: ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ್ ಎ ವಿರುದ್ಧದ ಪಂದ್ಯದಲ್ಲಿ ಭಾರತ ಎ ತಂಡದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಟಾಸ್ ಗೆದ್ದ ಅಫ್ಘಾನಿಸ್ತಾನ್ ಎ ತಂಡದ ನಾಯಕ ಇಮ್ರಾನ್ ಮೀರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ಎ ಪರ ವೈಭವ್ ಸೂರ್ಯವಂಶಿ ಹಾಗೂ ಪ್ರಭ್ಸಿಮ್ರಾನ್ ಸಿಂಗ್ ಆರಂಭಿಕರಾಗಿ ಕಣಕ್ಕಿಳಿದರು. ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮೊರೆ ಹೋದ ವೈಭವ್, ಅಫ್ಘಾನ್ ಬೌಲರ್‌ಗಳ ಮೇಲೆ ನಿರಂತರ ಒತ್ತಡ ಹೇರಿ ಬೌಂಡರಿಗಳ ಸುರಿಮಳೆಗೈದರು. ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಭಾರತ ಎ ತಂಡ ಕೇವಲ 7 ಓವರ್‌ಗಳಲ್ಲಿ 74 ರನ್ ಕಲೆಹಾಕಿತು.

ಆದರೆ 8ನೇ ಓವರ್‌ನ ಮೊದಲ ಎಸೆತದಲ್ಲಿ ಅಪ್ಪರ್ ಕಟ್ ಮೂಲಕ ಬೌಂಡರಿ ಬಾರಿಸಲು ಯತ್ನಿಸಿದ ವೈಭವ್, ವಿಕೆಟ್ ಕೀಪರ್‌ಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. ಇದರಿಂದ ಅವರ ಸ್ಫೋಟಕ ಇನಿಂಗ್ಸ್ ಅಂತ್ಯವಾಯಿತು.

22 ಎಸೆತಗಳನ್ನು ಎದುರಿಸಿದ ವೈಭವ್ ಸೂರ್ಯವಂಶಿ 200ರ ಸ್ಟ್ರೈಕ್‌ರೇಟ್‌ನಲ್ಲಿ 44 ರನ್ ಸಿಡಿಸಿದರು. ಅವರ ಇನಿಂಗ್ಸ್‌ನಲ್ಲಿ 9 ಆಕರ್ಷಕ ಬೌಂಡರಿಗಳು ಸೇರಿದ್ದವು. ಆದರೆ ಕೇವಲ 6 ರನ್‌ಗಳ ಅಂತರದಲ್ಲಿ ಅರ್ಧಶತಕ ತಪ್ಪಿಸಿಕೊಂಡಿದ್ದು ಅಭಿಮಾನಿಗಳಿಗೆ ನಿರಾಸೆ ತಂದಿತು.

ವೈಭವ್ ಔಟಾದ ಬಳಿಕ ಕಣಕ್ಕಿಳಿದ ಪ್ರಿಯಾಂಶ್ ಆರ್ಯ ಕೇವಲ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಪ್ರಭ್ಸಿಮ್ರಾನ್ ಸಿಂಗ್ ಹಾಗೂ ರುತುರಾಜ್ ಗಾಯಕ್ವಾಡ್ ತಂಡದ ಇನ್ನಿಂಗ್ಸ್‌ನ್ನು ಮುನ್ನಡೆಸಿದರು. 12 ಓವರ್‌ಗಳ ಅಂತ್ಯಕ್ಕೆ ಭಾರತ ಎ ತಂಡ 2 ವಿಕೆಟ್ ನಷ್ಟಕ್ಕೆ 104 ರನ್ ಕಲೆಹಾಕಿ ಬಲಿಷ್ಠ ಸ್ಥಿತಿಯಲ್ಲಿತ್ತು.

ವೈಭವ್ ಸೂರ್ಯವಂಶಿಯ ಈ ಸ್ಫೋಟಕ ಪ್ರದರ್ಶನ ಮತ್ತೊಮ್ಮೆ ಅವರ ಪ್ರತಿಭೆಯನ್ನು ಸಾಬೀತುಪಡಿಸಿದ್ದು, ಭವಿಷ್ಯದ ಭಾರತೀಯ ಕ್ರಿಕೆಟ್‌ನ ಭರವಸೆಯ ಆಟಗಾರ ಎಂಬುದನ್ನು ತೋರಿಸಿದೆ.

Continue Reading

Trending