Connect with us

ರಾಜಕೀಯ

Union Budget 2024: ‘ದೇಶದ ಸರ್ವಾಂಗೀಣ ಏಳಿಗೆಗೆ ಅಕ್ಷಯಪಾತ್ರೆ, ಮಧ್ಯಮ ವರ್ಗಕ್ಕೆ ಶಕ್ತಿ’: ಬಜೆಟ್ ಕುರಿತು ಪ್ರಧಾನಿ ಮೋದಿ

Published

on

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿರುವ ಬಜೆಟ್ ದೇಶದ ಸರ್ವಾಂಗೀಣ ಏಳಿಗೆಗೆ ಅಕ್ಷಯಪಾತ್ರೆಯಾಗಿದ್ದು, ಮಧ್ಯಮ ವರ್ಗಕ್ಕೆ ಶಕ್ತಿ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಜೆಟ್ ಮಂಡನೆ ಕುರಿತು ಟ್ವಿಟರ್ ನಲ್ಲಿ ವಿಡಿಯೋ ಸಂದೇಶ ನೀಡಿರುವ ಪ್ರಧಾನಿ ಮೋದಿ, ‘ದೇಶದ ಸರ್ವಾಂಗೀಣ ಏಳಿಗೆಗೆ ಈ ಬಜೆಟ್‌ ಏಣಿಯಾಗಿದ್ದು, ದೇಶದ ಎಲ್ಲ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್‌ ಮಂಡಿಸಲಾಗಿದೆ. ಯುವಕರಿಗೆ ಉದ್ಯೋಗ, ಬಡವರಿಗೆ ಮನೆ ನಿರ್ಮಾಣ, ಸಣ್ಣ ಉದ್ಯಮಗಳು, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಮಂಡಿಸಲಾಗಿದೆ.

ಅಷ್ಟೇ ಅಲ್ಲ, ಭಾರತವು ಮೂಲ ಸೌಕರ್ಯ ಉತ್ಪಾದಿಸುವಲ್ಲಿ ಜಾಗತಿಕ ಮಳಿಗೆಯಾಗುತ್ತದೆ. ಭಾರತದ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ. ಅಷ್ಟರಮಟ್ಟಿಗೆ, ಪ್ರಸಕ್ತ ಸಾಲಿನ ಬಜೆಟ್ ದೇಶದ ಏಳಿಗೆಯನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದ್ದಾರೆ.

ಅಂತೆಯೇ ಶಿಕ್ಷಣ ಹಾಗೂ ಕೌಶಲ ವೃದ್ಧಿಯ ದೃಷ್ಟಿಯಿಂದಲೂ ಬಜೆಟ್‌ ಪ್ರಮುಖವಾಗಿದೆ. ಶಿಕ್ಷಣ ಹಾಗೂ ಕೌಶಲಾಭಿವೃದ್ಧಿಯಿಂದ ಮಧ್ಯಮ ವರ್ಗದ ಜನರಿಗೆ ಭಾರಿ ಅನುಕೂಲವಾಗಲಿದೆ ಎಂದಿರುವ ಪ್ರಧಾನಿ ಮೋದಿ, ಯುವಕರಿಗೆ ಹೊಸ ಶಕ್ತಿ ಸಿಗಲಿದೆ. ದಲಿತರು ಹಾಗೂ ಬುಡಕಟ್ಟು ಸಮುದಾಯದವರಿಗೂ ಇದರಿಂದ ನೆರವಾಗಲಿದೆ. ಹಣಕಾಸು ನೆರವು ಕೂಡ ಸಿಗುವುದರಿಂದ ದಮನಿತರು ಏಳಿಗೆಯ ಹಾದಿ ಹಿಡಿಯಲು ಸಾಧ್ಯವಾಗಲಿದೆ ಎಂದರು.

ಅಲ್ಲದೆ ”ಕಳೆದ 10 ವರ್ಷದಲ್ಲಿ ದೇಶದ 25 ಕೋಟಿ ಬಡವರು ಬಡತನದಿಂದ ಮುಕ್ತರಾಗಿದ್ದಾರೆ. ನವೋದ್ಯಮಗಳಿಗೆ ಆದ್ಯತೆ ನೀಡಿರುವುದು, ಮಹಿಳೆಯರಿಗೂ ಉದ್ಯೋಗಾವಕಾಶ, ಸಣ್ಣ ಉದ್ಯಮಗಳಿಗೆ ಆರ್ಥಿಕ, ಸಾಲದ ನೆರವು ಸೇರಿ ಹತ್ತಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈಗ ಮಂಡಿಸಿರುವ ಬಜೆಟ್‌ನಿಂದ ಕೂಡ ಮಧ್ಯಮ ವರ್ಗದವರ ಅನುಕೂಲವಾಗಲಿದೆ ಎಂದು ಹೇಳಿದರು.

ದೇಶ

ಸಿಎಂ ನಿವಾಸದಲ್ಲಿ ಹೈಡ್ರಾಮಾ: ಡಿಕೆ ಶಿವಕುಮಾರ್ ಎಂಟ್ರಿಯಿಂದ ರಾಜಕೀಯ ಕಾವು

Published

on

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದು ಅತಿ ದೊಡ್ಡ ರಾಜಕೀಯ ಸಂಚಲನ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ನೀಡಲಿದ್ದಾರೆ ಎಂಬ ಭಾರಿ ಚರ್ಚೆಗಳ ನಡುವೆ ಸಿಎಂ ನಿವಾಸ ‘ಕಾವೇರಿ’ಯಲ್ಲಿ ಮಹತ್ವದ ಉಪಹಾರ ಸಭೆ ಆರಂಭವಾಗಿದೆ. ಈ ಸಭೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಿರುವುದು ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ವಿಶೇಷವೆಂದರೆ, ಡಿಕೆ ಶಿವಕುಮಾರ್ ಅವರು ಏಕಾಂಗಿಯಾಗಿ ಬಾರದೆ ತಮ್ಮ ಆಪ್ತ ಸಚಿವರೊಂದಿಗೆ ಸಿಎಂ ನಿವಾಸಕ್ಕೆ ಆಗಮಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹಾಗೂ ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ್ ವೈದ್ಯ ಅವರು ಡಿಕೆಶಿ ಜೊತೆಯಲ್ಲೇ ಒಂದೇ ವಾಹನದಲ್ಲಿ ಬಂದಿರುವುದು ರಾಜಕೀಯ ವಲಯದಲ್ಲಿ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಸಂಭವಿಸಬಹುದು ಎಂಬ ಚರ್ಚೆಗಳು ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿವೆ. ಈ ಹಿನ್ನೆಲೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಈ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ಅಧಿಕಾರ ಹಸ್ತಾಂತರ ಪ್ರಕ್ರಿಯೆಯನ್ನು ಸುಗಮವಾಗಿ ಪೂರ್ಣಗೊಳಿಸುವ ಉದ್ದೇಶದಿಂದಲೇ ಈ ಸಭೆ ಆಯೋಜಿಸಲಾಗಿದೆ ಎನ್ನಲಾಗುತ್ತಿದೆ.

ಸದ್ಯ ಸಿಎಂ ನಿವಾಸದಲ್ಲಿ ಹೈ-ಲೆವೆಲ್ ಮಾತುಕತೆ ನಡೆಯುತ್ತಿದ್ದು, ಸಚಿವ ಸಂಪುಟ ಪುನಾರಚನೆ, ಹೊಸ ಸಚಿವರಿಗೆ ಅವಕಾಶ ಹಾಗೂ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭದ ದಿನಾಂಕ ಕುರಿತು ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದೆಡೆ, ರಾಜ್ಯ ರಾಜಕೀಯ ಬೆಳವಣಿಗೆಗಳ ಮೇಲೆ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಹಾಗೂ ವಿರೋಧ ಪಕ್ಷಗಳು ಕಣ್ಣಿಟ್ಟಿವೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಪಟ್ಟಕ್ಕೇರುವ ಸಾಧ್ಯತೆ ಹೆಚ್ಚಾಗಿದೆ ಎಂಬ ಸುದ್ದಿಗಳ ನಡುವೆ ಕಾಂಗ್ರೆಸ್ ನಾಯಕತ್ವದ ಮುಂದಿನ ನಡೆ ರಾಜ್ಯ ರಾಜಕೀಯದ ದಿಕ್ಕನ್ನೇ ಬದಲಾಯಿಸುವ ಸಾಧ್ಯತೆ ಇದೆ.

Continue Reading

ದೇಶ

ರಾಹುಲ್ ಗಾಂಧಿ ಸೂಚನೆ ಬಳಿಕ ಸಿದ್ದರಾಮಯ್ಯ ನಿರ್ಧಾರಕ್ಕೆ ಕುತೂಹಲ

Published

on

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ವೇಗ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಭೇಟಿಯಾಗಲು ಸಮಯ ಕೋರಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಕ್ಷದ ಹೈಕಮಾಂಡ್ ಸೂಚನೆಯಂತೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಗುವ ಸಾಧ್ಯತೆಗಳು ಗಟ್ಟಿಯಾಗಿವೆ.

ಆದರೆ, ಕಾಂಗ್ರೆಸ್ ಪಕ್ಷದಿಂದ ಇನ್ನೂ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿಲ್ಲ ಹಾಗೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಊಹಾಪೋಹಗಳಿಗೆ ಅವಕಾಶ ನೀಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಇದಕ್ಕೂ ಮೊದಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಯಲಾಗಿತ್ತು. ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಹಾಗೂ ಸುರ್ಜೇವಾಲಾ ಸಮ್ಮುಖದಲ್ಲಿ ಮಹತ್ವದ ಸಭೆಗಳು ನಡೆದಿದ್ದವು. ರಾಹುಲ್ ಗಾಂಧಿ ಸೂಚನೆ ನೀಡಿದರೆ ತಾನು ಸ್ಥಾನ ತ್ಯಜಿಸುವುದಾಗಿ ಸಿದ್ದರಾಮಯ್ಯ ಹಲವು ಬಾರಿ ಹೇಳಿಕೊಂಡಿದ್ದರು ಎನ್ನಲಾಗಿದೆ.

ಇನ್ನೊಂದೆಡೆ, ಸಿದ್ದರಾಮಯ್ಯ ಬೆಂಬಲಿಗರು ಅವರು ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸುತ್ತಿದ್ದಾರೆ. ಹಿಂದುಳಿದ ವರ್ಗಗಳ ಒಕ್ಕೂಟ ಕೂಡ ಸಿದ್ದರಾಮಯ್ಯರನ್ನು ಬದಲಾಯಿಸಿದರೆ ಕಾಂಗ್ರೆಸ್ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಇದರ ನಡುವೆಯೇ ಡಿಕೆ ಶಿವಕುಮಾರ್ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವೈಫಲ್ಯವೇ ಈ ಬದಲಾವಣೆಗೆ ಕಾರಣ ಎಂದು ಟೀಕಿಸಿದ್ದಾರೆ.

2023ರ ವಿಧಾನಸಭೆ ಚುನಾವಣೆಯ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಆಗ ‘ರೋಟೇಷನ್ ಮುಖ್ಯಮಂತ್ರಿ’ ಸೂತ್ರದಡಿ ಎರಡು ವರ್ಷಗಳ ಬಳಿಕ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದರೂ, ಪಕ್ಷದಿಂದ ಅಧಿಕೃತ ದೃಢೀಕರಣ ಆಗಿರಲಿಲ್ಲ.

Continue Reading

ದೇಶ

ರಾಹುಲ್ ಗಾಂಧಿ ನಿರ್ಧಾರದಿಂದ ರಾಜ್ಯ ಕಾಂಗ್ರೆಸ್‌ಗೆ ಹೊಸ ಚೈತನ್ಯ: ಪಿ ಗಾಂಧಿ

Published

on

ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಜವಹರಲಾಲ್ ನೆಹರೂ ಅವರ 62ನೇ ಪುಣ್ಯತಿಥಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕಂಟ್ರೋಲ್ ರೂಮ್ ಚೇರ್ಮನ್ ಪಿ ಗಾಂಧಿ ಅವರು ಮಾಜಿ ಪ್ರಧಾನಮಂತ್ರಿ ಜವಹರಲಾಲ್ ನೆಹರೂ ಅವರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರೀತಿಯಿಂದ ‘ಚಾಚಾ ನೆಹರೂ’ ಎಂದು ಕರೆಯಲ್ಪಡುವ ಜವಹರಲಾಲ್ ನೆಹರೂ ಅವರು ಭಾರತದ ಮೊದಲ ಪ್ರಧಾನಮಂತ್ರಿಯಾಗಿದ್ದು, ಸ್ವತಂತ್ರ ಭಾರತದ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಸ್ಮರಿಸಿದರು. 1947ರ ಆಗಸ್ಟ್ 15ರಿಂದ 1964ರ ಮೇ 27ರವರೆಗೆ ದೇಶದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ ಅವರು, ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಯ ದಾರಿಯಲ್ಲಿ ದೇಶವನ್ನು ಮುನ್ನಡೆಸಿದರು ಎಂದು ಹೇಳಿದರು.

ಇದೇ ವೇಳೆ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ಪಿ ಗಾಂಧಿ, ತಾವು ಕೂಡ ಎಂಎಲ್‌ಸಿ ಆಕಾಂಕ್ಷಿಯಾಗಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರ ಅನುಮತಿ ಪಡೆದು ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದರು. ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ಪರ್ವ ಆರಂಭವಾಗಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರವನ್ನು ನೋಡಲು ರಾಜ್ಯದ ಜನ ಕಾತರದಿಂದ ಕಾಯುತ್ತಿದ್ದಾರೆ ಎಂದು ಹೇಳಿದರು.

ರಾಹುಲ್ ಗಾಂಧಿ ತೆಗೆದುಕೊಂಡಿರುವ ಇತ್ತೀಚಿನ ನಿರ್ಧಾರಗಳು ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬದಲಾವಣೆ ತರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ನಾಯಕರಲ್ಲಿ ಯಾವುದೇ ಗೊಂದಲ ಇಲ್ಲ, ಪಕ್ಷದ ಕಾರ್ಯಕರ್ತರಿಗೆ ಇದು ಹೆಮ್ಮೆಯ ವಿಚಾರ ಎಂದು ಹೇಳಿದರು.

ಯಶವಂತಪುರ ಕ್ಷೇತ್ರದ ನಿವಾಸಿಯಾಗಿರುವ ನಾನು ಕಾಂಗ್ರೆಸ್ ಪಕ್ಷವನ್ನು ಕುಟುಂಬದಂತೆ ಭಾವಿಸಿದ್ದೇನೆ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದು, ಇದೀಗ ಎಂಎಲ್‌ಸಿ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದೇನೆ ಎಂದು ಪಿ ಗಾಂಧಿ ಹೇಳಿದರು.

Continue Reading

Trending