Connect with us

ದೇಶ

Super Blue Moon: ನಾಳೆ ಆಕಾಶದಲ್ಲಿ ಕಾಣಿಸಲಿದೆ, ಚಾನ್ಸ್ ಮಿಸ್ ಆದ್ರೆ ಇನ್ನು10 ವರ್ಷ ಸಿಗಲ್ಲ!

ನಾಳೆ ಆಕಾಶದಲ್ಲಿ ಕಾಣಿಸಲಿದೆ, ಚಾನ್ಸ್ ಮಿಸ್ ಆದ್ರೆ ಇನ್ನು10 ವರ್ಷ ಸಿಗಲ್ಲ!

Super Blue Moon 2023: ನಾಳೆ (ಆಗಸ್ಟ್​ 30) ರಾಖಿಪೂರ್ಣಿಮೆಯಂದು ಜಗತ್ತು ಅಪರೂಪದ ವಿಶ್ವರೂಪಕ್ಕೆ ಸಾಕ್ಷಿಯಾಗಲಿದೆ. ಅಪರೂಪದ ಸೂಪರ್ ಬ್ಲೂ ಮೂನ್ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ. ವಿಶೇಷವೆಂದರೆ ಈ ಸೂಪರ್ ಬ್ಲೂ ಮೂನ್ 10 ವರ್ಷಗಳಿಗೊಮ್ಮೆ ಕಾಣಿಸಿಕೊಳ್ಳುತ್ತದೆ.   ನಾಳೆ (ಆಗಸ್ಟ್​ 30) ರಾಖಿಪೂರ್ಣಿಮೆಯಂದು ಜಗತ್ತು ಅಪರೂಪದ ವಿಶ್ವರೂಪಕ್ಕೆ ಸಾಕ್ಷಿಯಾಗಲಿದೆ. ಅಪರೂಪದ ಸೂಪರ್ ಬ್ಲೂ ಮೂನ್ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ. ವಿಶೇಷವೆಂದರೆ ಈ ಸೂಪರ್ ಬ್ಲೂ ಮೂನ್ 10 ವರ್ಷಗಳಿಗೊಮ್ಮೆ ಕಾಣಿಸಿಕೊಳ್ಳುತ್ತದೆ.  ನಿಜಕ್ಕೂ ಇದು ಅಪರೂಪದ ಖಗೋಳ ಕೌತುಕ ಎನ್ನಬಹುದು. ಬುಧವಾರ ಸಂಭವಿಸುವ ಈ ಅಪರೂಪದ ಬ್ಲೂ ಮೂನ್‌ ಇನ್ನು ಹಲವು ವರ್ಷಗಳವರೆಗೆ ಪುನಃ ಕಾಣಿಸುವುದಿಲ್ಲ. ಬ್ಲೂ ಮೂನ್‌ ಎಂದರೆ ಚಂದ್ರನ ಬಣ್ಣ ನೀಲಿಯಾಗುವುದು ಎಂದರ್ಥವಲ್ಲ. ಸಾಮಾನ್ಯವಾಗಿ ಸೂಪರ್‌ಮೂನ್‌ ಉದಯದಂದು ಚಂದ್ರನು ಇತರ ಹುಣ್ಣಿಮೆಗಳಂದು ಕಾಣಿಸುವುದಕ್ಕಿಂತ ಶೇ 16ರಷ್ಟು ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತಾನೆ. ಅಲ್ಲದೇ, ಚಂದ್ರ ಗಾತ್ರವೂ ದೊಡ್ಡದಾಗಿ ಇರುತ್ತದೆ.  ಚಂದ್ರನು ತನ್ನ ಕೆಳಗಿನ ಸ್ಥಾನದಲ್ಲಿ ಪೂರ್ಣವಾಗಿದ್ದಾಗ, ಚಂದ್ರನು ಭೂಮಿಯಿಂದ ಹೆಚ್ಚು ದೊಡ್ಡದಾಗಿ ಕಾಣಿಸುತ್ತಾನೆ. ಆ ಚಂದ್ರನನ್ನು ಸೂಪರ್ ಮೂನ್ ಎಂದು ಕರೆಯಲಾಗುತ್ತದೆ. ಹುಣ್ಣಿಮೆಯು ತಿಂಗಳಿಗೆ ಎರಡು ಬಾರಿ ಸಂಭವಿಸಿದಾಗ, ಈ ಅಪರೂಪವನ್ನು ಸೂಚಿಸಲು ಬ್ಲೂ ಮೂನ್​ ಎಂದು ಕರೆಯಲಾಗುತ್ತದೆ. ಅಂದಹಾಗೆ ಬ್ಲೂ ಮೂನ್‌ ಹೆಸರಿಗೂ ಹಾಗೂ ಚಂದ್ರನ ಬಣ್ಣಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವುದು ನಿಮ್ಮ ಗಮನಕ್ಕಿರಲಿ, ಈ ವರ್ಷ ನಾಲ್ಕು ಬಾರಿ ಬ್ಲೂ ಮೂನ್‌ ಸಂಭವಿಸಲಿದೆ. ನಾಳೆ ಅಂದರೆ ಆಗಸ್ಟ್‌ 30 ರಂದು ಕಾಣಿಸುವುದು ಮೂರನೇ ಬ್ಲೂ ಮೂನ್‌ ಆಗಿದೆ. ಈ ತಿಂಗಳು ಎರಡು ದಿನ ಚಂದ್ರನು ಪೂರ್ಣ ಆಕಾರದಲ್ಲಿ ಆಗಸದಲ್ಲಿ ಉದಯಿಸಲಿದ್ದಾನೆ. ಅಪರೂಪದ ನೀಲಿ ಚಂದ್ರ ಬುಧವಾರ ಆಕಾಶದಲ್ಲಿ ತೇಲಲಿದೆ. ಬ್ಲೂ ಮೂನ್ ಮತ್ತು ಸೂಪರ್ ಮೂನ್ ಜೋಡಿಗಳು ಅಪರೂಪ. ಸುಮಾರು 10 ರಿಂದ 20 ವರ್ಷಗಳ ನಂತರ, ಚಂದ್ರನ ಈ ಕ್ಷಣ ಬರುತ್ತದೆ. ಪ್ರತಿ ಎರಡರಿಂದ ಎರಡೂವರೆ ವರ್ಷಗಳಿಗೊಮ್ಮೆ ಸೂಪರ್‌ಮೂನ್‌ಗಳು ಸಂಭವಿಸುತ್ತವೆ.  ಬುಧವಾರ ರಾತ್ರಿ 8 ಗಂಟೆಗೆ IST ಸೂಪರ್ ಬ್ಲೂ ಮೂನ್‌ನ ಅತ್ಯುತ್ತಮವಾದ ನೋಟವನ್ನು ಜಗತ್ತು ನೋಡಲಿದೆ. ಮುಂದಿನ ಸೂಪರ್ ಬ್ಲೂ ಮೂನ್ ಜನವರಿ ಮತ್ತು ಮಾರ್ಚ್ 2037 ರಲ್ಲಿ ಸಂಭವಿಸುತ್ತದೆ.   ಬುಧವಾರ ಮುಸ್ಸಂಜೆ ವೇಳೆ, ಸೂರ್ಯಾಸ್ತದ ನಂತರ ಸೂಪರ್‌ ಬ್ಲೂ ಮೂನ್‌ ವೀಕ್ಷಣೆಗೆ ಸೂಕ್ತ ಸಮಯ. ಆಗಸ್ಟ್‌ 30, 2023 ರ ರಾತ್ರಿ 8.37ಕ್ಕೆ ಸರಿಯಾಗಿ ಬ್ಲೂ ಮೂನ್‌ ಗರಿಷ್ಠ ಪ್ರಕಾಶಮಾನದಲ್ಲಿ ಕಾಣಿಸುತ್ತದೆ. ವಿವಿಧ ದೇಶಗಳಲ್ಲಿ ವಿವಿಧ ವಿವಿಧ ಸಮಯಕ್ಕೆ ಈ ಅದ್ಭುತವನ್ನು ವೀಕ್ಷಣೆ ಮಾಡಬಹುದಾಗಿದೆ.

Continue Reading

ದೇಶ

ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.

ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.

🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್‌ಸ್ಟ್ರಿಪ್‌ಗಳು, ಹೆಲಿಪ್ಯಾಡ್‌ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:

  • ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
  • ಸಿಸಿಟಿವಿ ಕಣ್ಗಾವಲು ಬಿಗಿತ
  • ಸರಕು, ಪಾರ್ಸೆಲ್ ಮತ್ತು ಮೇಲ್‌ಗಳ ತಪಾಸಣೆ
  • ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ

🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:

ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.

Continue Reading

ದೇಶ

ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್‌ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್‌ ಮೌಲ್ಯದ ಪಲ್ಲಾಡಿಯಮ್‌ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್‌ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್‌ಎನ್‌ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.

ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.

ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Continue Reading

ಕ್ರೀಡೆ

ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.

ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.

Continue Reading

Trending