ಯೋಗ
ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕೆಎಎಸ್ ಅಧಿಕಾರಿ ಹಣೆಗೆ ತಿಲಕವಿಟ್ಟ ಸಂಸದ ಸುನೀಲ್ ಬೋಸ್: Photo ವೈರಲ್
ಮೈಸೂರು: ಚಾಮರಾಜನಗರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಸಂಸದ ಸುನೀಲ್ ಬೋಸ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿನ ಚಾಮುಂಡೇಶ್ವರಿ ತಾಯಿ ಗರ್ಭಗುಡಿಯಲ್ಲಿಯೇ ಕೆಎಎಸ್ ಅಧಿಕಾರಿ ಹಣೆಗೆ ಕುಂಕುಮ ಇಟ್ಟಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ.
ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇಬ್ಬರೂ ಜೊತೆಯಾಗಿ ಬಂದಿದ್ದರು. ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿಯಾಗಿರುವ ಸವಿತಾ ಅವರ ಹಣೆಗೆ ಸಂಸದ ಸುನೀಲ್ಬೋಸ್ ಕುಂಕುಮ ಇರಿಸಿದ್ದಾರೆ. ಈ ವೇಳೆ ಇಬ್ಬರೂ ಗರ್ಭ ಗುಡಿಯಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ನೆರವೇರಿಸುವ ವೇಳೆ ಸುನೀಲ್ ಬೋಸ್ ಹಾಗೂ ಕಾಂಗ್ರೆಸ್ನ ಅನೇಕ ಬೆಂಬಲಿಗರು ಹಾಜರಿದ್ದರು. ಅವರ ಸಮ್ಮುಖದಲ್ಲೇ ಸವಿತಾ ಅವರ ಹಣೆಗೆ ಸುನೀಲ್ಬೋಸ್ ತಿಲಕ ಇರಿಸಿದ್ದಾರೆ.
ಸುನೀಲ್ ಬೋಸ್ ಅವರ ನಡೆಯು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆ ಆಗಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ಬೋಸ್ ಅಫಿಡವಿಟ್ ಸಲ್ಲಿಸಿದ್ದರು. ಈ ಬಗ್ಗೆ ಚಾಮರಾಜನಗರ ಜಿಲ್ಲೆಯ ಬಿಜೆಪಿ ಸದಸ್ಯರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದರು. ಸುನೀಲ್ ಬೋಸ್ ಅವರಿಗೆ ಮದುವೆಯಾಗಿದೆ. ಆದರೆ ಅವರು ಅಫಿಡವಿಟ್ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದರು. ಸುನೀಲ್ಬೋಸ್ ಹಾಗೂ ಸವಿತಾ ಅವರು ಜೊತೆಯಲ್ಲಿ ಇರುವ ಪೋಟೋಗಳನ್ನು ಬಿಜೆಪಿ ಸದಸ್ಯರು ಚುನಾವಣಾ ಆಯೋಗಕ್ಕೆ ಪುರಾವೆಯಾಗಿ ನೀಡಿದ್ದರು. ವೈವಾಹಿಕ ಜೀವನದ ಮಾಹಿತಿಯನ್ನು ಸುನೀಲ್ ಬೋಸ್ ಮರೆಮಾಚಿರುವುದು ಅನುಮಾನಾಸ್ಪದವಾಗಿದೆ. ಸವಿತಾ ಮತ್ತು ಸುನೀಲ್ ಬೋಸ್ ಮದುವೆಯಾಗಿದ್ದು, ಅವರಿಗೆ ಆರು ವರ್ಷದ ಹೆಣ್ಣುಮಗು ಕೂಡ ಇದೆ ಎಂದು ಅವರು ಆರೋಪಿಸಿದ್ದರು.
ದೇಶ
ಯೋಗ ದಿನಾಚರಣೆಗಾಗಿ ಮೋದಿ ಶ್ರೀನಗರ ಪ್ರವಾಸ ಸೂಕ್ತ ಭದ್ರತೆ
ಶ್ರೀನಗರ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಜಮ್ಮು ಮತ್ತು ಕಾಶ್ಮೀರಕ್ಕೆ ಇಂದು ಪ್ರವಾಸ ಕೈಗೊಳ್ಳಲಿದ್ದಾರೆ,
ಎರಡು ದಿನಗಳ ಕಾರ್ಯಕ್ರಮದಲ್ಲಿ ಅವರು ಶ್ರೀನಗರದಲ್ಲಿ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ, ಮೂರನೇ ಬಾರಿ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಮೋದಿ ಜಮ್ಮು ಮತ್ತು ಕಾಶ್ಮೀರ ಪ್ರವಾಸ ಕೈಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆ ವಹಿಸಲಾಗಿದೆ ಎಂದು ಕಾಶ್ಮೀರ ವಲಯದ ಐಜಿಪಿ ವಿಧಿ ಕುಮಾರ್ ಮಾಧ್ಯವಗಳಿಗೆ ತಿಳಿಸಿದ್ದಾರೆ,
ಪ್ರಧಾನಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಡ್ರೋನ್ ಹಾರಾಟವನ್ನು ನಿಷೇಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದು ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ,
ಇತ್ತೀಚಿಗೆ ನಡೆದ ಸಾರ್ವತ್ರಿಕ ಚುನಾವಣೆಗಳಲ್ಲಿ ಜಮ್ಮುವಿನಲ್ಲಿ ಹೆಚ್ಚು ಪ್ರಮಾಣದ ಮತದಾನವಾಗಿತ್ತು, ಮೂರನೇ ಬಾರಿಗೆ ಪ್ರಧಾನಿಯಾಗಿ ಭೇಟಿ ನೀಡುತ್ತಿರುವ ಮೋದಿ ಅವರ ಪ್ರವಾಸವು ಗಮನ ಸೆಳೆದಿದೆ,
ಶ್ರೀನಗರ ದಾಲ್ ಸರೋವರದ ಬಳಿ ಯೋಗ ದಿನಾಚರಣೆ ನಡೆಯಲಿದೆ, ಇದರಲ್ಲಿ 2000 ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ,
ದೇಶ
ಕನ್ಯಾಕುಮಾರಿನಲ್ಲಿ ಪ್ರಧಾನಿ ಮೋದಿ ಧ್ಯಾನದ ಫೋಟೋಗಳು ವೈರಲ್
ದೆಹಲಿ: ಲೋಕಸಭಾ ಚುನಾವಣೆಯ ಪ್ರಚಾರ ಅಂತ್ಯಗೊಂಡ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ಕನ್ಯಾಕುಮಾರಿಯಲ್ಲಿ ಎರಡು ದಿನಗಳ ಕಾಲ ಧ್ಯಾನ ಆರಂಭಿಸಿದ್ದಾರೆ, ಮೋದಿ ಧ್ಯಾನ ಮಾಡುತ್ತಿರುವ ಫೋಟೋಗಳು ವೈರಲ್ ಆಗಿವೆ,
ಎರಡು ತಿಂಗಳ ಸುದೀಘಧ ಚುನಾವಣಾ ಪ್ರಚಾರವನ್ನು ಮುಗಿಸಿದ ಮೋದಿ ಅವರು ಗುರುವಾರ ಕನ್ಯಾಕುಮಾರಿಯ ವಿವೇಕಾನಂದ ರಾಕ್ ಮೆಮೋರಿಯಲ್ನಲ್ಲಿ 45 ಗಂಟೆಗಳ ಧ್ಯಾನವನ್ನು ಆರಂಭ ಮಾಡಿದ್ದಾರೆ, ಕಿತ್ತಲೆ ಬಣ್ಣದ ಉಡುಗೆ ತೊಟ್ಟಿರುವ ಮೋದಿ ಅವರು ಸ್ವಾಮಿ ವಿವೇಕಾನಂದರ ಪ್ರತಿಮೆಯ ಮುಂದೆ ಧ್ಯಾನ ಮಾಡುತ್ತಿರುವುದನ್ನು ಚಿತ್ರ ನೋಡಬಹುದು, ಬೆಳಗ್ಗೆ ಸೂರ್ಯೋದಯ ಸಮಯದಲ್ಲಿ ಸಮುದ್ರ ದಡದಲ್ಲಿ ನಿಂತು ಮೋದಿ ಅವರು ಜಪಮಣಿಗಳನ್ನು ಎಣಿಸುತ್ತಿರುವ ಫೋಟೋವನ್ನು ರಾಜ್ಯ ಬಿಜೆಪಿ ಹಂಚಿಕೊಂಡಿದೆ,
ಪ್ರಧಾನಿ ಮೋದಿ ಜೂನ್ 1ರ ಮಧ್ಯಾಹ್ನದವರೆಗೆ ಈ ಸ್ಧಳದಲ್ಲಿ ಧ್ಯಾನವನ್ನು ಮಾಡಲಿದ್ದಾರೆ, ಇದು 1982ರಲ್ಲಿ ಸ್ವಾಮಿ ವಿವೇಕಾನಂದರು ಮೂರು ದಿನಗಳ ಕಾಲ ಧ್ಯಾನ ಮಾಡಿದ ಸ್ಧಳವಾಗಿದೆ,
ದೇಶ
ಪರಿಷತ್ ಚುನಾವಣೆ: 3 ಸ್ಥಾನಕ್ಕೆ 40ಕ್ಕೂ ಹೆಚ್ಚು ಆಕಾಂಕ್ಷಿಗಳು, ಕೋರ್ ಕಮಿಟಿ ನಿರ್ಣಯವೇನು?
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಸಿಗುವ 3 ಸ್ಥಾನಗಳಿಗೆ 40ಕ್ಕೂ ಹೆಚ್ಚು ಹೆಸರುಗಳು ಚರ್ಚೆಗೆ ಬಂದಿದ್ದು, ಆಕಾಂಕ್ಷಿಗಳ ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಿ ಆಯ್ಕೆ ತೀರ್ಮಾನವನ್ನು ಅವರಿಗೇ ಬಿಡಲು ಬುಧವಾರ ನಡೆದ ಪಕ್ಷದ ಪ್ರಮುಖ ನಾಯಕರ ಸಮಿತಿ ಸಭೆ ನಿರ್ಧರಿಸಿದೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ವಿಜಯೇಂದ್ರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಿಎಂಗಳಾದ ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಸೇರಿದಂತೆ ಕೋರ್ ಕಮಿಟಿ ಸದಸ್ಯರ ಪಾಲ್ಗೊಂಡಿದ್ದರು.
ವಿಧಾನ ಪರಿಷತ್ನ 11 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿಗೆ ಮೂರು ಸ್ಥಾನ ಸಿಕ್ಕಿದ್ದು, ಆ ಮೂರು ಸ್ಥಾನಕ್ಕೆ ಪಟ್ಟಿ ಸಿದ್ದಪಡಿಸುವ ಕುರಿತು ಆಕಾಂಕ್ಷಿಗಳ ಪಟ್ಟಿಯೊಂದಿಗೆ ಚರ್ಚಿಸಲಾಯಿತು. ಆಕಾಂಕ್ಷಿಗಳ ಪಟ್ಟಿಯಲ್ಲಿ ಇಲ್ಲದ ಹೆಸರುಗಳ ಬಗ್ಗೆಯೂ ಪ್ರಸ್ತಾಪಿಸಿ ಚರ್ಚೆ ನಡೆಸಲಾಗಿದೆ.
ಬಿಜೆಪಿಯ ಮೂರು ಸ್ಥಾನಗಳಿಗೆ 40ಕ್ಕೂ ಹೆಚ್ಚಿನ ಆಕಾಂಕ್ಷಿಗಳಿದ್ದು, ಎಲ್ಲಾ ಹೆಸರುಗಳ ಕುರಿತು ಚರ್ಚಿಸಲಾಯಿತು. ಹಾಲಿ ಸದಸ್ಯ ರವಿಕುಮಾರ್ ಮುಂದುವರಿಕೆ ಮತ್ತು ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ಅವಕಾಶ ನೀಡುವ ಕುರಿತು ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ.
ಇದರಲ್ಲಿ ರವಿಕುಮಾರ್ ಹೆಸರಿಗೆ ಆಕ್ಷೇಪಣೆ ಇಲ್ಲದೇ ಇದ್ದರೂ ಮಾಧುಸ್ವಾಮಿ ಬಗ್ಗೆ ವಿರೋಧ ಇರುವ ಕುರಿತು ಚರ್ಚೆ ನಡೆಯಿತು. ಸಿಟಿ ರವಿ ಹೆಸರೂ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದು. ಸಂಘಟನಾ ವಿಭಾಗದಿಂದ ಹೆಸರು ಪ್ರಸ್ತಾಪವಾಗಿದೆ. ಇನ್ನೊಂದು ಸ್ಥಾನ ಮಹಿಳೆಗೆ ನೀಡುವ ಕುರಿತು ಆಕಾಂಕ್ಷಿಗಳ ಪಟ್ಟಿಯೊಂದಿಗೆ ಚರ್ಚಿಸಲಾಯಿತು.
ಮೂರು ಸ್ಥಾನಕ್ಕೆ 9 ಹೆಸರುಗಳನ್ನು ಅಂತಿಮಗೊಳಿಸಲು ಇಂದು ಕೋರ್ ಕಮಿಟಿ ಸಭೆ ನಡೆದರೂ ಹೆಸರು ಅಂತಿಮಗೊಳಿಸಲಾಗಲಿಲ್ಲ. ಆಕಾಂಕ್ಷಿಗಳ ಪಟ್ಟಿ ದೊಡ್ಡದು ಮತ್ತು ಹಿರಿಯ ನಾಯಕರ ಒತ್ತಡವೂ ಇರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಜವಾಬ್ದಾರಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಅವರಿಗೆ ನೀಡುವ ನಿರ್ಣಯ ಕೈಗೊಳ್ಳಲಾಯಿತು. ಹೈಕಮಾಂಡ್ ನಾಯಕರ ಸಂಪರ್ಕ ಮಾಡಿ ಪಟ್ಟಿ ಅಂತಿಮಗೊಳಿಸುವ ನಿರ್ಣಯವನ್ನು ಕೋರ್ ಕಮಿಟಿ ಅಂಗೀಕಾರ ಮಾಡಿತು.
ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ ಅವರು, ಬಿಜೆಪಿ ಸಂಖ್ಯಾಬಲದ ಆಧಾರದಲ್ಲಿ ವಿಧಾನ ಪರಿಷತ್ನ 3 ಸ್ಥಾನಗಳು ನಮಗೆ ಲಭಿಸಲಿವೆ. ಇದನ್ನು ಆಧರಿಸಿ 3 ಸ್ಥಾನಗಳಿಗೆ ಅಂತಿಮವಾಗಿ ಅಭ್ಯರ್ಥಿಗಳನ್ನು ನಿರ್ಣಯಿಸುವ ಕಾರ್ಯವನ್ನು ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮಾಡುತ್ತಾರೆ ಎಂದು ಹೇಳಿದರು.
3 ಸ್ಥಾನಗಳಿಗೆ 40ಕ್ಕೂ ಹೆಚ್ಚು ಹೆಸರುಗಳು ಚರ್ಚೆ ಆಗಿವೆ. ಆಕಾಂಕ್ಷಿಗಳನ್ನು ಮಾತ್ರ ನಾವು ಚರ್ಚೆಗೆ ಪರಿಗಣಿಸಿಲ್ಲ. ಆಕಾಂಕ್ಷಿಗಳಲ್ಲದವರನ್ನೂ ಚರ್ಚೆಗೆ ತೆಗೆದುಕೊಂಡಿದ್ದೇವೆ. ರಾಜ್ಯದ ವಿವಿಧ ಭಾಗಗಳ ಸುಮಾರು 40ಕ್ಕೂ ಹೆಚ್ಚು ಹೆಸರುಗಳ ಕುರಿತು ಚರ್ಚೆ ಮಾಡಲಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗೆ ರಾಷ್ಟ್ರೀಯ ಅಧ್ಯಕ್ಷರು ಮತ್ತು ನಾಯಕರ ಜೊತೆ ಸಮಾಲೋಚನೆ ಮಾಡಿ ಅಂತಿಮ ನಿರ್ಣಯ ಮಾಡುವ ಅಧಿಕಾರವನ್ನು ಕೋರ್ ಸಮಿತಿ ಕೊಟ್ಟಿದೆ ಎಂದು ತಿಳಿಸಿದರು.
ಕೇಂದ್ರದ ಜೊತೆ ಸಮಾಲೋಚನೆ ನಡೆಸಿ ಪಕ್ಷದ ಕಡೆಯಿಂದ ಪರಿಷತ್ತಿನ ಅಭ್ಯರ್ಥಿಗಳು ಯಾರೆಂದು ನಿಶ್ಚಯಿಸುತ್ತಾರೆ. ಜೊತೆಗೆ ಪರಿಷತ್ತಿಗೆ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ. ಗೆಲುವಿನ ದೃಷ್ಟಿಯಿಂದ ಕೆಲವು ಸಲಹೆ, ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
-
ದೇಶ19 hours agoಸಾಧನಾ ಸಮಾವೇಶದಲ್ಲಿ ಸಿಎಂ ಗರ್ಜನೆ: ಕರ್ನಾಟಕ ಜಿಡಿಪಿ ದೇಶದಲ್ಲೇ ನಂಬರ್ ಒನ್
-
ದೇಶ19 hours agoಹಂಪಿ ಉತ್ಸವದಲ್ಲಿ ಮಕ್ಕಳ ಕನಸು ನನಸು: Zameer Ahmed Khan ಉಚಿತ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ
-
ದೇಶ23 hours agoPM Narendra Modi ಉದ್ಘಾಟಿಸಿದ ದೇಶದ ಮೊದಲ ಹೆದ್ದಾರಿ ತುರ್ತು ಲ್ಯಾಂಡಿಂಗ್ ಸೌಲಭ್ಯ
-
ದೇಶ24 hours agoImran Khan ಜೈಲು ವಿವಾದ: ದೃಷ್ಟಿ ಕಳೆದುಕೊಂಡರೆಂಬ ಆರೋಪ, ಸ್ಥಳಾಂತರಕ್ಕೆ ಘೋಷಣೆ
-
ಕ್ರೀಡೆ19 hours ago
ICC Men’s T20 World Cup: ಸಲ್ಮಾನ್ ಆಘಾ ನಿಗೂಢ ಉತ್ತರ: ಕೈಕುಲುಕುವರಾ ಆಟಗಾರರು?
-
ದೇಶ2 hours agoBENGALURU : ಅವೆನ್ಯೂ ರಸ್ತೆಯ ಪುರಾತನ ದೇವಸ್ಥಾನ ಅಪಾಯದಲ್ಲಿ
-
ದೇಶ20 hours agoBJP : ಮಹದೇಶ್ವರನ ಆಶೀರ್ವಾದಕ್ಕೆ ಹೆಜ್ಜೆ: ಶಶಿ ಕುಮಾರ್ ಕರೆ – ಯಶವಂತಪುರದಿಂದ ನೂರಾರು ಕಾರ್ಯಕರ್ತರು
-
ದೇಶ3 hours agoMANTRALAYA : ಸುಬುಧೇಂದ್ರ ತೀರ್ಥ ಸ್ವಾಮಿಗಳಿಂದ ವಿಶೇಷ ಪೂಜೆ
