Connect with us

ಬೆಂಗಳೂರು

ಇಂದು ಫ್ರೆಂಡ್‌ಶಿಪ್ ಡೇ! ಕುಚಿಕು ಗೆಳೆಯರಾದ ವಿಷ್ಣು-ಅಂಬಿ ಸ್ನೇಹ ಬಾಂಧವ್ಯದ ಸವಿ ನೆನಪು – Vishnu Ambi Friendship

ಕನ್ನಡ ಚಿತ್ರರಂಗದಲ್ಲಿ ಕುಚಿಕು ಗೆಳೆಯರಾಗಿ ಇವತ್ತಿಗೂ ಅಭಿಮಾನಿಗಳ ಹೃದಯವನ್ನು ಆವರಿಸಿರುವ ಇಬ್ಬರು ದಿಗ್ಗಜ ನಟರೆಂದರೆ ಅದು ಸಾಹಸ ಸಿಂಹ ವಿಷ್ಣುವರ್ಧನ್ ಮತ್ತು ರೆಬಲ್ ಸ್ಟಾರ್ ಅಂಬರೀಶ್.

ಅನೇಕ ಬಾರಿ ಅಂಬರೀಶ್ ಅವರು ಸಂದರ್ಶನಗಳಲ್ಲಿ ಮಾತನಾಡುತ್ತಾ, ನನ್ನ ಮತ್ತು ವಿಷ್ಣುವರ್ಧನ್ ಸ್ನೇಹಕ್ಕೆ ಬೆಲೆನೇ ಕಟ್ಟೋಕಾಗಲ್ಲ. ವಿಷ್ಣು ಅಪರೂಪದ ಗೆಳೆಯ ಅಂದಿದ್ರು.

ಮೂಲತಃ ಮೈಸೂರಿನವರಾದ ವಿಷ್ಣುವರ್ಧನ್ ಹಾಗೂ ಅಂಬರೀಶ್ ಸ್ನೇಹ ಶುರುವಾಗಿದ್ದು ನಾಗರಹಾವು ಸಿನಿಮಾದಿಂದ.

ನಾಗರಹಾವು ಸೆಟ್​ನಲ್ಲಿ ಮೊದಲ ಭೇಟಿ: ನಿರ್ದೇಶಕ ಪುಟ್ಟಣ್ಣ ಕಣಗಾಲ್ ನಾಗರಹಾವು ಸಿನಿಮಾಗಾಗಿ ಹೊಸ ನಟರನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದರು. ಆಗ ಚಿಗುರು ಮೀಸೆಯ ತೀಕ್ಷ್ಣ ಕಣ್ಣಿನ ಹುಡುಗ ವಿಷ್ಣುವರ್ಧನ್ ನಾಯಕನಾಗಿ ಆಯ್ಕೆಯಾಗಿದ್ದರು. ಇದೇ ಚಿತ್ರದಲ್ಲಿ ಜಲೀಲನ ಪಾತ್ರಕ್ಕಾಗಿ ತುಸು ಪುಂಡನ ಲುಕ್ ಇರುವ ನಟನಿಗಾಗಿ ಪುಟ್ಟಣ್ಣ ಹುಡುಕಾಡುತ್ತಿದ್ದರು. ಆಗ ರೆಬಲ್ ಸ್ಟಾರ್ ಅಂಬರೀಶ್ ಜಲೀಲನ ಪಾತ್ರಕ್ಕೆ ಆಯ್ಕೆಯಾಗಿದ್ದರು.

ವಿಷ್ಣುವರ್ಧನ್ ಅವರದು ಸ್ವಲ್ಪ ತಮಾಷೆ ಮಾಡುವ ವ್ಯಕ್ತಿತ್ವ. ಹೀಗಾಗಿ ಅಂಬರೀಶ್​ಗೆ ವಿಷ್ಣುವರ್ಧನ್ ಬಹಳ ಬೇಗನೆ ಇಷ್ಟವಾಗಿದ್ದರು. ಈ ಚಿತ್ರದಲ್ಲಿ ವಿಷ್ಣು ಹೀರೋ ಆಗಿದ್ರೆ, ಅಂಬರೀಶ್ ವಿಲನ್ ರೋಲ್‌ನಲ್ಲಿ ಮಿಂಚಿದ್ದರು. ನಿಜ ಜೀವನದಲ್ಲಿ ಇಬ್ಬರೂ ತುಂಬಾ ಒಳ್ಳೆಯ ಸ್ನೇಹಿತರಾಗಲು ಈ ಚಿತ್ರವೂ ಕಾರಣವಾಯಿತು. ಜಲೀಲನ ಪಾತ್ರದಲ್ಲಿದ್ದ ಅಂಬರೀಶ್ ನಟಿ ಆರತಿ ಅವರನ್ನು ರೇಗಿಸುತ್ತಿದ್ದರೆ, ಇತ್ತ ವಿಷ್ಣುವರ್ಧನ್ ಸೈಕಲ್​​ನಲ್ಲಿ ಬಂದು ಫೈಟ್ ಮಾಡುವ ದೃಶ್ಯ ಅಭಿಮಾನಿಗಳಿಗೆ ಕಿಕ್ ಕೊಟ್ಟಿತ್ತು.

ಸಾಹಸಸಿಂಹ ವಿಷ್ಣು ಬಗ್ಗೆ ಅಂಬಿ​ಗೆ ಎಲ್ಲಿಲ್ಲದ ಅಭಿಮಾನ. ಇಬ್ಬರೂ ಗಂಟೆಗಟ್ಟಲೆ ಕೂತು ಹರಟೆ ಹೊಡೆಯುತ್ತಾ, ಒಬ್ಬರ ಕಾಲು ಮತ್ತೊಬ್ಬರು ಎಳೆದು ನಕ್ಕು ನಲಿಯುತ್ತಿದ್ದರು. ಚಿತ್ರದುರ್ಗದಲ್ಲಿ ನಾಗರಹಾವು ಶೂಟಿಂಗ್ ಸಂದರ್ಭದಲ್ಲಿ ಇಬ್ಬರೂ ಒಂದೇ ರೂಂನಲ್ಲಿ ವಿಶ್ರಾಂತಿ ಪಡೆಯುವ ಸಂದರ್ಭವಿತ್ತು. ಈ ಸಂದರ್ಭದಲ್ಲಂತೂ ಇಬ್ಬರೂ ಮತ್ತಷ್ಟು ಕ್ಲೋಸ್ ಆದರು. ಚಿತ್ರದುರ್ಗದಲ್ಲಿ ನಡೆಯುತ್ತಿದ್ದ ಶೂಟಿಂಗ್ ಯಾವಾಗ ಬೆಂಗಳೂರಿಗೆ ಶಿಫ್ಟ್ ಆಯ್ತೋ ಆಗ ಅಂಬರೀಶ್ ಸಿನಿಮಾ ಶೂಟಿಂಗ್ ಬಿಡುವು ಸಿಕ್ಕಾಗೆಲ್ಲಾ ವಿಷ್ಣುವರ್ಧನ್ ಮನೆಗೆ ಹೋಗುತ್ತಿದ್ದರು. ಬಹುಶಃ ನಾಗರಹಾವು ಚಿತ್ರದ ಮೂಲಕ ಚಿಗುರಿದ ಸ್ನೇಹ ಆದರ್ಶ ಸ್ನೇಹವಾಗುತ್ತೆ ಅಂತಾ ಅವರಿಬ್ಬರಿಗೂ ಅಂದು ಅರಿವೇ ಇರಲಿಲ್ಲ.

ಓ ಗೆಳೆಯ ನಿನಗೆ ಸ್ಯಾಣೆ ಕೋಪ ಕಣೋ..: ಇಲ್ಲಿಂದ ಸಾಕಷ್ಟು ಸಿನಿಮಾಗಳಲ್ಲಿ ಜೊತೆಯಾಗಿ ಅಭಿನಯಿಸಿದ್ದಾರೆ‌. ಆದರೆ ಇವರ ಸ್ನೇಹ ಮತ್ತಷ್ಟು ಗಟ್ಟಿಯಾಗಿದ್ದು ಡಿ.ರಾಜೇಂದ್ರ ಬಾಬು‌ ನಿರ್ದೇಶನದ ದಿಗ್ಗಜರು ಸಿನಿಮಾದಲ್ಲಿ. ಈ ಚಿತ್ರದಲ್ಲಿ ನಿಜ ಜೀವನದಲ್ಲಿ ಅಂಬಿ ಮತ್ತು ವಿಷ್ಣು ಇರುವಂತೆಯೇ ತೋರಿಸಲಾಗಿತ್ತು. ಈ ಚಿತ್ರದಲ್ಲಿ ಅಂಬರೀಶ್ ‘ಓ ಗೆಳೆಯ ನಿನಗೆ ಸ್ಯಾಣೆ ಕೋಪ ಕಣೋ’ ಅಂತಾ ವಿಷ್ಣುವರ್ಧನ್ ಬಗ್ಗೆ ಹಾಡುವ ಗೀತೆ ಗೆಳೆತನದ ಎವರ್‌ಗ್ರೀನ್ ಹಾಡು ಆಗಿದೆ.

ಇಬ್ಬರೂ ಬಿಟ್ಟು ಇನ್ನೊಬ್ಬರು ಇರುತ್ತಿರಲಿಲ್ಲ. ವಿಷ್ಣುವರ್ಧನ್ ಸಿನಿಮಾ ಕಾರ್ಯಕ್ರಮವಾಗಲಿ ಅಥವಾ ಹೊರೆಗೆ ಯಾವುದೇ ಕಾರ್ಯಕ್ರಮಕ್ಕೆ ಹೋದರೂ ಅಂಬರೀಶ್ ಅಲ್ಲಿರಬೇಕಿತ್ತು. ಅಂಬಿಯಿಲ್ಲದೇ ವಿಷ್ಣುವರ್ಧನ್ ಯಾವುದೇ ಕಾರ್ಯಕ್ರಮಕ್ಕೆ ಹೋಗುತ್ತಿರಲಿಲ್ವಂತೆ.

ಈ ಸಂಗತಿ ನಿಮಗೆ ಗೊತ್ತೇ?: ಈ ಸ್ಟಾರ್ ಸ್ನೇಹಿತರ ಬಗ್ಗೆ ಇಲ್ಲೊಂದು ಅಚ್ಚರಿಯ ವಿಚಾರವಿದೆ. ಅಂಬಿ-ವಿಷ್ಣು ಆಪ್ತರಾಗಿದ್ದರೂ ಅವರ ಆಲೋಚನೆಗಳು ಮಾತ್ರ ತದ್ವಿರುದ್ಧ. ಜನರ ಜೊತೆ ಬೆರೆಯುವ ವಿಚಾರದಲ್ಲಿ ವಿಷ್ಣುವರ್ಧನ್ ಸ್ವಲ್ಪ ದೂರ ಸರಿಯುತ್ತಿದ್ದರು. ಆದರೆ ಅಂಬರೀಶ್​ ಸದಾ ಜನರೊಂದಿಗೆ ಬೆರೆಯುತ್ತಿದ್ದರು. ವಿಷ್ಣು ರಾಜಕೀಯ ಎಂದರೆ ದೂರ ಸರಿದು ನಿಲ್ಲುತ್ತಿದ್ದರು. ಹಾಗಾಗಿ ರಾಜಕೀಯಕ್ಕೆ ಕಾಲಿಡಲೇ ಇಲ್ಲ. ಆದರೆ ಮಂಡ್ಯದಲ್ಲಿ ಅಂಬರೀಶ್ ಸ್ಪರ್ಧಿಸುವ ವೇಳೆ ನಾಮಿನೇಷನ್ ದಿನ ಗೆಳೆಯನ ಜೊತೆ ವಿಷ್ಣುವರ್ಧನ್ ಬಂದಿದ್ದರು. ಸದ್ಯ ನಮ್ಮೊಂದಿಗೆ ಇಬ್ಬರೂ ಇಲ್ಲ. ಆದರೆ ರೀಲ್ ಹಾಗೂ ರಿಯಲ್​ ಲೈಫ್​ನಲ್ಲೂ ಅವರ ಗೆಳೆತನ ಇಂದಿಗೂ ಮಾದರಿ.

ಬೆಂಗಳೂರು

ಅಗಸ್ಟ್ 10 ರಂದು ಬೆಂಗಳೂರು ಮೆಟ್ರೋ ಫೇಸ್-3 ಶಂಕುಸ್ಥಾಪನೆ: ಪ್ರಧಾನಿ ಮೋದಿ ಉದ್ಘಾಟನೆ ನೆರವೇರಿಸಲಿದ್ದಾರೆ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಮತ್ತೊಂದು ಸಿಹಿ ಸುದ್ದಿ. ಬೆಂಗಳೂರು ಮೆಟ್ರೋ ಫೇಸ್-3 ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 10ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಪ್ರಕಟಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 10ರಂದು ಪ್ರಧಾನಿ ಮೋದಿ ಮೆಟ್ರೋ ಯೆಲ್ಲೋ ಲೈನ್ ಅನ್ನು ಉದ್ಘಾಟಿಸುವುದರ ಜೊತೆಗೆ ಜೆಪಿ ನಗರ ವೆಗಾಸಿಟಿ ಮಾಲ್‌ನಿಂದ ಕಡಬಗೆರೆವರೆಗೆ ವಿಸ್ತರಿಸಲಾಗಿರುವ ಮೆಟ್ರೋ ಮಾರ್ಗದ ಶಂಕುಸ್ಥಾಪನೆ ಕಾರ್ಯವನ್ನು ಸಹ ನೆರವೇರಿಸಲಿದ್ದಾರೆ,” ಎಂದು ಹೇಳಿದರು.

ಈ ಯೋಜನೆಯು ಸುಮಾರು ₹17,000 ಕೋಟಿ ವೆಚ್ಚದ ಫೇಸ್-3 ಯೋಜನೆಯ ಭಾಗವಾಗಿದೆ. ಮೊದಲೇ ಯೆಲ್ಲೋ ಲೈನ್ ಶಂಕುಸ್ಥಾಪನೆಗೆ ಮೋದಿ ಅವರೇ ಆಗಿದ್ದರೆ, ಈಗ ಉದ್ಘಾಟನೆಯ ಗೌರವವೂ ಅವರಿಗೇ ಸಲ್ಲಲಿದೆ.

ಡಿಸಿಎಂ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ:
ಡಿಸಿಎಂ ಡಿ.ಕೆ. ಶಿವಕುಮಾರ್ ಮೆಟ್ರೋ ಯೋಜನೆಯಲ್ಲಿ ರಾಜ್ಯದ ಪಾತ್ರವಿದೆ ಎಂದು ಹೇಳಿರುವುದರ ಬಗ್ಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸುತ್ತಾ, “ಇದುವರೆಗೆ ಈ ಯೋಜನೆಯ ಬಗ್ಗೆ ಯಾವ ರಾಜ್ಯ ಸಚಿವರೂ ಚಿಂತೆ ಮಾಡಿಲ್ಲ. ಪ್ರಧಾನಿ ಬರುವ ಸುದ್ದಿ ತಿಳಿಯುತ್ತಿದ್ದಂತೆ ಕ್ರೆಡಿಟ್ ಕಳಿಸಲು ಮುಂದಾಗಿದ್ದಾರೆ,” ಎಂದು ಟೀಕಿಸಿದರು.

ಫ್ಲೈಓವರ್ ಪ್ರಗತಿಯ ಮೇಲೂ ಟೀಕೆ:
“ಈಜಿಪುರದ 2.5 ಕಿ.ಮೀ ಫ್ಲೈಓವರ್‌ನ್ನು ಎಂಟು ವರ್ಷಗಳಿಂದ ಪೂರ್ಣಗೊಳಿಸಲಾಗಿಲ್ಲ. ಅದರೆ ಇದೀಗ 100 ಕಿ.ಮೀ ರಸ್ತೆಗಳ ಯೋಜನೆ ಪ್ರಾರಂಭಿಸಿದ್ದಾರೆ,” ಎಂದು ಹೇಳಿದ್ದಾರೆ.

ಮೆಟ್ರೋ ಯೋಜನೆಗೆ ಹಿಂದೆ ಸರ್ಕಾರದ ಕೊಡುಗೆ:
ಕೊರೋನಾ ಸಮಯದಲ್ಲೂ ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರಗಳು ಅನುದಾನ ಒದಗಿಸಿ ಕೆಲಸ ಮುಂದುವರೆದಿದ್ದವು. ಆದರೆ ಇದೀಗ ಎಂಡಿ ನೇಮಕ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

Continue Reading

ಅಪರಾಧ

Breaking News ಚಾಲಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸಂಸದ ಡಾ. ಸುಧಾಕರ್ ಹೆಸರು ಉಲ್ಲೇಖ!

ಚಿಕ್ಕಬಳ್ಳಾಪುರ, ಆಗಸ್ಟ್ 7 – ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದೈನಂದಿನ ಶಾಂತಿಯನ್ನು ಬೆಚ್ಚಿಬೀಳಿಸುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ 33 ವರ್ಷದ ಗುತ್ತಿಗೆ ಚಾಲಕ ಬಾಬು ಎಂ. ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೋಕಾಂತರವಾಗಿದೆ.

ಡೆತ್ ನೋಟ್‌ನಲ್ಲಿ ಸಂಸದ ಡಾ. ಕೆ. ಸುಧಾಕರ್ ಹೆಸರು:
8 ವರ್ಷಗಳಿಂದ ಲೆಕ್ಕಪರಿಶೋಧನೆ ವಿಭಾಗದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಬಾಬು, ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಹಾಗೂ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ವಿರುದ್ಧ ಗಂಭೀರ ಆರೋಪಗಳನ್ನು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಆತ್ಮಹತ್ಯೆಗೆ ಕಾರಣವೆನಿಸಿದ ಹಣಕಾಸು ವಂಚನೆ:
ಬಾಬು ಅವರು ಡೆತ್ ನೋಟ್‌ನಲ್ಲಿ, ಸರ್ಕಾರಿ ಕೆಲಸ ಕೊಡಿಸುತ್ತೇವೆಂದು ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬಾಬು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು:
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತಕ್ಷಣವೇ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ FIR ದಾಖಲಾತಿ ನಡೆಯುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ.

Continue Reading

ಬೆಂಗಳೂರು

ಬೆಂಗಳೂರಿನಲ್ಲಿ ವಸತಿ ಯೋಜನೆಗಳ ಅವ್ಯವಸ್ಥೆ: ಹೊಸ ಯೋಜನೆಗಳ ಬಗ್ಗೆ ಶಾಸಕ ಎಸ್.ಟಿ. ಸೋಮಶೇಖರ್ ಅಸಮಾಧಾನ

ಬೆಂಗಳೂರು, ಆಗಸ್ಟ್ 7 – ನಗರದಲ್ಲಿ ಈಗಿನ ವಸತಿ ಯೋಜನೆಗಳು ಪೂರ್ಣವಾಗಿಲ್ಲದಿರುವಾಗ ಹೊಸ ಭೂಸ್ವಾಧೀನ ಅಧಿಸೂಚನೆಗಳನ್ನು ನೀಡುವುದು ಅರ್ಥವಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಕಿಡಿಕಾರಿದರು.

ಯಶವಂತಪುರ ಕ್ಷೇತ್ರದ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಬ್ಬರಾಯನಪಾಳ್ಯ ಎ ಹಾಗೂ ಬಿ ಗ್ರಾಮಗಳಲ್ಲಿ ಹೊಸ ಅಂಗನವಾಡಿ ಕಟ್ಟಡ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ವೇಳೆ ಅವರು ಮಾತನಾಡಿದರು.

ಅವರು ಅಭಿಪ್ರಾಯಪಟ್ಟ ಪ್ರಮುಖ ವಿಷಯಗಳು:

  • ಬೆಂಗಳೂರಿನ ಜನಸಂಖ್ಯೆ ಈಗಾಗಲೇ 1.5 ಕೋಟಿಗೂ ಮೀರುತ್ತಿದೆ.
  • ವಸತಿ ಸಮುಚ್ಛಯಗಳಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳು ಬಾಕಿಯಿವೆ.
  • ಕುಡಿಯುವ ನೀರಿನ ಕೊರತೆ, ಒಳಚರಂಡಿ ಸಮಸ್ಯೆ, ರಾಜಕಾಲುವೆಗಳ ಉಕ್ಕಿಹರಿವು ನಗರದ ಮುಖ್ಯ ಸಮಸ್ಯೆಗಳಾಗಿವೆ.
  • ಕೆಲ ಕಟ್ಟಡಗಳು ಕಳಪೆ ಗುಣಮಟ್ಟದಿಂದ ನಿರ್ಮಾಣವಾಗಿದ್ದು, ಸೋರಿಕೆ ಸಮಸ್ಯೆ ಜನರನ್ನು ಕಾಡುತ್ತಿದೆ.
  • “ಕಟ್ಟಡ ಕುಸಿದು ಅನಾಹುತವಾದರೆ ಹೊಣೆ ಯಾರು?” ಎಂದು ಅವರು ಪ್ರಶ್ನಿಸಿದರು.

ಬೇರೆ ಪ್ರಮುಖ ಅಂಶಗಳು:
ನಗರದ ವಾಹನ ಸಂಚಾರ ದಟ್ಟಣೆ, ನಿಯಂತ್ರಣ ತಪ್ಪಿದ ನಗರ ವಿಸ್ತರಣೆ, ಮೂಲಸೌಕರ್ಯದ ಕೊರತೆ ಇವುಗಳಿಂದ ನಾಗರಿಕರು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿನಿಂದ ಹೊರಗೆ ಹೊಸ ವಸತಿ ಯೋಜನೆಗಳನ್ನು ರೂಪಿಸಿ ಮೂಲಸೌಕರ್ಯ ಒದಗಿಸಿದರೆ ಜನಸಂದಣಿ ನಿಯಂತ್ರಣ ಸಾಧ್ಯವೆಂದು ಶಾಸಕ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಾಜರಿದ್ದವರು:
ಪಂಚಾಯತ್ ಅಧ್ಯಕ್ಷೆ ಹೇಮಾ ನಾರಾಯಣ್, ಸದಸ್ಯರು ಸದಾನಂದ.ಡಿ, ಎನ್.ಕುಮಾರ್, ರೇವಣಸಿದ್ದಯ್ಯ, ಅಶ್ವತ್, ವೆಂಕಟಾಚಲ, ಸುನಿಲ್, ಪುಟ್ಟಮಲ್ಲು, ತಾತಪ್ಪ, ಶಿವಣ್ಣ, ಹನುಮಂತ ಹಾಗೂ ಗ್ರಾಮಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

Trending