Connect with us

ರಾಜ್ಯ

ಅಪ್ಪು ಸರ್ ನನಗೆ ಧೈರ್ಯ ತುಂಬಿದ್ದರು’: ಪುನೀತ್​ ರಾಜ್​ಕುಮಾರ್​ ಸ್ಮರಿಸಿದ ಹರ್ಷಿಕಾ ಪೂಣಚ್ಚ – Harshika on Appu

Published

on

ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟ ಪುನೀತ್​ ರಾಜ್​ಕುಮಾರ್​ ನಮ್ಮೆಲ್ಲರನ್ನು ಅಗಲಿ ದಿನಗಳು ಉರುಳಿವೆ. ಆದರೆ ಅವರ ನೆನಪು ಮಾತ್ರ ಸದಾ ಜೀವಂತ. ಅವರ ಸಿನಿಮಾ ಮತ್ತು ಸಾಮಾಜಿಕ ಸೇವೆ ಹೆಚ್ಚಿನ ಸಂಖ್ಯೆಯ ಜನರಲ್ಲಿ ಅಚ್ಚಳಿಯದೇ ಉಳಿದಿದೆ. ಅಪ್ಪು ಹೆಸರಲ್ಲಿ ಮಾನವೀಯ ಕಾರ್ಯಗಳು ಮತ್ತು ಅವರ ಸ್ಮರಣೆ ಮುಂದುವರೆದಿದೆ. ಇದೀಗ ನಟಿ ಹರ್ಷಿಕಾ ಪೂಣಚ್ಚ ಅವರು ಪುನೀತ್​​ ರಾಜ್​ಕುಮಾರ್​​​ ಕುರಿತಾದ ವಿಶೇಷ ಪೋಸ್ಟ್ ಶೇರ್ ಮಾಡೋ ಮೂಲಕ ಗಮನ ಸೆಳೆದಿದ್ದಾರೆ.

ಜಾಕಿ’, 2010ರ ಅಕ್ಟೋಬರ್​ 14ರಂದು ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡಿದ್ದ ಸಿನಿಮಾ. ಬಹುತೇಕ ಉತ್ತಮ ಪ್ರತಿಕ್ರಿಯೆ ಗಳಿಸಿದ್ದ ಈ ಚಿತ್ರ ಗಲ್ಲಾಪೆಟ್ಟಿಗೆ ವಿಚಾರದಲ್ಲೂ ಯಶ ಕಂಡಿತ್ತು. ದುನಿಯಾ ಸೂರಿ ನಿರ್ದೇಶನದ ಈ ಚಿತ್ರದಲ್ಲಿ ಪುನೀತ್​ ರಾಜ್​ಕುಮಾರ್​​ ಹಾಗೂ ಭಾವನಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರೆ, ಹರ್ಷಿಕಾ ಪೂಣಚ್ಚ, ಸುಮಿತ್ರಾ, ರಂಗಾಯಣ ರಘು, ಪೆಟ್ರೋಲ್​ ಪ್ರಸನ್ನ, ವಿಕಾಸ್​​​ ಸೇರಿದಂತೆ ಹಲವರು ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದರು. ಪಾರ್ವತಮ್ಮ ರಾಜ್​ಕುಮಾರ್​ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದರು.

ಪುನೀತ್​ ರಾಜ್​​​ಕುಮಾರ್​ ವೃತ್ತಿಜೀವನದಲ್ಲಿ ಈ ಚಿತ್ರ ಮಹತ್ವದ ಪಾತ್ರ ವಹಿಸಿದೆ. ಕನ್ನಡದಲ್ಲಿ ಇದು ಯಶಸ್ವಿ ಚಿತ್ರಗಳಲ್ಲೊಂದು. ಹರ್ಷಿಕಾ ಪೂಣಚ್ಚ ಅವರ ಆರಂಭದ ದಿನಗಳಲ್ಲಿ ಸಿಕ್ಕ ಸಿನಿಮಾ. ಸದ್ಯ ನಟಿ ತಮ್ಮ ಅನುಭವ, ಅಪ್ಪು ಕೊಟ್ಟ ಸಾಥ್ ಬಗ್ಗೆ ತಮ್ಮ ಅಧಿಕೃತ ಸೋಷಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಪುನೀತ್​​ ಅವರ ಜೊತೆಗಿನ ಒಂದು ಫೋಟೋ ಕೂಡಾ ಶೇರ್ ಮಾಡಿದ್ದಾರೆ.

ಹರ್ಷಿಕಾ ಪೂಣಚ್ಚ ಪೋಸ್ಟ್: ”ಚಿತ್ರೀಕರಣದ ಮೊದಲ ದಿನ ನನಗಾದ ಅನುಭವ, ಭಯ, ಹತಾಶೆಯನ್ನು ನಾನು ಈಗಲೂ ನೆನಪಿಸಿಕೊಳ್ಳುತ್ತೇನೆ. ಅದರಲ್ಲೂ, ಒಂದೇ ಒಂದು ಡೈಲಾಗ್​ ಇಲ್ಲದೇ ದೃಶ್ಯವೊಂದನ್ನು ನಿಭಾಯಿಸಬೇಕಾದ ಕ್ಷಣ. ಅದೊಂದು ಕಠಿಣ ಪರಿಸ್ಥಿತಿ. ಕಣ್ಣೀರಿಟ್ಟಿದ್ದೆ. ಆದ್ರೆ ಅಪ್ಪು ಸರ್​​ ನನ್ನ ಸಂಕಟ ಗಮನಿಸಿ ಸಮಾಧಾನ ಹೇಳಲು ಬಂದಿದ್ದರು. ನನ್ನ ಪಾತ್ರ ಮಹತ್ವದ್ದು, ಸಾಕಷ್ಟು ಡೈಲಾಗ್ಸ್​ ಸಿಗಲಿದೆ ಎಂದು ಭರವಸೆಯ ಮಾತುಗಳನ್ನಾಡಿದ್ದರು. ಚಿಂತಿಸಬೇಡಿ ಎಂದು ಸಮಾಧಾನ ಹೇಳಿದ್ದರು. 15 ವರ್ಷ ವಯಸ್ಸಿನವಳಾಗಿದ್ದಾಗ, ಅವರೊಂದಿಗೆ ಕೆಲಸ ಮಾಡಿದ್ದು ನನಗೆ ಬಹಳ ಸಂತೋಷ ಕೊಟ್ಟಿತ್ತು. ಜಾಕಿ ಚಿತ್ರದ ಚಿತ್ರೀಕರಣದ ಸಮಯ ಸ್ಮರಣೀಯ. ಅವರ ವಿನಮ್ರತೆ, ಸಮರ್ಪಣೆ, ಪ್ಯಾಶನ್​​​, ಹಾಗೆಯೇ ಅವರು ತಮ್ಮ ಜೀವನ ನಡೆಸಿದ ರೀತಿಯನ್ನು ಅನುಸರಿಸಲು ಬಯಸುತ್ತೇನೆ” ಎಮದು ಬರೆದುಕೊಂಡಿದ್ದಾರೆ. ಇನ್​ಸ್ಟಾಗ್ರಾಮ್​ ಪೋಸ್ಟ್​​ನಲ್ಲಿ ಸಿನಿಮಾ ಸೆಟ್​ನ ಫೋಟೋವನ್ನು ಹಂಚಿಕೊಂಡಿದ್ದಾರೆ.

ದೇಶ

UG CET 2026 ಫಲಿತಾಂಶ ಪ್ರಕಟ; ಇಂಜಿನಿಯರಿಂಗ್ ವಿಭಾಗದಲ್ಲಿ ತನಿಷಾ ಕಾರ್ತಿಕ್‌ಗೆ ಮೊದಲ ರ‍್ಯಾಂಕ್

Published

on

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ್ದ UG CET 2026 ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ. ಏಪ್ರಿಲ್ 22, 23 ಮತ್ತು 24ರಂದು ನಡೆದಿದ್ದ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ ಸಿಕ್ಕಿದೆ.

ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ RV PU College ವಿದ್ಯಾರ್ಥಿನಿ Tanisha Karthik ಮೊದಲ ರ‍್ಯಾಂಕ್ ಪಡೆದು ರಾಜ್ಯದ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಬೆಳ್ತಂಗಡಿಯ Sir M.V. PU College ವಿದ್ಯಾರ್ಥಿ Shrajan ದ್ವಿತೀಯ ರ‍್ಯಾಂಕ್ ಪಡೆದಿದ್ದು, ಬೆಂಗಳೂರಿನ ಜಯನಗರದ ಆರ್‌ವಿ ಪಿಯು ಕಾಲೇಜಿನ Ninad Vasishta ತೃತೀಯ ರ‍್ಯಾಂಕ್ ಪಡೆದಿದ್ದಾರೆ.

ಇಂಜಿನಿಯರಿಂಗ್ ವಿಭಾಗದ ಟಾಪ್ 3 ರ‍್ಯಾಂಕ್‌ಗಳು

ರ‍್ಯಾಂಕ್ವಿದ್ಯಾರ್ಥಿ
1ತನಿಷಾ ಕಾರ್ತಿಕ್
2ಶ್ರಾಜನ್
3ನಿನಾದ್ ವಸಿಷ್ಠ

ವೆಟನರಿ ವಿಭಾಗದ ಟಾಪ್ 3

ವೆಟನರಿ ವಿಭಾಗದಲ್ಲೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ಈ ವಿಭಾಗದ ಮೊದಲ ಮೂರು ರ‍್ಯಾಂಕ್‌ಗಳು ಈ ಕೆಳಗಿನಂತಿವೆ:

ರ‍್ಯಾಂಕ್ವಿದ್ಯಾರ್ಥಿ
1ನಯನಾ ಗೋಪಿ
2ಅಮೂಲ್ಯ
3ರಿತ್ವಿಕ್ ಕುಮಾರ್

UG CET ಫಲಿತಾಂಶ ಪ್ರಕಟವಾಗುತ್ತಿದ್ದಂತೆ ರಾಜ್ಯದಾದ್ಯಂತ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಂಭ್ರಮ ಮನೆ ಮಾಡಿದೆ. ಇಂಜಿನಿಯರಿಂಗ್, ಕೃಷಿ, ವೆಟನರಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಈ ಫಲಿತಾಂಶ ಪ್ರಮುಖವಾಗಿದ್ದು, ಮುಂದಿನ ಹಂತದಲ್ಲಿ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶೀಘ್ರದಲ್ಲೇ ಕೌನ್ಸೆಲಿಂಗ್ ವೇಳಾಪಟ್ಟಿ ಹಾಗೂ ಸೀಟ್ ಹಂಚಿಕೆ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ. ವಿದ್ಯಾರ್ಥಿಗಳು ತಮ್ಮ ರ‍್ಯಾಂಕ್ ಮತ್ತು ಅಂಕಗಳನ್ನು ಪರಿಶೀಲಿಸಿ ಮುಂದಿನ ಪ್ರವೇಶ ಪ್ರಕ್ರಿಯೆಗೆ ಸಿದ್ಧರಾಗಬಹುದು.

Continue Reading

ದೇಶ

ಎಸ್‌ಐಆರ್‌ಗೆ ಮುನ್ನ ಆತಂಕ: 2.06 ಲಕ್ಷ ಮತದಾರರ ವಿವರಗಳು ಇನ್ನೂ ದಾಖಲಾಗಿಲ್ಲ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಲು ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲಿ, ಎರಡು ಲಕ್ಷಕ್ಕೂ ಅಧಿಕ ಮತದಾರರ ಮಾಹಿತಿ ಇನ್ನೂ ಮ್ಯಾಪಿಂಗ್ ಆಗದಿರುವುದು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಜಿಲ್ಲೆಯ ಒಟ್ಟು 18,05,189 ಮತದಾರರ ಪೈಕಿ 15,98,723 ಮತದಾರರ ಮಾಹಿತಿ ಮಾತ್ರ ಮ್ಯಾಪಿಂಗ್ ಆಗಿದ್ದು, ಇನ್ನೂ 2,06,466 ಮತದಾರರ ಮಾಹಿತಿ ಡಿಜಿಟಲ್ ವ್ಯವಸ್ಥೆಗೆ ಜೋಡಣೆಯಾಗಿಲ್ಲ. ಜಿಲ್ಲಾಡಳಿತದ ಪ್ರಕಾರ, ಮ್ಯಾಪಿಂಗ್ ಕಾರ್ಯದಲ್ಲಿ ಶೇ.88.56ರಷ್ಟು ಪ್ರಗತಿ ಸಾಧನೆಯಾಗಿದೆ.

ಮಂಗಳೂರು ದಕ್ಷಿಣ ಮತ್ತು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಗಳಲ್ಲಿ ಮ್ಯಾಪಿಂಗ್ ಆಗದ ಮತದಾರರ ಸಂಖ್ಯೆ ಹೆಚ್ಚಿರುವುದು ಗಮನ ಸೆಳೆದಿದೆ. ಮಂಗಳೂರು ದಕ್ಷಿಣದಲ್ಲಿ 63,853 ಹಾಗೂ ಮಂಗಳೂರು ಉತ್ತರದಲ್ಲಿ 50,558 ಮತದಾರರ ಮಾಹಿತಿ ಇನ್ನೂ ದಾಖಲಾಗಿಲ್ಲ. ಉಳಿದಂತೆ ಮೂಡುಬಿದಿರೆ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ ಮತ್ತು ಸುಳ್ಯ ಕ್ಷೇತ್ರಗಳಲ್ಲಿಯೂ ಸಾವಿರಾರು ಮತದಾರರ ಮಾಹಿತಿ ಬಾಕಿಯಿದೆ.

ಜಿಲ್ಲಾಡಳಿತದ ಸ್ಪಷ್ಟನೆ

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ H. V. Darshan ಅವರು ಈ ಬಗ್ಗೆ ಸ್ಪಷ್ಟನೆ ನೀಡಿ, ಮ್ಯಾಪಿಂಗ್ ಆಗದಿರುವುದರಿಂದ ಮತದಾರರ ಹೆಸರು ಪಟ್ಟಿಯಿಂದ ಅಳಿಸಲಾಗಿದೆ ಎಂಬ ಅರ್ಥವಲ್ಲ ಎಂದು ಹೇಳಿದ್ದಾರೆ.

ಜೂನ್ 30ರಿಂದ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗಲಿದ್ದು, ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮ್ ವಿತರಿಸಲಿದ್ದಾರೆ. ಜುಲೈ 29ರವರೆಗೆ ಮತದಾರರು ತಮ್ಮ ದಾಖಲೆಗಳನ್ನು ಸಲ್ಲಿಸಲು ಅವಕಾಶವಿದ್ದು, ನಂತರ ಪರಿಶೀಲನೆ, ಆಕ್ಷೇಪಣೆ ಹಾಗೂ ತಿದ್ದುಪಡಿ ಪ್ರಕ್ರಿಯೆ ನಡೆಯಲಿದೆ. ಅಂತಿಮ ಮತದಾರರ ಪಟ್ಟಿ ಅಕ್ಟೋಬರ್ 7ರಂದು ಪ್ರಕಟವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಮತದಾರರ ಅನುಕೂಲಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ವೋಟರ್ ಫೆಸಿಲಿಟೇಷನ್ ಸೆಂಟರ್‌ಗಳನ್ನು ತೆರೆಯಲಾಗುತ್ತಿದ್ದು, ಜಿಲ್ಲೆಯಲ್ಲಿ 206 ಬಿಎಲ್‌ಒಗಳು ಮತ್ತು 1,876 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.

ಕಾಂಗ್ರೆಸ್ ಅನುಮಾನ, ಬಿಜೆಪಿ ಎಚ್ಚರಿಕೆ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ Harish Kumar ಅವರು ಈ ಪ್ರಕ್ರಿಯೆ ಕುರಿತು ಅನುಮಾನ ವ್ಯಕ್ತಪಡಿಸಿದ್ದು, ಎನ್ಯುಮರೇಷನ್ ಫಾರ್ಮ್ ಸಲ್ಲಿಸದ ಮತದಾರರ ಹೆಸರು ಅಂತಿಮ ಪಟ್ಟಿಯಲ್ಲಿ ಕಾಣಿಸದಿರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ ಬಿಜೆಪಿ ಜಿಲ್ಲಾ ಅಧ್ಯಕ್ಷ Satish Kumpala ಅವರು, ಜಿಲ್ಲಾಡಳಿತ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಇನ್ನೂ ಉತ್ತರ ಸಿಗದ ಪ್ರಶ್ನೆ

ಪ್ರಸ್ತುತ ಚರ್ಚೆಯ ಕೇಂದ್ರಬಿಂದುವಾಗಿರುವ ಪ್ರಶ್ನೆ ಎಂದರೆ, ಮ್ಯಾಪಿಂಗ್ ಆಗದ 2,06,466 ಮತದಾರರು ಯಾರು? ಅವರು ವಿದೇಶ ಅಥವಾ ಹೊರರಾಜ್ಯಗಳಲ್ಲಿ ವಾಸಿಸುತ್ತಿರುವವರೇ, ಡುಪ್ಲಿಕೇಟ್ ನೋಂದಣಿದಾರರೇ ಅಥವಾ ಮಾಹಿತಿ ಸಂಗ್ರಹಣೆಯ ವೇಳೆ ಕೈತಪ್ಪಿದವರೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಪ್ರಶ್ನೆಗಳಿಗೆ ಉತ್ತರ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಸಿಗುವ ಸಾಧ್ಯತೆ ಇದೆ.

Continue Reading

ದೇಶ

ಶೈಕ್ಷಣಿಕ ಜಾಗ ದುರ್ಬಳಕೆ ಆರೋಪ: ಕೆಂಗೇರಿ ಟ್ರಸ್ಟ್ ವಿರುದ್ಧ PIL ವಿಚಾರಣೆ

Published

on

ಬೆಂಗಳೂರು: ಮೈಸೂರು ರಸ್ತೆಯ ಕೆಂಗೇರಿ ಎಜುಕೇಷನ್ ಟ್ರಸ್ಟ್‌ಗೆ ಸೇರಿದ ಜಾಗದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಸಂಬಂಧಪಟ್ಟ ಅಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದೆ.

ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ಖಾಸಗಿ ಕಂಪನಿಯು ಸಂಬಂಧಪಟ್ಟ ಅಧಿಕಾರಿಗಳ ಪೂರ್ವಾನುಮತಿ ಪಡೆದು ಉಗ್ರಾಣ ಮತ್ತು ಪಾರ್ಕಿಂಗ್ ಕಟ್ಟಡಗಳ ನಿರ್ಮಾಣ ನಡೆಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಸ್ಥಳೀಯ ನಿವಾಸಿಗಳಾದ ಎಂ. ಶ್ರೀಕಾಂತ್ ಸೇರಿದಂತೆ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸುನೀಲ್ ದತ್ ಯಾದವ್ ಹಾಗೂ ಎಸ್. ರಾಚಯ್ಯ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಜೊತೆಗೆ ಸರ್ಕಾರ, ಪ್ರಾಥಮಿಕ ಶಾಲಾ ಶಿಕ್ಷಣ ಇಲಾಖೆ, ಜಿಬಿಎ ಟ್ರಸ್ಟ್ ಅಧ್ಯಕ್ಷರು ಮತ್ತು ಟ್ರಸ್ಟಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ಅರ್ಜಿದಾರರ ಪ್ರಕಾರ, 1957ರಲ್ಲಿ ಸ್ಥಾಪನೆಯಾದ ಕೆಂಗೇರಿ ಎಜುಕೇಷನ್ ಟ್ರಸ್ಟ್‌ಗೆ ಸ್ಥಳೀಯ ನಿವಾಸಿಗಳು ಸುಮಾರು 12 ಎಕರೆ ಭೂಮಿಯನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ದಾನವಾಗಿ ನೀಡಿದ್ದರು. ಈ ಜಾಗದಲ್ಲಿ ಸ್ಥಾಪನೆಯಾದ ಕನ್ನಡ ಮಾಧ್ಯಮ ಶಾಲೆಗೆ ಸರ್ಕಾರ ಅನುದಾನಿತ ಶಿಕ್ಷಣ ಸಂಸ್ಥೆಯ ಮಾನ್ಯತೆಯನ್ನೂ ನೀಡಿತ್ತು.

ಆದರೆ, ಪ್ರಸ್ತುತ ಟ್ರಸ್ಟ್‌ನ ಆಡಳಿತವು ಶಾಲೆಯ ಜಾಗವನ್ನು ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಟ್ರಸ್ಟ್ ಭೂಮಿಯಲ್ಲಿ ವ್ಯಾಪಾರಿಗಳಿಗಾಗಿ ಉಗ್ರಾಣ ನಿರ್ಮಾಣ ಹಾಗೂ ಆಟದ ಮೈದಾನದಲ್ಲಿ ಸಾರಿಗೆ ಸಂಸ್ಥೆಗಳ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ದೂರಲಾಗಿದೆ.

ಇದಲ್ಲದೆ, ಟ್ರಸ್ಟ್‌ನ ಹಣಕಾಸು ದುರ್ಬಳಕೆ ನಡೆಯುತ್ತಿದೆ ಎಂಬ ಆರೋಪವನ್ನೂ ಅರ್ಜಿದಾರರು ಮುಂದಿಟ್ಟಿದ್ದಾರೆ. ಶಿಕ್ಷಣಕ್ಕಾಗಿ ದಾನವಾಗಿ ದೊರೆತ ಭೂಮಿಯಲ್ಲಿ ವಾಣಿಜ್ಯ ಚಟುವಟಿಕೆ ನಡೆಯದಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆ ವೇಳೆ ಸಂಬಂಧಪಟ್ಟ ಇಲಾಖೆಗಳಿಂದ ಸಲ್ಲಿಕೆಯಾಗುವ ವರದಿಯ ಆಧಾರದ ಮೇಲೆ ಹೈಕೋರ್ಟ್ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

Continue Reading

Trending