Connect with us

ದೇಶ

ರಾಜಮನೆತನಕ್ಕೂ ಚಾಮುಂಡಿ ದೇವಾಲಯಕ್ಕೂ ಇರೋ ಸಂಬಂಧವೇನು? ದಾಖಲೆಗಳು ಏನು ಹೇಳ್ತಿವೆ?

Published

on

ಬೆಟ್ಟದ ಮೇಲೆ ಕುಳಿತಿರುವ ಚಾಮುಂಡೇಶ್ವರಿ ದೇವಿ ಮೈಸೂರು ರಾಜಮನೆತನದ ಪ್ರಧಾನ ದೇವತೆ. ಇಂದು ಸಹ ಅವರ ಮನೆತನದ ಹೆಸರಲ್ಲಿ ಸಂಕಲ್ಪ ಮಾಡಿ ಪೂಜೆ ಮಾಡಲಾಗುತ್ತದೆ. ಅನೇಕ ಹಳೆ ಸಂಪ್ರದಾಯ ಮತ್ತು ಪದ್ದತಿ ಆಚರಣೆಗಳನ್ನು ಮಾಡಲಾಗುತ್ತ್ತದೆ.

ದೇವಾಲಯದಲ್ಲಿ ಗೋಡೆಗಳು, ಅಡುಗೆ ಮನೆ, ಅಥಿತಿ ಗೃಹಗಳು ಸೇರಿ ಅನೇಕ ಅಭಿವೃದ್ದಿ ಕೆಲಸಗಳನ್ನು ಒಡೆಯರ್ ಮಾಡಿದ್ದಾರೆ. ಜೊತೆಗೆ ದೇವಾಲಯಕ್ಕೆ ಅನೇಕ ಚಿನ್ನಾಭರಣಗಳನ್ನು ನೀಡಿದ್ದಾರೆ. ದೇವಾಲಯದ ಪೂಜೆ ಖರ್ಚಿಗಾಗಿ ಭೂಮಿಯನ್ನ ಬಿಟ್ಟಿದ್ದಾರೆ. ಅದಕ್ಕಾಗಿ ನೂರಾರು ವರ್ಷಗಳಿಂದ ಸಂಕಲ್ಪ ಪೂಜೆ ನಡೆಯತ್ತಾ ಬಂದಿದೆ. ರಾಜಮನೆತದ ಹೆಸರಿನಲ್ಲಿಯೇ ಸಂಕಲ್ಪ ಮಾಡಿ ಪೂಜೆ ಆರಂಭ ಮಾಡಲಾಗುತ್ತದೆ. ಆದರಂತೆ ಚಾಮುಂಡಿ ಬೆಟ್ಟದಲ್ಲಿ ಅನೇಕ ಕಾರ್ಯಕ್ರಮ ಆಗುತ್ತವೆ. ದೇವಾಲಯವು ಇಂದು ಸಹ ರಾಜಮನೆತನದ ಅವಿಭಾಜ್ಯ ಅಂಗವಾಗಿದೆ.

ದಾಖಲೆಗಳು ಏನು ಹೇಳುತ್ತವೆ?

1831 ರಲ್ಲಿ ಬ್ರಿಟಿಷ್ ಸರ್ಕಾರ ಮೈಸೂರು ಆಡಳಿತ ವಹಿಸಿಕೊಂಡಿತ್ತು. ಆಗ ಮುಜರಾಯಿ ಕಮಿಷನ್​ಗೆ ಆಡಳಿತದ ವರ್ಗಾವಣೆ ಮಾಡಿತ್ತು. ಆನಂತರ ಅರಮನೆ ಮುಜರಾಯಿ ಸಂಸ್ಥೆಗಳು ಅಂತಾ ಬದಲಾವಣೆ ಮಾಡಲಾಯಿತು. ಆದರೆ ಅದು ಮಹಾರಾಜರ ಬಳಿಯೇ ಅಂದಿನಿಂದಲೂ ಉಳಿದುಕೊಂಡಿದೆ.

ಹೆಚ್ ಪಿ ಶಶಿಧರಮೂರ್ತಿಯವರ ಬುಕ್​ನಲ್ಲಿ ಈ ಬಗ್ಗೆ ಉಲ್ಲೇಖ ಇದೆ. ಕರ್ನಾಟಕ ಸ್ಟೇಟ್ ಆರ್ಚಿವ್ ಡಿಪಾರ್ಟ್​ಮೆಂಟ್ ಮುಜರಾಯಿ ಬುಕ್​ನಲ್ಲಿ ಈ ಕುರಿತಾಗಿ ಮಾಹಿತಿ ಇದೆ. ಚಾಮುಂಡಿ ಬೆಟ್ಟದ ಕಾರ್ಯಗಳು 1970 – 71ರಿಂದ ರಾಜಮನೆತನದ ಒಡೆತನದಲ್ಲಿ ನಡೆಯುತ್ತಿದ್ದವು. 1986 ರಲ್ಲಿ ಮೂರನೇ ಕೃಷ್ಣರಾಜ ಒಡೆಯರ್ ಸಾವನ್ನಪ್ಪುತ್ತಾರೆ. ಆಗ ಸರ್ಕಾರದ ಸುಪರ್ದಿಗೆ ನೀಡಲಾಗಿತ್ತು.

ಅಕ್ಟೋಬರ್​​ 20, 1908 ರಲ್ಲಿ ಮಹಾರಾಜರಿಂದ ಆದೇಶವನ್ನು ಮಾಡಿದ್ದರು. ಚಾಮುಂಡಿ ದೇವಾಲಯದ ಸೇರಿ 12 ದೇವಾಲಯಗಳ ಬಗ್ಗೆ ಆದೇಶ ಹೊರಡಿಸಿದ್ದರು. ದೇವಾಲಯಗಳನ್ನ ಅರಮನೆ ಇಲಾಖೆಗೆ ವರ್ಗಾಯಿಸಿ ಆದೇಶ ನೀಡಿದ್ದರು. ಅಷ್ಟು ದೇವಾಲಯಗಳನ್ನು ಓರ್ವ ಅಧಿಕಾರಿ ನೋಡಿಕೊಳ್ಳಲು ನೇಮಕಗೊಳಿಸಲು ಆದೇಶ ನೀಡಿದ್ದರು.

ಜನವರಿ 20, 1909ರಲ್ಲಿ ಡಿಸಿ ಮೈಸೂರನ್ನು ಮ್ಯಾನೇಜ್ ಮಾಡಲು ಆದೇಶ ಹೊರಡಿಸುತ್ತಾರೆ. ಅದರಂತೆಯೇ ಏಪ್ರಿಲ್​ 14, 1920ರ ವೇಳೆ ಅರಮನೆಗೆ ಇಲಾಖೆ ಆಡಳಿತ ಮಂಡಳಿ ಆದೇಶ ನೀಡುತ್ತದೆ. ಅದರಲ್ಲಿ 29 ದೇವಾಲಯಗಳು ಮಹಾರಾಜರ ಆಡಳಿತದಲ್ಲಿದ್ದವು. ಜನವರಿ 23, 1950 ರಲ್ಲಿ ಭಾರತ ಸರ್ಕಾರ ಮತ್ತು ಮಹಾರಾಜರ ನಡುವೆ ಒಪ್ಪಂದ ನಡೆಯಿತು.

ಮೈಸೂರು ಸಂಸ್ಥಾನ ಭಾರತ ಒಕ್ಕೂಟಕ್ಕೆ ಸೇರುವಾಗ ಮೊದಲ ಒಪ್ಪಂದ ನಡೆಯಿತು. ಚಾಮುಂಡಿ ದೇವಾಲಯ ಸೇರಿ ಮಹಾರಾಜರ ಖಾಸಗಿ ಆಸ್ತಿಗಳ ಬಗ್ಗೆ ಮತ್ತು 29 ದೇವಾಲಯಗಳ ಮೇಲೆ ರಾಜಮನೆತದ ಪೂರ್ತಿ ಮಾಲಕತ್ವವಿದೆ ಎಂದು ಹೇಳಿತು.

ಆಗಸ್ಟ್​ 15, 47ರ ತನಕ ಇದ್ದ ಆಸ್ತಿಗಳ ಮೇಲೆ ಹಕ್ಕು ಹೊಂದಿರುವ ಒಪ್ಪಂದ ಮಾಡಲಾಯಿತು. ಇದಕ್ಕೆ ಮಹಾರಾಜ ಮತ್ತು ಸಿಎಸ್ ಆಫ್ ಭಾರತ ಸರ್ಕಾರದ ಸಹಿ ಇದೆ. ಫೆಬ್ರವರಿ 6, 1951ರ ಮೈಸೂರು ಸರ್ಕಾರದ ಆದೇಶದಲ್ಲಿಯೂ ಉಲ್ಲೇಖವಿದೆ. ಅರಮನೆ ಮುಜರಾಯಿ ಆಸ್ತಿಗಳು ಮಹಾರಾಜರಿಗೆ ಸೇರಿವೆ ಎಂದು ಆದೇಶವಿದೆ.

ದೇಶ

ಶ್ವೇತಭವನದ ಸಮೀಪ ಗುಂಡಿನ ದಾಳಿ: ಅಮೆರಿಕ ರಾಜಧಾನಿಯಲ್ಲಿ ಭದ್ರತಾ ಆತಂಕ

Published

on

By

ವಾಷಿಂಗ್ಟನ್ ಡಿಸಿ: ಅಮೆರಿಕದ ಅತ್ಯಂತ ಸುರಕ್ಷಿತ ಪ್ರದೇಶವೆಂದೇ ಪರಿಗಣಿಸಲ್ಪಡುವ White House ಸಮೀಪ ಭಾನುವಾರ ಮುಂಜಾನೆ ಗುಂಡಿನ ದಾಳಿ ನಡೆದಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ.

ಘಟನೆಯ ಸಮಯದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ Donald Trump ಅವರು ಶ್ವೇತಭವನದ ಒಳಗಡೆಯೇ ಇದ್ದರೆಂದು ತಿಳಿದುಬಂದಿದ್ದು, ತಕ್ಷಣವೇ ಭದ್ರತಾ ಸಿಬ್ಬಂದಿ ಅವರನ್ನು ಸುರಕ್ಷಿತ ವಲಯಕ್ಕೆ ಸ್ಥಳಾಂತರಿಸಿದ್ದಾರೆ.

ಶ್ವೇತಭವನದ ಮುಂಭಾಗದಲ್ಲಿರುವ Lafayette Park ಬಳಿ ಈ ಗುಂಡಿನ ದಾಳಿ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ವಾರಗಳಲ್ಲಿ ನವೀಕರಣ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಪ್ರದೇಶವನ್ನು ಸಾರ್ವಜನಿಕರಿಗೆ ನಿರ್ಬಂಧಿಸಲಾಗಿತ್ತು. ಇಷ್ಟಾದರೂ ನಿರ್ಬಂಧಿತ ಪ್ರದೇಶದ ಬಳಿ ಗುಂಡಿನ ಸದ್ದು ಕೇಳಿಬಂದಿರುವುದು ಭದ್ರತಾ ವ್ಯವಸ್ಥೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ದಾಳಿ ನಡೆಸಿದ ಬಂದೂಕುಧಾರಿ ವಾಹನದಲ್ಲಿ ಪಾರಾರಿಯಾಗಿದ್ದು, ಸದ್ಯ ಅವನಿಗಾಗಿ ಭಾರೀ ಶೋಧ ಕಾರ್ಯಾಚರಣೆ ನಡೆಯುತ್ತಿದೆ. United States Secret Service, Metropolitan Police Department of the District of Columbia ಹಾಗೂ ಪಾರ್ಕ್ ಪೊಲೀಸರು ಜಂಟಿಯಾಗಿ ಶಂಕಿತ ವ್ಯಕ್ತಿ ಮತ್ತು ವಾಹನದ ಪತ್ತೆಗೆ ಮುಂದಾಗಿದ್ದಾರೆ.

ಘಟನೆಯ ನಂತರ ಶ್ವೇತಭವನದ ಸುತ್ತಮುತ್ತ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ದಾಳಿಯ ಹಿಂದಿನ ನಿಖರ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ.

Continue Reading

ದೇಶ

ತಾಲಿಬಾನ್ ವಿರುದ್ಧ ಪಾಕಿಸ್ತಾನದ ಆಪರೇಷನ್: ನೂರಾರು ಉಗ್ರರು ಸಾವು

Published

on

By

ಇಸ್ಲಾಮಾಬಾದ್: ಪಾಕಿಸ್ತಾನ ಸರ್ಕಾರವು ಆಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ‘ಗಜಬ್ ಲಿಲ್ ಹಕ್’ (Ghazab lil-Haq) ಕಾರ್ಯಾಚರಣೆಯಲ್ಲಿ ಸುಮಾರು 800 ತಾಲಿಬಾನ್ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭಾನುವಾರ ಹೇಳಿಕೆ ನೀಡಿದೆ.

ಪಾಕಿಸ್ತಾನದ ಮಾಹಿತಿ ಸಚಿವ Attaullah Tarar ಅವರು ಈ ಕುರಿತು ಮಾಹಿತಿ ನೀಡಿದ್ದು, ಈ ಕಾರ್ಯಾಚರಣೆಯಲ್ಲಿ Tehreek-e-Taliban Pakistan (ಟಿಟಿಪಿ) ಹಾಗೂ ಫಿತ್ನಾ ಅಲ್ ಖವಾರಿಜ್ (FAK) ಉಗ್ರ ಸಂಘಟನೆಗೆ ಭಾರೀ ಹೊಡೆತ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, ಕಾರ್ಯಾಚರಣೆ ಆರಂಭವಾದ ಬಳಿಕ ಕನಿಷ್ಠ 796 ಉಗ್ರರು ಸಾವನ್ನಪ್ಪಿದ್ದು, 1,043ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ, ಆಫ್ಘಾನ್ ತಾಲಿಬಾನ್‌ನ 286 ಪೋಸ್ಟ್‌ಗಳನ್ನು ನಾಶಪಡಿಸಲಾಗಿದ್ದು, ಇನ್ನೂ 44 ಪೋಸ್ಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಉಗ್ರ ಸಂಘಟನೆಗಳಿಗೆ ಸೇರಿದ 249 ಟ್ಯಾಂಕ್‌ಗಳು, ಕವಚಿತ ವಾಹನಗಳು, ತೋಪುಗಳು ಹಾಗೂ ಡ್ರೋನ್‌ಗಳನ್ನು ಧ್ವಂಸಗೊಳಿಸಲಾಗಿದೆ. ಪಾಕಿಸ್ತಾನ ಸೇನೆಯ ಈ ದಾಳಿ ಗಡಿಭಾಗದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಪಾಕಿಸ್ತಾನವು ತನ್ನ ಭದ್ರತೆಗೆ ಧಕ್ಕೆಯಾಗುತ್ತಿರುವ ಉಗ್ರ ಚಟುವಟಿಕೆಗಳನ್ನು ನಿಯಂತ್ರಿಸಲು ಈ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಹೇಳಿದೆ. ಆದರೆ, ಈ ಬೆಳವಣಿಗೆಗಳು ಆಫ್ಘಾನಿಸ್ತಾನ-ಪಾಕಿಸ್ತಾನ ನಡುವಿನ ಸಂಬಂಧಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Continue Reading

ದೇಶ

ಬೆಂಗಳೂರಿನಲ್ಲಿ ಎಲ್‌ಪಿಜಿ ಸಂಕಷ್ಟ: ಆಟೊ ಚಾಲಕರ ಬದುಕು ಸಂಕಷ್ಟಕ್ಕೆ

Published

on

By

ಬೆಂಗಳೂರು: ನಗರದಲ್ಲಿ ಉಂಟಾಗಿರುವ ಎಲ್‌ಪಿಜಿ ಕೊರತೆಯಿಂದ ಆಟೊ ಚಾಲಕರ ಸಮಸ್ಯೆಗಳು ದಿನೇ ದಿನೇ ಗಂಭೀರವಾಗುತ್ತಿವೆ. ಗ್ಯಾಸ್‌ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದಾಗಿ ಲಭ್ಯವಿರುವ ಬಂಕ್‌ಗಳ ಬಳಿ ಆಟೊ ಚಾಲಕರು ಗಂಟೆಗಟ್ಟಲೆ ಕಾದು ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವಾರು ಬಂಕ್‌ಗಳು ತಾತ್ಕಾಲಿಕವಾಗಿ ಬಾಗಿಲು ಮುಚ್ಚಿದ್ದು, ಉಳಿದ ಬಂಕ್‌ಗಳಲ್ಲೂ ‘ನೋ ಸ್ಟಾಕ್’ ಫಲಕಗಳು ಸಾಮಾನ್ಯ ದೃಶ್ಯವಾಗಿವೆ.

ರಾಜಾಜಿನಗರ, ಮತ್ತೀಕೆರೆ, ದಾಸರಹಳ್ಳಿ, ಗುಟ್ಟಹಳ್ಳಿ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸಮಸ್ಯೆ ತೀವ್ರಗೊಂಡಿದೆ. ಬಂಕ್‌ಗಳ ಬಳಿ ಆಟೊಗಳು ಸಾಲುಗಟ್ಟಿ ನಿಲ್ಲುವುದರಿಂದ ಸಂಚಾರ ದಟ್ಟಣೆಗೂ ಕಾರಣವಾಗುತ್ತಿದೆ. ಎಲ್‌ಪಿಜಿ ಕೊರತೆಯಿಂದ ಸಾವಿರಾರು ಆಟೊಗಳು ರಸ್ತೆಗಿಳಿಯಲು ಸಾಧ್ಯವಾಗದೇ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೂ ಒತ್ತಡ ಹೆಚ್ಚಾಗಿದೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗ್ಯಾಸ್‌ ಪೂರೈಕೆಗೆ ತೀವ್ರ ಹೊಡೆತ ಬಿದ್ದಿದ್ದು, ಆಟೊ ಚಾಲಕರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಗ್ಯಾಸ್‌ ಬೆಲೆ ಏರಿಕೆಯಿಂದಾಗಿ ಚಾಲಕರು ಕಡಿಮೆ ದೂರಕ್ಕೂ ಪ್ರಯಾಣಿಕರಿಂದ ಹೆಚ್ಚು ಬಾಡಿಗೆ ವಸೂಲು ಮಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರಿಗೂ ಹೆಚ್ಚುವರಿ ಹೊರೆ ಬೀಳುತ್ತಿದೆ.

ಗ್ಯಾಸ್‌ ಲಭ್ಯವಿರುವ ಮಾಹಿತಿ ಸಿಕ್ಕ ತಕ್ಷಣ ನೂರಾರು ಆಟೊಗಳು ಬಂಕ್‌ಗಳತ್ತ ಧಾವಿಸುತ್ತಿವೆ. ಪರಿಣಾಮ, ಕೆಲವೇ ಗಂಟೆಗಳಲ್ಲಿ ಸ್ಟಾಕ್‌ ಖಾಲಿಯಾಗುತ್ತಿದೆ. ಸಿಎನ್‌ಜಿ ಕೊರತೆಯೂ ಕಾಣಿಸಿಕೊಂಡಿರುವುದರಿಂದ ಸಮಸ್ಯೆ ಇನ್ನಷ್ಟು ಸಂಕೀರ್ಣವಾಗಿದೆ.

ಇದರಿಂದಾಗಿ ವಿದ್ಯುತ್‌ ಚಾಲಿತ ಆಟೊಗಳ ಬಳಕೆ ಹೆಚ್ಚಾಗುತ್ತಿದ್ದು, ಪ್ರಯಾಣಿಕರು ಇವುಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಪರಿಸ್ಥಿತಿ ಮುಂದುವರಿದರೆ ಅನೇಕ ಆಟೊ ಚಾಲಕರು ವೃತ್ತಿ ತೊರೆಯುವ ಸ್ಥಿತಿ ಎದುರಾಗುವ ಸಾಧ್ಯತೆ ಇದೆ.

Continue Reading

Trending