Connect with us

ರಾಜಕೀಯ

ಸೀತಾಪುರದಲ್ಲಿ ಮಣ್ಣಿನ ಮಗ ಸ್ಫೋಟಕ ಹೇಳಿಕೆ: ಡಿಕೆಶಿ ಜೈಲು ಸೇರುವ ಬಗ್ಗೆ ಹೆಚ್‌ಡಿಕೆ ಪರೋಕ್ಷ ಸುಳಿವು!

Published

on

ಮಂಡ್ಯ : ನಾನು ಮೆಂಟಲ್ ಆತನೇ ಮೆಂಟಲ್ ಮುಂದೆ ನೋಡೋಣ ನಾವು ಮೆಂಟಲ್ ಆದ್ರೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ತೆಗೆದುಕೊಳ್ಳಬಹುದು ಆದರೆ ಆತ ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ತಾರೆ ನೋಡೋಣ ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಜೈಲು ಸೇರುವ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದರು.

ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದಲ್ಲಿ ನಡೆದ ಭತ್ತ ನಾಟಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾತಾನಾಡಿದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು, ಪದೇಪದೆ ನನ್ನ ಕೆಣಕದಂತೆ ಎಚ್ಚರಿಕೆ ನೀಡಿದರು. 

ಇನ್ನು ತುಂಗಭದ್ರಾ ಡ್ಯಾಂ ವಿಚಾರವಾಗಿ ಮಾತನಾಡಿದ ಸಚಿವರು, ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ಅನಾಹುತವಾಗಿದೆ 19ನೇ ಕ್ರಸ್ಟ್ ಗೇಟ್ ಓಪನ್ ಆಗಿದೆ. ಇದರಿಂದ 30 ಸಾವಿರ ಕ್ಯುಸೆಕ್ ನೀರು ನದಿಗೆ ವ್ಯರ್ಥವಾಗಿ ಹರಿಯುತ್ತಿದೆ. ಈ ಅನಾಹುತದಿಂದ ಜಲಾಶಯದ 60 ಟಿಎಂಸಿ ನೀರು ಖಾಲಿಯಾಗುತ್ತದೆ. ಇದು ರೈತರ ಬದುಕಿನ ಆಶಾಭಾವನೆಗೆ ಧಕ್ಕೆ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

70 ವರ್ಷಗಳ‌ ಹಿಂದೆ ತುಂಗಭದ್ರಾ ಈ ಜಲಾಶಯ ಕಟ್ಟಿದ್ದಾರೆ. ಹಿಂದೆಯೂ ಅಲ್ಲಿ ಅನೇಕ ಸಮಸ್ಯೆಗಳು ಬೆಳಕಿಗೆ ಬಂದಿದ್ದವು. ತುಂಗಭದ್ರಾ ಅಷ್ಟೇ ಅಲ್ಲದೇ ನಾರಾಯಣಪುರ, ಅಲಮಟ್ಟಿ ಜಲಾಶಯದಲ್ಲೂ ಸ್ಟಾಪ್ ಲಾಕ್ ಗೇಟ್ ಅಳವಡಿಕೆ ಮಾಡಿಲ್ಲ. ಇದರಿಂದ ಡ್ಯಾಂನಲ್ಲಿ ನೀರು ಸಂಗ್ರಹಣೆ ಸಾಧ್ಯವಾಗಿಲ್ಲ. ರೈತರ ಬದುಕಿನ ಜೊತೆ ಚೆಲ್ಲಾಟವಾಡಿದ ಹಾಗೆಯೇ. ಟಿಬಿ ಡ್ಯಾಂ ಬೋರ್ಡ್ ಟೆಕ್ನಿಕಲ್ ವಿಚಾರದಲ್ಲಿ ಕಾಟಾಚಾರದ ವರದಿ ಕೊಟ್ಟಿದೆ. ಇದನ್ನು ಸರಿಪಡಿಸಿಕೊಳ್ಳಬೇಕಿದೆ. ಇದು ಕೆಆರ್‌ಎಸ್‌ ಡ್ಯಾಂ ವಿಚಾರದಲ್ಲಿ ಈಗಲೇ ಎಚ್ಚೆತ್ತುಕೊಳ್ಳುವುದು ಒಳಿತು. ಕೆಆರ್‌ಎಸ್ ಡ್ಯಾಂನಲ್ಲೂ ಸ್ಟಾಪ್ ಲಾಕ್ ಗೇಟ್ ಇಲ್ಲ. ತುಂಗಭದ್ರ ಸಮಸ್ಯೆ ಸರ್ಕಾರದ ನಿರ್ಲಕ್ಷ್ಯ ಎನ್ನಲು ಆಗೊಲ್ಲ. ಡ್ಯಾಂಗೆ ಟೆಕ್ನಿಕಲ್ ಕಮಿಟಿ ಅಂತಾ ಇರುತ್ತೆ. ಆ ಕಮಿಟಿ ಪ್ರತಿವರ್ಷ ಏನೆಲ್ಲ ಸಮಸ್ಯೆಗಳಿವೆ ಎಂಬುದನ್ನ ಪರಿಶೀಲನೆ ಮಾಡಿ ವರದಿ ಸಲ್ಲಿಸುತ್ತೆ. ಆದರೆ ಅದು ಕಾಟಾಚಾರಕ್ಕೆ ಪರಿಶೀಲನೆ ಮಾಡಿದಾಗ ಈ ರೀತಿಯ ಅನಾಹುತಗಳು ಸಂಭವಿಸುತ್ತವೆ. ಈಗ ಆಗಿರೋದು ಇದೇ ಟೆಕ್ನಿಕಲ್ ಪರಿಣತಿ ಇರುವವರ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದರು.

ದೇಶ

“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್‌ ಟಾಂಗ್‌, ದಾವಣಗೆರೆ ರಾಜಕೀಯ ಕುತೂಹಲ

Published

on

By

ದಾವಣಗೆರೆ ದಕ್ಷಿಣ ಉಪಚುನಾವಣೆ ರಾಜಕೀಯ ಕಣ ದಿನೇದಿನೇ ರಂಗೇರುತ್ತಿದ್ದು, ಸಚಿವ ಜಮೀರ್‌ ಅಹ್ಮದ್‌ ಖಾನ್ ಅವರ ಆಗಮನದಿಂದ ಹೊಸ ತಿರುವು ಪಡೆದುಕೊಂಡಿದೆ. ಹಲವು ದಿನಗಳಿಂದ ಮುಂದುವರಿದಿದ್ದ ಭಿನ್ನಾಭಿಪ್ರಾಯಗಳ ನಡುವೆಯೇ ಅವರು ಕೊನೆಗೂ ದಾವಣಗೆರೆಗೆ ಭೇಟಿ ನೀಡಿ ಪ್ರಚಾರ ಆರಂಭಿಸಿದ್ದಾರೆ.

ಟಿಕೆಟ್‌ ಹಂಚಿಕೆ ವೇಳೆ ಉಂಟಾದ ಗಲಾಟೆ ಸಂದರ್ಭದಲ್ಲಿ ಎಸ್‌ಎಸ್‌ ಮಲ್ಲಿಕಾರ್ಜುನ್ ಅವರು “ಯಾರ್ರಿ ಜಮೀರ್‌ ದಾವಣಗೆರೆ ಬಗ್ಗೆ ಮಾತನಾಡಲು” ಎಂದು ಹೇಳಿದ್ದರಿಂದ ವಿವಾದ ಸೃಷ್ಟಿಯಾಗಿತ್ತು. ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೂ ಜಮೀರ್‌ ಅಸಮಾಧಾನಗೊಂಡಿದ್ದರು.

ಆದರೆ ಇದೀಗ ರಾಜಕೀಯ ವಾತಾವರಣ ಬದಲಾಗಿದ್ದು, ಜಮೀರ್‌ ಅವರನ್ನು ಸ್ವತಃ ಮಲ್ಲಿಕಾರ್ಜುನ್‌ ಅವರು ಸ್ವಾಗತಿಸಿ ಪ್ರಚಾರಕ್ಕೆ ಕರೆಸಿಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್‌, “ನಾವಿಬ್ಬರೂ ಸ್ನೇಹಿತರು. ಯಾವುದೇ ಬೇಸರ ಇಲ್ಲ. ಸಿಟ್ಟಿನಲ್ಲಿ ಹೇಳಿದ ಮಾತು ಅಷ್ಟೇ,” ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಅವರು ಪರೋಕ್ಷವಾಗಿ ಟಾಂಗ್ ಕೊಡುತ್ತಾ, “ನನ್ನ ಕ್ಷೇತ್ರ ಚಾಮರಾಜಪೇಟೆಗೆ ಬಂದು ಯಾರಾದರೂ ಮಾತನಾಡಿದರೆ ನಾನು ಸುಮ್ಮನೆ ಇರ್ತಿನಾ?” ಎಂದು ಪ್ರತಿಕ್ರಿಯೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್‌, “ಈಗ ಎಲ್ಲವೂ ಬಗೆಹರಿದಿದೆ. ನಾವು ಬಹಳ ವರ್ಷಗಳಿಂದ ಸ್ನೇಹಿತರು,” ಎಂದು ಹೇಳಿದರು.

ಈ ಬೆಳವಣಿಗೆ ದಾವಣಗೆರೆ ರಾಜಕೀಯದಲ್ಲಿ ಹೊಸ ಚೈತನ್ಯ ಮೂಡಿಸಿದ್ದು, ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್‌ ಬಲ ಹೆಚ್ಚಿದಂತೆ ಕಾಣುತ್ತಿದೆ.

Continue Reading

ದೇಶ

ಜಮೀರ್ ಅಹ್ಮದ್‌ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!

Published

on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಪ್ರಿಯ ನಾಯಕನಾಗಿ ಹೊರಹೊಮ್ಮುತ್ತಿರುವ ವಸತಿ ಸಚಿವ Zameer Ahmed Khan ಅವರಿಗೆ ಎಐಸಿಸಿಯಲ್ಲಿ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಅವರ ಪ್ರಭಾವವನ್ನು ಗಮನಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ K. C. Venugopal ಈ ನಿರ್ಧಾರ ಕೈಗೊಂಡಿದ್ದಾರೆ.

ಪ್ರಸ್ತುತ ಕೇರಳ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಜಮೀರ್ ಅಹ್ಮದ್, ರಾಜ್ಯದ ಉಪಚುನಾವಣೆಗಳ ಪ್ರಚಾರಕ್ಕೆ ಬರಲು ಸಾಧ್ಯವಾಗದೇ ಬ್ಯುಸಿಯಾಗಿದ್ದಾರೆ. ಕೇರಳದ ಹಲವು ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ, ಅವರನ್ನು ಅಲ್ಲಿಯೇ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಭಾಗವಹಿಸಲು ಜಮೀರ್ ಅವರಿಗೆ ಆಹ್ವಾನ ನೀಡಲಾಗಿದ್ದರೂ, ಕೇರಳದ ಪ್ರಚಾರ ಕಾರ್ಯದಿಂದ ಬಿಡುವಿಲ್ಲ ಎಂಬುದಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ Siddaramaiah ಸೂಚನೆ ಇದ್ದರೂ, ಎಐಸಿಸಿ ನಾಯಕತ್ವದಿಂದಲೇ ತಡೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದಕ್ಕೂ ನಡುವೆ, ಎಐಸಿಸಿ ಅಲ್ಪಸಂಖ್ಯಾತ ಘಟಕದ ಸಲಹಾ ಪರಿಷತ್ತಿನ ಸದಸ್ಯರಾಗಿ ಜಮೀರ್ ಅಹ್ಮದ್ ಅವರನ್ನು ನೇಮಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವಿಗೆ ಕೇರಳದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು, ಭವಿಷ್ಯದಲ್ಲಿ ನಾಯಕತ್ವದ ಮಟ್ಟದಲ್ಲೂ ಬದಲಾವಣೆ ಸಾಧ್ಯತೆಗಳಿವೆ ಎಂಬ ಚರ್ಚೆ ನಡೆಯುತ್ತಿದೆ.

ಅಲ್ಪಸಂಖ್ಯಾತ ಸಮುದಾಯದ ನಾಯಕರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವ ಉದ್ದೇಶದಿಂದ ಈ ನೇಮಕಾತಿ ನಡೆದಿದ್ದು, ಜಮೀರ್ ಅವರ ಜನಪ್ರಿಯತೆ ದಿನೇದಿನೇ ಏರುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ. ರಾಜ್ಯದಲ್ಲೂ ಉಪಚುನಾವಣೆಗಳ ನಡುವೆ ಅವರ ಗೈರುಹಾಜರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

ಸೋಮಣ್ಣ ವಿರುದ್ಧ ಸಿಎಂ ಸಿಡಿತ: “ಕೆಲಸವಿಲ್ಲದ ಮಂತ್ರಿ!”

Published

on

By

ಬಾಗಲಕೋಟೆ: ಬಿಜೆಪಿ ನಾಯಕ V. Somanna ವಿರುದ್ಧ ಮುಖ್ಯಮಂತ್ರಿ Siddaramaiah ತೀವ್ರ ವಾಗ್ದಾಳಿ ನಡೆಸಿದ್ದು, “ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದ ಮಂತ್ರಿ, ಅವರಿಗೆ ಯಾವುದೇ ಕಡತ ಹೋಗುವುದಿಲ್ಲ” ಎಂದು ಟೀಕಿಸಿದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಸಿಎಂ, “ನಾವು ಸೋಲುತ್ತೇವೆ ಎಂಬ ಭಯದಿಂದ ಬಿಜೆಪಿ ನಾಯಕರು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸೋಮಣ್ಣ ಅವರಿಗೆ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಸಮಯವಿಲ್ಲ” ಎಂದು ಕಿಡಿಕಾರಿದರು. ಮುಖ್ಯಮಂತ್ರಿಗಳ ಸ್ಥಾನ ಕುರಿತು ಬಿಜೆಪಿ ನಾಯಕರು ಮಾತನಾಡುವುದಕ್ಕೆ ಯಾವುದೇ ಅರ್ಥವಿಲ್ಲ, ಅವರು ಕಾಂಗ್ರೆಸ್ ಹೈಕಮಾಂಡ್ ಅಲ್ಲ ಎಂದರು.

ಬಿಜೆಪಿಯ ಮೇಲೆ ವಾಗ್ದಾಳಿ ಮುಂದುವರೆಸಿದ ಸಿದ್ದರಾಮಯ್ಯ, “ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಮಾತಿನಲ್ಲಿ ಸತ್ಯವಿಲ್ಲ, ನಡೆದಲ್ಲಿ ನಂಬಿಕೆ ಇಲ್ಲ” ಎಂದು ಟೀಕಿಸಿದರು. ಜೊತೆಗೆ, ಪಕ್ಷದಿಂದ ಉಚ್ಛಾಟನೆಯಾದ Basanagouda Patil Yatnal ಅವರನ್ನು ಮತ್ತೆ ಪ್ರಚಾರಕ್ಕೆ ಕರೆತಂದು ಬಳಸಿಕೊಳ್ಳುತ್ತಿರುವುದು ಬಿಜೆಪಿ ದ್ವಂದ್ವ ನೀತಿಗೆ ಉದಾಹರಣೆ ಎಂದು ಹೇಳಿದರು.

ಇಂಧನ ಹಾಗೂ ಗ್ಯಾಸ್ ಸಿಲಿಂಡರ್ ಸಮಸ್ಯೆ ಕುರಿತು ಮಾತನಾಡಿದ ಅವರು, “ಇದು ಕೇಂದ್ರ ಸರ್ಕಾರದ ಜವಾಬ್ದಾರಿ. ರಾಜ್ಯ ಸರ್ಕಾರ ಕೇವಲ ವಿತರಣೆಯನ್ನು ಮಾಡುತ್ತದೆ” ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ Narendra Modi ಅವರ ಮನೆಗೆ ಮುತ್ತಿಗೆ ಹಾಕಬೇಕು ಎಂಬ ಹೇಳಿಕೆಯನ್ನೂ ನೀಡಿದರು.

ಇನ್ನೂ, ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ, Rahul Gandhi, Sonia Gandhi, Mallikarjun Kharge ಮತ್ತು Priyanka Gandhi ಅವರೇ ಪಕ್ಷದ ಹೈಕಮಾಂಡ್ ಎಂದು ಹೇಳಿದರು.

ಒಟ್ಟಿನಲ್ಲಿ, ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ.

Continue Reading

Trending