ಬೆಂಗಳೂರು
ಯಾರೇನೇ ಅಂದ್ರೂ ನೀರಿನ ಬೆಲೆ ಏರಿಕೆ ಗ್ಯಾರೆಂಟಿ-ಡಿಸಿಎಂ

ಬೆಂಗಳೂರು: ಯಾರು ಏನೇ ಬೈದರೂ ನೀರಿನ ಬೆಲೆ ಏರಿಕೆ ಶತಸಿದ್ಧ, ವೆಚ್ಚದ ಬಗ್ಗೆ ಯೋಚಿಸಿದ್ದರೆ ನೀರು ಪೂರೈಕೆ ಕಷ್ಟವಾಗಲಿದೆ ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನೀರು ಸರಬರಾಜು ಪ್ರಕ್ರಿಯೆಗೆ ಎಷ್ಟು ವರ್ಷದಲ್ಲಿ ಎಷ್ಟು ವೆಚ್ಚವಾಗುತ್ತಿದೆ, ಈಗ ಎಷ್ಟು ಹಣ ಖರ್ಚಾಗುತ್ತಿದೆ ಎಂಬ ಮಾಹಿತಿಯನ್ನು ಒಳಗೊಂಡ ಪ್ರಾಜೆಕ್ಟ್ ರೂಪಿಸಿ ಸಂಬಂಧಿಸಿ ಮಂಡಳಿ ಹಾಗೂ ಸಂಸ್ಧೆಗಳು ಬಿಡುಗಡೆಗೊಳಿಸಬೇಕು, ಮಾಧ್ಯಮಗಳು ಸೇರಿದಂತೆ ಎಲ್ಲರೂ ಈ ಮಾಹಿತಿಗಳನ್ನು ಜನರಿಗೆ ಮತ್ತು ವಿರೋಧಪಕ್ಷಗಳಿಗೆ ಮನವರಿಕೆಯಾಗುವ ರೀತಿ ತಲುಪಿಸುವ ಕೆಲಸ ಮಾಡುವ ಮೂಲಕ ನೀರು, ವೆಚ್ಚ ಸರಬರಾಜು ಬಗ್ಗೆ ಜಾಗೃತಿ ಹುಟ್ಟಿಸುವ ಕೆಲಸದಲ್ಲಿ ಕೈ ಜೋಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ,
ಬೆಂಗಳೂರಿಗೆ ಹೊಂದಿಕೊಂಡಿರುವ 110 ಹಳ್ಳಿಗಳಿಗೆ ಕಾವೇರಿ ನೀರು ಸಂಪರ್ಕ ಅಭಿಯಾನ, ಮಳೆ ನೀರು ಕೊಯ್ಲು ಜಾಗೃತಿ ಅಭಿಯಾನ, ವರುಣ ಮಿತ್ರ ತರಬೇತಿ ಕಾರ್ಯಕ್ರಮಕ್ಕೆ ವಿಧಾನಸೌಧ ಮೆಟ್ಟಿಲುಗಳ ಮುಂಭಾಗ ಚಾಲನೆ ನೀಡಿ ಮಾತನಾಡಿದ ಡಿಸಿಎಂ ಏರಿಕೆ ಕುರಿತು ಮಾಹಿತಿ ನೀಡಿದ್ರು,
ಇದೇ ವೇಳೆ ವಿದ್ಯುತ್ ವೆಚ್ಚವನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಕಾರ್ಪೋರೇಷನ್, ಪಡಬ್ಲ್ಯುಡಿ ಸೇರಿದಂತೆ ಕೆಲವು ಸಂಸ್ಧೆಗಳು ಒಟ್ಟು ಸೇರಿ ಒಂದು ಘಟಕವನ್ನು ರಚಿಸಿ ಆ ಮೂಲಕ ತಾವೇ ವಿದ್ಯುತ್ ಉತ್ಪಾದನೆ ಸೇರಿದಂತೆ ಹಲವು ಮಾರ್ಗಗಳನ್ನು ಕಂಡುಕೊಳ್ಳುವ ಮೂಲಕ ಆ ಸಂಸ್ತೆಗಳಿಗೆ ವಿದ್ಯುತ್ ಹಣದಲ್ಲಿ ಉಳಿತಾಯಕ್ಕೆ ಅವಕಾಶವೂ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ,
ಬೆಂಗಳೂರು
ಬೆಂಗಳೂರಿನಲ್ಲಿ ವಸತಿ ಯೋಜನೆಗಳ ಅವ್ಯವಸ್ಥೆ: ಹೊಸ ಯೋಜನೆಗಳ ಬಗ್ಗೆ ಶಾಸಕ ಎಸ್.ಟಿ. ಸೋಮಶೇಖರ್ ಅಸಮಾಧಾನ

ಬೆಂಗಳೂರು, ಆಗಸ್ಟ್ 7 – ನಗರದಲ್ಲಿ ಈಗಿನ ವಸತಿ ಯೋಜನೆಗಳು ಪೂರ್ಣವಾಗಿಲ್ಲದಿರುವಾಗ ಹೊಸ ಭೂಸ್ವಾಧೀನ ಅಧಿಸೂಚನೆಗಳನ್ನು ನೀಡುವುದು ಅರ್ಥವಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಕಿಡಿಕಾರಿದರು.
ಯಶವಂತಪುರ ಕ್ಷೇತ್ರದ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಬ್ಬರಾಯನಪಾಳ್ಯ ಎ ಹಾಗೂ ಬಿ ಗ್ರಾಮಗಳಲ್ಲಿ ಹೊಸ ಅಂಗನವಾಡಿ ಕಟ್ಟಡ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ವೇಳೆ ಅವರು ಮಾತನಾಡಿದರು.
ಅವರು ಅಭಿಪ್ರಾಯಪಟ್ಟ ಪ್ರಮುಖ ವಿಷಯಗಳು:
- ಬೆಂಗಳೂರಿನ ಜನಸಂಖ್ಯೆ ಈಗಾಗಲೇ 1.5 ಕೋಟಿಗೂ ಮೀರುತ್ತಿದೆ.
- ವಸತಿ ಸಮುಚ್ಛಯಗಳಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳು ಬಾಕಿಯಿವೆ.
- ಕುಡಿಯುವ ನೀರಿನ ಕೊರತೆ, ಒಳಚರಂಡಿ ಸಮಸ್ಯೆ, ರಾಜಕಾಲುವೆಗಳ ಉಕ್ಕಿಹರಿವು ನಗರದ ಮುಖ್ಯ ಸಮಸ್ಯೆಗಳಾಗಿವೆ.
- ಕೆಲ ಕಟ್ಟಡಗಳು ಕಳಪೆ ಗುಣಮಟ್ಟದಿಂದ ನಿರ್ಮಾಣವಾಗಿದ್ದು, ಸೋರಿಕೆ ಸಮಸ್ಯೆ ಜನರನ್ನು ಕಾಡುತ್ತಿದೆ.
- “ಕಟ್ಟಡ ಕುಸಿದು ಅನಾಹುತವಾದರೆ ಹೊಣೆ ಯಾರು?” ಎಂದು ಅವರು ಪ್ರಶ್ನಿಸಿದರು.
ಬೇರೆ ಪ್ರಮುಖ ಅಂಶಗಳು:
ನಗರದ ವಾಹನ ಸಂಚಾರ ದಟ್ಟಣೆ, ನಿಯಂತ್ರಣ ತಪ್ಪಿದ ನಗರ ವಿಸ್ತರಣೆ, ಮೂಲಸೌಕರ್ಯದ ಕೊರತೆ ಇವುಗಳಿಂದ ನಾಗರಿಕರು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿನಿಂದ ಹೊರಗೆ ಹೊಸ ವಸತಿ ಯೋಜನೆಗಳನ್ನು ರೂಪಿಸಿ ಮೂಲಸೌಕರ್ಯ ಒದಗಿಸಿದರೆ ಜನಸಂದಣಿ ನಿಯಂತ್ರಣ ಸಾಧ್ಯವೆಂದು ಶಾಸಕ ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಹಾಜರಿದ್ದವರು:
ಪಂಚಾಯತ್ ಅಧ್ಯಕ್ಷೆ ಹೇಮಾ ನಾರಾಯಣ್, ಸದಸ್ಯರು ಸದಾನಂದ.ಡಿ, ಎನ್.ಕುಮಾರ್, ರೇವಣಸಿದ್ದಯ್ಯ, ಅಶ್ವತ್, ವೆಂಕಟಾಚಲ, ಸುನಿಲ್, ಪುಟ್ಟಮಲ್ಲು, ತಾತಪ್ಪ, ಶಿವಣ್ಣ, ಹನುಮಂತ ಹಾಗೂ ಗ್ರಾಮಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಿಬಿಎಂಪಿ
ಜಿಬಿಎ ಚುನಾವಣೆ ಪೂರ್ವಸಿದ್ಧತೆ: ನವೆಂಬರ್ 1ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಪೂರ್ವಸಿದ್ಧತೆಗಳನ್ನು ನವೆಂಬರ್ 1ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಚುನಾವಣೆಗಾಗಿ ಮತದಾರರ ನೋಂದಣಿ ನಿಯಮಗಳನ್ನು ಹೇಗೆ ರೂಪಿಸಬೇಕು ಎಂಬ ಕುರಿತು ಚುನಾವಣಾ ಆಯೋಗದ ಅಭಿಪ್ರಾಯವನ್ನು ಕೇಳಲಾಗುವುದು,” ಎಂದು ಸ್ಪಷ್ಟಪಡಿಸಿದರು.
ಚುನಾವಣೆ ಹಕ್ಕು ಕಾಪಾಡುವ ಕುರಿತು ಮಾರ್ಗದರ್ಶನ:
ಪಕ್ಷದ ಕಾರ್ಯಕರ್ತರು ಮತ್ತು ಬ್ಲಾಕ್ ಅಧ್ಯಕ್ಷರಿಗೆ, ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳುವ ಕುರಿತು ಮಾರ್ಗದರ್ಶನ ನೀಡಲಾಗಿದೆ. “ಶಾಸಕರನ್ನು ಹಾಗೂ ಬ್ಲಾಕ್ ಲೆವಲ್ ನಾಯಕರನ್ನು ಮತ್ತೊಮ್ಮೆ ಸಭೆಗೆ ಕರೆದು ಸಿದ್ಧತೆ ಕುರಿತ ಚರ್ಚೆ ನಡೆಯಲಿದೆ,” ಎಂದರು.
ಇಂಡಿಯಾ ಒಕ್ಕೂಟ ಮತ್ತು ಪ್ರತಿಭಟನೆ ಕುರಿತು ಸ್ಪಷ್ಟನೆ:
“ಮುಖ್ಯಮಂತ್ರಿಗಳಿಗೆ ಇಂಡಿಯಾ ಒಕ್ಕೂಟದ ಸಭೆಗೆ ಆಹ್ವಾನ ಇದೆ. ನಾನು ಇಲ್ಲಿ ಪ್ರತಿಭಟನಾ ಸಭೆಗಾಗಿ ಸಿದ್ಧತೆಗಳನ್ನು ನೋಡಿಕೊಳ್ಳುತ್ತಿದ್ದೇನೆ,” ಎಂದು ಡಿಸಿಎಂ ಹೇಳಿದರು. “ಸ್ವಾತಂತ್ರ ಉದ್ಯಾನದಲ್ಲಿ ಮತಚೂರಿ ವಿರುದ್ಧsymbolic ಪ್ರತಿಭಟನೆ ನಡೆಯಲಿದ್ದು, ಇದು ನ್ಯಾಯಾಲಯದ ಆದೇಶದಂತೆ ಹಮ್ಮಿಕೊಳ್ಳಲಾಗಿದೆ,” ಎಂದು ಹೇಳಿದರು.
ರಾಜ್ಯಮಟ್ಟದ ಪ್ರತಿಭಟನೆ:
ಪ್ರತಿಯೊಬ್ಬ ಜಿಲ್ಲೆಯಿಂದ ಕನಿಷ್ಠ 50 ನಾಯಕರು, ಕಾರ್ಯಕರ್ತರು, ಪರಾಜಿತ ಅಭ್ಯರ್ಥಿಗಳು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಲಾಗಿದೆ. “ಬೆಂಗಳೂರು ಮಾತ್ರವಲ್ಲ, ಇಡೀ ಕರ್ನಾಟಕದಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ,” ಎಂದು ಅವರು ಹೇಳಿದ್ದಾರೆ.
ಬೆಂಗಳೂರು
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನ ಆಕರ್ಷಕ ಪ್ರತಿಕೃತಿಗಳು

ಬೆಂಗಳೂರು: ಲಾಲ್ಬಾಗ್ ಉದ್ಯಾನದಲ್ಲಿ ನಾಳೆ ಆಗಸ್ಟ್ 7ರಿಂದ 18ರವರೆಗೆ ನಡೆಯಲಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ವರ್ಷದ ಪ್ರಮುಖ ಆಕರ್ಷಣೆ ಎಂದರೆ ಗಾಜಿನ ಮನೆಯಲ್ಲಿ ಸ್ಥಾಪಿಸಿರುವ ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನವರ ಐಕ್ಯ ಮಂಟಪದ ಪ್ರತಿಕೃತಿಗಳು.
ತೋಟಗಾರಿಕೆ ಇಲಾಖೆ ವಿವಿಧ ರೀತಿಯ ಆಕರ್ಷಕ ಹೂವುಗಳಿಂದ ಗಾಜಿನ ಮನೆಯನ್ನು ಅಲಂಕಾರಗೊಳಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳು ಬಣ್ಣ ಬಣ್ಣದ ಹೂಸಸಿಗಳೊಂದಿಗೆ ಶೃಂಗಾರಗೊಂಡಿವೆ. ಈ ಪ್ರದರ್ಶನದಲ್ಲಿ ಆಂಥೋರಿಯಂ, ಗುಲಾಬಿ, ಆರ್ಕಿಡ್, ಜರ್ಬೇರಾ ಮತ್ತು ಸುಗಂಧ ರಾಜ ಸೇರಿದಂತೆ ಹಲವಾರು ಶೀತ ವಲಯದ ಹೂಗಳು ನೋಡುಗರ ಕಣ್ಮನ ಸೆಳೆಯಲಿವೆ.
ಬೋನ್ಸಾಯ್ ವನವನ್ನು ನವೀಕರಿಸಿ ವಿಭಿನ್ನ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ವಿಶೇಷ ಬೋನ್ಸಾಯ್ ಸಸಿಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ. ಜೊತೆಗೆ ಇಕೆಬಾನಾ, ತರಕಾರಿ ಕೆತ್ತನೆ ಪ್ರದರ್ಶನ, ತೋಟಗಳ ಸ್ಪರ್ಧೆ ಮತ್ತು ನಾನಾ ಹೂವಿನ ಜೋಡಣೆ ಕಲೆಯ ಪ್ರದರ್ಶನವೂ ಈ ಶೋನಲ್ಲಿ ಒಳಗೊಂಡಿವೆ.
ಸುಮಾರು 2.5 ಲಕ್ಷದಿಂದ 3 ಲಕ್ಷ ಹೂವುಗಳಿಂದ ನಿರ್ಮಿತವಾಗಿರುವ ಗಾಜಿನ ಮನೆಯಲ್ಲಿ, 18 ಅಡಿ ಎತ್ತರ ಮತ್ತು 32 ಅಡಿ ಅಗಲದ ಕಿತ್ತೂರಿನ ಕೋಟೆ ಪ್ರತಿಕೃತಿ ಸ್ಥಾಪಿಸಲಾಗಿದೆ. ಇದರ ಮುಂಭಾಗದಲ್ಲಿ ಅಶ್ವಾರೂಢ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳು ಹಾಗೂ ಹಿಂಭಾಗದಲ್ಲಿ ಐಕ್ಯ ಮಂಟಪದ ಪ್ರತಿಕೃತಿ ಇದೆ.
ಪ್ರವೇಶ ಶುಲ್ಕ:
- ಸಾಮಾನ್ಯ ದಿನ: ₹80
- ರಜಾದಿನಗಳು ಮತ್ತು ವಾರಾಂತ್ಯ: ₹100
ಈ ಪ್ರದರ್ಶನವು ನೈಸರ್ಗಿಕ ಸೌಂದರ್ಯ ಹಾಗೂ ಐತಿಹಾಸಿಕ ಮಹತ್ವವನ್ನು ಒಗ್ಗೂಡಿಸುವ ಅತ್ಯುತ್ತಮ ವೇದಿಕೆಯಾಗಿದ್ದು, ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸುವ ನಿರೀಕ್ಷೆಯಿದೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ