ಅಪರಾಧ
ಒಂದು ಕೆಜಿ ಜಿಲೇಬಿ ತಗೊಂಬಾ-ದೂರು ನೀಡಲು ಹೋದವನಿಗೆ ಪೊಲೀಸ್ ಆರ್ಡರ್!

ಉತ್ತರ ಪ್ರದೇಶ: ಮೊಬೈಲ್ ಕಳೆದುಕೊಂಡ ಚಂಚಲ್ ಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸ್ ಅಧಿಕಾರಿಯೊಬ್ಬರು ಮೊದಲು ಒಂದು ಕೆಜಿ ಜೆಲೇಬಿ ತರುವಂತೆ ಹೇಳಿದ್ದಾರೆ, ಪೊಲೀಸರು ಈ ವರ್ತನೆಯಿಂದ ಚಂಚಲ್ಗೆ ಆಶ್ವರ್ಯವಾಗಿದೆ,
ಕಳೆದುಕೊಂಡ ಸೆಲ್ ಫೋನ್ನಿಂದ ಅಸಮಾಧಾನಗೊಂಡ ವ್ಯಕ್ತಿಗೆ ಪೊಲೀಸರು ಬೇಡಿಕೆಯನ್ನು ಪೂರೈಸದೆ ಬೇರೆ ದಾರಿ ಇರಲಿಲ್ಲ,
ಲಕ್ನೋದ ಕನೌರ್ ಗ್ರಾಮದಲ್ಲಿ ಬಹದ್ದೂರ್ಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ, ಶನಿವಾರ ಸಂಜೆ ಔಷಧ ಖರೀದಿಸಲು ಹೋದಾಗ ಚಂಚಲ್ ತನ್ನ ಮೊಬೈಲ್ ಫೋನ್ ಕಳೆದುಕೊಂಡಿದ್ದಾರೆ, ಗಾಬರಿಯಾದ ಚಂಚಲ್ ಎಲ್ಲ ಕಡೆ ನೋಡಿದ್ದಾನರೆ, ಅದರೆ ಮೊಬೈಲ್ ಸಿಗಲಿಲ್,
ನಂತರ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದಾನೆ, ಅವನ ದೂರನ್ನು ಆಲಿಸಿದ ಪೊಲೀಸರು ಜಿಲೇಬಿ ತೆಗೆದುಕೊಂಡು ಬರಲು ಹೇಳಿದ್ದಾರೆ, ಅಂಗಡಿಯಿಂದ ಜಿಲೇಬಿ ತಂದ ಬಳಿಕ ಪೊಲೀಸ್ ಅಧಿಕಾರಿ ದೂರನ್ನು ದಾಖಲಿಸಿಕೊಂಡಿದ್ದಾರೆ,
ಅಪರಾಧ
ಧರ್ಮಸ್ಥಳ ಶವ ಹೂತು ಪ್ರಕರಣ: ಮೂರು ಅಸ್ಥಿಪಂಜರ ಪತ್ತೆ, ಎಸ್ಐಟಿ ತನಿಖೆಗೆ ಹೊಸ ತಿರುವು!
ದಕ್ಷಿಣ ಕನ್ನಡ, ಆಗಸ್ಟ್ 5 – ಧರ್ಮಸ್ಥಳದ ಸುತ್ತಮುತ್ತಲ ಶವ ಹೂತು ಪ್ರಕರಣಕ್ಕೆ ದಿನೇ ದಿನೆ ನ್ಯೂ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಮೂರು ಅಸ್ಥಿಪಂಜರಗಳು ಪತ್ತೆಯಾಗಿವೆ ಎಂಬ ಸುದ್ದಿ ಚಕ್ಕರಿಗೊಳ್ಳುತ್ತಿದೆ. ಈ ಕುರಿತು ದೂರುದಾರ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಎಸ್ಐಟಿ ತಂಡದ ಶೋಧ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿನ್ನೆ ನಡೆದ ಉತ್ಖನನದ ವೇಳೆ:
- ಸ್ಟಾಟ್ ನಂಬರ್ 12ರ ಬಳಿ ಕಾರ್ಮಿಕರಿಂದ ಅಗೆಸಿದಾಗ, ಮೂರು ಅಸ್ಥಿಪಂಜರಗಳು ಹಾಗೂ ಮಹಿಳೆಯ ಸೀರೆ ಪತ್ತೆಯಾಗಿವೆ.
- ಸುಮಾರು 140 ಮೂಳೆಗಳ ತುಂಡುಗಳು ಪತ್ತೆಯಾದ ಕುರಿತು ವರದಿ ಇದೆ.
- ಅಸ್ಥಿಪಂಜರಗಳನ್ನು ತಕ್ಷಣವೇ ಕೆಎಂಸಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.
ಇಂದಿನ ಉತ್ಖನನ:
- ನೇತ್ರಾವತಿ ನದಿಯ ದಡದ ಬಳಿ 11ನೇ ಪಾಯಿಂಟ್ನಲ್ಲಿ ಅಗೆತ ಕೆಲಸ ನಡೆಯುತ್ತಿದೆ.
- 6 ಅಡಿಯವರೆಗೆ ಶೋಧ ನಡೆದ ಬಳಿಕ ಸಾಕ್ಷ್ಯ ಸಿಕ್ಕದರೆ ಮುಂದಿನ ಪಾಯಿಂಟ್ಗೆ ಹೋಗುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಪೂರ್ವ ಘಟನೆ:
- ಜುಲೈ 31ರಂದು 6ನೇ ಗುರುತುಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ, ಎಸ್ಐಟಿ ಅಧಿಕಾರಿಗಳಾದ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಆಧಾರದ ಮೇಲೆ UDR ಪ್ರಕರಣ ದಾಖಲಾಗಿದೆ.
ಅಪರಾಧ
ಕೆಂಗೇರಿಯಲ್ಲಿ ಮಹಿಳೆಯ ಮೇಲೆ ಅಸಭ್ಯ ವರ್ತನೆ ಮತ್ತು ಹಲ್ಲೆ!
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಕೆಂಗೇರಿ ಉಪನಗರದಲ್ಲಿ ಮತ್ತೊಂದು ಭಯಾನಕ ಘಟನೆ ಬೆಳಕಿಗೆ ಬಂದಿದೆ. ಮಾಲ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳ ಮುಂದೆ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾಳೆ. ಇದೇ ಸಮಯದಲ್ಲಿ ಆಕೆಯ ಮೇಲೆ ಹಲ್ಲೆ ನಡೆಸಿದ ಆರೋಪಿಯು ಪೊಲೀಸರು ಬಂದಾಗ ಪರಾರಿಯಾಗಲು ಯತ್ನಿಸಿದರೂ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಸೂತ್ರಗಳ ಪ್ರಕಾರ, ಕೆಂಗೇರಿಯಲ್ಲಿರುವ ಮಾಲ್ನಲ್ಲಿ ವಾಚ್ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಾಹಸನ್ ಎಂಬಾತ, ಅಲ್ಲಿಗೆ ಬರುವ ಹೆಣ್ಣುಮಕ್ಕಳಿಗೆ ತೊಂದರೆ ಕೊಡುತ್ತಿದ್ದ. ಸಂತ್ರಸ್ತೆಯು ಈ ಬಗ್ಗೆ ಮ್ಯಾನೇಜರ್ಗೆ ದೂರು ನೀಡಲು ಹೋಗುತ್ತಿದ್ದಾಗ, ತನ್ನ ಪ್ಯಾಂಟ್ನ ಜಿಪ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ. ನಂತರ ಆಕೆಯ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.
ಈ ಘಟನೆಗೆ ತಕ್ಷಣ ಪ್ರತಿಕ್ರಿಯಿಸಿದ ಸಾರ್ವಜನಿಕರು ಮತ್ತು ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸದ್ಯ ಈ ಕುರಿತು ಕೆಂಗೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಮಹಿಳೆ ತೀವ್ರವಾಗಿ ಗಾಯಗೊಂಡಿದ್ದು, ಆಕೆಗಾಗಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ.
ಇದೇ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದೆ ಯುವತಿಯರ ಮುಂದೆ ಅಸಭ್ಯವಾಗಿ ವರ್ತಿಸಿದ್ದ ಆಯುಬ್ ಎಂಬ ಕಾಮುಕನನ್ನು ಕೂಡ ಪೊಲೀಸರು ಬಂಧಿಸಿದ್ದರು. ಈತನ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಡಿದ್ದು, ಸಾರ್ವಜನಿಕ ಆಕ್ರೋಶ ಹೆಚ್ಚಿತ್ತು.
ಅಪರಾಧ
ರೇಣುಕಾಸ್ವಾಮಿ ಪ್ರಕರಣ: ರಮ್ಯಾ ಪೋಸ್ಟ್ಗೆ ಅಸಭ್ಯ ಪ್ರತಿಕ್ರಿಯೆ – ಆರೋಪಿಗಳ ಬಂಧನ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ವಿರುದ್ಧ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್ನ ಅಭಿಪ್ರಾಯವನ್ನು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ಸಂಬಂಧ ಅವರು ತಮ್ಮ ಅಭಿಪ್ರಾಯವನ್ನು ಇನ್ಸ್ಟಾಗ್ರಾಂ ಹಾಗೂ ಇತರ ಪ್ಲಾಟ್ಫಾರ್ಮ್ಗಳಲ್ಲಿ ಪ್ರಕಟಿಸಿದ್ದರು.
ಈ ಪೋಸ್ಟ್ ನಂತರ, ಕೆಲ ಕಿಡಿಗೇಡಿಗಳು ರಮ್ಯಾ ವಿರುದ್ಧ ಅಶ್ಲೀಲ ಹಾಗೂ ಅಪಮಾನಕಾರಕ ಸಂದೇಶಗಳನ್ನು ಕಮೆಂಟ್ಗಳ ರೂಪದಲ್ಲಿ ಹಾಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಉಂಟಾಗಿದೆ. ಮಹಿಳಾ ವಿರುದ್ಧದ ಈ ರೀತಿಯ ಆನ್ಲೈನ್ ದೌರ್ಜನ್ಯಕ್ಕೆ ವಿರೋಧ ವ್ಯಕ್ತವಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆ ಇಲ್ಲದ ಸ್ಥಿತಿಯ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ. ಈ ನಡುವೆ, ನಟಿ ರಮ್ಯಾ ಬೆಂಬಲಿಗರು ಹಾಗೂ ಮಹಿಳಾ ಹಕ್ಕು ಕಾರ್ಯಕರ್ತರು solchen ಅಭಿವ್ಯಕ್ತಿಗಳನ್ನು ಖಂಡಿಸಿದ್ದಾರೆ.
ಅಧಿಕೃತರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ವ್ಯಕ್ತವಾಗಿದೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ಕ್ರೀಡೆ2 months ago
ಇಂದು ಐಪಿಎಲ್ ಫೈನಲ್- ಆರ್ಸಿಬಿಗೆ ಶುಭಕೋರಿದ ಎಸ್ಟಿಎಸ್!