ರಾಜಕೀಯ
ಸಿದ್ದರಾಮಯ್ಯ ಕಂಡರೆ ಬಿಜೆಪಿಯವರಿಗೆ ಭಯ, ನಮ್ಮನ್ನು ಏನು ಮಾಡಲು ಸಾಧ್ಯವಿಲ್ಲ: ಪ್ರದೀಪ್ ಈಶ್ವರ್ ಕಿಡಿ
ಚಿಕ್ಕಬಳ್ಳಾಪುರ: ಮುಡಾ ಹಗರಣದಲ್ಲಿ (Muda Scam) ಸಿದ್ದರಾಮಯ್ಯರನ್ನು ಬಿಜೆಪಿಗರು ಏನೂ ಮಾಡಲು ಸಾಧ್ಯವಿಲ್ಲ. ಆಪರೇಷನ್ ಕಮಲ ಮಾಡಲು ನಮ್ಮಲ್ಲಿ ಕೆ.ಸುಧಾಕರ್ ಥರ ಎಂಎಲ್ಎ ಇಲ್ಲ ಎಂದು ವಿರೋಧ ಪಕ್ಷದ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮಾತನಾಡಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಅವರನ್ನು ಬಿಜೆಪಿಯವರು ಏನೂ ಮಾಡೋಕೆ ಆಗಲ್ಲ. ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿಗಳು ಎಂದು ಶಾಸಕ ಪ್ರದೀಪ್ ಈಶ್ವರ್ ಮಾತನಾಡಿದ್ದಾರೆ. ಸಿದ್ದರಾಮಯ್ಯ ಕಂಡರೆ ಬಿಜೆಪಿಯವರಿಗೆ ಭಯ. ಸಿದ್ದರಾಮಯ್ಯರನ್ನು ಸಹಿಸಿಕೊಳ್ಳುವ ಶಕ್ತಿ ಕುಮಾರಸ್ವಾಮಿ ಮತ್ತು ವಿಜಯೇಂದ್ರಗೆ ಇಲ್ಲ. ಸಿದ್ದರಾಮಯ್ಯರನ್ನು ಸಿಎಂ ಆಗಿ ನಾವು ಉಳಿಸಿಕೊಳ್ಳುತ್ತೇವೆ. ಸಿಎಂಗೆ ಬಿಜೆಪಿಯವರು ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಈ ವೇಳೆ, ಆಪರೇಷನ್ ಕಮಲದ ಮೂಲಕ ಸರ್ಕಾರ ಬೀಳಿಸಲು ಪ್ರಯತ್ನ ವಿಚಾರವಾಗಿ ಕೆಲ ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ವಿಚಾರಕ್ಕೆ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯಿಸಿ, ಆಪರೇಷನ್ ಕಮಲ ಮಾಡಲು ನಮ್ಮ ಪಕ್ಷದಲ್ಲಿ ಕೆ.ಸುಧಾಕರ್ ಅಂತಹ ಎಂಎಲ್ಎ ಇಲ್ಲ. ಅದು ಹೇಗೆ ಅಪರೇಷನ್ ಕಮಲ ಮಾಡ್ತಾರೆ? ನಮ್ಮ ಶಾಸಕರು ಯಾರೂ ಅಂತವರಲ್ಲ. 135 ಜನ ಎಂಎಲ್ಎಗಳು ಇದ್ದೀವಿ, ಬಿಜೆಪಿಯವರಿಗೆ ನಮ್ಮನ್ನು ಖರೀದಿಸುವ ಶಕ್ತಿ ಇದ್ಯಾ ಎಂದು ಪ್ರಶ್ನೆ ಮಾಡಿದ್ದಾರೆ.
ವಿಜಯೇಂದ್ರ ಅವರು ಅವರ ಅಪ್ಪನ ಹೆಸರಲ್ಲಿ ರಾಜಕಾರಣಕ್ಕೆ ಬಂದಿದ್ದಾರೆ. ಕುಮಾರಸ್ವಾಮಿ ಅವರು ಪ್ರಧಾನಿ ಮಗ ಸಿಎಂ ಆಗೋದು ಗ್ರೇಟ್ ಅಲ್ಲ. ಕನಕಪುರದ ರೈತನ ಮಗ ಡಿಸಿಎಂ ಆಗೋದು ಗ್ರೇಟ್ ಎಂದು ಡಿ.ಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕುಮಾರಸ್ವಾಮಿ ತಮ್ಮದೇ ಸಮುದಾಯದ ನಾಯಕನನ್ನು ಸಹಿಸುತ್ತಿಲ್ಲ. ಜೊತೆಗೆ ಸಿದ್ದರಾಮಯ್ಯ ಅವರ ಬೆಳವಣಿಗೆಯನ್ನು ಸಹಿಸುತ್ತಿಲ್ಲ. ಕೊನೆಗೆ ನಿಮ್ಮ ಬ್ರದರ್ ಅಣ್ಣನ ಮಕ್ಕಳನ್ನ ಬೆಳವಣಿಗೆಯನ್ನು ಕೂಡ ಸಹಿಸುತ್ತಿಲ್ಲ ಎಂದು ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.
ದೇಶ
“ನಾನು ಶಿಸ್ತು ಪಾಲಿಸಿದ್ದೇನೆ” – ಜಮೀರ್ ತಿರುಗೇಟು
ಬೆಂಗಳೂರು: ಕರ್ನಾಟಕ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರದಲ್ಲಿ ಉದ್ಭವಿಸಿರುವ ಗೊಂದಲವು ಕಾಂಗ್ರೆಸ್ಸಿನ ಒಳಜಗಳವನ್ನು ಬಹಿರಂಗಪಡಿಸಿದೆ. ಈ ಹಿನ್ನೆಲೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ನಡೆಗೆ ಸ್ಪಷ್ಟನೆ ನೀಡಿದ್ದು, “ಪಾರ್ಟಿ ಹೇಳಿದ ಶಿಸ್ತನ್ನೇ ನಾನು ಕಟ್ಟುನಿಟ್ಟಾಗಿ ಪಾಲಿಸಿದ್ದೇನೆ” ಎಂದು ಹೇಳಿದ್ದಾರೆ.
ಅಲ್ಪಸಂಖ್ಯಾತ ಮುಖಂಡ ನಜೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಜಮೀರ್, “ಪಕ್ಷವು ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿದ್ದೇನೆ. ಮುಖ್ಯಮಂತ್ರಿಗಳ ಸೂಚನೆಗಳನ್ನೂ ಪಾಲಿಸಿದ್ದೇನೆ” ಎಂದು ತಿಳಿಸಿದರು. ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶಿಸ್ತು ಕುರಿತು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಜಮೀರ್, “ಅವರು ಹೇಳಿರುವುದು ಸರಿಯೇ, ನಾನು ಕೂಡ ಅದನ್ನೇ ಅನುಸರಿಸಿದ್ದೇನೆ” ಎಂದು ಹೇಳಿದರು.
ದಾವಣಗೆರೆ ದಕ್ಷಿಣ ಉಪಚುನಾವಣೆಯ ಟಿಕೆಟ್ ಗೊಂದಲವು ಪಕ್ಷದೊಳಗಿನ ಅಸಮಾಧಾನವನ್ನು ಹೆಚ್ಚಿಸಿದೆ. ಈ ಪ್ರಕರಣದಲ್ಲಿ ನಜೀರ್ ಅಹ್ಮದ್ ಮತ್ತು ಎಂಎಲ್ಸಿ ಅಬ್ದುಲ್ ಜಬ್ಬಾರ್ ಅಮಾನತು ಆಗಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ವೈರಲ್ ಆದ ಆಡಿಯೋ ವಿಚಾರದಲ್ಲಿ ಜಮೀರ್ ವಿರುದ್ಧವೂ ಕ್ರಮ ಕೈಗೊಳ್ಳುವ ಸಾಧ್ಯತೆ ಕುರಿತು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿದೆ.
ಕೇರಳ ಪ್ರಚಾರದ ವಿಚಾರದಲ್ಲೂ ಸ್ಪಷ್ಟನೆ ನೀಡಿದ ಜಮೀರ್, “ನಾನು ಕೇರಳಕ್ಕೆ ವೈಯಕ್ತಿಕ ಕಾರಣಕ್ಕಾಗಿ ಹೋಗಿರಲಿಲ್ಲ. ಹೈಕಮಾಂಡ್ ಸೂಚನೆಯ ಮೇರೆಗೆ ಪ್ರಚಾರ ಮಾಡಿದ್ದೇನೆ” ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ದಾವಣಗೆರೆ ಮತ್ತು ಬಾಗಲಕೋಟೆ ಕಡೆಗೆ ತೆರಳಿದ್ದಾಗಿ ಅವರು ವಿವರಿಸಿದರು.
ಒಟ್ಟಿನಲ್ಲಿ, ಟಿಕೆಟ್ ಗೊಂದಲದಿಂದ ಕಾಂಗ್ರೆಸ್ ಒಳರಾಜಕೀಯ ಮತ್ತಷ್ಟು ಗಂಭೀರ ಹಂತಕ್ಕೆ ತಲುಪಿದ್ದು, ಮುಸ್ಲಿಂ ಸಮುದಾಯವೂ ಇಬ್ಬಾಗವಾದ ಲಕ್ಷಣಗಳು ಕಾಣಿಸುತ್ತಿವೆ.
ಬೆಂಗಳೂರು
ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಗಂಭೀರ ಆರೋಪ!
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹೊಸ ವಿವಾದ ಸೃಷ್ಟಿಯಾಗಿದ್ದು, Janata Dal Secular ಪಕ್ಷವು ಉಪಮುಖ್ಯಮಂತ್ರಿ D K Shivakumar ವಿರುದ್ಧ ಗಂಭೀರ ಆರೋಪಗಳನ್ನು ಹೊರ ಹಾಕಿದೆ. ಕುರ್ಚಿ ಆಸೆಗಾಗಿ ತಮ್ಮ ವಿರೋಧಿ ಬಣದ ನಾಯಕರನ್ನು ಗುರಿಯಾಗಿಸಿ ಸಂಚು ರೂಪಿಸುತ್ತಿದ್ದಾರೆ ಎಂದು ಜೆಡಿಎಸ್ ಕಿಡಿಕಾರಿದೆ.
Indian National Congress ಪಕ್ಷದೊಳಗಿನ ಅಬ್ದುಲ್ ಜಬ್ಬರ್ ಅಮಾನತು ವಿಚಾರವನ್ನು ಉಲ್ಲೇಖಿಸಿ ಜೆಡಿಎಸ್ ಈ ಟೀಕೆಯನ್ನು ಮಾಡಿದೆ. Abdul Jabbar ಅವರನ್ನು ಪಕ್ಷದಿಂದ ಹೊರಹಾಕಿರುವುದು ಸಾಮಾಜಿಕ ಅನ್ಯಾಯದ ಉದಾಹರಣೆ ಎಂದು ಆರೋಪಿಸಿದೆ.
ಇದಕ್ಕೂ ಮೊದಲು ಪರಿಶಿಷ್ಟ ಸಮುದಾಯದ ನಾಯಕ K N Rajanna ಅವರನ್ನು ಸಚಿವ ಸ್ಥಾನದಿಂದ ತೆಗೆದುಹಾಕಲಾಗಿತ್ತು ಎಂಬುದನ್ನು ಜೆಡಿಎಸ್ ನೆನಪಿಸಿದೆ. “ಕಾಂಗ್ರೆಸ್ನಲ್ಲಿ ನಾಯಕತ್ವದ ನಿರ್ಧಾರಗಳಲ್ಲಿ ಸಮಾನತೆ ಇಲ್ಲ. ಕೆಲವರಿಗೆ ಕ್ಷಮೆ, ಇತರರಿಗೆ ಶಿಕ್ಷೆ ಎಂಬ ದ್ವಂದ್ವ ನೀತಿ ಅನುಸರಿಸಲಾಗುತ್ತಿದೆ,” ಎಂದು ಜೆಡಿಎಸ್ ಆರೋಪಿಸಿದೆ.
ಡಿಕೆ ಶಿವಕುಮಾರ್ ಹಣಬಲ ಮತ್ತು ತೋಳ್ಬಲದ ಮೂಲಕ ಪಕ್ಷವನ್ನು ನಡೆಸುತ್ತಿದ್ದು, ತಳಮಟ್ಟದ ದಲಿತ ಹಾಗೂ ಹಿಂದುಳಿದ ವರ್ಗಗಳ ನಾಯಕರನ್ನು ಗುರಿಯಾಗಿಸುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಾಡಲಾಗಿದೆ. ಈ ನಡೆ ಕಾಂಗ್ರೆಸ್ನ ನಿಜಸ್ವರೂಪವನ್ನು ತೋರಿಸುತ್ತದೆ ಎಂದು ಜೆಡಿಎಸ್ ಟೀಕಿಸಿದೆ.
ಈ ಆರೋಪಗಳು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಇತ್ತ ಕಾಂಗ್ರೆಸ್ ನಾಯಕರು ಈ ಆರೋಪಗಳಿಗೆ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.
ದೇಶ
GBA ELECTION 2026 : ಚುನಾವಣಾ ದಿನಾಂಕಕ್ಕೆ ಕಾದಿರುವ ನಗರ!
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು Supreme Court of India ಗೆ ಮಹತ್ವದ ಅಫಿಡವಿಟ್ ಸಲ್ಲಿಸಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ಜೂನ್ ಅಂತ್ಯದೊಳಗೆ ಚುನಾವಣೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.
ಇದೀಗ ವಾರ್ಡ್ ಪುನರ್ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಸರ್ಕಾರ ತನ್ನ ಅಫಿಡವಿಟ್ನಲ್ಲಿ ತಿಳಿಸಿದೆ. ಈ ಮೂಲಕ ಚುನಾವಣೆ ನಡೆಸಲು ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಕೋರ್ಟ್ಗೆ ಸ್ಪಷ್ಟಪಡಿಸಲಾಗಿದೆ.
ಮುಖ್ಯ ನ್ಯಾಯಮೂರ್ತಿ Surya Kant ಮತ್ತು ನ್ಯಾಯಮೂರ್ತಿ Joymalya Bagchi ಅವರನ್ನೊಳಗೊಂಡ ಪೀಠವು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಜೂನ್ 30ರೊಳಗೆ ಮುಗಿಸಬೇಕೆಂದು ಗಡುವು ವಿಧಿಸಿತ್ತು.
ಕೋರ್ಟ್ ಆದೇಶದ ಹಿನ್ನೆಲೆ ರಾಜ್ಯ ಸರ್ಕಾರವು ವೇಗವಾಗಿ ಕಾರ್ಯನಿರ್ವಹಿಸಿ, ವಾರ್ಡ್ ಮರುರಚನೆ ಹಾಗೂ ಮೀಸಲಾತಿ ಪ್ರಕ್ರಿಯೆಗಳನ್ನು ಅಂತಿಮಗೊಳಿಸಿದೆ. ಈಗ ಚುನಾವಣೆ ನಡೆಸುವ ಅಂತಿಮ ನಿರ್ಧಾರ Karnataka State Election Commission ಕೈಯಲ್ಲಿದ್ದು, ಶೀಘ್ರದಲ್ಲೇ ದಿನಾಂಕ ಘೋಷಣೆಯ ನಿರೀಕ್ಷೆ ಇದೆ.
ಈ ಬೆಳವಣಿಗೆ ಬೆಂಗ್ಳೂರಿನ ಸ್ಥಳೀಯ ಆಡಳಿತ ವ್ಯವಸ್ಥೆಗೆ ಮಹತ್ವದ ತಿರುವು ನೀಡಲಿದ್ದು, ಬಹುಕಾಲದಿಂದ ಬಾಕಿಯಾಗಿದ್ದ ನಗರ ಪಾಲಿಕೆ ಚುನಾವಣೆಗಳಿಗೆ ಹೊಸ ಚೈತನ್ಯ ನೀಡಲಿದೆ. ರಾಜಕೀಯ ವಲಯದಲ್ಲಿ ಈ ಬೆಳವಣಿಗೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪಕ್ಷಗಳು ಈಗಲೇ ಚುನಾವಣಾ ತಯಾರಿ ಆರಂಭಿಸಿರುವುದು ಗಮನಾರ್ಹವಾಗಿದೆ.
-
ಅಪರಾಧ23 hours agoಯೋಗೇಶ್ ಗೌಡ ಹತ್ಯೆ ಕೇಸ್: ಶಿಕ್ಷೆ ನಾಳೆಗೆ ಮುಂದೂಡಿದ ಕೋರ್ಟ್
-
ದೇಶ23 hours agoಹಿಂದೂಗಳಿಗೆ ಮಾತ್ರ ಉದ್ಯೋಗ? ಬಿಜೆಪಿ ಸಚಿವರ ಹೇಳಿಕೆ ಕಾವು
-
ದೇಶ23 hours agoRahul Gandhi : ಮತದಾನ ಮಿಸ್ ಮಾಡಬೇಡಿ Please : ಟಿಎಂಸಿಗೆ ರಾಹುಲ್ ಗಾಂಧಿ ಎಚ್ಚರಿಕೆ!
-
ದೇಶ24 hours agoಭಯೋತ್ಪಾದಕನ ಮೇಲೆ ದಾಳಿ: ಪಾಕಿಸ್ತಾನದಲ್ಲಿ ಸಂಚಲನ
-
ದೇಶ24 hours agoಮಹಿಳಾ ಮೀಸಲಾತಿ ಬಿಲ್: ನಾಳೆ ಮತದಾನ ಫಿಕ್ಸ್
-
ಅಪರಾಧ3 hours agoTCS Nashik Case : ಗರ್ಭಿಣಿ ಎಂದು ಹೇಳಿ ಜಾಮೀನು ಅರ್ಜಿ!
-
ದೇಶ5 hours ago“ನಾನು ಶಿಸ್ತು ಪಾಲಿಸಿದ್ದೇನೆ” – ಜಮೀರ್ ತಿರುಗೇಟು
-
ಅಪರಾಧ2 hours agoಐಪಿಎಲ್ ಟಿಕೆಟ್ ಕಾಳಸಂತೆ: KSCA ಸದಸ್ಯ ಸೇರಿ FIR!
