Connect with us

ದೇಶ

ಶಾಂತಿಯ ಸಂದೇಶಕ್ಕಾಗಿ ಪ್ರಧಾನಿ ಮೋದಿ ಉಕ್ರೇನ್​ ಭೇಟಿ ಸ್ವಾಗತಿಸಿದ ಬೈಡನ್​ – Telephonic conversation with modi

ವಾಷಿಂಗ್ಟನ್ ಡಿಸಿ: ಅಮೆರಿಕ ಅಧ್ಯಕ್ಷ ಜೋ ಬೈಡನ್​, ಪ್ರಧಾನಿ ನರೇಂದ್ರ ಅವರ ಪೋಲೆಂಡ್ ಮತ್ತು ಉಕ್ರೇನ್‌ ಭೇಟಿಯನ್ನು ಐತಿಹಾಸಿಕ ಎಂದು ಬಣ್ಣಿಸಿದ್ದಾರೆ. ಪ್ರಧಾನಿ ಮೋದಿ ಜತೆ ದೂರವಾಣಿ ಸಂಭಾಷಣೆ ನಡೆಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್​​, ಈ ಭೇಟಿ ಶಾಂತಿಯ ಸಂದೇಶದ ಧ್ಯೋತಕ ಎಂದು ಶ್ಲಾಘಿಸಿದ್ದಾರೆ ಎಂದು ಶ್ವೇತಭವನದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಫೋನ್​ ಸಂಭಾಷಣೆ ವೇಳೆ ಉಭಯ ನಾಯಕರು, ಯುರೋಪಿಯನ್ ರಾಷ್ಟ್ರಗಳ ಪ್ರವಾಸ ಮತ್ತು ಸೆಪ್ಟೆಂಬರ್‌ನಲ್ಲಿ ಮುಂಬರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಡೆಯುವ ಸಂವಾದ ಮತ್ತು ಚರ್ಚೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ದಶಕಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ಪೋಲೆಂಡ್ ಮತ್ತು ಉಕ್ರೇನ್‌ಗೆ ಐತಿಹಾಸಿಕ ಭೇಟಿ ನೀಡಿದ್ದಾರೆ. ಈ ವೇಳೆ, ಪ್ರಧಾನಿ ವಿಶ್ವಕ್ಕೆ ಶಾಂತಿಯ ಸಂದೇಶ ನೀಡಿರುವುದನ್ನು ಬೈಡನ್​ ಪ್ರಶಂಸಿದರು. ಮತ್ತು ಇಂಧನ ಕ್ಷೇತ್ರ ಸೇರಿದಂತೆ ಉಕ್ರೇನ್​​​​ಗೆ ಮಾನವೀಯ ಬೆಂಬಲ ಘೋಷಿಸಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದರು.

ಪಿಎಂ ಮೋದಿ ಮತ್ತು ಅಧ್ಯಕ್ಷ ಬೈಡನ್​ ವಿಶ್ವಸಂಸ್ಥೆ ಸನ್ನದು ಆಧಾರದ ಮೇಲೆ ಅಂತಾರಾಷ್ಟ್ರೀಯ ಕಾನೂನಿನ ಅನುಸಾರವಾಗಿ ಸಂಘರ್ಷದ ಶಾಂತಿಯುತ ಪರಿಹಾರ ಕ್ಕೆ ತಮ್ಮ ನಿರಂತರ ಬೆಂಬಲವನ್ನು ವ್ಯಕ್ತಪಡಿಸಿದರು. ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ ಮತ್ತು ಸಮೃದ್ಧಿಗೆ ಕೊಡುಗೆ ನೀಡಲು ಕ್ವಾಡ್‌ನಂತಹ ಪ್ರಾದೇಶಿಕ ಗುಂಪುಗಳನ್ನು ಒಳಗೊಂಡಂತೆ ಒಟ್ಟಾಗಿ ಕೆಲಸ ಮಾಡುವ ತಮ್ಮ ನಿರಂತರ ಬದ್ಧತೆಯನ್ನು ಇದೇ ವೇಳೆ ಉಭಯ ನಾಯಕರು ವ್ಯಕ್ತಪಡಿಸಿದರು. ಇದಕ್ಕೂ ಮುನ್ನ, ಪ್ರಧಾನಿ ಮೋದಿ ಅವರು ಬೈಡನ್​ರ​ ಇತ್ತೀಚಿನ ಉಕ್ರೇನ್ ಭೇಟಿಯ ಬಗ್ಗೆ ವಿವರಿಸಿದರು ಮತ್ತು ಮಾತುಕತೆ ಮತ್ತು ರಾಜತಾಂತ್ರಿಕತೆಯ ಪರವಾಗಿ ಭಾರತದ ಸ್ಥಿರವಾದ ನಿಲುವನ್ನು ಪುನರುಚ್ಚರಿಸಿದರು ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಪ್ರಧಾನಿ ಮೋದಿ ಮತ್ತು ಬೈಡನ್​ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚೆ ನಡೆಸಿದರು. ಕ್ವಾಡ್ ಸೇರಿದಂತೆ ಬಹುಪಕ್ಷೀಯ ವೇದಿಕೆಗಳಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ತಮ್ಮ ಬದ್ಧತೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು.

ಪ್ರಧಾನಿ ಮೋದಿಯವರ ಪೋಲೆಂಡ್ ಮತ್ತು ಉಕ್ರೇನ್ ಭೇಟಿಯ ಕೆಲವು ದಿನಗಳ ನಂತರ ಈ ಸಂಭಾಷಣೆ ನಡೆದಿದೆ. ಪ್ರಧಾನಿ ಮೋದಿ ಕಳೆದ ಶುಕ್ರವಾರ ಉಕ್ರೇನ್‌ಗೆ ಭೇಟಿ ನೀಡಿದ್ದರು. ಭಾರತೀಯ ಪ್ರಧಾನಿಯೊಬ್ಬರು ಯುರೋಪಿಯನ್ ರಾಷ್ಟ್ರಕ್ಕೆ ನೀಡಿದ ಮೊದಲ ಭೇಟಿ ಇದಾಗಿತ್ತು. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಈಗಿನ ಸಂಘರ್ಷವನ್ನು ಶಾಂತಿಯುತವಾಗಿ ಪರಿಹರಿಸುವ ಭಾರತದ ನಿಲುವನ್ನು ಪ್ರಧಾನಿ ಮೋದಿ ಪ್ರತಿಪಾದಿಸಿದ್ದರು.

“ಭಾರತ ಎಂದಿಗೂ ತಟಸ್ಥವಾಗಿರಲಿಲ್ಲ, ನಾವು ಯಾವಾಗಲೂ ಶಾಂತಿಯ ಕಡೆ ಇದ್ದೇವೆ” ಎಂದು ಪ್ರಧಾನಿ ಮೋದಿ ಝೆಲೆನ್ಸ್ಕಿಯವರಿಗೆ ಇದೇ ವೇಳೆ ಭಾರತದ ನಿಲುವನ್ನು ದೃಢಪಡಿಸಿದ್ದರು. ಶಾಂತಿ ಮತ್ತು ಪ್ರಗತಿಯ ಹಾದಿಯಲ್ಲಿ ಸಕ್ರಿಯ ಪಾತ್ರ ವಹಿಸಲು ಭಾರತ ಸಿದ್ಧವಾಗಿದೆ ಎಂದು ಮೋದಿ ಘೋಷಿಸಿದ್ದರು

ದೇಶ

ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.

ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.

🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್‌ಸ್ಟ್ರಿಪ್‌ಗಳು, ಹೆಲಿಪ್ಯಾಡ್‌ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:

  • ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
  • ಸಿಸಿಟಿವಿ ಕಣ್ಗಾವಲು ಬಿಗಿತ
  • ಸರಕು, ಪಾರ್ಸೆಲ್ ಮತ್ತು ಮೇಲ್‌ಗಳ ತಪಾಸಣೆ
  • ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ

🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:

ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.

Continue Reading

ದೇಶ

ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್‌ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್‌ ಮೌಲ್ಯದ ಪಲ್ಲಾಡಿಯಮ್‌ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್‌ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್‌ಎನ್‌ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.

ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.

ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Continue Reading

ಕ್ರೀಡೆ

ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.

ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.

Continue Reading

Trending